Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು : ಕನ್ನಡ ಸಾಹಿತ್ಯದಲ್ಲಿ ಆಳವಾದ ಅಧ್ಯಯನ ನಡೆಸಿ, ವೈಜ್ಞಾನಿಕ ದೃಷ್ಟಿಕೋನವನ್ನು ರೂಢಿಸಿಕೊಂಡು ಬಂದಿದ್ದ ಡಾ. ಪಿ. ವಿ. ನಾರಾಯಣ ಇವರು ವಿಶಿಷ್ಟ ಸಾಹಿತಿ, ಪ್ರಾಧ್ಯಾಪಕ ಮತ್ತು ಕನ್ನಡಪರ ಹೋರಾಟಗಾರರು. ಕನ್ನಡದ ಹಿರಿಮೆಯನ್ನು ಕಾಪಾಡಲು ನಿರಂತರವಾಗಿ ಶ್ರಮಿಸಿದ ಇವರ ಅಗಲುವಿಕೆಯಿಂದ ಕನ್ನಡ ವಿದ್ವತ್ ಲೋಕಕ್ಕೆ ಅಪಾರ ಹಾನಿಯಾಗಿದೆಯೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ತಿಳಿಸಿದ್ದಾರೆ. ಇವರು ದಿನಾಂಕ 03 ಏಪ್ರಿಲ್ 2025 ರಂದು ನಿಧನರಾದ ಡಾ. ಪಿ. ವಿ. ನಾರಾಯಣ ಅವರ ಜಯನಗರದ ಸ್ವಗೃಹಕ್ಕೆ ಭೇಟಿ ನೀಡಿ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಗೌರವವನ್ನು ಸಲ್ಲಿಸಿದರು. ಪಿ. ವಿ. ನಾರಾಯಣರು 1942ರ ಡಿಸೆಂಬರ್ 18ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಪಿ. ವೆಂಕಪ್ಪಯ್ಯ ತಾಯಿ ನರಸಮ್ಮ. ಪ್ರಾರಂಭಿಕ ಶಿಕ್ಷಣವನ್ನು ಬೆಂಗಳೂರಿನಲ್ಲಿ ನಡೆಸಿದ ಇವರು, ತುಮಕೂರಿನ ಸರಕಾರಿ ಕಾಲೇಜಿನಿಂದ ಬಿ.ಎ, ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. (ಕನ್ನಡ) ಮತ್ತು ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. (ಇಂಗ್ಲಿಷ್) ಪದವಿ ಪಡೆದರು. “ವಚನ ಸಾಹಿತ್ಯ: ಒಂದು…
ಮಂಗಳೂರು: ವೃತ್ತಿಯಲ್ಲಿ ನ್ಯಾಯವಾದಿಯಾಗಿ ‘ದೇವಕಿತನಯ’ ಎಂಬ ಹೆಸರಿನಿಂದ ಹರಿದಾಸರಾಗಿ ಖ್ಯಾತರಾದ ಮಹಾಬಲ ಶೆಟ್ಟಿ ಕೂಡ್ಲು ಅವರಿಗೆ 80 ವರ್ಷ ತುಂಬಿದ ಸಂದರ್ಭದಲ್ಲಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರ ಸಂಪಾದಕತ್ವದಲ್ಲಿ ‘ಮಹಾಪರ್ವ’ ಎಂಬ ಅಭಿನಂದನಾ ಸಂಪುಟ ಪ್ರಕಟವಾಗಿದೆ. ವಿಕಾಸ್ ಎಜುಕೇಶನ್ ಟ್ರಸ್ಟ್ ಇದರ ವತಿಯಿಂದ ಕಲ್ಲೂರು ನಾಗೇಶ್ ಅವರ ಆಕೃತಿ ಪಿಂಟ್ಸ್ ಮುದ್ರಿಸಿರುವ ಗ್ರಂಥದ ಲೋಕರ್ಪಣಾ ಸಮಾರಂಭವು ದಿನಾಂಕ 04 ಎಪ್ರಿಲ್ 2025ರ ಶುಕ್ರವಾರ ಪೂರ್ವಾಹ್ನ ಗಂ.11:30ಕ್ಕೆ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಲಿದೆ. ಹರಿಕಥಾ ಪರಿಷತ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಂಟಿಯಾಗಿ ಆಯೋಜಿಸುವ ಈ ಕಾರ್ಯಕ್ರಮದಲ್ಲಿ ಖ್ಯಾತ ಉದ್ಯಮಿ ಹಾಗೂ ಮಾಜಿ ಸಚಿವರಾದ ಜೆ. ಕೃಷ್ಣ ಪಾಲೆಮಾರ್ ಕೃತಿ ಲೋಕಾರ್ಪಣೆ ಮಾಡುವರು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಡಾ. ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಲಿರುವರು. ಯಕ್ಷಗಾನ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿ ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್…
ಸುರತ್ಕಲ್ : ಸ್ಪರ್ಶ ಕಲಾವಿದರು ಸುರತ್ಕಲ್ ಮತ್ತು ಕಲಾಬ್ಧಿ ಲಲಿತ ಕಲಾ ಅಧ್ಯಯನ ಕೇಂದ್ರ ಗೋವಿಂದ ದಾಸ ಕಾಲೇಜು ಸುರತ್ಕಲ್ ಇವರ ಸಹಯೋಗದೊಂದಿಗೆ ‘ರಂಗ ಸಂಭ್ರಮ 2025’ ಸರಣಿ 3ರ ಕಾರ್ಯಕ್ರಮವನ್ನು ದಿನಾಂಕ 13 ಏಪ್ರಿಲ್ 2025ರಂದು ಸುರತ್ಕಲ್ ಗೋವಿಂದ ದಾಸ ಕಾಲೇಜು ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಸಂಜೆ 5-00 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಹಾಗೂ ಸ್ಪರ್ಶ ಕಲಾ ತಂಡದ ನವರಸ ಕಲಾವಿದರು ಸುರತ್ಕಲ್ ಇವರಿಂದ ವಿನೋದ್ ಶೆಟ್ಟಿ ಕೃಷ್ಣಾಪುರ ಇವರ ನಿರ್ದೇಶನದಲ್ಲಿ ‘ಎನ್ನಂದಿನ’ ತುಳು ಕುತೂಹಲಕಾರಿ ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ.
ತೆಕ್ಕಟ್ಟೆ : ಯಶಸ್ವೀ ಕಲಾವೃಂದ (ರಿ.) ಕೊಮೆ ತೆಕ್ಕಟ್ಟೆ, ಧಮನಿ ಟ್ರಸ್ಟ್ (ರಿ.) ತೆಕ್ಕಟ್ಟೆ ಮತ್ತು ಶ್ರೀ ಕೈಲಾಸ ಕಲಾಕ್ಷೇತ್ರ ಟ್ರಸ್ಟ್ ತೆಕ್ಕಟ್ಟೆ ಇವುಗಳ ಸಂಯುಕ್ತ ಆಶ್ರಯದಲ್ಲಿ ‘ಚಂದಕ್ಕಿ ಬಾರೇ ಕಥೆ ಹೇಳೆ’ ರಜಾ ರಂಗು 2025 ಬೇಸಿಗೆ ಶಿಬಿರವನ್ನು ದಿನಾಂಕ 11 ಏಪ್ರಿಲ್ 2025ರಿಂದ 04 ಮೇ 2025ರವರೆಗೆ ತೆಕ್ಕಟ್ಟೆ ಮಾದರಿ ಶಿಶುಮಂದಿರದ ನಿಸರ್ಗದಲ್ಲಿ ಆಯೋಜಿಸಲಾಗಿದೆ. ಈ ಮಕ್ಕಳ ಬೇಸಿಗೆ ಶಿಬಿರವು 8 ವರ್ಷದಿಂದ 16 ವರ್ಷದ ಮಕ್ಕಳಿಗಾಗಿ ರಂಗ ನಿರ್ದೇಶಕ ಡಾ. ಶ್ರೀಪಾದ ಭಟ್ ಮಾರ್ಗದರ್ಶನದಲ್ಲಿ ನೀನಾಸಂ, ರಂಗಾಯಣ ನಿರ್ದೇಶಕರುಗಳಿಂದ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ 8073998079 ಮತ್ತು 9945947771 ಸಂಖ್ಯೆಯನ್ನು ಸಂಪರ್ಕಿಸಿರಿ. 3ರಿಂದ 7 ವರ್ಷದ ಮಕ್ಕಳಿಗೆ ‘ವಸಂತ’ ಬೇಸಿಗೆ ಶಿಬಿರವು ದಿನಾಂಕ 10 ಏಪ್ರಿಲ್ 2025ರಿಂದ 20 ಏಪ್ರಿಲ್ 2025ರವೆರೆಗೆ ಸೇವಾ ಸಂಗಮ ಮಾದರಿ ಶಿಶುಮಂದಿರದ ನಡೆಯಲಿದ್ದು, ಮಾಹಿತಿಗಾಗಿ 7026056430 ಮತ್ತು 8277719289 ಸಂಖ್ಯೆಯನ್ನು ಸಂಪರ್ಕಿಸಿರಿ.
ಬೆಂಗಳೂರು : ರಂಗ ಸಂಭ್ರಮ 2025 ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ದಿನಾಂಕ 05 ಏಪ್ರಿಲ್ 2025ರಂದು ಸಂಜೆ 5-00 ಗಂಟೆಗೆ ನಡೆಯಲಿದ್ದು, ಈ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಶಿಯವರು ಉದ್ಘಾಟಿಸುವರು. ಈ ಸಂದರ್ಭದಲ್ಲಿ ನಾಡಿನ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸುವರು. ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಇವರಿಗೆ ಸಾಹಿತ್ಯ ಸೇವೆಗಾಗಿ ಪ್ರತಿಷ್ಠಿತ ‘ಪಂಪ ಸದ್ಭಾವನಾ’ ರಾಜ್ಯ ಪ್ರಶಸ್ತಿಯನ್ನು ನಿವೃತ ಲೋಕಾಯುಕ್ತ ಹಾಗೂ ನ್ಯಾಯಮೂರ್ತಿಗಳಾದ ಎನ್. ಸಂತೋಷ ಹೆಗ್ಡೆಯವರು ಪ್ರಧಾನ ಮಾಡುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರಾದ ಕೆ.ವಿ. ನಾಗರಾಜ್ ಬೆಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಲವಂತ ರಾವ್ ಪಾಟೀಲ್, ನಿವೃತ್ತ ಡಿ.ಸಿ. ಡಾ. ಡಿ. ವಿಶ್ವನಾಥ್, ಡಾ. ಲಕ್ಷ್ಮೀದೇವಿ ಬೆಂಗಳೂರು, ವೀರೇಶ್ ಮುತಿನ ಮಠ, ಕೆಂಚನೂರು ಶಂಕರ್ ಉಪಸ್ಥಿತರಿರುವರು. ಡಾ. ಮಾಲತಿ ಶೆಟ್ಟಿ ಮಾಣೂರು…
ಬೆಂಗಳೂರು : ಸೈಡ್ ವಿಂಗ್ (ರಿ.) ಬೆಂಗಳೂರು ಪ್ರಸ್ತುತ ಪಡಿಸುವ ಶೈಲೇಶ್ ಕುಮಾರ್ ಎಂ.ಎಂ. ಇವರ ರಚನೆ, ನಿರ್ಮಾಣ ಮತ್ತು ನಿದೇಶನದಲ್ಲಿ ‘ನನ್ನ್ಯಾಕ್ ಹುಟ್ಸುದ್ಯೋ ನನ್ನಪ್ನೇ’ ನಾಟಕ ಪ್ರದರ್ಶನವನ್ನು ದಿನಾಂಕ 05 ಏಪ್ರಿಲ್ 2025ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರದ ಸೇವಾ ಸದನದಲ್ಲಿ ಆಯೋಜಿಸಲಾಗಿದೆ. ಟಿಕೆಟ್ ದರ ರೂ.150/- ಆಗಿದ್ದು, ಹೆಚ್ಚಿನ ಮಾಹಿತಿಗಾಗಿ 9845087901 ಸಂಖ್ಯೆಯನ್ನು ಸಂಪರ್ಕಿಸಿರಿ.
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಶಸ್ತಿಗಳಲ್ಲೊಂದಾದ ‘ಸತ್ಯವತಿ ವಿಜಯರಾಘವ ಚಾರಿಟೇಬಲ್ ಟ್ರಸ್ಟ್ ಧರ್ಮದರ್ಶಿಗಳ ದತ್ತಿ ಪ್ರಶಸ್ತಿ’ಗೆ ಕನ್ನಡ ಹೋರಾಟಗಾರ ಗುರುದೇವ ನಾರಾಯಣ ಕುಮಾರ ಮತ್ತು ಲೇಖಕಿ ಡಿ.ಬಿ. ರಜಿಯಾ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ತಿಳಿಸಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜನಪದದ ಜೊತೆಗೆ ಕನ್ನಡ-ಕನ್ನಡಿಗ-ಕರ್ನಾಟಕ ಇವುಗಳ ರಕ್ಷಣೆ ಮತ್ತು ಅಭಿವೃದ್ಧಿಗಾಗಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿನ ಅಪಾರ ಗೌರವದಿಂದ ಮೈಸೂರಿನ ಡಾ. ಎ. ಪುಷ್ಪ ಅಯ್ಯಂಗಾರ್ ಅವರು ‘ಸತ್ಯವತಿ ವಿಜಯರಾಘವ ಚಾರಿಟೇಬಲ್ ಟ್ರಸ್ಟ್ ಧರ್ಮದರ್ಶಿ’ಗಳ ಹೆಸರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ನಿಧಿ ಇರಿಸಿದ್ದಾರೆ. ಕನ್ನಡ ನಾಡು, ನುಡಿ, ಜಲ ಕುರಿತ ಚಿಂತಕರು, ಕನ್ನಡ ಪರ ಹೋರಾಟಗಾರರು ಅಥವಾ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅನುಪಮ ಸೇವೆ ಸಲ್ಲಿಸಿದ ಇಬ್ಬರಿಗೆ ಪ್ರತಿ ವರ್ಷ ಪುರಸ್ಕಾರ ನೀಡಬೇಕೆಂಬುದು ದತ್ತಿದಾನಿಗಳ ಆಶಯ. 2024ನೆಯ ಸಾಲಿನ ಈ ಪುರಸ್ಕಾರಕ್ಕೆ…
ಪ್ರಜ್ವಲಾ ಶೆಣೈ ಕಾರ್ಕಳ ಇವರ ‘ಭರವಸೆಯ ಹೆಜ್ಜೆಗಳು’ ಎಂಬ ಕೃತಿಯು ಬದುಕಿನ ವಿವಿಧ ಆಯಾಮಗಳನ್ನು ಅನಾವರಣಗೊಳಿಸುವ 42 ಲೇಖನಗಳ ಸುಂದರ ಸಂಕಲನವಾಗಿದೆ. ಈ ಕೃತಿಯು ಪ್ರತಿಯೊಬ್ಬರ ದೈನಂದಿನ ಬದುಕಿನ ಅನೇಕ ಅಂಶಗಳನ್ನು ಸ್ಫುಟವಾಗಿ ಚರ್ಚಿಸುತ್ತದೆ. ಅದರಲ್ಲಿ ವ್ಯಕ್ತವಾಗುವ ಭಾವನೆಗಳು, ಯಥಾರ್ಥದ ಮೇಲಿನ ವಿಶ್ಲೇಷಣೆ ಮತ್ತು ಸುತ್ತಮುತ್ತಲಿನ ಸಾಮಾಜಿಕ-ನೈತಿಕ ಪ್ರಶ್ನೆಗಳ ಕುರಿತಾದ ಚಿಂತನೆ ಈ ಕೃತಿಯನ್ನು ಓದುಗರಿಗೆ ಹತ್ತಿರ ಮಾಡುತ್ತದೆ. ಪುಸ್ತಕದ ವಿಷಯ ಮತ್ತು ಶೈಲಿ : ಭರವಸೆಯ ಹೆಜ್ಜೆಗಳು ಪುಸ್ತಕದ ಲೇಖನಗಳು ಸರಳವಾಗಿಯೇ ಇರುವಂತಿದ್ದರೂ, ತೀವ್ರ ಅರ್ಥಭರಿತವಾಗಿವೆ. ಪ್ರತಿ ಲೇಖನವೂ ಒಂದು ವಿಶಿಷ್ಟ ಕಥೆಯನ್ನು ಹೊತ್ತಿದ್ದು, ಸಮಾಜದ ಪ್ರಬಲ ತಿರುಚುಗಳು, ವ್ಯಕ್ತಿಗಳ ಭಾವನೆಗಳು ಮತ್ತು ಜೀವನದ ಸತ್ಯಗಳ ಕುರಿತು ದರ್ಶನ ನೀಡುತ್ತದೆ. ಈ ಲೇಖನಗಳಲ್ಲಿ ಆಳವಾದ ವಿಚಾರಧಾರೆ, ನೈಜ ಅನುಭವಗಳ ಶಾಖಾ-ಪ್ರಶಾಖೆಗಳು ಮತ್ತು ಜೀವನದ ಸೂಕ್ಷ್ಮ ವೈಶಿಷ್ಟ್ಯಗಳನ್ನು ತೆರೆದಿಡುವ ಪ್ರಯತ್ನವಾಗಿದೆ. ಲೇಖನಗಳ ಶೈಲಿ ಬಹಳ ಪರಿಣಾಮಕಾರಿ ಮತ್ತು ಓದುಗರಿಗೆ ಹತ್ತಿರದ ರೀತಿಯಲ್ಲಿ ರೂಪುಗೊಂಡಿದೆ. ಪ್ರಜ್ವಲಾ ಶೆಣೈಯವರ ಬರವಣಿಗೆಯ ವಿಶೇಷತೆ ಅಂದರೆ, ಅವರು…
ಉಡುಪಿ : ಹಿರಿಯ ಕಲಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಇವರನ್ನು ಕರ್ನಾಟಕ ಲಲಿತ ಕಲಾ ಅಕಾಡೆಮಿಗೆ ಸಹ ಸದಸ್ಯರನ್ನಾಗಿ ನೇಮಕ ಮಾಡಿ ಅಕಾಡೆಮಿ ಆದೇಶ ಹೊರಡಿಸಿದೆ. ಉದಯವಾಣಿ ಮಣಿಪಾಲ ಆವೃತ್ತಿಯಲ್ಲಿ ಹಿರಿಯ ಪತ್ರಿಕಾ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸುತ್ತಿರುವ ಆಸ್ಟ್ರೋ ಮೋಹನ್ ಕಳೆದ ಮೂರುವರೆ ದಶಕಗಳಿಂದ ಸುದ್ದಿ ಹಾಗೂ ಕಲಾತ್ಮಕ ಛಾಯಾಗ್ರಹಣದಲ್ಲಿ ಸುಪ್ರಸಿದ್ಧರು. ಸುಮಾರು 750ಕ್ಕೂ ಅಧಿಕ ರಾಷ್ಟ್ರೀಯ-ಅಂತಾರಾಷ್ಟೀಯ ಪುರಸ್ಕಾರಗಳನ್ನು ಪಡೆದಿದ್ದಾರೆ. ಉಡುಪಿ – ಮಣಿಪಾಲ ಕುರಿತಂತೆ ಐದು, ಪೇಜಾವರ ಶ್ರೀ ಹಾಗೂ ಪತ್ರಿಕಾ ಛಾಯಾಗ್ರಹಣ ಕುರಿತಂತೆ ಎಂಟು ಪುಸ್ತಕಗಳು ಪ್ರಕಟವಾಗಿವೆ. ಆಂಧ್ರಪ್ರದೇಶ ಫೋಟೋಗ್ರಫಿ ಅಕಾಡೆಮಿಯೂ ಇವರ ಕೃತಿಗಳ ಕುರಿತಾಗಿ ಪುಸ್ತಕವನ್ನು ಪ್ರಕಟಿಸಿದೆ. ಫೋಟೋಗ್ರಫಿ ಸೊಸೈಟಿ ಆಫ್ ಅಮೆರಿಕ ಸಂಸ್ಥೆಯು ಆಸ್ಟ್ರೋ ಮೋಹನ್ ಇವರನ್ನು ಅಸಿಸ್ಟೆಂಟ್ ಕಂಟ್ರಿ ಮೆಂಬರ್ಶಿಪ್ ಡೈರೆಕ್ಟರ್ ಆಗಿ ಆಯ್ಕೆಮಾಡಿಕೊಂಡಿದೆ.
ಸೊರಬ : ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸೊರಬ ಶಿವಮೊಗ್ಗ ಜಿಲ್ಲೆ ಇದರ ವತಿಯಿಂದ ‘ಜಿಲ್ಲಾ ಮಟ್ಟದ ಯುಗಾದಿ ಕವಿಗೋಷ್ಠಿ -2025’ಯನ್ನು ದಿನಾಂಕ 06 ಏಪ್ರಿಲ್ 2025ರಂದು ಮಧ್ಯಾಹ್ನ 2-30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಹೆಸರನ್ನು ನೋಂದಾಯಿಸಲು 9611002416, 9632861570, 9741470173 ಮತ್ತು 9113820718 ಹಾಗೂ ಪ್ರವೇಶ ಶುಲ್ಕ ರೂ.100/- ಆಗಿದ್ದು, ಫೋನ್ ಪೇ ಸಂಖ್ಯೆ 9980571552 ಸಂಪರ್ಕಿಸಿರಿ.