Author: roovari

ಮೂಡುಬಿದಿರೆ: ಕನ್ನಡ ಸಾಹಿತ್ಯ ಪರಿಷತ್ ಮೂಡುಬಿದಿರೆ ಘಟಕ ಹಾಗೂ ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಸಹಯೋಗದಲ್ಲಿ ‘ರಂಗ ಸಂಸ್ಕ್ಕತಿ’ ವಿಷಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮವು ದಿನಾಂಕ 13 ಆಗಸ್ಟ್ 2025ರಂದು ನಡೆಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ಪ್ರಸಿದ್ಧ ರಂಗ ನಿರ್ದೇಶಕ ಹಾಗೂ ಸಾಹಿತಿ ಡಾ. ಶ್ರೀಪಾದ ಭಟ್ ಕುಮಟಾ ಮಾತನಾಡಿ “ಶಿಕ್ಷಣ ಮತ್ತು ರಂಗಕಲೆಗಳನ್ನು ಪ್ರತ್ಯೇಕಿಸಿ ನೋಡುವ ಇತ್ತೀಚಿನ ಪ್ರವೃತ್ತಿ ಸಮಾಜಕ್ಕೆ ಒಳಿತಲ್ಲ. ಅರಿವು ಮತ್ತು ಆನಂದ — ಇವು ಬೇರ್ಪಡಿಸಲಾಗದ ನಿಜವಾದ ಸಂಪತ್ತು. ಕಲೆಯು ಶಿಕ್ಷಣದಿಂದ ದೂರವಿದ್ದರೆ, ಮಾನವೀಯತೆ, ಸೃಜನಶೀಲತೆ ಮತ್ತು ಜೀವನದ ಗಾಢತೆ ಕುಂದುತ್ತದೆ. ರಂಗಭೂಮಿಯೆಂದರೆ ಹೊರ ಜಗತ್ತನ್ನು ನೋಡುವುದಷ್ಟೇ ಅಲ್ಲ, ತನ್ನನ್ನು ತಾನು ಅರಿಯುವ ಕ್ರಿಯೆ. ಇದು ಕೇವಲ ಬುದ್ಧಿ ಮತ್ತು ಭಾವದ ಕಸರತ್ತು ಮಾತ್ರವಲ್ಲ, ದೈಹಿಕ ಚಲನೆ, ಶಿಸ್ತು, ತಂಡ ಸಹಕಾರ ಮತ್ತು ಆತ್ಮವಿಶ್ವಾಸ ಬೆಳೆಸುವ ವಿಸ್ತೃತ ಪ್ರಕ್ರಿಯೆ. ರಂಗಭೂಮಿ ವ್ಯಕ್ತಿತ್ವವನ್ನು ರೂಪಿಸುವ ಸಶಕ್ತ ಸಾಧನ” ಎಂದು ಹೇಳಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ…

Read More

ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆಯುತ್ತಿರುವ ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತೆಂಟನೇ ಉಪನ್ಯಾಸ ಕಾರ್ಯಕ್ರಮವು ಉಡುಪಿಯ ಅಜ್ಜರಕಾಡಿನ, ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ದಿನಾಂಕ 12 ಆಗಸ್ಟ್ 2025ರಂದು ನಡೆಯಿತು. ಕಾರ್ಯಕ್ರಮದಲ್ಲಿ “ಆತ್ಮವಿಕಾಸದಿಂದ ರಾಷ್ಟ್ರವಿಕಾಸ – ವಿವೇಕಾನಂದರ ದಾರಿದೀಪ” ಎಂಬ ವಿಷಯದ ಕುರಿತು ಮಾತನಾಡಿದ ಖ್ಯಾತ ವಾಗ್ಮಿ, ಲೇಖಕ, ಚಿಂತಕ ಮತ್ತು ಮೈಸೂರಿನ ವಿವೇಕವಂಶಿ ಫೌಂಡೇಶನ್ ಇದರ ಸ್ಥಾಪಕರಾದ ಶ್ರೀ ನಿತ್ಯಾನಂದ ಎಸ್. ಬಿ. ಮಾತನಾಡಿ “ಸ್ವಾಮಿ ವಿವೇಕಾನಂದರು ಹೇಳಿರುವುದು ಬಹಳ ಸ್ಪಷ್ಟ – “ನೀವು ನಿಮ್ಮನ್ನು ಬೆಳೆಸಿದರೆ, ದೇಶ ಸ್ವಯಂ ಬೆಳೆಯುತ್ತದೆ.” ರಾಷ್ಟ್ರವಿಕಾಸದ ಮೂಲವೇ ಆತ್ಮವಿಕಾಸ. ಆತ್ಮವಿಕಾಸ ಎಂದರೆ ಕೇವಲ ವಿದ್ಯಾಭ್ಯಾಸ ಅಥವಾ ಉದ್ಯೋಗ ಮಾತ್ರವಲ್ಲ, ಅದು ನಮ್ಮ ದೇಹ, ಮನಸ್ಸು ಮತ್ತು ಆತ್ಮದ ಸಮಗ್ರ ಬೆಳವಣಿಗೆ. ವಿವೇಕಾನಂದರ ಆದರ್ಶಗಳು ನಮ್ಮನ್ನು ಮೂರು ಮುಖ್ಯ ದಿಕ್ಕುಗಳಲ್ಲಿ ನಡೆಸುತ್ತದೆ. ಶಕ್ತಿ, ಶ್ರದ್ಧೆ…

Read More

ಮುಂಬಯಿ: ಮುಂಬೈ ಮಹಾನಗರದ ಹೋಟೆಲ್ ಉದ್ಯಮಿಗಳ ಬೃಹತ್ ಸಂಘಟನೆಯಾದ ಜವಾಬ್ ವತಿಯಿಂದ ಅಂಧೇರಿಯ ಹೋಟೆಲ್ ಪ್ಯಾಪಿಲೋನ್ ನಲ್ಲಿ ಅಜೆಕಾರು ಕಲಾಭಿಮಾನಿ ಬಳಗದ 24ನೇ ಸರಣಿಯ ಮೂರನೇ ದಿನದ ತಾಳಮದ್ದಳೆ ಕಾರ್ಯಕ್ರಮ ದಿನಾಂಕ 11 ಆಗಸ್ಟ್ 2025ರಂದು ನಡೆಯಿತು. ಜವಾಬ್ ಅಧ್ಯಕ್ಷ ರಾಜೇಶ್ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯೊಂದಿಗೆ ಉದ್ಘಾಟಿಸಿದ ಜವಾಬ್ ನ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ರಘು ಎಲ್. ಶೆಟ್ಟಿ ಮಾತನಾಡಿ “ಮುಂಬೈಯ ಹೋಟೆಲ್ ಉದ್ಯಮಿಗಳು ಒಟ್ಟು ಸೇರಿ ಜವಾಬ್ ಆಶ್ರಯದಲ್ಲಿ ಕಳೆದ ಎರಡು ದಶಕಗಳಿಂದ ಅಜೆಕಾರು ಕಲಾಭಿಮಾನಿ ಬಳಗದ ತಾಳಮದ್ದಳೆ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಾ ಬಂದಿದ್ದಾರೆ. ಅದು ನಮ್ಮ ಅಭಿರುಚಿಗೆ ಪೂರಕವಾಗಿ ಎಲ್ಲರನ್ನೂ ಆಕರ್ಷಿಸುತ್ತಿರುವುದರಿಂದ ಪ್ರತಿ ಬಾರಿಯೂ ಒಳ್ಳೆಯ ಪ್ರೇಕ್ಷಕ ವರ್ಗವನ್ನು ಸೆಳೆಯುತ್ತಿದೆ. ಯಕ್ಷಗಾನ ತಾಳಮದ್ದಳೆ ಪ್ರಕಾರದಲ್ಲಿ ಪುರಾಣ ಜ್ಞಾನದೊಂದಿಗೆ ಜೀವನಕ್ಕೆ ಸಂಸ್ಕಾರ ನೀಡುವಂತಹ ಹಲವು ವಿಚಾರಗಳನ್ನು ತಿಳಿಯಲು ಸಾಧ್ಯವಾಗುತ್ತದೆ” ಎಂದು ಹೇಳಿದರು. ಹಿರಿಯ ಯಕ್ಷಗಾನ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿ ಅವರು ಮುಂಬೈ…

Read More

ಸಿರಿಬಾಗಿಲು : ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ಕಲೆ- ಸಂಸ್ಕೃತಿ- ಸಾಹಿತ್ಯ ಉಳಿಸುವ, ಬೆಳೆಸುವ ,ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಯೋಜನೆಯಂತೆ ಭಜನೆ- ಹರಿಸಂಕೀತನೆ- ಗಮಕ -ಹವ್ಯಾಸಿ ತಂಡಗಳ ಯಕ್ಷಗಾನ ತಾಳಮದ್ದಳೆ ಹಾಗೂ ವಿದ್ಯಾರ್ಥಿ ಸಮಾಗಮ ಕಾರ್ಯಕ್ರಮವು ಆಗಸ್ಟ್ ತಿಂಗಳ 15 ,16 ,17ನೇ ತಾರೀಕಿನಂದು ಜರಗಲಿದೆ. ದಿನಾಂಕ 15 ರಂದು ಬೆಳಗ್ಗೆ 6.00 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಾಡಿನ ವಿವಿಧ ಭಜನಾ ತಂಡಗಳ ಭಜನಾ ಕಾರ್ಯಕ್ರಮ, ತದನಂತರ ಹರಿಸಂಕೀರ್ತನೆಯು ನಡೆಯಲಿದೆ. ಅದೇ ದಿನ ದೂರದ ಕುಂದಾಪುರದ ಶ್ರೀ ನಾದೋಪಾಸನ ಸಮೂಹ ,ಕೋಟೇಶ್ವರ ಇವರ ಪಾಲ್ಗೊಳ್ಳುವಿಕೆ ಮೆರಗು ನೀಡಲಿದೆ. ದಿನಾಂಕ 16 ,17 ರಂದು ಬೆಳಿಗ್ಗೆ 10 ಗಂಟೆಯಿಂದ ರಾತ್ರಿಯವರೆಗೆ ಹವ್ಯಾಸಿ ಯಕ್ಷಗಾನ ಕಲಾವಿದರ ಒಟ್ಟು 9 ತಂಡಗಳ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಜತೆಗೆ ದಿನಾಂಕ 16ರಂದು ವಿಶೇಷವಾಗಿ 12-00 ಗಂಟೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜ್ ಉಜಿರೆ ಗ್ರೇಡ್ ಎ‌.+.+ಗ್ರೇಡ್ ಉಜಿರೆ ವಿದ್ಯಾರ್ಥಿಗಳಿಗೆ ಯಕ್ಷಗಾನ ಕುರಿತಾದ…

Read More

ಕಾರ್ಕಳ : ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ” ಕ್ರಿಯೇಟಿವ್ ಪುಸ್ತಕ ಧಾರೆ – 2025″ ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ… ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಕರ‍್ಯಕ್ರಮ ದಿನಾಂಕ 13 ಆಗಸ್ಟ್ 2025ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಕೆ. ಚಿನ್ನಪ್ಪ ಗೌಡ ಮಾತನಾಡಿ “ಪುಸ್ತಕವೆಂದರೆ ಕೇವಲ ಅಕ್ಷರಗಳ ಸಂಗ್ರಹವಲ್ಲ. ಅದು ಕಾಲ, ಸಮಾಜ ಮತ್ತು ಮಾನವನ ಭಾವನೆಗಳ ಪ್ರತಿಬಿಂಬ. ಇಂತಹ ಕಾರ್ಯಕ್ರಮಗಳು ಓದುವ ಅಭ್ಯಾಸವನ್ನು ಪುನರುಜ್ಜೀವನಗೊಳಿಸುತ್ತವೆ” ಎಂದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಖ್ಯಾತ ಸಾಹಿತಿಗಳು ಹಾಗೂ ಚಿತ್ರ ನಿರ್ದೇಶಕರಾದ ಡಾ. ನಾಗತಿಹಳ್ಳಿ ಚಂದ್ರಶೇಖರ್ ಮಾತನಾಡಿ “ಪುಸ್ತಕವೆಂದರೆ ಕೇವಲ ಹಾಳೆಗಳ ಗುಚ್ಛವಲ್ಲ. ಅದು ಕಾಲದ ಸ್ಮರಣೆ, ಸಮಾಜದ ಕನ್ನಡಿ ಮತ್ತು ಮನಸ್ಸಿನ ಆಳದಿಂದ ಹೊರ ಹೊಮ್ಮುವ ಭಾವಧಾರೆ ಮತ್ತು ಮಾನವನ ಮನಸ್ಸಿನ ನಕ್ಷೆಯೇ ಆಗಿದೆ ” ಎಂದರು. ಕಾರ್ಯಕ್ರಮದಲ್ಲಿ ಸರ್ವರನ್ನು ಸ್ವಾಗತಿಸಿದ ಸಂಸ್ಥೆಯ ಸಹ ಸಂಸ್ಥಾಪಕರಾದ…

Read More

ಬೆಳಗಾವಿ : ರಂಗಸಂಪದ ಬೆಳಗಾವಿ ಪ್ರಸ್ತುತ ಪಡಿಸುವ ‘ಸ್ಮರಿಸಿ ಬದುಕಿರೋ’ ನಾಟಕ ಪ್ರದರ್ಶನವನ್ನು ದಿನಾಂಕ 17 ಆಗಸ್ಟ್ 2025ರಂದು ಸಂಜೆ 6-30 ಗಂಟೆಗೆ ಬೆಳಗಾವಿಯ ಲೋಕಮಾನ್ಯ ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಕೇವಲ ಬದುಕುವುದು ನೀರಸ, ಅರ್ಥವಿಲ್ಲದ ಯಾತ್ರೆ. ಸ್ಮರಿಸಿ ಬದುಕುವುದು ಅರ್ಥಪೂರ್ಣ. ಹಾಗಂತ ಯಾರ್ಯಾರನ್ನೋ ಸ್ಮರಿಸಿ ಬದುಕುವುದರಲ್ಲಿ ಮತ್ತೆ ಅರ್ಥವಿಲ್ಲ. ಮಹಿಮೋಪೇತರಾದ ವಿಜಯದಾಸರಂತಹವರನ್ನ ಸ್ಮರಿಸಿ ಬದುಕಬೇಕು ಎಂದು ಕಂಡುಕೊಂಡವರು ಕಲ್ಲೂರು ಸುಬ್ಬಣ್ಣಾಚಾರ್ಯರು (ವ್ಯಾಸ ವಿಠ್ಠಲರು). ಕಲ್ಲೂರು ಸುಬ್ಬಣ್ಣಾಚಾರ್ಯರು ವ್ಯಾಸ ವಿಠ್ಠಲರಾದ ಸ್ವಾರಸ್ಯಕರ ಸನ್ನಿವೇಶವೇ ರೋಮಾಂಚನ ಮೂಡಿಸುವಂತಹದ್ದು. ಇದೇ ಸನ್ನಿವೇಶವನ್ನು ರಂಗಮಂಚದ ಮೇಲೆ ತಮ್ಮ ಸಂದರ್ಭೋಚಿತ ನಿಪುಣತೆಯೊಂದಿಗೆ ಇಳಿಸಿದ್ದಾರೆ ಶ್ರೀ ಅರವಿಂದ ಕುಲಕರ್ಣಿಯವರು. ತಮ್ಮ ಸುಂದರ ಅಭಿನಯದಿಂದ ಪಾತ್ರಗಳಿಗೆ ಜೀವ ತುಂಬಿದ್ದಾರೆ ರಂಗಸಂಪದ ಬೆಳಗಾವಿಯ ಕಲಾವಿದರು. ಭಾವಾವೇಶ, ರೋಮಾಂಚನಗಳನ್ನೊಳಗೊಂಡ ಈ ಸುಂದರವಾಗಿ ನಿರೂಪಿತವಾದ ನಾಟಕ ಪ್ರತಿಯೊಬ್ಬರೂ ನೋಡಲೇಬೇಕು. 250 ವರ್ಷಕ್ಕೂ ಮೀರಿ ಹಿಂದೆ ನಡೆದ ಕಥೆಯನ್ನು ನಮ್ಮ ಕಣ್ಣ ಮುಂದೆ ಕಟ್ಟುವಂಥ ನಾಟಕವನ್ನು ನೋಡಿ ಮನಸ್ಸು ಮಿಡಿಯದೇ ಇರದು, ಅಂತರ್ಮನ ಹೇಳದೇ ಇರದು……

Read More

ಎಡನೀರು : ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದಭಾರತೀ ಶ್ರೀಪಾದಂಗಳವರ ಪಂಚಮ ಚಾತುರ್ಮಾಸ್ಯ ವೃತಾಚರಣೆ ಪ್ರಯುಕ್ತ ದಿನಾಂಕ 16 ಆಗಸ್ಟ್ 2025ರಂದು ‘ನೃತ್ಯ ರೂಪಕ’ ಮತ್ತು ‘ನೃತ್ಯಾರ್ಪಣಂ’ ಶಾಸ್ತ್ರೀಯ ನೃತ್ಯ ಪ್ರದರ್ಶನವನ್ನು ಸಂಜೆ 7-30 ಗಂಟೆಗೆ ಶ್ರೀ ಎಡನೀರು ಮಠದಲ್ಲಿ ಹಮ್ಮಿಕೊಳ್ಳಲಾಗಿದೆ. ಪುತ್ತೂರಿನ ವೈಷ್ಣವೀ ನಾಟ್ಯಾಲಯ (ರಿ.) ಪ್ರಸ್ತುತಪಡಿಸುವ ‘ಶ್ರೀರಾಮ ಪುನರಾಗಮನ’ ನೃತ್ಯ ರೂಪಕ ಮತ್ತು ನೃತ್ಯಾರ್ಪಣಂ ಶಾಸ್ತ್ರೀಯ ನೃತ್ಯ ಪ್ರದರ್ಶನಕ್ಕೆ ಸಾಹಿತ್ಯ ಡಾ. ರಾಜೇಶ್ ಬೆಜ್ಜಂಗಳ, ನಟುವಾಂಗದಲ್ಲಿ ವಿದುಷಿ ಯೋಗೀಶ್ವರಿ ಜಯಪ್ರಕಾಶ್ ಸಹಕರಿಸಲಿದ್ದಾರೆ. ರಂಗ ಸಂಯೋಜನೆ ಮತ್ತು ಹಾಡುಗಾರಿಕೆಯಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ವಿದ್ವಾನ್ ವೆಳ್ಳಿಕ್ಕೋತ್ ವಿಷ್ಣು ಭಟ್ ಮತ್ತು ವಸಂತ ಕುಮಾರ್ ಗೋಸಾಡ ಮತ್ತು ಮೃದಂಗದಲ್ಲಿ ವಿದ್ವಾನ್ ಗೀತೇಶ್ ಕುಮಾರ್ ನೀಲೇಶ್ವರ ಮತ್ತು ಕೊಳಲಿನಲ್ಲಿ ವಿದ್ವಾನ್ ರಾಜಗೋಪಾಲ್ ಕಾಞಂಗಾಡ್ ಸಹಕರಿಸಲಿದ್ದಾರೆ.

Read More

ಮೈಸೂರು : ನಿರಂತರ ಫೌಂಡೇಶನ್ (ರಿ.) ಮೈಸೂರು ಆಯೋಜಿಸಿರುವ ‘ಸಹಜ ರಂಗ 2025’ ಕಾಲೇಜು ವಿದ್ಯಾರ್ಥಿಗಳಿಗೆ ‘ರಂಗ ತರಬೇತಿ ಶಿಬಿರ’ವು ದಿನಾಂಕ 17 ಆಗಸ್ಟ್ 2025ರಂದು ಮೈಸೂರಿನ ಮಾನಸಗಂಗೋತ್ರಿ ಗಾಂಧಿಭವನ ಆವರಣದಲ್ಲಿ ಉದ್ಘಾಟನೆಗೊಳ್ಳಲಿದೆ. ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಲಾಯ ಬೆಂಗಳೂರು ಇದರ ಸಹಕಾರದೊಂದಿಗೆ ಹಮ್ಮಿಕೊಂಡ ಈ ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿ ಡಾ. ಸಿ. ಬಸವಲಿಂಗಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಾ. ಎಂ.ಡಿ. ಸುದರ್ಶನ್, ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ. ನರೇಂದ್ರ ಕುಮಾರ್ ಮತ್ತು ಪ್ರಸಾದ್ ಕುಂದೂರು ಇವರುಗಳು ಭಾಗವಹಿಸಲಿದ್ದಾರೆ.

Read More

ಸಾಲಿಗ್ರಾಮ : ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ – ಐರೋಡಿ ಇದರ ವತಿಯಿಂದ ಆಯೋಜಿಸುವ ಸಂಸ್ಕೃತಿ ಸಂಭ್ರಮದಲ್ಲಿ ಯಕ್ಷವರ್ಷ ಕಾರ್ಯಕ್ರಮದಡಿಯಲ್ಲಿ ಯಕ್ಷಗಾನ ಪ್ರದರ್ಶನವನ್ನು ದಿನಾಂಕ 17 ಆಗಸ್ಟ್ 2025ರಂದು ಸಂಜೆ 5-30 ಗಂಟೆಗೆ ಗುಂಡ್ಮಿ-ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಗುಂಡೂ ಸೀತಾರಾಮ ರಾವ್ ತಲವಾಟ ರಚಿತ ‘ಬರ್ಬರೀಕ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಸರ್ವಶ್ರೀಗಳಾದ ರಾಘವೇಂದ್ರ ಮಯ್ಯ, ಭರತ್ ಚಂದನ್, ಸಚಿನ್ ಆಚಾರ್, ಕೊಂಡದಕುಳಿ ರಾಮಚಂದ್ರ ಹೆಗಡೆ, ಚಿಟ್ಟಾಣಿ ಕಾರ್ತಿಕ ಹೆಗಡೆ, ಸುಧೀರ ಉಪ್ಪೂರು, ಯೋಗೀಂದ್ರ ಮರವಂತೆ, ಪ್ರಶಾಂತ ಮಯ್ಯ ದಾರಿಮಕ್ಕಿ, ಪುರಂದರ ಮೂಡ್ಕಣಿ ಕಿರಾಡಿ ವಿಶ್ವನಾಥ ಮತ್ತು ಅನುಪ್ ಉರಾಳ ಇವರುಗಳು ಸಹಕರಿಸಲಿದ್ದಾರೆ.

Read More

ಕುಂದಾಪುರ : ಕುಂದಾಪುರ ಪರಿಸರದ ಅವಿಸ್ಮರಣೀಯ ಸ್ಥಳ ಮತ್ತು ಸಂಸ್ಕೃತಿಯ ಪ್ರತೀಕವನ್ನು ಬಿಂಬಿಸುವ ‘ನಮ್‌ ಕುಂದಾಪ್ರ’ ಚಿತ್ರಕಲಾ ಪ್ರದರ್ಶನವು ವಿಶೇಷವಾಗಿದ್ದು: ನಮ್ಮ ಮಣ್ಣಿನ ಗುಣವನ್ನು ಅರ್ಥೈಸುವುದರೊಂದಿಗೆ, ಕಲಾಭ್ಯಾಸಗೈಯುವ ವಿದ್ಯಾರ್ಥಿಯರಿಗೆ ಕಲಾ ವೇದಿಕೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಚಿತ್ರಕಲಾ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ದಿನಾಂಕ 16 ಆಗಸ್ಟ್ 2025 ಶನಿವಾರ ಬೆಳಿಗ್ಗೆ ಗಂಟೆಗೆ 10-00ಕ್ಕೆ ಕುಂದಾಪುರದ ಹಳೆ ಬಸ್ ಸ್ಟಾಂಡ್ ಬಳಿ ಇರುವ ತ್ರಿವರ್ಣ ಕಲಾ ಗ್ಯಾಲರಿಯಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀ ಶರಣ ಕುಮಾರರವರು ಉದ್ಘಾಟಿಸಲಿದ್ದಾರೆ. ಅತಿಥಿ ಅಭ್ಯಾಗತರಾಗಿ ಕುಂದಾಪುರದ ಓಕ್‌ವುಡ್‌ ಇಂಡಿಯನ್ ಸ್ಕೂಲ್ ಮ್ಯಾನೆಜ್ಮೆಂಟಿನ ಜಂಟಿ ಕಾರ್ಯದರ್ಶಿ ಶ್ರೀಮತಿ ನೀತಾ ಶೆಟ್ಟಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾದ ಶ್ರೀ ಸುಬ್ರಹ್ಮಣ್ಯ ಶೆಟ್ಟಿ ಹಾಗೂ ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಕುಂದಾಪುರದ ಅಧ್ಯಕ್ಷರಾದ ಶ್ರೀ ಕಿಶೋರ್‌ ಕುಮಾರ್‌ರವರು ಉಪಸ್ಥಿತಲಿದ್ದು, ಕಲಾಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಭಾಗವಹಿಸುವ ಕಲಾ ವಿದ್ಯಾರ್ಥಿಗಳು : ಕುಂದಾಪುರ, ಮಣಿಪಾಲ ಮತ್ತು ಆನ್ ಲೈನ್ ತ್ರಿವರ್ಣ…

Read More