Author: roovari

ಮಂಗಳೂರು : ಸನಾತನ ನಾಟ್ಯಾಲಯದ ವತಿಯಿಂದ ‘ಸನಾತನ ನೃತ್ಯೋತ್ಸವ’ ಕಾರ್ಯಕ್ರಮವು ದಿನಾಂಕ 28 ಡಿಸೆಂಬರ್ 2025ರಂದು ಮಂಗಳೂರಿನ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಸಹಪ್ರಾಧ್ಯಾಪಕರಾದ ಮಾಧವ ಎಂ.ಕೆ. “ವೃತ್ತಿಜೀವನದ ಏಳುಬೀಳುಗಳನ್ನು ಸಹಸಿಕೊಂಡು ಮುನ್ನಡೆಯಲು ನೃತ್ಯ ಸಂಗೀತದಂತಹ ಕಲೆಗಳು ನೆರವಾಗುತ್ತವೆ. ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಮಕ್ಕಳನ್ನು ದೂರ ಇಡುವುದಕ್ಕೆ ಈ ಕಲಾಪ್ರಕಾರಗಳು ನೆರವಾಗುತ್ತವೆ. ಅಲ್ಲದೆ ಡಿಪ್ರೆಷನ್‌ ಮುಂತಾದ ಅನೇಕ ರೀತಿಯ ಸಮಸ್ಯೆಗಳಿಗೆ ಸಂಗೀತ ನೃತ್ಯದಂತಹ ಕಲಾಪ್ರಕಾರಗಳು ಔಷಧಿಯಂತೆ ಕಾರ್ಯನಿರ್ವಹಿಸುತ್ತವೆ. ವೇಗವಾಗಿ ಸಾಗುತ್ತಿರುವ ಈ ಕಾಲಮಾನದಲ್ಲಿ ಜೀವನ ಸೌಂದರ್ಯದ ಆಸ್ವಾದನೆಗೆ ಈ ರೀತಿಯ ಹವ್ಯಾಸಗಳು ಸದಾ ಸಹಕಾರಿ ಆಗಿರುತ್ತವೆ” ಎಂದು ಹೇಳಿದರು. ಸಮಾರಂಭದಲ್ಲಿ 2024–2025ನೇ ಸಾಲಿನಲ್ಲಿ ಮೈಸೂರಿನ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯದ ವತಿಯಿಂದ ನಡೆದ ಜೂನಿಯರ್‌ ಮತ್ತು ಸೀನಿಯರ್‌ ಗ್ರೇಡ್‌ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಅಂಕಪಟ್ಟಿಯನ್ನು ಪ್ರದಾನ ಮಾಡಲಾಯಿತು. ಸನಾತನ ನಾಟ್ಯಾಲಯದ ನಿರ್ದೇಶಕರಾದ ಚಂದ್ರಶೇಖರ ಶೆಟ್ಟಿಯವರು ಸ್ವಾಗತಿಸಿದರು. ನೃತ್ಯಗುರುಗಳಾದ ವಿದುಷಿ ಶಾರದಾಮಣಿ…

Read More

ಕಲೆಯ ಬೆಳವಣಿಗೆಗೆ ಉತ್ತಮ ಸಂಘಟಕರು, ಕಲಾಪ್ರೇಕ್ಷಕರೂ ಬೇಕಂತೆ. ಅದರಲ್ಲೂ ನೃತ್ಯ ಕಾರ್ಯಕ್ರಮದ ಆಯೋಜನೆಗೆ ಆಯೋಜಕರಾಗಿ ನೃತ್ಯಕಲಾ ಸಂಸ್ಥೆಗಳೇ ಮುಂದಾದಾಗ ಆ ಪ್ರದರ್ಶನಕ್ಕೇ ಒಂದಷ್ಟು ಮೆರುಗು ಹೆಚ್ಚೇ ಎನ್ನಬಹುದು. ಹೀಗೊಂದು ಸುಂದರವಾಗಿ ಮೂಡಿ ಬಂದ ಕಾರ್ಯಕ್ರಮ ನೃತ್ಯವಾಹಿನಿ. ಸನಾತನ‌ ನಾಟ್ಯಾಲಯ ಮಂಗಳೂರು ಹಾಗೂ ನೃತ್ಯಾಂಗನ್ ಮಂಗಳೂರು ಎರಡೂ ನೃತ್ಯ ಸಂಸ್ಥೆಗಳು ಜಂಟಿಯಾಗಿ ‘ನೃತ್ಯವಾಹಿನಿ’ ಎಂಬ ಕಾರ್ಯಕ್ರಮವನ್ನು ಸಂಘಟಿಸಿದ್ದರು. ಇದು ನಾಲ್ಕನೇ ವರ್ಷದ ಕಾರ್ಯಕ್ರಮ. ಈ ಬಾರಿ ಮೂರು ವಿಭಿನ್ನ ನೃತ್ಯ ಪ್ರಯೋಗಗಳನ್ನು ಸವಿಯುವ ಭಾಗ್ಯ ನೋಡುಗರದ್ದಾಗಿತ್ತು. ಮೊದಲನೆಯದಾಗಿ ನರ್ತಿಸಿದವರು ಯುವ ಕಲಾವಿದೆ ಅನಘ ಜಿ.ಎಸ್. ಸ್ಪಷ್ಟವಾದ ಹೆಜ್ಜೆಗಳು, ಚೆಲುವಾದ ಅಂಗಶುದ್ಧಿ ಹಾಗೂ ಪ್ರಬುದ್ದತೆಯಿಂದ ಕೂಡಿದ ಅಭಿನಯದೊಂದಿಗೆ ಕಾರ್ಯಕ್ರಮಕ್ಕೇ ಉತ್ತಮವಾದ ಚಾಲನೆಯೇ ದೊರಕಿತು. ಎರಡನೆಯದಾಗಿ ಪ್ರದರ್ಶನಗೊಂಡಿರುವುದು ‘ಪೂತನ’ ರಂಗರೂಪಾತ್ಮಕ ಪ್ರಯೋಗ. ಪುಣೆಯ ಸ್ವರದ ಭಾವೆ ಹಾಗೂ ಈಶ ಪಿಂಗ್ಳೈ ಇಬ್ಬರು ಕಲಾವಿದರ ಜೋಡಿ ರಾಕ್ಷಸಿ ಪೂತನಿಯ ಮನದ ಮಾತುಗಳನ್ನು ತೆರೆದಿಟ್ಟರು. ದೇಹ ಭಾಷೆಯನ್ನು ಬಳಸಿಕೊಂಡು, ರಂಗಭೂಮಿಯ ಚಲನೆಗಳನ್ನು ಅಳವಡಿಸಿಕೊಂಡು, ಭರತನಾಟ್ಯದ ಜತಿಗಳ ಮೂಲಕವೇ ಪೂತನಿಯ…

Read More

ಬಂಟ್ವಾಳ : ವಿದುಷಿ ಶ್ರೀಮತಿ ವಿದ್ಯಾ ಮನೋಜ್ ಇವರ ನಿರ್ದೇಶನದ ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್ (ರಿ.) ಕಲ್ಲಡ್ಕ, ಭರತನಾಟ್ಯ ಸಂಸ್ಥೆಯ ರಜತ ಕಲಾ ಯಾನ ಸರಣಿ ಕಾರ್ಯಕ್ರಮದ ಅಂಗವಾಗಿ ಬಿ.ಸಿ. ರೋಡಿನ ಸ್ಪರ್ಶಕಲಾ ಮಂದಿರದಲ್ಲಿ ದಿನಾಂಕ 27 ಡಿಸೆಂಬರ್ 2025ರಂದು ‘ಕಲಾಪರ್ವ-2025’ ಕಾರ್ಯಕ್ರಮವು ನಡೆಯಿತು. ಕಲಾ ಸಂಸ್ಥೆಯ ಬಿ.ಸಿ. ರೋಡ್ ಮತ್ತು ಕಲ್ಲಡ್ಕ ಶಾಖೆಗಳ ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮವು ನಡೆಯಿತು. ಮುಖ್ಯ ಅತಿಥಿಗಳಾಗಿ ಪುತ್ತೂರಿನ ವಿಶ್ವಕಲಾನಿಕೇತನ ಇನ್ಸ್ಟಿಟ್ಯೂಟ್ ಆಫ್ ಆರ್ಟ್ ಅಂಡ್ ಕಲ್ಚರ್ ಇದರ ನಿರ್ದೇಶಕಿಯಾದ ಕರ್ನಾಟಕ ಕಲಾಶ್ರೀ ವಿದುಷಿ ನಯನ ವಿ. ರೈ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ, ನೃತ್ಯ ಸಂಸ್ಥೆಯ ಸಾಧನೆಯನ್ನು ಶ್ಲಾಘಿಸುವುದರೊಂದಿಗೆ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ಮಾತುಗಳನ್ನಾಡಿದರು. ಪ್ರಾಸ್ತಾವಿಕ ಮಾತುಗಳ ಮೂಲಕ ಕಲಾ ಸಂಸ್ಥೆಯ 25 ವರ್ಷಗಳ ನೃತ್ಯ ಪಯಣವನ್ನು ವಿದುಷಿ ವಿದ್ಯಾ ಮನೋಜ್ ಇವರು ತೆರೆದಿಟ್ಟರು. ಹಿಮ್ಮೇಳ ಕಲಾವಿದರಾಗಿ ನಟುವಾಂಗ ಹಾಗೂ ನೃತ್ಯ ನಿರ್ದೇಶನದಲ್ಲಿ ವಿದುಷಿ ಶ್ರೀಮತಿ ವಿದ್ಯಾ ಮನೋಜ್, ಹಾಡುಗಾರಿಕೆಯಲ್ಲಿ ವಿದ್ವಾನ್ ಶ್ರೀ ಕೃಷ್ಣ ಆಚಾರ್ಯ ಪಾಣೆಮಂಗಳೂರು…

Read More

ಮಂಗಳೂರು : ವಿಶ್ವಕೊಂಕಣಿ ಕೇಂದ್ರ ಶಕ್ತಿನಗರ ಮಂಗಳೂರು ಸಹಯೋಗದಲ್ಲಿ ದ.ಕ. ಜಿಲ್ಲಾ ಚಪ್ಟೇಗಾರ ಸಮಾಜ ಸುಧಾರಕ ಸಂಘ (ರಿ.) ಮಂಗಳೂರು ಇವರ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ, ಪೂರ್ವಭಾವಿ ಕೌಶಲ್ಯ ತರಬೇತಿ ‘ವಿಕಾಸ-2025’ ಕಾರ್ಯಕ್ರಮವನ್ನು ದಿನಾಂಕ 27 ಡಿಸೆಂಬರ್ 2025ರಂದು ನೆರವೇರಿಸಲಾಯಿತು. ಸುಮಾರು ಐವತ್ತು ವಿದ್ಯಾರ್ಥಿಗಳಿಗೆ ರೂಪಾಯಿ ಐದು ಲಕ್ಷದಷ್ಟು ವಿದ್ಯಾರ್ಥಿ ವೇತನವನ್ನು ‘ವಿದ್ಯಾಕಲ್ಪಕ’ ವಿದ್ಯಾರ್ಥಿ ವೇತನ ನಿಧಿಯಿಂದ ವಿತರಿಸಲಾಯಿತು. ಚಪ್ಟೇಗಾರ ಸಮಾಜ ಸುಧಾರಕ ಸಂಘದ ಅಧ್ಯಕ್ಷ ಶ್ರೀ ರವೀಂದ್ರ ನಾಯಕ್ ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಪಿ.ಎ. ಕಾಲೇಜ್ ಆಫ್ ಫಾರ್ಮಸಿ ಮಂಗಳೂರು ಇಲ್ಲಿಯ ಡಾ. ಮನೋಹರ ನಾಯಕ್ ಇವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟನೆ ನಡೆಸಿದರು. ಅನಂತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಔಷಧ ವಿಜ್ಞಾನ ಕ್ಷೇತ್ರದ ಶಿಕ್ಷಣ ಹಾಗೂ ಉದ್ಯೋಗ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ವಿಶ್ವಕೊಂಕಣಿ ಕೇಂದ್ರದ ಅಧ್ಯಕ್ಷರಾದ ಶ್ರೀ ಸಿ.ಎ. ನಂದಗೋಪಾಲ್ ಶೆಣೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ “ಇಂದಿನ ಯುಗದಲ್ಲಿ ಶಿಕ್ಷಣದ…

Read More

ಉಡುಪಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ವಾದಿರಾಜ ಕನಕದಾಸ ಸಂಗೀತೋತ್ಸವ ಸಮಿತಿ, ಕನಕದಾಸ ಅಧ್ಯಯನ ಸಂಶೋಧನ ಪೀಠ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್, ಎಂ.ಜಿ.ಎಂ. ಕಾಲೇಜು ಉಡುಪಿ, ಸರಿಗಮ ಭಾರತಿ ಸಂಗೀತ ವಿದ್ಯಾಲಯ (ರಿ) ಪರ್ಕಳ ಇವರ ಸಹಯೋಗದಲ್ಲಿ ಎಂ.ಜಿ.ಎಂ. ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ದಿನಾಂಕ 28 ಡಿಸೆಂಬರ್ 2025ರಂದು 47ನೆಯ ‘ವಾದಿರಾಜ ಕನಕದಾಸ ಸಂಗೀತೋತ್ಸವ’ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಜೊತೆಗೆ ವಾದಿರಾಜ ಕನಕದಾಸ ‘ಸಾಹಿತ್ಯ ಮಂಥನ’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಹಿರಿಯ ವಿದ್ವಾಂಸ ಡಾ. ಬಿ ಎ. ವಿವೇಕ ರೈ “ಉಡುಪಿ ಎಂಬ ಈ ಸ್ಥಳ ಬಹು ಪವಿತ್ರವಾದದ್ದು, ತತ್ವಜ್ಞಾನಿಗಳು, ಕವಿಗಳು, ಯತಿಗಳು ಇದ್ದಂತಹ ನಾಡು. ಜೊತೆಗೆ ವಿದ್ವತ್ತಿನ ಜಿಜ್ಞಾಸೆಯ ಕೆಂದ್ರವೂ ಹೌದು. ಶ್ರೀ ವಾದಿರಾಜರು, ಮಧ್ವಾಚಾರ್ಯರ ಹಲವು ಚಿಂತನೆಗಳನ್ನು ಕೃತಿರೂಪದಲ್ಲಿ ಕನ್ನಡ ಮತ್ತು ತುಳುವಿನಲ್ಲಿ ತಂದರು. ಹಾಗಾಗಿ ಶ್ರೀ ವಾದಿರಾಜರು ಮತ್ತು ಕನಕದಾಸರು ಜನಸಾಮಾನ್ಯರ ಬದುಕಿಗೆ ಮಾರ್ಗದರ್ಶಿಗಳಾದರು. ವಾದಿರಾಜರು ಮತ್ತು…

Read More

ಕಾರ್ಕಳ : ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 28 ಡಿಸೆಂಬರ್ 2025ರ ಭಾನುವಾರ ತಾಲೂಕು ಮಟ್ಟದ 21ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಾಹಿತಿ ಹಾಗೂ ಪತ್ರಕರ್ತರಾದ ಸಿದ್ದಾಪುರ ವಾಸುದೇವ ಭಟ್ “ಕನ್ನಡ ಸಾಹಿತ್ಯವು ಸಮಾಜದ ಒಳನೋವಿಗೆ ಸ್ಪಂದಿಸುವ ಸಂವೇದನಾಶೀಲ ಶಕ್ತಿ. ಅದು ವ್ಯಕ್ತಿಯ ಮನೋವಿಕಾಸಕ್ಕೂ, ಸಮೂಹದ ಸಾಂಸ್ಕೃತಿಕ ಬೆಳವಣಿಗೆಗೂ ಕಾರಣವಾಗುತ್ತದೆ. ಸಾಹಿತ್ಯವು ಮನುಷ್ಯನನ್ನು ಮನುಷ್ಯನಿಗೆ ಹತ್ತಿರ ಮಾಡುವ ಸಾಧನವಾಗಿದೆ. ಜೀವನದ ಕಠಿಣ ಅನುಭವಗಳಿಗೆ ಅರ್ಥ ನೀಡುವ ಶಕ್ತಿ ಸಾಹಿತ್ಯಕ್ಕಿದೆ. ಸಮಾಜದಲ್ಲಿ ಒಳ್ಳೆಯ ಮೌಲ್ಯಗಳನ್ನು ಬೆಳೆಸುವಲ್ಲಿ ಬರಹಗಾರರ ಪಾತ್ರ ಮಹತ್ವದ್ದು” ಎಂದು ಅಭಿಪ್ರಾಯಪಟ್ಟರು. ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, “ಸಾಹಿತ್ಯ ಸಮ್ಮೇಳನಗಳು ಆತ್ಮಾವಲೋಕನಕ್ಕೆ ಅವಕಾಶ ನೀಡಬೇಕು. ಇತ್ತೀಚಿನ ದಿನಗಳಲ್ಲಿ ಸಣ್ಣ ವಿಷಯಗಳು ಹೆಚ್ಚಿನ ಗಮನ ಸೆಳೆಯುತ್ತಿರುವುದು ಗಮನಾರ್ಹ. ಆದರೆ ಒಂದು ಸಾಲಿನ ಸಾಹಿತ್ಯವೂ ಜನಮನದಲ್ಲಿ ದೊಡ್ಡ ಅಲೆ ಎಬ್ಬಿಸಬಲ್ಲ ಶಕ್ತಿ ಹೊಂದಿದೆ ಎಂಬುದು ಈ ಸಂದರ್ಭಗಳಲ್ಲಿ ಸ್ಪಷ್ಟವಾಗುತ್ತದೆ.…

Read More

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಸಹಕಾರದೊಂದಿಗೆ ಪುತ್ತೂರು ತಾಲೂಕು ಕಚೇರಿಯ ಉಪ ತಹಶೀಲ್ದಾರ್ ಸುಲೋಚನಾ ಪಿ.ಕೆ. ಇವರ ‘ಮೂಗಿಯ ಮನದೊಳು’ ಚೊಚ್ಚಲ ಕನ್ನಡ ಕಾದಂಬರಿಯು ದಿನಾಂಕ 28 ಡಿಸೆಂಬರ್ 2025ರಂದು ಪುತ್ತೂರಿನ ಬೈಪಾಸ್ ರಸ್ತೆಯ ಬಳಿಯ ಡಾ. ಎನ್. ಸುಕುಮಾರ ಗೌಡರ ಮಕ್ಕಳ ಮಂಟಪದಲ್ಲಿ ಲೋಕಾರ್ಪಣೆಗೊಂಡಿತು. ಡಾ. ತಾಳ್ತಜೆ ವಸಂತ ಕುಮಾರ ಇವರು ಕೃತಿಯನ್ನು ಲೋಕಾರ್ಪಣೆಗೊಳಿಸಿ, ಕೃತಿಯ ಬಗ್ಗೆ ಮಾತನಾಡುತ್ತಾ “ಕಾದಂಬರಿಗೆ ಸಿದ್ಧ ಶಿಲ್ಪದ ಹಿನ್ನಲೆಯಿದ್ದು, ಕಾದಂಬರಿಯ ಬೆಳವಣಿಗೆಯಲ್ಲಿ ಅತಿಮಾನುಷ ಅಂಶದ ಸ್ವರೂಪ ಮತ್ತು ಆಕೃತಿಯಲ್ಲಿ ತಾಂತ್ರಿಕ ವಿಷಯಗಳ ಪಾತ್ರಗಳನ್ನು ಅದ್ಭುತವಾಗಿ ಲೇಖಕಿ ಚಿತ್ರೀಕರಿಸಿರುತ್ತಾರೆ. ಸಾಂಸ್ಕೃತಿಕ ತಾತ್ತ್ವಿಕ ನೆಲೆಯನ್ನು ಹಿಡಿದಿಡುವಲ್ಲಿಯೂ ಈ ಕಾದಂಬರಿ ಮುಖ್ಯವಾಗಿದೆ. ಪಾತ್ರಗಳಿಗೆ ಹೆಸರುಗಳ ಆಯ್ಕೆ ಕಲಾತ್ಮಕವಾಗಿದ್ದು, ಆಯಾಯ ಸನ್ನವೇಷಕ್ಕೆ ಹೊಂದಿಕೆಯಾಗುವಂತಹ ಹೆಸರುಗಳ ಆಯ್ಕೆ ಮಾಡಿದ್ದು, ಪ್ರಧಾನ ಪಾತ್ರ ʼಮದುರಂಗಿʼ ಎಂಬ ಹೆಸರೇ ಬಹಳ ಸಾಂಕೇತಿಕವಾಗಿದೆ ಎಂದು ಡಾ. ಶಿವರಾಮ ಕಾರಂತರ ‘ಮೂಕಜ್ಜಿಯ ಕನಸುಗಳು’ ಮತ್ತು ಸಾಹಿತಿ ಬೈರಪ್ಪನವರ…

Read More

ಮಂಗಳೂರು : ಹರಿಕಥಾ ಪರಿಷತ್ ಮಂಗಳೂರು, ರಾಮಕೃಷ್ಣ ಮಿಷನ್ ಮಂಗಳೂರು ಇವುಗಳ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಮತ್ತು ಕಾಸರಗೋಡು ಜಿಲ್ಲೆಗಳ ವಿದ್ಯಾರ್ಥಿಗಳಿಗಾಗಿ ‘ಹರಿಕಥಾ ಸ್ಪರ್ಧೆ’ಯನ್ನು ದಿನಾಂಕ 27 ಡಿಸೆಂಬರ್ 2025ರಂದು ರಾಮಕೃಷ್ಣ ಮಠದ ಅಮೃತ ಭವನದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದ ಜೀ “ಎಳೆವೆಯಿಂದಲೇ ಹರಿಕಥೆ ಅಳವಡಿಸುವುದರಿಂದ ನೈತಿಕ ಶಿಕ್ಷಣ ಸುಗಮವಾಗಿ ಪಡೆಯಬಹುದು. ಪುರಾಣ ಕಥೆಗಳನ್ನು ತಿಳಿಯುವ ಮೂಲಕ ನಮ್ಮ ಬದುಕಿನ ಶೈಲಿಯನ್ನು ಬದಲಾಯಿಸಿ ಕೊಳ್ಳಬಹುದು” ಎಂದು ಹೇಳಿದರು. ಲೆಕ್ಕಪರಿಶೋಧಕ ಎಸ್.ಎಸ್. ನಾಯಕ್ ಮಾತನಾಡಿ, “ಇತ್ತೀಚಿನ ದಿನಗಳಲ್ಲಿ ಅನೇಕ ಕಡೆ ಹರಿದಾಸರಿಗೆ ಹೆಚ್ಚಿನ ಪ್ರಾಶಸ್ಯ ಸಿಗುತ್ತಿರುವುದು ಖುಷಿಯ ವಿಚಾರ” ಎಂದರು. ಎರಡು ವರ್ಷಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳಿಗೆ ಸೀಮಿತವಾಗಿದ್ದ ಈ ಸ್ಪರ್ಧೆ ಈ ವರ್ಷ ರಾಜ್ಯ ಮಟ್ಟಕ್ಕೆ ವಿಸ್ತರಿಸಲಾಗಿತ್ತು. ದಕ್ಷಿಣ ಕನ್ನಡ, ಕಾಸರಗೋಡು ಮಾತ್ರವಲ್ಲದೆ ಬೆಂಗಳೂರು, ಶಿವಮೊಗ್ಗ ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಯ್ದ 22 ಮಂದಿ ಯುವ…

Read More

ಬೆಂಗಳೂರು : ವಿದುಷಿ ಕುಸುಮ ಎ. ನೃತ್ಯಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರುವ ಬದ್ಧತೆಯ ನೃತ್ಯ ಕಲಾವಿದೆ ಮತ್ತು ನೃತ್ಯಗುರು. ಅವರ ನೇತೃತ್ವದ ‘ಶರ್ವಾಣಿ ನಾಟ್ಯ ಕಲಾಕೂಟ’ (ಅಕಾಡೆಮಿ ಆಫ್ ಆರ್ಟ್ಸ್) ನೃತ್ಯಶಾಲೆಯಲ್ಲಿ ಅನೇಕ ಉದಯೋನ್ಮುಖ ಪ್ರತಿಭೆಗಳು ನಾಟ್ಯಶಿಕ್ಷಣ ಪಡೆದು ಕಲಾರಂಗದಲ್ಲಿ ಮುನ್ನಡೆಯುತ್ತಿದ್ದಾರೆ. ಭರತನಾಟ್ಯದಲ್ಲಿ ಎಂ.ಎ. ಪದವೀಧರೆಯಾದ ಕುಸುಮಾ ವಿದ್ವತ್ ಪದವಿಯನ್ನು ಪಡೆದಿರುವುದಲ್ಲದೆ, ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲೂ ಕರ್ನಾಟಕ ಸರ್ಕಾರದ ಸೀನಿಯರ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಕಲರಿಪಯಟು – ಯುದ್ಧಕಲೆಯ ನೃತ್ಯ ಆಯಮದಲ್ಲೂ ಪಳಗಿದ್ದು, ನಾಡಿನಾದ್ಯಂತ ಅನೇಕ ಪ್ರತಿಷ್ಠಿತ ವೇದಿಕೆಗಳ ಮೇಲೆ ನೃತ್ಯ ಪ್ರದರ್ಶನ ಮಾಡಿ ಕಲಾರಸಿಕರ ಮೆಚ್ಚುಗೆ ಗಳಿಸಿದ್ದಾರೆ. ಬಿ.ಎ., ಎಲ್.ಎಲ್.ಬಿ. ತೇರ್ಗಡೆಯಾಗಿ ವಕೀಲೆಯಾಗಿರುವ ಕುಸುಮಾ, ಅಷ್ಟೇ ಉತ್ತಮ ನೃತ್ಯಗುರುವಾಗಿಯೂ ಮಕ್ಕಳಿಗೆ ನಿರ್ವಂಚನೆಯಿಂದ ವಿದ್ಯಾಧಾರೆ ಎರೆಯುತ್ತಿದ್ದಾರೆ. ಇದೀಗ ಅವರ ಸಂಸ್ಥಾಪನೆಯ ‘ಶರ್ವಾಣಿ ನಾಟ್ಯ ಕಲಾಕೂಟ’ ಸಂಸ್ಥೆ ತನ್ನ ದಶಮಾನೋತ್ಸವವನ್ನು ‘ನರ್ತನ ಶ್ರುತಿ’ ಶೀರ್ಷಿಕೆಯಲ್ಲಿ ಆಚರಿಸಿಕೊಳ್ಳುತ್ತಿದೆ. ಅವರ ಶಿಷ್ಯಗಣ ಮನಮೋಹಕ ನೃತ್ಯ ವೈಭವವನ್ನು ಪ್ರದರ್ಶಿಸುವುದರ ಜೊತೆಗೆ, ವೈಕುಂಠ ಏಕಾದಶಿ ಪ್ರಯುಕ್ತ ವೆಂಕಟೇಶ್ವರನ ಕುರಿತ ವಿಶಿಷ್ಟ…

Read More

ಮಂಗಳೂರು : ಅಲೆವೂರಾಯ ಪ್ರತಿಷ್ಠಾನದ ವತಿಯಿಂದ ದಿನಾಂಕ 26 ಡಿಸೆಂಬರ್ 2025ರಂದು ಮಂಗಳಾದೇವಿ ದೇವಸ್ಥಾನದಲ್ಲಿ ‘ಯಕ್ಷ ತ್ರಿವೇಣಿ’ಯ ಎರಡನೇ ದಿನದ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ತನ್ನ ಮನದಾಳದ ಮಾತುಗಳನ್ನಾಡಿದ ಹಿರಿಯ ಯಕ್ಷಗಾನ ಕಲಾವಿದ ವಸಂತ ಗೌಡ ಕಾಯರ್ತಡ್ಕ “ಕಲೆಗಳೆಲ್ಲಾ ನಮ್ಮ ಸಂಸ್ಕೃತಿಯ ವಿವಿಧ ಮುಖಗಳು. ಅದರ ಆರಾಧನೆಯಿಂದ ಕಲಾವಿದರಾದ ನಾವು ಬೆಳಗುತ್ತೇವೆ. ಸರ್ವಸಮರ್ಪಣಾ ಭಾವದಿಂದ ನಾನು ನನ್ನನ್ನು ಶ್ರೀಕ್ಷೇತ್ರ ಧರ್ಮಸ್ಥಳ ಮೇಳದಲ್ಲೇ ತೊಡಗಿಸಿಕೊಂಡೆ. ಸಂತಸವನ್ನು ಪಡೆದೆ. ಇದೀಗ ಐವತ್ತೊಂದು ವರ್ಷದ ತಿರುಗಾಟದಲ್ಲಿದ್ದೇನೆ. ಯಕ್ಷಗಾನ ನನಗೆ ಎಲ್ಲವನ್ನೂ ನೀಡಿದೆ.” ಎಂದು ಸಂತೃಪ್ತ ಭಾವದಿಂದ ಹೇಳಿದರು. ಲೋಕಾಯುಕ್ತ ಇನ್ಸ್ಪೆಕ್ಟರ್ ಚಂದ್ರಶೇಖರ್ ರವರು ವಸಂತಗೌಡರ ತಿರುಗಾಟ, ಅವರು ನಿರ್ವಹಿಸುವ ಭಿನ್ನ ಭಿನ್ನ ಪಾತ್ರಗಳ ಬಗ್ಗೆ ಮೆಚ್ಚುಗೆ ಸೂಸಿ ಅವರನ್ನು ಅಭಿನಂದಿಸಿದರು. ತುಳು ಕೂಟದ ಅಧ್ಯಕ್ಷೆ ಹೇಮಾ ದಾಮೋದರ ನಿಸರ್ಗ, ಉಳ್ಳಾಲ ಪುರಸಭೆಯ ಅಧಿಕಾರಿ ರವಿಕೃಷ್ಣ ದಂಬೆ ಉಪಸ್ಥಿತರಿದ್ದರು. ಸಂಘಟಕ ಪೇಜಾವರ ಸುಧಾಕರ ರಾವ್ ನಿರ್ವಹಿಸಿದರೆ, ಯಕ್ಷಮಂಜುಳಾದ ಸದಸ್ಯೆ ಪೂರ್ಣಿಮಾ ಪ್ರಶಾಂತ ಶಾಸ್ತ್ರಿ…

Read More