Author: roovari

ಬಂಟ್ವಾಳ : ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ಟ ಸಂಪ್ರತಿಷ್ಠಾನ (ರಿ.) ಇದರ ಮೂವತ್ತೆರಡನೆಯ ವಾರ್ಷಿಕೋತ್ಸವ, ನೂತನ ಗ್ರಂಥ ಅನಾವರಣ, ಪ್ರಶಸ್ತಿ ಪ್ರದಾನ ಹಾಗೂ ಸಂಸ್ಕ್ರತ ಪ್ರತಿಭಾ ಪುರಸ್ಕಾರ ಸಮಾರಂಭದ ಅಂಗವಾಗಿ ದಿನಾಂಕ 14 ಸೆಪ್ಟೆಂಬರ್ 2025ರಂದು ತಾಳಮದ್ದಳೆ ಕಾರ್ಯಕ್ರಮವು ವಿದ್ಯಾ ಕುಟೀರ, ಬೈಪದವು ಕಬಕ ಇಲ್ಲಿ ‘ಭೀಷ್ಮಾರ್ಜುನ’ (ಕರ್ಮಬಂಧ) ಎಂಬ ಆಖ್ಯಾನದೊಂದಿಗೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಸುಬ್ರಾಯ ಸಂಪಾಜೆ ಚೆಂಡೆ ಮದ್ದಳೆಗಳಲ್ಲಿ ಪದ್ಯಾಣ ಶಂಕರನಾರಾಯಣ ಭಟ್ ಹಾಗೂ ಪಿ.ಟಿ. ಜಯರಾಮ ಭಟ್ ಸಹಕರಿಸಿದರು. ಮುಮ್ಮೇಳದಲ್ಲಿ ಶುಭಾ ಅಡಿಗ (ಭೀಷ್ಮ) ಕಿಶೋರಿ ದುಗ್ಗಪ್ಪ ನಡುಗಲ್ಲು (ಶ್ರೀ ಕೃಷ್ಣ), ಶುಭಾ ಗಣೇಶ್ (ಅಭಿಮನ್ಯು), ಹರಿಣಾಕ್ಷಿ ಜೆ. ಶೆಟ್ಟಿ(ಅರ್ಜುನ) ಸಹಕರಿಸಿದರು. ಸಂಪ್ರತಿಷ್ಠಾನದ ಅಧ್ಯಕ್ಷ ರಮೇಶ್ ಭಟ್, ನಾರಾಯಣ ಭಟ್ ಹಾಗೂ ತಿರುಮಲೇಶ್ವರ ಭಟ್ ಕಲಾವಿದರಿಗೆ ಶಾಲು ಹಾಗೂ ಪುಸ್ತಕ ನೀಡಿ ಗೌರವಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು.

Read More

ಮಂಗಳೂರು : ಮಂಗಳೂರು ರಾಮಕೃಷ್ಣ ಮಿಷನ್ ಮಂಗಳೂರಿನಲ್ಲಿ 75 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಮಂಗಳೂರು ರಾಮಕೃಷ್ಣ ಮಠದ ಆವರಣದಲ್ಲಿ ನಾಲ್ಕು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ನಾಲ್ಕನೇ ದಿನವಾದ ದಿನಾಂಕ 15 ಸೆಪ್ಟೆಂಬರ್ 2025ರಂದು ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ರಾಮಕೃಷ್ಣ ಮಠ ಹಾಗೂ ರಾಮಕೃಷ್ಣ ಮಿಷನ್ ಇದರ ಉಪಾಧ್ಯಕ್ಷರಾದ ಶ್ರೀಮತ್ ಸ್ವಾಮಿ ಸುಹಿತಾನಂದಜಿ ಮಹಾರಾಜ್ ಮಾತನಾಡಿ “ರಾಮಕೃಷ್ಣ ಪರಮಹಂಸರಾಗಲೀ, ಶ್ರೀಮಾತೆ ಶಾರದಾದೇವಿಯವರಾಗಲಿ ಅಥವಾ ಸ್ವಾಮಿ ವಿವೇಕಾನಂದರಾಗಲೀ ಸಮಾಜದಲ್ಲಿ ಕಷ್ಟದಲ್ಲಿರುವ ಅಥವಾ ಬಡತನದಲ್ಲಿರುವವರಿಗೆ ಕರುಣೆ ತೋರಿ ಅವರ ಅಭ್ಯುದಯಕ್ಕಾಗಿ ಕೆಲಸ ಮಾಡಿದವರು ಈ ಚಿಂತನೆಗಳೊಂದಿಗೆ ಒಟ್ಟುಗೂಡಿ ಇಂದು ರಾಮಕೃಷ್ಣ ಮಠ ಹಾಗೂ ರಾಮಕೃಷ್ಣ ಮಿಷನ್ ಕೆಲಸ ಮಾಡುತ್ತಿದೆ. ಹಲವಾರು ಜನ ಸನ್ಯಾಸಿಗಳಾಗಿ ಅಥವಾ ಸ್ವಯಂಸೇವಕರಾಗಿ ಕೆಲಸ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ನಾವು ತನು, ಮನ, ಧನಪೂರ್ವಕವಾಗಿ ಇನ್ನಷ್ಟು ಉತ್ತಮ ರೀತಿಯಲ್ಲಿ ಸೇವಾ ಕಾರ್ಯಗಳಲ್ಲಿ ತೊಡಗಿಕೊಳ್ಳೋಣ ಈ ಮೂಲಕ ನಮ್ಮ ಜೀವನವನ್ನು ಪಾವನಗೊಳಿಸಿ ಭಗವಂತನ ಕೃಪೆಗೆ ಪಾತ್ರರಾಗೋಣ” ಎಂದು ಹೇಳಿದರು.…

Read More

‘ಈ ಪಯಣ ನೂತನ’ ರೇಡಿಯೋ ಜಾಕಿ ನಯನಾ ಶೆಟ್ಟಿಯವರ ಮೊದಲ ಕೃತಿ.‌ ಹೆಸರಿಗೆ ತಕ್ಕಂತೆ ಹೊಸ ದಾರಿಯನ್ನು ಹುಡುಕುವ ಪ್ರಯತ್ನವಿರುವ 21 ಲಲಿತ ಪ್ರಬಂಧಗಳು ಇಲ್ಲಿವೆ. ಪರಂಪರೆಯ ಮತ್ತು ಆಧುನಿಕ ಶೈಲಿಯ ಜೀವನ ಕ್ರಮಗಳ ನಡುವೆ ಮಾಡುವ ಒಂದು ತೌಲನಿಕ ಚಿಂತನೆ ಸಂಕಲನದಲ್ಲಿರುವ ಎಲ್ಲ ಲೇಖನಗಳ ಮೂಲ ಸ್ರೋತ. ಸಹಜವಾಗಿಯೇ ತಮ್ಮ ಬಾಲ್ಯದಲ್ಲಿ ತಾವು ಕಂಡು ಅನುಭವಿಸಿದ ಜೀವನದ ಒಂದೊಂದು ಹೆಜ್ಜೆಗಳು ಅವರಿಗೆ ಧನಾತ್ಮಕವಾಗಿಯೂ ಅಧುನಿಕ, ನಾಗರಿಕವೆಂದು ಹೇಳಿಕೊಳ್ಳುವ ಬದುಕಿನಲ್ಲಿ ಕಾಣುವ ದೋಷ – ವಿಪರ್ಯಾಸಗಳು ಋಣಾತ್ಮಕವಾಗಿಯೂ ಅವರಿಗೆ ಕಾಣುತ್ತವೆ. ಕಳೆದುಕೊಂಡ ಹೆಜ್ಜೆಗಳನ್ನು ಮತ್ತೆ ಪಡೆದುಕೊಂಡರೆ ಎಷ್ಟು ಚೆನ್ನ ಎಂದು ಅವರಿಗೆ ಅನ್ನಿಸುತ್ತದೆ. ಹಾಗೆಂದು ಆಧುನಿಕ ಜಗತ್ತಿನಲ್ಲಿ ಸಾಗುತ್ತಿರುವ ಎಲ್ಲರಲ್ಲೂ ಆ ದೋಷಗಳಿವೆ ಎಂದು ಅವರು ಹೇಳುತ್ತಿಲ್ಲ. ಫಿನ್ ಲ್ಯಾಂಡ್, ಜಪಾನ್, ಸಿಂಗಾಪುರಗಳಂತಹ ದೇಶಗಳಲ್ಲಿ ಎಳೆಯ ಮಕ್ಕಳಿಗೆ ಜೀವನದ ಪಾಠಗಳನ್ನು ಹೇಳಿಕೊಡುತ್ತಿರುವ ರೀತಿಯ ಬಗ್ಗೆ ಅವರ ಶ್ಲಾಘನೆಯಿದೆ. ಮನುಷ್ಯನ ಖುಷಿಯ ಬಗೆಗಿನ ಮೊದಲ ಲೇಖನದಲ್ಲೇ ಇದು ಅರಂಭವಾಗುತ್ತದೆ. ಜಗತ್ತಿನ ಅತ್ಯಂತ ಹೆಚ್ಚು…

Read More

ಉಡುಪಿ : ತಿಂಗಳೆ ಪ್ರತಿಷ್ಠಾನ ಮತ್ತು ಸಂಜೀವ ಶಿಷ್ಯ ವೃಂದದಿಂದ ಅವರ ಸಪ್ತತಿ ವರ್ಷಾಚರಣೆ ಪ್ರಯುಕ್ತ ‘ಸಂಜೀವ ಯಕ್ಷ ಜೀವ-ಭಾವ’ ಕಾರ್ಯಕ್ರಮವು ದಿನಾಂಕ 12 ಸೆಪ್ಟೆಂಬರ್ 2025ರಂದು ಉಡುಪಿ ಕುಂಜಿಬೆಟ್ಟುವಿನಲ್ಲಿರುವ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಜರಗಿತು. ಹಿರಿಯರಾದ ಶಂಭು ಶೆಟ್ಟಿಯವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಖ್ಯಾತ ಪ್ರಸೂತಿ ತಜ್ಞೆ, ಸಂಜೀವರ ಯಕ್ಷ ಶಿಷ್ಯೆ ಡಾ. ಗಿರಿಜಾ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು. ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಅಭ್ಯಾಗತರಾಗಿ ಭಾಗವಹಿಸಿದ್ದರು. ಡಾ. ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು, ಅಮಿತಾಂಜಲಿ ಕಿರಣ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಆದ್ಯತಾ ಭಟ್ ಧನ್ಯವಾದ ಸಮರ್ಪಿಸಿದರು. ನಂತರ ಗುರು ಬನ್ನಂಜೆ ಸಂಜೀವ ಸುವರ್ಣರಿಂದ ಪಾರಂಪರಿಕ ಯಕ್ಷಗಾನ ನೃತ್ಯ ಪ್ರದರ್ಶನ ಜರಗಿತು. ಸಂಜೆ 4-00 ಗಂಟೆಗೆ ನಮ್ಮ ಸಂಜೀವ ಶೀರ್ಷಿಕೆಯಲ್ಲಿ ಸುವರ್ಣರ ಬಹುಮುಖಿ ವ್ಯಕ್ತಿತ್ವ ಅನಾವರಣಗೊಳಿಸುವ ಕಾರ್ಯಕ್ರಮ ಔಚಿತ್ಯಪೂರ್ಣವಾಗಿ ಮೂಡಿಬಂದಿತು. ಗುರು ಸಂಜೀವ, ಸಮಾಜಮುಖಿ ಸಂಜೀವ, ಯಕ್ಷ ಸಂಜೀವ ಎಂಬ ವಿಷಯಗಳ ಕುರಿತು ಅನುಕ್ರಮವಾಗಿ ಸುಬ್ರಹ್ಮಣ್ಯ ಪ್ರಸಾದ್ ಮುದ್ರಾಡಿ,…

Read More

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ನೇತೃತ್ವದಲ್ಲಿ ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಪ್ರಯೋಜಕತ್ವದಲ್ಲಿ ಸಾಹಿತ್ಯದ ಚಿತ್ತ ವಿದ್ಯಾರ್ಥಿಗಳತ್ತ ಘೋಷ ವಾಕ್ಯದೊಂದಿಗೆ ವಿದ್ಯಾರ್ಥಿಗಳಿಗಾಗಿ ‘ಕನ್ನಡ ರಾಜ್ಯೋತ್ಸವ ಅಂಚೆ ಕಾರ್ಡ್ ಕವನ ಸ್ಪರ್ಧೆ -2025’ಯನ್ನು ಏರ್ಪಡಿಸಲಾಗಿದೆ. ನಿಯಮಾವಳಿ : 1. ಪುತ್ತೂರು ತಾಲೂಕಿನಲ್ಲಿ ವಾಸವಾಗಿರುವ ಅಥವಾ ಅಧ್ಯಯನ ಮಾಡುತ್ತಿರುವ ಪ್ರಾಥಮಿಕ -ಪ್ರೌಢ -ಪಿಯು ಹಾಗೂ ಕಾಲೇಜು-ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮಾತ್ರ. 2. ಕವನದ ವಿಷಯ ಕನ್ನಡ ನಾಡು – ನುಡಿ- ಸಂಸ್ಕೃತಿ – ನೆಲ ಜಲಕ್ಕೆ ಸಂಬಂಧಿತವಾಗಿರತಕ್ಕದ್ದು. 3. ಕವನದ ಗರಿಷ್ಠ ಸಾಲುಗಳು 12 ಮಿತಿಯಲ್ಲಿ ಇರತಕ್ಕದ್ದು. 4. ನಿಮ್ಮ ಹೆಸರು, ತರಗತಿ, ವಿಳಾಸ, ವಾಟ್ಸಪ್ ಸಂಖ್ಯೆ ಕಡ್ಡಾಯವಾಗಿ ನಮೂದಿಸಿ ಇರತಕ್ಕದ್ದು. 5. ಆಯ್ಕೆಯಾದ ಕವನಗಳಿಗೆ ಪ್ರಥಮ -ದ್ವಿತೀಯ- ತೃತೀಯ ಹಾಗೂ ಪ್ರೋತ್ಸಾಹಕರ ಬಹುಮಾನವನ್ನು ನೀಡಲಾಗುವುದು. 6. ಆಯ್ಕೆಯಾದ ಕವನಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಕವನ ವಾಚನಕ್ಕೆ ಅವಕಾಶವಿರುವುದು. (ಸಮಯದ ಹೊಂದಾಣಿಕೆ ನೋಡಿಕೊಂಡು) 7. ಕವನಗಳನ್ನು ದಿನಾಂಕ…

Read More

ಕಾರ್ಕಳ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಯಕ್ಷ ರಂಗಾಯಣ ಕಾರ್ಕಳ ಇವರ ಸಹಯೋಗದಲ್ಲಿ ‘ಬಿ.ವಿ. ಕಾರಂತ ನೆನಪು’ ಕಾರ್ಯಕ್ರಮವನ್ನು ದಿನಾಂಕ 18, 19 ಮತ್ತು 20 ಸೆಪ್ಟೆಂಬರ್ 2025ರಂದು ಪ್ರತಿದಿನ ಸಂಜೆ 4-00 ಗಂಟೆಗೆ ಕಾರ್ಕಳದ ಕೋಟಿ ಚೆನ್ನಯ ಥೀಂ ಪಾರ್ಕ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 18 ಸೆಪ್ಟೆಂಬರ್ 2025ರಂದು ಈ ಕಾರ್ಯಕ್ರಮವನ್ನು ಮಾನ್ಯ ಶಾಸಕರಾದ ವಿ. ಸುನಿಲ್ ಕುಮಾರ್ ಇವರು ಉದ್ಘಾಟನೆ ಮಾಡಲಿದ್ದು, ಯಕ್ಷ ರಂಗಾಯಣ ಕಾರ್ಕಳ ಇದರ ನಿರ್ದೇಶಕರಾದ ಬಿ.ಆರ್. ವೆಂಕಟರಮಣ ಐತಾಳ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಶ್ರೀ ಗುರುರಾಜ ಮಾರ್ಪಳ್ಳಿ ಮತ್ತು ನಿನಾದ ತಂಡದಿಂದ ‘ಬಿ.ವಿ. ಕಾರಂತರ ರಂಗಸಂಗೀತ’ ಎಂಬ ವಿಷಯದ ಬಗ್ಗೆ ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆ ನಡೆಯಲಿದೆ. ದಿನಾಂಕ 19 ಸೆಪ್ಟೆಂಬರ್ 2025ರಂದು ಶ್ರೀಮತಿ ಸಮುದ್ಯತಾ ವೆಂಕಟರಾಮು ಮತ್ತು ಶ್ರೀ ಅರುಣ ಬಿ.ಟಿ. ಇವರಿಂದ ಗಮಕ ಕಾವ್ಯವಾಚನ ಹಾಗೂ ದಿನಾಂಕ 20 ಸೆಪ್ಟೆಂಬರ್ 2025ರಂದು ಶ್ರೀ ರಾಧಾಕೃಷ್ಣ ಕಲ್ಚಾರ್…

Read More

ಮಡಿಕೇರಿ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಕೊಡಗು ಜಿಲ್ಲಾ ಘಟಕದ ಪದಗ್ರಹಣ ಕಾರ್ಯಕ್ರಮವು ದಿನಾಂಕ 07 ಸೆಪ್ಟೆಂಬರ್ 2025ರಂದು ವಿರಾಜಪೇಟೆಯ ಪ್ರಗತಿ ಶಾಲಾ ಆವರಣದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಮಂಡೆಪಂಡ ಸುಜಾ ಕುಶಾಲಪ್ಪ ಉದ್ಘಾಟಿಸಿ ಮಾತನಾಡಿ “ಮಕ್ಕಳು ಸಮಾಜದ ಭವಿಷ್ಯದ ಅಸ್ತಿಯಾಗಿದ್ದು, ಅವರನ್ನು ಸಮರ್ಥ ಮತ್ತು ಸ್ವಚ್ಛ ಸಮಾಜ ನಿರ್ಮಾಣದಲ್ಲಿ ಉತ್ತಮ ಪ್ರಜೆಗಳಾಗಿ ರೂಪಿಸಲು ಎಲ್ಲರೂ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲೆಯಲ್ಲೂ ತನ್ನ ಕಾರ್ಯ ವ್ಯಾಪ್ತಿಯನ್ನು ವಿಸ್ತರಿಸಿದ್ದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಸಂಘಟನೆಯು ನಡೆಸುವ ಸೃಜನಾತ್ಮರ ಮಕ್ಕಳ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡುವುದಲ್ಲದೆ, ಸರ್ಕಾರದಿಂದ ಅನುದಾನ ಕೊಡಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು”. ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ಮೇರಿಯಂಡ ಸಂಕೇತ್ ಪೂವಯ್ಯ ಮಾತನಾಡಿ, “ಅತ್ಯಂತ ಪ್ರಾಮಾಣಿಕ ಮತ್ತು ನೈಜತೆಗೆ ಹತ್ತಿರವಾಗಿ ಮಕ್ಕಳ ಸೇವೆಯನ್ನು ಮಾಡುತ್ತಿರುವ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಅತ್ಯಂತ…

Read More

ಬೆಂಗಳೂರು : ಸೈಡ್ ವಿಂಗ್ (ರಿ.) ಬೆಂಗಳೂರು ಪ್ರಸ್ತುತ ಪಡಿಸುವ ಶೈಲೇಶ್ ಕುಮಾರ್ ಎಂ.ಎಂ. ಇವರ ರಚನೆ, ನಿರ್ಮಾಣ ಮತ್ತು ನಿರ್ದೇಶನದಲ್ಲಿ ‘ಸಡನ್ನಾಗ್ ಸತ್ಹೋದ್ರೆ’ ನಾಟಕ ಪ್ರದರ್ಶನವನ್ನು ದಿನಾಂಕ 14 ಸೆಪ್ಟೆಂಬರ್ 2025ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರದ ಸೇವಾಸದನದಲ್ಲಿ ಆಯೋಜಿಸಲಾಗಿದೆ. ಟಿಕೆಟ್ ದರ ರೂ.150/- ಆಗಿದ್ದು, ಹೆಚ್ಚಿನ ಮಾಹಿತಿಗಾಗಿ 9845087901 ಸಂಖ್ಯೆಯನ್ನು ಸಂಪರ್ಕಿಸಿರಿ.

Read More

ಪುತ್ತೂರು : ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ ವಿವೇಕಾನಂದ ಸಂಶೋಧನ ಕೇಂದ್ರ ಮತ್ತು ಐಕ್ಯೂಎಸಿ ಘಟಕ, ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ “ವಿವೇಕ ಸ್ಮೃತಿ” ಉಪನ್ಯಾಸ ಮಾಲಿಕೆ ಕಾರ್ಯಕ್ರಮವು ದಿನಾಂಕ 12 ಸೆಪ್ಟೆಂಬರ್ 2025ರಂದು ನಡೆಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ಖ್ಯಾತ ವಾಗ್ಮಿ, ಚಿಂತಕ ಶ್ರೀಕಾಂತ ಶೆಟ್ಟಿ ಕಾರ್ಕಳ ಮಾತನಾಡಿ “ಎಲ್ಲರೊಳಗೆ ಒಳಗೊಳ್ಳುವ ಮಾನಸಿಕತೆ ಭಾರತೀಯರಿಗಿದೆ. ಅದನ್ನು ವಿಶ್ವದೆಲ್ಲೆಡೆ ಪಸರಿಸಿದ ಸ್ವಾಮಿ ವಿವೇಕಾನಂದರು ಶಾಂತಿ ಸಹಿಷ್ಣುತೆಗೆ ಹೊಸ ಆಯಾಮವನ್ನು ನೀಡಿದ್ದಾರೆ. ದೇಶಕ್ಕಾಗಿ, ಸಮಾಜಕ್ಕಾಗಿ ಪ್ರಾಣವನ್ನು ಮುಡಿಪಾಗಿಡುವ ಸಾವಿರಾರು ಯುವಕರಿಗೆ ವಿವೇಕಾನಂದರೇ ಪ್ರೇರಣೆ. ವಿವೇಕಾನಂದರು ಚಿಕಾಗೋ ಧರ್ಮ ಸಮ್ಮೇಳನದ ಮೂಲಕ ಭಾರತೀಯ ಸಂಸ್ಕೃತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಿದರು. ಅವರ ಭಾಷಣ ಪಾಶ್ಚಿಮಾತ್ಯ ದೇಶಗಳಿಗೆ ಭಾರತದ ಮೇಲಿರುವ ದೃಷ್ಟಿಕೋನ ಬದಲಿಸುತ್ತದೆ. ವಿವೇಕಾನಂದರು ನಾಯಕರಿಗೆ ನಾಯಕ. ಭಾರತದ ಋಷಿ ಪರಂಪರೆಯ ಪ್ರತಿನಿಧಿ ವಿವೇಕಾನಂದರು. ಮುಂದಿನ ಪೀಳಿಗೆಗೆ ವಿವೇಕಾನಂದರ ಚಿಂತನೆಗಳು ಹೊಸ ಬೆಳಕಾಗಲಿದೆ” ಎಂದು ಹೇಳಿದರು. ವಿವೇಕಾನಂದ…

Read More

ಮೈಸೂರು : ಜಗತ್ತಿನ ಸುಪ್ರಸಿದ್ಧ ಮೈಸೂರು ದಸರಾ ಉತ್ಸವ ಪ್ರತೀ ವರ್ಷ ಅದ್ದೂರಿಯಾಗಿ ಆಚರಿಸಲ್ಪಡುತ್ತಿದೆ. ಈ ವರ್ಷ ಕೂಡ ದಿನಾಂಕ 22 ಸೆಪ್ಟೆಂಬರ್ 2025ರಿಂದ 01 ಅಕ್ಟೋಬರ್ 2025ರವರೆಗೆ ‘ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ – 2025’ವನ್ನು ಮೈಸೂರಿನ ಹಳೆ ಡಿ.ಸಿ. ಕಚೇರಿ ಎದುರು ಇರುವ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಏರ್ಪಡಿಸಲು ಉದ್ದೇಶಿಸಿದೆ. ಈ ಪುಸ್ತಕ ಮೇಳದಲ್ಲಿ ಪ್ರತೀ ದಿನ ಸಾಂಸ್ಕೃತಿಕ ಕಾರ್ಯಕ್ರಮ, ವಿಚಾರ ಸಂಕಿರಣ ಸೇರಿದಂತೆ ಅನೇಕ ಸಾಹಿತ್ಯಕ ಚಟುವಟಿಕೆಗಳನ್ನು ಆಯೋಜಿಸಲಾಗುವುದು. ಇದೇ ಸಂದರ್ಭದಲ್ಲಿ ರಾಜ್ಯದ ಆಸಕ್ತ ಲೇಖಕರು ಹಾಗೂ ಪ್ರಕಾಶಕರು ತಮ್ಮ ಹೊಸ ಪುಸ್ತಕಗಳನ್ನು ಬಿಡುಗಡೆ ಮಾಡಲು ಬಯಸಿದ್ದಲ್ಲಿ ಪುಸ್ತಕ ಬಿಡುಗಡೆ ಮಾಡಲು ಸಹ ಉದ್ದೇಶಿಸಲಾಗಿದೆ. ನಾಡಿನ ಖ್ಯಾತ ಸಾಹಿತಿಗಳು ಪುಸ್ತಕ ಮೇಳದಲ್ಲಿ ಪುಸ್ತಕಗಳನ್ನು ಬಿಡುಗಡೆ ಮಾಡುವರು. 1. ಪುಸ್ತಕ ಬಿಡುಗಡೆ ಮಾಡಲು ಆಸಕ್ತರು ಮೊದಲು ನೋಂದಾಯಿಸಬೇಕು. 2. ಬಿಡುಗಡೆ ಮಾಡಲು ಬಯಸುವ ಪುಸ್ತಕದ ಎರಡು ಪ್ರತಿಯೊಂದಿಗೆ ನಿಗದಿತ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಬೇಕು.…

Read More