Subscribe to Updates
Get the latest creative news from FooBar about art, design and business.
Author: roovari
ಹುಬ್ಬಳ್ಳಿ : ಆರ್ಟಿಸ್ಟ್ಸ್ ಫೋರಂ ಆಫ್ ದಿ ನಗರ್ಕರ ಲೈಬ್ರರಿ ಪ್ರಸ್ತುತ ಪಡಿಸುವ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮವನ್ನು ದಿನಾಂಕ 27 ಸೆಪ್ಟೆಂಬರ್ 2025ರಂದು ಸಂಜೆ 6-00 ಗಂಟೆಗೆ ಹುಬ್ಬಳ್ಳಿಯಲ್ಲಿರುವ ದಿ ನಾಗರ್ಕಾರ ಲೈಬ್ರರಿಯ 1ನೇ ಮಹಡಿಯಲ್ಲಿರುವ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಗ್ಗೋಡಿನ ಶ್ರೀ ರಾಘವೇಂದ್ರ ಭಟ್ ಇವರ ಹಾಡುಗಾರಿಕೆಗೆ ಸಾಗರದ ವಿನಾಯಕ್ ಹೆಗ್ಡೆ ತಬಲಾದಲ್ಲಿ ಮತ್ತು ವಿಜಯಪುರದ ಸಿದ್ಧೇಶ್ ಬಡಿಗೇರ್ ಸಾಥ್ ನೀಡಲಿದ್ದಾರೆ.
ಉಳ್ಳಾಲ : ಸಾರ್ವಜನಿಕ ನವರಾತ್ರಿ ಶ್ರೀ ಶಾರದಾ ಉತ್ಸವ ಸಮಿತಿ ಉಳ್ಳಾಲ ಇದರ ಆಶ್ರಯದಲ್ಲಿ ದಿನಾಂಕ 30 ಸೆಪ್ಟೆಂಬರ್ 2025ರ ಮಂಗಳವಾರ ಮಧ್ಯಾಹ್ನ ಘಂಟೆ 2-30 ಕ್ಕೆ “ರಸಪ್ರಶ್ನೆ” ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಉಳ್ಳಾಲದ ಶಾರದಾ ನಿಕೇತನದಲ್ಲಿ ಜರುಗಲಿರುವ ಈ ಸ್ಪರ್ಧೆಯಲ್ಲಿ ಸಾರ್ವಜನಿಕರೆಲ್ಲರಿಗೂ ಮುಕ್ತವಾಗಿ ಸ್ಪರ್ಧಿಸಲು ಅವಕಾಶವಿದ್ದು, ಇಬ್ಬರು ತಂಡವಾಗಿ ಭಾಗವಹಿಸಬೇಕಾಗುತ್ತದೆ. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನದೊಂದಿಗೆ ನಗದು ಪುರಸ್ಕಾರ ನೀಡಲಾಗುವುದು. ಪ್ರೊ. ಗಿಲ್ ರಾಜ್, ಆಸ್ಟ್ರೇಲಿಯಾ ಅವರ ಆಯೋಜಕತ್ವದಲ್ಲಿ ನಡೆಯಲಿರುವ ಈ ಸ್ಪರ್ಧೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವೆಂಕಟಗಿರಿ ಬೇಕಲ್ – 9845083765 ಅಥವಾ ದಿನೇಶ್ ಉಳ್ಳಾಲ – 9341109898 ಇವರನ್ನು ಸಂಪರ್ಕಿಸಬಹುದೆಂದು ಉತ್ಸವ ಸಮಿತಿಯ ಅಧ್ಯಕ್ಷ ಭರತ್ ಕುಮಾರ್ ತಿಳಿಸಿದ್ದಾರೆ.
“Empowerment isn’t just about women; it is equally about men. Both genders need to find balance and for that, we must also pray to the goddess within us,” said Dr. Supriya Hegde Aroor, Professor and Head of the Department of Psychiatry, Father Muller Medical College, Mangalore. She was addressing the gathering as the chief guest at the Navashakthi Celebration 2025, organized at Expert PU College, Kodialbail, on Thursday, September 25. The programme commenced with a vibrant procession led by Kannada HOD, Karunakar Balkur, along with the chief guest, Dr. Supriya Hegde Aroor, Chairman Prof. Narendra L. Nayak, Vice Chairperson Dr.…
ಉಡುಪಿ : ಯಕ್ಷಗಾನ ಕೇಂದ್ರ, ಇಂದ್ರಾಳಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಇದರ ಸಹಯೋಗದಲ್ಲಿ ಯಕ್ಷಗಾನ ಸರ್ಟಿಫಿಕೇಟ್ ಕೋರ್ಸನ್ನು ಆರಂಭಿಸಲಾಗುತ್ತಿದ್ದು, ಇದರ ಉದ್ಘಾಟನಾ ಸಮಾರಂಭವನ್ನು ದಿನಾಂಕ 28 ಸೆಪ್ಟೆಂಬರ್ ಆದಿತ್ಯವಾರದಂದು ಮಧ್ಯಾಹ್ನ ಘಂಟೆ 3.00ಕ್ಕೆ ಮಣಿಪಾಲದ Pavillion, MISHA Lake ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಹೆ ಸಹಕುಲಾಧಿಪತಿಗಳಾದ ಡಾ. ಎಚ್. ಎಸ್ ಬಲ್ಲಾಳ್, ಮುಖ್ಯ ಅತಿಥಿಗಳಾಗಿ ಸಹಕುಲಪತಿಗಳಾದ ಡಾ. ನಾರಾಯಣ ಸಭಾಹಿತ್, ಯಕ್ಷಗಾನ ಕೇಂದ್ರದ ಸಲಹಾಸಮಿತಿ ಅಧ್ಯಕ್ಷರಾದ ಶ್ರೀ ಪಳ್ಳಿ ಕಿಶನ್ ಹೆಗ್ಡೆ ಭಾಗವಹಿಸಲಿದ್ದಾರೆ. ಯಕ್ಷಗಾನ ಕಲಾಸಕ್ತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕೇಂದ್ರದ ಆಡಳಿತಾಧಿಕಾರಿ ಡಾ.ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ.9448868868 / 9845822443 ಸಂಪರ್ಕಿಸಬಹುದು.
ಮಂಗಳೂರು : ಶರನ್ನವರಾತ್ರಿ ಪ್ರಯುಕ್ತ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಸೆಪ್ಟೆಂಬರ್ 22ರಿಂದ ಮೊದಲ್ಗೊಂಡು ನವರಾತ್ರಿ ಮಹೋತ್ಸವ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ದಿನಾಂಕ 02 ಅಕ್ಟೋಬರ್ 2025 ಗುರುವಾರ ವಿಜಯದಶಮಿಯಂದು ಸಾಯಂಕಾಲ 4-30 ಗಂಟೆಗೆ ‘ದಸರಾ ಕವಿಗೋಷ್ಠಿ – 2025’ ನವರಸ ರಂಜನೆಯ ಬಹುಭಾಷಾ ಕವಿಗೋಷ್ಠಿಯನ್ನು ಏರ್ಪಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಸ್. ಪ್ರದೀಪ ಕುಮಾರ್ ಕಲ್ಕೂರ ಕವಿಗೋಷ್ಠಿಯನ್ನು ಉದ್ಘಾಟಿಸಲಿದ್ದು, ಕವಿ – ಸಾಹಿತಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಇವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ದಶ ಕವಿಗಳು ಬಹುಭಾಷಾ ರಂಜನೆ ನೀಡಲು ಗೋಷ್ಠಿಯಲ್ಲಿ ಪಾಲ್ಗೊಳ್ಳುವರು. ಕವಿಗಳಾದ ಡಾ. ಸುರೇಶ್ ನೆಗಳಗುಳಿ (ಕನ್ನಡ ಗಝಲ್), ಮಹಮ್ಮದ್ ಬಡ್ಡೂರು (ಬ್ಯಾರಿ), ಗುಣಾಜೆ ರಾಮಚಂದ್ರ ಭಟ್ (ಕನ್ನಡ), ಡಾ. ಮೀನಾಕ್ಷಿ ರಾಮಚಂದ್ರ (ಮಲೆಯಾಳಂ), ಅಕ್ಷತಾ ರಾಜ್ ಪೆರ್ಲ (ಹವ್ಯಕ), ಡಾ. ಕವಿತಾ ಸುವರ್ಣ (ಹಿಂದಿ), ಅಕ್ಷಯ ಆರ್. ಶೆಟ್ಟಿ, ವಿಜಯಲಕ್ಷ್ಮಿ…
ಬೆಂಗಳೂರು : ಮೈಸೂರಿನ ಸಮತೆಂತೋ ಪ್ರಸ್ತುತಿಯ ಡಾ. ಶ್ರೀಪಾದ ಭಟ್ ಇವರ ರಂಗಪಠ್ಯ ವಿನ್ಯಾಸ ನಿರ್ದೇಶನದಲ್ಲಿ ಇಂದಿರಾ ನಾಯರ್ ಅಭಿನಯಿಸುವ ‘ನೀರ್ಮಾದಳ ಹೂವಿನೊಂದಿಗೆ…’ ಏಕವ್ಯಕ್ತಿ ರಂಗ ಪ್ರಯೋಗವು ದಿನಾಂಕ 30 ಸೆಪ್ಟೆಂಬರ್ 2025ರಂದು ಸಂಜೆ 7-30 ಗಂಟೆಗೆ ಬೆಂಗಳೂರು ಜೆ.ಪಿ. ನಗರದ ರಂಗಶಂಕರದಲ್ಲಿ ನಡೆಯಲಿದೆ. ಕಮಲಾ ದಾಸ್ ಇವರ ಜೀವನ ಮತ್ತು ಬರಹಗಳನ್ನು ಆಧರಿಸಿದ ಏಕವ್ಯಕ್ತಿ ಪ್ರದರ್ಶನ ಕನ್ನಡದಲ್ಲಿ ಮೊದಲ ಬಾರಿಗೆ ನಡೆಯಲಿದೆ. ಅನುಷ್ ಶೆಟ್ಟಿ ಮತ್ತು ಮುನ್ನಾ ಸಂಗೀತ ಹಾಗೂ ಮಧುಸೂದನ್ ನೀನಾಸಂ ಬೆಳಕಿನ ವಿನ್ಯಾಸ ಮಾಡಿರುತ್ತಾರೆ. ಟಿಕೆಟ್ ಮತ್ತು ಹೆಚ್ಚಿನ ಮಾಹಿತಿಗಾಗಿ 9590403087, 8088886388, 9611074424 ಮತ್ತು 7483136251 ಸಂಖ್ಯೆಯನ್ನು ಸಂಪರ್ಕಿಸಿರಿ.
ಮಂಗಳೂರು : ಚಕ್ರಪಾಣಿ ನೃತ್ಯ ಕಲಾಕೇಂದ್ರ ಅತ್ತಾವರ ಮಂಗಳೂರು ಇವರ ವತಿಯಿಂದ ‘ಶಾರದಾ ಪೂಜಾ ಮಹೋತ್ಸವ ಮತ್ತು ವಾರ್ಷಿಕೋತ್ಸವ’ವನ್ನು ದಿನಾಂಕ 28 ಸೆಪ್ಟೆಂಬರ್ 2025ರಂದು ಬೆಳಿಗ್ಗೆ 8-30 ಗಂಟೆಗೆ ಅತ್ತಾವರ ಚಕ್ರಪಾಣಿ ಗೋಪಿನಾಥ ದೇವಸ್ಥಾನದ ಕಲಾ ಮಂಟಪದಲ್ಲಿ ಆಯೋಜಿಸಲಾಗಿದೆ. ಬೆಳಿಗ್ಗೆ 9-30 ಗಂಟೆಗೆ ‘ಶಾಸ್ತ್ರೀಯ ಸಂಗೀತ’ ಮತ್ತು ಸಂಜೆ 5-30 ಗಂಟೆಗೆ ‘ನೃತ್ಯಾರ್ಚನೆ’ ಕಾರ್ಯಕ್ರಮ ಸಂಸ್ಥೆಯ ವಿದ್ಯಾರ್ಥಿಗಳಿಂದ ಪ್ರಸ್ತುತಗೊಳ್ಳಲಿದೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಂಜನ್ ಕೆ.ಎಸ್. ಇವರು ವಹಿಸಲಿದ್ದಾರೆ.
ಮಂಗಳೂರು : ತುಳು ಪರಿಷತ್ ಮಂಗಳೂರು ಇದರ ವತಿಯಿಂದ ಮ್ಯಾಪ್ಸ್ ಕಾಲೇಜಿನಲ್ಲಿ ಆಯೋಜಿಸಿದ್ದ ನುಡಿ ನಮನ ಸಮಾರಂಭವು ದಿನಾಂಕ 25 ಸೆಪ್ಟೆಂಬರ್ 2025ರಂದು ನಡೆಯಿತು. ಈ ಸಮಾರಂಭದಲ್ಲಿ ಮಾತನಾಡಿದ ಸುರತ್ಕಲ್ ಗೋವಿಂದ ದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಕೃಷ್ಣ ಮೂರ್ತಿ ಪಿ. “ತುಳುನಾಡಿನ ಪ್ರಮುಖ ಇತಿಹಾಸ ಸಂಶೋಧಕರ ಪರಂಪರೆಯನ್ನು ಸಮರ್ಥವಾಗಿ ಮುನ್ನಡೆಸಿದ ಡಾ. ಕೆ.ಜಿ. ವಸಂತ ಮಾಧವ ಹಾಗೂ ಕನ್ನಡ ಕಾದಂಬರಿ ಪರಂಪರೆಗೆ ನೂತನ ಆಯಾಮ ನೀಡಿದ ಎಸ್.ಎಲ್. ಭೈರಪ್ಪರ ಕೊಡುಗೆ ಅನನ್ಯವಾದುದು. ಹಿರಿಯರ ಅಗಲಿಕೆಯ ನೋವಿನೊಂದಿಗೆ ಅವರ ಕೊಡುಗೆಗಳನ್ನು ಸ್ಮರಣೆ ಮಾಡಿಕೊಳ್ಳುವುದು ಅತಿ ಅಗತ್ಯ. ಕೆ.ಜಿ. ವಸಂತ ಮಾಧವರು ಕರಾವಳಿ ಕರ್ನಾಟಕದ ಇತಿಹಾಸದ ಕಟ್ಟುವಿಕೆಯನ್ನು ಪ್ರಧಾನವಾಗಿಸಿಕೊಂಡು ಸಾಂಸ್ಕೃತಿಕ ಇತಿಹಾಸದ ರಚನೆಗೆ ಮೂಲ ಆಕರಗಳನ್ನು ಶೋಧಿಸಿ ಭವಿಷ್ಯದ ಸಂಶೋದಕರಿಗೆ ಮಾರ್ಗದರ್ಶನ ನೀಡಿರುತ್ತಾರೆ. ಅವರ ನೂತನ ಶೋಧಗಳ ಸಮಗ್ರ ಅಧ್ಯಯನ ನಡೆಯ ಬೇಕಾಗಿದೆ. ಕಾದಂಬರಿಯನ್ನೇ ತನ್ನ ಅಭಿವ್ಯಕ್ತಿ ಮಾಧ್ಯಮವೆಂದು ಪರಿಭಾವಿಸಿದ ಭೈರಪ್ಪರು ಸಂಕೀರ್ಣವಾದ ಜೀವನದ ಸತ್ಯಗಳನ್ನು ಕಾದಂಬರಿಗಳ ಮೂಲಕ ನಿರ್ವಹಿಸಿದ್ದಾರೆ. ಜೀವನದ…
ಅರಸೀಕೆರೆ : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಅರಸೀಕೆರೆ ತಾಲೂಕು ಘಟಕದ ವತಿಯಿಂದ ಅರಸೀಕೆರೆ ಶ್ರೀ ಪ್ರಸನ್ನ ಗಣಪತಿ ಆಸ್ಥಾನ ಮಂಟಪದಲ್ಲಿ ಹಮ್ಮಿಕೊಂಡಿದ್ದ ದಸರಾ ಉತ್ಸವ ಕಾರ್ಯಕ್ರಮವು ದಿನಾಂಕ 22 ಸೆಪ್ಟೆಂಬರ್ 2025ರಂದು ನಡೆಯಿತು. ಈ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಕೊಟ್ರೇಶ್ ಎಸ್. ಉಪ್ಪಾರ್ “ಇಡೀ ಜಗತ್ತು ಧರ್ಮಾಧತೆಯ ತೊಳಲಾಟದಲ್ಲಿ ಮನುಷ್ಯ ಪ್ರೀತಿಯನ್ನು ಮರೆತು ಧ್ವೇಷಾಸೂಯೆಯ ದಳ್ಳುರಿಯಲ್ಲಿ ಬೇಯುತ್ತಿದೆ. ವರ್ತಮಾನದ ಜಗತ್ತಿಗೆ ಬಸವಣ್ಣ ಹಾಗೂ ಕುವೆಂಪುರವರ ವಿಶ್ವಮಾನವ ತತ್ವ ಸಾರುವಂತಹ ಸಾಮರಸ್ಯದ ಸಾಹಿತ್ಯ ಅಗತ್ಯವಿದೆ. ಸಾಹಿತ್ಯ ಸಾಮಾಜಿಕ ತಲ್ಲಣಗಳಿಗೆ ಧ್ವನಿಯಾಗಬೇಕು. ಪ್ರತಿ ಬರಹಗಾರನೂ ನಮ್ಮ ಸಾಹಿತ್ಯ ಪರಂಪರೆಯನ್ನು ಅರಿಯಬೇಕು. ನಾವು ಸೃಜಿಸುವ ಸಾಹಿತ್ಯ ಜಾತ್ಯಾತೀತವಾಗಿ, ಧರ್ಮಾತೀತವಾಗಿ ಮೌಲ್ಯಗಳನ್ನು ಕಟ್ಟಿಕೊಡಬೇಕು. ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹುಟ್ಟಿರುವುದೇ ಎಲೆಮರೆ ಕಾಯಿಯಂತಹ ಪ್ರತಿಭೆಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಹಾಗೂ ಯುವ ಜನತೆಯಲ್ಲಿ ನಾಡು-ನುಡಿ ಸಾಧಕರನ್ನು ಪ್ರೋತ್ಸಾಹಿಸುವ ಹಿನ್ನೆಲೆಯಲ್ಲಿ ಎಂಟು ವರ್ಷಗಳ…
ಉಡುಪಿ : ರಾಗ ಧನ ಉಡುಪಿ (ರಿ.) ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸುತ್ತಿರುವ ‘ರಾಗರತ್ನಮಾಲಿಕೆ – 41’ನೇ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯಲ್ಲಿ ವಿದುಷಿ ರಂಜನಿ ಹೆಬ್ಬಾರ್ ಇವರ ಸಂಸ್ಮರಣೆ ದಿನಾಂಕ 28 ಸೆಪ್ಟೆಂಬರ್ 2025ರಂದು ಸಂಜೆ 5-00 ಗಂಟೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಮೈಸೂರಿನ ವಿದ್ವಾನ್ ಜಿ.ಕೆ. ಮನಮೋಹನ್ ಇವರ ಹಾಡುಗಾರಿಕೆಗೆ ವಯೊಲಿನ್ ನಲ್ಲಿ ಕೇಶವ ಮೋಹನ್ ಕುಮಾರ್ ಬೆಂಗಳೂರು ಹಾಗೂ ಮೃದಂಗದಲ್ಲಿ ಸುನಾದ ಕೃಷ್ಣ ಅಮೈ ಸಹಕರಿಸಲಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಉಮಾಶಂಕರಿ ತಿಳಿಸಿರುತ್ತಾರೆ.