Subscribe to Updates
Get the latest creative news from FooBar about art, design and business.
Author: roovari
ಸುಂಟಿಕೊಪ್ಪ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಪುಸ್ತಕ ಓದಿ ವಿಮರ್ಶೆ ಮಾಡುವ ಕಾರ್ಯಕ್ರಮ ದಿನಾಂಕ 28 ಜನವರಿ 2025ರಂದು ಮಂಜಿಕರ ಸಮುದಾಯ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಮಾಲಿನಿ ನಾತನಾಡಿ “ಪ್ರತಿಯೊಬ್ಬರೂ ಪುಸ್ತಕವನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಇದು ವ್ಯಕ್ತಿಯ ವ್ಯಕ್ತಿತ್ವ ವಿಕಾಸಗೊಳಿಸುತ್ತದೆ. ಇಂದಿನ ದಿನಗಳಲ್ಲಿ ನಾವುಗಳು ಪುಸ್ತಕಗಳನ್ನು ಓದುವ ಹವ್ಯಾಸದಿಂದ ದೂರ ಉಳಿದುಕೊಳ್ಳುತ್ತಿದ್ದೇವೆ. ಇದರಿಂದ ನಮ್ಮ ಜ್ಞಾನವು ಕುಂಠಿತಗೊಳ್ಳುತ್ತಿದೆ. ನಾವು ನಿತ್ಯ, ಪುಸ್ತಕಗಳನ್ನು ಓದುವುದರಿಂದ ವೈಯಕ್ತಿಕ ಜ್ಞಾನವನ್ನು ಬೆಳೆಸಿಕೊಳ್ಳಬಹುದಾಗಿದೆ.” ಎಂದು ಕರೆ ನೀಡಿದರು. ಜನನಿ ತಂಡದ ಸದಸ್ಯೆಯಾದ ರತ್ನ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳಾದ ಜನನಿ, ಭೂಮಿಕ, ಕನ್ನಿಕ, ಭಗವತಿ ಹಾಗೂ ಧೃತಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸದಸ್ಯರಿಗೆ ಪುಸ್ತಕ…
ಮುಂಬಯಿ : ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಮತ್ತು ಮೈಸೂರು ಅಸೋಸಿಯೇಷನ್ ಮುಂಬೈ ಇದರ ಸಂಯುಕ್ತ ಆಶ್ರಯದಲ್ಲಿ ‘ಬಂಗಾರದ ಹಬ್ಬ ದತ್ತಿ ಉಪನ್ಯಾಸ ಮಾಲಿಕೆ -2025′ ಕಾರ್ಯಕ್ರಮವು ದಿನಾಂಕ 25 ಜನವರಿ 2025ರಂದು ನಡೆಯಿತು. ‘ರಾಮಾಯಣದಲ್ಲಿ ಮೌಲ್ಯ ಸಂಘರ್ಷ’ ವಿಷಯದ ಕುರಿತು ಕಲಾವಿದರು ಮತ್ತು ವಿದ್ವಾಂಸರಾದ ಡಾ. ಪ್ರಭಾಕರ ಜೋಶಿ ಅವರ ಮಾತುಗಳಿಗೆ ಶ್ರೋತೃವಾಗುವ ಸದವಕಾಶವೊಂದು ನನ್ನದಾಯಿತು. ಅವರ ಮಾತು, ವಿಷಯ ಮಂಡನೆ ನಾವೆಲ್ಲ ನಿರೀಕ್ಷಿಸಿದಂತೆ ವಿದ್ವತ್ಪೂರ್ಣವಾಗಿತ್ತು ಅಲ್ಲದೆ ಸರಳವಾಗಿತ್ತು. ನಡುನಡುವೆ ದೈನಂದಿನ ಜೀವನದ ಆಗುಹೋಗುಗಳನ್ನು ಹೇಳುತ್ತಾ, ಲಘು ಹಾಸ್ಯ ಮಿಶ್ರಿತ ಮಾತುಗಳನ್ನು ಆಡುತ್ತಾ ಪ್ರೇಕ್ಷಕರನ್ನು ಹಿಡಿದಿಡುವ ಪರಿ ಹಿತವಾಗಿತ್ತು. ಒಂದು ಜನಾಂಗದ ಸಂಸ್ಕೃತಿಯನ್ನು ಮಹಾಕಾವ್ಯಗಳು ಹೇಳುತ್ತವೆ ಅನ್ನುತ್ತಲೇ ರಾಮಾಯಣವು ಜನರ ಭಾವನೆಗಳನ್ನು ಹೇಗೆ ಹೇಳ್ತದೆ ಅನ್ನುವುದನ್ನು ಅವರು ರಾಮಾಯಣದಲ್ಲಿ ಬರುವ ಸನ್ನಿವೇಶಗಳನ್ನು ಉದಾಹರಿಸುತ್ತಾ ಹೋದರು. ಸಾವಿರಾರು ವರ್ಷಗಳ ಹಿಂದೆ ವಾಲ್ಮೀಕಿ ಇಂತಹದ್ದೊಂದು ಮಹಾಕಾವ್ಯ ರಚಿಸಿ ರಾಮನ ಪಾತ್ರದ ಸಂಘರ್ಷಗಳನ್ನು ಚಿತ್ರಿಸಿರುವುದು ಅಚ್ಚರಿಯನ್ನು ಉಂಟು ಮಾಡುವಂತಹದ್ದು. ರಾಮಾಯಣದಲ್ಲಿ ಅನೇಕ ಸಂಘರ್ಷದ ಸನ್ನಿವೇಶಗಳು…
ಬೆಳಗ್ಗೆ ರೇಡಿಯೋ ಕೇಳುತ್ತಾ, ವಾರ್ತಾ ಪತ್ರಿಕೆ ಮತ್ತು ಚಹಾಕ್ಕಾಗಿ ಕಾಯುವ ಕಾಲವೊಂದಿತ್ತು. ಇಂದಿನ ದಿನಗಳಲ್ಲಿ ಎಲ್ಲಾ ಸುದ್ದಿಗಳೂ ಮೊಬೈಲ್ ನಲ್ಲಿ ಸಿಗುತ್ತವೆ. ಡಿಜಿಟಲ್ ಮಾಧ್ಯಮ ವಿಶೇಷವಾಗಿ ಸದ್ದು ಮಾಡುತ್ತಿರುವ ಈ ಕಾಲಘಟ್ಟದಲ್ಲಿ ವಾರ್ತಾ ಪತ್ರಿಕೆಯನ್ನು ಓದುವ ವಾಚಕರ ಒಂದು ವರ್ಗ ಈಗಲೂ ಇದೆ ಎಂಬುದು ಸಂತೋಷದ ವಿಷಯ. ಎಷ್ಟು ಕೆಲಸದ ಒತ್ತಡವಿದ್ದರೂ, ಆರಾಮಾಗಿ ಕುಳಿತು ಚಹವನ್ನು ಸವಿಯುತ್ತಾ ವೃತ್ತಪತ್ರಿಕೆಗಳನ್ನು ಹಿಡಿದುಕೊಂಡು ಓದುವುದೆಂದರೆ ಅದರಿಂದ ದೊರೆಯುವ ಸಂತೋಷವೇ ಬೇರೆ. ಹಬ್ಬ ಹರಿದಿನಗಳಲ್ಲಿ ಒಂದು ದಿನ ಪೇಪರ್ ಇಲ್ಲ ಅಂದ್ರೆ, ಆ ದಿನದ ಬೆಳಗಿಗೆ ಸ್ವಾರಸ್ಯವೇ ಇರುವುದಿಲ್ಲ. ದಿನ ಪರಿಪೂರ್ಣವೆಂದಿಸಿಕೊಳ್ಳುವುದೇ ಪೇಪರ್ ಕೈಗೆ ಬಂದಾಗ. ಇದು ಮುದ್ರಣ ಮಾಧ್ಯಮ ಕ್ಷೇತ್ರಕ್ಕೆ ದೊರೆತ ಗೌರವ. ಸಾಮಾಜಿಕ ಮಾಧ್ಯಮಗಳಿಗೆ ನಾವು ವಾರ್ತೆ ತಲುಪಿಸಲು ಮೊದಲು ಅಲೆದಾಡಬೇಕಿತ್ತು. ಈಗ ಇದೆಲ್ಲವೂ ನಾವಿರುವಲ್ಲಿoದಲೇ ಸಾಧ್ಯವಾಗುತ್ತಿದೆ ಎಂಬುದು ಒಂದು ರೀತಿಯಲ್ಲಿ ಸುದ್ದಿ ಮಾಧ್ಯಮಗಳ ಪ್ರಗತಿಗೆ ಸಾಕ್ಷಿಯಾಗಿದೆ. ನಮ್ಮ ಸುತ್ತಮುತ್ತ, ದೇಶ – ವಿದೇಶಗಳಲ್ಲಿ ಏನು ನಡೆಯುತ್ತಿದೆ ಎಂಬ ವಿಚಾರ ಮನೆಮನೆಗಳಿಗೆ ತಲುಪುವುದು…
ಮಂಗಳೂರು : ಅರೆಹೊಳೆ ಪ್ರತಿಷ್ಠಾನ, ರಂಗ ಅಧ್ಯಯನ ಕೇಂದ್ರ ಸಂತ ಅಲೋಶಿಯಸ್ ಕಾಲೇಜು ಪರಿಗಣಿತ ವಿಶ್ವವಿದ್ಯಾನಿಲಯ, ಅಸ್ತಿತ್ವ (ರಿ.) ಮತ್ತು ಕಲಾಭಿ (ರಿ.) ಆಯೋಜಿಸುವ ರಂಗರಥ ಟ್ರಸ್ಟ್ ಬೆಂಗಳೂರು ಅಭಿನಯಿಸುವ ‘ಧರ್ಮನಟಿ’ ನಾಟಕ ಪ್ರದರ್ಶನವನ್ನು ದಿನಾಂಕ 31 ಜನವರಿ 2025ರಂದು ಸಂಜೆ ಗಂಟೆ 6-45ಕ್ಕೆ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ರಂಗಭೂಮಿ ಉಡುಪಿ ಆಯೋಸಿದ್ದ ರಾಜ್ಯ ಮಟ್ಟದ ನಾಟಕ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿದ ನಾಟಕ ಇದಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರದಲ್ಲಿ ಪ್ರಸ್ತುತಗೊಳ್ಳಲಿರುವ ಸಂಗೀತಮಯ ಐತಿಹಾಸಿಕ ಕನ್ನಡ ನಾಟಕಕ್ಕೆ ಆಸಿಫ್ ಕ್ಷತ್ರಿಯ ಮತ್ತು ಶ್ವೇತಾ ಶ್ರೀನಿವಾಸ್ ಇವರು ನಿರ್ದೇಶನ ಮಾಡಿದ್ದು, ಭಿನ್ನಷಡ್ಜ ಸಂಗೀತದಲ್ಲಿ ಸಹಕರಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 8050157443 (ಶ್ವೇತಾ ಶ್ರೀನಿವಾಸ್) ಅಥವಾ 9448286776 ಆಸಿಫ್ ಕ್ಷತ್ರಿಯ ಇವರನ್ನು ಸಂಪರ್ಕಿಸಿ. ರಂಗರಥ ಸಂಸ್ಥೆಯ ಬಗ್ಗೆ : ಭಾರತೀಯ ಪ್ರದರ್ಶನ ಕಲಾ ಸಂಸ್ಥೆಯಾದ ‘ರಂಗರಥ’ ಎಂಬುದು ರಂಗಪ್ರೇಕ್ಷಕರ ಮನಸೂರೆಗೊಂಡ ಬೆಂಗಳೂರಿನ ಕೆಲವು…
ಬೆಂಗಳೂರು : ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ (ರಿ.) ಸಿದ್ಧನಹಳ್ಳಿ ಇದರ ವತಿಯಿಂದ ಕವಿ ಚಿಂತಕ, ಅಧ್ಯಾಪಕರಾದ ಶ್ರೀ ಜಿ. ನಾಗರಾಜ್ ನಾದಲೀಲೆ ಇವರ ಸಮ್ಮೇಳನಾಧ್ಯಕ್ಷತೆಯಲ್ಲಿ ದಿನಾಂಕ 02 ಫೆಬ್ರವರಿ 2025ರಂದು ಬೆಂಗಳೂರಿನ ಶೇಷಾದ್ರಿಪುರಂ ಮೊದಲನೆಯ ಮಹಡಿ ಕಾನ್ಫ್ ರೆನ್ಸ್ ಹಾಲ್ ನಲ್ಲಿ ಬೆಳಗ್ಗೆ ಗಂಟೆ 9-30ರಿಂದ ಗಾಂಧೀಜಿ ವಿವೇಕಾನಂದ ಪ್ರಣಿತ ರಾಜ್ಯ ಮಟ್ಟದ ಎಂಟನೇ ಯುವಜನ ಸಮ್ಮೇಳನವನ್ನು ಆಯೋಜಿಸಲಾಗಿದೆ. ಈ ಸಮ್ಮೇಳನದಲ್ಲಿ ಡಾ. ಕೃಷ್ಣ ಹಾನ್ ಬಾಳ್ ಹಾಗೂ ಶ್ರೀಮತಿ ಜಯಶ್ರೀ ರಾಜು ಅವರ ಕೃತಿಗಳ ಲೋಕಾರ್ಪಣೆ, ವಿಚಾರಗೋಷ್ಠಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಬೆಳಿಗ್ಗೆ 9-30 ಗಂಟೆಗೆ ವಿಶ್ರಾಂತ ಮುಖ್ಯೋಪಾಧ್ಯಾಯರು ಶ್ರೀ ಏಕಾಂಬರೇಶ್ವರ್ ಇವರಿಂದ ಧ್ವಜಾರೋಹಣ ಮತ್ತು ಹಿರಿಯ ಸಾಹಿತಿ ಶ್ರೀಮತಿ ಅಂಬುಜಾ ಪ್ರಕಾಶ್ ಇವರು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್ ಈ ಕಾರ್ಯಕ್ರಮವನ್ನು ಉದ್ಘಾಟನೆಗೊಳಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಯುವ ಸಾಹಿತಿ…
ಉಡುಪಿ : ರಾಜ್ಯದ ಹೆಸರಾಂತ ಹವ್ಯಾಸಿ ನಾಟಕ ಸಂಸ್ಥೆಯಾದ ‘ರಂಗಭೂಮಿ (ರಿ.) ಉಡುಪಿ’ ಇದರ ವತಿಯಿಂದ ಮೂರು ದಿನಗಳ ‘ರಂಗಭೂಮಿ ರಂಗೋತ್ಸವ’ವನ್ನು ದಿನಾಂಕ 01 ಫೆಬ್ರವರಿ 2025ರಿಂದ 03 ಫೆಬ್ರವರಿ 2025ರವರೆಗೆ ಪ್ರತಿದಿನ ಸಂಜೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 01 ಫೆಬ್ರವರಿ 2025ರಂದು ಸಂಜೆ ಗಂಟೆ 5-45ಕ್ಕೆ ‘ರಂಗಭೂಮಿ ರಂಗೋತ್ಸವ’ದ ಉದ್ಘಾಟನೆಯನ್ನು ರಂಗಭೂಮಿ ಇದರ ಗೌರವಾಧ್ಯಕ್ಷರಾದ ಡಾ. ಹೆಚ್.ಎಸ್. ಬಲ್ಲಾಳ್ ಇವರ ನೆರವೇರಿಸಲಿದ್ದು, ರಂಗಭೂಮಿ ಇದರ ಅಧ್ಯಕ್ಷರಾದ ಡಾ. ತಾಲ್ಲೂರು ಶಿವರಾಮ ಶೆಟ್ಟಿ ಇವರು ಅಧ್ಯಕ್ಷತೆಯನ್ನು ವಹಿಸಲಿರುವರು. ಸಭಾ ಕಾರ್ಯಕ್ರಮದಲ್ಲಿ 45ನೇ ರಾಜ್ಯ ಮಟ್ಟದ ಕನ್ನಡ ನಾಟಕೋತ್ಸವ ಸ್ಪರ್ಧೆಯ ಬಹುಮಾನ ವಿತರಣೆ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಪ್ರಥಮ ಪ್ರಶಸ್ತಿ ವಿಜೇತ ನಾಟಕದ ಮರು ಪ್ರದರ್ಶನಗೊಳ್ಳಲಿದೆ. ಬೆಂಗಳೂರಿನ ರಂಗರಥ ಟ್ರಸ್ಟ್ (ರಿ.) ತಂಡದವರು ಆಸಿಫ್ ಕ್ಷತ್ರಿಯ ಮತ್ತು ಶ್ವೇತಾ ಶ್ರೀನಿವಾಸ್ ನಿರ್ದೇಶನದಲ್ಲಿ ‘ಧರ್ಮನಟಿ’ ಐತಿಹಾಸಿಕ ನಾಟಕ ಪ್ರದರ್ಶನ ನೀಡಲಿದ್ದಾರೆ. ದಿನಾಂಕ 02 ಫೆಬ್ರವರಿ 2025ರಂದು ಸಂಜೆ…
ಮಂಗಳೂರು : ಬಿಜೈಯಲ್ಲಿರುವ ನೃತ್ಯ ಸಂಸ್ಥೆ ನೃತ್ಯಾಂಗನ್ ಪ್ರಸ್ತುತ ಪಡಿಸುವ ಭಾರತೀಯ ಶಾಸ್ತ್ರೀಯ ನೃತ್ಯ ಸರಣಿಯ 12ನೇ ಆವೃತ್ತಿ ‘ಸಮರ್ಪಣ 2024’ ನೃತ್ಯೋತ್ಸವ ಕಾರ್ಯಕ್ರಮವನ್ನು ದಿನಾಂಕ 01 ಮತ್ತು 02 ಫೆಬ್ರವರಿ 2025ರಂದು ಸಂಜೆ ಗಂಟೆ 5-45ಕ್ಕೆ ಡಾನ್ ಬೋಸ್ಕೋ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 01 ಫೆಬ್ರವರಿ 2025ರಂದು ಪುತ್ತೂರಿನ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಕಲಾ ನಿರ್ದೇಶಕರಾದ ವಿದ್ವಾನ್ ದೀಪಕ್ ಕುಮಾರ್ ಮತ್ತು ವಿದುಷಿ ಪ್ರೀತಿಕಲಾ ದಂಪತಿಗಳು ದೀಪ ಪ್ರಜ್ವಲನೆ ಮಾಡಿ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಇಟಲಿಯ ಕಲಾವಿದೆ ಲುಕ್ರೆಜಿಯಾ ಮ್ಯಾನಸ್ಕೋಟಿ ಮತ್ತು ಬೆಂಗಳೂರಿನ ಸಂಜನಾ ರಾಜೇಶ್ ನೃತ್ಯ ಪ್ರದರ್ಶನ ನೀಡಲಿದ್ದಾರೆ. ದಿನಾಂಕ 02 ಫೆಬ್ರವರಿ 2025ರಂದು ಕೇರಳದ ಕಲಾಮಂಡಲಂ ಪ್ರಜೀಶಾ ಗೋಪಿನಾಥ್, ಬೆಂಗಳೂರಿನ ಕಾವ್ಯಾ ಕಾಶಿನಾಥನ್ ಹಾಗೂ ಮಂಗಳೂರಿನ ಅಂಕಿತಾ ರೈ ಇವರುಗಳು ಏಕವ್ಯಕ್ತಿ ಶಾಸ್ತ್ರೀಯ ಭರತನಾಟ್ಯ ಪ್ರಸ್ತುತ ಪಡಿಸಲಿದ್ದಾರೆ. ಕಲಾಸಕ್ತರಿಗೆ ಉಚಿತ ಪ್ರವೇಶ ಎಂದು ನೃತ್ಯಾಂಗನ್ ನಿರ್ದೇಶಕಿ ಕಲಾವಿದೆ ರಾಧಿಕಾ ಶೆಟ್ಟಿ ತಿಳಿಸಿದ್ದಾರೆ.
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಡಾ. ಜಿ. ಕೃಷ್ಣಪ್ಪನವರಿಗೆ ಶ್ರದ್ದಾಂಜಲಿ ಸಭೆಯು ದಿನಾಂಕ 28 ಜನವರಿ 2025ರಂದು ಆಯೋಜನೆಗೊಂಡಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ “ಮಂಡ್ಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೊಳ್ಳುವ ಕೆಲವು ದಿನಗಳ ಹಿಂದಷ್ಟೇ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಗೆ ಭೇಟಿ ನೀಡಿ ಸುದೀರ್ಘವಾಗಿ ನನ್ನೊಂದಿಗೆ ಬೇಂದ್ರೆ ಕಾವ್ಯದ ನೆಲೆಗಳನ್ನು ಚರ್ಚಿಸಿದ್ದ ‘ಬೇಂದ್ರೆ ಕೃಷ್ಣಪ್ಪ’ ಎಂದೇ ಹೆಸರಾಗಿದ್ದ ಡಾ. ಜಿ. ಕೃಷ್ಣಪ್ಪ ಇನ್ನಿಲ್ಲ ಎನ್ನುವ ಸುದ್ದಿ ನಿಜಕ್ಕೂ ಆಘಾತಕಾರಿಯಾಗಿದೆ. ಡಾ. ಜಿ. ಕೃಷ್ಣಪ್ಪನವರ ‘ನಾಕುತಂತಿ ಒಂದು ಟಿಪ್ಪಣಿ’ ಮತ್ತು ‘ಬೇಂದ್ರ ಕಂಡ ಬೆಳಗು’ ಎರಡೂ ಪುಸ್ತಕಗಳು ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಬಿಡುಗಡೆಯಾದವು. ‘ನಾಕುತಂತಿ-50’ರ ಕುರಿತು ಸಾಹಿತ್ಯ ಸಮ್ಮೇಳನದಲ್ಲಿ ಅವರೇ ಮಾತನಾಡಬೇಕು ಎನ್ನುವುದು ನಮ್ಮ ಆಸೆಯಾಗಿತ್ತು, ಆದರೆ ಆರೋಗ್ಯದ ಸಮಸ್ಯೆ ಅವರನ್ನು ಮಂಡ್ಯಕ್ಕೆ ಬರದಂತೆ ತಡೆಯಿತು. ‘ನಿಮ್ಮ ಮಾತುಗಳ ವಿಡಿಯೋ ಕಳುಹಿಸಿ’ ಎಂದು ವಿನಂತಿಸಿಕೊಂಡೆ. ಮಗನ ಸಹಾಯ…
ಕಾಸರಗೋಡು : ಎಡನೀರು ಮಠದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ‘ಲಾಂಛನ’ ಮತ್ತು ‘ಆಮಂತ್ರಣ ಪತ್ರಿಕೆ’ ಬಿಡುಗಡೆ ಕಾರ್ಯಕ್ರಮವು ದಿನಾಂಕ 27 ಜನವರಿ 2025ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿ ಮಾತನಾಡಿದ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ “ಚುಟುಕು ಸಾಹಿತ್ಯ ಪ್ರಕಾರವು ಲಲಿತವಾಗಿ, ಪ್ರಾಸಬದ್ಧವಾಗಿ ಆಕರ್ಷಣೀಯ. ಜಿಲ್ಲೆಯ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಎಳೆಯ ಮಕ್ಕಳಲ್ಲಿ ಕನ್ನಡ ಸಾಹಿತ್ಯ ಪ್ರಜ್ಞೆಯನ್ನು ಅರಳಿಸುವುದು ಅಗತ್ಯ ಹಾಗೂ ಅನಿವಾರ್ಯ. ಈ ನಿಟ್ಟಿನಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಯೋಜನೆಗಳು ಯಶಸ್ವಿಯಾಗಲಿ. ಸಂಘಟನೆಯ ಕನ್ನಡ ಪರ ಸೇವೆಗೆ ಶ್ರೀಮಠದ ಸಹಕಾರವಿದೆ. ಸಾಹಿತ್ಯದಿಂದ ಸಂಸ್ಕಾರ ವೃದ್ಧಿಯಾಗುತ್ತದೆ. ಸಾಹಿತ್ಯದ ಸಂಪರ್ಕದಿಂದ ಬೆಳೆಯುವ ಮಕ್ಕಳ ಮನೋವಿಕಾರಗಳು ನಾಶವಾಗುತ್ತದೆ. ಬೆಳೆಯುವ ಮಕ್ಕಳಲ್ಲಿ ಸಾಹಿತ್ಯ ಅಧ್ಯಯನ ಹಾಗೂ ರಚನಾ ಕೌಶಲವನ್ನು ಪ್ರೇರೇಪಿಸಬೇಕು” ಎಂದು ಹೇಳಿದರು. ಈ ಸಂದರ್ಭದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಸ್ಥಾಪಕ ಸಂಚಾಲಕರಾದ ಡಾ. ವಾಮನ್…
ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ‘ಕರಾವಳಿ ಲೇಖಕಿಯರ ವಾಚಕಿಯರ ಸಂಘ (ರಿ.)’ ಮತ್ತು ಸಂತ ಮದರ್ ತೆರೆಸಾ ವಿಚಾರ ವೇದಿಕೆ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಕೃತಿ ಲೋಕಾರ್ಪಣೆ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮವನ್ನು ದಿನಾಂಕ 02 ಫೆಬ್ರವರಿ 2025ರಂದು ಮಂಗಳೂರಿನ ಉರ್ವಸ್ಟೋರ್ ಅಶೋಕ ನಗರ ಕಚೇರಿ ಬಳಿಯಿರುವ ಸಾಹಿತ್ಯ ಸದನದಲ್ಲಿ ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದಲ್ಲಿ ಲೇಖಕಿಯರಾದ ಬಿ.ಎಂ. ರೋಹಿಣಿ ಮತ್ತು ಮೋಲಿ ಮೀರಾಂದ ಇವರು ರಚಿಸಿರುವ ‘ಧರ್ಮ ಭಗಿನಿಯರು’ ಕೃತಿ ಲೋಕಾರ್ಪಣೆಗೊಳ್ಳಲಿದೆ. ‘ಮಹಿಳೆ ಮತ್ತು ಸನ್ಯಾಸ’ ಎಂಬ ವಿಷಯದ ಬಗ್ಗೆ ನಡೆಯಲಿರುವ ವಿಚಾರ ಸಂಕಿರಣದಲ್ಲಿ ಸಾರನಾಥ ಬೌದ್ಧ ವಿಹಾರದ ಮಾತಾಜಿ ಬಿಕ್ಕುಣಿ ಗೌತಮಿ, ಶ್ರವಣಬೆಳಗೊಳದ ಪ್ರಾಕೃತ ಭಾಷಾ ವಿದ್ವಾಂಸರಾದ ಡಾ. ಕುಸುಮಾ ಸಿ.ಪಿ., ಮಂಗಳೂರಿನ ಬೆಥನಿ ಕನ್ಯಾಮಠದ ಭಗಿನಿ ಅನ್ನಾಮರಿಯಾ ಮತ್ತು ಮಂಗಳೂರಿನ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಸಂಯೋಜಕರಾದ ಭಗಿನಿ ವಿಶ್ವೇಶ್ವರಿ ಇವರುಗಳು ವಿಷಯ ಮಂಡನೆ ಮಾಡಲಿದ್ದಾರೆ.