Author: roovari

ಮೂಡಬಿದಿರೆ : ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.)ದ 2025-26ನೇ ಸಾಲಿನ ಆಳ್ವಾಸ್ ಸಾಂಸ್ಕೃತಿಕ ತಂಡಗಳ ಭರತನಾಟ್ಯ ನೃತ್ಯಕ್ಕೆ ಕಲಾವಿದರು ಬೇಕಾಗಿದ್ದು, ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭರತನಾಟ್ಯ ಅಥವಾ ಯಾವುದೇ ಇತರ ಶಾಸ್ತ್ರೀಯ ನೃತ್ಯದಲ್ಲಿ ಜೂನಿಯರ್, ಸೀನಿಯರ್/ವಿದ್ವತ್ ಪೂರೈಸಿ, 18 ರಿಂದ 25 ವರ್ಷ ವಯೋಮಿತಿಯ ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಕಲಾವಿದರಿಗೆ ಉಚಿತ ಊಟ, ಉಪಹಾರ, ವಸತಿ ವ್ಯವಸ್ಥೆಯ ಜೊತೆಗೆ ತಿಂಗಳ ವೇತನ ನೀಡಲಾಗುವುದು. ಅರ್ಜಿ ಸಲ್ಲಿಸಲು ಜುಲೈ 01 ಕೊನೆಯ ದಿನವಾಗಿದೆ. ಆಸಕ್ತರು ತಮ್ಮ ಇತ್ತೀಚಿನ ಭಾವಚಿತ್ರ, ನೃತ್ಯ ಪ್ರದರ್ಶನದ ಫೋಟೊ ಹಾಗೂ ತಮ್ಮ ಅನುಭವದ ಸ್ವವಿವರಗಳನ್ನು ಈ ಕೆಳಗಿನ ವಿಳಾಸಕ್ಕೆ ಕೂಡಲೇ ಕಳುಹಿಸಿ. ಡಾ. ಎಂ. ಮೋಹನ ಆಳ್ವ, ಅಧ್ಯಕ್ಷರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.), ಮೂಡಬಿದಿರೆ – 574227 ಹೆಚ್ಚಿನ ಮಾಹಿತಿಗಾಗಿ : +91 8971161797, [email protected]

Read More

ಕಾಸರಗೋಡು : ಮನಶುದ್ದಿ ಮತ್ತು ಆತ್ಮಶುದ್ಧಿಗಾಗಿ ದೇವರು ಸಂಗೀತವನ್ನು ಸೃಷ್ಟಿ ಮಾಡಿದ್ದಾನೆ ಒಳ್ಳೆಯ ಸಂಗೀತ ಹಾಡುಗಳನ್ನು ಕೇಳುವುದರಿಂದ ಒಳ್ಳೆಯ ಸಂಸ್ಕಾರ ಜೊತೆಗೆ ಮನ ಶಾಂತಿ ಸಿಗುತ್ತದೆ ಎಂದು ಖ್ಯಾತ ಛಾಯಾಚಿತ್ರಗ್ರಾಹಕ, ವಿಡಿಯೋಗ್ರಾಫರ್ ಗಣೇಶ್ ಶೆಣೈ ಕುಂಬಳೆ ಹೇಳಿದರು. ಅವರು ಕಾಸರಗೋಡಿನ ಹೆಸರಾಂತ ಸಾಂಸ್ಕೃತಿಕ ಸಾಹಿತ್ಯಿಕ ಸಂಸ್ಥೆಯಾದ ರಂಗಚಿನ್ನಾರಿಯ ಸಂಗೀತ ಘಟಕ ಸ್ವರ ಚಿನ್ನಾರಿಯ ನೇತೃತ್ವದಲ್ಲಿ ಪದ್ಮಗಿರಿ ಕಲಾಕಟೀರದಲ್ಲಿ ದಿನಾಂಕ 21 ಜೂನ್ 2025ರಂದು ಜರಗಿದ ‘ಸ್ವರ ಚಿನ್ನಾರಿ – 5’ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡುತ್ತಿದ್ದರು. ವಿಶ್ವ ವಿಖ್ಯಾತ ಗಾಯಕ ಪದ್ಮಭೂಷಣ ಡಾ. ಎಸ್. ಪಿ. ಬಾಲಸುಬ್ರಮಣ್ಯಂ ಅವರ ಸಂಸ್ಮರಣೆಯೊಂದಿಗೆ ಅವರು ಹಾಡಿದ ಹಾಡುಗಳನ್ನು ಹಾಡುವ ಮುಖಾಂತರ ಅವರಿಗೆ ಗೀತನಮನ ಸಲ್ಲಿಸಿರುವುದು ಅತ್ಯಂತ ಶ್ಲಾಘನೀಯ. ಇಂತಹ ಶ್ರೇಷ್ಠ ಗಾಯಕರನ್ನು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯ ಎಂದರು. ಸಮಾಜ ಸೇವಕ, ಹಿರಿಯ ನೇತಾರ ಶ್ರೀ ವಿ. ರವೀಂದ್ರನ್ ಕುಂಬಳೆ ಮಾತನಾಡಿದರು. ಮಂಗಳೂರಿನ ಖ್ಯಾತ ಛಾಯಾಗ್ರಾಹಕರಾದ ಚಂದ್ರಕಾಂತ ವೋರಾ (ಟಿಕ್ಕು), ನರೇಂದ್ರ ಕಾಮತ್, ನಂದಕಿಶೋರ್…

Read More

ಹೈದರಾಬಾದ್ : ಹಿರಿಯ ಸಾಹಿತಿ, ಕನ್ನಡ ನಾಡಿನ ಹೊರಗಿನ ಹೈದರಾಬಾದಿನಲ್ಲಿ ಸಕ್ರಿಯ ಕನ್ನಡ ರಾಯಭಾರಿಯಾಗಿ ಮತ್ತು ಬಹುಭಾಷಾ ಸಂಸ್ಕೃತಿಗಳ ಸಕ್ರಿಯ ಸೇತುವೆಯಾಗಿ ಮಹತ್ವದ ಕಾರ್ಯಾ ಮಾಡುತ್ತಾ ಬಂದಿದ್ದ ಪ್ರಭಾ ಮಟಮಾರಿ ದಿನಾಂಕ 24 ಜೂನ್ 2025ರಂದು ನಿಧನರಾಗಿದ್ದಾರೆ. ಇವರು ಮಹಾನ್ ಸಾಹಿತಿ ಶ್ರೀನಿವಾಸ ವೈದ್ಯರ ತಂಗಿ. ಪ್ರಭಾ ಅವರು 1943ರ ಫೆಬ್ರವರಿ 6ರಂದು ನವಲಗುಂದದಲ್ಲಿ‌ ಜನಿಸಿದರು. ತಂದೆ ಧಾರವಾಡದ ಸುಪ್ರಸಿದ್ಧ ವಕೀಲರಾದ ಬಿ.ಜಿ. ವೈದ್ಯರು. ಮನೆಯ ಸುಸಂಪನ್ನ ಮತ್ತು ಸಾಹಿತ್ಯಿಕ ವಾತಾವರಣ ಅವರ ಬೆಳವಣಿಗೆಯ ಮೇಲೆ ಸಾಕಷ್ಟು ಪ್ರಭಾವ ಬೀರಿತು. ತಂದೆ ಬಿ.ಜಿ.ವೈದ್ಯರು “ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ” ಸಕ್ರಿಯರಾಗಿದ್ದರು. ಹೀಗಾಗಿ ಹೆಸರಾಂತ ಸಾಹಿತಿಗಳೆಲ್ಲ ಮನೆಗೆ ಬರುತ್ತಿದ್ದರು. ಬೇಂದ್ರೆ, ಗೋಕಾಕ, ಮುಗಳಿ, ಬೆಟಗೇರಿ ಕೃಷ್ಣಶರ್ಮಾ ಮುಂತಾದವರೆಲ್ಲ ತಂದೆಯವರ ಅಪ್ತ ಸ್ನೇಹಿತರು. ‌ ‌ ಪ್ರಭಾ ಮಟಮಾರಿ ಅವರ ಅಣ್ಣ ಶ್ರೀನಿವಾಸ ವೈದ್ಯರಿಗೆ ಸಾಹಿತ್ಯದಲ್ಲಿ ಆಸಕ್ತಿ ಹೆಚ್ಚಾಗಿ ಇದ್ದ ಕಾರಣ ಶ್ರೀಮತಿ ಪ್ರಭಾ ಅವರಿಗೆ ಪುಸ್ತಕ ಓದುವ ಗೀಳು ಜೊತೆಗೂಡಿತು. “ಕರ್ನಾಟಕ ಏಕೀಕರಣ‌ “…

Read More

ಕುಪ್ಪಳ್ಳಿ : ಕರ್ನಾಟಕ ಸಾಹಿತ್ಯ ಅಕಾಡೆಮಿ ಕರ್ಣಾಟಕ ಸರ್ಕಾರ, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳ್ಳಿ, ಕರ್ಣಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ನಗರ ಜಿಲ್ಲೆ ಇವುಗಳ ಸಂಯುಕ್ತಾಶ್ರಯದಲ್ಲಿ ‘ಕನ್ನಡ ಕಾರ್ಯಕರ್ತರಿಗೆ ಸಾಹಿತ್ಯ ಶಿಬಿರ’ವನ್ನು ದಿನಾಂಕ 27, 28 ಮತ್ತು 29 ಜೂನ್ 2025ರಂದು ಕುಪ್ಪಳ್ಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಶಿಬಿರದಲ್ಲಿ ವೈಜ್ಞಾನಿಕ ಚಿಂತನೆ ಹಾಗೂ ಕನ್ನಡ ಸಾಹಿತ್ಯದ ಪರಂಪರೆ ವಿಷಯ ಕುರಿತು ಮಾರ್ಗದರ್ಶನ ನೀಡಲಾಗುವುದು.

Read More

ಬೆಂಗಳೂರು : ಅನೂರ್ ಅನಂತಕೃಷ್ಣ ಶರ್ಮಾ ಫೌಂಡೇಷನ್ ಫಾರ್ ಮ್ಯೂಜಿಕ್ (ರಿ.) ಮತ್ತು ಶ್ರೀ ಕೃಷ್ಣಾ ಸಂಗೀತ ಸಭಾ ಜಂಟಿಯಾಗಿ ಪ್ರಸ್ತುತ ಪಡಿಸುವ ‘ಯುವ ಸಂಗೀತೋತ್ಸವ’ ಕಾರ್ಯಕ್ರಮವನ್ನು ದಿನಾಂಕ 29 ಜೂನ್ 2025ರಂದು ಬೆಳಗ್ಗೆ 10-00 ಗಂಟೆಗೆ ಬೆಂಗಳೂರು ಮಾರುತಿ ಲೇ ಔಟ್ ನಲ್ಲಿರುವ ಅನೂರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕೇಶವ ಚಂದ್ರ ಇವರ ಕೊಳಲು ವಾದನಕ್ಕೆ ಕುಮಾರಿ ತನ್ಮಯೀ ಉಪ್ಪಂಗಳ ಇವರು ವಯೋಲಿನ್, ವಿಷ್ಣುವರ್ಧನ್ ಕೆ. ಇವರು ಮೃದಂಗ ಮತ್ತು ಅನಿಲ್ ಪರಾಶರ ಕಾಂಜೀರ ಸಾಥ್ ನೀಡಲಿದ್ದಾರೆ. 12-00 ಗಂಟೆಗೆ ಶ್ರೀಮತಿ ಅನಘ ಭಟ್ ಇವರ ಹಿಂದೂಸ್ತಾನಿ ಹಾಡುಗಾರಿಕೆಗೆ ಕೇದಾರನಾಥ ಹವಾಲ್ದಾರ್ ಇವರು ತಬಲಾ ಮತ್ತು ತೇಜಸ್ ಕತೋಟಿ ಇವರು ಹಾರ್ಮೋನಿಯಂ ಸಾಥ್ ನೀಡಲಿದ್ದಾರೆ. 4-00 ಗಂಟೆಗೆ ನಾಗೇಂದ್ರ ಪ್ರಸಾದ್ ಎಸ್.ಪಿ. ಇವರು ಮೃದಂಗ ಮತ್ತು ತಿರುಮಲೆ ಗೋಪಿ ಶ್ರವಣ್ ಇವರು ಮೊರ್ಚಿಂಗ್ ಲಯವಿನ್ಯಾಸ ಪ್ರಸ್ತುತ ಪಡಿಸಲಿದ್ದಾರೆ. 5-30 ಗಂಟೆಗೆ ಕರ್ಣಾಟಿಕ್ ಗಾಯನ ಕಛೇರಿಯಲ್ಲಿ ಶ್ರೀಮತಿ ಅರ್ಚನಾ ಎಲ್. ರಾವ್ ಇವರ…

Read More

ಮಂಗಳೂರು : ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆಯನ್ನು ದಿನಾಂಕ 20 ಜೂನ್ 2025 ರಂದು ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಆಚರಿಸಲಾಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ದೀಪವನ್ನು ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಎಕ್ಸ್ಪರ್ಟ್ ಸಮೂಹ ಸಂಸ್ಥೆಗಳ ಐ. ಟಿ. ನಿರ್ದೇಶಕರಾಗಿರುವ ಅಂಕುಶ್ ಎನ್. ನಾಯಕ್ ಮಾತನಾಡಿ “ಶಕ್ತಿ ಶಾಲೆಯಲ್ಲಿ ಸಂಗೀತ ದಿನಾಚರಣೆಯನ್ನು ಆಚರಿಸುತ್ತಿರುವುದಕ್ಕೆ ಅಭಿನಂದನೆಯನ್ನು ತಿಳಿಸುತ್ತೇನೆ. ದಿನದಲ್ಲಿ ಕನಿಷ್ಠ ಒಂದು ಗಂಟೆಯಾದರೂ ನಾವು ನಮ್ಮ ಹವ್ಯಾಸಗಳಿಗೆ ಮೀಸಲಿಡಬೇಕು, ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿಯ ಸಂಗೀತ ಕಲಿಯಬೇಕು, ಸಂಗೀತವು ನಮ್ಮಲ್ಲಿ ಕ್ರಿಯಾಶೀಲತೆಯನ್ನು ಹಾಗೂ ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ನಾವು ನಮ್ಮ ಭಾರತೀಯ ಶಾಸ್ತ್ರೀಯ ಸಂಗೀತ ಶೈಲಿಯನ್ನು ಮತ್ತು ಅದರ ಪ್ರಾಮುಖ್ಯತೆಯನ್ನು ಅರಿತು ಗೌರವಿಸಬೇಕು. ಭಾರತದ ಅನೇಕ ಯುವ ಸಂಗೀತಕಾರರು ಇಂದು ಭಾರತವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುತ್ತಿದ್ದಾರೆ. ನಮ್ಮ ದೇಶದ ಸಂಗೀತಕ್ಕೆ ಜಗತ್ತಿನಲ್ಲಿ ಮನ್ನಣೆಯಿದೆ. ಜಗತ್ತಿನ ಬೇರೆ ಬೇರೆ ದೇಶದಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಅಲಿಸುವ…

Read More

ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಯಕ್ಷಧ್ರುವ – ಯಕ್ಷಶಿಕ್ಷಣ ಯೋಜನೆ 2025-26ನೇ ಸಾಲಿನ ಯಕ್ಷಗಾನ ತರಗತಿಯು ನಿಡ್ಡೋಡಿಯ ಜ್ಞಾನರತ್ನ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಅಧೀನಕೊಳಪಟ್ಟ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 23 ಜೂನ್ 2025ರ ಸೋಮವಾರದಂದು ಆರಂಭಗೊಂಡಿತು. ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಜ್ಞಾನರತ್ನ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಶ್ರೀಯುತ ಭಾಸ್ಕರ್ ದೇವಸ್ಯ ಇವರು ವಹಿಸಿದ್ದು, ಉದ್ಘಾಟನೆಯನ್ನು ಯಕ್ಷಧ್ರುವ ಪಟ್ಲ ಪೌಂಡೇಶನ್ ಮೂಡಬಿದ್ರೆ ಘಟಕದ ಅಧ್ಯಕ್ಷರಾದ ಶ್ರೀಯುತ ದಿವಾಕರ್ ಶೆಟ್ಟಿ ಖಂಡಿಗೆ ಇವರು ದೀಪ ಬೆಳಗಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಕೇಂದ್ರ ಘಟಕದ ಸದಸ್ಯರಾದ ಶ್ರೀಯುತ ಗಂಗಾಧರ್ ಶೆಟ್ಟಿ, ಮೂಡಬಿದ್ರೆ ಘಟಕದ ಕಾರ್ಯದರ್ಶಿ ಶ್ರೀಯುತ ಅರುಣ್ ಕುಮಾರ್, ಮೂಡಬಿದ್ರಿ ಘಟಕದ ಸಂಚಾಲಕರಾದ ಶ್ರೀಯುತ ಮನೋಜ್ ಕುಮಾರ್ ಶೆಟ್ಟಿ ಮತ್ತು ರವಿ ಪ್ರಸಾದ್ ಶೆಟ್ಟಿ, ಯಕ್ಷ ಗುರು ಶ್ರೀರಕ್ಷಿತ್ ಶೆಟ್ಟಿ…

Read More

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಮತ್ತು ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ‘ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು : ಉಪನ್ಯಾಸಮಾಲೆ’ ಕಾರ್ಯಕ್ರಮವನ್ನು ದಿನಾಂಕ 26 ಜೂನ್ 2025ರಂದು ಮಧ್ಯಾಹ್ನ 2-00 ಗಂಟೆಗೆ ಬೆಳ್ತಂಗಡಿಯ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾದ ಡಿ. ಯದುಪತಿ ಗೌಡ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಉಜಿರೆಯ ಶ್ರೀ. ಧರ್ಮಸ್ಥಳ ಮಂಜುನಾಥ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಬೋಜಮ್ಮ ಕೆ.ಎನ್. ಇವರು ‘ರಾಷ್ಟ್ರಕವಿ ಕುವೆಂಪು’ ಇವರ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.

Read More

ಮಂಗಳೂರು : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ, ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕ, ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಇವರ ಸಂಯುಕ್ತ ಆಶಯದಲ್ಲಿ ‘ಮನೆ ಮನೆ ಕನ್ನಡ ಜಾಗೃತಿ ಅಭಿಯಾನ’ ಮಂಗಳೂರಿನಲ್ಲಿ ದಿನಾಂಕ 22 ಜೂನ್ 2025ರಂದು ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಹಿತಿ ಮತ್ತು ಸಾಹಿತ್ಯ ಪರಿಚಾರಕ ಡಾ. ಕೊಳ್ಚಪ್ಪೆ ಗೋವಿಂದ ಭಟ್ ವಹಿಸಿದ್ದರು. ಈ ಉಪಕ್ರಮವು ಸ್ಥಳೀಯ ಸಂಘಟನಾ ಕಾರ್ಯದರ್ಶಿ ಅನಿತಾ ‌ಶೆಣೈಯವರ ಕುಲಶೇಖರ ಮನೆಯಲ್ಲಿ ಸಂಚಲನ ಮೂಡಿಸಿತು. ಈ ಅಭಿಯಾನದ ರೂವಾರಿ ಮತ್ತು ಈ ಸಂಸ್ಥೆಗಳ ಸ್ಥಾಪಕ ಸಂಚಾಲಕ ವಾಮನ ರಾವ್ ಬೇಕಲ್ ಮತ್ತು ಸಂಧ್ಯಾ ರಾಣಿ ಟೀಚರ್ ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯ ಸಂಚಾಲಕರಾದ ಜಯಾನಂದ ಪೆರಾಜೆ ಇವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತ “ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಸ್ವಯಂ ಅಳವಡಿಸಿ,…

Read More

ಉಡುಪಿ : ರಾಗ ಧನ ಉಡುಪಿ ಸಂಸ್ಥೆಯ ವಾರ್ಷಿಕ ಮಹಾಸಭೆ ಮತ್ತು ರಾಗರತ್ನಮಾಲಿಕೆ- 38 ಶಾಸ್ತ್ರೀಯ ಸಂಗೀತ ಕಛೇರಿಯು ದಿನಾಂಕ 22 ಜೂನ್ 2025 ಭಾನುವಾರದಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು. ಕಾರ್ಯದರ್ಶಿ ಉಮಾಶಂಕರಿ ವಾರ್ಷಿಕ ವರದಿ ಮಂಡಿಸಿದರು. ಖಜಾಂಚಿ ಪ್ರೊ. ಸದಾಶಿವರಾವ್ ಆಯವ್ಯಯ ಲೆಕ್ಕ ಪತ್ರಗಳನ್ನು ಮಂಡಿಸಿ ಸಭೆಯ ಅನುಮೋದನೆ ಪಡೆದರು. ಅಧ್ಯಕ್ಷ ಡಾ.ಶ್ರೀಕಿರಣ್ ಹೆಬ್ಬಾರ್ ಸಂಸ್ಥೆಯ ಆಶೋತ್ತರಗಳನ್ನು ಪ್ರಸ್ತುತ ಪಡಿಸಿದರು. ಕುಮಾರಿ ಸಿಯಾ ಪ್ರಭು ಮತ್ತು ಮಾಸ್ಟರ್ ತೀಕ್ಷಣ್ ಶೆಟ್ಟಿ ಪ್ರಾರ್ಥಿಸಿದರು. ವಿದುಷಿ ಸರೋಜಾ ಆಚಾರ್ಯ ವಂದಿಸಿದರು. ಶ್ರೀ ರಾಘವೇಂದ್ರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ರಾಗರತ್ನಮಾಲಿಕೆ- 38 ಶಾಸ್ತ್ರೀಯ ಸಂಗೀತ ಕಛೇರಿಯನ್ನು ವಿದ್ವಾನ್ ವಿವೇಕ್ ಸದಾಶಿವಂ ಚೆನೈ ಇವರು ನಡೆಸಿಕೊಟ್ಟರು.

Read More