Subscribe to Updates
Get the latest creative news from FooBar about art, design and business.
Author: roovari
ಚಿತ್ರದುರ್ಗ : ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಮಧ್ಯ ಕರ್ನಾಟಕ-ಕಾವ್ಯ ಸಂಭ್ರಮ ಕಾರ್ಯಕ್ರಮವು ದಿನಾಂಕ 27 ಜುಲೈ 2025ರಂದು ಚಿತ್ರದುರ್ಗದ ಪಿಳ್ಳೇಕಾರನ ಹಳ್ಳಿಯ ಬಾಪೂಜಿ ಸಮೂಹ ವಿದ್ಯಾಸಂಸ್ಥೆಯಲ್ಲಿ ನಡೆಯಲಿದೆ. ರಾಜ್ಯ ಶರಣ ಸಾಹಿತ್ಯ ಪರಿಷತ್ತು ಬೆಂಗಳೂರು ಇದರ ಉಪಾಧ್ಯಕ್ಷರಾದ ಡಾ. ಎಂ. ಕೆ. ವೀರೇಶ ಚಿತ್ರದುರ್ಗ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಚಿತ್ರದುರ್ಗದ ಅಪರ ಜಿಲ್ಲಾಧಿಕಾರಿಗಳಾದ ಶ್ರೀ ಬಿ. ಟಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಎಲ್ಲ ತಾಲೂಕುಗಳಿಂದ ತಲಾ ಒಬ್ಬರು ಕವಿ ಮತ್ತು ಕವಯತ್ರಿಯರು ಭಾಗವಹಿಸಲಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ. ವಾಮದೇವಪ್ಪ “ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತನ್ನ ವ್ಯಾಪ್ತಿಯಲ್ಲಿ ಬರುವ ಎಲ್ಲ ತಾಲೂಕು ಘಟಕಗಳ ಅಧ್ಯಕ್ಷರೊಂದಿಗೆ ಚರ್ಚಿಸಿ ಪ್ರತೀ ತಾಲೂಕಿನಿಂದ ತಲಾ ಒಬ್ಬರು ಕವಿ, ಒಬ್ಬರು ಕವಯಿತ್ರಿ ಸೇರಿದಂತೆ ಇಬ್ಬರನ್ನು ಆಯ್ಕೆ ಮಾಡಲಾಗಿದೆ. ದಾವಣಗೆರೆ ತಾಲೂಕಿನಿಂದ ಸನಾವುಲ್ಲಾ ನವಿಲೇಹಾಳ್…
ಕುರುಡಪದವು : ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ ಔಚಿತ್ಯ ಪೂರ್ಣ ಉದ್ಘಾಟನೆಯೊಂದಿಗೆ ಸಾಹಿತ್ಯ ಕಮ್ಮಟ ಕಾರ್ಯಕ್ರಮವು ದಿನಾಂಕ 17 ಜುಲೈ 2025ರಂದು ಕುರುಡಪದವಿನ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತವಾಗಿ ಜರಗಿತು. ಶಾಲಾ ಶಿಕ್ಷಕಿ ಅರ್ಚನಾ ಟೀಚರ್ ಪ್ರಾರ್ಥನೆ ಹಾಡುವುದರೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಅಧ್ಯಕ್ಷತೆ ವಹಿಸಿದ್ದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಬಷೀರ್ ಸಾಪ್ಕೋ ಇವರು ಅಧ್ಯಕ್ಷೀಯ ಭಾಷಣದ ಮೂಲಕ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಪದ್ಮನಾಭ ಬರ್ಲಾಯ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಪನ್ಮೂಲ ವ್ಯಕ್ತಿಗಳಾದ ಕುರಿಯ ವಿಠಲ ಶಾಸ್ತ್ರಿ ಸ್ಮಾರಕ ಪ್ರೌಢಶಾಲೆಯ ನಿವೃತ್ತ ಅಧ್ಯಾಪಕರಾದ ಶ್ರೀಪತಿ ಭಟ್ ಪದ್ಯಾಣ ಮತ್ತು ಸಾಹಿತಿ, ಶಿಕ್ಷಕಿಯೂ ಆದ ಶ್ರೀಮತಿ ನಯನ ಗೌರಿ ಸೇರಾಜೆ ಕಾರ್ಯಕ್ರಮವನ್ನು ಜಾನಪದ ಹಾಡಿನೊಂದಿಗೆ ಸಂಯುಕ್ತವಾಗಿ ಉದ್ಘಾಟಿಸಿದರು. ತದನಂತರ ಸಂಪನ್ಮೂಲ ವ್ಯಕ್ತಿಗಳಿಬ್ಬರನ್ನು ಶಾಲಾ ವತಿಯಿಂದ ಆದರಪೂರ್ವಕವಾಗಿ ಗೌರವಿಸಲಾಯಿತು. ಶಾಲಾ ಹಿರಿಯ ಶಿಕ್ಷಕರಾದ ಗಿರೀಶ್ ಸರ್ ಎಲ್ಲರನ್ನು ಸ್ವಾಗತಿಸಿ, ಶಿಕ್ಷಕರಾದ ಪ್ರಶಾಂತ್ ಕುಮಾರ್ ಅಮ್ಮೇರಿ ವಂದಿಸಿದರು. ಹಿಂದಿ ಶಿಕ್ಷಕರು, ವಿದ್ಯಾರಂಗ…
ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ದ.ಕ. ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ಪಾಂಡೇಶ್ವರ ಜಂಟಿ ಆಶ್ರಯದಲ್ಲಿ 110ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ದಿನಾಂಕ 26 ಜುಲೈ 2025ರಂದು ಮಂಗಳೂರಿನ ಪಾಂಡೇಶ್ವರ ಸರಕಾರಿ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ. ಕ. ಜಿ. ಪ ಹಿರಿಯ ಪ್ರಾಥಮಿಕ ಶಾಲೆ ಪಾಂಡೇಶ್ವರ ಇಲ್ಲಿನ ಮುಖ್ಯೋಪಾಧ್ಯಾಯರಾದ ಹೆಚ್. ಕೆ. ಶಾಲಿನಿ ಅವರು ವಹಿಸಿದರು. ಮುಖ್ಯಸಂಪನ್ಮೂಲ ಅತಿಥಿಗಳಾಗಿ ದ. ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ ಕೋಶಾಧಿಕಾರಿ ಹಾಗೂ ವಾರ್ತಾಭಾರತಿ ದೈನಿಕ ಪತ್ರಿಕೆಯ ಚೀಪ್ ಬ್ಯೂರೋ ಆಗಿರುವ ಪುಷ್ಪರಾಜ್ ಬಿ. ಎನ್., ಶಿಕ್ಷಕಿ ಮತ್ತು ಲೇಖಕಿಯಾದ ಶ್ರೀಮತಿ ರೇಖಾ ಸುದೇಶ್ ರಾವ್, ನಿವೃತ್ತ ಶಿಕ್ಷಕಿ ಹಾಗೂ ಲೇಖಕಿಯಾದ ಸುಧಾ ನಾಗೇಶ ಭಾಗವಹಿಸಿದರು . ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಹಾಗೂ ಲೇಖಕಿ ಸುರೇಖಾ ಯಾಳವಾರ ವೇದಿಕೆಯಲ್ಲ ಉಪಸ್ಥಿತರಿದರು.
ಮಂಗಳೂರು : ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿರುವ ರಾಮಕೃಷ್ಣ ಕಾಲೇಜಿನಲ್ಲಿ ಯಕ್ಷ ಶರತ್ ತಂಡ ಪ್ರದರ್ಶಿಸಿದ ‘ಜಾಂಬವತಿ ಕಲ್ಯಾಣ’ ಯಕ್ಷಗಾನದ ಪ್ರದರ್ಶನವು ದಿನಾಂಕ 25 ಜುಲೈ 2025ರಂದು ಕಾಲೇಜಿನ ಯಕ್ಷವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಯ ಪದವಿ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಅನಸೂಯಾ ರೈ ಮಾತನಾಡಿ “ಯಕ್ಷಗಾನವು ವಿವಿಧ ಮಾಧ್ಯಮಗಳಿಂದ ವಿಶ್ವದ ಎಲ್ಲೆಡೆಯ ಕಲಾರಸಿಕರನ್ನು ತನ್ನಡೆಗೆ ಸೆಳೆಯುತ್ತದೆ. ದೃಶ್ಯ-ಶ್ರಾವ್ಯ ಕಲೆಯಾದ ಈ ಶ್ರೀಮಂತ ಕಲೆಯನ್ನು ಆರಾಧಿಸುವ ಒಂದು ವರ್ಗವೇ ಬೆಳೆಯುತ್ತಿದೆ. ಶಾಲಾ ಕಾಲೇಜುಗಳಲ್ಲಿ ಕೂಡಾ ಅದನ್ನು ವಿದ್ಯಾರ್ಥಿಗಳಿಗೆ ಕಲಿಸುವ ವ್ಯವಸ್ಥೆ ಈಗಿದೆ ಇನ್ನು ಅದನ್ನು ಕಲಿಯುವ ಯುವ ಜನಾಂಗವೂ ಅಧಿಕವಾಗಿದೆ. ಗಂಡು- ಹೆಣ್ಣುಗಳೆಂಬ ಪ್ರಬೇಧವಿಲ್ಲದೇ ಇಂದು ಯಕ್ಷಗಾನ ಎಲ್ಲರಿಗೂ ಬೇಕಾಗಿರುವ ಅಂತೆಯೇ ಜೀವನ ಮೌಲ್ಯಗಳನ್ನು ವಿವರಿಸುವ ಕಲೆಯೂ ಹೌದು” ಎಂದರು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲ ಶ್ರೀ ಧನರಾಜ್, ಉಪಪ್ರಾಂಶುಪಾಲೆ ಶೀಮತಿ ಪ್ರತಿಮಾ ಶೆಟ್ಟಿ, ಪದವಿಪೂರ್ವ ಕಾಲೇಜಿನ ಶ್ರೀಮತಿ ಯಶೋದಾ ಶೆಟ್ಟಿ, ಪ್ರೌಢಶಾಲಾ ಪ್ರಾಂಶುಪಾಲೆ ಪ್ರೆಸಿಲ್ಲಾ ಮೇಡಂ ಉಪಸ್ಥಿತರಿದ್ದರು. ಶ್ರೀರಾಮಕೃಷ್ಣ ವಿದ್ಯಾಸಂಸ್ಥೆಗಳ…
ಪರ್ಕಳ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ಯಕ್ಷಗಾನ ಕೇಂದ್ರ ಪರ್ಕಳ ಮತ್ತು ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಮತ್ತು ಉಡುಪಿ ಘಟಕ ಇವರ ಜಂಟಿ ಆಶ್ರಯದಲ್ಲಿ ‘ಬಡಗುತಿಟ್ಟು – ನಾಟ್ಯ ತರಬೇತಿ’ಯನ್ನು ದಿನಾಂಕ 27 ಜುಲೈ 2025ರಂದು ಬೆಳಗ್ಗೆ 10-00 ಗಂಟೆಗೆ ಪರ್ಕಳ ಯಕ್ಷಗಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ನುರಿತ ಯಕ್ಷ ಶಿಕ್ಷಕರಿಂದ ನಾಟ್ಯ, ಮಾತುಗಾರಿಕೆ, ಮುಖವರ್ಣಿಕೆ, ವೇಷಭೂಷಣ, ಸಂಪನ್ಮೂಲ ವ್ಯಕ್ತಿಗಳಿಂದ ಪುರಾಣ ಪರಿಚಯ ಮತ್ತು ರಂಗ ಮಾಹಿತಿಯನ್ನು ಒಳಗೊಂಡ ಸಮಗ್ರ ಅಧ್ಯಯನ ಇದಾಗಿದೆ. ನೋಂದಣಿಗಾಗಿ ಮುರಳೀಧರ ನಕ್ಷತ್ರಿ 94491 06448 ಮತ್ತು ರತನ್ ರಾಜ್ ರೈ 9741497920 ಸಂಖ್ಯೆಯನ್ನು ಸಂಪರ್ಕಿಸಿರಿ.
ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಇದರ ಸಹಯೋಗದಲ್ಲಿ ‘ಭೀಷ್ಮ ಭಾರತ’ ತಾಳಮದ್ದಳೆ ಸಪ್ತಾಹ ದಿನಾಂಕ 25 ಜುಲೈ 2025ರಂದು ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಳದಲ್ಲಿ ಉದ್ಘಾಟನೆಗೊಂಡಿತು. ದೀಪ ಬೆಳಗಿಸಿ ಸಪ್ತಾಹಕ್ಕೆ ಚಾಲನೆ ನೀಡಿದ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರೂ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರೂ ಆದ ಮೇಗಿನಗುತ್ತು ಶಿವನಾಥ ರೈ ಕಾರ್ಯಕ್ರಮಕ್ಕೆ ಶುಭ ಕೋರಿದರು. ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿ ಸಪ್ತಾಹದ ಯಶಸ್ಸಿಗೆ ಎಲ್ಲರೂ ಸಹಕಾರ ಬೇಕು ಎಂದರು. ಡಾ. ಸೀತಾರಾಮ ಭಟ್, ವ್ಯವಸ್ಥಾಪಕರು ಶ್ರೀ ರಾಘವೇಂದ್ರ ಮಠ ಕಲ್ಲಮೆ ಹಾಗೂ ಸರ್ವೆ ಶ್ರೀ ದೇವಳದ ಅರ್ಚಕ ಶ್ರೀ ರಾಮ ಕಲ್ಲೂರಾಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಹರಿಣಾಕ್ಷಿ ಜೆ. ಶೆಟ್ಟಿ ಹಾಗೂ ಆನಂದ ಸವಣೂರು ಅತಿಥಿಗಳಿಗೆ ಶಾಲು ಹೊದಿಸಿ ಗೌರವಿಸಿದರು. ಸಂಘದ ಹಿರಿಯ ಕಲಾವಿದ…
ಮಣಿಪುರ : ಸರಕಾರಿ ಪ್ರೌಢಶಾಲೆ ಮಣಿಪುರ ಇಲ್ಲಿ ದಿನಾಂಕ 22 ಜುಲೈ 2025ರ ಮಂಗಳವಾರದ೦ದು ಯಕ್ಷಗಾನ ಕಲಾರಂಗ ಮತ್ತು ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇವರ ಸಹಕಾರದೊಂದಿಗೆ ನಡೆಯುವ 2025 -26 ನೇ ಸಾಲಿನ ಯಕ್ಷಗಾನ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಗಣ್ಯರ ಸಮ್ಮುಖದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿದ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಶ್ರೀ ಮುರಲಿ ಕಡೆಕಾರ್ ಟ್ರಸ್ಟಿನ ವತಿಯಿಂದ ಯಕ್ಷಗಾನ ತರಬೇತಿ ಮತ್ತು ವಿದ್ಯಾರ್ಥಿಗಳಿಗೆ ಒದಗಿಸುತ್ತಿರುವ ಸೌಲಭ್ಯಗಳ ಬಗ್ಗೆ ತಿಳಿಸಿ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಕ್ಷಶಿಕ್ಷಣ ಟ್ರಸ್ಟ್ ಇದರ ವಿಶ್ವಸ್ಥರಾದ ಶ್ರೀ ನಾರಾಯಣ ಎಂ. ಹೆಗಡೆ, ಶುಭ ಹಾರೈಸಿದರು. ಯಕ್ಷಗಾನ ಕಲಾರಂಗದ ಉಪಾಧ್ಯಕ್ಷರದ ಶ್ರೀ ವಿ. ಜಿ. ಶೆಟ್ಟಿ ಹಾಗೂ ಯಕ್ಷಗಾನ ಗುರುಗಳಾದ ಶ್ರೀ ನಿತ್ಯಾನಂದ ಶೆಟ್ಟಿಗಾರ್ ಉಪಸ್ಥಿತರಿದ್ದರು .ಡಯಟ್ ಪ್ರಾಂಶುಪಾಲರಾದ ಡಾ.ಅಶೋಕ ಕಾಮತ್ ಇವರು ಯಕ್ಷಗಾನದಿಂದ ಆಗುವ ಪ್ರಯೋಜನ ಹಾಗೂ ಯಕ್ಷಶಿಕ್ಷಣ ಟ್ರಸ್ಟಿನ ಕಾರ್ಯವನ್ನು ಶ್ಲಾಘಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ರೂಪರೇಖಾ ಹೆಚ್.…
ಬ್ರಹ್ಮಾವರ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹಾಗೂ ರೋಟರಿ ಕ್ಲಬ್ ಬ್ರಹ್ಮಾವರ ಇವರ ಸಂಯುಕ್ತಾಶ್ರಯದಲ್ಲಿ ‘ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ ಅನುಷ್ಠಾನ’ ಹಾಗೂ ಜಿಲ್ಲಾ ಜಾಗೃತಿ ಸಮಿತಿ ರಚನೆಯ ಪೂರ್ವಭಾವಿ ಸಭೆಯನ್ನು ದಿನಾಂಕ 27 ಜುಲೈ 2025ರಂದು ಪೂರ್ವಾಹ್ನ 10-00 ಗಂಟೆಗೆ ಬ್ರಹ್ಮಾವರ ರೋಟರಿ ಕ್ಲಬ್ ಇಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಇವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲೆ ಕ.ಸಾ.ಪ.ದ ಸ್ಥಾಪಕಧ್ಯಕ್ಷರಾದ ಎ.ಎಸ್.ಎನ್. ಹಬ್ಬಾರ್ ಇವರು ಉದ್ಘಾಟನೆ ಮಾಡಲಿದ್ದಾರೆ. ಸಾಂಸ್ಕೃತಿಕ ಚಿಂತಕರಾದ ನಾಡೋಜ ಕೆ.ಪಿ. ರಾವ್ ಇವರು ಕರಪತ್ರ ಬಿಡುಗಡೆ ಮಾಡಲಿದ್ದು, ಉಡುಪಿ ಜಿಲ್ಲೆ ಕ.ಸಾ.ಪ.ದ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಇವರು ನಲ್ನುಡಿಗಳನ್ನಾಡಲಿದ್ದಾರೆ.
ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಆಶ್ರಯದಲ್ಲಿ ದಿನಾಂಕ 18 ಜುಲೈ 2025ರಂದು ‘ಬರಹ ಕೌಶಲ್ಯ’ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಪ. ರಾಮಕೃಷ್ಣಶಾಸ್ತ್ರಿ ಇವರು ‘ಬರಹ ಕೌಶಲ್ಯ’ ವಿಷಯದ ಕುರಿತು ಮಾತನಾಡಿ “ಸಾಹಿತ್ಯಾಸಕ್ತಿಯನ್ನು ರೂಢಿಸಿಕೊಳ್ಳುವುದರಿಂದ ಉತ್ತಮ ಬದುಕಿನೊಂದಿಗೆ ನೆಮ್ಮದಿ, ಗೌರವ, ಪ್ರಶಸ್ತಿಗಳನ್ನು ಪಡೆದುಕೊಳ್ಳಬಹುದು. ಜೀವನದ ಕಷ್ಟ ಸುಖದ ಅನುಭವಗಳನ್ನು ಮತ್ತು ನಮ್ಮ ಹತ್ತಿರದ ವಿಷಯ ಅಥವಾ ಘಟನೆಗಳನ್ನು ಆಸಕ್ತಿಯಿಂದ ಗಮನಿಸಿದಾಗ ಅದು ಬರವಣಿಗೆಗೆ ಸ್ಫೂರ್ತಿಯಾಗುತ್ತದೆ. ಸಾಹಿತ್ಯಕ್ಕೆ ವಿಷಯಗಳನ್ನು ನಾವೇ ಹುಡುಕಿಕೊಂಡು ಹೋಗಬೇಕಾಗುತ್ತದೆ. ಲೇಖನಗಳು ಅಥವಾ ಕಥೆಗಳು ಓದುಗರ ವ್ಯಕ್ತಿತ್ವದಲ್ಲಿ ಬದಲಾವಣೆಯನ್ನು ತರುವುದರೊಂದಿಗೆ ಸಮಾಜದಲ್ಲಿ ನೈತಿಕತೆಯನ್ನು ಕಂಡುಕೊಳ್ಳಬಹುದು” ಎಂದು ಹೇಳಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ರಚಿಸಿದ ‘ಅಕ್ಷರ ವಾಣಿ’ ಭಿತ್ತಿಪತ್ರಿಕೆಯನ್ನು ಹಿರಿಯ ಸಾಹಿತಿ ಪ. ರಾಮಕೃಷ್ಣಶಾಸ್ತ್ರಿ ಅನಾವರಣಗೊಳಿಸಲಾಯಿತು. ಕಾಲೇಜಿನ ಪ್ರಿನ್ಸಿಪಾಲ್ ವಿಷ್ಣು ಪ್ರಕಾಶ್ ಎಂ.ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಸಂಘದ ಸಂಯೋಜಕರಾದ ರಮ್ಯಾ ಜೋಶಿ ಮತ್ತು ಅಭ್ಯುದಯ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸನಾ ಶರಿನಾ ಪಿಂಟೋ ಸ್ವಾಗತಿಸಿ,…
ವಿರಾಜಪೇಟೆ : ಮೈಸೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಕೊಡಗಿನ ವಿದ್ಯಾರ್ಥಿನಿಯೊಬ್ಬರು ರಚಿಸಿದ ಕವನ ಸಂಕಲನ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. ವಿರಾಜಪೇಟೆ ಮೂಲದ ದುದ್ದಿಯಂಡ ಮುಸ್ಕಾನ್ ಸೂಫಿ ಇವರ ಚೊಚ್ಚಲ ಇಂಗ್ಲೀಷ್ ಕೃತಿ ‘ದಿಸ್ ಟೂ ಶೆಲ್ ಪಾಸ್’ ಅನ್ನು ಅಂತಾರಾಷ್ಟ್ರೀಯ ಖ್ಯಾತಿಯ ಬುಕ್ ಲಿಫ್ ಪಬ್ಲಿಕೇಶನ್ ಪ್ರಕಟಿಸಿದ್ದು, ಅಮೆರಿಕ ಮೂಲದ ಪ್ರಸಿದ್ಧ ಕವಿ ಎಮಿಲಿ ಡಿಕ್ಕಿನ್ಸನ್ ಸ್ಮರಣಾರ್ಥವಾಗಿ ನೀಡಲಾಗುವ 21ನೇ ಶತಮಾನದ ಅಂತಾರಾಷ್ಟ್ರೀಯ ಮಟ್ಟದ ‘ಇಂಡಿ ಆಥರ್ಸ್ ಅವಾರ್ಡ್ 2025’ಕ್ಕೆ ನಾಮನಿರ್ದೇಶನಗೊಂಡಿದೆ. ಬುಕ್ ಲಿಫ್ ಪಬ್ಲಿಕೇಶನ್ ಇತ್ತೀಚೆಗೆ ಏರ್ಪಡಿಸಿದ 21 ದಿನಗಳಲ್ಲಿ 21 ಕವನ ರಚಿಸುವ ‘ಸವಾಲುಗಳ ಅಭಿಯಾನ’ದಲ್ಲಿ ಪಾಲ್ಗೊಂಡಿದ್ದ ಮೈಸೂರಿನ ಸಂತ ಫಿಲೋಮಿನ ಕಾಲೇಜಿನಲ್ಲಿ ಇಂಗ್ಲೀಷ್ ಸಾಹಿತ್ಯ ಮತ್ತು ಮನೋ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿರುವ ಮುಸ್ಕಾನ್ ಸೂಫಿ ಸವಾಲುಗಳ ನಿರ್ದಿಷ್ಟ ಗುರಿ ಸಾಧಿಸಿ ಗಮನ ಸೆಳೆದಿದ್ದಾರೆ. ಕಾಲೇಜು ತರಗತಿಗಳ ಬಿಡುವಿನ ಸಮಯದಲ್ಲಿ ಕಾವ್ಯಕೃಷಿಯನ್ನು ಆರಂಭಿಸಿ ಕವನ ರಚನೆಗಳ ಕುರಿತ ಅಭಿಯಾನದ ಗುರಿ ಸಾಧಿಸಿದ ಮುಸ್ಕಾನ್ ಸೂಫಿ, ತಮ್ಮ ಮನದ ಮೂಸೆಯಲ್ಲಿ…