Author: roovari

ಉಪ್ಪಿನಂಗಡಿ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಮಹತ್ವಾಕಾಂಕ್ಷೆಯ ಯೋಜನೆಯಾದ ‘ಯಕ್ಷ ಶಿಕ್ಷಣ’ ಯೋಜನೆಯು ಉಪ್ಪಿನಂಗಡಿ ಘಟಕದ ಮೇಲ್ವಚಾರಣೆಯಲ್ಲಿ 2025-26ನೇ ಸಾಲಿನ ಉಚಿತ ಯಕ್ಷಗಾನ ತರಬೇತಿ ಕಾರ್ಯಕ್ರಮವು ದಿನಾಂಕ 27 ಜೂನ್ 2025ರಂದು ಮಧ್ಯಾಹ್ನ 3-00 ಗಂಟೆಗೆ ಉಪ್ಪಿನಂಗಡಿ ವೇದಶಂಕರ ನಗರದ ಶ್ರೀರಾಮ ಶಾಲೆಯ ಉರಿಮಜಲು ರಾಮ ಭಟ್ ವೇದಿಕೆಯಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಉಪ್ಪಿನಂಗಡಿ ಘಟಕದ ಅಧ್ಯಕ್ಷರಾದ ಶ್ರೀ ಜಗದೀಶ್ ಶೆಟ್ಟಿ ಕೆ. ಇವರು ಉದ್ಘಾಟಿಸಿ, ಪಟ್ಲ ಫೌಂಡೇಶನ್ ಸ್ಥಾಪನೆಯ ಉದ್ದೇಶ, ಕಾರ್ಯವೈಖರಿಯನ್ನು ತಿಳಿಸಿದರು. ಪಟ್ಲ ಫೌಂಡೇಶನ್ ಉಪ್ಪಿನಂಗಡಿ ಘಟಕದ ಸದಸ್ಯರಾದ ಶ್ರೀ ಸುಧಾಕರ್ ಶೆಟ್ಟಿ ಗಾಂಧೀಪಾರ್ಕ್ ಇವರು ಮಾತನಾಡಿ “ಮಕ್ಕಳು ಕಲೆಯನ್ನು ಉಳಿಸಿಕೊಂಡು, ಉತ್ತಮ ಸಂಸ್ಕಾರ ಬೆಳೆಸಿಕೊಂಡು ಹೋಗಬೇಕಾದರೆ ಇಂತಹ ತರಬೇತಿಗಳು ಅಗತ್ಯ” ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಸಂಚಾಲಕರಾದ ಯು.ಜಿ. ರಾಧಾ ಮಾತನಾಡಿ “ಉಚಿತ ಯಕ್ಷಗಾನ ತರಬೇತಿಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತರಬೇತಿಯ ಸದುಪಯೋಗ…

Read More

ಬದಿಯಡ್ಕ : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ದಿನಾಂಕ 28 ಜೂನ್ 2025ರಂದು ಕಾಸರಗೋಡಿನ ಸೂರಂಬೈಲು ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಮಾರ್ಗದರ್ಶನ ಅಭಿಯಾನದ 2ನೇ ಶಿಬಿರವು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆರಿಕ್ಕಾಡಿ ಕಾರ್ಳೇ ಕಾಳಿಕಾಂಬಾ ದೇವಸ್ಥಾನದ ತಂತ್ರಿವರ್ಯರಾದ ಬ್ರಹ್ಮಶ್ರೀ ಪುರೋಹಿತ ಕೆ. ರಾಮಕೃಷ್ಣ ಆಚಾರ್ಯ “ಮಕ್ಕಳಲ್ಲಿ ಪ್ರತೀ ಕನ್ನಡ ಪೋಷಕರೂ ಕೂಡಾ ಕನ್ನಡ ಪುಸ್ತಕಗಳನ್ನು ಓದುವ ಆಸಕ್ತಿಯನ್ನು ಮೂಡಿಸಬೇಕು. ಇದರಿಂದ ಎಳೆಯ ಮಕ್ಕಳಲ್ಲಿ ಜ್ಞಾನ ವೃದ್ಧಿಯಾಗುತ್ತದೆ” ಎಂದು ಹೇಳಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಶಿಕ್ಷಣ ತಜ್ಞ ವಿ.ಬಿ. ಕುಳಮರ್ವ ಮಾತನಾಡಿ “ಕಾಸರಗೋಡು ಜಿಲ್ಲೆಯು ಬಹುಭಾಷಾ ಸಂಗಮ ಭೂಮಿ. ಎಲ್ಲಾ ಭಾಷೆಗಳೂ ಕೂಡಾ ಮೂಲ ಭಾಷೆಯ ಮಕ್ಕಳು. ಸಮಾಜವೆಂಬ ಕೈಗೆ ಬೆರಳುಗಳ ಹಾಗೆ ಎಲ್ಲಾ ಭಾಷೆಗಳೂ ಬೇಕು” ಎಂದು ಹೇಳಿದರು. ಸಭೆಯಲ್ಲಿ ಪರಿಷತ್ತಿನ ಕೇಂದ್ರ ಸಮಿತಿಯ ಸ್ಥಾಪಕ ಸಂಚಾಲಕ ಡಾ. ಕೆ. ವಾಮನ್ ರಾವ್ ಬೇಕಲ್, ಕಾಸರಗೋಡಿನ…

Read More

ಉಡುಪಿ : ಯಕ್ಷಗಾನ ಕಲಾರಂಗ (ರಿ.) ಇದರ ವತಿಯಿಂದ ವೃತ್ತಿ ಮೇಳದ ಯುವ ಕಲಾವಿದರಿಗಾಗಿ ಆಯೋಜಿಸಿರುವ 4 ದಿನಗಳ ಸನಿವಾಸ ‘ಯಕ್ಷಗಾನ ಮಾರ್ಗದರ್ಶಿ ಶಿಬಿರ’ವು ದಿನಾಂಕ 01 ಜುಲೈ 2025ರಂದು ಪೂರ್ವಾಹ್ನ 10-30 ಗಂಟೆಗೆ ಉಡುಪಿಯ ಯಕ್ಷಗಾನ ಕಲಾರಂಗದ ಐ.ವೈ.ಸಿ. ಸಭಾಂಗಣದಲ್ಲಿ ಉದ್ಘಾಟನೆಗೊಳ್ಳಲಿದೆ. ಶ್ರೀಕ್ಷೇತ್ರ ಕಟೀಲು ಅನುವಂಶಿಕ ಅರ್ಚಕರಾದ ಹರಿನಾರಾಯಣದಾಸ ಆಸ್ರಣ್ಣ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ ರಾವ್ ಇವರು ಅಧ್ಯಕ್ಷತೆ ವಹಿಸಲಿರುವರು. ಕಲಾಪೋಷಕರಾದ ಪಣಂಬೂರು ವಾಸುದೇವ ಐತಾಳ್ ಇವರು ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.

Read More

ಬೆಂಗಳೂರು : ಸ್ಟೇಜ್ ಬೆಂಗಳೂರು ಪ್ರಸ್ತುತ ಪಡಿಸುವ ‘ಅಭಿನಯ ಕಾರ್ಯಾಗಾರ’ವು ದಿನಾಂಕ 07 ಜುಲೈ 2025ರಿಂದ ಪ್ರಾರಂಭವಾಗಲಿದೆ. 16 ವರ್ಷ ಮೇಲ್ಪಟ್ಟ ಆಸ್ತಕರಿಗೆ ಸೋಮವಾರದಿಂದ ಶುಕ್ರವಾರ ಬೆಳಗ್ಗೆ ಗಂಟೆ 6-00ರಿಂದ 7-30ರ ತನಕ ಹಾಗೂ ಸಂಜೆ ಗಂಟೆ 7-00ರಿಂದ 9-00 ಗಂಟೆಗೆ ಎರಡು ತಿಂಗಳುಗಳ ಈ ಕಾರ್ಯಾಗಾರ ನಡೆಯಲಿದೆ. ಹೆಚ್ಚಿನ ಮಾಹಿತಿ ಮತ್ತು ನೋಂದಾವಣೆಗೆ 90088 30011 ಮತ್ತು 73384 73842 ಸಂಖ್ಯೆಯನ್ನು ಸಂಪರ್ಕಿಸಿರಿ. ಸಂಸ್ಥೆಯ ಬಗ್ಗೆ : ಸ್ಟೇಜ್ ಬೆಂಗಳೂರು ಕರ್ನಾಟಕ ಸರ್ಕಾರದ ಅಧೀನದಲ್ಲಿ ನೋಂದಾಯಿತ ಸಂಸ್ಥೆಯಾಗಿದ್ದು, ಯುವ ಪೀಳಿಗೆ ಮತ್ತು ರಂಗಭೂಮಿ ಉತ್ಸಾಹಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯೊಂದಿಗೆ ದಿನಾಂಕ 07 ಏಪ್ರಿಲ್ 2019ರಂದು ಸ್ಥಾಪಿಸಲಾಗಿದೆ. ಇದು ಭಾರತದಾದ್ಯಂತ ವ್ಯವಸ್ಥಿತವಾಗಿ ಸಾಂಸ್ಕೃತಿಕ ಮತ್ತು ನಾಟಕ ಪ್ರದರ್ಶನಗಳ ಪ್ರಚಾರ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದೆ. ನಾವು ವೃತ್ತಿಪರವಾಗಿ ಸಾಂಸ್ಕೃತಿಕ ಮತ್ತು ರಂಗಭೂಮಿ ಸಂಬಂಧಿತ ಚಟುವಟಿಕೆಗಳಲ್ಲಿ ತರಬೇತಿ, ಅಭ್ಯಾಸ ಮತ್ತು ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದೇವೆ. ಸ್ಟೇಜ್ ಬೆಂಗಳೂರು ಥಿಯೇಟರ್ ತಂಡವು ವಿವಿಧ ಐಟಿ ಕಂಪನಿಗಳು ಮತ್ತು ಶಾಲಾ…

Read More

ಬೆಳಗಾವಿ : ರಂಗಸಂಪದ ಬೆಳಗಾವಿ ಪ್ರಸ್ತುತ ಪಡಿಸುವ ಮುಂಗಾರು ನಾಟಕ ಪ್ರದರ್ಶನದಲ್ಲಿ ಬೆಂಗಳೂರಿನ ರಂಗಸಂಪದ ತಂಡದ ರಂಗಕಲಾವಿದೆ ಉಮಾಶ್ರೀ ಅಭಿನಯಿಸುವ ‘ಶರ್ಮಿಷ್ಠೆ’ ಏಕವ್ಯಕ್ತಿ ನಾಟಕ ಪ್ರದರ್ಶನವನ್ನು ದಿನಾಂಕ 05 ಜುಲೈ 2025ರಂದು ಸಂಜೆ 6-30 ಗಂಟೆಗೆ ಬೆಳಗಾವಿಯ ಲೋಕಮಾನ್ಯ ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಡಾ. ಬೇಲೂರು ರಘುನಂದನ್ ನಾಟಕ ರಚಿಸಿದ್ದು, ಚಿದಂಬರ ರಾವ್ ಜಂಬೆ ವಿನ್ಯಾಸ ನಿರ್ದೇಶನ ಮಾಡಿರುತ್ತಾರೆ.

Read More

ಮಡಿಕೇರಿ : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಕಾಸರಗೋಡು, ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಘಟಕ ಮತ್ತು ಕನ್ನಡ ಭವನ ಕೊಡಗು ಜಿಲ್ಲಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ‘ಕೊಡಗು ಜಿಲ್ಲಾ ಚುಟುಕು ಕಾವ್ಯಶ್ರೀ ಪ್ರಶಸ್ತಿ -2025’ ಪ್ರದಾನ, ಕೊಡಗು ಮಳೆಗಾಲ ಕವಿಗೋಷ್ಠಿ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 06 ಜುಲೈ 2025ರಂದು ಅಪರಾಹ್ನ 2-00 ಗಂಟೆಗೆ ಮಡಿಕೇರಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಕನ್ನಡ ಭವನದ ಅಧ್ಯಕ್ಷರಾದ ಬೊಳ್ಳಜಿರ ಬಿ. ಅಯ್ಯಪ್ಪ ಇವರು ವಹಿಸಲಿದ್ದು, ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ – ಸಂಧ್ಯಾರಾಣಿ ಟೀಚರ್ ಇವರು ಉದ್ಘಾಟನೆ ಮಾಡಲಿದ್ದಾರೆ. ಕಿಗ್ಗಾಲು ಎನ್. ಗಿರೀಶ್ ಮೂರ್ನಾಡು, ಮೂಕಳೇರ ಟೈನಿ ಪೂಣಚ್ಚ ಪೊನ್ನಂಪೇಟೆ, ಪಂದ್ಯಂಡ ರೇಣುಕ ಸೋಮಯ್ಯ ಹೊಸೂರು ಅಮ್ಮತ್ತಿ, ಶ್ರೀಮತಿ ಅಪರ್ಣಾ ಹುಲಿತಾಳ ಮತ್ತು ಅಯ್ಯನೆರವಂಡ ಪ್ರಿತುನ್ ಪೂವಣ್ಣ ಇವರುಗಳಿಗೆ ‘ಕೊಡಗು ಜಿಲ್ಲಾ ಚುಟುಕು…

Read More

ಮಂಗಳೂರು : ಯಕ್ಷಗಾನ ಶಿಕ್ಷಣ ಅಭಿಯಾನವು ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಘಟಕದ ಸಹಯೋಗದಲ್ಲಿ 2025-26ನೇ ಸಾಲಿನ ಉಚಿತ ಯಕ್ಷಗಾನ ತರಬೇತಿ ಉದ್ಘಾಟನೆಯು ದಿನಾಂಕ 28 ಜೂನ್ 2025ನೇ ಶನಿವಾರ ಬೆಳಗ್ಗೆ ಗಂಟೆ 9-30ಕ್ಕೆ ನಾಲ್ಯಪದವು ಶಕ್ತಿನಗರದ ಕುವೆಂಪು ಶತಮಾನೋತ್ಸವ ಉನ್ನತೀಕರಿಸಿದ ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೆರವೇರಿತು. ಪಟ್ಲ ಟ್ರಸ್ಟಿನ ಕೇಂದ್ರೀಯ ಸಮಿತಿಯ ಸಂಘಟನಾ ಕಾರ್ಯದರ್ಶಿ ಪ್ರದೀಪ್ ಆಳ್ವ ಕದ್ರಿ, ಮಂಗಳೂರು ಘಟಕದ ಅಧ್ಯಕ್ಷರಾದ ತಾರಾನಾಥ ಶೆಟ್ಟಿ, ಕೋಶಾಧಿಕಾರಿ ಶ್ರೀ ಗೋಪಿನಾಥ ಶೆಟ್ಟಿ, ಪದಾಧಿಕಾರಿಗಳಾದ ಶ್ರೀ ಸಂತೋಷ್ ಶೆಟ್ಟಿ, ಯಕ್ಷಗುರು ಶ್ರೀ ವಿಶ್ವನಾಥ ಶೆಟ್ಟಿ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕಿಶೋರ್ ಜೆ. ಪದವು ಫ್ರೆಂಡ್ಸ್ ಅಧ್ಯಕ್ಷರಾದ ಕುಶಲ್ ಕುಮಾರ್, ವಿದ್ಯಾ ದೀವಿಗೆ ಟ್ರಸ್ಟ್ ಅಧ್ಯಕ್ಷರಾದ ದೇವಾನಂದ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಟೋನಿ ಪಿಂಟೋ, ಶಾಲಾ ಸಂಚಾಲಕರದ ಅಶೋಕ್ ನಾಯ್ಕ್, ಶಾಲಾ ಮುಕ್ಯೋಪಾಧ್ಯಾಯನಿ ದಾಕ್ಷಯಣಿ ಉಪಸ್ಥಿತರಿದ್ದರು.

Read More

ಮೈಸೂರು : ರಂಗಚಂದಿರ (ರಿ.) ಬೆಂಗಳೂರು ಆಯೋಜಿಸುವ ಕಾಜಾಣ ಅರ್ಪಿಸುವ ಒಡನಾಡಿ ಬಂಧು ಸಿಜಿಕೆ-75 ಮಾಸದ ನೆನಪು ಸರಣಿ ಕಾರ್ಯಕ್ರಮದ ಅಂಗವಾಗಿ ‘ಏಷಿಯ ಬುಕ್ಕ ಆಫ್ ರೆಕಾರ್ಡ್ಸ್’ ಸೇರ್ಪಡೆಯಾಗಿರುವ ‘ಪಂಚಗವ್ಯ’ ಪಂಚಕಾವ್ಯಗಳ ಅಭಿನಯಗುಚ್ಛ ನಾಟಕ ಪ್ರದರ್ಶನವನ್ನು ದಿನಾಂಕ 05 ಜುಲೈ 2025ರಂದು ಸಂಜೆ 7-00 ಗಂಟೆಗೆ ಮೈಸೂರು ಕಲಾಮಂದಿರ ಆವರಣದ ಕಿರುರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಮೈಸೂರಿನ ಜಿ.ಪಿ.ಐ.ಇ.ಆರ್. ರಂಗ ತಂಡದ ಸಹಕಾರದೊಂದಿಗೆ ಪ್ರಸ್ತುತ ಪಡಿಸುವ ಗೋಕುಲ ಸಹೃದಯನ ಅಸಾಮಾನ್ಯ ದೃಶ್ಯ ಸಂಪುಟ ಏಕವ್ಯಕ್ತಿ ರಂಗಪ್ರವೇಶದ ರಚನೆ, ವಿನ್ಯಾಸ, ಸಂಗೀತ ಮತ್ತು ನಿರ್ದೇಶನ ಡಾ. ಎಸ್.ಎಲ್.ಎನ್. ಸ್ವಾಮಿ ಇವರು ಮಾಡಿರುತ್ತಾರೆ.

Read More

ಮಂಗಳೂರು: ಕಸಾಪ ಮಂಗಳೂರು ಘಟಕದ ವತಿಯಿಂದ ಗೌರವ ಕಾರ್ಯದರ್ಶಿಗಳಾದ ಡಾ. ಮುರಲೀಮೋಹನ್ ಚೂಂತಾರು ಹಾಗೂ ಡಾ. ರಾಜಶ್ರೀ ಮೋಹನ್ ದಂಪತಿಗಳು ತಮ್ಮ ಕಡಲತಡಿಯ ಮನೆ ‘ಕನಸು’ ವಿನಲ್ಲಿ ಆಯೋಜಿಸಿದ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ ದಿನಾಂಕ 26 ಜೂನ್ 2025 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಡಾ. ಮಂಜುನಾಥ ರೇವಣ್ಕರ್ ಮಾತನಾಡಿ “ಎಲ್ಲೆಡೆಯೂ ಮಳೆ, ಪ್ರವಾಹ, ಪ್ರಕೃತಿ ವಿಕೋಪ, ಅಪಘಾತ, ಯುದ್ದ ಇಂತಹ ಅನಾಹುತಗಳ ಬಗ್ಗೆಯೇ ಕೇಳಲ್ಪಡುತ್ತಿರುವ ಇಂತಹ ಸಂದರ್ಭದಲ್ಲಿ ನಗರದಿಂದ ದೂರವಾದ ಕಡಲತಡಿಯ ಪ್ರಶಾಂತವಾದ ವಾತಾವರಣದಲ್ಲಿ ಸಾಹಿತಿಗಳು ಸೇರಿಕೊಂಡು ಎಲ್ಲವನ್ನೂ ಮರೆತು ಒಟ್ಟಾಗಿ ಕುಳಿತು ಒಂದಿಷ್ಟು ಕವಿತೆ, ಸಂಗೀತ, ಹರಟೆಗಳನ್ನು ಮಾಡುವುದರಿಂದ ಮನಸ್ಸು ಪ್ರಪುಲ್ಲಿತವಾಗುತ್ತದೆ” ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಖ್ಯಾತ ಹಾಸ್ಯ ಲೇಖಕಿ ಪ್ರೊ. ಭುವನೇಶ್ವರಿ ಹೆಗಡೆ ಕವಿಗಳು ತಮ್ಮ ಬದುಕಿನ ವಿವಿಧಾನುಭವಗಳನ್ನು ಕವನಗಳ ಮೂಲಕ ಹಂಚಿಕೊಂಡ ಬಗೆಯನ್ನು ಬಹಳವಾಗಿ ಮೆಚ್ಚಿಕೊಂಡು. “ಇಂತಹ…

Read More

ಕೊಡಗು : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಕಟಣೆ ಯೋಜನೆಯಡಿ ಪುಸ್ತಕ ಪ್ರಕಟಿಸಲು ಉದ್ದೇಶಿಸಲಾಗಿದೆ. ಲೇಖಕರು ಅರೆಭಾಷೆ ಕಥೆ, ಅರೆಭಾಷೆ ಅಜ್ಜಿ ಕಥೆ, ಅರೆಭಾಷೆ ಜನಪದ, ಅರೆಭಾಷೆ ಕವನ, ಅರೆಭಾಷೆ ಲೇಖನ, ಅರೆಭಾಷೆ ವಿಚಾರ ಸಾಹಿತ್ಯ, ಅರೆಭಾಷೆ ಲಲಿತ ಪ್ರಬಂಧ, ಅರಭಾಷೆ ಸಂಶೋಧನ ಕೃತಿಗಳು ಇನ್ನಿತರೆ ಬರಹಗಳಿದ್ದಲ್ಲಿ ಡಿ. ಟಿ. ಪಿ. ಪ್ರತಿಗಳನ್ನು ಅಕಾಡೆಮಿಗೆ ನಲ್ಲಿಸುವಂತೆ ಹಾಗೂ ಇ-ಮೇಲ್ ಮೂಲಕ [email protected] ಕಳುಹಿಸಬಹುದು. ಪುಸ್ತಕಗಳ ಆಯ್ಕೆಯ ಹಕ್ಕು ಅಕಾಡೆಮಿಯದ್ದಾಗಿದ್ದು, ಬರಹ ಕನಿಷ್ಠ 70 ರಿಂದ 80 ಪುಟಗಳಿರಬೇಕು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಅವರು ತಿಳಿಸಿದ್ದಾರೆ ತಮ್ಮ ಡಿ. ಟಿ. ಪಿ. ಪ್ರತಿಗಳನ್ನು ಸಲ್ಲಿಸಲು 31 ಜುಲೈ 2025 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಅಧ್ಯಕ್ಷರು, ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಷ್ಣಾ, ರಾಜಸೀಟ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ, ಮೊ ನಂ 6362522677

Read More