Author: roovari

ಮಂಗಳೂರು : ಆನೆಗುಂದಿ ಗುರುಸೇವಾ ಪರಿಷತ್ ಮಹಾಮಂಡಲ,ಮಂಗಳೂರು ಶಾಖೆಯು ಆಯೋಜಿಸಿರುವ “ಜ್ಞಾನ ವಿಕಾಸ ಸಂಸ್ಕಾರ ಶಿಬಿರ -2025 ಇದರ ಉದ್ಘಾಟನಾ ಸಮಾರಂಭವು ದಿನಾಂಕ 21 ಏಪ್ರಿಲ್ 2025ರಂದು ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಪಟ್ಟೆ ಲಿಂಗಪ್ಪಾಚಾರ್ಯ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನ ಉದ್ಘಾಟಿಸಿದ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆಡಳಿತಾಧಿಕಾರಿ ಕೆ.ಉಮೇಶ್ ಆಚಾರ್ಯ ಮಾತನಾಡಿ “ಇಂದಿನ ಯುವ ಪೀಳಿಗೆಯಲ್ಲಿ ನಶಿಸುತ್ತಿರುವ ಸಂಸ್ಕೃತಿ ಹಾಗೂ ಸಂಪ್ರದಾಯಗಳ ಜ್ಞಾನವು ಚಿಗುರಿಕೊಳ್ಳಲು ಜ್ಞಾನ ವಿಕಾಸ ಸಂಸ್ಕಾರ ಶಿಬಿರವು ಮಾರ್ಗದರ್ಶಕವಾಗಲಿ” ಎಂದು ಹಾರೈಸಿದರು. ಇನ್ನೋರ್ವ ಅತಿಥಿ ವಿಶ್ವಕರ್ಮ ಸಹಕಾರ ಬ್ಯಾಂಕ್ ಇದರ ಅಧ್ಯಕ್ಷರಾದ ಡಾ. ಎಸ್. ಆರ್. ಹರೀಶ್ ಆಚಾರ್ಯ ಮಾತನಾಡಿ “ನಮ್ಮೊಳಗಿರುವ ಮೂರನೇ ದೃಷ್ಟಿಯನ್ನು ತೆರೆಯುವ ಪ್ರಯತ್ನ ಇಂದು ಆಗಬೇಕಾದ ಅನಿವಾರ್ಯತೆ ಬಂದೊದಗಿದೆ, ಕುಂಟಿತಗೊಳ್ಳುತ್ತಿರುವ ಮಕ್ಕಳ ಯೋಚನಾ ಸಾಮರ್ಥ್ಯವನ್ನು ಉದ್ದೀಪನಗೊಳಿಸುವ ಕೆಲಸ ಇಂತಹ ಶಿಬಿರಗಳಿಂದ ಆಗಬೇಕು” ಎಂದು ಹಾರೈಸಿದರು. ವೇದಿಕೆಯಲ್ಲಿ ಸಮಾಜ ಸೇವಕ ಪುಂಡರೀಕಾಕ್ಷ ಆಚಾರ್ಯ, ಗುರು ಸೇವಾ ಪರಿಷತ್ ಇದರ ಅಧ್ಯಕ್ಷರಾದ ಶೇಖರ…

Read More

ಮಂಗಳೂರು : ಮಂಗಳೂರಿನ ಕೂಳೂರಿನಲ್ಲಿರುವ ಯೆನೆಪೊಯ ಇನ್ಸಿಟ್ಯೂಟ್ ಆಫ್ ಆರ್ಟ್ಸ್ ಸೈನ್ಸ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್ ಇಲ್ಲಿನ ಸಹಾಯಕ ಪ್ರಾಧ್ಯಾಪಕ ನಿಯಾಝ್ ಪಡೀಲ್ ರಚಿಸಿದ ಕನ್ನಡ ಕಾದಂಬರಿಯ ಬ್ಯಾರಿ ಅನುವಾದಿತ ‘ಯತೀಮ್’ ಕೃತಿಯ ಲೋಕರ್ಪಣಾ ಸಮಾರಂಭವು ದಿನಾಂಕ 23 ಏಪ್ರಿಲ್ 2025ರ ಬುಧವಾರದಂದು ಕಾಲೇಜಿನ ವೈ. ಎಂ. ಕೆ. ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳಿಸಿದ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾದ ಯು. ಎಚ್. ಉಮರ್ ಮಾತನಾಡಿ “ಸಾಧನೆಗೆ ಯಾವುದೂ ಕೂಡ ಅಡ್ಡಿಯಾಗಬಾರದು. ಬದುಕಿನಲ್ಲಿ ಸಾಧಿಸುವ ಗುರಿಯೊಂದೇ ಮುಖ್ಯ. ಅನಕ್ಷರಸ್ಥ ಕೂಡ ತನ್ನದೇ ಆದ ಕ್ಷೇತ್ರದಲ್ಲಿ ಸಾಧಿಸಿ ತೋರಿಸಿದ ಉದಾಹರಣೆ ಇದೆ. ಸಾಧಿಸುವ ಮೊದಲು ತನ್ನಲ್ಲಿರುವ ಕೀಳರಿಮೆಯನ್ನು ದೂರ ಮಾಡಬೇಕು. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿ ಕೂಡ ಸ್ಪಷ್ಟ ಗುರಿಯೊಂದಿಗೆ ಕೀಳರಿಮೆ ದೂರ ಮಾಡಿ ಸಾಧಿಸಿ ತೋರಿಸಬೇಕು. ಭಾಷೆಯು ಕೇವಲ ಸಂವಹನ ಕಲೆಯಲ್ಲ. ಅದರಲ್ಲಿ ಸಂಸ್ಕೃತಿ, ಸಂಸ್ಕಾರ, ಸಂವೇದನೆ ಇರುತ್ತದೆ. ಈ ನಿಟ್ಟಿನಲ್ಲೂ ಅಧ್ಯಯನ ಆಗಬೇಕಿದೆ. ಬ್ಯಾರಿ ಅಕಾಡಮಿಯು ಸಂಶೋಧನೆಗೆ ಹೆಚ್ಚು ಆದ್ಯತೆ…

Read More

ಬೆಂಗಳೂರಿನ ಕಾರಂಜಿ ಆಂಜನೇಯನ ದೈವಸನ್ನಿಧಿಯಲ್ಲಿ ಅನಾವರಣಗೊಂಡ ಪುರಾಣಕಾಲದ ಒಂದೊಂದು ದಿವ್ಯ ಕಥೆಯೂ ನಾಟಕದ ದೃಶ್ಯಗಳಂತೆ ಚೇತೋಹಾರಿಯಾಗಿ ಚಲಿಸಿ ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿತು. ಭಕ್ತಿಭಾವ ಕೆನೆಗಟ್ಟಿದ ‘ನವವಿಧ ಭಕ್ತಿ’ಯ ಕಥಾನಕಗಳು ಪೂರಕ ಸಂಗೀತ ಸಾಂಗತ್ಯದಲ್ಲಿ ಅರಳುತ್ತ ಕಥಾಪ್ರಸಂಗವನ್ನು ಕಣ್ಮನ ತಣಿಸುವ ನೃತ್ಯಧಾರೆಯಲ್ಲಿ ನಿರೂಪಿಸಿದ್ದು ವಿಶಿಷ್ಟವಾಗಿತ್ತು. ವಿಶ್ವಪ್ರಸಿದ್ಧ ಹಿರಿಯ ನೃತ್ಯಗುರು ಕೇಂದ್ರ ಪ್ರಶಸ್ತಿ ಪುರಸ್ಕೃತೆ ವಿದುಷಿ. ರಾಧಾ ಶ್ರೀಧರ್ ಪರಿಕಲ್ಪನೆ-ನೃತ್ಯ ಸಂಯೋಜನೆ ಮತ್ತು ತರಬೇತಿಯಲ್ಲಿ ಪ್ರದರ್ಶಿತವಾದ ಸುಮನೋಹರ ನೃತ್ಯರೂಪಕ ಎರಡು ಗಂಟೆಗಳ ಕಾಲ ತಲ್ಲೀನಗೊಳಿಸಿತು. ವಿದುಷಿ ದ್ವಾರಕಿ ಕೃಷ್ಣಸ್ವಾಮಿಯವರ ಸಾಹಿತ್ಯ-ಸಂಗೀತ ಸಹಕಾರ, ಗಾಯಕ ಡಿ. ಶ್ರೀವತ್ಸ ಸಂಗೀತ ನೀಡುವುದರೊಂದಿಗೆ ಭಾವಪೂರ್ಣವಾಗಿ ಹಾಡಿದ್ದರು. ‘’ನವವಿಧ ಭಕ್ತಿ’’- ನೃತ್ಯರೂಪಕ, ಭಕ್ತಿಯ ಪ್ರಖರಶಕ್ತಿಯನ್ನು ಸಾಕ್ಷಾತ್ಕರಿಸುವ ಉಜ್ವಲ ಸಂದೇಶದ ದಿವ್ಯಾನುಭೂತಿಗೆ ಕಾರಣವಾಯಿತೆಂದರೆ ಅತಿಶಯೋಕ್ತಿಯಲ್ಲ. ಸನಾತನ ಧಾರ್ಮಿಕ ಪರಂಪರೆಯಲ್ಲಿನ ಒಂಭತ್ತು ಬಗೆಯ ಭಕ್ತಿಯ ಮುಖಗಳನ್ನು ವಿವಿಧ ಪುರಾಣ ನಿದರ್ಶನಗಳ ಮೂಲಕ ದೃಶ್ಯಾತ್ಮಕವಾಗಿ ವರ್ಣರಂಜಕವಾಗಿ ಪ್ರಸ್ತುತಗೊಳಿಸಲಾಯಿತು. ಮೋಕ್ಷ ಸಾಧನಗಳಾದ ನವವಿಧ ಭಕ್ತಿಗಳಾದ -ಶ್ರವಣಂ, ಕೀರ್ತನಂ. ಸ್ಮರಣಂ, ಪಾದಸೇವನಂ, ಅರ್ಚನಂ, ವಂದನಂ, ದಾಸ್ಯಂ, ಸಖ್ಯಂ, ಅರ್ಪಣಂ…

Read More

ಮಂಗಳೂರು : ಕರ್ನಾಟಕ ಬ್ಯಾರೀಸ್ ಸೋಶಿಯಲ್ ಮತ್ತು ಕಲ್ಚರಲ್ ಫೋರಂ ವತಿಯಿಂದ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆಯುವ ಬ್ಯಾರೀಸ್ ಫೆಸ್ಟಿವಲ್-2025 (ಬ್ಯಾರಿ ಬಹುಭಾಷಾ ಸೌಹಾರ್ದ ಉತ್ಸವ)ಕ್ಕೆ ದಿನಾಂಕ 19 ಏಪ್ರಿಲ್ 2025ರ ಶನಿವಾರ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ “ಸೌಹಾರ್ದ ಸಮ್ಮಿಲನದ ಕಲ್ಪನೆಯಡಿ ಈ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ. ಇದರಲ್ಲಿ ಸಮಾಜದ ಸರ್ವರೂ ಪಾಲ್ಗೊಳ್ಳಬೇಕು. ದ. ಕ. ಜಿಲ್ಲೆಯಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ” ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಉತ್ಸವ ಸಮಿತಿಯ ಅಧ್ಯಕ್ಷ, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಜಿ. ಎ. ಬಾವ ಬ್ಯಾರೀಸ್ ಫೆಸ್ಟಿವಲ್ ಒಂದು ಜನಾಂಗಕ್ಕೆ ಸೀಮಿತವಾಗಿಲ್ಲ. ಇದರಲ್ಲಿ ಸಮಾಜದ ಎಲ್ಲಾ ವರ್ಗದ ಜನರಿಗೂ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ” ಎಂದರು ಉತ್ಸವದ ಅಂಗವಾಗಿ ಮೆಹಂದಿ ಸ್ಪರ್ಧೆಗಳು, ವಿವಿಧ ಗೋಷ್ಠಿಗಳು, ಯುವ ಸಮೂಹಕ್ಕೆ ಭವಿಷ್ಯದ ಕುರಿತಾಗಿ ಮಾರ್ಗದರ್ಶನ ಮತ್ತು ದಫ್ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಹುಸೈನ್ ಕಾಟಿಪಳ್ಳ ಬಳಗದಿಂದ ಬಹುಭಾಷಾ…

Read More

ಬಂಟ್ವಾಳ : ಬಿ. ವಿ. ಕಾರಂತ ರಂಗಭೂಮಿಕಾ ಟ್ರಸ್ಟ್ (ರಿ.) ಮಂಚಿ ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದ.ಕ. ಇದರ ಸಹಯೋಗದಲ್ಲಿ ಆಯೋಜಿಸುವ ಬಿ. ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ‘ರಂಗಭೂಮಿಕಾ-2025’ ದಿನಾಂಕ 26 ಏಪ್ರಿಲ್ 2025 ರಿಂದ 28 ಏಪ್ರಿಲ್ 2025ರ ವರೆಗೆ ಪ್ರತಿದಿನ ಸಂಜೆ ಘಂಟೆ 6.00ರಿಂದ ಕುಕ್ಕಾಜೆ-ಮಂಚಿಯ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದ ಆವರಣದಲ್ಲಿ ನಡೆಯಲಿದೆ. 26 ಏಪ್ರಿಲ್ 2025 ರ ಶನಿವಾರದಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಜಿ ಸದಸ್ಯರಾದ ಶ್ರೀ ಪಿಯುಸ್ ಎಲ್. ರೊಡ್ರಿಗಸ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ ಉಳಿಪಾಡಿಗುತ್ತು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ನಿವೃತ್ತ ಮುಖ್ಯೋಪಾಧ್ಯಾಯರು, ‘ಅಭಿರುಚಿ’ ಜೋಡುಮಾರ್ಗ ಇಲ್ಲಿನ ಶ್ರೀ ಮಹಾಬಲೇಶ್ವರ ಹೆಬ್ಬಾರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದ.ಕ. ಇದರ ಸಹಾಯಕ ನಿರ್ದೇಶಕರಾದ ಶ್ರೀ ರಾಜೇಶ್ ಭಾಗವಹಿಸಲಿದ್ದಾರೆ. ಸಭಾಕಾರ್ಯಕ್ರಮದ ಬಳಿಕ ಮಂದಾರ,…

Read More

ಬೆಳ್ಳಿಪ್ಪಾಡಿ : ನಿವೃತ್ತ ಅಧ್ಯಾಪಕ ಬಿ. ಹುಕ್ರಪ್ಪ ಗೌಡ ಬೆಳ್ಳಿಪ್ಪಾಡಿ ಅವರ ‘ಶ್ರೀರಾಮಾಂಜನೇಯ’ ನೂತನ ಗೃಹಪ್ರವೇಶೋತ್ಸವದ ಸುಸಂದರ್ಭದಲ್ಲಿ ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಸದಸ್ಯರಿಂದ “ ಶಕ್ರಜಿತು “ ಯಕ್ಷಗಾನ ತಾಳಮದ್ದಳೆ ದಿನಾಂಕ ದಿನಾಂಕ 16 ಏಪ್ರಿಲ್ 2025ರಂದು ನಡೆಸಲ್ಪಟ್ಟಿತು. ಸಂಘದ ಹಿರಿಯ ಭಾಗವತ ಗುರುಗಳಾದ ವಿಶ್ವವಿನೋದ ಬನಾರಿಯವರ ಸಂಯೋಜನೆಯಲ್ಲಿ ಮುನ್ನಡೆದ ಈ ತಾಳಮದ್ದಳೆಯ ಭಾಗವತರಾಗಿ ಮೋಹನ ಮೆನಸಿನಕಾನ, ಕುಮಾರಿ ವಿದ್ಯಾಶ್ರೀ ಆಚಾರ್ಯ ಈಶ್ವರ ಮಂಗಲ , ಅಂಕುಶ್‌ ಎಣ್ಣೆಮಜಲು ಅವರು ಕಾಣಿಸಿಕೊಂಡರು. ಚೆಂಡೆ ಮದ್ದಳೆ ವಾದನದಲ್ಲಿ ಶ್ರೀಧರ ಆಚಾರ್ಯ ಈಶ್ವರ ಮಂಗಲ, ಅಪ್ಪಯ್ಯ ಮಣಿಯಾಣಿ ಮಂಡೆಕೋಲು, ವಿಷ್ಣು ಶರಣ ಬನಾರಿ, ಬಿ. ಎಚ್. ಕೃಷ್ಣ ಪ್ರಸಾದ ಬೆಳ್ಳಿಪ್ಪಾಡಿ ‌ ಅವರು ಸಹಕರಿಸಿದರು. ಅರ್ಥಧಾರಿಗಳಾಗಿ ಬೆಳ್ಳಿಪ್ಪಾಡಿ ಸದಾಶಿವ ರೈ, ಐತಪ್ಪ ಗೌಡ ಮುದಿಯಾರು, ಯಂ. ಬಾಲಕೃಷ್ಣ ಗೌಡ ದೇಲಂಪಾಡಿ, ಯಂ. ರಮಾನಂದ ರೈ ದೇಲಂಪಾಡಿ, ಡಿ. ರಾಮಣ್ಣ ಮಾಸ್ತರ್‌ ದೇಲಂಪಾಡಿ, ನಾರಾಯಣ ದೇಲಂಪಾಡಿ, ರಾಮನಾಯ್ಕ ಬಸಿರಡ್ಕ, ಶಾಂತಾಕುಮಾರಿ…

Read More

ಕುಂದಾಪುರ : “ಪ್ರತಿಭೆ ನಿಮ್ಮದು ವೇದಿಕೆ ನಮ್ಮದು” 2025ರ ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸತತ 106ನೇ ತಿಂಗಳ ಕಾರ್ಯಕ್ರಮ ದಿನಾಂಕ 20 ಏಪ್ರಿಲ್ 2025ರಂದು ಶ್ರೀಮತಿ ದೇವಕಿ ಸುರೇಶ್ ಪ್ರಭು ರವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಅಧ್ಯಕ್ಷತೆ ವಹಿಸಿದ್ದ ನಿವೃತ್ತ ಪ್ರಾಂಶುಪಾಲ ಎಮ್. ರತ್ನಾಕರ ಪೈ ಯವರು ಮಾತನಾಡಿ “ಉಪ್ಪಿನಕುದ್ರಿನಂತಹ ಸಣ್ಣ ಹಳ್ಳಿಯಲ್ಲಿ ಇಂತಹ ಭವ್ಯ ವೇದಿಕೆಯನ್ನು ಡಾ. ಸುಧಾ ಮೂರ್ತಿ ಹಾಗೂ ಡಾ. ಪಿ. ದಯಾನಂದ ಪೈ ಯವರ ಪ್ರಾಯೋಜಕತ್ವದಲ್ಲಿ ನಿರ್ಮಿಸಲಾಗಿದೆ. ಪ್ರತಿಯೊಂದು ಕಲೆಯ ಕಲಾವಿದನಿಗೆ ಇಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಗೊಂಬೆಯಾಟ ಅಕಾಡೆಮಿ ಅವಕಾಶ ನೀಡುತ್ತಿದೆ. ಆ ಅವಕಾಶವನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು” ಎಂದರು. ವೇದಿಕೆಯಲ್ಲಿ ಗೊಂಬೆಯಾಟದ ಹಿರಿಯ ಸೂತ್ರಧಾರಿ ವೆಂಕಟರಮಣ ಬಿಡುವಾಳ್, ಶ್ರೀಮತಿ ಅನಸೂಯಾ ವಿ. ಬಿಡುವಾಳ್, ಶ್ರೀಮತಿ ಯಶೋದಾ ಜೆ. ಪೂಜಾರಿ, ನರಸಿಂಹ ಪೂಜಾರಿ ಹಾಗೂ ಅಕಾಡೆಮಿ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಬಿಡುವಾಳ್ ಪ್ರತಿಷ್ಠಾನ ಹೇರೂರು ಇದರ ಅಧ್ಯಕ್ಷರಾದ ವೆಂಕಟರಮಣ ಬಿಡುವಾಳ್…

Read More

ಕಿನ್ನಿಗೋಳಿ : ಬಿ. ಸಿ. ರೋಡಿನಲ್ಲಿ ಶಿಕ್ಷಕರಾಗಿ ,ಪತ್ರಕರ್ತರಾಗಿ ಎರಡು ದಶಕಗಳ ಹಿಂದೆ ಸೇವೆ ಸಲ್ಲಿಸಿದ್ದ ಸಂಘಟಕ, ಸಾಹಿತಿ, ಹಾ. ಮ. ಸತೀಶ ಗೂಡಿನಬಳಿ ಇವರು ಬೆಂಗಳೂರು ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಶಾರೀರಿಕ ಶಿಕ್ಷಕರಾಗಿ ಸೇವೆ ಸೇವೆ ಸಲ್ಲಿಸುತ್ತಿದ್ದ ಇವರು ಚುಟುಕು ಕವಿಯಾಗಿ ಗುರುತಿಸಲ್ಪಟ್ಟಿದ್ದು 1997ರಲ್ಲಿ ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಸ್ಥಾಪನೆ ಮಾಡಿ ಹಲವು ಸಮ್ಮೇಳನಗಳನ್ನು ನಡೆಸಿದ್ದರು. ಗೋಳ್ತಮಜಲಿನಲ್ಲಿ ನಡೆದ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಅದ್ದೂರಿ ಸಮ್ಮೇಳನ ನಡೆಸಿದ್ದರು. ನಂದಾವರದಲ್ಲಿ ಚುಟುಕು ಸಾಹಿತ್ಯ ಸಮ್ಮೇಳನ ನಡೆಸಿ ಹಲವು ಯುವಕವಿಗಳಿಗೆ ಅವಕಾಶ ನೀಡಿ ಸನ್ಮಾನ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ. ‘ಆಸರೆ’, ‘ಕೊನೆಯ ನಿಲ್ದಾಣ’ ಕವನ ಸಂಕಲನ, ‘ಹನಿಹನಿ ಜೇನು’, ‘ಜಿನುಗುವ ಸೋನೆ ಮಳೆ’ ಹನಿಗವನಗಳು, ಭಕ್ತಿ ಗೀತೆ, ಗಝಲ್, ವೈಚಾರಿಕ ಲೇಖನಗಳ ಸಂಕಲನಗಳು ಹೀಗೆ 13 ಕೃತಿಗಳನ್ನು ಸಾಹಿತ್ಯಲೋಕಕ್ಕೆ ಅರ್ಪಣೆ ಮಾಡಿದ್ದಾರೆ. ಪರಿಷತ್ತು ಕೇಂದ್ರ ಸಮಿತಿಯ ಕರ್ನಾಟಕ ರಾಜ್ಯ ಸಂಚಾಲಕರಾದ ಜಯಾನಂದ ಪೆರಾಜೆಯವರು…

Read More

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು, ಪುತ್ತೂರು ಇದರ ಪಾಕ್ಷಿಕ ತಾಳಮದ್ದಳೆ ಅಂಗವಾಗಿ “ಶರಸೇತು” ಯಕ್ಷಗಾನ ತಾಳಮದ್ದಳೆ ದಿನಾಂಕ 19 ಏಪ್ರಿಲ್ 2025ರಂದು ಶ್ರೀ ಆಂಜನೇಯ ಮಂತ್ರಾಲಯದಲ್ಲಿ ನಡೆಯಿತು. ಹಿಮ್ಮೇಳದಲ್ಲಿ ಹೊಸಮೂಲೆ ಗಣೇಶ್ ಭಟ್ , ಯಲ್. ಯನ್. ಭಟ್ ಬಟ್ಯಮೂಲೆ, ಮುರಳೀಧರ ಕಲ್ಲೂರಾಯ , ಅಭೀಶೇಕ್ ಚನಿಲ , ಶರಣ್ಯ ನೆತ್ತರಕೆರೆ, ಪರೀಕ್ಷಿತ್ ಹಂದ್ರಡ್ಕ, ಮಾ.ಆದಿತ್ಯ ಕೃಷ್ಣ ಸಹಕರಿಸಿದರು. ಮುಮ್ಮೇಳದಲ್ಲಿ ಹನೂಮಂತ ( ಗುಂಡ್ಯಡ್ಕ ಈಶ್ವರ ಭಟ್ ), ಶ್ರೀ ರಾಮ ( ಭಾಸ್ಕರ್ ಬಾರ್ಯ ), ಅರ್ಜುನ ( ಮಾಂಬಾಡಿ ವೇಣುಗೋಪಾಲ ಭಟ್ ) ಹಾಗೂ ವೃದ್ಧ ವಿಪ್ರ ( ದುಗ್ಗಪ್ಪ ಯನ್ ) ಸಹಕರಿಸಿದರು. ಟಿ ರಂಗನಾಥ ರಾವ್ ಸ್ವಾಗತಿಸಿ ವಂದಿಸಿದರು.ಶ್ರೀ ಮತಿ ಮನೋರಮಾ ಜಿ ಭಟ್ ಪ್ರಾಯೋಜಿಸಿದ್ದರು.

Read More

ಮಂಗಳೂರು : ಅಂಬುರುಹ ಯಕ್ಷಸದನ ಪ್ರತಿಷ್ಠಾನ(ರಿ) ಬೊಟ್ಟಿಕೆರೆ ಹಾಗೂ ಮಂಗಳೂರು ವಿ. ವಿ. ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆದ ಐದು ದಿನಗಳ ‘ ಯಕ್ಷಶಿಕ್ಷಣ ಶಿಬಿರ- 2025’ ಇದರ ಸಮಾರೋಪ ಸಮಾರಂಭ ದಿನಾಂಕ 15 ಏಪ್ರಿಲ್ 2025ರ ಮಂಗಳವಾರದಂದು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ. ಧನಂಜಯ ಕುಂಬ್ಳೆ ಮಾತನಾಡಿ “ಯಕ್ಷಗಾನ ಕಲೆಯನ್ನು ಅರಿತುಕೊಂಡು ನೈಜವಾಗಿ ಆಸ್ವಾದಿಸುವವರ ಸಂಖ್ಯೆ ಕಡಿಮೆಯಾಗಿದೆ. ಯಕ್ಷಗಾನದ ಹೆಜ್ಜೆಗಾರಿಕೆಯ ಸೌಂದರ್ಯ, ಮುದ್ರೆಗಳು, ಪ್ರಸಂಗ ಸಾಹಿತ್ಯದ ಧ್ವನಿ, ಅರ್ಥಗಾರಿಕೆಯ ಭಾಷಿಕ ಸೊಗಸು ಮೊದಲಾದವುಗಳನ್ನು ತಿಳಿದುಕೊಂಡು ಆಸ್ವಾದಿಸಿದರೆ ಸಿಗುವ ರಸಾನುಭವವೇ ವಿಶೇಷವಾದುದು. ಇಂತಹ ಕಲಾಸಕ್ತಿಯನ್ನು ಬೆಳೆಸುವ ಯಕ್ಷಶಿಕ್ಷಣ ಬೇಕಾಗಿದೆ. ಯಕ್ಷಶಿಕ್ಷಣ ಶಿಬಿರಗಳು ಈ ದೃಷ್ಟಿಯಿಂದ ಉಪಯುಕ್ತ. ಯಕ್ಷಗಾನವು ರಸಾನುಭವದ ನೆಲೆ. ಸೃಜನಶೀಲ ನೆಲೆ, ಸಂಸ್ಕೃತಿ ನಿಷ್ಠೆ ಎಂಬ ಈ ಮೂರು ನೆಲೆಗಳಲ್ಲಿ ಜೋಡಿಕೊಂಡಿಸಿರುವ ಕಲೆಯಾಗಿದೆ. ಯಕ್ಷಗಾನವನ್ನು ಶೈಕ್ಷಣಿಕವಾಗಿ ಕಲಿಯುವುದಕ್ಕೆ ಅನೇಕ ಆಯಾಮಗಳಿವೆ,…

Read More