Author: roovari

ಹೊಸದುರ್ಗ : ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯು 2024-25ನೇ ಸಾಲಿನ ರಂಗಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಪ್ರವೇಶಕ್ಕೆ ಕನಿಷ್ಟ ವಿದ್ಯಾರ್ಹತೆ ಎಸ್. ಎಸ್. ಎಲ್. ಸಿ. ಉತ್ತೀರ್ಣರಾಗಿರಬೇಕು ಮತ್ತು ಪದವೀಧರರಿಗೆ ಆದ್ಯತೆ ಇರುತ್ತದೆ. ರಂಗಭೂಮಿಯಲ್ಲಿ ಆಸಕ್ತಿ ಇದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕಾದದ್ದು ಅಗತ್ಯ. ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಊಟ ಹಾಗೂ ವಸತಿ ವ್ಯವಸ್ಥೆ ಇರುತ್ತದೆ. ಕರ್ನಾಟಕ ಹಾಗೂ ಭಾರತದ ರಂಗತಜ್ಞರಿಂದ ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಗ್ರಂಥಭಂಡಾರ, ದೃಶ್ಯ, ಶ್ರವ್ಯ ಹಾಗೂ ಪರಿಕರಗಳ ಅನುಕೂಲತೆ ಇದೆ. ರಂಗಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ, ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತವೆ. ವಿಳಾಸ : ಪ್ರಾಚಾರ್ಯರು ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ ಸಾಣೇಹಳ್ಳಿ-577515, ಹೊಸದುರ್ಗ ತಾಲೂಕು, ಚಿತ್ರದುರ್ಗ ಜಿಲ್ಲೆ ಈ ವಿಳಾಸಕ್ಕೆ ಬರೆದು ಪ್ರವೇಶ ಅರ್ಜಿಗಳನ್ನು ತರಿಸಿಕೊಳ್ಳಬಹುದು ಅಥವಾ ನಮ್ಮ ರಂಗಶಾಲೆಯ…

Read More

ಮಡಿಕೇರಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ ಕೊಡಗು ಇದರ ವತಿಯಿಂದ ಪರಿಸರ ಸಂರಕ್ಷಣೆ ಕುರಿತು ಕೊಡಗು ಜಿಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆಯು ದಿನಾಂಕ 01-06-2024ರಂದು ಮಡಿಕೇರಿಯ ಎ. ಎಲ್. ಜಿ. ಕ್ರೆಸೆಂಟ್ ಶಾಲೆಯಲ್ಲಿ ಬೆಳಗ್ಗೆ ಘಂಟೆ 9.30ರಿಂದ ನಡೆಯಲಿದೆ. ಸ್ಪರ್ಧೆಗೆ ಡ್ರಾಯಿಂಗ್ ಶೀಟ್ ಮಾತ್ರ ನೀಡಲಾಗುವುದು. ಚಿತ್ರ ಕಲೆಗೆ ಬೇಕಾಗುವ ಬಣ್ಣ ಇನ್ನಿತರೆ ವಸ್ತುಗಳನ್ನು ವಿದ್ಯಾರ್ಥಿಗಳೇ ತರಬೇಕು.ಈ ವರ್ಷದ ಘೋಷ ವಾಕ್ಯವು ‘ಭೂ ಮರುಸ್ಥಾಪನೆ’, ‘ಮರುಭೂಮೀಕರಣ’ ಹಾಗು ‘ಬರ ತಡೆಯುವಿಕೆ’ ಆಗಿರುತ್ತದೆ. ಆಸಕ್ತಿಯುಳ್ಳವರು ಸ್ಥಳದಲ್ಲಿಯೇ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಎಂ. ಜಿ. ರಘುರಾಮ್ ಪರಿಸರ ಅಧಿಕಾರಿಗಳು – 9845026348, ಆಸ್ಟಿನ್ ಕೆ. ಎ. ಯೋಜನಾ ಸಹಾಯಕರು – 7760738447 ( 08272- 221855) ಹಾಗೂ ಸ್ಥಳೀಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು (ಬಿ.ಇ.ಓ) ಇವರನ್ನು ಸಂಪರ್ಕಿಸಬಹುದು ಎಂದು ಕೊಡಗು ಪ್ರಾದೇಶಿಕ…

Read More

ಮಂಗಳೂರು : ಮಂಗಳೂರಿನ ಕೋಡಿಕಲ್ಲಿನ ಸರಯೂ ಮಕ್ಕಳ ಮೇಳದ ‘ಸರಯೂ ಸಪ್ತಾಹ-2024’ ಸಾಧಕ ಸನ್ಮಾನ, ಬಯಲಾಟಗಳು ಮತ್ತು ಮಹಿಳಾ ತಾಳ ಮದ್ದಳೆ ಕಾರ್ಯಕ್ರಮದ ಮೂರನೇ ದಿನದ ಕಾರ್ಯಕ್ರಮವು ದಿನಾಂಕ 27-05-2024ರಂದು ಮಂಗಳೂರಿನ ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ಸ್ವಾಮಿ ದೇವಳದ ರಾಜಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ವೇದಮೂರ್ತಿ ವೆಂಕಟ್ರಮಣ ಅಸ್ರಣ್ಣ ಮಾತನಾಡಿ “ಧರ್ಮ ಹಾಗೂ ನಂಬಿಕೆಯ ಮೇಲೆ ಯಕ್ಷಗಾನ ಬೆಳೆದಿದೆ. ಯಕ್ಷಗಾನವು ಶುದ್ಧ ಧಾರ್ಮಿಕ ಕಲೆ. ಧರ್ಮಪ್ರಸಾರದ ಜೊತೆ ಜೊತೆಯಲ್ಲೇ ನಮ್ಮ ಪೌರಾಣಿಕ ಮೌಲ್ಯಗಳನ್ನು ಪ್ರತಿಪಾದಿಸುತ್ತಾ ಸಾಗಿದೆ. ದೇವಿ ಮಹಾತ್ಮೆಯು ಜನಮಾನಸದಲ್ಲಿ ಅಚ್ಚಳಿಯದೇ ಉಳಿಯಲು ಅದೇ ಕಾರಣ. ಕ್ಷೇತ್ರಗಳ ಮೂಲಕ ಹೊರಡುವ ಮೇಳಗಳೂ ಇದೇ ಸಂದೇಶವನ್ನು ಸಾರುತ್ತಿವೆ. ಸರಯೂ ಮಕ್ಕಳ ಮೇಳವೂ ಇದೇ ತತ್ತ್ವದ ಮೇಲೆ ಬೆಳಗಲಿ” ಎಂದು ಆಶೀರ್ವಚನವಿತ್ತರು. ಇದೇ ಸಂದರ್ಭದಲ್ಲಿ ಕಟೀಲು ಮೇಳದ ಪ್ರಧಾನ ಸ್ತೀ ವೇಷಧಾರಿ ಶ್ರೀ ಅರಣ್ ಕುಮಾರ್ ಕೋಟ್ಯಾನ್ ಇವರಿಗೆ ‘ಯಕ್ಷ ಸರಯೂ’ ಬಿರುದು ನೀಡಿ ಸನ್ಮಾನಿಸಲಾಯಿತು. ಪೂರ್ಣಿಮಾ ಪ್ರಭಾಕರ ರಾವ್ ಅಭಿನಂದನಾ…

Read More

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು 2023ನೆಯ ಸಾಲಿನಲ್ಲಿ ಪುಸ್ತಕಗಳಿಗೆ ನೀಡಲಾಗುವ ವಿವಿಧ ದತ್ತಿ ಪುರಸ್ಕಾರಗಳಿಗಾಗಿ ಪುಸ್ತಕಗಳನ್ನು ಆಹ್ವಾನಿಸಿತ್ತು, 01-01 2023 ರಿಂದ 31-12-2023 ರೊಳಗೆ ಪ್ರಕಟಗೊಂಡ ಪುಸ್ತಕಗಳನ್ನು ಲೇಖಕರು ಅಥವಾ ಪ್ರಕಾಶಕರು ಕಳಿಸಿಕೊಡಬಹುದು, 31-05-2024ಕೊನೆ ದಿನವೆಂದು ಈ ಹಿಂದಿನ ಪ್ರಕಟಣೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ತಿಳಿಸಿದ್ದರು. ನಾಡಿನೆಲ್ಲೆಡೆಯಿಂದ ಸಾಹಿತ್ಯಾಸಕ್ತರು, ಬರಹಗಾರರು ಕೊನೆಯ ದಿನವನ್ನು ವಿಸ್ತರಿಸುವಂತೆ ಕೋರಿದ್ದರಿಂದ ಕೊನೆಯ ದಿನವನ್ನು 15-06-2024ರ ವರೆಗೆ ವಿಸ್ತರಿಸಲಾಗಿದ್ದು, ಸಾಹಿತ್ಯಾಸಕ್ತರು ಇದರ ಸದುಪಯೋಗ ಪಡೆದು ಕೊಳ್ಳಬೇಕೆಂದು ತಿಳಿಸಿದ್ದಾರೆ. 2023ನೆಯ ಸಾಲಿನಲ್ಲಿ ಪ್ರಕಟಗೊಂಡಿರುವ ಒಟ್ಟು 53 ವಿವಿಧ ಪುಸ್ತಕಗಳಿಗೆ ದತ್ತಿ ಪುರಸ್ಕಾರಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ನೀಡುತ್ತಿದೆ. ಅದಕ್ಕಾಗಿ ಅನೇಕ ದತ್ತಿ ದಾನಿಗಳು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ನಿಧಿಯನ್ನು ಸ್ಥಾಪಿಸಿದ್ದು, ಒಟ್ಟಾರೆ 57ವಿವಿಧ ಪ್ರಕಾರಗಳ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಪ್ರತಿ ದತ್ತಿ ಪ್ರಶಸ್ತಿಯ ಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು, ಯಾವ ದತ್ತಿಗಾಗಿ ಎನ್ನುವುದನ್ನು ಪುಸ್ತಕದ ಮೊದಲ ಪುಟದಲ್ಲಿ ಸ್ಪಷ್ಟವಾಗಿ ಬರೆದು…

Read More

ಬೆಂಗಳೂರು : ಅಂತರಂಗ ಬಹಿರಂಗ ತಂಡ ಮತ್ತು ಕಲ್ಪವೃಕ್ಷ ಟ್ರಸ್ಟ್ ಇದರ ವತಿಯಿಂದ ವನಿತೆಯರ ವಿನೂತನ ನಗೆ ನಾಟಕ ‘ಬಾಯ್ ತುಂಬ ನಕ್ಬಿಡಿ’ ನಾಟಕ ಪ್ರದರ್ಶನವು ದಿನಾಂಕ 01-06-2024ರಂದು ಸಂಜೆ ಗಂಟೆ 7-00ಕ್ಕೆ ಬೆಂಗಳೂರಿನ ಬಸವನಗುಡಿಯಲ್ಲಿರುವ ವಾಡಿಯಾ ಸಭಾಂಗಣದಲ್ಲಿ ನಡೆಯಲಿದೆ. ನಾಗವೇಣಿ ರಂಗನ್ ರಚಿಸಿರುವ ಈ ನಾಟಕವನ್ನು ವನಿತಾ ರಂಗಾಯಣ ನಿರ್ದೇಶನ ಮಾಡಿರುತ್ತಾರೆ. ರಂಗಭೂಮಿಯಲ್ಲಿ ಹೊಸ ಪ್ರಯತ್ನಗಳು, ಪ್ರಯೋಗಗಳು ನಡೆಯುವುದು ಸಹಜ. ನಾನಾ ಹೊಸತನದ ಪ್ರಯತ್ನಗಳು ನಡೆಯುತ್ತಲೇ ಇರುತ್ತವೆ ಕೂಡ. ಈ ನಿಟ್ಟಿನಲ್ಲಿ ಅಂತರಂಗ ಬಹಿರಂಗ ತಂಡ ಹೊಸತನವನ್ನು ಪ್ರೇಕ್ಷಕರಿಗೆ ನೀಡಬೇಕು ಎಂಬ ಉದ್ದೇಶದಿಂದ ಸಾಕಷ್ಟು ಚರ್ಚೆಗಳು ನಡೆದವು. ಈ ಹಿಂದೆ ಆದ ಹೊಸ ಪ್ರಯೋಗಗಳನ್ನೆಲ್ಲ ಬಿಟ್ಟು ಬೇರೇನಾದರೂ ಕೌತುಕವನ್ನು ಪ್ರೇಕ್ಷಕರಿಗೆ ನೀಡಬೇಕು ಎಂದಾಗ ರೂಪಗೊಂಡಿದ್ದೆ ಈ ‘ವನಿತೆಯರ ವಿನೂತನ ನಗೆ ನಾಟಕ’. ಈ ನಾಟಕದಲ್ಲಿ ರಚನೆ, ನಿರ್ದೇಶನ, ನಟಿಯರು, ತಂತ್ರಜ್ಞರು ಎಲ್ಲರೂ ಮಹಿಳೆಯರೇ. ಇದೊಂದು ವೃತ್ತಿ ಮತ್ತು ಹಾವ್ಯಾಸಿ ರಂಗಭೂಮಿಯಲ್ಲಿ ಹೊಸ ಅಧ್ಯಾಯವೇ ಸರಿ. ಈ ಅಧ್ಯಾಯವನ್ನು ಅಂತರಂಗ ಬಹಿರಂಗ…

Read More

ಭೀಮನಕೋಣೆ : ಸ್ವರಾಂಜಲಿ (ರಿ.) ಭೀಮನಕೋಣೆ ಹಾಗೂ ಧಾರೇಶ್ವರ ಸ್ನೇಹ ಬಳಗ ಇದರ ವತಿಯಿಂದ ಶ್ರೀ ಸುಬ್ರಹ್ಮಣ್ಯ ಧಾರೇಶ್ವರ ನೆನಪಿನಂಗಳದಲ್ಲಿ ‘ಗಾನ ಮನನ’ ಕಾರ್ಯಕ್ರಮವು ದಿನಾಂಕ 01-06-2024ರಂದು ಸಂಜೆ ಗಂಟೆ 5-30ಕ್ಕೆ ಭೀಮನಕೋಣೆ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ಕಲ್ಯಾಣ ಮಂದಿರದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸೃಜನ್ ಹೆಗಡೆ ಮತ್ತು ರಾಘವೇಂದ್ರ ಭಟ್ ನಿಟ್ಟೂರು ಭಾಗವತರು, ಶ್ರೀನಿಧಿ ಎಸ್. ಭಟ್ ಸಂಗೀತ, ಶರತ್ ಹೆಗಡೆ ಮತ್ತು ನಾಗಭೂಷಣ ಕೇಡಲಸರ ಮದ್ದಳೆ ಹಾಗೂ ಭಾರ್ಗವ ಕೆ.ಎಸ್. ಚಂಡೆಯಲ್ಲಿ ಸಹಕರಿಸಲಿದ್ದಾರೆ.

Read More

ಕಳೆದ ಸುಮಾರು ನಾಲ್ಕೂವರೆ ದಶಕಗಳಿಂದ ಕನ್ನಡ ಮತ್ತು ತುಳು ಸಾಹಿತ್ಯಕ್ಷೇತ್ರದಲ್ಲಿ ತಮ್ಮ ಕಥೆ, ಕವನ, ಕಾದಂಬರಿ, ವಿಮರ್ಶೆ, ಸಂಪಾದನೆ ಅಂಕಣ ಮತ್ತು ಅನುವಾದ ಹಾಗೂ ಸಂಘಟನೆ ಮಾಧ್ಯಮ ಮುಂತಾದ ಬೇರೆ ಬೇರೆ ಪ್ರಕಾರ ಮತ್ತು ಕ್ಷೇತ್ರಗಳಲ್ಲಿ ದುಡಿಯುತ್ತ ವ್ಯಕ್ತಿತ್ವದ ವಿಶಿಷ್ಟ ಛಾಪು ಮೂಡಿಸಿರುವ ವಿದ್ವಾಂಸ ಮತ್ತು ವಾಗ್ಮಿ ಡಾ. ವಸಂತಕುಮಾರ ಪೆರ್ಲ ಅವರ ಮುನ್ನುಡಿ ಮತ್ತು ವಿಮರ್ಶೆಗಳ ಸಂಕಲನ ‘ಮದಿಪುದ ಪಾತೆರೊಲು’ ಲೇಖಕರ ಖಚಿತ ನಿಲುವು ಮತ್ತು ಸ್ಪಷ್ಟ ಧೋರಣೆಗಳಿಗಾಗಿ ಮುಖ್ಯವಾಗುವ ಒಂದು ಕೃತಿ. ಒಡಿಯೂರಿನ ಶ್ರೀ ಗುರುದೇವ ಪ್ರಕಾಶನ ಈ ಕೃತಿಯನ್ನು ಪ್ರಕಟಿಸಿದ್ದು (2021) ತುಳು ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಸ್ಥಾನ ಗಳಿಸಿಕೊಂಡಿದೆ. ಈ ಕೃತಿಯಲ್ಲಿ ವಿಮರ್ಶಾ ರೂಪದ ಒಟ್ಟು 25 ಲೇಖನಗಳಿವೆ. ಕಳೆದ ಮೂವತ್ತು ವರ್ಷಗಳ ಅವಧಿಯಲ್ಲಿ ತುಳುವಿನ ಬೇರೆ ಬೇರೆ ಲೇಖಕರ ಪುಸ್ತಕಗಳಿಗೆ ಬರೆದ ಮುನ್ನುಡಿ ಹಾಗೂ ವಿಮರ್ಶೆಗಳ ಸಂಕಲನ ಇದು ಎಂದು ಲೇಖಕರು ಆರಂಭದಲ್ಲಿ ತನ್ನ ಮಾತಿನಲ್ಲಿ ತಿಳಿಸಿದ್ದಾರೆ. ತುಳುವಿನಲ್ಲಿ ನಾಟಕ, ಕವನ ಮತ್ತು ಯಕ್ಷಗಾನ…

Read More

ಮಡಿಕೇರಿ : ಕೊಡವ ಮಕ್ಕಡ ಕೂಟದ 91ನೇ ಪುಸ್ತಕವಾಗಿ ಚೇರಂಬಾಣೆಯ ಕೊಳಗದಾಳು ಗ್ರಾಮದವರಾದ ಲೇಖಕಿ ಚೀರಮ್ಮನ ವಾಣಿ ಚಂಗುವಮ್ಮಯ್ಯ ಅವರ 3ನೇ ಪುಸ್ತಕ ಕೊಡವ ಭಾಷೆಯ ‘ತಾಳ್ಮೆರ ತಾವರೆ’ ಇದರ ಲೋಕಾರ್ಪಣಾ ಸಮಾರಂಭವು ದಿನಾಂಕ 27-05-2024ರಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆಯಿತು. ಪುಸ್ತಕ ಲೋಕಾರ್ಪಣೆಗೊಳಿಸಿದ ಹಿರಿಯ ಸಾಹಿತಿ ಬಾಚಮಂಡ ಗೌರಮ್ಮ ಮಾದಮ್ಮಯ್ಯ ಮಾತನಾಡಿ “’ತಾಳ್ಮೆರ ತಾವರೆ’ ಪುಸ್ತಕದ ಲೇಖಕಿ ಚೀರಮ್ಮನ ವಾಣಿ ಚಂಗುವಮ್ಮಯ್ಯ ವಿಶೇಷ ಚೇತನಳಾಗಿ ಮನೆಯಲ್ಲೇ ಅಕ್ಷರಭ್ಯಾಸ ಮಾಡಿ ಸಾಹಿತ್ಯ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ.” ಎಂದರು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಸಾಹಿತಿ ಪಿ. ಎಸ್. ವೈಲೇಶ್‌ ಮಾತನಾಡಿ “ಸಂಸ್ಕೃತಿ, ಪರಂಪರೆ, ಪದ್ಧತಿ ಮತ್ತು ಆಚಾರ ವಿಚಾರಗಳು ಉಳಿಯಬೇಕಾದರೆ ಸಾಹಿತ್ಯ ಕ್ಷೇತ್ರದ ಬೆಳವಣಿಗೆ ಅಗತ್ಯವಾಗಿದೆ. ಕೊಡಗಿನ ಆಚಾರ, ವಿಚಾರ, ಸಂಸ್ಕೃತಿ, ಪದ್ಧತಿ, ಪರಂಪರೆ ಇಂದಿಗೂ ಶ್ರೀಮಂತವಾಗಿರಲು ಸಾಹಿತ್ಯವೇ ಕಾರಣ. ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ, ಕೊಡಗಿನ ಗೌರಮ್ಮ ಸೇರಿದಂತೆ ಅನೇಕ ಹಿರಿಯ ಸಾಹಿತಿಗಳ…

Read More

ತುಮಕೂರು : ತುಮಕೂರಿನ ವೀಚಿ ಸಾಹಿತ್ಯ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ 2023ನೇ ಸಾಲಿನ ‘ವೀಚಿ ಸಾಹಿತ್ಯ ಪ್ರಶಸ್ತಿ’ಗೆ ಡಾ. ಬಿ. ಜನಾರ್ದನ ಭಟ್ ಅವರ ‘ವಿನೂತನ ಕಥನ ಕಾರಣ’ (ವಿಮರ್ಶೆ) ಮತ್ತು ಡಾ. ರವಿಕುಮಾರ್ ನೀಹ ಅವರ ‘ಅರಸು ಕುರನ್ಗರಾಯ’ (ಸಂಶೋಧನೆ) ಕೃತಿಗಳು ಆಯ್ಕೆಯಾಗಿವೆ. ಪ್ರಶಸ್ತಿಯು ರೂ.25,000/- ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಈ ಪ್ರಶಸ್ತಿಗೆ ಎರಡು ಕೃತಿಗಳು ಆಯ್ಕೆಯಾಗಿರುವುದರಿಂದ ಪ್ರಶಸ್ತಿ ಮೊತ್ತವನ್ನು ಇಬ್ಬರು ಲೇಖಕರಿಗೂ ಸಮನಾಗಿ ಹಂಚಲು ನಿರ್ಧರಿಸಲಾಗಿದೆ. ‘ವೀಚಿ ಯುವ ಪ್ರಶಸ್ತಿ’ಗೆ ದಯಾನಂದ ಅವರ ‘ಬುದ್ಧನ ಕಿವಿ’ (ಕತೆಗಳು) ಕೃತಿ ಆಯ್ಕೆಯಾಗಿದೆ. ಪ್ರಶಸ್ತಿಯು ರೂ.5,000/- ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಸಾಹಿತಿಗಳಾದ ಎಚ್. ದಂಡಪ್ಪ, ಎಸ್. ಗಂಗಾಧರಯ್ಯ, ಗೀತಾ ವಸಂತ ಅವರನ್ನು ಒಳಗೊಂಡ ಆಯ್ಕೆ ಸಮಿತಿಯು ಹಿಂದಿನ ವರ್ಷದ ಸಾಹಿತ್ಯ ಕೃತಿಗಳನ್ನು ಅವಲೋಕನ ಮಾಡಿ ಈ ಆಯ್ಕೆ ಮಾಡಿದೆ ಎಂದು ವೀಚಿ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಎಂ.ಎಚ್. ನಾಗರಾಜ್ ತಿಳಿಸಿದ್ದಾರೆ. ವೀಚಿ ಸಾಹಿತ್ಯ ಪ್ರತಿಷ್ಠಾನ ನಡೆದು…

Read More

ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಮಂಗಳೂರು ಘಟಕದ ಪಂಚಮ ವಾರ್ಷಿಕ ಸಮಾರಂಭವು ಪುರಭವನದಲ್ಲಿ ದಿನಾಂಕ 23-05-2024ರಂದು ಜರಗಿತು. ಈ ಕಾರ್ಯಕ್ರಮ ಉದ್ಘಾಟಿಸಿದ ಜಪ್ಪು ಅರಕೆರೆಬೈಲ್‌ನ ಅಂಬಾ ಮಹೇಶ್ವರಿ ಭಜನಾ ಮಂಡಳಿಯ ಅಧ್ಯಕ್ಷ ಸೀತಾರಾಮ್ ಎ. ಮಾತನಾಡಿ, “ಯಕ್ಷಗಾನ ಕಲಾವಿದರ ಆಶಾಕಿರಣವಾಗಿರುವ ಯಕ್ಷಧ್ರುವ ಸಂಘಟನೆಯ ಸೇವಾ ಕಾರ್ಯ ಸ್ತುತ್ಯರ್ಹವಾಗಿದೆ” ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಜಪ್ಪು ಬಂಟರ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಮಾತನಾಡಿ “ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟಿನ ದೇಶ-ವಿದೇಶಗಳಲ್ಲಿರುವ ವಿವಿಧ ಘಟಕಗಳಲ್ಲಿ ಮಂಗಳೂರು ಘಟಕವು ಸದಾ ಮುಂಚೂಣಿಯಲ್ಲಿದ್ದು, ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಾದರಿಯಾಗಿದೆ” ಎಂದರು. ಒಡಿಯೂರು ಶ್ರೀ ಗುರುದೇವಾನಂದ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ರೈ, ಉದ್ಯಮಿಗಳಾದ ಗಣೇಶ್ ಶೆಟ್ಟಿ ಮಿಜಾರು, ಕಲ್ಲಾಡಿ ಪಾತೂರು ಧೂಮಾವತಿ ದೇವಸ್ಥಾನದ ಅಧ್ಯಕ್ಷ ಚಂದ್ರಹಾಸ ರೈ, ಲಯನ್ಸ್ ಕ್ಲಬ್ ಕಲ್ಪವೃಕ್ಷ-ಪಂಪ್ ವೆಲ್‌ನ ಸ್ಥಾಪಕಾಧ್ಯಕ್ಷ ರಾಜೇಶ್ ಶೆಟ್ಟಿ ಶಬರಿ ಮುಖ್ಯ ಅತಿಥಿಗಳಾಗಿ ಶುಭ ಹಾರೈಸಿದರು. ಶಾಸಕ ವೇದವ್ಯಾಸ ಕಾಮತ್, ಯಕ್ಷಧ್ರುವ ಪಟ್ಲ…

Read More