Author: roovari

ಬೆಳ್ತಂಗಡಿ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ವತಿಯಿಂದ ಯಕ್ಷಧ್ರುವ – ಯಕ್ಷಶಿಕ್ಷಣ ಯಕ್ಷಗಾನ ಶಿಕ್ಷಣ ಅಭಿಯಾನದ ಪ್ರಯುಕ್ತ ಬೆಳ್ತಂಗಡಿಯ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿಯು ದಿನಾಂಕ 02 ಜುಲೈ 2025ರಂದು ಪ್ರಾರಂಭವಾಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಪಟ್ಲ ಫೌಂಡೇಶನ್ನಿನ ಟ್ರಸ್ಟಿಗಳಾದ ಭುಜಬಲಿ ಧರ್ಮಸ್ಥಳ ಇವರು ಮಾತನಾಡುತ್ತಾ “ವಿದ್ಯಾರ್ಥಿಗಳ ಜ್ಞಾನವನ್ನು ಹೆಚ್ಚಿಸುವಲ್ಲಿ ಪಠ್ಯಚಟುವಟಿಕೆಗಳಿಗೆ ಪೂರಕವಾಗಿ ಯಕ್ಷಗಾನ ಕಲಿಕೆಯು ಪ್ರಯೋಜನಕಾರಿಯಾಗಿದೆ. ಯಕ್ಷಗಾನವು ಆರೋಗ್ಯ ಮತ್ತು ನೆಮ್ಮದಿಯನ್ನು ಪಡೆಯಲು ಸಹಕಾರಿಯಾಗಿದೆ. ಪಟ್ಲ ಫೌಂಡೇಶನ್ ನವರ ವಿದ್ಯಾರ್ಥಿಗಳಿಗೆ ಉಚಿತವಾಗಿ ಯಕ್ಷಗಾನವನ್ನು ಕಲಿಸುವ ಯೋಜನೆ ಶ್ಲಾಘನೀಯ. ಅವರ ಪರಿಶ್ರಮವನ್ನು ಉತ್ತಮವಾಗಿ ಬಳಸಿಕೊಳ್ಳಬೇಕು. ಇದರೊಂದಿಗೆ ಪೋಷಕರಿಗೆ, ಶಿಕ್ಷಣ ಸಂಸ್ಥೆಗೆ ಕೀರ್ತಿ ತರಬೇಕು” ಎಂದು ಹೇಳಿದರು. ವಾಣಿ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗಣೇಶ ಗೌಡ ಅಧ್ಯಕ್ಷತೆ ವಹಿಸಿದ್ದರು. ಪಟ್ಲ ಫೌಂಡೇಶನ್ ಇದರ ಯಕ್ಷಧ್ರುವ – ಯಕ್ಷಶಿಕ್ಷಣದ ಕೇಂದ್ರೀಯ ಸಂಚಾಲಕರಾದ ವಾಸುದೇವ ಐತಾಳ್ ಪಣಂಬೂರು ಮುಖ್ಯ ಅತಿಥಿಗಳಾಗಿದ್ದು, ಯಕ್ಷಧ್ರುವ ಪಟ್ಲ ಪೌಂಡೇಶನ್ ನ…

Read More

ಮಂಗಳೂರು : ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಆ್ಯಂಡ್ ಕಲ್ಚರಲ್ ಹೆರಿಟೇಜ್ (ಇಂಟಾಕ್)ನ ಮಂಗಳೂರು ಶಾಖೆ ಇದರ ವತಿಯಿಂದ ಪ್ರಸ್ತುತ ಪಡಿಸುವ ಇತಿಹಾಸಕಾರ ಮತ್ತು ಪುರಾತತ್ವ ಶಾಸ್ತ್ರಜ್ಞ ಡಾ. ಪುಂಡಿಕಾಯಿ ಗಣಪಯ್ಯ ಭಟ್ ಇವರೊಂದಿಗೆ ತುಳುನಾಡಿಗೆ ಸಂಬಂಧಿಸಿದಂತೆ ‘ಸ್ಮಾರಕಗಳ ರಕ್ಷಣೆಯ ಕುರಿತು ಬೆದರಿಕೆಗಳು ಮತ್ತು ಸವಾಲುಗಳು’ ಎಂಬ ವಿಷಯದ ಬಗ್ಗೆ ಮಾತುಕತೆಯನ್ನು ದಿನಾಂಕ 05 ಜುಲೈ 2025ರಂದು ಸಂಜೆ 5-30 ಗಂಟೆಗೆ ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

Read More

ಮಂಗಳೂರು : ಕರಾವಳಿಯ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವರ್ಷದ ವಾರ್ಷಿಕೋತ್ಸವ ದಿನಾಂಕ 07 ಜುಲೈ 2025ರಂದು ನಡೆಯಲಿದ್ದು, ಸಮಾರಂಭದಲ್ಲಿ ಹಿರಿಯ ನಟ ಲಕ್ಷ್ಮಣ ಕುಮಾರ್ ಮಲ್ಲೂರು ಇವರಿಗೆ ‘ರಂಗ ಭಾಸ್ಕರ ಪ್ರಶಸ್ತಿ’ ಪ್ರದಾನ ನಡೆಯಲಿದೆ. ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಎಲ್‌.ಸಿ.ಆರ್‌.ಐ. ಸಭಾಂಗಣದಲ್ಲಿ ಸಂಜೆ ಗಂಟೆ 5-30ಕ್ಕೆ ಕಾರ್ಯಕ್ರಮ ನಡೆಯಲಿದ್ದು, 2008ರಲ್ಲಿ ಪ್ರಾರಂಭವಾದ ರಂಗ ಸಂಗಾತಿ ಸಂಸ್ಥೆಯು ಬಹುಮುಖ ಪ್ರತಿಭೆ, ರಂಗಸಂಗಾತಿಯ ಸ್ಥಾಪಕ ಸದಸ್ಯ ದಿ. ಭಾಸ್ಕರ ನೆಲ್ಲಿತೀರ್ಥ ಇವರ ನೆನಪಿನಲ್ಲಿ ರಂಗ ಭಾಸ್ಕರ ಪ್ರಶಸ್ತಿಯನ್ನು ನೀಡುತ್ತಿದೆ. ಈಗಾಗಲೇ 10 ಮಂದಿ ಸಾಧಕರಿಗೆ ರಂಗ ಭಾಸ್ಕರ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಈ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿರುವ ಲಕ್ಷ್ಮಣ ಕುಮಾರ್ ಮಲ್ಲೂರು, 1962ರಲ್ಲಿ ಬಾಲ ನಟನಾಗಿ ರಂಗ ಪ್ರವೇಶ ಮಾಡಿ 65 ವರ್ಷಗಳಿಂದ ರಂಗ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನಿರ್ದೇಶಕನಾಗಿಯೂ ರಂಗಭೂಮಿ ಮತ್ತು ಚಲನಚಿತ್ರಗಳಲ್ಲಿ ಸಕ್ರಿಯರಾಗಿದ್ದಾರೆ. 30ಕ್ಕೂ ಹೆಚ್ಚು ಕನ್ನಡ, ತುಳು ಸಿನೆಮಾಗಳಲ್ಲಿ ಅಭಿನಯದ ಜತೆಗೆ…

Read More

ಬೆಂಗಳೂರು: ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಏರ್ಪಾಟಾಗಿದ್ದ ಫ.ಗು.ಹಳಕಟ್ಟಿಯವರ 145ನೆಯ ಜನ್ಮದಿನೋತ್ಸವದ ಕಾರ್ಯಕ್ರಮ ದಿನಾಂಕ 02 ಜೂನ್ 2025 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಫ.ಗು.ಹಳಕಟ್ಟಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ.ಡಾ.ಮಹೇಶ ಜೋಶಿ ಮಾತನಾಡಿ “ವಚನ ಸಾಹಿತ್ಯದ ವಿರಾಟ್ ಸ್ವರೂಪವನ್ನು ತೋರಿಸಿ ಕೊಟ್ಟ ಫ.ಗು.ಹಳಕಟ್ಟಿಯವರು ಸಹಜವಾಗಿಯೇ ವಚನಪಿತಾಮಹ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹಳಕಟ್ಟಿಯವರು ತಾಳೆಯೋಲೆಗಳನ್ನು ಸಂಗ್ರಹಿಸುವುದಕ್ಕೆ ಮೊದಲು ಕವಿ ಚರಿತೆಕಾರರು ಗುರುತಿಸಿದ್ದು ಕೇವಲ 50 ವಚನಕಾರರನ್ನು ಮಾತ್ರ. ಫ. ಗು. ಹಳಕಟ್ಟಿಯವರು ತಮ್ಮ ಸಂಶೋಧನೆಯ ಮೂಲಕ 250ಕ್ಕೂ ಹೆಚ್ಚು ವಚನಕಾರರನ್ನು ಬೆಳಕಿಗೆ ತಂದರು. ಜೊತೆಗೆ ಹರಿಹರನ 42 ರಗಳೆಗಳನ್ನು ಸಂಶೋಧಿಸಿ ಪ್ರಕಟಿಸಿದ ಸಾಧನೆ ಹಳಕಟ್ಟಿಯವರಿಗೆ ಸಲ್ಲುತ್ತದೆ. ಹಳಕಟ್ಟಿಯವರು ಬಸವಣ್ಣನವರ ವಚನಗಳನ್ನು ಇಂಗ್ಲಿಷ್ ಗೆ ಅನುವಾದಿಸಿ ‘ಇಂಡಿಯನ್ ಆಂಟಿಕ್ವರಿ’ಯಲ್ಲಿ ಪ್ರಕಟಗೊಳಿಸಿದರು. ಅಷ್ಟೇ ಅಲ್ಲ ವಚನಗಳ ಗಾಯನಕ್ಕೂ ವ್ಯವಸ್ಥೆ ಮಾಡಿಸಿದರಲ್ಲದೆ ಶ್ರೇಷ್ಠ ಸಂಗೀತಕಾರರನ್ನು ವಚನ ಗಾಯನ ರೆಕಾರ್ಡಿಂಗ್ ಗಾಗಿ ಮುಂಬಯಿಯವರೆಗೆ ಕಳುಹಿಸಿದರು. ಹೀಗೆ ವಚನ ಸಾಹಿತ್ಯದ ಪ್ರಸಾರ ಕಾರ್ಯವನ್ನು ಅವರು…

Read More

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳುಓದುಗ’ ಅಭಿಯಾನದ ಐದನೇ ಕೂಟ ದಿನಾಂಕ 30 ಜೂನ್ 2025 ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ತುಳು ವಿದ್ವಾಂಸ ಹಾಗೂ ಸಂತ ಅಲೋಶಿಯಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ವಿಶ್ವನಾಥ ಬದಿಕಾನ ಮಾತನಾಡಿ “ಭಾಷೆ ಮತ್ತು ಸಂಸ್ಕೃತಿ ಪರಸ್ಪರ ಪೂರಕವಾಗಿರುವಂತಹದ್ದು, ಕಾಲೇಜಿನ ವಿದ್ಯಾರ್ಥಿಗಳಿಗೆ ತುಳು ಭಾಷೆಯ ಸಾಹಿತ್ಯದ ಓದಿನ ಅಭಿರುಚಿ ಮೂಡಿಸುವುದು ಇಂದಿನ ಅಗತ್ಯವಾಗಿದೆ. ಮುಂದಿನ ತಲೆಮಾರಿಗೆ ತುಳು ಭಾಷೆಯನ್ನು ಕೊಂಡೊಯ್ಯುವ ಮಹತ್ತರ ಜವಾಬ್ದಾರಿ ವಿದ್ಯಾರ್ಥಿಗಳಲ್ಲಿದೆ. ಹೊಸ ತಂತ್ರಜ್ಞಾನ ಹಾಗೂ ಸಾಮಾಜಿಕ ಜಾಲತಾಣವನ್ನು ತುಳುವಿನ ಪ್ರಸರಣಕ್ಕೆ ವೇದಿಕೆಯಾಗಿ ರೂಪಿಸುವಲ್ಲಿ ವಿದ್ಯಾರ್ಥಿಗಳು ಪ್ರಯತ್ನಶೀಲರಾಗಬೇಕು” ಎಂದು ಅವರು ಹೇಳಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ತುಳು ಅಕಾಡೆಮಿಯ ಮಾಜಿ ಸದಸ್ಯೆ ವಿಜಯಲಕ್ಷ್ಮೀ ರೈ ಮಾತನಾಡಿ “ತುಳು ಭಾಷೆ, ಸಾಹಿತ್ಯದ ಸಂಸ್ಕೃತಿ ಬಗ್ಗೆ ಅಭಿರುಚಿ ಮೂಡಿಸುವ ನಿಟ್ಟಿನಲ್ಲಿ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ’…

Read More

ಹಿರಿಯ ಸಾಧಕರ ಮನೆಗೇ ಹೋಗಿ ಗೌರವಿಸುವ ಪರಿಪಾಠ ಕನ್ನಡ ಸಾಹಿತ್ಯ ಪರಿಷತ್ತಿಗೆ ಹೊಸತಲ್ಲ. ಈಗಾಗಲೇ ಹದಿನೇಳರ ಸಂಖ್ಯೆ ದಾಟಿದೆ. ನಾಲ್ಕೈದು ಸಂದರ್ಭಗಳಲ್ಲಿ ಅಧ್ಯಕ್ಷ ಡಾl ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಅವರೊಂದಿಗೆ ನಾನೂ ಇದ್ದೆ. ಮೊನ್ನೆ ಹೋದದ್ದು ಬಾಯಾರಿನ ಪೊಸಡಿಗುಂಪೆಯ ಶಶಿಕಲಾ ಬಾಯಾರು ಎಂಬ ಗೃಹಿಣಿಯ ಭೇಟಿಗಾಗಿ. ಆಕೆ ಬರೆಹಗಾರ್ತಿ ಮತ್ತು ಕಸೂತಿ ಪ್ರವೀಣೆ. ದೊಡ್ಡ ಮಳೆ ಬಂದು ಸುರಿಯುವ ಮೊದಲು ನಮ್ಮ ಪ್ರಯಾಣ ಸುಪ್ರಸಿದ್ಧ ಮಠವನ್ನು ದಾಟಿ ಗೂಗಲ್ ಕೂಡ ಕಂಡಿರದ ದಾರಿಯಲ್ಲಿ ಸುತ್ತಿ ಸುತ್ತಿ ಸಾಗಿತು. ಹೆಚ್ಚುಕಡಿಮೆ ಗಾಂಪ ಸ್ವರೂಪಿಗಳಾದ ನಮಗೆ ಜಯಪ್ರಕಾಶರ ಕಾರೇ ಆಸರೆ. ಸಂಜೆ ಐದಕ್ಕೇ ಆತಂಕಕಾರಿ ಸಂಜೆಗತ್ತಲು. ಹಳ್ಳಿಯ ಸಾದಾ ವೇಷದಲ್ಲಿ ಮನೆಯವರಿಂದ ಸ್ವಾಗತವಂತೂ ಸಿಕ್ಕಿತು. ತನ್ನ ಮೂವತ್ತರ ಹರೆಯದಿಂದಲೇ ಕಸೂತಿಯನ್ನು ಅಭ್ಯಸಿಸಲು ತೊಡಗಿದಾಗ ಅವರಿಗೆ ಬೇಕಾದ ಬಟ್ಟೆ ಸಿಗುವುದೇ ಕಷ್ಟವಾಗಿತ್ತು. ಎಲ್ಲೋ ದೂರದ‌ಲ್ಲಿತ್ತು ಬಟ್ಟೆಯಂಗಡಿ. ವರ್ಣಮಯ ಉತ್ತಮ ದರ್ಜೆಯ ನೂಲುಗಳಿಗೆ ಮಂಗಳೂರೇ ಆಶ್ರಯ. ಅವರು ಹೇಳುವಂತೆ ಉನ್ನತ ಶಿಕ್ಷಣ ಕೈತಪ್ಪಿದ ಮೇಲೆ ವಿರಾಮ ಕಾಲಕ್ಕೆ…

Read More

ಬೆಂಗಳೂರು : ಕರ್ನಾಟಕ “ವಿಕಾಸರಂಗ”ವು ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಯ ಸಂವರ್ಧನೆಗಾಗಿ, ನೆಲ-ಜಲದ ರಕ್ಷಣೆಗಾಗಿ ಶ್ರಮಿಸುವ ಧ್ಯೇಯೋದ್ಧೇಶಗಳೊಂದಿಗೆ ರಾಜ್ಯಮಟ್ಟದಲ್ಲಿ ಅಸ್ತಿತ್ವಕ್ಕೆ ಬಂದಿದೆ. ಸಂಸ್ಥೆಯ ಕೊಡಗು ಜಿಲ್ಲೆಯ ಜಿಲ್ಲಾಧ್ಯಕ್ಷರನ್ನಾಗಿ ವಿರಾಜಪೇಟೆ ತಾಲ್ಲೂಕಿನ ಕೆ.ಬೋಯಿಕೇರಿ ನಿವಾಸಿ ಶ್ರೀ ವೈಲೇಶ. ಪಿ. ಎಸ್. ಇವರನ್ನು ನೇಮಕ ಮಾಡಲಾಗಿದೆಯೆಂದು ಕರ್ನಾಟಕ ವಿಕಾಸ ರಂಗದ ಸಂಸ್ಥಾಪಕರು ಮತ್ತು ರಾಜ್ಯಾಧ್ಯಕ್ಷರಾಗಿರುವ ಶ್ರೀಯುತ ವ. ಚ. ಚನ್ನೇಗೌಡರು ತಿಳಿಸಿದ್ದಾರೆ. ಶ್ರೀ ವೈಲೇಶ. ಪಿ. ಎಸ್ : ಶಿವೈ. ವೈಲೇಶ್‌.ಪಿ.ಎಸ್. ಕೊಡಗು ಕಾವ್ಯನಾಮದಿಂದ ಗುರುತಿಸಿಕೊಂಡಿರುವ ಶ್ರೀಯುತರು ಪೌತಿ ಪಿ. ಕೆ. ಸಿಡ್ಲಯ್ಯ ಹಾಗೂ ಪೌತಿ ಪಿ. ಎಸ್‌. ಕಾಳಮ್ಮ ಇವರ ಸುಪುತ್ರರಾಗಿ ದಿನಾಂಕ 01 ಜೂನ್ 1965 ರಂದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೆ.ಬೋಯಿಕೇರಿ ಗ್ರಾಮದಲ್ಲಿ ಜನಿಸಿದರು. ಕೊಡವ ಮತ್ತು ಕನ್ನಡದ ದ್ವಿಭಾಷಾ ಕವಿ, ಸಾಹಿತಿ, ಸಾಹಿತ್ಯ ಸಂಘಟಕ, ವಿಮರ್ಶಕ, ಅಂಕಣಕಾರ. ಹವ್ಯಾಸಿ ರಂಗಕಲಾವಿದ ರಾದ ಇವರು ಕ. ರಾ. ರ. ಸಾ. ಸಂಸ್ಥೆಯ ಚಾಲಕ ಬೋಧಕರಾಗಿದ್ದು ಇತ್ತೀಚೆಗೆ ನಿವೃತಿ…

Read More

ಬೆಂಗಳೂರು: ಹಿರಿಯ ಪತ್ರಕರ್ತ ಪ್ರಕಾಶ್ ಜಿ. ಇವರು ರಚಿಸಿದ ‘ನನ್ಸಿರಿ’ ಕಾದಂಬರಿಯ ಲೋಕಾರ್ಪಣಾ ಸಮಾರಂಭ ದಿನಾಂಕ 28 ಜೂನ್ 2025ರ ಶನಿವಾರದಂದು ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೃತಿ ಲೋಕರ್ಪಣೆಗೊಳಿಸಿದ ಖ್ಯಾತ ಸಾಹಿತಿ ಜೋಗಿ ಮಾತನಾಡಿ “ಪತ್ರಕರ್ತ ವೃತ್ತಿಯನ್ನಾಗಿಸಿಕೊಂಡವರಲ್ಲಿ ಬಹಳಷ್ಟು ಜನರು ಪ್ರವೃತ್ತಿಯಾಗಿ ಸಾಹಿತ್ಯ ರಚನೆಯಲ್ಲಿಯೂ ತೊಡಗಿಸಿಕೊಂಡಿರುವುದು ಮಹತ್ವದ ಬೆಳವಣಿಗೆ. ಸಾಹಿತ್ಯದ ಬರವಣಿಗೆಯಲ್ಲಿ ತೊಡಗಿಸಿಕೊಂಡವರಲ್ಲಿ ಶಿಕ್ಷಕರು ಮತ್ತು ಪತ್ರಕರ್ತರ ಸಂಖ್ಯೆ ಹೆಚ್ಚಿದೆ. ಬೂಕರ್ ಪ್ರಶಸ್ತಿಗೆ ಪಾತ್ರರಾದ ಬಾನುಮುಷ್ತಾಕ್, ಇವರ ಕೃತಿಯನ್ನು ಇಂಗ್ಲೀಷ್‌ಗೆ ಅನುವಾದಿಸಿದ ದೀಪಾಭಾಸ್ತಿ ಇಬ್ಬರೂ ಪತ್ರಕರ್ತರು ಎನ್ನುವುದನ್ನು ಸಾಹಿತ್ಯಲೋಕ ಗಮನಿಸುತ್ತಿದೆ. ಸಾಹಿತ್ಯಕ್ಕೆ ಭಿನ್ನ ಬರಹಗಳು ಹೆಚ್ಚೆಚ್ಚು ಬರಬೇಕೆಂದರೆ ಉತ್ತಮ ಭಾಷಾ ಸಂವಹನ ಕೌಶಲ್ಯ ಹೊಂದಿರುವ ವರದಿಗಾರರು ಬರವಣಿಗೆಯಲ್ಲಿ ತೊಡಗಿಸಿಕೊಳ್ಳಬೇಕು. ಧ್ಯಾನಸ್ಥ ಸ್ಥಿತಿಯಲ್ಲಿದ್ದರೆ ಮಾತ್ರವೇ ಬರವಣಿಗೆ ಮಾಡಲು ಸಾಧ್ಯ. ನಿತ್ಯವೂ ಓದು ಮತ್ತು ಬರೆಯುವ ಹವ್ಯಾಸವನ್ನು ತಪ್ಪದೇ ರೂಡಿಸಿಕೊಳ್ಳಬೇಕು” ಎಂದು ಹೇಳಿದರು. ವಿಜಯ ಕರ್ನಾಟಕ ಸಂಪಾದಕರಾದ ಸುದರ್ಶನ ಚನ್ನಂಗಿಹಳ್ಳಿ ಮಾತನಾಡಿ “ತಾವು ನೋಡಿದ ಸಂಗತಿಗಳನ್ನು, ಸಮಾಜದಲ್ಲಿ ಆಗುತ್ತಿರುವ ಬದಲಾವಣೆ, ತಲ್ಲಣಗಳನ್ನು…

Read More

ಮುಡಿಪು  : ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಸೂರಜ್ ಪಿ.ಯು ಕಾಲೇಜ್ ಮುಡಿಪು ಇವರ ಜಂಟಿ ಆಶ್ರಯದಲ್ಲಿ 107ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ 02 ಜುಲೈ 2025ರಂದು ಸೂರಜ್ ಪಿ.ಯು ಕಾಲೇಜ್ ಮುಡಿಪು ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೂರಜ್ ಪಿ. ಯು. ಕಾಲೇಜ್ ಮುಡಿಪು ಇದರ ಚೇರ್ಮನ್ ಡಾ. ಮಂಜುನಾಥ್ ಎಸ್. ರೇವಣ್ಕರ್ ವಹಿಸಿದ್ದರು. ಮುಖ್ಯ ಸಂಪನ್ಮೂಲ ಅತಿಥಿಯಾಗಿ ಚುಟುಕು ಸಾಹಿತ್ಯ ಪರಿಷತ್ ಇದರ ಗೌರವ ಅಧ್ಯಕ್ಷರಾದ ಇರಾ ನೇಮು ಪೂಜಾರಿ, ಹಾಗೂ ನಿವೃತ್ತ ಶಿಕ್ಷಕಿ ಹಾಗೂ ಲೇಖಕಿಯಾದ ಡಾ. ಅರುಣಾನಾಗರಾಜ್ ಭಾಗವಹಿಸಿದ್ದರು. ಗೌರವ ಅತಿಥಿಗಳಾಗಿ ಆತ್ಮಶಕ್ತಿ ಕೋ ಆಪರೇಟಿವ್ ಬ್ಯಾಂಕ್ ಪಡೀಲ್ ಇದರ ಚೇರ್ಮನ್ ಸಹಕಾರ ರತ್ನ ಚಿತ್ತರಂಜನ್ ಬೋಳೂರ್, ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ವಿಜಯಲಕ್ಷ್ಮೀ ಪ್ರಸಾದ್ ರೈ ಕಲ್ಲಿಮಾರ್, ನಿವೃತ್ತ ಶಿಕ್ಷಕರು ಹಾಗೂ ಲೇಖಕರಾದ ರವೀಂದ್ರ ರೈ ಕಲ್ಲಿಮಾರ್, ಪ್ರಸಾದ್ ರೈ ಕಲ್ಲಿಮಾರ್, ಸೂರಜ್ ಪಿ. ಯು. ಕಾಲೇಜ್ ಮುಡಿಪು…

Read More

ಬೆಂಗಳೂರು : ಅಕ್ಷರ ದೀಪ ಪೌಂಡೇಶನ್, ಅಕ್ಷರ ದೀಪ ಪ್ರಕಾಶನ ಗದಗ ಇವರು ಬಹುಮುಖ ಸೇವೆಯನ್ನು ಗುರುತಿಸಿ ಕೊಡಮಾಡುವ ‘ಕುಮಾರವ್ಯಾಸ ರಾಷ್ಟ್ರೀಯ ಪ್ರಶಸ್ತಿ’ಗೆ ಡಾ. ಎ. ಡಿ. ಕೊಟ್ನಾಳ ಆಯ್ಕೆಯಾಗಿದ್ದಾರೆ. ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಬಗ್ಗೆ ಅಪಾರ ಅಭಿಮಾನ ಬೆಳೆಸಿಕೊಂಡಿರುವ ಜೊತೆಗೆ ಸಮಾಜ ಸೇವೆ, ಶಿಕ್ಷಣ ಮತ್ತು ಕೃಷಿ ಕ್ಷೇತ್ರಗಳಲ್ಲಿನ ಇವರ ಸೇವಾ ಕಾರ್ಯವನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಸಾಹಿತ್ಯಾಸಕ್ತದಾಗಿರುವ ಇವರು ಕೃಷಿ ಕ್ಷೇತ್ರದಲ್ಲೂ ಕಳೆದ 35 ವರ್ಷಗಳಿಂದ ರೈತ ಸಮುದಾಯದ ಅಭಿವೃದಿಗೆ ಶ್ರಮಿಸುತ್ತಿದ್ದಾರೆ. ಇವರ ಬಹುಮುಖ ಸೇವೆಗೆ ವಿವಿಧ ಸಂಘ ಸಂಸ್ಥೆಗಳು ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ನೀಡಿ ಗೌರವಿಸಿದೆ. ಅಕ್ಷರ ದೀಪ ಫೌಂಡೇಶನ್, ಅಕ್ಷರ ದೀಪ ಪ್ರಕಾಶನ, ಗದಗ ಕೊಡಮಾಡುವ “ಕುಮಾರವ್ಯಾನ ರಾಷ್ಟ್ರೀಯ ಪ್ರಶಸ್ತಿ’ಯು ಇವರ ಅಪ್ರತಿಮ ಸಾಧನೆಗೆ ಸಂದ ಗೌರವವಾಗಿದೆ. 20 ಜುಲೈ 2025 ರ ರವಿವಾರ ದಂದು ಧಾರವಾಡದ ರಂಗಾಯಣ ಸಭಾ ಭವನದಲ್ಲಿ ಆಯೋಜಿಸಿರುವ ಅಕ್ಷರೋತ್ಸವ ಅದ್ದೂರಿ ಸಮಾರಂಭದಲ್ಲಿ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ…

Read More