Subscribe to Updates
Get the latest creative news from FooBar about art, design and business.
Author: roovari
ಸಾಲಿಗ್ರಾಮ : ಗೆಳೆಯರ ಬಳಗ (ರಿ.) ಕಾರ್ಕಡ ಸಾಲಿಗ್ರಾಮ ಇವರು ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬದ ಪ್ರಯುಕ್ತ, ಪ್ರತಿ ವರ್ಷವೂ ನೀಡುತ್ತಾ ಬಂದಿರುವ ‘ಗೆಳೆಯರ ಬಳಗ ಕಾರಂತ ಪುರಸ್ಕಾರ – 2025’ ಪ್ರಶಸ್ತಿಗೆ ಈ ನಾಡಿನ ಹಿರಿಯ ಸಾಹಿತಿ, ಕಾರಂತರ ಹಿತೈಷಿ, ಸಮಾಜ ಸೇವಕಿ, ಖ್ಯಾತಲೇಖಕಿ, ಸಂಘಟಕಿ, ಕವಿ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಚಿಂತಕಿ, ಎಚ್. ಶಕುಂತಳಾ ಭಟ್ ಆಯ್ಕೆಯಾಗಿದ್ದಾರೆ. ಕಥೆಗಾರರಾಗಿ ಕವಿಯಾಗಿ ಇವರ ಸಾಧನೆ ಬೆಲೆಕಟ್ಟಲಾಗದು. ಸುಮಾರು 90 ಪ್ರಕಟವಾದ ಓಟ್ಟು ಗ್ರಂಥಗಳನ್ನು ಬರೆದಿದ್ದಾರೆ. ಕನ್ನಡ ಹಾಗೂ ತುಳು ಭಾಷೆಯಲ್ಲಿ ಇವರು ಸಲ್ಲಿಸಿದ ಸಾಹಿತ್ಯ ಸೇವೆ ಅಪಾರ. ಈ ಹಿಂದೆ ಮಾಲಿನಿ ಮಲ್ಯ, ಎಸ್. ನಾರಾಯಣ ರಾವ್, ಪೇತ್ರಿ ಮಾಧವ ನಾಯಕ್, ಶ್ರೀನಿವಾಸ ಸಾಸ್ತಾನ, ಹಿರಿಯಡ್ಕ ಗೋಪಾಲರಾವ್, ಎಚ್. ಇಬ್ರಾಹಿಂ ಸಾಹೇಬ್, ಪಾಂಡೇಶ್ವರ ಚಂದ್ರಶೇಖರ ಚಡಗ, ಬನ್ನಂಜೆ ಸಂಜೀವ ಸುವರ್ಣ, ವೈದೇಹಿ ಹಾಗೂ ಡಾ. ನಾ. ಮೊಗಸಾಲೆ, ಗೆಳೆಯರ ಬಳಗ ಕಾರಂತ ಪುರಸ್ಕಾರ ಪಡೆದವರಾಗಿದ್ದಾರೆ. ಈ ಪುರಸ್ಕಾರವು…
ದಾವಣಗೆರೆ : ಸಾಲಿಗ್ರಾಮ ಮಕ್ಕಳ ಮೇಳ (ರಿ.) ಕೋಟ ಇದರ ವತಿಯಿಂದ ನಡೆಯುವ ಸುವರ್ಣ ಪರ್ವ -13ರ ಸರಣಿಯಲ್ಲಿ ಸುವರ್ಣ ಪರ್ವ ಗೌರವ ಸಮ್ಮಾನ ಮತ್ತು ಯಕ್ಷಗಾನ ಪ್ರದರ್ಶನವನ್ನು ದಿನಾಂಕ 21 ಸೆಪ್ಟೆಂಬರ್ 2025ರಂದು ಸಂಜೆ 4-00 ಗಂಟೆಗೆ ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ದಾವಣಗೆರೆ, ಯಕ್ಷರಂಗ ಯಕ್ಷಗಾನ ಸಂಸ್ಥೆ ಮತ್ತು ದಾವಣಗೆರೆ ಜಿಲ್ಲಾ ನೌಕರರ ಸಂಘದ ಸಹಕಾರದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಸುವರ್ಣ ಪರ್ವ ಗೌರವ ಪುರಸ್ಕಾರವನ್ನು ಯಕ್ಷಗುರು ಹಟ್ಟಿಯಂಗಡಿ ಆನಂದ ಶೆಟ್ಟಿ ಇವರಿಗೆ ಪ್ರದಾನ ಮಾಡಲಾಗುವುದು. ಸಾಲಿಗ್ರಾಮ ಮಕ್ಕಳ ಮೇಳದ ಕಾರ್ಯಾಧ್ಯಕ್ಷರಾದ ಕೆ. ಮಹೇಶ್ ಉಡುಪ ಇವರ ಅಧ್ಯಕ್ಷತೆಯಲ್ಲಿ ಡಾ. ಬಿ.ಆರ್. ರವಿಕಾಂತೇ ಗೌಡ ಇವರು ಉದ್ಘಾಟನೆ ಮಾಡಲಿದ್ದಾರೆ. ಶ್ರೀ ಜಲವಳ್ಳಿ ವಿದ್ಯಾಧರ ರಾವ್ ಸಾರಥ್ಯದ ಕಲಾಧರ ಯಕ್ಷರಂಗ ಬಳಗ (ರಿ.) ಜಲವಳ್ಳಿ ಇವರಿಂದ ಕವಿ ಕಡಂದಲೆ ಬಿ. ರಾಮ್ ರಾವ್ ವಿರಚಿತ ‘ಶ್ರೀ ರಾಮಾಂಜನೇಯ ಯುದ್ಧ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.
ಕಾಸರಗೋಡು : “ಕಥೆಗಳು ಯಾವತ್ತೂ ಮನಸ್ಸಿನಲ್ಲಿ ಅನುರಣಿಸುವಂತಿರಬೇಕು. ಕಥೆಗಾರ ವೈ ಸತ್ಯನಾರಾಯಣ ಅವರು ಹೇಳಬೇಕಾದದ್ದನ್ನು ಅತ್ಯಂತ ಸರಳವಾಗಿ ಸುಂದರವಾಗಿ ನೇರವಾಗಿ ಹೇಳುವ ತಂತ್ರಗಾರಿಕೆಯುಳ್ಳವರು. ಅವರ 85ನೆಯ ವಯಸ್ಸಿನಲ್ಲೂ ಬರೆಯುವ ಛಾತಿ ಎಂಥವರನ್ನೂ ಹುಬ್ಬೇರಿಸುವಂತೆ ಮಾಡುತ್ತದೆ. ಅವರ ಶಿಷ್ಯನಾಗಿ ಗುರುಗಳ ಪುಸ್ತಕವನ್ನು ಬಿಡುಗಡೆಗೊಳಿಸಲು ಅವಕಾಶ ಮಾಡಿ ಕೊಟ್ಟಿರುವುದಕ್ಕಾಗಿ ಆಭಾರಿಯಾಗಿದ್ದೇನೆ. ಅದು ತನ್ನ ಪಾಲಿಗೆ ಪಂಚಾಮೃತ” ಎಂದರು. ಅವರು ಕಾಸರಗೋಡಿನ ಖ್ಯಾತ ಕಥೆಗಾರ ಸಾಹಿತಿ ವೈ. ಸತ್ಯನಾರಾಯಣ ಅವರ ‘ಆಕಾಶದಿಂದ ಪಾತಾಳಕ್ಕೆ’ ಕಥಾ ಸಂಕಲನವನ್ನು ದಿನಾಂಕ 13 ಸಪ್ಟೆಂಬರ್ 2025ರಂದು ಪದ್ಮಗಿರಿ ಕಲಾ ಕುಟೀರದಲ್ಲಿ ಬಿಡುಗಡೆಗೊಳಿಸಿ ಮಾತನಾಡುತ್ತಿದ್ದರು. ಇದೀಗ ಲೇಖಕರು ಪಾತಾಳದಿಂದ ಆಕಾಶದೆತ್ತರಕ್ಕೆ ಏರಿದ್ದಾರೆ ಎಂದರು. ಕಾಸರಗೋಡಿನ ಸಾಹಿತ್ಯಿಕ, ಸಾಂಸ್ಕೃತಿಕ ಸಂಸ್ಥೆಯಾದ ರಂಗ ಚಿನ್ನಾರಿಯ ಸಹಯೋಗದೊಂದಿಗೆ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಪುಸ್ತಕ ಪರಿಚಯ ಮಾಡಿ ಮಾತನಾಡಿದ ಡಾ. ಪ್ರಮೀಳ ಮಾಧವ್ ವೈ. ಸತ್ಯನಾರಾಯಣ ಅವರ ಕಥೆಗಳು ಇವತ್ತಿನ ಸಮಾಜದಲ್ಲಿ ನಮ್ಮ ಸುತ್ತಮುತ್ತ ಕಂಡುಬರುವ ಪ್ರಚಲಿತ ವಿದ್ಯಮಾನಗಳ ಕಡೆಗೆ ಬೆಳಕು ಚೆಲ್ಲುತ್ತವೆ. ಈ ಕೃತಿಯಲ್ಲಿ ನಿರೂಪಿತವಾದ ಹೆಚ್ಚಿನ…
ಮೈಸೂರು : ಸಮತೆಂತೋ ಮೈಸೂರು ಪ್ರಸ್ತುತಿಯ ಏಕವ್ಯಕ್ತಿ ರಂಗ ಪ್ರಯೋಗ ಡಾ. ಶ್ರೀಪಾದ ಭಟ್ ಇವರ ರಂಗಪಠ್ಯ ವಿನ್ಯಾಸ ನಿರ್ದೇಶನದಲ್ಲಿ, ಇಂದಿರಾ ನಾಯರ್ ಅಭಿನಯಿಸುವ ‘ನೀರ್ಮಾದಳ ಹೂವಿನೊಂದಿಗೆ…’ ನಾಟಕದಲ್ಲಿ ಮೊದಲ ಬಾರಿಗೆ ಕಮಲಾ ದಾಸ್ ರಂಗದ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ದಿನಾಂಕ 20 ಸೆಪ್ಟೆಂಬರ್ 2025ರಂದು ಸಂಜೆ 6-30 ಗಂಟೆಗೆ ಮೈಸೂರಿನ ಗಾನಭಾರತಿ ವೀಣೆ ಶೇಷಣ್ಣ ಭವನದಲ್ಲಿ ಈ ನಾಟಕ ಪ್ರದರ್ಶನ ನಡೆಯಲಿದೆ.
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ಎ.ಆರ್. ನಾರಾಯಣ ಘಟ್ಟ ಮತ್ತು ಸರೋಜಮ್ಮ ಗಾಂಧಿ ಪುದವಟ್ಟು ದತ್ತಿ ಪುರಸ್ಕಾರಕ್ಕೆ ಕರ್ನಾಟಕ ಸರ್ವೋದಯ ಮಹಾಮಂಡಲದ ಅಧ್ಯಕ್ಷರಾದ ಡಾ. ಎಚ್.ಎಸ್. ಸುರೇಶ್ ಇವರನ್ನು ಆಯ್ಕೆ ಮಾಡಲಾಗಿದೆ. ರಾಷ್ಟ್ರೀಯ ವಿದ್ಯಾಲಯ ಸಂಸ್ಥೆಯಲ್ಲಿ 32 ವರ್ಷ ಸೇವೆ ಸಲ್ಲಿಸಿದ ಹಿರಿಯ ಗಾಂಧಿವಾದಿ ಎ.ಆರ್. ನಾರಾಯಣ ಘಟ್ಟ ಇವರು ಗಾಂಧೀಜಿಯವರ ಜೀವನದ ಆದರ್ಶಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಿ ಬದುಕುತ್ತಿರುವ ನಿಸ್ವಾರ್ಥ ಸಾಧಕರಿಗೆ ನೀಡಲು ಈ ಪುರಸ್ಕಾರವನ್ನು ಸ್ಥಾಪಿಸಿದ್ದಾರೆ. 2025ನೆಯ ಸಾಲಿನ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಡಾ. ಎಚ್.ಎಸ್. ಸುರೇಶ್ ರಾಜ್ಯ ಸರ್ವೊದಯ ಮಹಾಮಂಡಲದ ಅಧ್ಯಕ್ಷರು ಹಾಗೂ ಬರಹಗಾರರು. ರಾಜ್ಯ ಜ್ಯೂನಿಯರ್ ರೆಡ್ ಕ್ರಾಸ್ ಸಲಹೆಗಾರರಾಗಿ, ರಾಷ್ಟ್ರೀಯ ಸೇವೇ ಯೋಜನೆಯ ಪ್ರಾದೇಶಿಕ ಕೇಂದ್ರದ ಸಲಹೆಗಾರರಾಗಿ ಕೂಡ ಕಾರ್ಯ ನಿರ್ವಹಿಸಿರುವ ಇವರು ಗಾಂಧಿವಾದದ ಕುರಿತು ಮಹತ್ವದ ನಾಟಕಗಳನ್ನು ಬರೆದು ರಂಗಭೂಮಿಯ ಮೂಲಕ ಜಾಗೃತಿಯನ್ನು ಉಂಟು ಮಾಡಿದ್ದಾರೆ. ನಾಡೋಜ ಡಾ. ಮಹೇಶ ಜೋಶಿಯವರ ನೇತೃತ್ವದಲ್ಲಿ ಇತ್ತೀಚೆಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದ ಆಯ್ಕೆ…
ಉಡುಪಿ : ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿಗೆ ಕ.ಸಾ.ಪ. ವತಿಯಿಂದ ಪುಸ್ತಕಗಳ ಕೊಡುಗೆಯನ್ನು ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ರವಿರಾಜ್ ಹೆಚ್.ಪಿ. ಇವರು ಕಾಲೇಜು ಪ್ರಾಂಶುಪಾಲ ಜಗದೀಶ ಕುಮಾರ್ ಇವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕ.ಸಾ.ಪ. ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು, ರಂಜನಿ ವಸಂತ್, ಸಂಘಟನಾ ಕಾರ್ಯದರ್ಶಿ ಸತೀಶ್ ಕೊಡವೂರು, ದೀಪಾ ಕರ್ಕಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಭವ್ಯಾ ನಾಗರಾಜ, ಎನ್.ಎಸ್.ಎಸ್. ನಾಯಕಿ, ಮೇಘಾ ಹಾಗೂ ಉಪನ್ಯಾಸಕಿ ಸುಧಾ ಆಡುಕಳ ಉಪಸ್ಥಿತರಿದ್ದರು.
ಬೆಂಗಳೂರು : ತೆಂಕು ಬಡಗಿನ ಅತಿಥಿ ದಿಗ್ಗಜರ ಸಮಾಗಮದಲ್ಲಿ ನಾಗರಾಜ್ ಶೆಟ್ಟಿ ನೈಕಂಬ್ಳಿ ಸಂಯೋಜನೆಯ ‘ಯಕ್ಷ ಸಂಕ್ರಾಂತಿ’ ಭಾವ ಬಣ್ಣಗಳ ಒಡ್ಡೋಲಗ ಯಕ್ಷಗಾನ ಪ್ರದರ್ಶನವನ್ನು ದಿನಾಂಕ 20 ಸೆಪ್ಟೆಂಬರ್ 2025ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಹೊಸ್ತೋಟ ಮಂಜುನಾಥ ಭಾಗವತರು ವಿರಚಿತ ‘ರಾಮ ನಿರ್ಯಾಣ’ ಮತ್ತು ‘ಕಾಲಯವನ’, ಸಿದ್ಧಕಟ್ಟೆ ವಿಶ್ವನಾಥ ಶೆಟ್ಟಿ ವಿರಚಿತ ‘ಗಿರಿ ಪೂಜೆ’, ದೇವಿ ದಾಸ ವಿರಚಿತ ‘ಚಿತ್ರಸೇನ’ ಪ್ರಸಂಗದ ಯಕ್ಷಗಾನ ಪ್ರದರ್ಶನದಲ್ಲಿ ಹಿಮ್ಮೇಳದಲ್ಲಿ ಜನ್ಸಾಲೆ ರಾಘವೇಂದ್ರ ಆಚಾರ್ಯ, ರಾಮಕೃಷ್ಣ ಹೆಗಡೆ ಹಿಲ್ಲೂರು, ಚಂದ್ರಕಾಂತ್ ರಾವ್ ಮೂಡುಬೆಳ್ಳೆ, ಪ್ರಸಾದ್ ಕುಮಾರ್ ಮೊಗೆಬೆಟ್ಟು, ಮಧುಕರ ಹೆಗ್ಡೆ ಮಡಾಮಕ್ಕಿ ಶ್ರೀನಿವಾಸ ಪ್ರಭು, ಅಕ್ಷಯ್ ಆಚಾರ್ಯ, ಶಶಾಂಕ ಆಚಾರ್ಯ ಮತ್ತು ಪ್ರಜ್ವಲ್ ಮುಂಡಾಡಿ ಹಾಗೂ ಮುಮ್ಮೇಳದಲ್ಲಿ ರಾಮಚಂದ್ರ ಹೆಗಡೆ ಕೊಂಡದಕುಳಿ, ಕೃಷ್ಣಯಾಜಿ ಬಳ್ಕೂರು, ಪ್ರಸನ್ನ ಶೆಟ್ಟಿಗಾರ್ ಮಂದಾರ್ತಿ, ಗಣೇಶ್ ಶೆಟ್ಟಿ ಕನ್ನಡಿಕಟ್ಟೆ, ಸುಧೀರ್ ಉಪ್ಪೂರು, ಶಂಕರ ಹೆಗಡೆ ನೀಲ್ಕೋಡು, ವಿಶ್ವನಾಥ ಹೆನ್ನಾಬೈಲ್, ಪ್ರಜ್ವಲ್ ಕುಮಾರ್, ದಿನೇಶ್ ಕನ್ನಾರ್, ಭಾಸ್ಕರ ಮರಾಠೆ, ಕೆ.ಜೆ. ಕಾರ್ತಿಕ,…
ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇವರ ವತಿಯಿಂದ ನಡೆಯುವ ‘ತಿಂಗಳ ನಾಟಕ ಸಂಭ್ರಮ’ದ ಪ್ರಯುಕ್ತ ನಾಟಕ ಪ್ರದರ್ಶನವನ್ನು ದಿನಾಂಕ 20 ಸೆಪ್ಟೆಂಬರ್ 2025ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದ ಸಮುಚ್ಚಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ರಂಗ ಸಂಘಟಕರಾದ ವಿ.ಎಂ. ನಾಗೇಶ್ ಇವರು ತಿಂಗಳ ಅತಿಥಿಯಾಗಿ ಭಾಗವಹಿಸಲಿದ್ದು, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಡಾ. ಕೆ.ವಿ. ನಾಗರಾಜಮೂರ್ತಿಯವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಂಬಯಿಯ ಕನ್ನಡ ಕಲಾ ಕೇಂದ್ರ ಪ್ರಸ್ತುತ ಪಡಿಸುವ ‘ಚೌಕಟ್ಟಿನಾಚೆಯ ಚಿತ್ರ’ ತೃತೀಯ ಲಿಂಗಿಗಳ ಕುರಿತ ವಿಭಿನ್ನ ರೀತಿಯ ನಾಟಕ ಸಾ. ದಯಾ ಇವರ ನಿರ್ದೇಶನದಲ್ಲಿ ಪ್ರದರ್ಶನಗೊಳ್ಳಲಿದೆ.
ಮೂಡುಬಿದಿರೆ : ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ (ರಿ.) ಬೆಂಗಳೂರು ಇದರ ವತಿಯಿಂದ ‘ವಿಶ್ವ ಬನ್ನಂಜೆ 90ರ ನಮನ’ ಸಮಾರಂಭವನ್ನು ದಿನಾಂಕ 20 ಸೆಪ್ಟಂಬರ್ 2024ರಂದು ಸಂಜೆ 5-00 ಗಂಟೆಗೆ ಮೂಡುಬಿದಿರೆ ಅಲಂಗಾರು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ವಿದ್ವಾಂಸರಾದ ವಿಜಯಸಿಂಹ ಆಚಾರ್ಯರು ಉಪನ್ಯಾಸ ನೀಡಲಿದ್ದು, ಬನ್ನಂಜೆ ಯವರ ಜೊತೆ ಮೂಡುಬಿದಿರೆಯ ಅನುಬಂಧದ ಬಗ್ಗೆ ಬಾಲಕೃಷ್ಣ ಭಟ್ ಮಾತನಾಡಲಿದ್ದಾರೆ. ಶ್ರೀಮತಿ ಕವಿತಾ ಉಡುಪ ಮತ್ತು ಶ್ರೀಮತಿ ಸುಮಾ ಶಾಸ್ತ್ರಿ ಇವರಿಂದ ಬನ್ನಂಜೆಯವರ ಹಾಡುಗಬ್ಬ ಹಾಗೂ ದೇವೀದಾಸ ವಿರಚಿತ ‘ಜೀವ ಭಾವ’ ಪ್ರಸಂಗದ ಯಕ್ಷಗಾನ ತಾಳಮದ್ದಲೆ ನಡೆಯಲಿದೆ. ಹಿಮ್ಮೇಳದಲ್ಲಿ ರವಿಚಂದ್ರ ಕನ್ನಡಿಕಟ್ಟೆ, ಚೈತನ್ಯಕೃಷ್ಣ ಪದ್ಯಾಣ ಮತ್ತು ಶ್ರೀಧರ ವಿಟ್ಲ ಹಾಗೂ ಮುಮ್ಮೇಳದಲ್ಲಿ ವಿದ್ಯಾವಾಚಸ್ಪತಿ ಶ್ರೀ ಕೆರೆಕೈ ಉಮಾಕಾಂತ ಭಟ್ಟ, ಸುಣ್ಣಂಬಳ ವಿಶ್ವೇಶ್ವರ ಭಟ್ಟ ಮತ್ತು ವಾಸುದೇವ ರಂಗಭಟ್ಟ ಮಧೂರು ಇವರುಗಳು ಸಹಕರಿಸಲಿದ್ದಾರೆ.
ಬೆಂಗಳೂರು : ‘ಬೆನಕ’ ಇದರ ಸುವರ್ಣ ಸಂಭ್ರಮದ ಪುತಿನ ಇವರ ಮೇರುಕೃತಿ ‘ಗೋಕುಲ ನಿರ್ಗಮನ’ ನಾಟಕ ಪ್ರದರ್ಶನವನ್ನು ದಿನಾಂಕ 18 ಮತ್ತು 19 ಸೆಪ್ಟೆಂಬರ್ 2025ರಂದು ಸಂಜೆ 7-00 ಗಂಟೆಗೆ ಬೆಂಗಳೂರು ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ. ಬಿ.ವಿ. ಕಾರಂತ ಇವರ ಸಂಗೀತ ಮತ್ತು ನಿರ್ದೇಶನದ ಈ ನಾಟಕವನ್ನು ಡಾ. ಟಿ.ಎಸ್. ನಾಗಾಭರಣ ಇವರು ಮರು ವಿನ್ಯಾಸ ಮಾಡಿರುತ್ತಾರೆ.