Author: roovari

ಮೂಲ ಹಿಂದಿ ನಾಟಕ – ಸುರೇಂದ್ರ ವರ್ಮಾ ಕನ್ನಡ ರೂಪಾಂತರ – ಸಿದ್ಧಲಿಂಗ ಪಟ್ಟಣಶೆಟ್ಟಿ ಪ್ರಸ್ತುತಿ – ಭೂಮಿಕಾ, ಹಾರಾಡಿ ನಿರೂಪಣೆ ಮತ್ತು ನಿರ್ದೇಶನ – ಬಿ.ಎಸ್. ರಾಮ ಶೆಟ್ಟಿ ಹಾರಾಡಿ ಭಾರತೀಯ ಪುರಾಣಗಳನ್ನು ಓದಿಕೊಂಡು ಬಂದವರಿಗೆ ‘ನಿಯೋಗ ಪದ್ಧತಿಯು’ ಹೊಸದೇನಲ್ಲ. ಮದುವೆಯ ಮುಖ್ಯವಾದ ಉದ್ದೇಶ ವಂಶಾಭಿವೃದ್ಧಿ ಎಂದು ಭಾವಿಸಿದ್ದ ಕಾಲ ಅದು. ಆಗ ಸಂತಾನಶಕ್ತಿಯು ಇಲ್ಲದ ಗಂಡನಿಂದ ದೈಹಿಕ ಸುಖದ ಕೊರತೆ ಆದಾಗ ಗಂಡನ ಒಪ್ಪಿಗೆ ಪಡೆದು ಹೆಂಡತಿ ಇನ್ನೊಬ್ಬ ಪುರುಷನನ್ನು ಸೇರಿ ಸಂತಾನಭಾಗ್ಯ ಪಡೆಯುವ ಪದ್ಧತಿಯೇ ನಿಯೋಗ. ಎಸ್.ಎಲ್. ಭೈರಪ್ಪನವರ ‘ಪರ್ವ’ ಕಾದಂಬರಿಯಲ್ಲಿ ಈ ಪದ್ಧತಿಯ ವಿಸ್ತಾರವಾದ ವಿವರಣೆ ಇದೆ. ಸೂರ್ಯಾಸ್ತದಿಂದ…….. ಒಂದು ಮನೋವೈಜ್ಞಾನಿಕವಾದ ಸಂಘರ್ಷದ ಕಥೆ. ಇದೇ ನಿಯೋಗ ಪದ್ಧತಿಗೆ ಒಳಗಾಗುವ ಮಹಾರಾಣಿ ಮತ್ತು ಆಕೆಯ ಪತಿಯಾದ ಮಹಾರಾಜರ ಮನೋವೈಜ್ಞಾನಿಕ ಸಂಘರ್ಷದ ಕಥೆಯನ್ನು ಇಲ್ಲಿ ಬಹಳ ಚಂದವಾದ ದೃಶ್ಯಗಳ ಮೂಲಕ ಭೂಮಿಕಾ ಹಾರಾಡಿ ತಂಡದವರು ಸಮರ್ಪಣೆ ಮಾಡಿದ್ದಾರೆ. ಇಲ್ಲಿ ನಾಟಕದ ಸಂಭಾಷಣೆಗಳು ಆಧುನಿಕ ಮನೋವಿಜ್ಞಾನದ ದ್ವಂದ್ವ ಮತ್ತು…

Read More

ಬೆಂಗಳೂರು : ಕಲ್ಪವೃಕ್ಷ ಟ್ರಸ್ಟ್ (ರಿ.) ಇದರ ಸಹಕಾರದೊಂದಿಗೆ ಅಂತರಂಗ ಬಹಿರಂಗ ತಂಡ ಪ್ರಸ್ತುತ ಪಡಿಸುವ ‘ಅನುಗ್ರಹ’ ಪೌರಾಣಿಕ ನಾಟಕದ ಎರಡು ಪ್ರದರ್ಶನಗಳನ್ನು ದಿನಾಂಕ 05 ಏಪ್ರಿಲ್ 2025ರಂದು ಸಂಜೆ 4-30 ಮತ್ತು 7-30 ಗಂಟೆಗೆ ಬೆಂಗಳೂರಿನ ಬಸವನಗುಡಿಯ ವಾಡಿಯಾ ಸಭಾಂಗಣ (ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್)ದಲ್ಲಿ ಆಯೋಜಿಲಾಗಿದೆ. ಈ ನಾಟಕವನ್ನು ರಾಮಕೃಷ್ಣಪ್ಪ ರಚಿಸಿದ್ದು, ಬಾಷ್ ರಾಘವೇಂದ್ರ ನಿರ್ದೇಶನ ಮಾಡಿದ್ದಾರೆ. ಬುಕ್ ಮೈ ಶೋನಲ್ಲಿ ಟಿಕೆಟ್ ಲಭ್ಯವಿದ್ದು, ನೇರ ಬುಕ್ಕಿಂಗ್‌ಗಾಗಿ 8660547776 ಸಂಖ್ಯೆಯನ್ನು ಸಂಪರ್ಕಿಸಬಹುದು. ಅಂತರಂಗ ಬಹಿರಂಗ ತಂಡದ 7ನೇ ನಿರ್ಮಾಣ ‘ಅನುಗ್ರಹ’ ನಾಟಕ. ಈ ಹಿಂದೆ ಸಾಮಾಜಿಕ ನಾಟಕಗಳನ್ನು ನಿರ್ಮಿಸಿ ಪ್ರೇಕ್ಷಕರ ಅಪಾರ ಮೆಚ್ಚುಗೆ ಪಡೆದಿದ್ದ ತಂಡ, ಮೊದಲ ಬಾರಿಗೆ ಪೌರಾಣಿಕ ನಾಟಕವನ್ನು ಪ್ರಸ್ತುತಪಡಿಸುತ್ತಿದೆ. ಈ ನಾಟಕವು ಏಕಲವ್ಯನ ಜೀವನಾಧಾರಿತವಾಗಿದೆ. ರಚನೆಕಾರರು ಈ ನಾಟಕದಲ್ಲಿ ನಾವು ಇಲ್ಲಿಯವರೆವಿಗೂ ಕೇಳಿರುವ ಏಕಲವ್ಯನ ಕಥೆಗಿಂತ ಭಿನ್ನವಾದ ಆಯಾಮವನ್ನು ನೀಡಿದ್ದಾರೆ. ಅದು “ಯಾವುದೇ ಗುರುವು ತನ್ನ ಶಿಷ್ಯರಿಗೆ ವಿದ್ಯೆ ಕರುಣಿಸಿದ ನಂತರ ಶಿಷ್ಯರಲ್ಲಿ…

Read More

ಬೈಲಹೊಂಗಲ : ಕೇಂದ್ರ ಬಸವ ಸಮಿತಿ ಬೆಂಗಳೂರು ಇವರ ವತಿಯಿಂದ ಬಸವ ಜಯಂತಿ ನಿಮಿತ್ತ ಚೆನ್ನಮ್ಮಾಜಿಯವರ ಐಕ್ಯ ಸ್ಥಳವಾದ ಬೈಲಹೊಂಗಲದಲ್ಲಿ 04 ಮೇ 2025ರಂದು ರಾಜ್ಯಮಟ್ಟದ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ ಈ ನಿಮಿತ್ತ ಉದಯೋನ್ಮುಖ ಹಾಗೂ ಪ್ರತಿಭಾವಂತ ಕವಿಗಳಿಂದ ಬಸವೇಶ್ವರರು, ಅಕ್ಕಮಹಾದೇವಿ, ಅಲ್ಲಮಪ್ರಭು, ಸಿದ್ದರಾಮೇಶ್ವರರು, ಚನ್ನಬಸವಣ್ಣ, ಮಡಿವಾಳ ಮಾಚಿದೇವರು, ಹಡಪದ ಅಪ್ಪಣ್ಣ ಇತರ ಶರಣರ ತತ್ವಗಳ ಕುರಿತು ಕವನಗಳನ್ನು ಆಹ್ವಾನಿಸಲಾಗಿದೆ. ಕವನ 30 ಸಾಲುಗಳಿಗೆ ಮಿಕ್ಕದಂತೆ ಕಾಗದದ ಒಂದೇ ಮಗ್ಗುಲಲ್ಲಿ ಬರೆದು ಅಥವಾ ಡಿ.ಟಿ.ಪಿ. ಮಾಡಿಸಿ ಸ್ವವಿಳಾಸ, ಕಿರುಪರಿಚಯ, ಭಾವಚಿತ್ರ, ವಾಟ್ಸಪ್ ಮೊಬೈಲ್ ಸಂಖ್ಯೆಯೊಂದಿಗೆ ದಿನಾಂಕ 15 ಏಪ್ರಿಲ್ 2025ರ ಒಳಗಾಗಿ ಶ್ರೀ ಮೋಹನ ಬಸನಗೌಡ ಪಾಟೀಲ, ಕಾರ್ಯಕಾರಿ ಸಮಿತಿ ಸದಸ್ಯರು, ಕೇಂದ್ರ ಬಸವ ಸಮಿತಿ, ‘ಬಸವ ನಿವಾಸ’, ಚನ್ನಮ್ಮನಗರ ಮೊದಲನೆಯ ಅಡ್ಡರಸ್ತೆ, ಬೈಲಹೊಂಗಲ- 591102, ಬೆಳಗಾವಿ ಜಿಲ್ಲೆ ಈ ವಿಳಾಸಕ್ಕೆ ನೋಂದಾಯಿತ ಅಂಚೆ ಮೂಲಕ ಕಳಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 9448920888 ಸಂಪರ್ಕಿಸಬೇಕೆಂದು ಕೇಂದ್ರ ಬಸವ ಸಮಿತಿಯ ಅಧ್ಯಕ್ಷರಾದ ಡಾ. ಅರವಿಂದ…

Read More

ಮಡಿಕೇರಿ: ಮಡಿಕೇರಿ ನಗರದ ಶ್ರೀ ಓಂಕಾರೇಶ್ವರ ದೇವಸ್ಥಾನದ ಬಳಿಯ ಮಧುಕೃಪದ ಆವರಣದಲ್ಲಿ ‘ಬಾಲಗೋಕುಲ’ ಮಡಿಕೇರಿ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಮಕ್ಕಳಿಗಾಗಿ ‘ವಸಂತ ಶಿಬಿರ – 2025’ ಹೆಸರಿನಲ್ಲಿ ಉಚಿತ ಬೇಸಿಗೆ ಶಿಬಿರವನ್ನು ದಿನಾಂಕ 31 ಮಾರ್ಚ್ 2025 ರಿಂದ 9 ಏಪ್ರಿಲ್ 2025ರ ವರೆಗೆ ವನ್ನು ಆಯೋಜಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಯಶಸ್ವಿಯಾಗಿ ನಡೆದ ಈ ಶಿಬಿರವು ಮಕ್ಕಳಿಗೆ ಬಹಳ ಉಪಯುಕ್ತವಾಗಿದ್ದು, ಮಕ್ಕಳು ತುಂಬಾ ಉತ್ಸಾಹದಿಂದ ಭಾಗವಹಿಸುವಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶಿಬಿರದಲ್ಲಿ ಭಾಗವಹಿಸಲು ಇಚ್ಚಿಸುವವರು ನೊಂದಣಿಗಾಗಿ ಬಾಲಗೋಕುಲ ಮಡಿಕೇರಿ: 9448541328 ಸಂಪರ್ಕಿಸ ಬಹುದಾಗಿದೆ.

Read More

ಬೈಲೂರು: ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬೆಂಗಳೂರು, ಇಂಡಿಯಾ ಪೌಂಡೇಷನ್ ಫಾರ್ ಆರ್ಟ್ಸ್ ಬೆಂಗಳೂರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಇವರ ಸಹಯೋಗದಲ್ಲಿ ದ್ವಿತೀಯ ಸಮುದಾಯದತ್ತ ಶಾಲಾ ಕಾರ್ಯಕ್ರಮದ ಅಂಗವಾಗಿ ‘ಬಣ್ಣದ ಗರಿ’ ಕರಾವಳಿಯ ವೀರ ವನಿತೆಯರ ಕಥನದ ‘ಮಕ್ಕಳ ಯಕ್ಷೋತ್ಸವ’ ಕಾರ್ಯಕ್ರಮವು ದಿನಾಂಕ : 08 ಏಪ್ರಿಲ್ 2025ರ ಮಂಗಳವಾರ ಸಂಜೆ ಘಂಟೆ 6.00 ರಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಇಲ್ಲಿ ನಡೆಯಲಿದೆ. ಸ.ಹಿ.ಪ್ರಾ.ಶಾಲೆ ಬೈಲೂರು ಇಲ್ಲಿನ ಸಹಶಿಕ್ಷಕರಾದ ಆನಂದ ಕುಲಾಲ ಇವರ ನಿರ್ದೇಶನದ ಈ ಯೋಜನೆ ಹಾಗೂ ‘ಯಕ್ಷಸಿರಿ ಶಂಕರನಾರಾಯಣ’ ಇದರ ಸಂಚಾಲಕರಾದ ಕಿಶೋರ ಕುಮಾರ ಆರೂರು ಇವರ ನಿರ್ದೇಶನದ ಈ ‘ಮಕ್ಕಳ ಯಕ್ಷೋತ್ಸವ’ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಸಾಂಸ್ಕೃತಿಕ ಸ್ಪರ್ಧೆಗಳು, ಶಾಲಾ ಮಕ್ಕಳಿಂದ ಹೆಜ್ಜೆ ಗೆಜ್ಜೆ – ನೃತ್ಯೋತ್ಸವ, 4 ನೇ ತರಗತಿ ವಿದ್ಯಾರ್ಥಿಗಳಿಂದ “ನಂಗೇಲಿ ಕಥನ” ಯಕ್ಷ ನೃತ್ಯರೂಪಕ, 5 ನೇ ತರಗತಿ ವಿದ್ಯಾರ್ಥಿಗಳಿಂದ “ಕಮಲಾದೇವಿ ಕಥನ” ಯಕ್ಷಗಾನ…

Read More

ಮಂಗಳೂರು : ಕದ್ರಿ ನೃತ್ಯ ವಿದ್ಯಾ ನಿಲಯ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ಇವರು ಪ್ರಸ್ತುತ ಪಡಿಸುವ ಗುರು ಯು.ಕೆ. ಪ್ರವೀಣ್ ಇವರ ಶಿಷ್ಯೆ ಕುಮಾರಿ ಶರಣ್ಯ ಎಸ್. ರಾವ್ ಇವರ ‘ಭರತನಾಟ್ಯ ರಂಗಪ್ರವೇಶ’ವು ದಿನಾಂಕ 30 ಮಾರ್ಚ್ 2025ರಂದು ಸಂಜೆ 4-00ಕ್ಕೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾಂಕಿನ ಚೈರ್ಮನ್ ಪಿ. ಪ್ರದೀಪ್ ಕುಮಾರ್ ಮತ್ತು ಶಾರದಾ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ.ಬಿ. ಪುರಾಣಿಕ್ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಭರತನಾಟ್ಯ ಕಾರ್ಯಕ್ರಮಕ್ಕೆ ನಟುವಾಂಗಂನಲ್ಲಿ ಗುರು ಯು.ಕೆ. ಪ್ರವೀಣ್, ಹಾಡುಗಾರಿಕೆಯಲ್ಲಿ ವಿದುಷಿ ಉಷಾ ಪ್ರವೀಣ್, ಮೃದಂಗದಲ್ಲಿ ವಿದ್ವಾನ್ ಗಿತೇಶ್ ಎ.ಜಿ. ನೀಲೇಶ್ವರಂ, ವಯೋಲಿನ್ ವಿದ್ವಾನ್ ಶ್ರೀಧರ್ ಆಚಾರ್ ಪಡಿಗಾರ್ ಉಡುಪಿ, ಕೊಳಲು ವಿದ್ವಾನ್ ರಾಜಗೋಪಾಲ್ ವಿ.ಪಿ. ಇವರುಗಳು ಸಹಕರಿಸಲಿದ್ದಾರೆ.

Read More

ಕೊಪ್ಪಳ : ಮುಜುಮದಾರ ಫೌಂಡೇಶನ್ ಮತ್ತು ತಿರುಳ್ಗನ್ನಡ ಸಾಹಿತಿಗಳ ಸಹಕಾರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಾ. ಪಂಚಾಕ್ಷರಿ ಹಿರೇಮಠ ಇವರ ‘ನುಡಿ ನಮನ’ ಕಾರ್ಯಕ್ರಮವು ದಿನಾಂಕ 25 ಮಾರ್ಚ್ 2025ರ ಮಂಗಳವಾರದಂದು ಕೊಪ್ಪಳದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಕೊಪ್ಪಳದ ಹಿರಿಯ ಸಾಹಿತಿ ಎಚ್. ಎಸ್. ಪಾಟೀಲ್ ಮಾತನಾಡಿ “ನಮ್ಮ ಭಾಗದ ಸಾಹಿತಿಗಳ ಪುಸ್ತಕಗಳನ್ನು ಓದಿ ಅವರನ್ನು ನಾವು ಗೌರವಿಸಬೇಕು. ನಮ್ಮ ದೇಶದಲ್ಲಿ ಬದುಕಿದ್ದಾಗ ಅವರ ಬಗ್ಗೆ ಆಲೋಚನೆ ಮಾಡುವುದಿಲ್ಲ, ಅವರು ಮರಣ ಹೊಂದಿದ ನಂತರ ಅವರ ಕುರಿತು ಹೆಚ್ಚು ಚರ್ಚೆ ಮಾಡುತ್ತೇವೆ. ಈ ರೀತಿ ಪದ್ಧತಿ ಹೋಗಬೇಕು. ಪಂಚಾಕ್ಷರಿ ಹಿರೇಮಠ ಅವರು 1947 ಆಗಸ್ಟ್ 15 ರಂದು ಕೊಪ್ಪಳ ಕೋಟೆಯ ಮೇಲೆ ತ್ರಿವರ್ಣ ದ್ವಜ ಹಾರಿಸಿದ್ದರು. ಆಗ ಅವರು 7 ನೇ ತರಗತಿ ಓದುತ್ತಿದ್ದರು. ಇವರು ಧಾರವಾಡದಲ್ಲಿ ಪಾಟೀಲ್ ಪುಟ್ಟಪ್ಪ ಅವರ ಪ್ರಪಂಚ ಪತ್ರಿಕೆಯಲ್ಲಿ ಕೆಲಸ ಮಾಡಿದ್ದಾರೆ. ಇವರು ಕಥೆ, ಕಾದಂಬರಿ, ಕಥಾ ಸಂಕಲನ, ಅನುವಾದ ಹೀಗೆ 250ಕ್ಕೂ ಮಿಕ್ಕಿ…

Read More

ಬೆಂಗಳೂರು : ವಿಜಯನಗರ ಬಿಂಬ ಕಳೆದ 29 ವರ್ಷಗಳಿಂದ ರಂಗಭೂಮಿಯಲ್ಲಿ ತನ್ನದೇ ಛಾಪು ಮೂಡಿಸಿದೆ. ಇದೀಗ ಬರ್ಟೋಲ್ಟ್ ಬ್ರೆಕ್ಟ್ ನ ಮಹತ್ವದ ನಾಟಕ ‘ಮದರ್ ಕರೇಜ್’ ಇದರ ಪ್ರದರ್ಶನವನ್ನು ದಿನಾಂಕ 28 ಮಾರ್ಚ್ 2025ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಏರ್ಪಡಿಸಿದೆ. 20ನೇ ಶತಮಾನದ ಅತ್ಯುತ್ಕೃಷ್ಟ ನಾಟಕ ಎಂದೇ ಹೆಸರಾಗಿರುವ ‘ಮದರ್ ಕರೇಜ್’ – ಯುದ್ಧ ಮತ್ತು ಮನುಷ್ಯ ಸಂಬಂಧಗಳ ಮೇಲೆ ಅದರ ಪರಿಣಾಮವನ್ನು ಹೇಳುವ ಕಥೆ. ಯುದ್ಧ ಪ್ರೀತಿ ಇದ್ದ ಹಾಗೆ ಅದು ಮುಂದುವರೆಯಲು ತನ್ನದೇ ಆದ ಮಾರ್ಗವನ್ನು ಹುಡುಕುತ್ತದೆ ಎಂದು ಹೇಳುತ್ತಲೇ ಬ್ರೆಕ್ಟ್ ನಮ್ಮನ್ನು ಆ ನಿಟ್ಟಿನಲ್ಲಿ ಯೋಚಿಸುವ ಹಾಗೆ ಮಾಡುತ್ತಾನೆ. ಇದು ಯುದ್ಧ ವಿರೋಧಿ ನಾಟಕವಾದರೂ ಇದರಲ್ಲಿ ಬರುವ ಬಹುಪಾಲು ಪಾತ್ರಗಳು ಯುದ್ಧ ನಡೆಯಬೇಕು ಎಂದೇ ಹೇಳುತ್ತಾರೆ. 1630ರ ಸುಮಾರಿಗೆ ಯುರೋಪ್ನಲ್ಲಿ ನಡೆದ 30 ವರ್ಷಗಳ ಧಾರ್ಮಿಕ ಯುದ್ಧ ನಾಟಕದ ಹಿನ್ನೆಲೆಯಾಗಿದೆ. ಪ್ರೊಟೆಸ್ಟೆಂಟ್ ಮತ್ತು ಕ್ಯಾಥಲಿಕ್ ಗಳ ನಡುವೆ ನಡೆಯುವ ಈ ಯುದ್ಧದಿಂದ ಕಂಗಾಲಾಗಿರುವ…

Read More

ಕೊಪ್ಪ : ಶ್ರೀ ಆದಿ ಶಂಕರಾಚಾರ್ಯ ಶಾರದಾ ಶ್ರೀಲಕ್ಷ್ಮೀನೃಸಿಂಹ ಪೀಠಮ್ ಹರಿಹರಪುರ ಕೊಪ್ಪ ಇದರ ವತಿಯಿಂದ ಹೊಸೂರು ಸಾಗರದ ಶ್ರೀ ಭಾರತೀ ಕಲಾ ಪ್ರತಿಷ್ಠಾನ (ರಿ.) ಇದರ ಶ್ರೀ ವರದಾಂಬ ಕಲಾ ತಂಡ ಇವರಿಂದ ಆಲೆಟ್ಟಿ ರಾಮಣ್ಣ ಶಗ್ರಿತ್ತಾಯ ವಿರಚಿತ ‘ತರಣಿಸೇನ ಕಾಳಗ’ ಎಂಬ ಪ್ರಸಂಗದ ತಾಳಮದ್ದಲೆಯನ್ನು ದಿನಾಂಕ 29 ಮಾರ್ಚ್ 2025ರಂದು ಸಂಜೆ 4-30 ಗಂಟೆಗೆ ಕೊಪ್ಪ ತಾಲೂಕು ಹರಿಹರಪುರದ ಶ್ರೀ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ. ಹಿಮ್ಮೇಳದಲ್ಲಿ ಶಿವಶಂಕರ ಭಟ್ ಮತ್ವಾನೆ ಭಾಗವತರಾಗಿ, ಗಣೇಶ ಭಟ್ ಹೊನ್ನೇಕುಡಿಗೆ ಮದ್ದಲೆಯಲ್ಲಿ ಮತ್ತು ಜನಾರ್ದನ ಮಂಡಗಾರು ಚಂಡೆಯಲ್ಲಿ ಹಾಗೂ ಮುಮ್ಮೇಳದಲ್ಲಿ ಶಾರದಾ ಅರುಣ ಇವರು ಶ್ರೀರಾಮನಾಗಿ, ವರದಾ ಮಧುಸೂದನ ಐತಾಳ್ ಇವರು ವಿಭೀಷಣ, ಸ್ಮಿತಾ ಗಿರೀಶ್ ಇವರು ರಾವಣ ಮತ್ತು ಸಾಧ್ವಿ ಗಣೇಶ್ ಇವರು ತರಣಿಸೇನನಾಗಿ ಸಹಕರಿಸಲಿದ್ದಾರೆ.

Read More

ಮಂಗಳೂರು : ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ ಇದರ ಆಶ್ರಯದಲ್ಲಿ ವಿಶ್ವಕರ್ಮ ಕಲಾ ಪರಿಷತ್ ಮಂಗಳೂರು ಹಮ್ಮಿಕೊಂಡಿರುವ ‘ಸಮರ್ಪಣಂ ಕಲೋತ್ಸವ 2025’ವನ್ನು ದಿನಾಂಕ 03 ಏಪ್ರಿಲ್ 2025ರಂದು ಪೂರ್ವಾಹ್ನ 10-00 ಗಂಟೆಗೆ ಮಂಗಳೂರಿನ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದೆ. ಬೆಳಿಗ್ಗೆ 10-00 ಗಂಟೆಗೆ ವಿಶ್ವಕರ್ಮ ಕಲಾ ಪರಿಷತ್ ಸದಸ್ಯರಿಂದ ಸಾಂಸ್ಕೃತಿಕ ಸೌರಭ ಪ್ರಸ್ತುತಗೊಳ್ಳಲಿದೆ. ‘ಸಮರ್ಪಣಂ ಕಲೋತ್ಸವ’ದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮಜ್ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಪೀಠಾಧೀಶ್ವರ ಪರಮ ಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರು ದೀಪ ಪ್ರಜ್ವಲನೆ ಮಾಡಿ ನೆರವೇರಿಸಲಿರುವರು. ಇದೇ ಸಂದರ್ಭದಲ್ಲಿ ಪ್ರಾಚೀನ ವಿಶ್ವಬ್ರಾಹ್ಮಣ ಪರಂಪರೆಯ ಸಮರ್ಥ ರಾಯಭಾರಿ ಸಂಶೋಧಕ ಲೇಖಕ ಮೇರು ವಿದ್ವಾಂಸ ಡಾ. ಜಿ. ಜ್ಞಾನಾನಂದ ಇವರಿಗೆ ‘ಭೌವನ ವಿಶ್ವಕರ್ಮ ಕಲಾ ಪ್ರಶಸ್ತಿ’ ಪ್ರದಾನ ಹಾಗೂ ಗೌರವಾಭಿನಂದನೆ ನಡೆಯಲಿದೆ. ಬೆಂಗಳೂರಿನ ಶ್ರೀ ಭ್ರಮರಿ ಕ್ರಿಯೇಷನ್ಸ್ ಪ್ರೈವೇಟ್ ಲಿ. ಇದರ ವ್ಯವಸ್ಥಾಪಕ ನಿರ್ದೇಶಕರಾದ ಹರೀಶ್ಚಂದ್ರ ಎನ್. ಆಚಾರ್ಯ ಇವರು ಕಲೋತ್ಸವಕ್ಕೆ ಚಾಲನೆ ನೀಡಲಿದ್ದು, ಮಂಗಳೂರಿನ…

Read More