Subscribe to Updates
Get the latest creative news from FooBar about art, design and business.
Author: roovari
ಮೈಸೂರು : ನಿರಂತರ ಫೌಂಡೇಶನ್ (ರಿ) ಮೈಸೂರು ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾ ಆಡಳಿತ ಮೈಸೂರು ಇವರ ಸಹಯೋಗದೊಂದಿಗೆ ಬಸವ ಜಯಂತಿ ಪ್ರಯುಕ್ತ ಬಸವಣ್ಣನವರ ವಚನಗಳನ್ನಾದರಿಸಿದ ‘ಕೂಡಲಸಂಗಮ’ ದೃಶ್ಯ ರೂಪಕವನ್ನು ದಿನಾಂಕ 19 ಏಪ್ರಿಲ್ 2026ರಂದು ಸಂಜೆ 6-00 ಗಂಟೆಗೆ ಮೈಸೂರಿನ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಪ್ರಸಾದ್ ಕುಂದೂರು ಸಾಹಿತ್ಯ ಮತ್ತು ವಿನ್ಯಾಸ, ಡಾ. ಸಿ. ಅಶ್ವತ್ ಸಂಗೀತ ಹಾಗೂ ಸುಗುಣ ಎಂ.ಎಂ. ನಿರ್ದೇಶನ ಮಾಡಿರುತ್ತಾರೆ.
ಧಾರವಾಡ : ಉತ್ತರ ಕರ್ನಾಟಕ ಲೇಖಕಿಯರ ಸಂಘ, ಹುಬ್ಬಳ್ಳಿ-ಧಾರವಾಡ ಇವರ ವತಿಯಿಂದ ಮಾಲತಿ ಮುದಕವಿ ಇವರು ಬರೆದ ಮೂರು ಕೃತಿಗಳಾದ ‘ರಾಮರಾಜ್ಯ’ (ಇದು ಮರಾಠಿಯಿಂದ ಕನ್ನಡಕ್ಕೆ ಅನುವಾದಿತ ಕಾದಂಬರಿ), ‘ಸಂಸಾರದಲ್ಲಿ ಸರಿಗಮ’ (ಸ್ವರಚಿತ ಕಥಾಸಂಕಲನ), ‘ಜಗವೇ ನಾಟಕ ರಂಗಾ’ (ನಾಟಕ ಸಂಗ್ರಹ) ಹಾಗೂ ಶ್ರೀಮತಿ ಸರಸ್ವತಿ ಭೋಸಲೆ ಇವರ ಎರಡು ಕೃತಿಗಳಾದ ‘ಕೇಡಿಲ್ಲದ ನುಡಿ’ (ಲಲಿತ ಪ್ರಬಂಧಗಳು) ಹಾಗೂ ‘ದೇವರ ದುಡ್ಡು’ (ಮಕ್ಕಳ ಕಥೆಗಳು) ಇವು ಧಾರವಾಡದ ವಿದ್ಯಾವರ್ಧಕ ಸಂಘದಲ್ಲಿ ದಿನಾಂಕ 15 ಎಪ್ರಿಲ್ 2026ರಂದು ಲೋಕಾರ್ಪಣೆಗೊಂಡವು. ಮಾಲತಿ ಮುದಕವಿ ಇವರ ‘ರಾಮರಾಜ್ಯ’ ಹಾಗೂ ‘ಸಂಸಾರದಲ್ಲಿ ಸರಿಗಮ’ ಕೃತಿಗಳನ್ನು ಹಿರಿಯ ಲೇಖಕಿ ಶ್ರೀಮತಿ ವಿನುತಾ ಹಂಚಿನಮನಿ ಹಾಗೂ ‘ಜಗವೇ ನಾಟಕ ರಂಗಾ’ ಕೃತಿಯನ್ನು ಪ್ರಸಿದ್ಧ ಲೇಖಕಿ ಹಾಗೂ ರಂಗಭೂಮಿ ನಿರ್ದೇಶಕಿ ರೂಪಾ ಜೋಶಿ ಪರಿಚಯಿಸಿದರು. ಸರಸ್ವತಿ ಭೋಸಲೆ ಇವರ ‘ಕೇಡಿಲ್ಲದ ನುಡಿ’ ಹಾಗೂ ‘ದೇವರ ದುಡ್ಡು’ ಕೃತಿಗಳನ್ನು ಶ್ರೀ ಶ್ರೀಧರ ಗಸ್ತಿಯವರು ಪರಿಚಯಿಸಿದರು. ಕಾರ್ಯಕ್ರಮಕ್ಕೆ ಬಹಳಷ್ಟು ಸಂಖ್ಯೆಯಲ್ಲಿ ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು. ಧಾರವಾಡದ…
ಬ್ರಹ್ಮಾವರ : ಕರ್ನಾಟಕ ರಾಜ್ಯ ಸರಕಾರದ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದಿಂದ ಮಾನ್ಯತೆ ಪಡೆದಿರುವ ಯಕ್ಷಗಾನ ಕಲಾ ಕೇಂದ್ರ ಹಂಗಾರಕಟ್ಟೆಯವರ ‘ಶಿಕ್ಷಣದೊಂದಿಗೆ ಯಕ್ಷಗಾನ’ ಗುರುಕುಲ ಪದ್ಧತಿಯ ವಸತಿ ಶಾಲೆಗೆ ಅರ್ಜಿ ಆಹ್ವಾನಿಸಲಾಗಿದೆ. ಕಳೆದ 54 ವರ್ಷಗಳಿಂದ ಯಕ್ಷಗಾನ ತರಬೇತಿ ತರಗತಿಯನ್ನು ನಡೆಸುತ್ತಾ ಬಂದ ದಿವಂಗತ ಕಾಳಿಂಗ ನಾವಡ, ಧಾರೇಶ್ವರರಂತ 3000ಕ್ಕೂ ಮಿಕ್ಕಿ ಕಲಾವಿದರನ್ನು ಯಕ್ಷಗಾನ ಪ್ರಪಂಚಕ್ಕೆ ನೀಡಿರುವ, ಯಕ್ಷಗಾನ ಚಿಂತಕ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಮುಖ್ಯೋಪಾಧ್ಯಾಯ ದಿವಂಗತ ಐರೋಡಿ ಸದಾನಂದ ಹೆಬ್ಬಾರರಿಂದ ಸ್ಥಾಪಿಸಲ್ಪಟ್ಟ, ಪ್ರಾಚಾರ್ಯ ನಾರ್ಣಪ್ಪ ಉಪ್ಪೂರರು ಪ್ರಾಚಾರ್ಯರಾಗಿದ್ದ, ನಮ್ಮ ಯಕ್ಷಗಾನ ಕಲಾ ಕೇಂದ್ರ ಹಂಗಾರಕಟ್ಟೆಯು ಶಾಲಾ ಬಾಲಕರಿಗಾಗಿ ಗುರುಕುಲ ಪದ್ಧತಿಯಂತೆ ವಸತಿ ಶಾಲೆಯನ್ನು ಕಳೆದ ಹನ್ನೆರಡು ವರ್ಷಗಳಿಂದ ನಡೆಸುತ್ತಾ ಬಂದಿರುತ್ತದೆ. ‘ಶಿಕ್ಷಣದೊಂದಿಗೆ ಯಕ್ಷಗಾನ’ ಎಂಬ ಧ್ಯೇಯದೊಂದಿಗೆ ಪ್ರಾರಂಭವಾಗಿರುವ ಈ ವಸತಿ ಶಾಲೆಯಲ್ಲಿ ಆರನೆಯ ತರಗತಿಯಿಂದ ಹತ್ತನೆಯ ತರಗತಿಯ ತನಕದ ಬಾಲಕರಿಗೆ ಪ್ರವೇಶ ನೀಡಲಾಗುವುದು. ಅವಕಾಶ ಪಡೆದ ಬಾಲಕರಿಗೆ ಹತ್ತಿರದ ಶಾಲೆಯಲ್ಲಿ ಶಿಕ್ಷಣ ನೀಡಲಾಗುವುದಲ್ಲದೇ ಉಚಿತ ಊಟ,…
ಬಂಟ್ವಾಳ : ಗಾನನೃತ್ಯ ಅಕಾಡೆಮಿ (ರಿ.) ಮಂಗಳೂರು ಪ್ರಸ್ತುತ ಪಡಿಸುವ ಗುರು ವಿದ್ಯಾಶ್ರೀ ರಾಧಾಕೃಷ್ಣ ಇವರ ಶಿಷ್ಯೆಯರಾದ ಕುಮಾರಿ ನಿವೇದಿತಾ ಕಾರಂತ್ ಮತ್ತು ಕುಮಾರಿ ಶಮಿತಾ ಕಾರಂತ್ ಸಹೋದರಿಯರ ‘ಭರತನಾಟ್ಯ ರಂಗಪ್ರವೇಶ’ ಕಾರ್ಯಕ್ರಮವನ್ನು ದಿನಾಂಕ 26 ಏಪ್ರಿಲ್ 2026ರಂದು ಸಂಜೆ ಗಂಟೆ 5-30ಕ್ಕೆ ಬಂಟ್ವಾಳ ಬಿ.ಸಿ. ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಸುರತ್ಕಲ್ಲಿನ ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿಯ ನಿರ್ದೇಶಕರಾದ ಕಲಾಶ್ರೀ ಗುರು ಶ್ರೀ ಚಂದ್ರಶೇಖರ ನಾವಡ ಮತ್ತು ಪುತ್ತೂರಿನ ವಿಶ್ವಕಲಾ ನಿಕೇತನ ಇದರ ನಿರ್ದೇಶಕರಾದ ಕಲಾಶ್ರೀ ವಿದುಷಿ ನಾಯನಾ ವಿ. ರೈ ಇವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಲಿದ್ದಾರೆ. ಭರತನಾಟ್ಯದ ಹಿಮ್ಮೇಳದಲ್ಲಿ ನಟುವಾಂಗ ಗುರು ವಿದ್ಯಾಶ್ರೀ ರಾಧಾಕೃಷ್ಣ, ಹಾಡುಗಾರಿಕೆಯಲ್ಲಿ ಚೆನೈಯ ವಿದ್ವಾನ್ ಶ್ರೀಕಾಂತ್ ಗೋಪಾಲಕೃಷ್ಣನ್, ಮೃದಂಗ ವಾದನದಲ್ಲಿ ಬೆಂಗಳೂರಿನ ವಿದ್ವಾನ್ ವಿನಯ್ ನಾಗರಾಜನ್, ವೀಣೆಯಲ್ಲಿ ತಿರುವನಂತಪುರದ ವಿದ್ವಾನ್ ಸೌಂದರ ರಾಜನ್ ಮತ್ತು ಕೊಳಲು ವಾದನದಲ್ಲಿ ವಿದ್ವಾನ್ ರಘು ನಂದನ್ ಬೆಂಗಳೂರು ಸಹಕರಿಸಲಿದ್ದಾರೆ. ಕಲಾಭಿಮಾನಿಗಳಿಗೆ ಆದರದ ಸ್ವಾಗತ…
ಕುಂದಾಪುರ : ಮಣಿಪಾಲ ಅಕಾಡೆಮಿ ಆಡಳಿತಾಧಿಕಾರಿಯಾಗಿದ್ದ ಸ್ವಪ್ನಶಿಲ್ಪಿ ಡಾ. ಎಚ್. ಶಾಂತಾರಾಮ್ ಇವರ ಹೆಸರಿನಲ್ಲಿ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜು ದತ್ತಿನಿಧಿ ಸ್ಥಾಪಿಸಿ ಪ್ರತಿವರ್ಷ ಕನ್ನಡದ ಅತ್ಯುತ್ತಮ ಸೃಜನಶೀಲ ಕೃತಿಗೆ ಪ್ರಶಸ್ತಿ ನೀಡುತ್ತಾ ಬಂದಿದೆ. ಈ ವರ್ಷ ಸಣ್ಣಕಥೆಯನ್ನು ಪರಿಗಣಿಸಿದ್ದು, 2024 ಮತ್ತು 2025ರ ಅವಧಿಯಲ್ಲಿ ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಸಣ್ಣಕಥಾ ಸಂಕಲನಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಪ್ರಕಾಶಕರು ಮತ್ತು ಲೇಖಕರು ಸಣ್ಣ ಕಥಾಸಂಕಲನದ ನಾಲ್ಕು ಪ್ರತಿಗಳನ್ನು ದಿನಾಂಕ 10 ಮೇ 2026ರೊಳಗೆ ಡಾ. ಎಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸಮಿತಿ, ಭಂಡಾರ್ಕಾರ್ಸ್ ಕಾಲೇಜು, ಕುಂದಾಪುರ – 576201 ಈ ವಿಳಾಸಕ್ಕೆ ಕಳುಹಿಸಿಕೊಡುವಂತೆ ಕೋರಲಾಗಿದೆ. ಈಗಾಗಲೇ ಪ್ರಶಸ್ತಿ ಪಡೆದವರಿಗೆ ಅವಕಾಶವಿರುವುದಿಲ್ಲ. ಪ್ರಶಸ್ತಿ ಪ್ರದಾನ ಸಮಾರಂಭ ಆಗಸ್ಟ್ ತಿಂಗಳಿನಲ್ಲಿ ನಡೆಯಲಿದ್ದು 15 ಸಾವಿರ ರೂಪಾಯಿಯೊಂದಿಗೆ ಬೆಳ್ಳಿ ಫಲಕ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ. 8792107369 ಸಂಪರ್ಕಿಸಬಹುದು.
ಕೋಟ : ಯಕ್ಷದೇಗುಲ (ರಿ.) ಬೆಂಗಳೂರು ಇವರ ಸಂಯೋಜನೆಯಲ್ಲಿ ಕೋಟ ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಕವಿ ಮುದ್ದಣ ವಿರಚಿತ ‘ರತ್ನಾವತಿ ಕಲ್ಯಾಣ’ ಯಕ್ಷಗಾನ ಪ್ರದರ್ಶನವನ್ನು ದಿನಾಂಕ 19 ಏಪ್ರಿಲ್ 2026ರಂದು ರಾತ್ರಿ 7-30 ಗಂಟೆಗೆ ಕೋಟ ಹಂದೆ ದೇವಸ್ಥಾನದಲ್ಲಿ ನಾಗಪ್ಪಯ್ಯ ಹಂದೆ ರಂಗಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಸುದರ್ಶನ ಉರಾಳ ಕೋಟ ಇವರ ಸಂಯೋಜನೆಯಲ್ಲಿ ಪ್ರದರ್ಶನಗೊಳ್ಳುವ ಈ ಯಕ್ಷಗಾನ ಪ್ರದರ್ಶನದ ಹಿಮ್ಮೇಳದಲ್ಲಿ ಭಾಗವತರು ರಾಘವೇಂದ್ರ ಮಯ್ಯ ಹಾಲಾಡಿ ಮತ್ತು ಲಂಬೋದರ ಹೆಗಡೆ ನಿಟ್ಟೂರು, ಮದ್ದಲೆಯಲ್ಲಿ ರಾಘವೇಂದ್ರ ಹೆಗಡೆ ಯಲ್ಲಾಪುರ ಹಾಗೂ ಚಂಡೆಯಲ್ಲಿ ಸುದೀಪ ಉರಾಳ ಹಂದಟ್ಟು ಮತ್ತು ಮುಮ್ಮೇಳದಲ್ಲಿ ಸುಜಯೀಂದ್ರ ಹಂದೆ, ಕಡಬಾಳ ಉದಯ ಹೆಗಡೆ, ತಮ್ಮಣ್ಣ ಗಾಂವ್ಕರ್, ದಿನೇಶ್ ಕನ್ನಾರ್, ರಾಘವೇಂದ್ರ ತುಂಗ ಕೆ., ಸ್ಪೂರ್ತಿ ಭಟ್, ನರಸಿಂಹ ತುಂಗ, ರಾಜು ಪೂಜಾರಿ, ನಾಗರಾಜ್ ಪೂಜಾರಿ ಮತ್ತಿತರರು ಸಹಕರಿಸಲಿದ್ದಾರೆ.
ಮಡಿಕೇರಿ : 2025ನೇ ಸಾಲಿನ ವಿವಿಧ ‘ಕನ್ನಡ ಪುಸ್ತಕ ಸೊಗಸು ಬಹುಮಾನ’ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ನೀಡುವ ‘ಕನ್ನಡ ಪುಸ್ತಕ ಸೊಗಸು ಬಹುಮಾನ’ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ್ರಕಾಶಕರು, ಮುದ್ರಕರು, ಕಲಾವಿದರು ಅರ್ಜಿ ಸಲ್ಲಿಸಬಹುದಾಗಿದೆ, ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು / ಚಿತ್ರ ಕಲಾವಿದರ ಪೂರ್ಣ ವಿಳಾಸ, ದೂರವಾಣಿ ಸಂಖ್ಯೆ ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಅರ್ಜಿ ನಮೂನೆಯೊಂದಿಗೆ ದಿನಾಂಕ 11 ಮೇ 2026ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ. ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ…
ಉಡುಪಿ : ಕವಿ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಅಧ್ಯಾಪಕ, ದಿವಂಗತ ನೆಂಪು ನರಸಿಂಹ ಭಟ್ ಇವರ ಸಂಸ್ಮರಣೆ ಮತ್ತು ‘ನಭ’ ಜೀವನ ಯಾನ ಕೃತಿಯ ಅನಾವರಣ ಕಾರ್ಯಕ್ರಮವು ದಿನಾಂಕ 28 ಮಾರ್ಚ್ 2026ರಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜರುಗಿತು. “ನಭ ನೆಂಪುರವರ ಜೀವನ ಚರಿತ್ರೆಯನ್ನು ಒಂದು motivational story (ಪ್ರೇರಣಾತ್ಮಕ ಕಥೆ)ಯಾಗಿ ತೆಗೆದುಕೊಳ್ಳಬಹುದು. ಬದುಕಿನಲ್ಲಿ ತಾಪತ್ರಯಗಳು ಎದುರಾದಾಗ, ಅವುಗಳನ್ನು ಎದುರಿಸುವ ಬದಲು ಪಲಾಯನ ಮಾಡುವವರು, ನಿಂತು, ಗಮನಿಸಿ, ತಮ್ಮ ದಾರಿಯನ್ನು ಬದಲಿಸಿಕೊಳ್ಳಬೇಕು ಎನ್ನಿಸುವಂತಹ ಬದುಕು ಅವರದ್ದು” ಎಂದು ಕೃತಿಯ ಪ್ರಧಾನ ಸಂಪಾದಕರಾದ ಕವಿ, ಕತೆಗಾರ, ವಿಮರ್ಶಕ ಬೆಳಗೋಡು ರಮೇಶ ಭಟ್ ಅಭಿಪ್ರಾಯಪಟ್ಟರು. ‘ನಭ ಜೀವನ ಯಾನ’ ಕೃತಿಯನ್ನು ಪರಿಚಯಿಸಿದ ಲಕ್ಷ್ಮೀ ಮಚ್ಚಿನ ಪುಸ್ತಕದ ಸಮಗ್ರ ಚಿತ್ರಣ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, “ಮಕ್ಕಳ ಸಾಹಿತ್ಯದ ಬಗ್ಗೆ ಅಪಾರ ಒಲವು ಹೊಂದಿದ್ದ ನಭ, ಬರೆದಂತೆಯೇ ಬದುಕಿದ್ದರು. ಕೃತಿಗೂ ಹಾಗೂ ಅವರ ಜೀವನಕ್ಕೂ…
ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ‘ಮೇಲ್ಮನೆ’ ಸಂಘಟನೆಯ ಸಹಯೋಗದೊಂದಿಗೆ ಮುಡಿಪು ನಂದರಪದವು ಎಸ್.ಕೆ. ವಿವಿಧೋದ್ದೇಶ ಸಭಾಂಗಣದಲ್ಲಿ ದಿನಾಂಕ 05 ಮೇ 2026ರಂದು ಉಳ್ಳಾಲ ತಾಲೂಕು ಮಟ್ಟದ ಮೂರನೇ ಬ್ಯಾರಿ ಸಾಹಿತ್ಯ ಸಮ್ಮೇಳನವನ್ನು ಏರ್ಪಡಿಸಿದೆ. ಈ ಪ್ರಯುಕ್ತ ಮಹಿಳೆಯರಿಗೆ ಮೆಹಂದಿ ವಿನ್ಯಾಸ, ಪದವಿ ಪೂರ್ವಕಾಲೇಜು ವಿದ್ಯಾರ್ಥಿಗಳಿಗೆ ಕನ್ನಡದಿಂದ ಬ್ಯಾರಿಗೆ ಭಾಷಾಂತರ ಮತ್ತು ಬ್ಯಾರಿ ಆಶು ಭಾಷಣ ಸ್ಪರ್ಧೆಗಳು ನಡೆಯಲಿವೆ. ಪ್ರತಿ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದವರಿಗೆ ತಲಾ ರೂ.3,000/- ರೂ.2,000/- ಮತ್ತು ರೂ.1,000/- ನಗದು ಬಹುಮಾನವಿದೆ. ಆಸಕ್ತರು ದಿನಾಂಕ 30 ಏಪ್ರಿಲ್ 2026ರ ಒಳಗಾಗಿ ವಾಟ್ಸ್ ಆ್ಯಪ್ :9449902192/9980772865 ಮೂಲಕ ಹೆಸರು ನೋಂದಾಯಿಸಬಹುದು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ತಿಳಿಸಿದ್ದಾರೆ.
ಬೆಂಗಳೂರು : ಸ್ವರ್ಣಭೂಮಿ ಫೌಂಡೇಷನ್ ಕೋಲಾರ ಮತ್ತು ಅಕ್ಕರೆಯ ಬೆಳಕು ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ ಮತ್ತು ತರಬೇತಿ ಕೇಂದ್ರ ಇವರ ವತಿಯಿಂದ ಹಾಗೂ ಸುಪ್ರೀಂ ವಿಕಲಚೇತನದ ಸೇವಾ ಸಂಸ್ಥೆ ಕೋಲಾರ ಇವರ ಸಹಕಾರದೊಂದಿಗೆ ಅರ್ಪಿಸುವ 5ನೇ ವರ್ಷದ ‘ವಚನ ವೈಭವ’ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ದಿನಾಂಕ 19 ಏಪ್ರಿಲ್ 2026ರಂದು ಮಧ್ಯಾಹ್ನ 2-30 ಗಂಟೆಗೆ ಬೆಂಗಳೂರಿನ ಚಾಮರಾಜಪೇಟೆ ಪಂಪ ಮಹಾಕವಿ ರಸ್ತೆ, ಮಕ್ಕಳಕೂಟ ಹತ್ತಿರ, ಕನ್ನಡ ಸಾಹಿತ್ಯ ಪರಿಷತ್ತು ಕುವೆಂಪು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ವಚನ ವೈಭವ ಕಾರ್ಯಕ್ರಮ, ವಿವಿಧ ಕ್ಷೇತ್ರದ ಸಾಧಕರಿಗೆ ಬಸವ ಸೇವಾ ರತ್ನ ಪ್ರಶಸ್ತಿ, ಕನ್ನಡ ಕಣ್ಮಣಿ ರಾಜರತ್ನ ಡಾ. ಪುನೀತ್ ರಾಜಕುಮಾರ್ ಸ್ಟಾರ್ ಐಕಾನ್ ಅವಾರ್ಡ್ಸ್ ಮತ್ತು ವಿವಿಧ ಕ್ಷೇತ್ರದ ಅಪ್ರತಿಮ ಸಾಧನೆ ತೋರಿದ ಮಕ್ಕಳಿಗೆ ‘ಭರವಸೆಯ ಬೆಳಕು ಪ್ರಶಸ್ತಿ’ ಪ್ರದಾನ ಸಭಾರಂಭ ನಡೆಯಲಿದೆ.