Author: roovari

ಬೆಂಗಳೂರು : ಕರ್ನಾಟಕ ಲಲಿತಕಲಾ ಅಕಾಡಮಿಯಿಂದ ಕೊಡಮಾಡುವ 51ನೇ ವಾರ್ಷಿಕ ಕಲಾ ಬಹುಮಾನಕ್ಕೆ ಮಂಗಳೂರಿನ ಖ್ಯಾತ ಕಲಾವಿದ ರಾಜೇಂದ್ರ ಕೇದಿಗೆ ಆಯ್ಕೆಯಾಗಿದ್ದಾರೆ. ಶ್ರೀಯುತರು ಚಿತ್ರ ಕಲಾವಿದ ಮಾತ್ರವಲ್ಲದೆ ಕನ್ನಡ ಮತ್ತು ತುಳು ಕವಿ ಕೂಡ ಹೌದು. ಇವರು ಚಿತ್ರಕಲೆಯಲ್ಲಿ ಹಲವಾರು ಪ್ರಯೋಗಗಳನ್ನು ಮಾಡಿ ಗುರುತಿಸಿಕೊಂಡಿದ್ದಾರೆ. ‘ಇಂಡಿಯನ್ ನ್ಯಾಷನಲ್‌ ಟ್ರಸ್ಟ್ ಫಾ‌ರ್ ಆರ್ಟ್ ಆ್ಯಂಡ್ ಕಲ್ಬರಲ್ ಹೆರಿಟೇಜ್ ಮಂಗಳೂರು ಚಾಪ್ಟರ್’ ಮತ್ತು ‘ಆರ್ಟ್ ಕೆನರಾ ಟ್ರಸ್ಟ್‌’ನ ಅಜೀವ ಸದಸ್ಯರಾಗಿದ್ದಾರೆ. ಕೊಡಿಯಾಲಗುತ್ತಿನ ಸೆಂಟರ್ ಫಾರ್ ಆರ್ಟ್ಸ್ ಆ್ಯಂಡ್ ಕಲ್ಟರ್ ನಲ್ಲಿ ಗ್ಯಾಲರಿ ಎಸ್ – ಕ್ಯೂಬ್‌ ನ್ನು ನಡೆಸುತ್ತಿದ್ದು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಇವರು ಕರ್ನಾಟಕ ಲಲಿತ ಕಲಾ ಅಕಾಡೆಮಿಯ ಸದಸ್ಯರಾಗಿ ಎರಡು ಅವಧಿಗೆ ಸೇವೆ ಸಲ್ಲಿಸಿದ್ದಾರೆ.

Read More

ಮಂಗಳೂರು : ರಂಗಸ್ಥಳ ಮಂಗಳೂರು (ರಿ.) ಇದರ ದಶಮಾನೋತ್ಸವ ಪ್ರಯುಕ್ತ ಶ್ರೀ ನಂದಿಕೇಶ್ವರ ಪ್ರಸಾದಿತ ಯಕ್ಷಗಾನ ಮಂಡಳಿ ಶ್ರೀಕ್ಷೇತ್ರ ಮೆಕ್ಕೆಕಟ್ಟು ಹಾಗೂ ಅತಿಥಿ ಕಲಾವಿದರಿಂದ ಯಕ್ಷಗಾನ ಬಯಲಾಟವು ದಿನಾಂಕ 22 ಫೆಬ್ರವರಿ 2025ರಂದು ರಾತ್ರಿ 8-00 ಗಂಟೆಗೆ ಕದ್ರಿ ಶ್ರೀ ದೇವಳದ ರಾಜಾಂಗಣದಲ್ಲಿ ನಡೆಯಲಿದೆ. ರಾಮಕೃಷ್ಣ ಹೆಗಡೆ ಹಿಲ್ಲೂರು ಮತ್ತು ಅಶೋಕ ಭಟ್ ಸಿದ್ಧಾಪುರ ಇವರುಗಳು ಅತಿಥಿ ಕಲಾವಿದರಾಗಿ ಭಾಗವಹಿಸಲಿದ್ದು, ‘ಚಂದ್ರಾವಳಿ ವಿಲಾಸ’ ಮತ್ತು ‘ರತ್ನಾವತಿ ಕಲ್ಯಾಣ’ ಪ್ರಸಂಗಗಳು ಪ್ರದರ್ಶನಗೊಳ್ಳಲಿವೆ.

Read More

ಹಾಸನ : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ.) ಬೆಂಗಳೂರು, ಉತ್ತರ ಕನ್ನಡ ಜಿಲ್ಲಾ ಘಟಕ ಹಾಗೂ ಯಲ್ಲಾಪುರ ತಾಲೂಕು ಘಟಕದ ಸಹಕಾರದಲ್ಲಿ ದಿನಾಂಕ 23 ಫೆಬ್ರುವರಿ 2025ರ ಭಾನುವಾರ ಯಲ್ಲಾಪುರದ ಅಡಿಕೆ ಭವನದಲ್ಲಿ ಹಮ್ಮಿಕೊಂಡಿರುವ ಅಖಿಲ ಕರ್ನಾಟಕ ಪ್ರಥಮ ಶಿಶು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಮಕ್ಕಳ ಸಾಹಿತಿ ತಮ್ಮಣ್ಣ ಬೀಗಾರ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್ ತಿಳಿಸಿದ್ದಾರೆ. ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ಗಣೇಶ್ ನಾಡೋರ್, ಭಾಗೀರಥಿ ಹೆಗಡೆ, ತಮ್ಮಣ್ಣ ಬೀಗಾರ, ಬಿ.ಆರ್. ಲಕ್ಷ್ಮಣರಾವ್, ಸತ್ಯಾನಂದ ಪಾತ್ರೋಟ ಸೇರಿದಂತೆ ಹಲವು ಹೆಸರುಗಳು ಕೇಳಿಬಂದವು. ಸ್ಥಳೀಯತೆ, ಸಾಹಿತ್ಯದ ಗಂಭೀರತೆ ಹಾಗೂ ಹಿರಿತನದ ಆಧಾರದ ಮೇಲೆ ಹಿರಿಯ ಸಾಹಿತಿ ತಮ್ಮಣ್ಣ ಬೀಗಾರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಆಯ್ಕೆ ಸಂದರ್ಭದಲ್ಲಿ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್, ರಾಜ್ಯ ಜಂಟಿ ಕಾರ್ಯದರ್ಶಿ ನಾಗರಾಜ ದೊಡ್ಡಮನಿ, ರಾಜ್ಯ ಕೋಶಾಧ್ಯಕ್ಷ…

Read More

ಬಂಟ್ವಾಳ : ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಯಕ್ಷಗಾನ ಬಯಲಾಟ ಸೇವೆಯ ಸಂದರ್ಭದಲ್ಲಿ ಕಲಾಪೋಷಕರಾದ ದಿ. ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ಬೊಂಡಾಲ ರಾಮಣ್ಣ ಶೆಟ್ಟಿಯವರ ಸಂಸ್ಮರಣ ಸಮಾರಂಭವು ದಿನಾಂಕ 15 ಫೆಬ್ರವರಿ 2025ರಂದು ಶಂಬೂರು ಗ್ರಾಮದ ಬೊಂಡಾಲದಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾಜಿ ಸಚಿವ ಬಿ. ರಮಾನಾಥ ರೈ “ಕರಾವಳಿ ಜಿಲ್ಲೆಗಳಲ್ಲಿ ಯಕ್ಷಗಾನ ಮನೆ ಮಾತು. ಇಲ್ಲಿನ ಕಲಾಪೋಷಕರಿಂದ ಯಕ್ಷಗಾನಕ್ಕೆ ವಿಶೇಷ ಮನ್ನಣೆ ಪ್ರಾಪ್ತವಾಗಿದೆ. ಅದರಲ್ಲೂ ಕಟೀಲು ಕ್ಷೇತ್ರದ ಹರಿಕೆ ಬಯಲಾಟ ಸಂದರ್ಭದಲ್ಲಿ ಮನೋರಂಜನೆಯೊಂದೇ ಮುಖ್ಯ ಉದ್ದೇಶವಾಗಿರದೆ ಅದನ್ನೊಂದು ಆರಾಧನೆಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ಈ ಸಂದರ್ಭದಲ್ಲಿ ಕಲಾವಿದರನ್ನು ಗೌರವಿಸುವುದು ಒಂದು ಉತ್ತಮ ಸಂಪ್ರದಾಯ” ಎಂದು ಹೇಳಿದರು. ಕಟೀಲು ಕ್ಷೇತ್ರದ ಪ್ರಧಾನಾರ್ಚಕ ಶ್ರೀ ಅನಂತ ಪದ್ಮನಾಭ ಆಸ್ರಣ್ಣ ಶುಭಹಾರೈಸಿ ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಬೊಂಡಾಲ ಚ್ಯಾರಿಟೇಬಲ್ ಟ್ರಸ್ಟ್ ವತಿಯಿಂದ ಕಟೀಲು‌ ಮೇಳದ ಹಿರಿಯ ಕಲಾವಿದ ಹಾಸ್ಯಗಾರ ರವಿಶಂಕರ ವಳಕುಂಜ ಇವರಿಗೆ ಬೊಂಡಾಲ ಜನಾರ್ದನ…

Read More

ಮಂಗಳೂರು : ಪ್ರೊ. ಎಸ್. ವಿ. ಪರಮೇಶ್ವರ ಭಟ್ಟ ಪ್ರತಿಷ್ಠಾನ ಮಂಗಳೂರು ಇವರು ಕನ್ನಡ ವಿಭಾಗ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ ಮಂಗಳೂರು ಇದರ ಸಹಯೋಗದಲ್ಲಿ ಆಯೋಜಿಸುವ ‘ಪ್ರೊ. ಎಸ್.ವಿ. ಪರಮೇಶ್ವರ ಭಟ್ಟ ಸಂಸ್ಮರಣ ಪ್ರಶಸ್ತಿ ಪ್ರದಾನ ಸಮಾರಂಭ – 2025’ ದಿನಾಂಕ 21 ಫೆಬ್ರವರಿ 2025ರ ಶುಕ್ರವಾರದಂದು ಸಂಜೆ 4.00 ಗಂಟೆಗೆ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸಾನ್ನಿಧ್ಯ ಸಭಾಂಗಣದಲ್ಲಿ ನಡೆಯಲಿದೆ 2024ನೇ ಸಾಲಿನ ಪ್ರಶಸ್ತಿಗೆ ಖ್ಯಾತ ಸಾಹಿತಿಗಳು ಹಾಗೂ ಪ್ರಕಾಶಕರಾದ ವಾಮನ ನಂದಾವರ ಮತ್ತು ಶ್ರೀಮತಿ ಚಂದ್ರಕಲಾ ನಂದಾವರ ಆಯ್ಕೆಯಾಗಿದ್ದು, ನಿಟ್ಟೆ ವಿಶ್ವವಿದ್ಯಾನಿಲಯದ ಮಾನವಿಕ ವಿಭಾಗದ ಪ್ರಭಾರ ಮುಖ್ಯಸ್ಥರಾದ ಡಾ. ಸಾಯಿಗೀತ ಅಭಿನಂದಿಸಲಿದ್ದಾರೆ. 2025ನೇ ಸಾಲಿನ ಪ್ರಶಸ್ತಿಗೆ ಕಾಸರಗೋಡಿನ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಪಿ. ಶ್ರೀಕೃಷ್ಣ ಭಟ್ ಆಯ್ಕೆಯಾಗಿದ್ದು, ಮಂಗಳೂರಿನ ವಿಶ್ರಾಂತ ಕನ್ನಡ ಪ್ರಾಧ್ಯಾಪಕರಾದ ಡಾ. ಮೀನಾಕ್ಷಿ ರಾಮಚಂದ್ರ ಅಭಿನಂದಿಸಲಿದ್ದಾರೆ. ಎಸ್‌. ವಿ. ಪಿ. ಪ್ರತಿಷ್ಠಾನ, ಮಂಗಳೂರು ಇದರ ಅಧ್ಯಕ್ಷರಾದ ಡಾ. ಬಿ. ಎ. ವಿವೇಕ ರೈ ಇವರ…

Read More

“ಕಾವ್ಯೇಷು ನಾಟಕ ರಮ್ಯಂ.”ಎಂಬುದು ನಾಟಕದ ಬಗ್ಗೆ ಹಿತವಾದ ಭಾವವನ್ನು ವ್ಯಕ್ತಪಡಿಸುವ ಉಕ್ತಿ. ಶ್ರಾವ್ಯ ಮತ್ತು ದೃಶ್ಯ ಎರಡು ಮಾಧ್ಯಮವನ್ನೊಳಗೊಂಡು ಪ್ರೇಕ್ಷಕರನ್ನು ರಂಜಿಸುವುದು ನಾಟಕ. ಚಾರಿತ್ರಿಕ ನಾಟಕ, ಸಾಮಾಜಿಕ ನಾಟಕ, ಧಾರ್ಮಿಕಕ್ಕೆ ಸಂಬಂಧಪಟ್ಟ ನಾಟಕ, ಅವುಗಳಲ್ಲಿಯೂ ಗಂಭೀರ ನಾಟಕ ಮತ್ತು ಗಂಭೀರ ನಾಟಕವನ್ನು ಪಾತ್ರಗಳ ಮೂಲಕ ನಕ್ಕು ನಗಿಸುವ ಹಾಸ್ಯಮಯ ನಾಟಕಗಳೂ ಇವೆ. ನಾಟಕಗಳಲ್ಲಿ ತಮ್ಮ ನಟನಾ ಕೌಶಲ್ಯ ಮತ್ತು ವಿಡಂಬನಾತ್ಮಕ ವಾಕ್ಚಾತುರ್ಯದ ಮೂಲಕ ಸಮಾಜದ, ರಾಜಕೀಯದ ಅಂಕುಡೊಂಕುಗಳನ್ನು ಎತ್ತಿ ತೋರಿಸಿ, ಜನತೆಯನ್ನು ಮತ್ತು ಸಮಾಜವನ್ನು ಸರಿದಾರಿಗೆ ತರಲು ಪ್ರಯತ್ನ ಪಟ್ಟವರಲ್ಲಿ ಮಾಸ್ಟರ್ ಹಿರಣ್ಣಯ್ಯ ಒಬ್ಬರು. ಇವರ ಹೆಸರು ಕೇಳದವರು ಇಲ್ಲ, ಪರಿಚಯ ಇಲ್ಲದವರಿಲ್ಲ. ಇವರ ಮೂಲ ಹೆಸರು ನರಸಿಂಹಮೂರ್ತಿ. ಇವರು ಕೆ. ಹಿರಣ್ಣಯ್ಯ ಮತ್ತು ಶಾರದಮ್ಮ ದಂಪತಿಗಳ ಒಬ್ಬನೇ ಮಗನಾಗಿ 15 ಫೆಬ್ರವರಿ 1934 ರಂದು ಮೈಸೂರಿನಲ್ಲಿ ಜನಿಸಿದರು. ತಂದೆಯಿಂದಲೇ ರಂಗ ಶಿಕ್ಷಣ ಪಡೆದವರು. ಹಿರಣ್ಣಯ್ಯನವರ ಎಳವೆಯಲ್ಲಿಯೇ ಅವರ ತಂದೆ ತಮ್ಮ ಕುಟುಂಬವನ್ನು ಮದ್ರಾಸಿಗೆ ಸ್ಥಳಾಂತರಿಸಿದರು. ಮದ್ರಾಸಿಗೆ ಬಂದ ಮೇಲೆ ತಮಿಳು,…

Read More

ಬೆಂಗಳೂರು : ಕರ್ನಾಟಕ ಲಲಿತಕಲಾ ಅಕಾಡಮಿಯಿಂದ ಕೊಡಮಾಡುವ 2022-23ನೇ ಸಾಲಿನ ‘ವರ್ಣಶ್ರೀ’ ಪ್ರಶಸ್ತಿಗೆ ಖ್ಯಾತ ಚಿತ್ರ ಕಲಾವಿದೆ ವೀಣಾ ಶ್ರೀನಿವಾಸ್ ಆಯ್ಕೆಯಾಗಿದ್ದಾರೆ. ಮಂಗಳೂರು ಕೆ. ಎಸ್. ರಾವ್ ರೋಡ್ ನಿವಾಸಿಯಾಗಿರುವ ವೀಣಾ ಶ್ರೀನಿವಾಸ್ ಕಾವಿ ಕಲೆಯಲ್ಲಿ ಹೆಸರು ಗಳಿಸಿದ್ದಾರೆ. 16ನೆಯ ಶತಮಾನದ ಸಾಂಪ್ರದಾಯಕ ಕಲಾಪ್ರಕಾರವಾಗಿರುವ ಕಾವಿ ಕಲೆಯ ಪುನರುಜ್ಜಿವನ ಮತ್ತು ಪ್ರಚಾರದಲ್ಲಿ ದೊಡ್ಡ ಕೊಡುಗೆ ನೀಡಿರುವ ಇವರು ಯುವ ಜನಾಂಗದಲ್ಲಿಯೂ ಕಾವಿ ಕಲೆಯ ಬಗ್ಗೆ ಆಸಕ್ತಿ ಮೂಡಿಸುವಲ್ಲಿ ಶ್ರಮಿಸುತ್ತಿದ್ದಾರೆ. ಎಂ. ಆರ್. ಪಾವಂಜೆಯವರ ಶಿಷ್ಯೆ ಯಾಗಿರುವ ವೀಣಾ ಅವರ ಅಜ್ಜ ವೆಂಕಟ್ರಾಯ ಕಾಮತ್ ಮುಂಬಯಿಯ ಜೆ. ಜೆ. ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿದ್ದರು.

Read More

ಕಾಸರಗೋಡು : ಮನಸ್ಸಿಗೆ ಸಂತೋಷ ನೀಡುವ ಸಂಗೀತದಿಂದ ಆತಂಕ ನೆಮ್ಮದಿ ಒತ್ತಡ, ನಿವಾರಣೆಯಾಗುತ್ತದೆ. ಸಂಗೀತ ಆಲಿಸುವ ಮೂಲಕ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ. ಜೀವನದ ಪ್ರತಿಯೊಂದು ಕ್ಷಣದಲ್ಲೂ ಪ್ರಮುಖ ಪಾತ್ರವಹಿಸುವ ಸಂಗೀತ ಮನಸು ಕದಡಿದಾಗ ಶಾಂತಗೊಳಿಸುತ್ತದೆ. ಸಂಗೀತದಿಂದ ಗುರುತಿಸಿಕೊಳ್ಳಬೇಕು. ಕರೋಕೆ ಗಾಯಕರ ಸಮ್ಮಿಲನ ಕಾರ್ಯಕ್ರಮದ ಮೂಲಕ ಸಂಗೀತ ಕಲಾವಿದರನ್ನು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದು ಮಂಗಳೂರು ನಗರ ಸಹಾಯಕ ಯೋಜನಾ ಅಧಿಕಾರಿ, ಖ್ಯಾತ ರಂಗಭೂಮಿ ಹಾಗೂ ಸಂಗೀತ ಕಲಾವಿದ ನಾಗೇಂದ್ರ ಮಂಗಳೂರು ಅವರು ಹೇಳಿದರು. ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಯಾದ ರಂಗಚಿನ್ನಾರಿ ಕಾಸರಗೋಡು ಇದರ ಸಂಗೀತ ಘಟಕ ಸ್ವರ ಚಿನ್ನಾರಿ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಬೆಂಗಳೂರು ಇದರ ಸಹಯೋಗದೊಂದಿಗೆ ದಿನಾಂಕ 09 ಫೆಬ್ರವರಿ 2025 ರಂದು  ಕರಂದಕ್ಕಾಡ್ ನ ಪದ್ಮಗಿರಿ ಕಲಾ ಕುಟೀರದಲ್ಲಿ ಆಯೋಜಿಸಿದ ಪ್ರತಿಭಾನ್ವಿತ ಕರೋಕೆ ಗಾಯಕರ ಸಮ್ಮಿಲನ ‘ಅಂತರ್ಧ್ವನಿ’ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಖ್ಯಾತ ವೈದ್ಯರಾದ ಡಾ. ಕೆ. ಶಾನುಭೋಗ್ ರವರು…

Read More

ಬೆಂಗಳೂರು : ಅಂತರಂಗ ಬಹಿರಂಗ ತಂಡ ಪ್ರಸ್ತುತ ಪಡಿಸುವ ‘ಅನುಮಾನದ ಅವಾಂತರ’ ಹಾಸ್ಯ ನಾಟಕ ಪ್ರದರ್ಶನವನ್ನು ದಿನಾಂಕ 16 ಫೆಬ್ರವರಿ 2025ರಂದು ಸಂಜೆ 7-00 ಗಂಟೆಗೆ ಬಸವನಗುಡಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಟರ್‌ ವಾಡಿಯಾ ಸಭಾಂಗಣದಲ್ಲಿ ಆಯೋಜಿಲಾಗಿದೆ. ಮೋಲಿಯ‌ರ್ ಮೂಲ ಕಥೆಯನ್ನು ಎಂ. ರಾಮಾರಾವ್ ಅನುವಾದಿಸಿದ್ದು, ಎಸ್. ವಿಕಾಸ್ ನಿರ್ದೇಶನ ಮಾಡಿದ್ದಾರೆ. ಬುಕ್ ಮೈ ಶೋನಲ್ಲಿ ಟಿಕೆಟ್ ಲಭ್ಯವಿದ್ದು, ನೇರ ಬುಕ್ಕಿಂಗ್‌ಗಾಗಿ 86605 47776 ಸಂಖ್ಯೆಯನ್ನು ಸಂಪರ್ಕಿಸಬಹುದು. ಹವ್ಯಾಸಿ ರಂಗಭೂಮಿಯಲ್ಲಿ ಸಾಕಷ್ಟು ಪರಿಣಿತಿಯನ್ನು ಪಡೆದಂತಹ ಹತ್ತಾರು ಹುಡುಗರು ಸೇರಿ ಸ್ಥಾಪಿಸಲ್ಪಟ್ಟ ಸಂಸ್ಥೆಯೇ ‘ಅಂತರಂಗ ಬಹಿರಂಗ’. ಈ ತಂಡದ ಮುಖ್ಯ ಉದ್ದೇಶ ಹೊಸ ಕಲಾವಿದರಿಗೆ ಅವಕಾಶ ಹಾಗೂ ಆಧುನಿಕ ಕಾಂಟೆಂಪರರಿ ವಿಷಯ ಆಧಾರಿತ ಕಥಾ ವಸ್ತು ಕೊಡುವುದು. ಅದರಂತೆಯೇ ನಡೆದು ಬರುತ್ತಿದ್ದು, ಇದರ ಜೊತೆಗೆ ನಮ್ಮ ನಾಡಿನ ಸಂಸ್ಕೃತಿ, ಸಂಸ್ಕಾರ, ಸಾಂಸ್ಕೃತಿಕ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ಒಯ್ಯುವುದು ಹಾಗೂ ಆದಷ್ಟು ಹಳೆ ಪ್ರೇಕ್ಷಕರ ಜೊತೆ ಜೊತೆಗೆ ಹೊಸ ಪ್ರೇಕ್ಷಕರನ್ನು ರಂಗಭೂಮಿಗೆ ಆಕರ್ಷಿಸುವುದು…

Read More

ಬೆಂಗಳೂರು : ಕರ್ನಾಟಕ ಲಲಿತಕಲಾ ಅಕಾಡಮಿಯಿಂದ ಕೊಡಮಾಡುವ ‘ವರ್ಣಶ್ರೀ’ ಪ್ರಶಸ್ತಿಗೆ ಖ್ಯಾತ ಚಿತ್ರ ಕಲಾವಿದ ಸೈಯ್ಯದ್ ಆಸಿಫ್ ಅಲಿ ಆಯ್ಕೆಯಾಗಿದ್ದಾರೆ. ಸೈಯದ್ ಆಸಿಫ್ ಮೂಲತಃ ಮಂಗಳೂರಿನವರಾಗಿದ್ದು ಫೈನ್ ಆರ್ಟ್‌ನಲ್ಲಿ ಹೆಸರು ಗಳಿಸಿದ್ದಾರೆ. ಆಧುನಿಕ ಮತ್ತು ಪ್ರಾಚೀನ ಕಲೆಗಳ ಬೆಳವಣಿಗೆಗೆ ದೊಡ್ಡ ಕೊಡುಗೆ ನೀಡಿರುವ ಇವರು ಸಾಂಸ್ಕೃತಿಕ ಹಾಗೂ ಪಾರಂಪರಿಕ ಕಲೆಗಳಿಗೆ ಸಂಬಂಧಿಸಿದಂತೆ ಹಲವಾರು ಪ್ರದರ್ಶನಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಇವರು ಮಂಗಳೂರಿನ ಮಹಾಲಸಾ ಕಾಲೇಜ್ ಆಫ್ ವಿಶುವಲ್ ಆರ್ಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More