Author: roovari

ಮಂಗಳೂರು : ಮಾಂಡ್ ಸೊಭಾಣ್ ಸಂಸ್ಥೆ ಆಯೋಜಿಸಿದ ಸುರ್ ಸೊಭಾಣ್ ಗಾಯನ ಮತ್ತು ಬಾಯ್ಲಾ – ಹೊಪ್ ನೃತ್ಯ ತರಬೇತಿ ಪಡೆದ ಮಕ್ಕಳಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭವು ದಿನಾಂಕ 27 ಏಪ್ರಿಲ್ 2025ರಂದು ಶಕ್ತಿನಗರದ ಕಲಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪ್ರಮಾಣ ಪತ್ರ ವಿತರಿಸಿದ ‘ಉಜ್ವಾಡ್’ ಪಾಕ್ಷಿಕದ ಸಂಪಾದಕರಾದ ವಂ. ಆಲ್ವಿನ್ ಸಿಕ್ವೇರಾ ಮಾತನಾಡಿ “ಬೈಬಲಿನ ನೋಹನ ನೌಕೆಯು ಪ್ರವಾಹದ ಪರಿಸ್ಥಿತಿಯಲ್ಲಿ ಉತ್ತಮವಾದುದನ್ನು ಭವಿಷ್ಯಕ್ಕಾಗಿ ಉಳಿಸಿತು. ಅದೇ ರೀತಿ ಕಲಾಂಗಣ್ ಕೊಂಕಣಿಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೊಂಕಣಿಯ ನೋಹನ ನೌಕೆ. ಇಲ್ಲಿಗೆ ಬರುವುದೇ ಒಂದು ಸಂಭ್ರಮ. ಇಲ್ಲಿಯ ಕಾರ್ಯಕ್ರಮಗಳು ಕೊಂಕಣಿ ಉಳಿವಿಗೆ ನಿರಂತರತೆಯನ್ನು ನೀಡಿವೆ. ಇಂದು ನೃತ್ಯ ಹಾಗೂ ಗಾಯನ ತರಬೇತಿ ಪಡೆದ ವಿದ್ಯಾರ್ಥಿಗಳು ಪ್ರಮಾಣ ಪತ್ರ ಪಡೆಯಲಿದ್ದಾರೆ. ಅವರು ಭವಿಷ್ಯದ ಸಾಂಸ್ಕೃತಿಕ ರಾಯಭಾರಿಗಳು. ಈ ಪರಂಪರೆಯನ್ನು ಮುನ್ನಡೆಸಿ’’ ಎಂದು ಹೇಳಿದರು. ಸುರ್ ಸೊಭಾಣ್ 60 ಗಂಟೆಗಳ ಹಿಂದೂಸ್ತಾನಿ ಸಂಗೀತ ಮತ್ತು ಕೊಂಕಣಿ ಹಾಡುಗಾರಿಕೆ ಬಗ್ಗೆ ತರಬೇತಿಯಾದರೆ, ಬಾಯ್ಲಾ –ಹೊಪ್…

Read More

ಬೆಂಗಳೂರು : ರಾಗಸುಧಾ ಪೌಂಡೇಶನ್ ಜೆ. ಪಿ. ನಗರ ಇವರ ಮಹಿಳಾ ದಿನಾಚರಣೆಯ ಅಂಗವಾಗಿ ಆಯೋಜಿಸಿದ “ಆಧುನಿಕ ಮಹಿಳೆ, ಪ್ರಗತಿಯ ಕಹಳೆ” ಕಾರ್ಯಕ್ರಮದಡಿಯಲ್ಲಿ ಬೆಂಗಳೂರಿನ ಯಕ್ಷದೇಗುಲ ಮಕ್ಕಳ ತಂಡದಿಂದ ‘ಅಭಿಮನ್ಯು ಕಾಳಗ’ ಯಕ್ಷಗಾನ ಪ್ರದರ್ಶನ ಡ್ 26 ಏಪ್ರಿಲ್ 2025 ರಂದು ಬೆಂಗಳೂರಿನ ಜೆ.ಪಿ. ನಗರದ ಕಲ್ಚರಲ್ ಅಸೋಸಿಯೇಷನ್ ಸಭಾಂಗಣದಲ್ಲಿ ನಡೆಯಿತು. ಪ್ರಿಯಾಂಕ ಕೆ. ಮೋಹನ್ ನಿರ್ದೇಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಯಕ್ಷಗುರುಗಳಾದ ಸುದರ್ಶನ ಉರಾಳ, ಪ್ರೀತಿ ಕೆ. ಮೋಹನ್ ಹಾಗೂ ಕಲಾವಿದರಾಗಿ ಶ್ರೀರಾಮ, ಶ್ರೀ ವಿದ್ಯಾ, ಸರಸ್ವತಿ, ಚಿನ್ಮಯಿ, ಮೇಘನಾ, ಚೈತ್ರ ಹಾಗೂ ಶಾಶ್ವತ್ ಭಾಗವಹಿಸಿದರು. ಹಲವು ಕಾರ್ಯಕ್ರಮದ ನಡುವೆ ಯಕ್ಷಗಾನ ಪ್ರದರ್ಶನ ಬಲುವಾಗಿ ರಂಜಿಸಿತು. ಕಾರ್ಯಕ್ರಮ ಮುಗಿದ ನಂತರ ಭಾಗವಹಿಸಿದ ಕಲಾವಿದರಿಗೆ ಗೌರವಿಸಿ, ಪ್ರಮಾಣಪತ್ರ ನೀಡಲಾಯಿತು.

Read More

ಮಕ್ಕಳೇ ಮನೆಗೆ ನಂದಾದೀಪ ಎಲ್ಲರ ಬಾಳಿಗೂ ಮಕ್ಕಳೇ ನಮ್ಮೆಲ್ಲರ ಬದುಕಿನ ಜೀವದ ಜೀವಾಳ. ಕೂಸು ಇದ್ದ ಮನೆಗೆ ಬೀಸಣಿಕೆ ಯಾತಾಕ? ‘ಕೂಸು ಕಂದಯ್ಯ ಒಳ ಹೊರಗೂ ಆಡಿದರ ಬೀಸಣಕಿ ಗಾಳಿ ಸುಳಿದಾಂವ’ ಎಂದು ನಮ್ಮ ಜನಪದರ ಹಾಡಿನಲ್ಲೂ ಮಕ್ಕಳ ಹಿರಿಮೆ ಗರಿಮೆಯ ಬಗ್ಗೆ ವ್ಯಕ್ತವಾಗಿದೆ. ಇಂಥ ಮಕ್ಕಳ ಮನಸ್ಸನ್ನು ಅರಿತು ಬೆರೆತು ಅವರ ಬುದ್ಧಿಮಟ್ಟಕ್ಕೆ ಇಳಿದು ಮನಮುಟ್ಟುವಂತೆ ಎದೆತಟ್ಟುವಂತೆ, ಅವರ ಅಭಿರುಚಿಗೆ ತಕ್ಕಂತೆ ಕವಿತೆ ಬರೆಯುವುದೆಂದರೆ ಸಾಮಾನ್ಯವಾದುದಲ್ಲ, ಅದೊಂದು ಮಹತ್ಕಾರ್ಯವೇ ಸರಿ. ಆ ನಿಟ್ಟಿನಲ್ಲಿ ನನ್ನ ನೆಚ್ಚಿನ ಹಿರಿಯ ಕವಿಗಳಾದ ಶ್ರೀಯುತ ನೀ. ಶ್ರೀಶೈಲ ಅವರು ತುಂಬಾ ಚೆನ್ನಾಗಿ ಪಳಗಿದ್ದಾರೆ. ಅದಕ್ಕೆ ಸಾಕ್ಷಿ ಅನ್ನುವಂತಿದೆ ಅವರ ಇತ್ತೀಚಿಗೆ ಲೋಕಾರ್ಪಣೆಗೊಂಡ ಕೃತಿಯಾದ ‘ಪ್ಯಾಂಟೂ ಇಲ್ಲ.. ಚೆಡ್ಡಿಯು ಇಲ್ಲ..’ ಎಂಬ ಶಿಶುಗೀತೆಗಳ, ಮಕ್ಕಳ ಕವನಸಂಕಲನವು ಸಾಕ್ಷಿಯಾಗಿದೆ. ಇದೊಂದು ಅತ್ಯದ್ಭುತವಾದ ಕೃತಿ ಆಗಿದ್ದು, ಓದುಗರನ್ನು ಸರಾಗವಾಗಿ, ಸರಳವಾಗಿ ಓದಿಸಿಕೊಂಡು ಹೋಗುವ ಕೃತಿಯಾಗಿದೆ. ಇದರಲ್ಲಿ ಒಟ್ಟು 23 ಕವಿತೆಗಳಿವೆ. ಅತ್ಯಂತ ಸೊಗಸಾದ ಸುಲಾಲಿತ್ಯವಾದ ಈ ಕವಿತೆಗಳು ಕನ್ನಡ…

Read More

ಕೋಟ : ಶ್ರೀ ಹಂದೆ ವಿಷ್ಣುಮೂರ್ತಿ ಮತ್ತು ಶ್ರೀ ಹಂದೆ ವಿನಾಯಕ ದೇವಸ್ಥಾನದ ಶ್ರೀಮನ್‌ಮಹಾರಥೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ದಿನಾಂಕ 29 ಏಪ್ರಿಲ್ 2025 ರಿಂದ 01 ಮೇ 2025ರ ವರೆಗೆ ನಡೆಯಲಿದೆ. ದಿನಾಂಕ 29 ಏಪ್ರಿಲ್ 2025 ರಂದು ಸಂಜೆ ಘಂಟೆ 5.30ಕ್ಕೆ ಗಣ್ಯರ ಉಪಸ್ಥಿತಿಯಲ್ಲಿ ಹೆಚ್. ಸೂರ್ಯನಾರಾಯಣ ಹಂದೆ ನಿವೃತ್ತ ಶಿಕ್ಷಕರ ಪ್ರಾಯೋಜನೆಯಲ್ಲಿ ಯಕ್ಷಗಾನದ ಎರಡನೇ ವೇಷದ ಕಲಾವಿದರಾದ ಬಳ್ಕೂರು ಕೃಷ್ಣಯಾಜಿ, ಶ್ರೀಪಾದ ಭಟ್ ಥಂಡಿಮನೆ, ಪ್ರಸನ್ನ ಶೆಟ್ಟಿಗಾರ್ ಮಂದಾರ್ತಿ ಇವರಿಗೆ ವಿಶೇಷ ಪುರಸ್ಕಾರ, ಕಡಬಾಳ ಉದಯ ಹೆಗಡೆ ಇವರಿಗೆ ‘ದಿ. ನರಸಿಂಹ ಸೋಮಯಾಜಿ ಪ್ರಶಸ್ತಿ–2025’ ಮತ್ತು ಊರಿನ ಸಾಧಕರಾದ ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಹೆಚ್. ಸುಜಯೀಂದ್ರ ಹಂದೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ತಾರಾನಾಥ ಹೊಳ್ಳ, ಪಿ. ಎಚ್. ಡಿ. ಪದವೀಧರಾದ ಶಮಂತ ಕುಮಾರ್, ದೇವಸ್ಥಾನದ ವಿಶೇಷ ದಾನಿಗಳಾದ ಶ್ರೀಮತಿ ಜಯಲಕ್ಷ್ಮೀ ಎನ್. ಮತ್ತು ಜಗದೀಶ ಬಾಸ್ರಿಯವರನ್ನು ಸನ್ಮಾನಿಸಲಾಗುವುದು. ಕರ್ನಾಟಕ ಸರ್ಕಾರದ ಶೌರ್ಯ ಪ್ರಶಸ್ತಿ…

Read More

ಬಿ.ಸಿ.ರೋಡ್ : ಗೆಜ್ಜೆಗಿರಿ ಮೇಳದವರಿಂದ ಯಕ್ಷೋತ್ಸವ 2025 ಕಾರ್ಯಕ್ರಮವು ದಿನಾಂಕ 26 ಏಪ್ರಿಲ್ 2025ರಂದು ಬಿ.ಸಿ.ರೋಡಿನ ಚಂಡಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ವಿವೇಕಾನಂದ ವಿದ್ಯಾವರ್ದಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ “ಉಪನಿಷತ್ತ್, ಭಗವದ್ಗೀತೆ ಇದನ್ನು ಜನ ಸಾಮಾನ್ಯರು ತಿಳಿದಿರುವುದು ತುಂಬ ಅಪರೂಪ. ಆದರೆ ಯಕ್ಷಗಾನದ ಮೂಲಕ ಇದನ್ನು ತಿಳಿಯುವುದು ಸಾಧ್ಯ. ಯಕ್ಷಗಾನದಿಂದ ನಮ್ಮ ಜೀವನದ ಮೂಲ ಚಿಂತನೆಯ ಅರಿವು ಉಂಟಾಗುತ್ತದೆ. ದುಷ್ಟರ ನಾಶವಾಗಿ ಶಿಷ್ಟರ ರಕ್ಷಣೆಯ ಬಗ್ಗೆಯೂ ಯಕ್ಷಗಾನದಲ್ಲಿ ತಿಳಿಯುತ್ತದೆ. ನಮ್ಮ ಧರ್ಮರಕ್ಷಣೆಯ ಕೈಂಕರ್ಯದಲ್ಲಿ ಯಕ್ಷಗಾನ ಪ್ರಸಂಗ ಸದಾ ಪ್ರೇರಣೆ ನೀಡಲಿ” ಎಂದು ಹೇಳಿದರು. ಇದೇ ಸಂದರ್ಭ ಮೇಳದ ಕಲಾವಿದರಾದ ಲಕ್ಣ್ಮಣ್ ಗೌಡ ಮುಚ್ಚೂರು, ದಾಮೋದರ ಪಾಟಾಳಿ, ದತ್ತೇಶ್ ಮಾವಿನಕಟ್ಡೆ, ಶ್ರೀಶ ಭಟ್ ಪೊಳಲಿ, ವಿಶ್ವನಾಥ ಕುಲಾಲ್ ಪದ್ಮುಂಜ ಮತ್ತು ಬಾಬಣ್ಣ ಪಾರೆಂಕಿ ಮಡಂತ್ಯಾರ್ ಇವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಮೇಳದ ಪ್ರಧಾನ ಭಾಗವತರಾದ ಯೋಗೀಶ್ ಶರ್ಮ ಅಳದಂಗಡಿ, ಪ್ರಸಂಗಕರ್ತ ನಿತಿನ್ ಕುಮಾರ್ ತೆಂಕಕಾರಂದೂರು, ಹಿಮ್ಮೇಳ ಕಲಾವಿದ…

Read More

valedicotryಮಂಗಳೂರು : ಆನೆಗುಂದಿ ಗುರುಸೇವಾ ಪರಿಷತ್ ಮಹಾ ಮಂಡಲ ಮಂಗಳೂರು ಇದರ ವತಿಯಿಂದ ಮಕ್ಕಳಿಗಾಗಿ ರಥಬೀದಿ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ಒಂದು ವಾರದ ‘ಜ್ಞಾನ ವಿಕಾಸ ಸಂಸ್ಕಾರ ಶಿಬಿರ’ದ ಸಮಾರೋಪ ಸಮಾರಂಭವು ದಿನಾಂಕ 27 ಏಪ್ರಿಲ್ 2025ರಂದು ನಡೆಯಿತು. ಸಮಾರಂಭದಲ್ಲಿ ಪಾಲ್ಗೊಂಡು ಆಶೀರ್ವಚನವಿತ್ತ ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪಡುಕುತ್ಯಾರು ಇಲ್ಲಿನ ಪೀಠಾಧಿಪತಿಗಳಾಗಿರುವ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಜಿಗಳು “ಮಕ್ಕಳ ಬೌದ್ಧಿಕ ಪರಿವರ್ತನೆಯೇ ಸಂಸ್ಕಾರ. ಆದರೆ ಪರಿವರ್ತನೆಯಲ್ಲಿ ಎರಡು ಮುಖಗಳಿವೆ. ಒಂದು ಮುಖ ಸಂಸ್ಕಾರವಾದರೆ ಇನ್ನೊಂದು ಮುಖ ವಿಕಾರ. ಮಕ್ಕಳು ವಿಕಾರಗೊಳ್ಳದಂತೆ ಎಚ್ಚರವಹಿಸಬೇಕಾದುದು ಹೆತ್ತವರ ಜವಾಬ್ದಾರಿ. ಆದ್ದರಿಂದ ಮಕ್ಕಳ ಜೀವನದ ಲಕ್ಷ್ಯ ಸುಸ್ಥಿರವಾಗಿರುವಂತೆ ಮಾರ್ಗದರ್ಶನ ನೀಡುವಲ್ಲಿ ಪೋಷಕರು ಹಾಗೂ ಶಿಕ್ಷಕರ ಕರ್ತವ್ಯವೂ ಬಹು ಮುಖ್ಯವಾಗಿರುತ್ತದೆ ಎಂದು ನುಡಿದರು. ವೇದಿಕೆಯಲ್ಲಿ ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆಡಳಿತಾಧಿಕಾರಿ ಕೆ. ಉಮೇಶ್ ಆಚಾರ್ಯ ಪಾಂಡೇಶ್ವರ, ವಿಶ್ವಕರ್ಮ ಕಲಾ ಪರಿಷತ್ತಿನ ಅಧ್ಯಕ್ಷ ಡಾ. ಎಸ್.ಪಿ. ಗುರುದಾಸ್,…

Read More

ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರವು ಮೂರು ವರ್ಷಗಳ ವಿವಿಧ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಪ್ರಾಧಿಕಾರದ ಅಧ್ಯಕ್ಷ ಮಾನಸ ಅವರ ನೇತೃತ್ವದ ಕಾರ್ಯಕಾರಿ ಸಮಿತಿಯು 2022, 2023 ಹಾಗೂ 2024ನೇ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಿದೆ. ‘ಡಾ. ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’ಗೆ ಕ್ರಮವಾಗಿ ಮೈಸೂರಿನ ಪ್ರೊ. ಪಿ.ವಿ. ನಂಜರಾಜ ಅರಸ್, ಮಂಗಳೂರಿನ ಡಾ. ಇಂದಿರಾ ಹೆಗ್ಗಡೆ ಹಾಗೂ ವಿಜಯನಗರದ ಹೊಸಪೇಟೆಯ ಕೆ. ರವೀಂದ್ರನಾಥ್ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯು ತಲಾ ರೂ. ಎಪ್ಪತ್ತೈದು ಸಾವಿರ ನಗದು ಒಳಗೊಂಡಿದೆ. ‘ಅತ್ಯುತ್ತಮ ಪ್ರಕಾಶನ ಪ್ರಶಸ್ತಿ’ಗೆ ಗದಗದ ಲಡಾಯಿ ಪ್ರಕಾಶನ, ಮೈಸೂರಿನ ಅಭಿರುಚಿ ಪ್ರಕಾಶನ ಹಾಗೂ ಕಲಬುರಗಿಯ ಕನ್ನಡ ನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘ ಆಯ್ಕೆಯಾಗಿದೆ. ಈ ಪ್ರಶಸ್ತಿಯು ತಲಾ ರೂ. ಒಂದು ಲಕ್ಷ ನಗದು ಹೊಂದಿದೆ. ‘ಡಾ. ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’ಗೆ ಮಂಡ್ಯದ ಪ್ರೊ. ಬಿ. ಜಯಪ್ರಕಾಶ ಗೌಡ, ಬಳ್ಳಾರಿಯ ಹಗರಿ ಬೊಮ್ಮನಹಳ್ಳಿಯ ಮೇಟಿಕೊಟ್ರಪ್ಪ, ಮೈಸೂರಿನ ರಂಗನಾಥ…

Read More

ದೇಲಂಪಾಡಿ : ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ನಾಗರಾಜ ಪಂಜತ್ತಡ್ಕ ಕಾವು ಹಾಗೂ ಮನೆಯವರ ವತಿಯಿಂದ ವಿಶೇಷ ಯಕ್ಷಗಾನ ತಾಳ ಮದ್ದಳೆ ದಿನಾಂಕ 26 ಏಪ್ರಿಲ್ 2025ರ ಶನಿವಾರದಂದು ನಡೆಯಿತು. ಕಾರ್ಯಕ್ರಮದ ಮೊದಲಿಗೆ ಸ್ಥಳ ಸಾನ್ನಿಧ್ಯ ಶ್ರೀ ಗೋಪಾಲಕೃಷ್ಣದೇವರಿಗೆ ಪೂಜಾರ್ಚನೆ ಸಲ್ಲಿಸಲಾಯಿತು. ಕಲಾಸಂಘದ ಅಧ್ಯಕ್ಷರಾದ ಹಿರಿಯ ಸಾಹಿತಿ ಅರ್ಥಧಾರಿ ಡಾ. ರಮಾನಂದ ಬನಾರಿ ಅವರ ಮಾರ್ಗದರ್ಶನದಲ್ಲಿ ಭಾಗವತ ಗುರುಗಳಾದ ವಿಶ್ವವಿನೋದ ಬನಾರಿ ಅವರ ಸಂಯೋಜನೆಯೊಂದಿಗೆ ಮುನ್ನಡೆದ ಯಕ್ಷಗಾನ ತಾಳಮದ್ದಳೆ ʼಪಾರ್ಥ ಸಾರಥ್ಯʼ ಅತ್ಯಂತ ಮನೋಹರವಾಗಿ ಮೂಡಿಬಂತು. ಭಾಗವತಿಕೆಯಲ್ಲಿ ಮೋಹನ ಮೆಣಸಿನಕಾನ, ವಿದ್ಯಾಶ್ರೀ ಆಚಾರ್ಯ ಈಶ್ವರ ಮಂಗಲ ಕಾಣಿಸಿಕೊಂಡರು. ಚೆಂಡೆಮದ್ದಳೆ ವಾದಕರಾಗಿ ಶ್ರೀಧರ ಆಚಾರ್ಯ ಈಶ್ವರ ಮಂಗಲ , ಮಂಡೆಕೂಲು ಅಪ್ಪಯ್ಯ ಮಣಿಯಾಣಿ, ವಿಷ್ಣು ಶರಣ ಬನಾರಿ, ಕೃಷ್ಣ ಪ್ರಸಾದ ಬೆಳ್ಳಿಪ್ಪಾಡಿ, ಸದಾನಂದ ಮಯ್ಯಾಳ ಸಹಕರಿಸಿದರು. ಅರ್ಥಗಾರಿಕೆಯಲ್ಲಿ ರಾಮಣ್ಣ ಮಾಸ್ತರ್‌ ದೇಲಂಪಾಡಿ, ಐತಪ್ಪ ಗೌಡ ಮುದಿಯಾರು , ವೀರಪ್ಪ ಸುವರ್ಣ ಬೆಳ್ಳಿಪ್ಪಾಡಿ, ಶಾಂತಕುಮಾರಿ ದೇಲಂಪಾಡಿ, ಶ್ರೀನಿಧಿ…

Read More

ಬೆಂಗಳೂರು : ಕರ್ನಾಟಕ ಜಾನಪದ ಅಕಾಡೆಮಿಯು 2024ನೇ ಸಾಲಿನಲ್ಲಿ 01 ಜನವರಿ 2024ರಿಂದ 31 ಡಿಸೆಂಬರ್ 2024ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಿರುವಂತೆ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ, ಜನಪದ ಸಂಕೀರ್ಣ ಪ್ರಕಾರಗಳ ಕುರಿತು ಅತ್ಯುತ್ತಮ ಜಾನಪದ ಕೃತಿಗಳಿಗೆ ಪುಸ್ತಕ ಬಹುಮಾನ ಯೋಜನೆಯಡಿಯಲ್ಲಿ ಆಯ್ಕೆಮಾಡಲು ಜಾನಪದ ಕೃತಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾ‌ರ್ ತಿಳಿಸಿದ್ದಾರೆ. ಆಸಕ್ತ ಲೇಖಕರು, ಪ್ರಕಾಶಕರು ಅಥವಾ ಸಂಪಾದಕರು ತಮ್ಮ ಒಂದು ಕೃತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಗೆ ದಿನಾಂಕ 05 ಮೇ 2025ರೊಳಗಾಗಿ ತಲುಪುವಂತೆ ಖುದ್ದಾಗಿ ಕೊರಿಯ‌ರ್ ಅಥವಾ ಅಂಚೆ ಮೂಲಕ ಸಲ್ಲಿಸಬಹುದು.

Read More

ಮಡಿಕೇರಿ : ಸಮರ್ಥ ಕನ್ನಡಿಗರು ಕೊಡಗು ಜಿಲ್ಲಾ ಘಟಕ ಮತ್ತು ಮುಂಬೈಯ ದಿ. ಚಂದ್ರಶೇಖರ್ ರಾವ್ ಮೆಮೋರಿಯಲ್ ಟ್ರಸ್ಟ್ ಇವುಗಳ ಜಂಟಿ ಆಶ್ರಯದಲ್ಲಿ ದಿನಾಂಕ 03 ಮೇ 2025ರಂದು ಬೆಳಗ್ಗೆ 10-00 ಗಂಟೆಗೆ ಮಡಿಕೇರಿಯ ರೆಡ್ ಬ್ರಿಕ್ಸ್ ನ ಸತ್ಕಾರ್ ಭವನದಲ್ಲಿ ರಾಜ್ಯ ಮಟ್ಟದ ಸಾಹಿತ್ಯ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ನಡೆಯಲಿದೆ. ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಈ ಸಮಾರಂಭದ ಆಶಯ ನುಡಿಗಳನ್ನಾಡುವರು. ಮುಂಬೈಯ ದಿ. ಚಂದ್ರಶೇಖರ್ ರಾವ್ ಮೆಮೋರಿಯಲ್ ಟ್ರಸ್ಟಿನ ಸಂಸ್ಥಾಪಕರಾದ ಶ್ರೀದೇವಿ ಚಂದ್ರಶೇಖರ್ ರಾವ್ ಅಧ್ಯಕ್ಷತೆ ವಹಿಸಲಿರುವ ಈ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ. ರಮೇಶ್ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಂಬೈಯ ಸಾಹಿತಿ ಗೋಪಾಲ್ ತ್ರಾಸಿ ಇವರ ‘ನುಡಿ ತೇರು’ ಹಾಗೂ ದಿ. ಚಂದ್ರಶೇಖರ್ ರಾವ್ ಇವರ ‘ಹರಟೆಗಳು’ ಎನ್ನುವ ಎರಡು ಕೃತಿಗಳನ್ನು ಮಡಿಕೇರಿ ಆಕಾಶವಾಣಿಯ ಹಿರಿಯ ಉದ್ಘೋಷಕ ಸುಬ್ರಾಯ ಸಂಪಾಜೆ ಲೋಕಾರ್ಪಣೆ ಮಾಡುವರು. ಲೋಕಾರ್ಪಣೆಗೊಳ್ಳಲಿರುವ ಶ್ರೀ…

Read More