Subscribe to Updates
Get the latest creative news from FooBar about art, design and business.
Author: roovari
ದಲಿತ – ಬಂಡಾಯ ಸಾಹಿತ್ಯವು ಹೊಸ ದಿಕ್ಕಿನತ್ತ ಹೊರಳಿದಾಗ ಹಸಿಹಸಿ ಅನುಭವ, ಪೂರ್ವ ನಿಯೋಜಿತ ಮಾದರಿ, ಏಕರೀತಿಯ ಘಟನಾವಳಿ, ಧ್ವನಿರಹಿತ ಭಾಷೆ, ವರದಿಗಾರಿಕೆಯ ಶೈಲಿ ಮತ್ತು ಸುಲಭ ಪರಿಹಾರಗಳನ್ನು ಮೀರಿ ಬದುಕಿನ ಆಳ ವಿಸ್ತಾರಗಳನ್ನು ಶೋಧಿಸುವ ಕವಿತೆಗಳು ಹೆಚ್ಚಿನ ಸಂಖ್ಯೆಯಲ್ಲಿ ಬರತೊಡಗಿದವು. ಹಿರಿಯ ಕವಯತ್ರಿ ಮಾಲತಿ ಪಟ್ಟಣಶೆಟ್ಟಿಯವರ ‘ಮೌನ ಕರಗುವ ಹೊತ್ತು’ (1999) ಅದಕ್ಕೆ ಒಂದು ನಿದರ್ಶನವಾಗಿದೆ. “ಕ್ಷೋಭೆಗೊಂಡು ಉರಿದುರಿದ ಮನವು ತನ್ನ ಆತ್ಮಬಲವನ್ನು ಪ್ರಜ್ವಲಿಸಿಕೊಳ್ಳುತ್ತ, ಇಷ್ಟು ವರ್ಷಗಳ, ಶತಮಾನಗಳ ಶೋಷಣೆ, ಕ್ರೌರ್ಯ, ಅನ್ಯಾಯಗಳಿಗೆ ಸಂಯಮ ತೋರುತ್ತ, ಆತ್ಮಹನನ ಮಾಡಿಕೊಳ್ಳುತ್ತ ಬಂದುದರ ತಿಳಿವಿನ ಸೂರ್ಯ ಈಗ ಮೂಡಿ ಮೌನ ಕರಗುವ ಹೊತ್ತಿನತ್ತ ಬೆರಳು ಮಾಡುವ ಕವಿತೆಗಳು ಇಲ್ಲಿವೆ” ಎಂದು ಕವಯತ್ರಿಯು ಅಭಿಪ್ರಾಯಪಟ್ಟಿದ್ದಾರೆ. ಈ ನಿಟ್ಟಿನಲ್ಲಿ ಎಂದು ಹೆಣ್ಣಿನ ಶೋಷಣೆಯ ವಿರುದ್ಧ ದನಿಯಾಗುವ, ಲಿಂಗ ಸಮಾನತೆಯನ್ನು ಪ್ರತಿಪಾದಿಸುವ, ಸಾಮಾಜಿಕ ಅನ್ಯಾಯಗಳನ್ನು ಸಂಯಮದಿಂದ ಮಂಡಿಸುವ ರೀತಿಯು ಮುಖ್ಯವಾಗುತ್ತದೆ. ಹೆಚ್ಚಿನ ಲೇಖಕಿಯರು ಪುರುಷ ನಿಂದೆಯಲ್ಲೇ ನೆಮ್ಮದಿಯನ್ನು ಕಂಡುಕೊಳ್ಳುತ್ತಿರುವ ಹೊತ್ತಿನಲ್ಲಿ ಸಮಸ್ಯೆಯನ್ನು ಸಮಚಿತ್ತದಿಂದ ಗ್ರಹಿಸಿ, ಆರೋಗ್ಯಪೂರ್ಣ ಧೋರಣೆಯನ್ನು…
ಮೂಡುಬಿದಿರೆ : ಯುವ ಲೇಖಕಿ, ವಾಗ್ಮಿ ಹಾಗೂ ಎಬಿವಿಪಿ ಕಾರ್ಯಕರ್ತೆ ರಿಶಲ್ ಬ್ರಿಟ್ನಿ ಫರ್ನಾಂಡಿಸ್ ಇವರು 2025ನೇ ಸಾಲಿನ ‘ದೇಶ್’ ರತ್ನಾ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ದೆಹಲಿಯ ಭಾರತ ಮಂಟಪದಲ್ಲಿ ನಡೆಯುವ ಸಮಾರಂಭದಲ್ಲಿ ವಿವಿಧ ಕೇಂದ್ರ ಹಾಗೂ ರಾಜ್ಯ ಸಚಿವರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ರಿಶಲ್ ಬ್ರಿಟ್ನಿ ಇವರು ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಸಾಧನೆಗಳನ್ನು ಗುರುತಿಸಿ ಭಾರತೀಯ ಯುವ ಅಸೋಸಿಯೇಷನ್ ಹಾಗೂ ವಿವಿಧ ಸಚಿವಾಲಯಗಳ ಜಂಟಿ ಆಶ್ರಯದಲ್ಲಿ ಈ ಗೌರವವನ್ನು ನೀಡಲಾಗುತ್ತದೆ. ಈ ಹಿಂದೆ ಇವರು ರಾಜ್ಯ ಸರ್ಕಾರದ ಪ್ರತಿಷ್ಠಿತ ‘ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೂ ಪಾತ್ರರಾಗಿದ್ದರು. ರಿಶಲ್ ಅವರ ಲೇಖನಿಯಿಂದ ಮೂಡಿಬಂದ ಕೃತಿಗಳು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿವೆ. ‘ಭಾರತ್ @2047 ರೋಲ್ ಆಫ್ ಯೂತ್’ ಪುಸ್ತಕವು ಯುವಶಕ್ತಿಯ ಮಹತ್ವದ ಬಗ್ಗೆ ಬೆಳಕು ಚೆಲ್ಲಿದ್ದು, ಸ್ವತಃ ಭಾರತದ ಪ್ರಧಾನ ಮಂತ್ರಿಯವರಿಂದ ಪ್ರಶಂಸೆಗೆ ಒಳಗಾಗಿದೆ. ಸುರಾಜ್ಯ – ಗುಡ್ ಗವರ್ನನ್ಸ್ ವೀಲ್ ಆಫ್ ಡೆಮಾಕ್ರಸಿ :…
ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ದಿನಾಂಕ 03 ಜನವರಿ 2026ರಂದು ಅಕಾಡೆಮಿ ಸಭಾಂಗಣದಲ್ಲಿ ಸಂಜೆ 4-00 ಗಂಟೆಗೆ ‘ಕಾವ್ಯಾಂ ವ್ಹಾಳೊ- 10’ ಶೀರ್ಷಿಕೆಯಡಿ ಕವಿಗೋಷ್ಠಿಯನ್ನು ಹಮ್ಮಿಕೊಂಡಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ರವರು ವಹಿಸಿಕೊಳ್ಳಲಿದ್ದು, ‘ಸಾಮರಸ್ಯ’ ಮಂಗಳೂರು ಇದರ ಅಧ್ಯಕ್ಷರಾದ ಮಂಜುಳಾ ನಾಯಕ್ರವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕೊಂಕಣಿ ಸಾಮರಸ್ಯದ ಪುಸ್ತಕಗಳನ್ನು ಹಾಗೂ ಸಂಗೀತದ ಕ್ಯಾಸೆಟ್ಗಳನ್ನು ಹಲವಾರು ವರ್ಷಗಳಿಂದ ಊರಿಂದೂರಿಗೆ ಹಬ್ಬ- ಹರಿದಿನಗಳಲ್ಲಿ ಕೊಂಡು ಹೋಗಿ ಮಾರಿ, ಸಾಹಿತ್ಯ ಸೇವೆಯನ್ನು ಮಾಡುತ್ತಿರುವ ಆಲ್ವಿನ್ ಸಿಕ್ವೇರಾ (ಮೆಲೋಡಿ ಮಾಸ್ಟರ್) ಇವರನ್ನು ಸನ್ಮಾನಿಸಲಾಗುವುದು. ಖ್ಯಾತ ಕವಿಗಳಾದ ಶ್ರೀ ಅರವಿಂದ ಶ್ಯಾನಭಾಗ್ರವರು ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಲಿದ್ದು, ಮರ್ಲಿನ್ ಮಸ್ಕರೇನ್ಹಸ್, ನವೀನ್ ಕುಲ್ಶೇಕರ್, ವಾಯ್ಲೆಟ್ ಪಿರೇರಾ, ಸುಮಾ ವಸಂತ್, ರಿಚ್ಚರ್ಡ್ ಪಿರೇರಾ, ಪ್ರೀತಾ ಮಿರಾಂದಾ, ಸ್ಟ್ಯಾನಿಸ್ಲಸ್ ಡಿಸೋಜ, ರಮಾನಾಥ ಮೇಸ್ತ, ಅರುಣ್ ದಾಂತಿ ಹಾಗೂ ಸಪ್ನಾ ಮೇ ಕ್ರಾಸ್ತಾ ಇವರು ತಮ್ಮ ಕವಿತೆಗಳನ್ನು ವಾಚಿಸುವರು. ಕೊಂಕಣಿ ಭಾಂದವರು ಈ ಕಾರ್ಯಕ್ರಮದಲ್ಲಿ…
ಉಡುಪಿ : ನಾಡಿನ ಹಿರಿಯ ಕವಿ, ಪತ್ರಕರ್ತ ಕಡೆಂಗೋಡ್ಲು ಶಂಕರಭಟ್ಟರ ನೆನಪಿನಲ್ಲಿ 1978ರಲ್ಲಿ ಸ್ಥಾಪಿತವಾದ ‘ಕಡೆಂಗೋಡ್ಲು ಕಾವ್ಯ ಪ್ರಶಸ್ತಿ’ಗೆ ಈ ವರ್ಷ ಅಪ್ರಕಟಿತ ಕನ್ನಡ ಕವನ ಸಂಕಲಗಳನ್ನು ಆಹ್ವಾನಿಸಲಾಗಿದೆ. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ನೀಡಲಾಗುವ ಈ ಪ್ರಶಸ್ತಿಗೆ ಕವನ ಸಂಕಲನಗಳನ್ನು ಕಳುಹಿಸಲು ಕೊನೆಯ ದಿನಾಂಕ 15 ಮಾರ್ಚ್ 2026. ಕಳುಹಿಸಬೇಕಾದ ವಿಳಾಸ: ಆಡಳಿತಾಧಿಕಾರಿ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಎಂ.ಜಿ.ಎಂ. ಕಾಲೇಜು ಆವರಣ, ಉಡುಪಿ -576 102. ಕಾವ್ಯ ಪ್ರಕಟನೆಗೆ ನೆರವು ನೀಡಿ ಪ್ರೋತ್ಸಾಹಿಸುವ ಉದ್ದೇಶದಿಂದ 10,000/- ರೂಪಾಯಿಗಳ ಒಂದು ವಾರ್ಷಿಕ ಬಹುಮಾನವನ್ನು ನೀಡಲಾಗುತ್ತದೆ. ಹಸ್ತಪ್ರತಿ ಹಂತದಲ್ಲಿರುವ 40ಕ್ಕೆ ಕಡಿಮೆ ಇಲ್ಲದ, 50ಕ್ಕಿಂತ ಹೆಚ್ಚಿಲ್ಲದ ಕನ್ನಡ ಕವಿತೆಗಳ ಅತ್ಯುತ್ತಮ ಸಂಗ್ರಹಕ್ಕೆ ಈ ಬಹುಮಾನವನ್ನು ಕೊಡಲಾಗುವುದು. ತಜ್ಞರ ಸಮಿತಿ ಬಹುಮಾನಕ್ಕೆ ಅರ್ಹವಾದ ಕೃತಿಯನ್ನುಆಯ್ಕೆ ಮಾಡಲಿದೆ. ಹೆಚ್ಚಿನ ಮಾಹಿತಿಗಾಗಿ ಬ್ಲಾಗ್: https://govindapairesearch.blogspot.com ಅಥವಾ ದೂರವಾಣಿ ಸಂಖ್ಯೆ/ಮೊಬೈಲ್ ನಂ. 94488 68868/ 94494 71449; ಕಛೇರಿ: 0820-2521159 ಸಂಪರ್ಕಿಸಬಹುದು. ನಿಯಮಗಳು…
ಬೆಂಗಳೂರು : ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಇವರು ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಆರ್.ಆರ್. ನಗರದ ಖಾಸಗಿ ಆಸ್ಪತ್ರೆಯಲ್ಲಿ ದಿನಾಂಕ 26 ಡಿಸೆಂಬರ್ 2025ರಂದು ನಿಧನರಾಗಿದ್ದಾರೆ. ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಇವರು ವಿವಿಧ ಭಾಷೆಗಳ ಪ್ರಸಿದ್ಧರ ಕಥೆ, ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದರು. ಇವರು ಹಿಂದಿಯಲ್ಲಿ ರಾಷ್ಟ್ರಭಾಷಾ ಪ್ರವೀಣರಾಗಿರುವುದಲ್ಲದೇ ಕನ್ನಡ, ಇಂಗ್ಲೀಷ್, ತೆಲುಗು, ತಮಿಳು, ಮರಾಠಿ, ಮಲಯಾಳಂ ಹಾಗೂ ಸಂಸ್ಕೃತ ಭಾಷೆಗಳಲ್ಲಿಯೂ ಪ್ರಾವೀಣ್ಯತೆ ಸಾಧಿಸಿದ್ದರು. ಸರಿತಾ ಜ್ಞಾನಾನಂದ ಮೂಲತಃ ಬೆಂಗಳೂರಿನವರು. ತಂದೆ ಎನ್.ಆರ್. ನಂಜುಂಡಸ್ವಾಮಿ, ತಾಯಿ ಸುಬ್ಬಮ್ಮ. 21 ಜನವರಿ 1943ರಲ್ಲಿ ಜನಿಸಿದ ಇವರು ಮ್ಯೆಸೂರು ವಿಶ್ವವಿದ್ಯಾಲಯದಿಂದ ಬಿ.ಎ. ಮತ್ತು ಬಿ.ಎಡ್. ಹಾಗೂ ಅಣ್ಣಾಮಲೈ ವಿಶ್ವವಿದ್ಯಾಲಯದಿಂದ ಎಂ.ಎಡ್. ಪದವಿಗಳನ್ನು ಪಡೆದಿದ್ದರು. ಸರಿತಾ ಇವರು ಬೆಂಗಳೂರು ಹಾಗೂ ಕೆ.ಜಿ.ಎಫ್.ಗಳಲ್ಲಿ ಶಾಲಾ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದರು. ‘ಒಂದೂರಲ್ಲಿ ಒಬ್ಬ ನಿರ್ಮಲಾ’, ‘ಬೆಂಕಿ ಹೂ’, ‘ಪರಿಪೂರ್ಣ’, ‘ಒಲಿದರೆ ನಾರಿ’ ಸೇರಿ ಹಲವು ಕಾದಂಬರಿ ರಚಿಸಿದ್ದಾರೆ. ಸುಮಾರು 300ಕ್ಕೂ ಹೆಚ್ಚು ಸಣ್ಣ ಕಥೆಗಳನ್ನು ರಚಿಸಿದ್ದು,…
ಮಂಗಳೂರು : ‘ದಿ ಡ್ಯಾಪರ್ ಎಕ್ಸ್ಪೋ’ ಪೇಂಟಿಂಗ್, ಚಿತ್ರಕಲೆ, ಮಂಡಲ, ಸ್ಟ್ರಿಂಗ್ ಆರ್ಟ್, ಛಾಯಾಚಿತ್ರಗಳ ಪ್ರದರ್ಶನದ ಉದ್ಘಾಟನೆಯು ಮಂಗಳೂರು ಎಂ.ಜಿ. ರೋಡ್ ನಲ್ಲಿರುವ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ದಿನಾಂಕ 17 ಜನವರಿ 2025ರಂದು 3-00 ಗಂಟೆಗೆ ನಡೆಯಲಿದೆ. 18 ಮತ್ತು 19 ಜನವರಿ 2025ರಂದು ಕಲಾ ಪ್ರದರ್ಶನವನ್ನು ಆಯೋಜಿಸಲಾಗಿದೆ. ನಿವೃತ್ತ ಪ್ರಾಂಶುಪಾಲ ಪ್ರೊ. ಜಿ.ಎನ್. ಭಟ್ ಪ್ರದರ್ಶನ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಯಕ್ಷಗಾನ ಕಲಾವಿದ ಎಂ. ಪ್ರಭಾಕರ್ ಜೋಶಿ, ಜಾದೂಗಾರ ಪ್ರೊ. ಶಂಕರ್, ಕಲಾವಿದ ಗಣೇಶ್ ಸೋಮಯಾಜಿ ಭಾಗವಹಿಸುವರು. ಪ್ರದರ್ಶನವು ಬೆಳಿಗ್ಗೆ 10-00ರಿಂದ ಸಂಜೆ 7-30ರವರೆಗೆ ಇರಲಿದೆ ಎಂದು ಸಂಘಟಕರಾದ ಉದಯ್ ಕೃಷ್ಣ ಜಿ. ಮತ್ತು ಅವರ ಪುತ್ರಿ ನಿಯತಿ ಯು. ಭಟ್ ತಿಳಿಸಿದ್ದಾರೆ.
ಕಾಸರಗೋಡು : ಇತಿಹಾಸ, ಸಂಸ್ಕೃತಿ, ಸಮಾಜದ ಬಗ್ಗೆ ಅಧ್ಯಯನ ನಡೆಸುತ್ತಾ ಕಾಸರಗೋಡಿಗಾಗಮಿಸಿದ ಶ್ರೀಲಂಕಾದ ಆರು ಮಂದಿ ಮಾಧ್ಯಮ ತಜ್ಞರಿಗೆ ಅವರ ಸಾಧನೆಗಳನ್ನು ಗುರುತಿಸಿ ದಿನಾಂಕ 28 ಡಿಸೆಂಬರ್ 2025ರಂದು ಕಾಸರಗೋಡು ಕನ್ನಡ ಭವನದ ‘ಕನ್ನಡ ಪಯಸ್ವಿನಿ ಪ್ರಶಸ್ತಿ’ ನೀಡಲಾಯಿತು. ಕನ್ನಡ ಭವನ ಗ್ರಂಥಾಲಯದ ಸಂಸ್ಥಾಪಕ ವಾಮನ ರಾವ್ ಬೇಕಲ್ ಮತ್ತು ನಿರ್ದೇಶಕಿ ಸಂಧ್ಯಾರಾಣಿ ಟೀಚರ್ ಪ್ರಶಸ್ತಿ ಪ್ರದಾನ ಮಾಡಿದರು. ಶ್ರೀಲಂಕಾ ಸರಕಾರದ ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಇಲಾಖೆ, ಅಲ್ಲಿನ ಕೇಂದ್ರ ಸಚಿವರುಗಳ ಮಾಧ್ಯಮ ಕಾರ್ಯದರ್ಶಿಗಳು ಪ್ರಶಸ್ತಿ ಸ್ವೀಕರಿಸಿದರು. ಸರ್ವಶ್ರೀಗಳಾದ ಪಾಟುಮ್ ಪಾಸ್ಕಲ್, ನಿಶಾಂತಾ ಅಲ್ವಿಸ್, ಸಂಜೀವ್ ತಿಸೇರಾ, ಹೇಮಂತ ಕುಮಾರಸಿಂಗೆ, ತುಷಾರ ಹೆಚ್ಚಿಯಾಚಿ, ಧಾಮಿಶ್ ಅಜಿತ್ ಶ್ರೀಲಂಕಾದ ತಂಡದಲ್ಲಿದ್ದವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎ.ಆರ್. ಸುಬ್ಬಯಕಟ್ಟೆ, ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು, ಕಾರ್ಯದರ್ಶಿ ಗಂಗಾಧರ ತೆಕ್ಕೇಮೂಲೆ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಮಾಜಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಅಖಿಲೇಶ್…
ಶಿವಮೊಗ್ಗ : ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ (ರಿ.) ಇದರ ವತಿಯಿಂದ ಪ್ರಿಯದರ್ಶಿನಿ ಪ್ರೌಢಶಾಲೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ದಿನಾಂಕ 01 ಜನವರಿ 2025ರ ಗುರುವಾರ ಗೋಪಿಶೆಟ್ಟಿಕೊಪ್ಪದ ಸಾಹಿತ್ಯ ಗ್ರಾಮದಲ್ಲಿ ಶಿವಮೊಗ್ಗ ತಾಲೂಕು ಮಟ್ಟದ 12ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗಿದೆ. ಬೆಳಗ್ಗೆ 10-30ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಜಾವಳ್ಳಿಯ ಜ್ಞಾನದೀಪ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಕವಿ ಶ್ರೀಕಾಂತ ಪಿ.ಬಿ. ಸರ್ವಾಧ್ಯಕ್ಷತೆ ವಹಿಸಲಿದ್ದಾರೆ. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ತಮ್ಮಡಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕವಯಿತ್ರಿ ಕುಮಾರಿ ಹಂಸಿಕಾ ಜೆ. ಉದ್ಘಾಟಿಸಲಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಿ. ಮಂಜುನಾಥ ಆಶಯ ಮಾತುಗಳನ್ನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್, ಪ್ರಿಯದರ್ಶಿನಿ ಶಿಕ್ಷಣ ಸಂಸ್ಥೆ ಸ್ಥಾಪಕ ಅಧ್ಯಕ್ಷರಾದ ಎನ್. ರಮೇಶ್, ಕ.ಸಾ.ಪ. ತಾಲೂಕು ಅಧ್ಯಕ್ಷರಾದ ಶ್ರೀಮತಿ ಮಹಾದೇವಿ, ಸನ್ ಸಿಟಿ ಶಿಕ್ಷಣ…
ಮಂಗಳೂರು : ಸರಕಾರಿ ಪದವಿ ಪೂರ್ವ ಕಾಲೇಜು ಚೇಳ್ಯಾರು ಮತ್ತು ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ (ರಿ.) ಸೇರಿಗೆಯಲ್ಲಿ ದಿನಾಂಕ 29 ಡಿಸೆಂಬರ್ 2025ರಂದು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಡಾ. ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂಚ ನಾಡೊಂದು’ ಕೃತಿಯ ಓದು ಮತ್ತು ವಿದ್ಯಾರ್ಥಿಗಳಿಗೆ ಕೃತಿ ನೀಡಿಕೆ ಹಾಗೂ ರಾಷ್ಟ್ರಕವಿ ಕುವೆಂಪು ಜನ್ಮ ದಿನದ ನೆನಪು ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಹಿರಿಯ ಸಂಶೋಧಕಿ ಡಾ. ಇಂದಿರಾ ಹೆಗ್ಗಡೆ ಇವರು ಮಾತನಾಡಿ “ತುಳುನಾಡಿನ ಬಹು ಸಂಸ್ಕೃತಿಯ ಆಚರಣೆಗಳು ವಿಚಾರಗಳು ಊರಿಂದ ಊರಿಗೆ ಕುಟುಂಬದಿಂದ ಕುಟುಂಬಕ್ಕೆ ಭಿನ್ನವಾಗಿರುತ್ತದೆ. ಎಲ್ಲಾ ಕ್ರಮಗಳೂ ಮಹತ್ವದಾಗಿದ್ದು ಅವುಗಳ ದಾಖಲೀಕರಣಕ್ಕೆ ಮತ್ತು ಬರವಣಿಗೆಗೆ ಯುವ ಜನತೆ ಮನಸ್ಸು ಮಾಡಬೇಕಾಗಿದೆ” ಎಂದು ನುಡಿದರು. ಕುವೆಂಪು ನುಡಿ ನಮನ ಸಲ್ಲಿಸಿದ ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟಿನ ಕಾರ್ಯದರ್ಶಿ ಕೃಷ್ಣ ಮೂರ್ತಿ ಮಾತನಾಡಿ “ತನ್ನ ವೈಚಾರಿಕ ಹಾಗೂ ವೈಜ್ಞಾನಿಕ ಚಿಂತನೆಗಳಿಂದ ಯುವ ತಲೆಮಾರಿನವರ ಮೇಲೆ…
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ, ಸಮ್ಮೇಳನ ಸಂಯೋಜನ ಸಮಿತಿ, ಕೊಯ್ಯೂರು ಸರಕಾರಿ ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ 28 ಡಿಸೆಂಬರ್ 2025ರಂದು ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಪ್ರೊ. ಎಸ್. ಪ್ರಭಾಕರ್ ವೇದಿಕೆಯಲ್ಲಿ ನಡೆಯಿತು. ಈ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಜಾನಪದ ವಿವಿ ಮಾಜಿ ಕುಲಪತಿ ಕೆ. ಚಿನ್ನಪ್ಪ ಗೌಡ “ಸಾಹಿತ್ಯದ ಬಗ್ಗೆ ಅರಿವು, ಜಾಗೃತಿಯೊಂದಿಗೆ ವಿವೇಕ ಮೂಡಿಸುವುದೇ ಸಾಹಿತ್ಯ ಸಮ್ಮೇಳನದ ಉದ್ದೇಶ. ಸಾಹಿತ್ಯದ ಓದಿನಿಂದ ಸಂಸ್ಕಾರಯುತ ಜೀವನ ಸಾಧ್ಯವಾಗುತ್ತದೆ. ಭಾಷೆ, ಶಿಕ್ಷಣ, ಸಾಹಿತ್ಯ ಮತ್ತು ಸಂಸ್ಕೃತಿಗೆ ಅವಿನಾಭಾವ ಸಂಬಂಧವಿದ್ದು, ಸಾಹಿತ್ಯದ ಮೂಲಕ ಶಿಕ್ಷಣ ನೀಡಿದಾಗ ಮಾನವೀಯ ಮೌಲ್ಯಗಳನ್ನು ಹೊಂದಿರುವ ಸಭ್ಯ, ಸುಸಂಸ್ಕೃತ ನಾಗರಿಕರನ್ನು ರೂಪಿಸಲು ಸಾಧ್ಯವಾಗುತ್ತದೆ” ಎಂದು ಹೇಳಿದರು. ಬಳಿಕ ಶಾಲೆಯಲ್ಲಿ ‘ಶ್ರದ್ಧಾ’ ವಾಚನಾಲಯ ಉದ್ಘಾಟಿಸಿದ ಅವರು, ತಮ್ಮ ಕೆಲವು…