Subscribe to Updates
Get the latest creative news from FooBar about art, design and business.
Author: roovari
ಬಂಟ್ವಾಳ : ದಿವಾಣ ಪ್ರತಿಷ್ಠಾನ ನೀಡುವ ‘ದಿವಾಣ ಪ್ರಶಸ್ತಿ’ಯನ್ನು ಹಿಮ್ಮೇಳ ಮಣಿಮುಂಡ ಸುಬ್ರಹ್ಮಣ್ಯ ಕಲಾವಿದ ಶಾಸ್ತ್ರಿ ಹಾಗೂ ದಿವಾಣ ಕಲಾ ಗೌರವ ಪ್ರಶಸ್ತಿಯನ್ನು ಬಣ್ಣದ ಕಲಾವಿದ ಸದಾಶಿವ ಶೆಟ್ಟಿಗಾರ್ ಅವರಿಗೆ ಪ್ರದಾನ ಮಾಡಲಾಯಿತು. ದಿನಾಂಕ 16 ಮಾರ್ಚ್ 2025 ರಂದು ಪಾಂಡವರ ಕಲ್ಲು ಬಳಿ ಇರುವ ಅನನ್ಯ ಫಾರ್ಮ್ಸ್ ಫುಡ್ ಸಂಸ್ಥೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಡನೀರು ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ದಿವಾಣ ತಿರುಮಲೇಶ್ವರಿ ಅಮ್ಮನವರ ಸ್ಮರಣಾರ್ಥ, ‘ಅನನ್ಯ ಫೀಡ್ಸ್ ಹುಬ್ಬಳ್ಳಿ’ ಇದರ ಬೆಳ್ಳಿಹಬ್ಬದ ಆಚರಣೆಯ ಪ್ರಯುಕ್ತ ಸಮಾಜ ಸೇವಕ ಉದಯಕುಮಾರ್ ಹಾಗೂ ಶಾರದಾ ದಂಪತಿಗೆ ‘ಅನನ್ಯ ರಜತ ಸಂಭ್ರಮ ಪುರಸ್ಕಾ’ರ ನೀಡಿ ಗೌರವಿಸಲಾಯಿತು. ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ. ಶ್ಯಾಮ ಭಟ್, ಹರಿನಾರಾಯಣದಾಸ ಆಸ್ರಣ್ಣ, ಹಾದಿಗಲ್ಲು ಲಕ್ಷ್ಮೀನಾರಾಯಣ ಭಾಗವಹಿಸಿದ್ದರು. ಎಂ. ಪ್ರಭಾಕರ ಜೋಶಿ ಇವರು ದಿವಾಣ ಭೀಮ ಭಟ್ಟರ ಸಂಸ್ಮರಣೆ ಮಾಡಿದರು. ಯಕ್ಷಗಾನ ಕಲಾವಿದ ಹರೀಶ ಬೊಳಂತಿಮೊಗರು ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು. ನಂತರ ಹನುಮಗಿರಿ…
ಪುತ್ತೂರು : ಬಹುವಚನಂ ಇದರ ವತಿಯಿಂದ 20ನೇ ವರ್ಷದ ಶ್ರೀರಾಮ ನವಮಿ ಮತ್ತು ಸಾಹಿತ್ಯ ಸಂಗೀತೋತ್ಸವ ಕಾರ್ಯಕ್ರಮವನ್ನು ದಿನಾಂಕ 06 ಏಪ್ರಿಲ್ 2025ರಂದು ಸಂಜೆ 4-00 ಗಂಟೆಗೆ ಪುತ್ತೂರಿನ ದರ್ಬೆ ವಿದ್ಯಾನಗರದ ಪದ್ಮಿನೀ ಸಭಾಭವನದಲ್ಲಿ ಆಯೋಜಿಸಿಲಾಗಿದೆ. ಸಂಜೆ 4-30 ಗಂಟೆಗೆ ‘ರಾಮಕಥಾ ಸುಧಾ’ ಎಂಬ ವಿಷಯದ ಬಗ್ಗೆ ಉಡುಪಿಯ ರಂಜನಿ ಮೆಮೋರಿಯಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಪ್ರೊ. ವಿ. ಅರವಿಂದ ಹೆಬ್ಬಾರ್ ಇವರಿಂದ ಉಪನ್ಯಾಸ ಮತ್ತು 5-30ರಿಂದ ನಡೆಯಲಿರುವ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯಲ್ಲಿ ಕುಮಾರಿ ಅರ್ಚನಾ ಮತ್ತು ಕುಮಾರಿ ಸಮನ್ವಿ ಇವರು ಹಾಡುಗಾರಿಕೆಗೆ ಚೆನ್ನೈಯ ವಿದುಷಿ ಗಾಯತ್ರಿ ವಿಭಾವರಿ ವಯಲಿನ್ ಹಾಗೂ ಬೆಂಗಳೂರಿನ ಸುನಿಲ್ ಸುಬ್ರಹ್ಮಣ್ಯ ಮೃದಂಗಂನಲ್ಲಿ ಸಾಥ್ ನೀಡಲಿದ್ದಾರೆ.
ಮೈಸೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಕೊಂಕಣಿ ಕ್ರಿಶ್ಚಿಯನ್ ಅಸೋಸಿಯೇಶನ್ ಇದರ ಸಹಯೋಗದಲ್ಲಿ ಆಯೋಜಿಸಿದ 2024ನೇ ಸಾಲಿನ `ಗೌರವ ಪ್ರಶಸ್ತಿ’ ಮತ್ತು ‘ಪುಸ್ತಕ ಪುರಸ್ಕಾರ’ ಕಾರ್ಯಕ್ರಮವು ದಿನಾಂಕ 23 ಮಾರ್ಚ್ 2025ರ ರವಿವಾರದಂದು ಮೈಸೂರಿನ ಕೊಂಕಣ್ ಭವನದಲ್ಲಿ ನಡೆಯಿತು. ಸಮಾರಂಭವನ್ನು ಉದ್ಘಾಟಿಸಿದ ಚಾಮರಾಜನಗರದ ಶಾಸಕರಾದ ಹರೀಶ್ ಗೌಡ ಮಾತನಾಡಿ “ಕೊಂಕಣಿ ಭಾಷೆಯ ಸಾಹಿತ್ಯ, ಕಲೆ ಇನ್ನೂ ಬೆಳೆಯಲಿ. ಕೊಂಕಣಿ ಭವನ ಪೂರ್ಣಗೊಳಿಸಲು ಅಗತ್ಯವಿರುವ ಅನುದಾನ ಕೊಡುವಲ್ಲಿ ಸರಕಾರಕ್ಕೆ ಮನವಿ ಮಾಡಲಾಗುವುದು. ಕೊಂಕಣಿ ಭಾಷೆ ಉಳಿಸಲು ಸಹಕಾರ ನೀಡಲಾಗುವುದು” ಎಂದರು. ಕಥೆ, ಕಾದಂಬರಿ, ಕವನಗಳನ್ನು ಬರೆದು ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪೆಟ್ರಿಕ್ ಕಾಮಿಲ್ ಮೋರಾಸ್, ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜೋಯೆಲ್ ಪಿರೇರಾ, ಸಾಂಸ್ಕೃತಿಕ ಕ್ಷೇತ್ರದ ಸಾಧಕಿ ಸೊಬೀನಾ ಮೋತೇಶ್ ಕಾಂಬ್ರೆಕರ್ ಇವರಿಗೆ ಅಕಾಡೆಮಿಯ ಗೌರವ ಪ್ರಶಸ್ತಿ ನೀಡಿ ಸಮ್ಮಾನಿಸಲಾಯಿತು. ಫೆಲ್ಸಿ ಲೋಬೋ ಅವರ ‘ಪಾಲ್ವಾಪೋಂತ್ ಕವಿತಾ’ ಪುಸ್ತಕಕ್ಕೆ ಹಾಗೂ ವಲೇರಿಯನ್ ಸಿಕ್ಕೇರಾ ಇವರ ‘ಶೆತಾಂ ಭಾಟಾಂ ತೊಟಾಂನಿ’…
ಮಂಗಳೂರು : ಭರತಾಂಜಲಿ (ರಿ.) ಕೊಟ್ಟಾರ ಮಂಗಳೂರು ಸಂಸ್ಥೆಯ 30 ವರ್ಷ ತುಂಬಿದ ಸಂಭ್ರಮದ ಪ್ರಯುಕ್ತ ‘ಭರತಾಂಜಲಿ ಕಿಂಕಿಣಿ ತ್ರಿಂಶತಿ’ ಕಾರ್ಯಕ್ರಮವು ದಿನಾಂಕ 29 ಮಾರ್ಚ್ 2025ರಂದು ಸಂಜೆ 5.15ರಿಂದ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ನಟರಾಜನಿಗೆ ದೀಪ ಪ್ರಜ್ವಲನೆಯನ್ನು ಸಂಸ್ಥೆಯ ಮಾರ್ಗದರ್ಶಕ ಗುರುಗಳಾದ ಉಳ್ಳಾಲ ಮೋಹನ ಕುಮಾರ್ ಮಾಡಲಿದ್ದು. ಕಟೀಲು ದೇವಳದ ಆನುವಂಶಿಕ ಅರ್ಚಕರಾದ ವೇದಮೂರ್ತಿ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಮುಖ್ಯ ಅತಿಥಿಗಳಾಗಿ ಕೂಟ ಮಹಾಜಗತ್ತು ಸಾಲಿಗ್ರಾಮ ಇದರ ಕೇಂದ್ರೀಯ ಅಧ್ಯಕ್ಷರಾದ ಎಚ್. ಸತೀಶ ಹಂದೆ, ಉದ್ಯಮಿ ರಘುನಾಥ್ ಸೋಮಯಾಜಿ, ಧಾರ್ಮಿಕ ವಿದ್ವಾಂಸ ಕಶೆಕೋಡಿ ಸೂರ್ಯನಾರಾಯಣ ಭಟ್, ಉದ್ಯಮಿ ಜಿತೇಂದ್ರ ಕೊಟ್ಟಾರಿ, ಕ್ರೆಡೈ ನಿಕಟಪೂರ್ವ ಅಧ್ಯಕ್ಷ ಪುಷ್ಪರಾಜ್ ಜೈನ್, ಸಂಸ್ಥೆಯ ಹಿರಿಯ ವಿದ್ಯಾರ್ಥಿ ಡಾ. ಶ್ರೇಯಸ್ ಭಾಗವಹಿಸಲಿರುವರು. ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಾದ ಅನ್ನಪೂರ್ಣಾ ರಿತೇಶ್, ಪ್ರಕ್ಷಿಲಾ ಜೈನ್, ಶ್ರಾವ್ಯಾ ಅಮೋಫ್ ಶೆಟ್ಟಿ, ಮಧುರ ಕಾರಂತ್, ಮಾನಸ ಕಾರಂತ್, ಮಾನಸಾ ಕುಲಾಲ್, ವಂದನಾ ಸುಜ್ಞಾನ್ ಮೊದಲಾದವರು ನೃತ್ಯ ಪ್ರದರ್ಶನ…
ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ನೀಡುವ ‘ವರನಟ ಡಾ.ರಾಜ್ ಕುಮಾರ್ ಪ್ರಶಸ್ತಿ’ಗೆ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯು ರೂಪಾಯಿ 25 ಸಾವಿರ ನಗದು ಒಳಗೊಂಡಿದೆ. ಕನ್ನಡ ನಾಡು-ನುಡಿಗೆ ಅನನ್ಯ ಸೇವೆ ಸಲ್ಲಿಸುತ್ತಿರುವ ನಾಡಿನ ಹಿರಿಯ ರೊಬ್ಬರಿಗೆ ಪ್ರತಿ ವರ್ಷ ಈ ಪ್ರಶಸ್ತಿ ನೀಡಲಾಗುತ್ತಿದೆ. ದಿನಾಂಕ 14 ಏಪ್ರಿಲ್ 2025ರಂದು ಸಂಜೆ ಘಂಟೆ 5.00ಕ್ಕೆ ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ವಿಮರ್ಶಕ ಎಚ್. ಎಸ್. ರಾಘವೇಂದ್ರ ರಾವ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಎಂದು ಕೇಂದ್ರದ ಅಧ್ಯಕ್ಷ ಸಿ. ಕೆ. ರಾಮೇಗೌಡ ತಿಳಿಸಿದ್ದಾರೆ.
ಮಂಗಳೂರು : ಅರೆಹೊಳೆ ಪ್ರತಿಷ್ಠಾನ ಹಾಗೂ ಕಲಾಭಿ (ರಿ.) ಸಹಯೋಗದಲ್ಲಿ ಮಂಗಳೂರಿನ ಬೋಂದೆಲ್ – ಮೂಡುಶೆಡ್ಡೆ ರಸ್ತೆ ಸಮೀಪದಲ್ಲಿ ನಿರ್ಮಾಣಗೊಂಡ ‘ಕಲಾಗ್ರಾಮ’ದ ಲೋಕಾರ್ಪಣೆ, ರಂಗಭೂಮಿ ದಿನಾಚರಣೆ ಹಾಗೂ ಅರೆಹೊಳೆ ರಂಗಭೂಮಿ ಪ್ರಶಸ್ತಿ ಪ್ರದಾನ, ಅರೆಹೊಳೆ ನಾಟಕೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ದಿನಾಂಕ 27 ಮಾರ್ಚ್ 2025ರ ಗುರುವಾರದಂದು ನಡೆಯಿತು. ಕಲಾಗ್ರಾಮ ಉದ್ಘಾಟಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಎಂ. ಆಳ್ವ ಮಾತನಾಡಿ “ಕಲಾಕ್ಷೇತ್ರದಲ್ಲಿ ಇರುವವರು ಜೀವನ ಸಾರ್ಥಕತೆಯನ್ನು ಪಡೆದುಕೊಳ್ಳುತ್ತಾರೆ. ಕಲಾಗ್ರಾಮ ಬೆಳೆಯಲಿ, ರಂಗಭೂಮಿ ಬೆಳವಣಿಗೆಗೆ ಕೊಡುಗೆ ನೀಡುವಂತಾಗಲಿ” ಎಂದರು. ಅರಹೊಳೆ ಪ್ರತಿಷ್ಠಾನದ ಗೌರವಾಧ್ಯಕ್ಷ ಡಾ.ಹರಿಕೃಷ್ಣ ಪುನರೂರು ಪ್ರಶಸ್ತಿ ಪ್ರದಾನ ಮಾಡಿದರು. ರಂಗಕರ್ಮಿ ಆಸಿಫ್ ಕ್ಷತ್ರಿಯ ಬೆಂಗಳೂರು ಇವರಿಗೆ ‘ಅರೆಹೊಳೆ ರಂಗಭೂಮಿ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾದ ತಾರನಾಥ್ ಗಟ್ಟಿ ಕಾಪಿಕಾಡ್, ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ಬೈಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ. ರಾಜೇಶ್, ನಾಟಕಕಾರ ಫಾ. ಆಲ್ವಿನ್…
ಉಡುಪಿ : ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಹಾಗೂ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ವತಿಯಿಂದ ವಿಶ್ವರಂಗಭೂಮಿ ದಿನಾಚರಣೆ ಪ್ರಯುಕ್ತ ಆರನೇ ವರ್ಷದ ‘ಮಲಬಾರ್ ವಿಶ್ವರಂಗ ಪುರಸ್ಕಾರ’ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 26 ಮಾರ್ಚ್ 2025ರ ಬುಧವಾರದಂದು ಮಲಬಾರ್ ಗೋಲ್ಡ್ ಉಡುಪಿ ಶಾಖೆಯಲ್ಲಿ ನಡೆಯಿತು. ಉಡುಪಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ ಇವರ ಅಧ್ಯಕ್ಷತೆಯಲ್ಲಿ ನಡೆಡಾ ಈ ಸಮಾರಂಭದಲ್ಲಿ ರಂಗ ನಟ, ನಿರ್ದೇಶಕ ಅರವಿಂದ ಕುಲಕರ್ಣಿ ಧಾರವಾಡ, ರಂಗ ಸಂಘಟಕ ಹಾಗೂ ನಿರ್ದೇಶಕ ಗಣೇಶ್ ಕಾರಂತ್ ಬೈಂದೂರು, ರಂಗನಟಿ, ಕಂಠದಾನ ಕಲಾವಿದೆ ಪ್ರಿಯಾ ಸರೋಜಾ ದೇವಿ ಮುಂಬೈ, ರಂಗನಟ ಪ್ರಕಾಶ್ ಜಿ. ಕೊಡವೂರು, ರಂಗನಟಿ ಮಂಜುಳಾ ಜನಾರ್ದನ್ ಮಂಗಳೂರು ಇವರಿಗೆ ಪ್ರಶಸ್ತಿ ಪತ್ರ, ಫಲಕ, ನಗದು ಹಾಗೂ ಬೆಳ್ಳಿಪದಕದೊಂದಿಗೆ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ದಂತ ವೈದ್ಯರಾದ ಡಾ. ವಿಜಯೇಂದ್ರ ರಾವ್ ಹಾಗೂ ಉದ್ಯಮಿ ಸುಗುಣ ಸುವರ್ಣ ಮಾತನಾಡಿದರು. ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷರಾದ…
ಮಂಗಳೂರು : ಕಲಾಭಿ ಥಿಯೇಟರ್ ಮಂಗಳೂರು, ಕೆನರಾ ಕಲ್ಚರಲ್ ಅಕಾಡೆಮಿಯ ಸಹಕಾರದೊಂದಿಗೆ 9ರಿಂದ 17 ವರ್ಷದ ಮಕ್ಕಳಿಗೆ ಹತ್ತು ದಿನಗಳ ‘ಅರಳು 2025’ ವೃತ್ತಿಪರ ರಂಗಭೂಮಿ ಕಾರ್ಯಾಗಾರವನ್ನು ದಿನಾಂಕ 16 ಏಪ್ರಿಲ್ 2025ರಿಂದ 27 ಏಪ್ರಿಲ್ 2025ರವರೆಗೆ ಪ್ರತಿದಿನ ಬೆಳಗ್ಗೆ 9-00 ಗಂಟೆಯಿಂದ ಸಂಜೆ 5-00 ಗಂಟೆ ತನಕ ಕೊಡಿಯಾಲ್ ಬೈಲಿನ ಕೆನರಾ ಇಂಗ್ಲೀಷ್ ಹೈಯರ್ ಪ್ರೈಮರಿ ಶಾಲೆಯಲ್ಲಿ ಆಯೋಜಿಸಲಾಗಿದೆ. ಮಂಗಳೂರಿನ ಎಲ್ಲಾ ಮಕ್ಕಳಿಗೂ ಮುಕ್ತ ಅವಕಾಶವಿದ್ದು, ಹೆಚ್ಚಿನ ಮಾಹಿತಿಗಾಗಿ 8431631998 ಮತ್ತು 7338226936 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.
ಕೊಡಗು : ಕಾಸರಗೋಡು ಕನ್ನಡ ಭವನ ಮತ್ತು ಕೇರಳ ರಾಜ್ಯ – ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸಂಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ ಸಂಧ್ಯಾರಾಣಿ ದಂಪತಿಗೆ ಕೊಡಗು ಜಿಲ್ಲೆಯ ಕೊಡಗು ಕನ್ನಡ ಭವನ ಮತ್ತು ಕೊಡಗು ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ‘ಗಡಿನಾಡ ಚೇತನ ವಿಶೇಷ ಗೌರವ ಪ್ರಶಸ್ತಿ 2025’ ನೀಡಿ ಗೌರವಿಸಿತು. ಕೊಡಗು ಕನ್ನಡ ಭವನ ಅಧ್ಯಕ್ಷರಾದ ಬೊಳ್ಳಜಿರ ಬಿ. ಅಯ್ಯಪ್ಪ ಹಾಗೂ ಕೊಡಗು ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷೆ ರುಬೀನ ಎಂ.ಎ. ಜಂಟಿಯಾಗಿ ಈ ಪ್ರಶಸ್ತಿ ನೀಡಿದರು. ಕೊಡಗಿನ ಮಡಿಕೇರಿಯ ಪತ್ರಿಕಾ ಭವನದಲ್ಲಿ ದಿನಾಂಕ 23 ಮಾರ್ಚ್ 2025ರಂದು ನಡೆದ ಕೊಡಗು ಜಿಲ್ಲಾ ಘಟಕದ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ಕೊಡಗು ಕನ್ನಡ ಭವನ ಅಧ್ಯಕ್ಷರಾದ ಬೊಳ್ಳಜಿರ ಬಿ. ಅಯ್ಯಪ್ಪ ಅಧ್ಯಕ್ಷತೆ ವಹಿಸಿದ್ದರು. ಕೊಡಗಿನ ಹಿರಿಯ ಸಾಹಿತಿ ಭಾರಧ್ವಾಜ್ ಕೆ. ಆನಂದತೀರ್ಥ, ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರೂ, ಕೊಡಗಿನ ಜನಪ್ರಿಯ ಶಕ್ತಿ ದಿನಪತ್ರಿಕೆಯ…
ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸಾಪ್ತಾಹಿಕ ನೃತ್ಯಸರಣಿ 90ರ ಕಾರ್ಯಕ್ರಮವು ದಿನಾಂಕ 31 ಮಾರ್ಚ್ 2025ರಂದು ಸಂಜೆ ಗಂಟೆ 6-25ಕ್ಕೆ ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಮಂಗಳೂರಿನ ವಿದುಷಿ ವೈಷ್ಣವಿ ವಿ. ಪ್ರಭು ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ. ವಿದುಷಿ ವೈಷ್ಣವಿ ವಿ. ಪ್ರಭು ಇವರು ಖ್ಯಾತ ಭರತನಾಟ್ಯ ಕಲಾವಿದೆಯಾಗಿದ್ದು, ಪ್ರಸ್ತುತ ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಅಂತಿಮ ವರ್ಷದ ಎಂ.ಕಾಂ. ಪದವಿಯ ವಿದ್ಯಾರ್ಥಿಯಾಗಿದ್ದಾರೆ. 17 ವರ್ಷಗಳ ಕಾಲ ಗುರುಗಳಾದ ವಿದುಷಿ ಶ್ರೀಮತಿ ರಶ್ಮಿ ಸರಳಾಯರವರ ಮಾರ್ಗದರ್ಶನದಲ್ಲಿ ಭರತನಾಟ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರು ಜೂನಿಯರ್, ಸೀನಿಯರ್, ಪ್ರೀ ಮತ್ತು ಅಂತಿಮ ವಿದ್ವತ್ ಪರೀಕ್ಷೆಗಳಲ್ಲಿ ವಿಶೇಷ ಶ್ರೇಣಿಯನ್ನು ಪಡೆದುಕೊಂಡಿರುತ್ತಾರೆ. ಅವರು ರಮಾ ವೈದ್ಯನಾಥನ್, ಶ್ವೇತಾ ಪ್ರಚಂಡ, ರಾಧಿಕಾ ಶೆಟ್ಟಿ, ಬ್ರಘಾ ಬ್ರೆಸೆಲ್ ಸೇರಿದಂತೆ ಅನೇಕ…