Subscribe to Updates
Get the latest creative news from FooBar about art, design and business.
Author: roovari
ಉಡುಪಿ : ರಂಗಭೂಮಿ ಉಡುಪಿ ವತಿಯಿಂದ ಉಡುಪಿ ರಂಗ ತಂಡಗಳ ಸಹಭಾಗಿತ್ವದಲ್ಲಿ ದಿನಾಂಕ 25 ಜುಲೈ 2024ರಂದು ಎಂ.ಜಿ.ಎಂ. ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ರಂಗಭೂಮಿಯ ದಿ. ಸದಾನಂದ ಸುವರ್ಣ ಅವರಿಗೆ ನುಡಿ ನಮನ ಕಾರ್ಯಕ್ರಮ ಮತ್ತು ‘ಸಮಕಾಲೀನ ರಂಗನಟನೆಯಲ್ಲಿ ಭಾರತೀಯ ಪರಂಪರೆ ಎಂಬುದುದೊಂದು ಇದೆಯೇ ?’ ಎಂಬ ವಿಷಯದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಹಿರಿಯ ರಂಗಕರ್ಮಿ ಪ್ರಸನ್ನ ಇವರು “ಪ್ರಸ್ತುತ ಯಾವ ರಾಜಕಾರಣಿಗಳು ಕೂಡ ನಾಟಕವನ್ನು ನೋಡುತ್ತಿಲ್ಲ. ಈ ಅದ್ಭುತ ಮನರಂಜನಾತ್ಮಕ ಶೈಕ್ಷಣಿಕ ಕ್ಷೇತ್ರವನ್ನು ಎಲ್ಲರೂ ಕಡೆಗಣಿಸುತ್ತಿದ್ದಾರೆ. ರಾಜಕಾರಣಿಗಳನ್ನು ಮತ್ತು ರಾಜಕೀಯ ಪಕ್ಷಗಳನ್ನು ಮೂರ್ಖರ ರೀತಿಯಲ್ಲಿ ನಂಬಿ ಜಗಳ ಆಡುವ ದುರಂತ ಸ್ಥಿತಿಗೆ ದೇಶ ಬಂದಿದೆ. ರಂಗಭೂಮಿ ಪ್ರಸ್ತುತತೆ ಅವುಗಳಿಂದಾಗುವ ಸಾಮಾಜಿಕ ಪರಿಣಾಮಗಳ ಬಗ್ಗೆ ಅರಿವೇ ಇಲ್ಲದ ಸ್ಥಿತಿಯಲ್ಲಿ ವ್ಯವಸ್ಥೆ ಇದೆ. ಕ್ರಿಯೆಯನ್ನು ಕಟ್ಟಿದಾಗ ಮಾತ್ರ ನಟನಲ್ಲಿ ನಿಜವಾದ ಪಾತ್ರ ಭಾವನೆ ಮೂಡುತ್ತದೆ, ಶಕ್ತಿಯನ್ನು ನೀಡುತ್ತದೆ. ಆ ಶಕ್ತಿಯೇ ಭಾವವಾಗಿ ಪರಿವರ್ತನೆಯಾಗುತ್ತದೆ. ಕ್ರಿಯೆಯನ್ನು ಬಳಸಿಕೊಂಡು ಸಂಭಾಷಣೆ…
ಬೆಂಗಳೂರು : ಜನಪದರು ಸಾಂಸ್ಕೃತಿಕ ವೇದಿಕೆ (ರಿ.) ಇದರ ವತಿಯಿಂದ ನಾಟಕ ಪ್ರದರ್ಶನವನ್ನು ದಿನಾಂಕ 27 ಜುಲೈ 2024 ಮತ್ತು 28 ಜುಲೈ 2024ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ನಿಂಬೆಕಾಯಿಪುರದ ಶ್ರೀ ಅಭಯಾಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿರುವ ಜನಪದರು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 27 ಜುಲೈ 2024ರಂದು ಡಾ. ಬಾಲಗುರುಮೂರ್ತಿ ರಚಿಸಿರುವ ಎಂ. ಸುರೇಶ್ ಇವರ ನಿರ್ದೇಶನದಲ್ಲಿ ಅಲೆಮಾರಿ ಬುಡಕಟ್ಟನ್ನು ಕುರಿತ ಕನ್ನಡದ ಮೊದಲ ನಾಟಕ ‘ಖಡ್ಗನಾದ’ ಮತ್ತು 28 ಜುಲೈ 2024ರಂದು ಶ್ರೀ ಕೃಷ್ಣ ಆಲನಹಳ್ಳಿಯವರ ಕಾದಂಬರಿ ಆಧಾರಿತ ಕೆ.ಎಸ್.ಡಿ.ಎಲ್. ಚಂದ್ರು ನಿರ್ದೇಶನದಲ್ಲಿ ‘ರೂಪಾಂತರ’ ಅಭಿನಯಿಸುವ ನಾಟಕ ‘ಪರಸಂಗದ ಗೆಂಡೆತಿಮ್ಮ’ ಪ್ರದರ್ಶನಗೊಳ್ಳಲಿದೆ.
ಸುಳ್ಯ : ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ಎಂ.ಜಿ. ಕಾವೇರಮ್ಮ ಇವರ 85ನೇ ಜನ್ಮ ದಿನಾಚರಣೆಯ ಅಂಗವಾಗಿ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ದಿನಾಂಕ 23 ಜುಲೈ 2024 ಮಂಗಳವಾರದಂದು ಕವಿಗೋಷ್ಠಿಯನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸುಳ್ಯ ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ಕೋಡಿಬೈಲ್ “ಶಾಲೆಗಳಲ್ಲಿ ಸಾಹಿತ್ಯ ಚಟುವಟಿಕೆಗಳು ನಡೆಯುವುದು ಮಕ್ಕಳ ಸೃಜನಾತ್ಮಕ ಬೆಳವಣಿಗೆಗೆ ಸಹಾಯವಾಗುತ್ತದೆ. ಮಾತೃ ಭಾಷೆಯಲ್ಲಿ ಭಾವನೆಯನ್ನು ವ್ಯಕ್ತಪಡಿಸಲು ಸಾಧ್ಯವಾಗುವಷ್ಟು ಸುಲಭವಾಗಿ ಇಂಗ್ಲೀಷ್ ಭಾಷೆಯಲ್ಲಿ ಸಾಧ್ಯವಿಲ್ಲ. ಹಾಗಾಗಿ ಹೃದ್ಯವಾದ ಸಾಹಿತ್ಯ ರಚನೆಗೆ ಕನ್ನಡ ಮಾಧ್ಯಮವೇ ಸೂಕ್ತ. ಭಾಷೆಯು ಸಂಸ್ಕೃತಿಯ ಮೇಲೆ ಪ್ರಭಾವ ಬೀರುತ್ತದೆ ಎಂಬುದಕ್ಕೆ ಸ್ನೇಹ ಶಾಲೆಯು ಪ್ರತ್ಯಕ್ಷ ಸಾಕ್ಷಿ. ಇಲ್ಲಿಯ ಸಮೃದ್ಧ ಪರಿಸರ ಉಲ್ಲಸಿತವಾಗಿದ್ದು, ಚೆತೋಹಾರಿಯಾಗಿದೆ. ಇಲ್ಲಿಯ ಮುಕ್ತ ಪರಿಸರದಲ್ಲಿ ನಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ ವ್ಯಕ್ತಪಡಿಸಲು ಸಾಧ್ಯವಾಗುತ್ತದೆ” ಎಂದು ಹೇಳಿ ಸ್ನೇಹ ಶಾಲಾ ವಿದ್ಯಾರ್ಥಿಗಳ ಸಾಹಿತ್ಯ ಸಾಮರ್ಥ್ಯವನ್ನು ಕೊಂಡಾಡಿದರು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಸ್ನೇಹ ಸಂಸ್ಥೆಯ ಅಧ್ಯಕ್ಷ…
ಕುಪ್ಪಳ್ಳಿ : ಜಾಗೃತಿ ಟ್ರಸ್ಟ್ (ರಿ.) ಬೆಂಗಳೂರು ಹಾಗೂ ರೋಟರಿ ಕ್ಲಬ್ ರಿಚ್ ಮಂಡ್ ಟೌನ್ ಬೆಂಗಳೂರು ಇವುಗಳ ಸಹಯೋಗದಲ್ಲಿ ಗುರು ವಂದನೆ, ಕವನ ಸಂಕಲನ ಲೋಕಾರ್ಪಣೆ, ಕವಿಗೋಷ್ಠಿ, ಸನ್ಮಾನ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳನ್ನು 28 ಜುಲೈ 2024ರಂದು ಶಿವಮೊಗ್ಗ ಜಿಲ್ಲೆಯ ಕುಪ್ಪಳ್ಳಿಯಲ್ಲಿರುವ ಶತಮಾನೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 9-30 ಗಂಟೆಗೆ ಡಾ. ವಾಣಿಶ್ರೀ ಕಾಸರಗೋಡು ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಬಳಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಲೋಕಸಭಾ ಸದಸ್ಯರಾದ ಶ್ರೀ ಬಿ.ವೈ. ರಾಘವೇಂದ್ರ ನಡೆಸಿಕೊಡಲಿದ್ದು, ಮಾಜಿ ಶಾಸಕರಾದ ಶ್ರೀ ಕುಮಾರ ಬಂಗಾರಪ್ಪ ಇವರು ಡಾ. ಬಿ.ಎಸ್. ಮಂಜುನಾಥ್ ಇವರ ‘ಭಾವಜೀವಿಯ ಅನುಭವ ಲಹರಿ’ ಎಂಬ ಕವನ ಸಂಕಲನ ಲೋಕಾರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ ಗಂಟೆ 1-30ಕ್ಕೆ ಕವಿಗೋಷ್ಠಿ ಕಾರ್ಯಕ್ರಮ ಮತ್ತು ಗಂಟೆ 2-30ಕ್ಕೆ ಗುರುವಂದನೆ, ಸನ್ಮಾನ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳು ನಡೆಯಲಿವೆ.
ಕಾಸರಗೋಡು : ಕುಂಬ್ಳೆ ಸೀಮೆಯ ಗಡಿನಾಡು ಕಾಸರಗೋಡಿನ ಸಿರಿಬಾಗಿಲಿನ ಸಾಂಸ್ಕೃತಿಕ ಭವನದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಯಕ್ಷಗಾನ ಕಲಾಪೋಷಕರುಗಳ ಸಹಕಾರದಲ್ಲಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಂಯೋಜನೆಯಲ್ಲಿ ಎರಡನೇ ದಿನವಾದ 18 ಜುಲೈ 2024ರಂದು ಏಳು ತಂಡಗಳ ಯಕ್ಷಗಾನ ಪ್ರದರ್ಶನ ನಡೆಯಿತು. ಯಕ್ಷಗಾನ ಕ್ಷೇತ್ರದಲ್ಲಿ ಕಲಾವಿದರಿಗೆ ಮತ್ತು ಪ್ರೇಕ್ಷಕರಿಗೆ ಹಬ್ಬದ ವಾತಾವರಣ ಸೃಷ್ಟಿಯಾಯಿತು. ವಿಶೇಷವೆಂದರೆ ಯಕ್ಷಗಾನದ ಯಾವುದೇ ಪರಿಚಯವಿಲ್ಲದ ದೂರದ ಮಂಡ್ಯದ ಶ್ರೀ ಸುಲ್ತಾನ್ ಗೌಡ, ಶ್ರೀ ಶಣ್ಮುಖನ್ ಮುಂತಾದ ಪ್ರೇಕ್ಷಕರು ಭಾಗವಹಿಸಿ ಮೆಚ್ಚುಗೆಯ ನುಡಿಯಾಡಿದರು. ಇಂದು ಶುದ್ಧ ಕನ್ನಡ ಉಳಿದಿದ್ದರೆ ಅದು ಯಕ್ಷಗಾನದಲ್ಲಿ ಮಾತ್ರ ಎಂಬ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮೇಳದಲ್ಲಿ ಹಿರಿಯ ಕಲಾವಿದರಾಗಿದ್ದ ಕುಂಬ್ಳೆ ಶ್ರೀಧರ ರಾವ್ ಅವರಿಗೆ ನುಡಿ ನಮನ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಆಷಾಡ ಮಾಸದ ವರ್ಷ ಧಾರೆಯ ಜತೆಗೆ ಮೂರನೇ ದಿನವಾದ 19 ಜುಲೈ 2024ರಂದು ಗಡಿನಾಡು ಕಾಸರಗೋಡಿನ ಸಿರಿಬಾಗಿಲಿನ ಸಾಂಸ್ಕೃತಿಕ ಉತ್ಸವ – ಯಕ್ಷ ವೈಭವಕ್ಕೆ ಸಾಕ್ಷಿಯಾಗಿರುವ…
ಮುಂಡೂರು : ದ.ಕ. ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ಮುಂಡೂರು ಸಹಕಾರದೊಂದಿಗೆ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇವರ ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ ಇವರ ಪೋಷಕತ್ವದಲ್ಲಿ, ಯುವ ಜನತೆಯನ್ನು ಸಾಹಿತ್ಯ ಲೋಕದತ್ತ ಬರಮಾಡಿಕೊಳ್ಳುವ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮುಂಡೂರು ಗ್ರಾಮದಲ್ಲಿ ಸಾಹಿತ್ಯ ಸಂಭ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಎಂಬ ಘೋಷ ವಾಕ್ಯದಲ್ಲಿ ನಡೆಸುವ ‘ಗ್ರಾಮ ಸಾಹಿತ್ಯ ಸಂಭ್ರಮ -2024’ ಸರಣಿ-15 ಈ ಕಾರ್ಯಕ್ರಮವು ಮುಂಡೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ 27 ಜುಲೈ 2024ರ ಶನಿವಾರ ಬೆಳಿಗ್ಗೆ ಗಂಟೆ 9-30ರಿಂದ ನಡೆಯಲಿದೆ. ಈ ಕಾರ್ಯಕ್ರಮದ ಸರ್ವಾಧ್ಯಕ್ಷತೆಯನ್ನು ಸ.ಉ.ಹಿ.ಪ್ರಾ. ಶಾಲೆ ಮುಂಡೂರು ಇಲ್ಲಿನ ವಿದ್ಯಾರ್ಥಿನಿ ಕು. ಸಮ್ನ ಇವರು ವಹಿಸಲಿದ್ದಾರೆ. ಮಧ್ಯಾಹ್ನ 3-00 ಗಂಟೆಗೆ ನಡೆಯುವ ಸಮಾರೋಪ ಭಾಷಣವನ್ನು ಎಸ್.ಜಿ.ಎಂ. ಅನುದಾನಿತ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.…
ಕಾಂತಾವರ : ಕಾಂತಾವರದ ಯಕ್ಷದೇಗುಲ ಸಂಸ್ಥೆಯ ಇಪ್ಪತ್ತೆರಡನೇ ವರ್ಷದ ‘ಯಕ್ಷೋಲ್ಲಾಸ 2024’ ಕಾರ್ಯಕ್ರಮವು 21 ಜುಲೈ2024ರ ಆದಿತ್ಯವಾರದಂದು ಶ್ರೀ ಕ್ಷೇತ್ರ ಕಾಂತಾವರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಂಗಳೂರು ವಿಶ್ವವಿದ್ಯಾಲಯದ ಧರ್ಮಸ್ಥಳ ಮಂಜುನಾಥೇಶ್ವರ ತುಳು ಅಧ್ಯಯನ ಪೀಠದ ಸಂಯೋಜಕ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಮಾಧವ ಎಂ. ಕೆ. ಮಾತನಾಡಿ “ಪ್ರಾಮಾಣಿಕ ಪ್ರಯತ್ನದಿಂದ ಸಂಘಟಿಸಿದ ಕಾರ್ಯಕ್ರಮಗಳ ಯಶಸ್ಸು ದೀರ್ಘಕಾಲ ನೆನಪಿಸುತ್ತದೆ. ಮಾಡುವ ಕಾಯಕದಲ್ಲಿ ಸಾಮಾಜಿಕ ಕಳಕಳಿ, ನಿಸ್ವಾರ್ಥ ಭಾವ ಹಾಗೂ ಕಲಾಪ್ರೇಮ, ಇದ್ದರೆ ಫಲ ಸಿದ್ಧಿಸುವುದು.” ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಯಕ್ಷಗಾನರಂಗದಲ್ಲಿ ಕಲಾವಿದರಾಗಿ ದುಡಿದು ನಿವೃತ್ತಿ ಹೊಂದಿದ ಧರ್ಮಸ್ಥಳ ಮೇಳದ ನಿಡ್ಲೆ ಗೋವಿಂದ ಭಟ್ ಇವರಿಗೆ ಪುತ್ತೂರು ದಿ. ಶ್ರೀಧರ ಭಂಡಾರಿ ಸಂಸ್ಮರಣಾ ಪ್ರಶಸ್ತಿ ಮತ್ತು ಸುರತ್ಕಲ್ ಮೇಳದ ಪುತ್ತಿಗೆ ಕುಮಾರ ಗೌಡರಿಗೆ ಬಾಯಾರು ದಿ. ಪ್ರಕಾಶ್ವಂದ್ರ ರಾವ್ ಸಂಸ್ಮರಣಾ ಪ್ರಶಸ್ತಿಯ ಜೊತೆಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ಉಜಿರೆ ಅಶೋಕ ಭಟ್ ಮತ್ತು ಮೂಡಬಿದ್ರೆ ಶಾಂತಾರಾಮ ಕುಡ್ವ…
ಮಂಗಳೂರು : ಮಂಗಳೂರಿನ ಸನಾತನ ನಾಟ್ಯಾಲಯದ ವತಿಯಿಂದ ಆಯೋಜಿಸಿದ ‘ಸನಾತನ ಗುರುಪರಂಪರ’ ಕಾರ್ಯಕ್ರಮವು 20 ಜುಲೈ 2024ರ ಶನಿವಾರದಂದು ಮಂಗಳೂರಿನ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ‘ಗುರು ನಮನ’ ಸ್ವೀಕರಿಸಿ ಮಾತನಾಡಿದ ಹಿರಿಯ ನೃತ್ಯಗುರು ಹಾಗೂ ವಿದ್ವಾಂಸರಾದ ಪ್ರತಿಭಾ ಎಲ್. ಸಾಮಗ ಹಿರಿಯರ ಪರಂಪರೆಯನ್ನು ಅನುಸರಿಸಿಕೊಂಡು ಬರುವ ಸನಾತನ ನಾಟ್ಯಾಲಯದ ನಡೆ ನಿಜಕ್ಕೂ ಶ್ಲಾಘನೀಯ. ಮಂಗಳೂರಿನಲ್ಲಿ ಹುಟ್ಟಿ ಉಡುಪಿಗೆ ಹೋದ ನನಗೆ ಇಲ್ಲಿನ ಗೌರವ ತವರು ಮನೆ ಸನ್ಮಾನದಂತಿದೆ. ಹೊಸ ತಲೆಮಾರಿನ ಪುಕ್ಕಳು ಪ್ರತಿಭಾವಂತರಿದ್ದಾರೆ. ಅವರು ಸಾಧನೆಯ ಪಥದಲ್ಲಿ ನಡೆಯುವಂತಾಗಲಿ.” ಎಂದು ಹೇಳಿದರು. ಉಡುಪಿಯ ‘ಸಮೂಹ’ ಇದರ ರಂಗ ನಿರ್ದೇಶಕ, ಸಾಹಿತಿ ಹಾಗೂ ಸಂಸ್ಕೃತಿ ಚಿಂತಕರಾದ ಕೀರ್ತಿಶೇಷ ಪ್ರೊ. ಉದ್ಯಾವರ ಮಾಧವ ಆಚಾರ್ಯ ಇವರ ‘ಗುರು ಸಂಸ್ಮರಣೆ’ಯನ್ನು ಧಾರ್ಮಿಕ ಚಿಂತಕರಾದ ಎನ್. ಆರ್. ದಾಮೋದರ ಶರ್ಮ ಬಾರ್ಕೂರು ನಡೆಸಿಕೊಟ್ಟರು. ಬಳಿಕ ಸನಾತನ ನಾಟ್ಯಾಲಯದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶೀಲತಾ ನಾಗರಾಜ್ ಇವರ ಹಿರಿಯ…
ಬಂಟ್ವಾಳ : ವಿಶ್ವಭಾರತಿ ಯಕ್ಷಸಂಜೀವಿನಿ ಟ್ರಸ್ಟ್ (ರಿ.) ಮುಡಿಪು ಇದರ ರಜತ ಸಂಭ್ರಮ ಪ್ರಯುಕ್ತ ತುಳು ಶಿವಳ್ಳಿ ಸೇವಾ ಟ್ರಸ್ಟ್ ಬಂಟ್ವಾಳ ತಾಲೂಕು ಇದರ ಸಹಭಾಗಿತ್ವದಲ್ಲಿ ‘ವಿಶ್ವಭಾರತಿ ರಜತ ವೈಭವ’ದ ಅಂಗವಾಗಿ ‘ರಾಮಾಯಣ ದಶಪರ್ವ’ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು 19 ಜುಲೈ 2024ರಂದು ಬಿ.ಸಿ.ರೋಡ್ ತುಳು ಶಿವಳ್ಳಿ ಸಭಾಭವನದಲ್ಲಿ ಚಾಲನೆಗೊಂಡಿತು. ಈ ಕಾರ್ಯಕ್ರಮವನ್ನು ಯಕ್ಷದಶಾವತಾರಿ ಶ್ರೀ ಕೆ. ಗೋವಿಂದ ಭಟ್ ಇವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ತುಳು ಶಿವಳ್ಳಿ ಸಂಘ ಬಂಟ್ವಾಳ ಘಟಕ ಅಧ್ಯಕ್ಷರಾದ ಶ್ರೀ ರಾಜಾರಾಮ ಭಟ್ ಅಧ್ಯಕ್ಷತೆ ವಹಿಸಿದ್ದರು. ಸಜೀಪ ಮಾಗಣೆ ತಂತ್ರಿ ಶ್ರೀ ಎಂ. ಸುಬ್ರಮಣ್ಯ ಭಟ್, ಖ್ಯಾತ ಯಕ್ಷಗಾನ ಕಲಾವಿದ ವಿದ್ವಾಂಸ ಉಜಿರೆ ಅಶೋಕ ಭಟ್, ಶಂಕರ ಸೇವಾ ಪ್ರತಿಷ್ಠಾನ ಬಂಟ್ವಾಳ ಅಧ್ಯಕ್ಷರಾದ ಕೈಯೂರು ನಾರಾಯಣ ಭಟ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಪ್ರಶಾಂತ ಹೊಳ್ಳ ನೇತೃತ್ವದಲ್ಲಿ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ‘ಶ್ರೀರಾಮ ಪಟ್ಟಾಭಿಷೇಕ’ ಎಂಬ ಯಕ್ಷಗಾನ ತಾಳಮದ್ದಳೆ ಜರಗಿತು. ಕುಮಾರಿ ಶ್ರೀವಿದ್ಯಾ ಐತಾಳ್, ಪ್ರಶಾಂತ…
ಮಡಿಕೇರಿ : ಕರ್ನಾಟಕ ಸಾಹಿತ್ಯ ಅಕಾಡೆಮಿಯು 2023ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ. ಲೇಖಕರು, ಪ್ರಕಾಶಕರು, ಸಾಹಿತ್ಯಾಸಕ್ತ ಸಾರ್ವಜನಿಕರು ನಾಲ್ಕು ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ರಿಜಿಸ್ಟರ್ಡ್ ಅಂಚೆ, ಕೋರಿಯರ್ ಮೂಲಕ ಅಥವಾ ಖುದ್ದಾಗಿ ದಿನಾಂಕ 31 ಆಗಸ್ಟ್ 2024ರೊಳಗೆ ತಲುಪುವಂತೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ www.sahithyaacademy.karnataka.gov.inನ್ನು ಸಂಪರ್ಕಿಸಬಹುದೆಂದು ಅಕಾಡೆಮಿಯ ರಿಜಿಸ್ಟ್ರಾರ್ ಎನ್. ಕರಿಯಪ್ಪ ಅವರು ತಿಳಿಸಿದ್ದಾರೆ.