Author: roovari

ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿ ಮತ್ತು ಸುರತ್ಕಲ್ ನಾಗರಿಕ ಸಲಹಾ ಸಮಿತಿ ಸಂಸ್ಥೆಗಳ ಆಶ್ರಯದಲ್ಲಿ ಹಿರಿಯ ಸಂಗೀತಗಾರ ವಿದ್ವಾನ್ ಎನ್.ಕೆ. ಸುಂದರಾಚಾರ್ಯ ಸಂಸ್ಮರಣಾ ಸಂಗೀತ ಕಛೇರಿಯು ದಿನಾಂಕ 26-05-2024ರಂದು ಸಂಜೆ ಗಂಟೆ 5-00ಕ್ಕೆ ಸುರತ್ಕಲ್‌ನ ‘ಅನುಪಲ್ಲವಿ’ಯಲ್ಲಿ ನಡೆಯಲಿದೆ. ಮೊದಲಿಗೆ ವಿದ್ವಾನ್ ಅನೀಶ್ ವಿ. ಭಟ್ ಅವರ ಶಿಷ್ಯರಾದ ಕುಮಾರಿ ಅನೀಷಾ ರಾವ್ ಮತ್ತು ಕುಮಾರಿ ಸಂಹಿತಾ ಇವರಿಂದ ಪ್ರಾರ್ಥನೆ ನಡೆಯಲಿದೆ. ಬಳಿಕ ಶೃಂಗೇರಿಯ ಸೀತಾ ಪ್ರಜ್ಞ ಡಿ.ಎಸ್. ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಲಿದೆ. ಇವರಿಗೆ ವಯಲಿನ್‌ನಲ್ಲಿ ಮಹತೀ ಕೆ. ಕಾರ್ಕಳ, ಮೃದಂಗದಲ್ಲಿ ನಿಕ್ಷಿತ್ ಪುತ್ತೂರು, ಬೆಂಗಳೂರು ಇವರು ಸಹಕರಿಸಲಿರುವರು. ಮಂಗಳೂರಿನ ಸನಾತನ ನಾಟ್ಯಾಲಯದ ವಿದುಷಿ ಶಾರದಾ ಮಣಿ ಶೇಖರ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಣಿ ಕೃಷ್ಣಸ್ವಾಮಿ, ಆಕಾಡೆಮಿಯ ಕಾರ್ಯದರ್ಶಿಯಾದ ಪಿ. ನಿತ್ಯಾನಂದ ರಾವ್ ಹಾಗೂ ಸುರತ್ಕಲ್ ನಾಗರಿಕ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ಕೆ. ರಾಜಮೋಹನ್ ರಾವ್ ತಮಗೆಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.

Read More

ಕೊಕ್ಕಡ : ಧರ್ಮಸ್ಥಳ ಸಮೀಪದ ನಿಡ್ಲೆ ಕರುಂಬಿತ್ತಿಲು ಮನೆಯಂಗಳದಲ್ಲಿ 24ನೇ ವರ್ಷದ 5 ದಿನಗಳ ಕಾಲ ನಡೆದ ಸಂಗೀತ ಶಿಬಿರದ ಸಮಾರಂಭವು ದಿನಾಂಕ 19-05-2024ರ ಭಾನುವಾರದಂದು ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ “ಸಂಗೀತದಿಂದ ಸಂಸ್ಕೃತಿ, ಸಂಸ್ಕಾರ ಉದ್ದೀಪನಗೊಳ್ಳುವುದರೊಂದಿಗೆ ಚಂಚಲ ಮನಸ್ಸು ಮತ್ತು ಇಂದ್ರಿಯಗಳನ್ನು ನಿಗ್ರಹಿಸುವುದು. ನಾವು ಎಲ್ಲಾ ಮರೆತು ಸಂಗೀತದ ಆನಂದ ಅನುಭವಿಸಬೇಕು.” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ “ಮನೆಗಳಲ್ಲಿ ಸಂಸ್ಕಾರ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಕರುಂಬಿತ್ತಿಲು ಸಂಗೀತ ಶಿಬಿರದಂತಹ ಸನಿವಾಸ ಶಿಬಿರಗಳು ವಿದ್ಯೆಯ ಜತೆಗೆ ಸಂಸ್ಕಾರವನ್ನು ಹೇಳಿಕೊಡುತ್ತವೆ. ಶಿಬಿರಾರ್ಥಿಗಳು ಸಂಗೀತದ ರಾಯಭಾರಿಗಳಾಗಿ ಸಮಾಜಕ್ಕೆ ಕೀರ್ತಿ ತರಬೇಕು.” ಎಂದು ಹಾರೈಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ವಿಠಲ ರಾಮಮೂರ್ತಿ “10 ಮಕ್ಕಳೊಂದಿಗೆ ಮನೆಯಲ್ಲಿ ಪ್ರಾರಂಭಿಸಿದ ಸಂಗೀತ ಶಿಬಿರದ ಈ 24ನೇ ವರ್ಷದಲ್ಲಿ 300ಕ್ಕೂ ಹೆಚ್ಚು ಸಂಗೀತಾಸಕ್ತ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ. ನಾಡಿನ ಶ್ರೇಷ್ಠ ಕಲಾವಿದರನ್ನು ಕರೆಸಿ ಸಂಗೀತಾಸಕ್ತರಿಗೆ ತರಬೇತಿ, ಮಾರ್ಗದರ್ಶನ…

Read More

ಕಡಬ ತಾಲೂಕು ಕಾಣಿಯೂರು ಗ್ರಾಮದ  ಕಟ್ಟತ್ತಾರು ಎಂಬಲ್ಲಿ ವೇದಾವತಿ ಮತ್ತು ಲಕ್ಷ್ಮಣ  ಗೌಡ ದಂಪತಿಗಳ ಏಕಮಾತ್ರ ಪುತ್ರನಾಗಿ 16.04.1999ರಲ್ಲಿ ಚರಣ್ ಗೌಡ ಕಾಣಿಯೂರು ಅವರ ಜನನ. ಚಿಕ್ಕ ವಯಸ್ಸಿನಿಂದಲೇ ಇದ್ದ ಯಕ್ಷಗಾನದ ಆಸಕ್ತಿ ಗಮನಿಸಿ, ಬೆನ್ನೆಲುಬಾಗಿ ನಿಂತು ಪ್ರೋತ್ಸಾಹಿಸಿ ಒಬ್ಬ ಕಲಾವಿದ ಆಗುವಂತೆ ಮಾಡಿದ್ದೇ ಇವರ ತಾಯಿ. ರೇಡಿಯೋದಲ್ಲಿ ಬರುತ್ತಿದ್ದ ತಾಳಮದ್ದಳೆಯನ್ನು ಕೇಳಿಯೇ ಇವರಿಗೆ ಯಕ್ಷಗಾನ ಆಸಕ್ತಿ ಬೆಳೆದುದು. ಎಳವೆಯಲ್ಲೇ 7ನೇ ತರಗತಿಯಲ್ಲಿ ಇರುವಾಗಲೇ ಹವ್ಯಾಸಿ ಕಲಾವಿದ ನಿರಂಜನ್ ಆಚಾರ್ಯರಿಂದ ನಾಟ್ಯ ಕಲಿತು ಶಾಲೆಯಲ್ಲಿ ಯಕ್ಷಗಾನ ವೇಷಗಳನ್ನು ಮಾಡಿದ್ದರು. 2015ರಲ್ಲಿ ಕಾಣಿಯೂರಿನಲ್ಲಿ ಬೆಳಾಲು ಲಕ್ಷ್ಮಣ ಗೌಡರಲ್ಲಿ ಹೆಚ್ಚಿನ ನಾಟ್ಯಾಭ್ಯಾಸ. ಇದರ ಜೊತೆಗೆ ನಾಟಕ, ಭಾಗವತಿಕೆಯ ಪೂರ್ವರಂಗದ  ಸಂಗೀತ, ಚಿತ್ರಕಲೆಯನ್ನು ಕಲಾವಿದರಾದ ಸುಭಾಷ್ ಪಂಜರವರಲ್ಲಿ ಅಭ್ಯಾಸ ಮಾಡಿ ಬಡತನದ ಸವಾಲನ್ನು ಮೆಟ್ಟಿ ನಿಂತು ದ್ವಿತೀಯ ಪಿಯುಸಿ ವಿದ್ಯಾಭ್ಯಾಸವನ್ನು ಯಶಸ್ವಿಯಾಗಿ ಪೂರೈಸಿದರು. 2017 – 18ರ ಸಾಲಿನ ತಿರುಗಾಟದಲ್ಲಿ ಶ್ರೀ ಧರ್ಮಸ್ಥಳ ಮೇಳವನ್ನು ಸೇರಿ ಪ್ರಸ್ತುತ 7ನೇ ವರ್ಷದ ತಿರುಗಾಟವನ್ನು ಮಾಡುತ್ತಿದ್ದಾರೆ. ಹಿರಿಯವರ ಜೊತೆ…

Read More

ಕುಶಾಲನಗರ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹಯೋಗದೊಂದಿಗೆ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದ ಆಶ್ರಯದಲ್ಲಿ ದಿನಾಂಕ 21-05-2024ರಂದು ಏರ್ಪಡಿಸಲಾಗಿದ್ದ 2023-24ನೇ ಸಾಲಿನ ಕಥೆಗಾರ್ತಿ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಯನ್ನು ಮೂರ್ನಾಡಿನ ಕವಿಯಿತ್ರಿ, ಶಿಕ್ಷಕಿ ಕೆ.ಜಿ. ರಮ್ಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಕವಿತೆ-ಕಾವ್ಯ ರಚನೆ ಕುರಿತು ಮಾತನಾಡಿದ ಮಡಿಕೇರಿ ತಾಲೂಕಿನ ಗಾಳಿಬೀಡು ಜವಹರ್ ನವೋದಯ ವಿದ್ಯಾಲಯದ ಕನ್ನಡ ಅಧ್ಯಾಪಕರೂ ಆದ ಸಾಹಿತಿ ಮಾರುತಿ ದಾಸಣ್ಣನವ‌ರ್ “ಕವಿತೆ ರಚನೆಗೆ ಯಾವುದೇ ಛಂದ, ಬಂಧ, ಪ್ರಾಸ, ದೋರಣೆ, ವಸ್ತು, ಆಶಯಗಳಂತಹ ಸಿದ್ಧ ರಚನೆ ಇರಬೇಕಿಲ್ಲ. ವಾಸ್ತವಿಕ ನೆಲೆಗಟ್ಟಿನಲ್ಲಿ ಭಾವನಾತ್ಮಕ ಸನ್ನಿವೇಶದಲ್ಲಿ ಸ್ವಾಭಾವಿಕವಾಗಿ ಹುಟ್ಟಿಕೊಳ್ಳುವ ಕವಿತೆಗಳು ಗಟ್ಟಿಯಾಗಿ ನೆಲೆಯೂರುತ್ತವೆ. ಕವಿಯಿತ್ರಿ ಕೆ.ಜಿ. ರಮ್ಯ ಅವರ ‘ದಾಹಗಳ ಮೈ ಸವರುತ್ತಾ’ ಕವನ ಸಂಕಲನದ ಕವನಗಳಲ್ಲಿ ಕವನಗಳು ಶೋಷಿತ ಮಹಿಳೆಯರ…

Read More

ಬಂಟ್ವಾಳ : ಹೊಸ ಚಿಗುರು ಹಳೆಬೇರು ಕೂಡಿರಲು ಮರ ಸೊಬಗು ಎಂಬಂತೆ ಕಳೆದ 13 ವರ್ಷಗಳಿಂದ ಸನಾತನ ಭಾರತೀಯ ಸಂಸ್ಕೃತಿಯ ಜೊತೆಗೆ ಆಧುನಿಕ ಶಿಕ್ಷಣವನ್ನು ಒದಗಿಸುತ್ತಾ, ಪಠ್ಯ-ಪಠ್ಯೇತರ ಚಟುವಟಿಕೆಗಳಿಗೆ ಮಹತ್ವ ಕೊಡುತ್ತಾ ಬಂದಿರುವ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ 2023-24ನೇ ವರ್ಷದ ವಾರ್ಷಿಕೋತ್ಸವ ‘ಆಕರ್ಷ್’ – ಪ್ರತಿಭಾ ಪುರಸ್ಕಾರ ಹಾಗೂ ಪ್ರತಿಭಾ ದಿನೋತ್ಸವವು ದಿನಾಂಕ 18-05-2024ರಂದು ಸಂಪನ್ನಗೊಂಡಿತು. ವಿದ್ಯಾಕೇಂದ್ರದ ಸಂಸ್ಥಾಪಕರು, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರೂ ಆದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಸಿಕ್ಕಿದ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮನ್ನು ತಾವೇ ಬೆಳೆಸಿಕೊಳ್ಳಬೇಕು ಎಂಬ ಕಿವಿಮಾತು ನುಡಿದರು. ಖ್ಯಾತ ಯಕ್ಷಗಾನ ಭಾಗವತರು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಸತೀಶ್ ಶೆಟ್ಟಿ ಪಟ್ಲ, ಖ್ಯಾತ ಯೂಟ್ಯೂಬರ್ ಕಂಟೆಂಟ್ ಕ್ರಿಯೇಟರ್ ಧನರಾಜ್ ಆಚಾರ್ಯ, ಪ್ರಜ್ಞಾ ಧನರಾಜ್ ಹಾಗೂ ಹಿರಿಯ ವಿದ್ಯಾರ್ಥಿ ಹಾಗೂ ಬೆಂಗಳೂರು ರಾಜವೃಕ್ಷ ರಿಲೇಟರ್ಸ್ ಪೈ.ಲಿ.ನ ನಿರ್ದೇಶಕ ಲಕ್ಷ್ಮೀಶ್ ಕೆ.ಜೆ. ಅತಿಥಿಗಳಾಗಿ…

Read More

ಮಂಗಳೂರು : ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದ ಕೇಂದ್ರೀಯ ಹಿಂದಿ ನಿರ್ದೇಶನಾಲಯ, ಮಂಗಳೂರು ವಿಶ್ವವಿದ್ಯಾನಿಲಯ, ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟ ಮತ್ತು ಆಂತರಿಕ ಗುಣಮಟ್ಟ ಖಾತರಿಕೋಶದ ಸಹಭಾಗಿತ್ವದಲ್ಲಿ ಐದು ದಿನಗಳ ಕಾಲ ನಡೆದ ‘ಹಿಂದಿ ಯುವ ಬರಹಗಾರರ ಶಿಬಿರ’ದ ಸಮಾರೋಪ ಸಮಾರಂಭವು ದಿನಾಂಕ 17-05-2024ರಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಮಾತನಾಡಿದ ಮೂಡುಬಿದಿರೆ ಮಹಾವೀರ ಕಾಲೇಜು ನಿವೃತ್ತ ಪ್ರಾಧ್ಯಾಪಕ ಡಾ. ವಿದ್ಯಾಕುಮಾ‌ರ್ “ಭಾರತದಲ್ಲಿ ಹಿಂದಿ ರಾಜ್ಯಭಾಷಾ ಸ್ಥಾನ ಪಡೆದಿದ್ದು, ವಿಶ್ವದ ಮೂಲೆ ಮೂಲೆಗೂ ಹಿಂದಿ ಭಾಷೆಯ ಸಾರ ತಲುಪಿದೆ. ಈ ಮೂಲಕ ಹಿಂದಿ ಭಾಷೆ ವಿಶ್ವಮಾನ್ಯವಾಗಿದೆ. ಭಾಷೆ ಎಂಬುದು ಸಂವಹನ ಮಾಧ್ಯಮ ಮಾತ್ರವಲ್ಲದೆ ಸಂಸ್ಕೃತಿ ಜನಾಂಗಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತದೆ. ದೇಶದಲ್ಲಿ ಅತಿ ಹೆಚ್ಚಿನ ಜನರು ಹಿಂದಿ ಭಾಷೆ ಮಾತನಾಡಬಲ್ಲವರಾಗಿದ್ದಾರೆ. ಹಾಗಾಗಿ ಹಿಂದಿ ಭಾಷೆ ಮಾತನಾಡುವುದಕ್ಕೆ ಯಾವುದೇ ರೀತಿಯ ಸಂಕೋಚ ಇರಕೂಡದು. ವಿದ್ಯಾರ್ಥಿಗಳನ್ನು ಲೇಖಕರನ್ನಾಗಿ ಪ್ರೇರೇಪಿಸುವ ಉದ್ದೇಶದಿಂದ ಶಿಬಿರ ಆಯೋಜಿಸಲಾಗಿದೆ” ಎಂದು ಹೇಳಿದರು. ವಿ.ವಿ. ಕಾಲೇಜಿನ…

Read More

ಮಂಗಳೂರು : ನಾದನೃತ್ಯ ಸ್ಕೂಲ್ ಆಫ್ ಡಾನ್ಸ್ ಎಂಡ್ ಕಲ್ಚರಲ್ ಟ್ರಸ್ಟ್ (ರಿ.) ಆಯೋಜಿಸಿದ ‘ಬಣ್ಣಗಳ ಭಾವಲೋಕ’ ಭಾರತನಾಟ್ಯ ಕಾರ್ಯಕ್ರಮ ದಿನಾಂಕ 18 -05-2024 ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪಬೆಳಗಿಸಿ ಉದ್ಘಾಟಿಸಿದ ವಿದುಷಿ ವಸುಂಧರಾ ದೊರೆಸ್ವಾಮಿ ಮಾತನಾಡಿ “ನಾದ ನೃತ್ಯ ಕೇಂದ್ರವನ್ನು ನಡೆಸಿಕೊಂಡು ಬಂದಿರುವ ನನ್ನ ಶಿಷ್ಯೆ ಭ್ರಮರಿ ಶಿವಪ್ರಕಾಶ್ ತಾನು ನೃತ್ಯ ಪ್ರದರ್ಶಿಸುವುದಲ್ಲದೆ ತನ್ನ ಶಿಷ್ಯೆಯರಿಗೆ ಆ ವಿದ್ಯೆಯನ್ನು ಧಾರೆಯೆರೆದು ಇಂದು ಆ ಮಕ್ಕಳ ಜೊತೆಯಲ್ಲಿ ನೃತ್ಯ ಕಾರ್ಯಕ್ರಮ ನೀಡುತಿದ್ದಾರೆ. ಗುರುವಾಗಿ ನನಗೆ ಇಂದು ಶಿಷ್ಯೆಯನ್ನು ಪ್ರಶಿಷ್ಯೆಯರ ಜೊತೆ ನೋಡುವ ಸಂಭ್ರಮ. ಇಂದು ಭ್ರಮರಿ ಪ್ರಸ್ತುತ ಪಡಿಸಿದ ‘ಬಣ್ಣಗಳ ಭಾವ ಲೋಕ’ ಪದವರ್ಣದಲ್ಲಿ ಎಲ್ಲವೂ ನಾಯಕ ಹಾಗೂ ನಾಯಕಿ ಭಾವದಲ್ಲಿದ್ದರೂ ಮೊದಲು ಏಕವ್ಯಕ್ತಿಯಾಗಿ ಅಭಿನಯಿಸಿ, ಎರಡನೇ ನೃತ್ಯ ಪ್ರದರ್ಶನದಲ್ಲಿ ಇಬ್ಬರು ಜೊತೆಯಾಗಿ ದ್ವಿಗುಳ ನೃತ್ಯಬಂಧವನ್ನು ಪ್ರದರ್ಶಿಸಿ, ಅಂತಿಮವಾಗಿ ನೃತ್ಯ ರೂಪಕವನ್ನು ಪ್ರದರ್ಶಿಸಲಿರುವುದು ಹಾಗೂ ನೃತ್ಯ ಚೌಕಟ್ಟಿನಲ್ಲಿ ಇದೆಲ್ಲವನ್ನು ಪ್ರದರ್ಶಿಸುತ್ತಿರುವುದು ಅವಳ ಒಳಗಿರುವ ಕ್ರಿಯಾಶೀಲತೆಗೆ ಹಿಡಿದ…

Read More

ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ‘ಮನೆಯೇ ಗ್ರಂಥಾಲಯ’ ವಿನೂತನ‌ ಕಾರ್ಯಕ್ರಮಕ್ಕೆ ನಾಡಿನ ಪ್ರಸಿದ್ಧ ಸಾಹಿತಿ ವಿದ್ವಾಂಸ ನಾಡೋಜ ಡಾ. ಕೆ.ಪಿ. ರಾವ್ ಇವರು ಉಡುಪಿಯ ಬೈಲೂರಿನಲ್ಲಿರುವ ರಂಗ ಕಲಾವಿದರಾದ ಶಶಿಪ್ರಭಾ ಹಾಗೂ ವಿವೇಕಾನಂದ ದಂಪತಿಗಳ ಮನೆ ‘ವಾಟಿಕಾ’ದಲ್ಲಿ ದಿನಾಂಕ 21-05-2024ರಂದು ಚಾಲನೆ ನೀಡಿದರು. “ಆರ್ಟಿಫಿಶಿಯಲ್ ಇಂಟಲಿಜೆನ್ಸಿ ಎನ್ನುವಂತದ್ದು ಇವತ್ತಿನ ಆಧುನಿಕ ಸಂದರ್ಭದಲ್ಲಿ ಎಲ್ಲಾ ಸಾಧ್ಯತೆಗಳನ್ನು ಇಟ್ಟುಕೊಂಡು ಬೆಳೆಯುತ್ತಿದೆ. ಆದರೆ ಅನೇಕ ಶತಮಾನಗಳ ಹಿಂದೆ ನಾವು ಕಂಡುಕೊಂಡ ಮುದ್ರಣ ಮಾಧ್ಯಮದ ಆವಿಷ್ಕಾರದಿಂದಾಗಿ ಗಳಿಸಿದ ಜ್ಞಾನ ಸಂಪತ್ತನ್ನು ಅಕ್ಷರರೂಪವಾಗಿ ಪರಿವರ್ತಿಸಿ, ಮುಂದೆ ಅವುಗಳನ್ನು ಮುದ್ರಣ ರೂಪದಲ್ಲಿ ದಾಖಲೀಕರಣಗೊಳಿಸಿರುವುದರ ಪರಿಣಾಮವಾಗಿ ನಮಗಿಂದು ಕೋಟಿ ಕೋಟಿ ಗ್ರಂಥಗಳು ನಮ್ಮ ಅಧ್ಯಯನಕ್ಕೆ ಸಾಧ್ಯವಾಗಿವೆ, ಮುಂದೆಯೂ ಇವು ಸಾಧ್ಯವಾಗುತ್ತವೆ. ಅಷ್ಟು ಮಾತ್ರವಲ್ಲ ಒಂದು ಗ್ರಂಥವನ್ನು ತೆರೆದು ಅದರೊಳಗಿನ ಒಂದು ಪುಟದ ಸುವಾಸನೆಯನ್ನು ಗಮನಿಸಿದಾಗ ಅಲ್ಲಿ ಸಿಗುವ ಆನಂದವೇ ಬೇರೆ ಆಗಿರುತ್ತದೆ. ಅದನ್ನು ಪದಗಳಲ್ಲಿ ಕಟ್ಟಿಕೊಡಲು ಸಾಧ್ಯವಿಲ್ಲ. ಅಂತಹ ಅನುಭವವನ್ನು ಗ್ರಂಥಗಳನ್ನು ಸ್ಪರ್ಶಿಸುವುದರಿಂದ…

Read More

ಪುತ್ತೂರು : ಶ್ರೀ‌ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ತಿಂಗಳ ಸರಣಿ ತಾಳಮದ್ದಳೆ ಕಾರ್ಯಕ್ರಮದಲ್ಲಿ ಬನ್ನೂರು ಭಾರತೀ ನಗರದ ಶ್ರೀ ಬಲಮುರಿ ವಿದ್ಯಾಗಣಪತಿ ದೇವಳದ ವಠಾರದಲ್ಲಿ‌ ದಿನಾಂಕ 21-05-2024ರಂದು ‘ತರಣಿ ಸೇನ ಕಾಳಗ’ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಎಲ್.ಎನ್. ಭಟ್, ಆನಂದ ಸವಣೂರು, ನಿತೀಶ್ ಮನೊಳಿತ್ತಾಯ ಎಂಕಣ್ಣಮೂಲೆ, ಪದ್ಯಾಣ ಶಂಕರನಾರಾಯಣ ಭಟ್, ವಿಷ್ಣು ಶರಣ ಬನಾರಿ, ಮಾಸ್ಟರ್ ಪರೀಕ್ಷಿತ್ ಪುತ್ತೂರು, ಮಾಸ್ಟರ್ ಅಭಯ ಕೃಷ್ಣ ಸಹಕರಿಸಿದರು. ಮುಮ್ಮೇಳದಲ್ಲಿ ಕು೦ಬ್ಳೆ ಶ್ರೀಧರ್ ರಾವ್ (ಶ್ರೀರಾಮ), ಪಕಳಕುಂಜ ಶ್ಯಾಮ್ ಭಟ್ (ರಾವಣ), ಭಾಸ್ಕರ್ ಶೆಟ್ಟಿ ಸಾಲ್ಮರ (ತರಣಿಸೇನ), ಭಾಸ್ಕರ್ ಬಾರ್ಯ (ಸರಮೆ), ಮಾಂಬಾಡಿ ವೇಣುಗೋಪಾಲ ಭಟ್ (ವಿಭೀಷಣ) ಹಾಗೂ ಚಂದ್ರಶೇಖರ್ ಭಟ್ ಬಡೆಕ್ಕಿಲ (ಸುಪಾರ್ಶ್ವಕ) ಸಹಕರಿಸಿದರು. ದೇವಳದ ಸಂಚಾಲಕ ವೆಂಕಟಕೃಷ್ಣ ಪ್ರಾಯೋಜಿಸಿದ್ದರು.

Read More

ಗಿರಿಮನೆ ಶ್ಯಾಮರಾವ್ ಅವರ ಮನೋವೈಜ್ಞಾನಿಕ ಕಾದಂಬರಿ ಸರಣಿಯ ನಾಲ್ಕನೇ ಕೃತಿಯಾಗಿರುವ ‘ಸಂಪ್ರಾಪ್ತಿ’ ಎಂಬ ಕಾದಂಬರಿಯು ಬದುಕಿನ ಪ್ರತಿಯೊಂದು ಆಯಾಮಗಳಲ್ಲಿ ಮಹತ್ವದ ಪಾತ್ರವನ್ನು ವಹಿಸುವ ಮಾನಸಿಕ ಸ್ವಾಸ್ಥ್ಯದ ಕುರಿತು ಚರ್ಚಿಸುತ್ತದೆ. ಮೇಲ್ನೋಟಕ್ಕೆ ಸಾಮಾಜಿಕ ಕಾದಂಬರಿಯಂತೆ ಕಾಣುತ್ತಿದ್ದರೂ ಮನೋವೈಜ್ಞಾನಿಕ ಅಂಶಗಳನ್ನು ಓದುಗರ ಸೂಕ್ಷ್ಮ ದೃಷ್ಟಿಗೆ ಕಾಣುವಂತೆ ಚಿತ್ರಿಸಿರುವ ಲೇಖಕರು ವ್ಯಕ್ತಿಯ ಮನಸ್ಥಿತಿಗಳು ಕೌಟುಂಬಿಕ ಬದುಕಿನ ಮೇಲೆ ತಮ್ಮ ಪ್ರಭಾವವನ್ನು ಬೀರುವ ರೀತಿ, ಹದಗೆಟ್ಟ ಮಾನಸಿಕ ಪರಿಸ್ಥಿತಿಯಿಂದ ಏಳಬಹುದಾದ ಗುಲ್ಲುಗಳು ಜೀವನದ ಏರು ಪೇರುಗಳಿಗೆ ಮುನ್ನುಡಿ ಬರೆಯುವ ವಿಧಾನವನ್ನು ವಿವರಿಸುತ್ತದೆ. ಸಭ್ಯನೂ, ಸಹೃದಯಿಯೂ, ಅಪಾರ ತಾಳ್ಮೆಯುಳ್ಳವನೂ ಆದ ರವಿಶಂಕರ್ ಯಾರಿಗೂ ಕೇಡು ಬಗೆಯದ ವ್ಯಕ್ತಿ. ತನಗೆ ಕೇಡು ಬಗೆದವರನ್ನು ದ್ವೇಷಿಸದೆ, ಅವರಲ್ಲಿ ನೈತಿಕತೆಯನ್ನು ಪೋಷಿಸುವ ವಿಶಾಲ ಮನೋಭಾವದವನು. ತಾಯಿಯ ಮುದ್ದಿನ ಮಗನಾಗಿ, ಕವಿತಾಳ ಪ್ರೀತಿಯ ಅಣ್ಣನಾಗಿ ಕುಟುಂಬದ ಹೊಣೆ ಹೊತ್ತ ರವಿಶಂಕರ್ ವೃತ್ತಿಧರ್ಮದಲ್ಲೂ ಸಾರ್ಥಕತೆ ಕಾಣುವ ಸಲುವಾಗಿ ಉನ್ನತ ವ್ಯಾಸಂಗಕ್ಕೆ ಸಿದ್ಧತೆ ನಡೆಸುವಾಗ ಪರಿಚಿತಳಾದ ತನ್ನ ತಂಗಿಯ ಗೆಳತಿ ವಿನುತಾಳ ಅಕ್ಕ ಚಿತ್ರಾಳನ್ನು ಪ್ರೇಮಿಸಿ, ಕುಟುಂಬಸ್ಥರ…

Read More