Subscribe to Updates
Get the latest creative news from FooBar about art, design and business.
Author: roovari
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಅಳಗೋಡು ನಿವಾಸಿ ಶ್ರೀಯುತ ಅನಂತಮೂರ್ತಿ ಬಿ.ಟಿ ಹಾಗೂ ಶ್ರೀಮತಿ ಗೀತಾ ಅವರ ಮಗನಾಗಿ 1.05.1995 ರಂದು ಡಾ.ಶಿವಕುಮಾರ ಅಳಗೋಡು ಅವರ ಜನನ. ಕನ್ನಡ ಸಾಹಿತ್ಯದಲ್ಲಿ ದ್ವಿತೀಯ ರ್ಯಾಂಕಿನೊಂದಿಗೆ ಸ್ನಾತಕೋತ್ತರ ಪದವಿ ಹಾಗೂ ಹಂಪಿಯ ಕನ್ನಡ ವಿಶ್ವವಿದ್ಯಾಲಯದಿಂದ ‘ಯಕ್ಷಗಾನ ಪೂರ್ವರಂಗ ಅಧ್ಯಯನ’ ವಿಷಯಕ್ಕೆ ಪಿ.ಎಚ್ಡಿ ಪದವಿ ಇವರ ವಿದ್ಯಾಭ್ಯಾಸ. ಡಾ.ಶಿವಕುಮಾರ ಅಳಗೋಡು ಅವರು ಹವ್ಯಾಸಿ ಯಕ್ಷಗಾನ ಕಲಾವಿದ, ತಾಳಮದ್ದಳೆ ಅರ್ಥಧಾರಿ, ಛಂದೋಬದ್ದ ಯಕ್ಷ ಕವಿ, ಲೇಖಕರಾಗಿ ಗುರುತಿಸಿಕೊಂಡಿರುವ ಇವರು ಪ್ರಸ್ತುತ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಪದವಿ ವಿಭಾಗದ ಕನ್ನಡ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಡಿ.ಎಸ್. ಸುಬ್ರಹ್ಮಣ್ಯ ಮೂರ್ತಿ, ನಿಟ್ಟೂರು ಇವರು ಯಕ್ಷಗಾನದ ಪ್ರಾಥಮಿಕ ಗುರು. ಬಳಿಕ ಮಂಜುನಾಥ ಕುಲಾಲ್ ಐರೋಡಿ, ಪ್ರಸಾದ್ ಕುಮಾರ್ ಮೊಗೆಬೆಟ್ಟು, ಕೃಷ್ಣಮೂರ್ತಿ ಭಟ್ ಬಗ್ವಾಡಿ ಅವರ ಬಳಿ ಯಕ್ಷಗಾನವನ್ನು ಅಭ್ಯಾಸ ಮಾಡಿರುತ್ತಾರೆ ಹಾಗೂ ಶಿಮಂತೂರು ನಾರಾಯಣ ಶೆಟ್ಟಿ ಅವರ ಪಟ್ಟದ ಶಿಷ್ಯರಾದ ಗಣೇಶ್ ಕೊಲೆಕಾಡಿ, ಡಿ.ಎಸ್ ಶ್ರೀಧರ್ ಇವರು ಛಂದಸ್ಸಿನ…
ಮೂಡುಬಿದಿರೆ : ಶಿವರಾಮ ಕಾರಂತ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ಈ ಬಾರಿಯ ಡಾ. ‘ಶಿವರಾಮ ಕಾರಂತ ಪುರಸ್ಕಾರ’ಕ್ಕೆ ನಾಲ್ವರು ಸಾಹಿತಿಗಳ ಕೃತಿಗಳನ್ನು ಆಯ್ಕೆ ಮಾಡಲಾಗಿದೆ. ಎಚ್.ಆರ್. ಲೀಲಾವತಿಯವರ ಆತ್ಮ ಕಥನ – ‘ಹಾಡಾಗಿ ಹರಿದಾಳೆ’, ಡಾ. ಬಿ. ಜನಾರ್ದನ ಭಟ್ ಇವರ ‘ವಿನೂತನ ಕಥನ ಕಾರಣ’, ಪ್ರೊ. ಎಚ್.ಟಿ. ಪೋತೆ ಇವರ ‘ಅಂಬೇಡ್ಕರ್ ಮತ್ತು…’, ಡಾ. ನಿತ್ಯಾನಂದ ಬಿ. ಶೆಟ್ಟಿಯವರ ‘ಮಾರ್ಗಾನ್ವೇಷಣೆ’ ಕೃತಿಗಳಿಗೆ ನೀಡಲಾಗಿದೆ. ಪುರಸ್ಕಾರವು ರೂ.10 ಸಾವಿರ ನಗದು ಗೌರವ ಸಂಭಾವನೆ ಹೊಂದಿದೆ ಎಂದು ಶಿವರಾಮ ಕಾರಂತ ಪ್ರತಿಷ್ಠಾನದ ಅಧ್ಯಕ್ಷೆ ಜಯಶ್ರೀ ಅಮರನಾಥ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿ ಡಾ. ಜಯಪ್ರಕಾಶ್ ಮಾವಿನಕುಳಿ ತಿಳಿಸಿದ್ದಾರೆ. ಎಚ್.ಆರ್. ಲೀಲಾವತಿ ಇವರು ಆಕಾಶವಾಣಿ ಮೈಸೂರಿನ ‘ಎ’ ದರ್ಜೆಯ ಸಂಗೀತ ಸಂಯೋಜಕ ಕಲಾವಿದೆ. ಹಲವಾರು ಶ್ರೇಷ್ಟ ಸಂಗೀತ ಅಧ್ಯಾಪಕರಿಂದ ಶಾಸ್ತ್ರೀಯ ಸಂಗೀತದೊಂದಿಗೆ ಭಾವಗೀತೆ ಭಜನೆಗಳಂತಹ ಸಂಗೀತದ ಬೇರೆ ಬೇರೆ ವಿಭಾಗಗಳನ್ನು ಕಲಿತು ಕರಗತ ಮಾಡಿಕೊಂಡವರು. ಮೈಸೂರು ಬೆಂಗಳೂರು ಕಲ್ಕತ್ತ ಮಾತ್ರವಲ್ಲದೆ, ಭಾರತದಾದ್ಯಂತ ಬೇರೆ ಬೇರೆ…
ಮಂಗಳೂರು : ಎರಿಕ್ ಅಲೆಕ್ಸಾಂಡರ್ ಒಝೇರಿಯೊ ಇವರ ಜನುಮದ ಅಮೃತೋತ್ಸವ ಪ್ರಯುಕ್ತ, ಅವರು ಭಾಷೆ, ಸಂಗೀತ, ಕಲೆ, ಸಂಸ್ಕೃತಿ, ಸಂಘಟನೆ ಹೀಗೆ ಕೊಂಕಣಿಯ ಸಮಗ್ರ ಅಭಿವೃದ್ಧಿಗಾಗಿ ಮಾಡಿದ ಕಾರ್ಯಗಳನ್ನು ಗೌರವಿಸಲು, ಅವರಿಂದ ಪ್ರೇರಣೆ ಪಡೆದು, ಅವರ ಕೊಂಕಣಿ ಕೆಲಸಗಳ ಮುಂದುವರಿಕೆಯನ್ನು ಪ್ರೋತ್ಸಾಹಿಸಲು ಮಾಂಡ್ ಸೊಭಾಣ್ ‘ಎರಿಕ್ ಅಲೆಕ್ಸಾಂಡರ್ ಒಝೇರಿಯೊ ಅಮೃತೋತ್ಸವ ಸಂಶೋಧನಾ ಅನುದಾನ’ವನ್ನು ಘೋಷಿಸಿದೆ. ಈ ಅನುದಾನ ಒಂದು ಲಕ್ಷ ರೂಪಾಯಿಯನ್ನು ಒಳಗೊಂಡಿದ್ದು, ಮೂರು ತಿಂಗಳ ಕಾಲಾವಧಿಯಲ್ಲಿ, ಕೆಳಗೆ ನೀಡಿದ ವಿಷಯಗಳ ಪೈಕಿ ಒಂದರ ಮೇಲೆ ಅಧ್ಯಯನಾತ್ಮಕ ಸಂಶೋಧನೆ ನಡೆಸಬೇಕು. ಬೇರೆ ಬೇರೆ ಸಂಶೋಧನಾ ಅಧ್ಯಯನದ ಬಗ್ಗೆ ಈ ಅನುದಾನವನ್ನು ವಾರ್ಷಿಕವಾಗಿ ನೀಡಲಾಗುವುದು. ಕೊಂಕಣಿ ಭಾಷೆ-ಸಂಸ್ಕೃತಿಯ ಬಗ್ಗೆ ಅಧ್ಯಯನ ನಡೆಸುವ ಕ್ಷಮತೆಯುಳ್ಳ, ಯಾವುದೇ ಭಾಷೆ ಅಥವಾ ಕೊಂಕಣಿಯ ಯಾವುದೇ ಭಾಷಾ ಪ್ರಬೇಧದ ಜನರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-07-2024. ಆಸಕ್ತಿಯುಳ್ಳವರು ತಮ್ಮ ಪರಿಚಯ ಹಾಗೂ ಸಂಶೋಧನೆಗೆ ಆಯ್ಕೆ ಮಾಡಿದ ವಿಷಯದ ಸಾರಾಂಶ ಬರೆದು ಮಾಂಡ್ ಸೊಭಾಣ್ ಮಿಂಚಂಚೆಗೆ…
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 2023-24ನೇ ಸಾಲಿನ ಪ್ರತಿಭಾ ದಿನಾಚರಣೆ ಕಾರ್ಯಕ್ರಮವು ದಿನಾಂಕ 24-05-2024 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಅಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ “ಯಕ್ಷಗಾನ ಶ್ರೀಮಂತ ಕಲೆಯಾಗಿದ್ದು, ಬದುಕಿನಲ್ಲಿ ಸಂಸ್ಕಾರ ಕಲಿಸುತ್ತದೆ. ಶಿಕ್ಷಣವು ಜೀವನ ನಡೆಸಲು ಸಂಪಾದನೆಗೆ ದಾರಿ ಮಾಡಿಕೊಟ್ಟರೆ, ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಯಕ್ಷಗಾನ ದಾರಿ ದೀಪವಾಗಿದೆ. ಶಿಕ್ಷಣ ನನ್ನ ಕೈ ಸೇರದಿದ್ದರೂ ಯಕ್ಷಗಾನ ನನ್ನ ಹೃದಯ ಸೇರಿದೆ. ಛಲ ಹಾಗೂ ಅಭಿಮಾನಿಗಳ ಪ್ರೋತ್ಸಾಹ ಈ ಕ್ಷೇತ್ರದಲ್ಲಿ ನನ್ನನ್ನು ಯಶಸ್ವಿಗೊಳಿಸಿದೆ. ಜಾತಿ, ಧರ್ಮ, ಭೇದಭಾವ ಮರೆತು ಮನುಷ್ಯತ್ವ ಮೈಗೂಡಿಸಿಕೊಳ್ಳಿ. ಒಳ್ಳೆಯತನ ಎಂದಿಗೂ ಎಲ್ಲರ ಕೈ ಹಿಡಿಯುತ್ತದೆ.” ಎಂದರು. ಸ್ವಸ್ತಿಕಾ ನ್ಯಾಷನಲ್ ಬಿಸಿನೆಸ್ ಸ್ಕೂಲಿನ ಪ್ರಾಂಶುಪಾಲೆ ಡಾ. ಮಾಲಿನಿ ಎನ್. ಹೆಬ್ಬಾರ್ ಮಾತನಾಡಿ “ಜೀವನದಲ್ಲಿ ಸಮಯ ಪ್ರಜ್ಞೆ ಇದ್ದಾಗ ಮಾತ್ರ ಯಶಸ್ಸು ಲಭಿಸುತ್ತದೆ. ಹಾಗಾಗಿ ಸಮಯ ಪ್ರಜ್ಞೆ ಕೂಡ ಒಂದು ಪ್ರತಿಭೆ ಇದ್ದಂತೆ. ಸುತ್ತಲಿನ ಪರಿಸರದಲ್ಲಿರುವುದನ್ನು ಸೂಕ್ಷ್ಮವಾಗಿ ಗ್ರಹಿಸಿ…
ಬಂಟ್ವಾಳ : ದೇರಾಜೆ ಸೀತಾರಾಮಯ್ಯ ಸಂಸ್ಮರಣ ಸಮಿತಿ ಆಯೋಜಿಸಿದ್ದ ಹಿರಿಯ ಸಾಹಿತಿ, ವಿದ್ವಾಂಸದ್ವಯರಾದ ದಿ. ಏರ್ಯ ಲಕ್ಷ್ಮೀನಾರಾಯಣ ಆಳ್ವ ಹಾಗೂ ದಿ. ದೇರಾಜೆ ಸೀತಾರಾಮಯ್ಯ ಅವರ ಒಡನಾಟದ ಸಂಸ್ಮರಣೆಯ ‘ದೇರಾಜೆ – ಏರ್ಯ ನೆನಪಿನ ಕ್ಷಣಗಳು’ ಕಾರ್ಯಕ್ರಮವು ದಿನಾಂಕ 23-05-2024ರಂದು ಮೊಡಂಕಾಪು ಸಮೀಪ ಏರ್ಯಬೀಡಿನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರ ಪತ್ನಿ ಏರ್ಯ ಆನಂದಿ ಆಳ್ವ ಅವರನ್ನು ಗೌರವಿಸಲಾಯಿತು. ಈ ಸಂದರ್ಭ ಉಭಯ ಸಾಹಿತಿಗಳ ಕುರಿತು ಮಾತನಾಡಿದ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, “ಏರ್ಯ ಮತ್ತು ದೇರಾಜೆ ಸೀತಾರಾಮಯ್ಯ ಇಬ್ಬರೂ ಯಕ್ಷಗಾನ ಸಾಹಿತ್ಯಕ್ಕೆ ನೀಡಿದ ಕೊಡುಗೆ ಅನನ್ಯವಾದುದು. ಏರ್ಯ ಅವರಿಗೆ ಸಾಹಿತ್ಯ, ಸಂಸ್ಕೃತಿ ಕಲೆಗಳ ಮೇಲಿನ ಪ್ರೀತಿ ಅಗಾಧವಾಗಿತ್ತು. ಅವರು ಸಮಾಜಮುಖಿಯಾಗಿ ವಿವಿಧ ಕ್ಷೇತ್ರಗಳಲ್ಲಿ ದುಡಿದಿದ್ದು, ಉತ್ಸಾಹ ಗಮನಾರ್ಹ. ಕಲೆಯ ರಸದ ಬಗ್ಗೆ ಇದ್ದಂಥ ಒಲವು ದೇರಾಜೆ ಸೀತಾರಾಮಯ್ಯ ಅವರೆಡೆ ಸೆಳೆದಿತ್ತು. ಮಾತು ಮತ್ತು ಬರಹಗಳ ಮೂಲಕ ಶ್ರೇಷ್ಠವಾದ ಸಾಹಿತ್ಯ ಸೃಷ್ಟಿ ಮಾಡಿರುವುದು ದೇರಾಜೆ…
ಕಾರ್ಕಳ : ಅಮಿತ್ ಎಸ್. ಪೈ ಸ್ಮಾರಕ ಯೋಗ ಧ್ಯಾನ ಮಂದಿರ ಪೆರ್ವಾಜೆಯಲ್ಲಿ ಹೊಸಸಂಜೆ ಪ್ರಕಾಶನದ 33ನೆಯ ಪ್ರಕಟಣೆ ಲೇಖಕ ಕೆ.ಎ. ಶೆಟ್ಟಿ ಕುಂಜತ್ತೂರು ಇವರ ‘ಭಾಂಧವ್ಯದ ಬೆಸುಗೆ’ ಕೃತಿ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 19-05-2024ರಂದು ನಡೆಯಿತು. ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಕಾರ್ಕಳ ಸಾಹಿತ್ಯ ಸಂಘದ ಗೌರವಾಧ್ಯಕ್ಷ ತುಕಾರಾಮ ನಾಯಕ್ “ಆಧುನಿಕ ಬದುಕಿನಲ್ಲಿ ಬಹುವಿಧದ ತಂತ್ರಜ್ಞಾನ ಕೈಯಳತೆಯಲ್ಲಿದೆ. ಇದರಿಂದ ನಮ್ಮ ಬದುಕು ಸುಲಲಿತವಾಗಿದೆ ಎಂಬುದು ಸತ್ಯ. ಆದರೆ ಇದರ ಅತಿಯಾದ ಬಳಕೆಯಿಂದ ಮನುಷ್ಯನ ಬದುಕು ಕೂಡ ಅಸ್ತವ್ಯಸ್ತವಾಗಿದೆ ಎಂಬುದನ್ನು ಮರೆಯುವಂತಿಲ್ಲ. ಮೊಬೈಲ್, ಕಂಪ್ಯೂಟರ್, ಇಂಟರ್ ನೆಟ್ ಗಳಂತಹ ಆಧುನಿಕ ಸೌಲಭ್ಯಗಳನ್ನು ಮಿತವಾಗಿ ಬಳಸುವ ಮೂಲಕ ನಮ್ಮ ಬದುಕಿನಲ್ಲಿ ಸೌಕರ್ಯಗಳು ಸೃಷ್ಟಿಸುವ ಅನಾಹುತಗಳನ್ನು ತಪ್ಪಿಸಬಹುದು. ನೆಮ್ಮದಿಯ ಬದುಕು ಬೇಕಿದ್ದರೆ ಇಂತಹ ಸಾಧನಗಳ ಅತಿಬಳಕೆ ಬಿಟ್ಟು ಪುಸ್ತಕಗಳನ್ನು ಓದುವ ಮತ್ತು ಬರೆಯುವ ಮೂಲಕ ಬದಲಾವಣೆ ತಂದುಕೊಳ್ಳಬೇಕು” ಎಂದು ಸಲಹೆ ನೀಡಿದರು. ಕರ್ನಾಟಕ ರಾಜ್ಯ ಕ್ವಾರಿ ಮತ್ತು ಕೃಷರ್ಸ್ ಓನರ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ…
ಮೈಸೂರು : ಅದಮ್ಯ ರಂಗ ಶಾಲೆಯು ಕಳೆದ ಎಂಟು ವರ್ಷಗಳಿಂದ ಮೈಸೂರಿನ ರಂಗಭೂಮಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ವಯಸ್ಕರ ಮತ್ತು ಮಕ್ಕಳ ರಂಗಭೂಮಿಗೆ ಅಪಾರ ಕೊಡುಗೆ ನೀಡುತ್ತಾ ಬರುತ್ತಿದೆ. ಅದಮ್ಯದ ಮುಂದಿನ ಭಾಗವಾಗಿ 30 ದಿನಗಳ ಅವಧಿಯ ಅಭಿನಯ ತರಬೇತಿ ಮತ್ತು ಕಲಾತ್ಮಕ ಚಲನಚಿತ್ರ ತಯಾರಿ ಮತ್ತು ಚಿತ್ರೀಕರಣ 27-05-2024ರಂದು ಪ್ರಾರಂಭವಾಗಲಿದೆ. ಅಭಿನಯ ತರಬೇತಿ, ಧ್ವನಿ ಮುದ್ರಣ, ಪ್ರಸಾದನ, ಸಂಕಲನ ಸೇರಿದಂತೆ ಸಿನಿಮಾ ಮಾಧ್ಯಮದ ಬೇರೆ ಬೇರೆ ಆಯಾಮಗಳ ಕುರಿತು ಪರಿಚಯಾತ್ಮಕ ಪ್ರಾಯೋಗಿಕ ತರಗತಿಗಳು ನಡೆಯಲಿದ್ದು, ನುರಿತ ನಿರ್ದೇಶಕರು ಮತ್ತು ಚಲನಚಿತ್ರ ಕಲಾವಿದರು ತರಬೇತಿ ನೀಡಲಿದ್ದಾರೆ. ಕಾರ್ಯಾಗಾರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳನ್ನು ತೊಡಗಿಸಿಕೊಂಡು ಕಲಾತ್ಮಕ ಸಿನಿಮಾ ತಯಾರಾಗಲಿದ್ದು, ಪ್ರತಿದಿನ ಸಂಜೆ 6.30ರಿಂದ 9.00ರವರೆಗೂ ಚಿತ್ರೀಕರಣ ನಡೆಯಲಿದೆ. ಮೊದಲು ನೋಂದಣಿ ಮಾಡಿಕೊಂಡ ಗರಿಷ್ಠ 30 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು. ವಯೋಮಿತಿ 16ರಿಂದ 50 ವರ್ಷ ಹೆಚ್ಚಿನ ಮಾಹಿತಿಗಾಗಿ ರಂಗಶಾಲೆ ಕಾರ್ಯದರ್ಶಿ ಚಂದ್ರು ಮಂಡ್ಯ – 8660103141 ಇವರನ್ನು ಸಂಪರ್ಕಿಸಬಹುದು.
ಬೆಂಗಳೂರು : ರಂಗಚಂದಿರ (ರಿ) ಬೆಂಗಳೂರು ನೇತೃತ್ವದಲ್ಲಿ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ರಂಗಚಿನ್ನಾರಿ ಕಾಸರಗೋಡು (ರಿ.) ಅಭಿನಯಿಸುವ ಎರಡು ನಾಟಕಗಳ ಪ್ರದರ್ಶನ ದಿನಾಂಕ 01-06-2024ರಂದು ಸಂಜೆ ಗಂಟೆ 6-00ಕ್ಕೆ ಬೆಂಗಳೂರಿನ ಜೆ.ಸಿ. ರಸ್ತೆ, ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಕೆ.ವಿ. ನಾಗರಾಜ್ ಮೂರ್ತಿ ಇವರು ವಹಿಸಲಿದ್ದು, ಚಲನ ಚಿತ್ರ ನಟರಾದ ಶ್ರೀ ಸುಂದರ್ ರಾಜ್ ಇವರು ಉದ್ಘಾಟಿಸಲಿದ್ದಾರೆ. ರಂಗಚಿನ್ನಾರಿಯ ನಿರ್ದೇಶಕರಾದ ಕಾಸರಗೋಡು ಚಿನ್ನಾ ಇವರ ಗೌರವ ಉಪಸ್ಥಿತಿಯಲ್ಲಿ ನಾಟಕಕಾರರಾದ ಡಾ. ನಾ. ದಾಮೋದರ ಶೆಟ್ಟಿ ಮತ್ತು ರಂಗಚಂದಿರದ ಗೌರವಧ್ಯಕ್ಷರಾದ ಶ್ರೀ ಆರ್. ಕೆ. ಹೆಗಡೆ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವಿರತ ಹರೀಶ್, ನಯನ ರಾಜು ಮತ್ತು ಎಸ್. ತಿಮ್ಮಯ್ಯ ಇವರಿಗೆ ರಂಗ ಗೌರವ ಹಾಗೂ ಡಾ. ಡಿ.ಕೆ. ಚೌಟರ ನೆನಪು ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿಜೇತ ಕಲಾ ನಿರ್ದೇಶಕರಾದ ಶ್ರೀ ಶಶಿಧರ…
ಕಾಸರಗೋಡು: ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘ ಮತ್ತು ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘ ದೇಲಂಪಾಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಡಾ. ರಮಾನಂದ ಬನಾರಿ ಹಾಗೂ ಗಣರಾಜ ಕುಂಬ್ಳೆ ರಚಿಸಿರುವ ‘ತಾಳಮದ್ದಳೆ ಒಂದು ಐತಿಹಾಸಿಕ ಅಧ್ಯಯನ’ ಮತ್ತು ಪ್ರೊ. ಪಿ. ಎನ್. ಮೂಡಿತ್ತಾಯರು ಸಂಪಾದಿಸಿದ ‘ಚಿಕಿತ್ಸಕ ದೃಷ್ಟಿಯ ಸಂಸ್ಕೃತಿಯ ಸೂತ್ರಧಾರಿ ಡಾ.ರಮಾನಂದ ಬನಾರಿ’ ಎಂಬ ಕೃತಿಗಳ ಲೋಕಾರ್ಪಣಾ ಸಮಾರಂಭವು ದಿನಾಂಕ 19-05-2024ರ ಭಾನುವಾರದಂದು ಕಾಸರಗೋಡಿನ ಎಡನೀರು ಮಠದ ಭಾರತೀ ಸದನದಲ್ಲಿ ನಡೆಯಿತು. ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ “ಕನ್ನಡ ಸಾರಸ್ವತ ಲೋಕಕ್ಕೆ ಮತ್ತು ತಾಳಮದ್ದಳೆ ಕ್ಷೇತ್ರಕ್ಕೆ ಡಾ. ರಮಾನಂದ ಬನಾರಿಯವರು ನೀಡಿದ ಕೊಡುಗೆ ಅಪಾರವಾದುದು. ಅವರ ವ್ಯಕ್ತಿತ್ವ ಸಾಧನೆ ಪುಸ್ತಕರೂಪದಲ್ಲಿ ಹೊರಬರುತ್ತಿರುವುದು ತುಂಬಾ ಸಂತೋಷದ ವಿಚಾರ. ‘ತಾಳಮದ್ದಳೆಯ ಐತಿಹಾಸಿಕ ಅಧ್ಯಯನದ’ ಪುಸ್ತಕವನ್ನು ಹೊರತರುತ್ತಿರುವುದು ತುಂಬಾ ಸ್ತುತ್ಯರ್ಹ.” ಎಂದು ಹೇಳಿದರು. ಖ್ಯಾತ ಸಂಶೋಧಕ ಡಾ. ಕಬ್ಬಿನಾಲೆ ವಸಂತ ಭಾರಧ್ವಾಜ ಮೈಸೂರು ಇವರ ಅಧ್ಯಕ್ಷತೆಯಲ್ಲಿ ನಡೆದ…
ಉಡುಪಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಉಡುಪಿಯ ರಾಗ ಧನ ಸಂಸ್ಥೆ ಹಮ್ಮಿಕೊಂಡಿದ್ದ ಮುತ್ತುಸ್ವಾಮಿ ದೀಕ್ಷಿತರ ಅಪರೂಪದ ಕೃತಿಗಳ ಕಾರ್ಯಾಗಾರವು 32 ಸಂಗೀತಾಭ್ಯಾಸಿಗಳ ಪಾಲ್ಗೊಳ್ಳುವಿಕೆಯೊಂದಿಗೆ ದಿನಾಂಕ 22-05-2024ರಂದು ಸಂಪನ್ನಗೊಂಡಿತು. ವಿದ್ವಾನ್ ಜಿ. ರವಿಕಿರಣ್ ಚೆನೈಯವರ ಸಂಗೀತ ಕಛೇರಿಯ ಮುನ್ನ ನಡೆದ ಸಮಾರೋಪ ಸಮಾರಂಭದಲ್ಲಿ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯೂ ಆದ ವಿದ್ವಾನ್ ಶ್ರೀ ಜಿ. ರವಿಕಿರಣ್, ಶಾಸ್ತ್ರೀಯ ಸಂಗೀತದಲ್ಲಿ ಒಲವು ಬೆಳೆಸಿಕೊಂಡ ಮಕ್ಕಳನ್ನು ಶ್ಲಾಘಿಸಿ, “ಇದರಲ್ಲಿ ನಿರಂತರತೆ ಕಾಯ್ದುಕೊಳ್ಳಿ. ನಿನ್ನೆ ಮತ್ತು ಇಂದು ಕಲಿತ ಪಾಠಗಳನ್ನು ದಿನವೂ ಮನನ ಮಾಡುವುದು ವಾಗ್ಗೇಯಕಾರ ಮುತ್ತುಸ್ವಾಮಿ ದೀಕ್ಷಿತರಿಗೆ ನಿಮ್ಮ ಗುರುಕಾಣಿಕೆ. ನಿಮ್ಮ ಓದುವಿಕೆಗೆ ಸಂಗೀತ ಯಾವತ್ತೂ ಅಡ್ಡಿಯಾಗುವುದಿಲ್ಲ. ಸಂಗೀತಾಭ್ಯಾಸವು ನಿಮ್ಮ ತನ್ಮಯತೆಯನ್ನು (ಕಾನ್ಸಂಟ್ರೇಷನ್) ಹೆಚ್ಚಿಸುವುದಲ್ಲದೆ ಮನಸ್ಸಿಗೆ ಶಾಂತತೆಯನ್ನು ತರುತ್ತದೆ” ಎಂದರು. ತದನಂತರ ಕಾರ್ಯಾಗಾರದಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿ, ಹರಸಿದರು. ಅಧ್ಯಕ್ಷೀಯ ನುಡಿಗಳನ್ನಾಡಿದ ಡಾ. ಶ್ರೀಕಿರಣ್ ಹೆಬ್ಬಾರ್, “ಕಾರ್ಯಾಗಾರದ ಯಶಸ್ಸಿಗೆ ಹೆತ್ತವರ ಪ್ರೋತ್ಸಾಹ ಕಾರಣ. ಸಂಗೀತಾಸಕ್ತ ಮಕ್ಕಳ ಪಾಲ್ಗೊಳ್ಳುವಿಕೆ ನಿರಂತರವಾಗಿರಲಿ, ಮಕ್ಕಳನ್ನು…