Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಸತ್ಯ ಸಾರಮಾನಿ ಯಕ್ಷಗಾನ ಕಲಾ ಮಂಡಳಿ ಮಿಜಾರ್ ಇವರ ಜಂಟಿ ಆಶ್ರಯದಲ್ಲಿ ತುಳು ಯಕ್ಷಗಾನ ಪ್ರದರ್ಶನವನ್ನು ದಿನಾಂಕ 14 ಸೆಪ್ಟೆಂಬರ್ 2025ರಂದು ಸಂಜೆ 6-00 ಗಂಟೆಗೆ ಮಂಗಳೂರಿನ ಉರ್ವಸ್ಟೋರ್ ತುಳು ಭವನದ ಸಿರಿ ಚಾವಡಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಪ್ರಬುದ್ಧ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ತುಳು ನಾಡಿನ ಅವಳಿ ವೀರರ ಪಾಡ್ದನ ಸಾಹಿತ್ಯ ಆಧಾರಿತ ಅಮರ ಕಥೆ ‘ಕಾರ್ನಿಕದ ಕಾನದ ಕಟದೆರ್’ ಪ್ರಸಂಗದ ಯಕ್ಷಗಾನದ ಹಿಮ್ಮೇಳದಲ್ಲಿ ಡಾ. ಪ್ರಖ್ಯಾತ್ ಶೆಟ್ಟಿ ಅಳಿಕೆ ಮತ್ತು ಚಂದ್ರಶೇಖರ ಕಕ್ಕೆಪದವು ಭಾಗವತರಾಗಿ, ಆನಂದ ಪಡ್ರೆ ಚಂಡೆಯಲ್ಲಿ, ಗುರುಪ್ರಸಾದ್ ಬೊಳಿಂಜಡ್ಕ ಮದ್ದಲೆಯಲ್ಲಿ ಮತ್ತು ರಾಮ ಬಿ. ಅರಳ ಚಕ್ರತಾಳದಲ್ಲಿ ಸಹಕರಿಸಲಿದ್ದಾರೆ.
ವಿದುಷಿ ಸೌಮ್ಯಶ್ರೀ ಇಂದು ನಡೆದ ತನ್ನ ರಂಗಪ್ರವೇಶದ ಮುದವಾದ ಶುಭ ಮುಂಜಾನೆಯಲ್ಲಿ ತನ್ನ ಸಾತ್ವಿಕಾಭಿನಯದ ಸೊಬಗಿನ ನೃತ್ಯವಲ್ಲರಿಯಿಂದ ಗಮನ ಸೆಳೆದಳು. ‘ದಿ ಸ್ಟ್ರಕ್ಚರಲ್ ಸ್ಕೂಲ್ ಆಫ್ ಫೈನ್ ಆರ್ಟ್ಸ್’ -ನೃತ್ಯಸಂಸ್ಥೆಯ ನೃತ್ಯಗುರು ಶ್ರೀಮತಿ ಅಕ್ಷರ ಭಾರದ್ವಾಜ್ ಅವರ ಬದ್ಧತೆಯ ಉತ್ತಮ ಮಾರ್ಗದರ್ಶನದಲ್ಲಿ ಅವಳು, ನಗರದ ಎ.ಡಿ.ಎ. ರಂಗಮಂದಿರದಲ್ಲಿ ವಿದ್ಯುಕ್ತವಾಗಿ ರಂಗಪ್ರವೇಶ ಮಾಡಿ ‘ಮಾರ್ಗಂ’ ಸಂಪ್ರದಾಯದ ಹಲವು ಕೃತಿಗಳನ್ನು ಸಾಕ್ಷಾತ್ಕರಿಸಿ ಕಲಾರಸಿಕರ ಮೆಚ್ಚುಗೆ ಗಳಿಸಿದಳು. ಕರ್ನಾಟಕದ ಭರತನಾಟ್ಯ ಮೈಸೂರು ಪರಂಪರೆಯ ಶ್ರೀಮಂತಿಕೆಯನ್ನು ಒಳಗೊಂಡಿರುವ ‘ಜಯ ಜಾನಕೀ ರಮಣ’ – ‘ತೋಡಯ ಮಂಗಳಂ’ (ರಚನೆ- ಭದ್ರಾಚಲಂ ರಾಮದಾಸರು) ಶ್ರೀರಾಮನಿಗೆ ಈ ಮಂಗಳಗೀತೆಯ ಮೂಲಕ ‘ಪುಷ್ಪಾಂಜಲಿ’ಯನ್ನು ಅರ್ಪಿಸಿ, ತನ್ನ ಪ್ರಸ್ತುತಿಯನ್ನು ಶುಭಾರಂಭಿಸಿದಳು ಕಲಾವಿದೆ. ನಂಜನಗೂಡು ಪರಂಪರೆಯನ್ನು ಒಳಗೊಂಡಿರುವ ‘ಅಷ್ಟದಿಕ್ಪಾಲಕ ಸ್ತೋತ್ರ’ದಲ್ಲಿ ಅಷ್ಟದಿಕ್ಪಾಲಕರನ್ನು ಆರಾಧಿಸಿ, ಪೂರ್ವದಲ್ಲಿ ಇಂದ್ರ, ಆಗ್ನೇಯದಲ್ಲಿ ಅಗ್ನಿ, ದಕ್ಷಿಣದಲ್ಲಿ ಯಮ, ನೈರುತ್ಯದಲ್ಲಿ ನ್ರಿತ್ತಿ, ಪಶ್ಚಿಮದಲ್ಲಿ ವರುಣ, ವಾಯುವ್ಯದಲ್ಲಿ ವಾಯು, ಉತ್ತರದಲ್ಲಿ ಕುಬೇರ, ಈಶಾನ್ಯದಲ್ಲಿ ಈಶಾನನಿಗೆ ಅವರ ದಿವ್ಯ ಸೊಗಸಾದ ಭಂಗಿಗಳಲ್ಲಿ ನಮನ ಸಲ್ಲಿಸಿದ್ದು ನಯನ…
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಟಿತ ‘ಮನೋಹರಿ ಪಾರ್ಥಸಾರಥಿ ಮನುಶ್ರೀ ದತ್ತಿ’ ಪ್ರಶಸ್ತಿಗೆ ಹಿರಿಯ ಬರಹಗಾರ್ತಿ ಎಲ್. ಗಿರಿಜಾ ರಾಜ್ ಇವರನ್ನು ಆಯ್ಕೆ ಮಾಡಲಾಗಿದೆ. ಸಾಹಿತ್ಯ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಪುರಸ್ಕರಿಸಲು ಅತ್ತಿಮಬ್ಬೆ ಪ್ರತಿಷ್ಟಾನ ಟ್ರಸ್ಟ್ (ರಿ.) ಈ ಪುರಸ್ಕಾರವನ್ನು ಸ್ಥಾಪಿಸಿದ್ದು 2009ರಿಂದಲೂ ಇದು ನಿರಂತರವಾಗಿ ನಡೆದುಕೊಂಡು ಶಕ್ತ ಪರಂಪರೆ ರೂಪುಗೊಂಡಿದೆ. 2025ನೆಯ ಸಾಲಿನಲ್ಲಿ ಈ ಪುರಸ್ಕಾರಕ್ಕೆ ಪಾತ್ರವಾಗಿರುವ ಎಲ್. ಗಿರಿಜಾ ರಾಜ್ ಚಿತ್ರದುರ್ಗದಲ್ಲಿ ಜನಿಸಿ ಬೆಂಗಳೂರಿನಲ್ಲಿ ನೆಲೆಗೊಂಡವರು. ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿರುವ ಇವರ ಒಟ್ಟು ಹದಿನಾರು ಕೃತಿಗಳು ಅಚ್ಚಾಗಿದ್ದು ಕಥೆ-ಲೇಖನ ಸೇರಿದಂತೆ ಹಲವು ಬರಹಗಳು ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಅಚ್ಚಾಗಿವೆ. ಲೇಖಕಿಯರ ಸಂಘವೂ ಸೇರಿದಂತೆ ಹಲವು ಸಂಘಟನೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ನಾಡೋಜ ಡಾ. ಮಹೇಶ ಜೋಶಿಯವರ ನೇತೃತ್ವದಲ್ಲಿ ಇತ್ತೀಚೆಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ದತ್ತಿದಾನಿಗಳ ಪರವಾಗಿ ಡಾ. ವರದಾ ಶ್ರೀನಿವಾಸ್, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಬಿ.ಎಂ.…
ಬೆಂಗಳೂರು : ಕಪ್ಪಣ್ಣ ಅಂಗಳ ಇದರ ವತಿಯಿಂದ ರಮಾ ಭಾರದ್ವಾಜ್ ಇವರಿಂದ ‘ಅವತರಣ’ ನಾಟ್ಯದ ಕಥೆ ನೃತ್ಯ ಕಾರ್ಯಕ್ರಮವನ್ನು ದಿನಾಂಕ 14 ಸೆಪ್ಟೆಂಬರ್ 2025ರಂದು ಸಂಜೆ 06-30 ಗಂಟೆಗೆ ಬೆಂಗಳೂರಿನ ಜೆ.ಪಿ. ನಗರದ ಕಪ್ಪಣ್ಣ ಅಂಗಳದಲ್ಲಿ ಆಯೋಜಿಸಲಾಗಿದೆ.
ಮಡಿಕೇರಿ : ಗೋಣಿಕೊಪ್ಪಲಿನ ಶ್ರೀ ಕಾವೇರಿ ದಸರಾ ಸಮಿತಿ ಮತ್ತು ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಗೋಣಿಕೊಪ್ಪಲು ಶ್ರೀ ಕಾವೇರಿ ದಸರಾ ಬಹುಭಾಷಾ ಕವಿಗೋಷ್ಠಿಯು ದಿನಾಂಕ 26 ಸೆಪ್ಟೆಂಬರ್ 2026ರ ಶುಕ್ರವಾರ ಬೆಳಿಗ್ಗೆ 10-00 ಗಂಟೆಗೆ ಗೋಣಿಕೊಪ್ಪಲು ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಿರ್ಮಿಸಲಾಗುವ ಶ್ರೀ ಕಾವೇರಿ ದಸರಾ ಕಲಾ ವೇದಿಕೆಯಲ್ಲಿ ಆಯೋಜಿಸಲಾಗಿದೆ. ಗೋಣಿಕೊಪ್ಪಲು ಬಹುಭಾಷಾ ಕವಿಗೋಷ್ಠಿ ಆಯೋಜನ ಸಮಿತಿಯ ಅಧ್ಯಕ್ಷರಾಗಿರುವ ಕೋಳೆರ ದಯಾ ಚಂಗಪ್ಪರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಂಚಾಲಕರಾಗಿ ಶ್ರೀಮತಿ ಎಸ್.ಎಂ, ರಜನಿ, ಕಾರ್ಯದರ್ಶಿಯಾಗಿ ಶ್ರೀಮತಿ ಶೀಲಾ ಬೋಪಣ್ಣ, ಸಹಕಾರ್ಯದರ್ಶಿಯಾಗಿ ಟಿ.ಅರ್. ವಿನೋದ್, ನಿರ್ದೇಶಕರಾಗಿ ಶ್ರೀಮತಿ ಚಂದನಾ ಮಂಜುನಾಥ್, ಶ್ರೀಮತಿ ಓಮನ, ಶ್ರೀಮತಿ ಉಳುವಂಗಡ ಕಾವೇರಿ, ಜಗದೀಶ್ ಜೋಡುಬೀಟಿ, ಕೆ.ವಿ. ರಾಮಕೃಷ್ಣ, ಶ್ರೀ ಕಾವೇರಿ ಸಮಿತಿಯ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಸಂಯೋಜಕ ಎಂ.ಕೆ. ಚಂದನ್ ಕಾಮತ್, ಪ್ರಧಾನ ಕಾರ್ಯದರ್ಶಿ ಕಂದಾ ದೇವಯ್ಯ ಮತ್ತು ಕನ್ನಡ ಸಾಹಿತ್ಯ ಪರಿಷತ್…
ಉಡುಪಿಯ ಪ್ರತಿಷ್ಠಿತ ಸಂಸ್ಥೆ ರಾಗ ಧನ (ರಿ.) ಇದರ ಆಶ್ರಯದಲ್ಲಿ ರಾಗರತ್ನಮಾಲಿಕೆ -40 ತಿಂಗಳ ಸರಣಿ ಕಾರ್ಯಕ್ರಮವು ಚೆನ್ನೈಯ ಭಾರದ್ವಾಜ್ ಸುಬ್ರಹ್ಮಣ್ಯಂ ಇವರ ಸಂಗೀತ ಕಛೇರಿಯೊಂದಿಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಇತ್ತೀಚೆಗೆ ನಡೆಯಿತು. ಉತ್ತಮ ಶಾರೀರ ಭಾವಸ್ಪಷ್ಟತೆ, ಉಚ್ಚಾರ ಸ್ಪುಟತೆ, ಲಯ ಶುದ್ಧತೆಯಿಂದ ವಿದ್ವತ್ಪೂರ್ಣ ಕಚೇರಿ ನೀಡಿದವರು ಚೆನ್ನೈನ ಭಾರದ್ವಾಜ್ ಸುಬ್ರಹ್ಮಣ್ಯಂ. ಆರಂಭದಲ್ಲಿ ವಲಚಿ ನವರಾಗಮಾಲಿಕೆಯನ್ನು ಆದಿತಾಳದಲ್ಲಿ ಸುಂದರವಾಗಿ ಹಾಡಿ ಚರಣ ಭಾಗದಲ್ಲಿ ಬೇರೆ ಬೇರೆ ರಾಗಗಳಿಗೆ ಸ್ವರ ಪ್ರಸ್ತಾರವನ್ನು ಅಚ್ಚುಕಟ್ಟಾಗಿ ಹಾಕಿ ಹಾಡಿದರು. ಮುಂದೆ ಆರಭಿ ರಾಗದ ಚುಟುಕಾದ ರಾಗಾಲಾಪನೆ ‘ವಿಘ್ನೇಶ್ವರ ಶುಭಕಾರಕ’ ಕೃತಿಗೆ ಸ್ವರ ಪ್ರಸ್ತಾರವನ್ನು ನೀಡಿದರು. ತದನಂತರ ಶುದ್ಧಧನ್ಯಾಸಿ ರಾಗಾಲಾಪನೆ ‘ನಾರಾಯಣ ನಿನ್ನ’ ಪುರಂದರದಾಸರ ದೇವರ ನಾಮವು ಸ್ವರಪ್ರಸ್ತಾರದೊಂದಿಗೆ ಮೂಡಿ ಬಂದದು ಶ್ಲಾಘನೀಯವಾಗಿತ್ತು. ಮುಂದುವರಿದು ವೇಗವಾಗಿ ‘ಮಾಳವಿ’ ರಾಗದಲ್ಲಿ ‘ನೆನರುಂಚಿನ’ ಆದಿತಾಳದಲ್ಲಿ ಕೃತಿಯನ್ನು ಪ್ರಸ್ತುತಪಡಿಸಿದರು. ಕಛೇರಿ ಮುಂದುವರಿಯುತ್ತಾ ಭೈರವಿ ರಾಗ ಆಲಾಪನೆಯೂ ದೀರ್ಘವಾಗಿ ಒಂದೇ ಉಸಿರಿನಲ್ಲಿ ನಿಂತ ಪರಿ ಅನನ್ಯ. ‘ನನ್ನುಬ್ರೋವಲಲಿತ’ ಕೃತಿಯನ್ನು…
ಹೈದರಬಾದ್ : ಹೈದರಾಬಾದಿನಲ್ಲಿ ಸ್ಥಳೀಯ ಶಾಸಕರಾದ ಕಾಲೇರು ವೆಂಕಟೇಶ್ ಹಾಗೂ ಡಿಸಿಪಿ ರಾಹುಲ್ ಹೆಗ್ಡೆಯವರ ಉಪಸ್ಥಿತಿಯಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ಇದರ 44ನೇ ಘಟಕದ ಉದ್ಘಾಟನಾ ಸಮಾರಂಭವು ದಿನಾಂಕ 10 ಸೆಪ್ಟೆಂಬರ್ 2025ರ ಬುಧವಾರದಂದು ನಡೆಯಿತು. ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅರ್ಚಕರು, ಸುಪ್ರಭಾತ ಗ್ರೂಪ್ಸ್ ಆಫ್ ಹೋಟೆಲ್ ಹೈದರಾಬಾದಿನ ಮಾಲೀಕರಾದ ಕೃಷ್ಣಮೂರ್ತಿ ಮಂಜ ಅವರು ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದರೆ ಶ್ರೀ ಎನ್. ಶ್ರೀಧರ್ ರಾವ್ ಗೌರವಾಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಟಿ. ಸತ್ಯನಾರಾಯಣ ಹತ್ತಾವರ ಮತ್ತು ಏ. ಜಯರಾಮ ಶೆಟ್ಟಿ, ಕಾರ್ಯದರ್ಶಿಯಾಗಿ ಜಿ. ರತ್ನಾಕರ್ ರೈ, ಜತೆ ಕಾರ್ಯದರ್ಶಿಯಾಗಿ ಶ್ರೀಮತಿ ಸುಮತಿ ನಿರಂಜನ್ ರಾವ್ ಮತ್ತು ಕೋಶಾಧಿಕಾರಿಯಾಗಿ ಎನ್. ಕೆ. ರಮಾ ಮೂರ್ತಿಯವರು ಹಾಗೂ 18 ಮಂದಿ ಸದಸ್ಯರು ತಮ್ಮ ಸ್ಥಾನವನ್ನು ಅಲಂಕರಿಸಿದರು. ಇದೇ ಸಂದರ್ಭದಲ್ಲಿ ಶ್ರೀ ಕೃಷ್ಣಮೂರ್ತಿ ಮಂಜ ಅವರು ಕಳೆದ ಯಕ್ಷದ್ರುವ ದಶಮ ಸಂಭ್ರಮಕ್ಕೆ ಹೈದರಾಬಾದಿನಿಂದ ಘೋಷಿಸಿದ ಹತ್ತು ಲಕ್ಷದ ಮೊತ್ತವನ್ನು ಸಹೃದಯಿ ದಾನಿಗಳ ಮೂಲಕ ಪಟ್ಲ ಸತೀಶ್ ಶೆಟ್ಟಿ ಅವರಿಗೆ…
ಚೇಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್, ಚೇಳೂರು ತಾಲೂಕು, ಚಿಕ್ಕಬಳ್ಳಾಪುರ ಜಿಲ್ಲೆ, ಕರ್ನಾಟಕ ರಾಜ್ಯ ಇವರು ಚೇಳೂರು ತಾಲೂಕು ಕೇಂದ್ರದಲ್ಲಿ ದಸರ ಹಬ್ಬದ ಪ್ರಯುಕ್ತ ಭಾರತೀಯ ಭಾಷೆಗಳ ಕವಿ ಮಿತ್ರರಿಗೆ “ದಸರ ಕವಿಗೋಷ್ಠಿ”ಯನ್ನು ಆಯೋಜಿಸುತಿದ್ದು, ಭಾಗವಹಿಸಲು ಇಚ್ಚಿಸುವ ಕವಿಗಳು ಈ ಕೆಳಗೆ ನೀಡಿರುವ ಜಂಗಮ ವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು. ರಾಧಾಮಣಿ ಎಂ. ಕೋಲಾರ – 9972731056, ಸತ್ಯ ನಾರಾಯಣ ವಿ. – 9945291154, ಪಿ. ಎಸ್. ಶ್ರೀಧರ್(ಶಾಸ್ತ್ರಿ) – 9606794039 ನಿಯಮಗಳು:- 1)ಕವನ ಭಾರತೀಯ ಭಾಷೆಗಳಲ್ಲಿ ಯಾವುದೇ ಭಾಷೆಯದ್ದಾಗಿರಬಹುದು, 2)ಒಬ್ಬರು ಒಂದು ಕವನ ಮಾತ್ರ ವಾಚನ ಮಾಡಲು ಅವಕಾಶ ನೀಡಲಾಗುವುದು, 3)ದೇಶ ಭಕ್ತಿ, ನಾಡು ನುಡಿಗೆ ಸಂಬಂಧಪಟ್ಟಿರಬೇಕು, 4)ಚುಟುಕು, ಹನಿಗವನ, ಟಂಕಾ, ಹಾಯ್ಕುಗಳಿಗೆ ಅವಕಾಶವಿರುವುದಿಲ್ಲ, 5)ದಸರ ಹಬ್ಬದ ಕವನಗಳಿಗೆ ಆದ್ಯತೆ ನೀಡಲಾಗುವುದು, 6)ಕವನದಲ್ಲಿ 16 ರಿಂದ 20 ಸಾಲುಗಳು ಇರಲಿ, 7)ಕವನಗಳು ಸ್ವರಚಿತವಾಗಿರಬೇಕು, 8)ಕವಿಗಳು ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಬೇಕು, 9)ಭಾಗವಹಿಸಿದ ಎಲ್ಲಾ ಕವಿಗಳಿಗೂ ಅಭಿನಂದನಾ ಪತ್ರಗಳನ್ನು ನೀಡಿ ಗೌರವಿಸಲಾಗುವುದು, 10)ಸಂಸ್ಥೆಯ…
ಮಂಗಳೂರು: ಭರತಾಂಜಲಿಯ ವಿದ್ವಾನ್ ಶ್ರೀಧರ ಹೊಳ್ಳ ಹಾಗೂ ವಿದ್ವಾನ್ ಪ್ರತಿಮಾ ಶ್ರೀಧರ ಹೊಳ್ಳ ಅವರ ಶಿಷ್ಯೆ ಕುಮಾರಿ ಅಪೂರ್ವ ಬಿ. ರಾವ್ ಅವರ ರಂಗಪ್ರವೇಶ ಸಮಾರಂಭ 06 ಸೆಪ್ಟೆಂಬರ್ 2025ರ ಶನಿವಾರದಂದು ಮಂಗಳೂರಿನ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ವೀಣಾ ಬನ್ನಂಜ್ಜೆ ಮಾತನಾಡಿ “ವಿವಿಧ ಜಾತಿ, ಪ್ರಕಾರಗಳ ಸ್ವರಗಳು, ಪರಿಕರಗಳು ಏಕ ಕಾಲದಲ್ಲಿ ಕೂಡಿ ಪ್ರಸ್ತುತ ಪಡಿಸಿದಾಗ ಭಾರತೀಯ ಪರಂಪರೆ, ನಾಟ್ಯ ಪರಂಪರೆಯ ಅನಾವರಣವಾಗುತ್ತದೆ. ನಮ್ಮ ನೃತ್ಯ ಪರಂಪರೆಯು ಪವಿತ್ರ ಪರಂಪರೆಯಾಗಿದೆ. ಯಾಕೆಂದರೆ ಸ್ವತಃ ಶ್ರೀಕೃಷ್ಣ ಪರಮಾತ್ಮ ಹಾಗೂ ರುದ್ರ ದೇವರು ಕುಣಿದ ಪ್ರಕಾರ. ಇದು ದೇವರು ನಮಗೆ ನೀಡಿದ ಪರಂಪರೆಯಾಗಿದೆ. ದೇವಲೋಕದಲ್ಲಿ ಜನಿಸಿದ ಈ ಕಲೆಯ ಪರಂಪರೆಯನ್ನು ಭೂಲೋಕಕ್ಕೆ ಇಳಿಸಿ, ಮನುಷ್ಯರನ್ನು ಗಂಧರ್ವರ ಸಮಾನರನ್ನಾಗಿ ಮಾಡುವ ಶಕ್ತಿ ನೃತ್ಯಕಲೆಗೆ ಇದೆ. ಈ ನೃತ್ಯಮಾರ್ಗವು ಭಾವಲೋಕವನ್ನು ದೇವಲೋಕದೊಂದಿಗೆ ಜೋಡಿಸುವ ಸೇತುವೆಯಂತಿದೆ. ಈ ಮಾರ್ಗದಲ್ಲಿ ಅನೇಕ ಶ್ರೇಷ್ಠ ಕಲಾವಿದರು ನೃತ್ಯಸಾಧನೆಯ ಮೂಲಕ ದೇವರನ್ನೇ ಒಲಿಸಿಕೊಂಡಿದ್ದಾರೆ. ಆ ಪವಿತ್ರ ಪರಂಪರೆಯ ಮುಂದುವರಿಕೆಯಾಗಿ ಇಂದು…
1929ರ ಬೆಳಗಾವಿ ಸಾಹಿತ್ಯ ಸಮ್ಮೇಳನದಲ್ಲಿ ಬೇಂದ್ರೆಯವರು ‘ಹಕ್ಕಿ ಹಾರುತಿದೆ ನೋಡಿದಿರಾ’ ಎಂಬ ಪದ್ಯವನ್ನು ವಾಚಿಸಿ ನಾಡಿಗೆ ‘ಬೇಂದ್ರೆ’ ಕಾವ್ಯದ ಗುಂಗು ಹಿಡಿಸಿಬಿಟ್ಟರು. ಇವರ ಕಾವ್ಯ ವಾಚನ ಕೇಳಿದ ಮಾಸ್ತಿಯವರು ಬೆಳಗಾವಿಯಿಂದ, ಧಾರವಾಡದ ಬೇಂದ್ರೆಯವರ ಮನೆಗೆ ಬಂದು ಅವರು ಬರೆದ ಕವಿತೆಗಳನ್ನೆಲ್ಲಾ ತೆಗೆದುಕೊಂಡು ಹೋಗಿ ಆಯ್ದು ‘ಗರಿ’ ಕವನ ಸಂಕಲನವನ್ನು 1932ರಲ್ಲಿ ಬೆಂಗಳೂರಿನಿಂದ ಪ್ರಕಟಮಾಡಿದರು. ಇದು ಬೇಂದ್ರೆಯವರ ಮೊದಲ ಕವನ ಸಂಕಲನ. ಈ ಕವನ ಸಂಕಲನ ನಾಡಿನಲ್ಲೆಲ್ಲಾ ಒಂದು ರೀತಿಯ ಕಾವ್ಯದ ವಿದ್ಯುತ್ ಸಂಚಲನವನ್ನುಂಟು ಮಾಡಿತು. ಇದರಲ್ಲಿ ಒಟ್ಟು 55 ಕವಿತೆಗಳಿವೆ. ಮೊದಲನೆಯದು ‘ಬೆಳಗು’. ಕೊನೆಯದು ‘ಗರಿ’. ಈ ಸಂಕಲನದ ಕೊನೆಯ ಕವಿತೆಯೆ, ಈ ಸಂಕಲನದ ಶಿರೋನಾಮೆ. ಗರಿ ಹಕ್ಕಿಗಳಲ್ಲಿ ಮಾತ್ರ ಕಂಡು ಬರುವ ಒಂದು ವಿಶೇಷ ನಿರ್ಜೀವ ರಚನೆ. ಆದರೆ ಈ ನಿರ್ಜಿವತ್ವವು ಪಕ್ಷಿಗೆ ಹಾರಲು ಜೀವವನ್ನು ತಂದು ಕೊಡುತ್ತದೆ. ಇದು ಇದರ ವಿಶೇಷ. ಇವು ಪಕ್ಷಿ ದೇಹವನ್ನು ಮುಚ್ಚುವದಲ್ಲದೆ, ಪಕ್ಷಿ ದೇಹಕ್ಕೆ ಹೊಸ ಹೊರ ರೂಪ ರಚನೆಯನ್ನು ಕೊಡುತ್ತವೆ. ಜಗತ್ತಿನ…