Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು : ಶಾಂಡಿಲ್ಯಾ ಐ.ಎನ್.ಸಿ. ಪಸ್ತುತ ಪಡಿಸುವ ‘ಕನ್ನಡ ನಾಟಕೋತ್ಸವ’ ಸಮಾರಂಭವನ್ನು ದಿನಾಂಕ 13 ಸೆಪ್ಟೆಂಬರ್ 2025ರಂದು ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಆಯೋಜಿಸಲಾಗಿದೆ. ಸಂಜೆ 7-30 ಗಂಟೆಗೆ ನಟನ ಪಯಣ ರೆಪರ್ಟರಿ ತಂಡದ ಪ್ರಯೋಗ ‘ಕಣಿವೆಯ ಹಾಡು’ ನಾಟಕ ಪ್ರದರ್ಶನಗೊಳ್ಳಲಿದೆ. ಈ ನಾಟಕದ ಮೂಲ ರಚನೆ ಅತೊಲ್ ಫ್ಯೂಗಾರ್ಡ್ ಇವರದ್ದು, ಕನ್ನಡಕ್ಕೆ ಡಾ. ಮೀರಾ ಮೂರ್ತಿ ಅನುವಾದಿಸಿದ್ದು, ಅನುಷ್ ಶೆಟ್ಟಿ ಮತ್ತು ಮುನ್ನ ಮೈಸೂರು ಇವರು ಸಂಗೀತ ನೀಡಿದ್ದು, ಡಾ. ಶ್ರೀಪಾದ ಭಟ್ ಇವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಮೇಘ ಸಮೀರ ಮತ್ತು ದಿಶಾ ರಮೇಶ್ ಅಭಿನಯಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 7259537777, 9480468327 ಮತ್ತು 9845595505 ಸಂಪರ್ಕಿಸಿರಿ.
ಎಡನೀರು : ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠ ಬ್ರಹ್ಮ್ಯೆಕ್ಯ ಶ್ರೀ ಶ್ರೀ ಶ್ರೀ ಕೇಶವಾನಂದ ಭಾರತೀ ಶ್ರೀಪಾದಂಗಳವರ ಪಂಚಮ ವಾರ್ಷಿಕ ಆರಾಧನೆ ಪ್ರಯುಕ್ತ ದಿನಾಂಕ 11 ಸೆಪ್ಟೆಂಬರ್ 2025ರಂದು ವೇಣುವಾದನ ಮತ್ತು ಯಕ್ಷಗಾನ ಪ್ರದರ್ಶನವನ್ನು ಶ್ರೀ ಎಡನೀರು ಮಠದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 9-30 ಗಂಟೆಗೆ ವೇಣುವಾದನ ಕಾರ್ಯಕ್ರಮದಲ್ಲಿ ವಿದ್ವಾನ್ ಎಂ.ಕೆ. ಪ್ರಾಣೇಶ್ ಕೊಳಲು, ವಿದ್ವಾನ್ ಜನಾರ್ದನ್ ಶ್ರೀನಾಥ್ ವಯಲಿನ್, ವಿದ್ವಾನ್ ಆನೂರು ಅನಂತಕೃಷ್ಣ ಶರ್ಮಾ ಮೃದಂಗ, ವಿದ್ವಾನ್ ಗುರುಪ್ರಸನ್ನ ಖಂಜರಿ ಮತ್ತು ಬೆಂಗಳೂರಿನ ವಿದ್ವಾನ್ ರಾಜಶೇಖರ ಮೋರ್ಸಿಂಗ್ ನಲ್ಲಿ ಸಹಕರಿಸಲಿದ್ದಾರೆ. ಸಂಜೆ 5-00 ಗಂಟೆಗೆ ಉಡುಪಿ ಸಿದ್ಧಾಪುರದ ಯಕ್ಷರಾಘವ ಜನ್ಸಾಲೆ ಪ್ರತಿಷ್ಠಾನ (ರಿ.) ಇವರಿಂದ ದಿ. ಕಾಳಿಂಗ ನಾವುಡ ವಿರಚಿತ ‘ನಾಗಶ್ರೀ’ ಬಡಗುತಿಟ್ಟು ಯಕ್ಷಗಾನ ಬಯಲಾಟ ಮತ್ತು ರಾತ್ರಿ 9-00 ಗಂಟೆಗೆ ‘ಅಗ್ರಪೂಜೆ’ ತೆಂಕುತಿಟ್ಟು ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.
ಬೆಂಗಳೂರಿನ ಜಿಗಣಿ ಸಮೀಪದ ನಿಸರ್ಗ ಲೇ ಔಟ್ ನಲ್ಲಿರುವ ‘ಪುರಂದರ ಮಂಟಪ’ದಲ್ಲಿ ‘ಲಯಾಭಿನಯ ಕಲ್ಚುರಲ್ ಫೌಂಡೇಶನ್’ ನೃತ್ಯ ಸಂಸ್ಥೆಯ ನೃತ್ಯಗುರು ಡಾ. ಜಯಶ್ರೀ ರವಿ ಇವರ ಶಿಷ್ಯೆ ಉದಯೋನ್ಮುಖ ನೃತ್ಯ ಕಲಾವಿದೆ ಕುಮಾರಿ ಆರಾಧನಾ ಎಬಿತ್ ಇತ್ತೀಚೆಗೆ ತನ್ನ ‘ಗೆಜ್ಜೆಪೂಜೆ’ಯನ್ನು ವಿದ್ಯುಕ್ತವಾಗಿ ನೆರವೇರಿಸಿಕೊಂಡಳು. ಹತ್ತು ವರ್ಷದ ಬಾಲಪ್ರತಿಭೆ ತನ್ನ ವಯಸ್ಸಿಗೂ ಮೀರಿದ ಕಲಾನೈಪುಣ್ಯವನ್ನು ಪ್ರದರ್ಶಿಸಿ ಕಲಾರಸಿಕರ ಮೆಚ್ಚುಗೆ ಗಳಿಸಿದಳು. ನುರಿತ ನರ್ತಕಿಯಂತೆ ಆತ್ಮವಿಶ್ವಾಸದಿಂದ ಹೆಜ್ಜೆ ಹಾಕಿದ ಆರಾಧನಾ ಎಬಿತ್, ಅತ್ಯಂತ ಲವಲವಿಕೆಯಿಂದ ನಿರಾಯಾಸವಾಗಿ ನರ್ತಿಸಿದ್ದು ಅವಳ ನೃತ್ಯಪ್ರತಿಭೆಗೆ ಸಾಕ್ಷಿಯಾಯಿತು. ಕಲಾವಿದೆ ತನ್ನ ಭಾವಪುರಸ್ಸರ ಬೊಗಸೆ ಕಣ್ಣುಗಳ ಅಭಿವ್ಯಕ್ತಿಯಿಂದ, ಕೃತಿಯ ಅಭಿನಯಕ್ಕೆ ಪೂರಕವಾಗಿ ಭಾವಾಭಿನಯ ನೀಡುತ್ತಿದ್ದುದು ವಿಶೇಷವಾಗಿತ್ತು. ಮೂರ್ತಿ ಪುಟ್ಟದಾದರೂ ಕೀರ್ತಿ ದೊಡ್ಡದು ಎಂಬಂತೆ ಬಾಲ ಕಲಾವಿದೆ ಸೊಗಸಾದ ಸುಂದರ ಆಂಗಿಕಾಭಿನಯ, ತನ್ನ ಖಚಿತ ಅಡವು, ಹಸ್ತಮುದ್ರೆ ಮತ್ತು ಅಂಗಶುದ್ಧ ನರ್ತನದಿಂದ ಪ್ರೇಕ್ಷಕರನ್ನು ಸೆಳೆದಳು. ಸಾಂಪ್ರದಾಯಕ ‘ಪುಷ್ಪಾಂಜಲಿ’ಯಿಂದ ಕಲಾವಿದೆ ಪ್ರಸ್ತುತಿ ಆರಂಭಿಸಿದಳು. ರಂಗಾಕ್ರಮಣದಲ್ಲಿ ದೇವಾನುದೇವತೆಗಳಿಗೆ, ಗುರು-ಹಿರಿಯರಿಗೆ, ಭೂಮಾತೆಗೆ, ವಾದ್ಯಗೋಷ್ಠಿ ಮತ್ತು ಕಲಾರಸಿಕರಿಗೆ ನಮ್ರಭಾವದಿಂದ…
ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ರಥಬೀದಿ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ 114ನೇ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’ವು ದಿನಾಂಕ 09 ಸೆಪ್ಟೆಂಬರ್ 2025ರಂದು ಮಂಗಳೂರು ರಥಬೀದಿಯಲ್ಲಿರುವ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹಿರಿಯ ಉಪನ್ಯಾಸಕರಾದ ಶ್ರೀ ಶ್ರೀನಿವಾಸ ಕೆ.ಟಿ. ಅವರು “ಪ್ರಥಮ ಕನ್ನಡ ಪತ್ರಿಕೆ ಬಿಡುಗಡೆಯಾದದ್ದು ಮಂಗಳೂರಿನಲ್ಲಿ, ಅನೇಕ ಕವಿಗಳ ತವರೂರು ಮಂಗಳೂರು ಆದರೆ ಇತ್ತೀಚಿಗೆ ಸಾಹಿತ್ಯದ ಕಡೆಗೆ ಯುವ ಪೀಳಿಗೆಯ ಒಲವು ಕಡಿಮೆಯಾಗಿದ್ದು, ಬರೆಯುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕೆಂದು, ಸಾಹಿತ್ಯವನ್ನು ಸಮೃದ್ಧವಾಗಿ ಬೆಳೆಸಬೇಕು” ಎಂದರು. ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮೈ ಅಂತರಾತ್ಮ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ಸಂಸ್ಥಾಪಕರು ಹಾಗೂ ಅಂಕಣಕಾರರಾಗಿರುವ ಶ್ರೀ ವೇಣುಶರ್ಮ “ಆಧುನಿಕ ಯುಗದಲ್ಲಿ ತಂತ್ರಜ್ಞಾನದ ಬಳಕೆ ಅತಿ ಅಗತ್ಯ ಆದರೆ ನಾವು ಅವಶ್ಯಕತೆ ಇದ್ದಷ್ಟು ಬಳಸಬೇಕು. ಮೊಬೈಲ್ ಬಳಕೆಯಿಂದ ಅನೇಕ ಅನುಕೂಲಗಳಿವೆ ಆದರೆ…
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದಿ. ಟಿ. ಶ್ರೀನಿವಾಸ ಸ್ಮರಣಾರ್ಥ ‘ಪಿ.ಕೆ. ನಾರಾಯಣ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಹಿರಿಯ ಬರಹಗಾರ ಸಂಪಟೂರು ವಿಶ್ವನಾಥ್ ಮತ್ತು ಸಂಶೋಧಕ ಡಾ. ಶ್ರೀವತ್ಸ ಎಸ್. ವಟಿ ಆಯ್ಕೆಯಾಗಿದ್ದಾರೆ. ಬರಹಗಾರ್ತಿ ಡಾ. ವರದಾ ಶ್ರೀನಿವಾಸ್ ಈ ದತ್ತಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿದ್ದು, ಯಾವುದೇ ಮಹತ್ವದ ಪುರಸ್ಕಾರಗಳು ಬಾರದೆ ಎಲೆಮರೆಯ ಕಾಯಿಯಂತೆ ಸೇವೆ ಸಲ್ಲಿಸುವ ಸಾಧಕರಿಗೆ ಈ ಪುರಸ್ಕಾರವನ್ನು ನೀಡಲಾಗುತ್ತದೆ. 2024ನೆಯ ಸಾಲಿನಲ್ಲಿ ಈ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಹಿರಿಯ ಬರಹಗಾರ ಬೆಂಗಳೂರಿನ ಸಂಪಟೂರು ವಿಶ್ವನಾಥ್ 1966ರಿಂದಲೂ ನಿರಂತರವಾಗಿ ಅರವತ್ತು ವರ್ಷಗಳಿಂದ ಕನ್ನಡದ ಎಲ್ಲಾ ಪ್ರಮುಖ ಪತ್ರಿಕೆಗಳಲ್ಲಿಯೂ ಐದು ಸಾವಿರಕ್ಕೂ ಹೆಚ್ಚು ಬರಹಗಳನ್ನು ಪ್ರಕಟಿಸಿದ್ದಾರೆ. ಶಿಕ್ಷಕರಾಗಿ 36 ವರ್ಷ ಮಹತ್ವದ ಸೇವೆ ಸಲ್ಲಿಸಿರುವ ಅವರು 1982 ಮತ್ತು 1995ರಲ್ಲಿ ಅತ್ಯುತ್ತಮ ಶಿಕ್ಷಕ ಗೌರವಕ್ಕೂ ಪಾತ್ರರಾಗಿದ್ದಾರೆ. ಇದುವರೆಗೂ 140ಕ್ಕೂ ಹೆಚ್ಚು ಕೃತಿಗಳು ವಿವಿಧ ಪ್ರಕಾರಗಳಲ್ಲಿ ಅಚ್ಚಾಗಿದ್ದು ರಸಪ್ರಶ್ನೆ, ಚಿತ್ರ ವಿಮರ್ಶೆಯಂತಹ ಕ್ಷೇತ್ರದಲ್ಲಿಯೂ ವಿಶಿಷ್ಟ ಕೊಡುಗೆ ನೀಡಿದ ಅವರು…
ಮಡಿಕೇರಿ : ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಕೊಡಗು ಜಾನಪದ ಪರಿಷತ್ ಸಹಯೋಗದಲ್ಲಿ 4ನೇ ವರ್ಷದ ಜಾನಪದ ದಸರಾವನ್ನು ದಿನಾಂಕ 29 ಸೆಪ್ಟೆಂಬರ್ 2025ರಂದು ಬೆಳಗ್ಗೆ 10-00 ಗಂಟೆಗೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಮತ್ತು ಜಾನಪದ ದಸರಾ ಸಂಚಾಲಕ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ. ಮಡಿಕೇರಿಯ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಜಾನಪದ ಕಲಾ ಪ್ರದರ್ಶನಗಳು ಆಯೋಜಿಸಲ್ಪಟ್ಟಿದ್ದು, ಇದೇ ಸಂದರ್ಭ ಜಾನಪದ ವಸ್ತು ಪ್ರದರ್ಶನ, ಕಲಾಜಾಥಾ ಕೂಡ ಜರುಗಲಿದೆ. ಜಾನಪದ ದಸರಾ ಸಂದರ್ಭ ಕೊಡಗಿನ ಜಾನಪದ ಕಲಾವಿದರಿಗೆ ವೈವಿಧ್ಯಮಯ ಕಲಾ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಕೊಡಗಿನ ಜಾನಪದ ಕಲಾತಂಡಗಳು, ಕಲಾವಿದರು ಜಾನಪದ ದಸರಾ ಸಂದರ್ಭ ನೀಡಲು ಇಚ್ಚಿಸುವ ಪ್ರದರ್ಶನದ ಬಗ್ಗೆ ತಮ್ಮ ಹೆಸರನ್ನು ದಿನಾಂಕ 20 ಸೆಪ್ಟೆಂಬರ್ 2025ರ ಒಳಗಾಗಿ ನೋಂದಾಯಿಸಿಕೊಳ್ಳಬಹುದಾಗಿದೆ. ಜಾನಪದ ದಸರಾದಲ್ಲಿ ಕಲಾ ಪ್ರದರ್ಶನ ನೀಡಲಿಚ್ಚಿಸುವ ಕಲಾವಿದರು, ಕಲಾತಂಡಗಳು ಅರ್ಜಿಗಳನ್ನು ಅಧ್ಯಕ್ಷರು, ಕೊಡಗು ಜಾನಪದ ಪರಿಷತ್, ಕೇರಾಫ್ ಶಕ್ತಿ ದಿನಪತ್ರಿಕೆ, ಕೈಗಾರಿಕಾ…
ಮಂಗಳೂರು : ರಾಮಕೃಷ್ಣ ಮಿಷನ್ ಮಂಗಳೂರು ಇದರ ಅಮೃತ ವರ್ಷಾಚರಣೆಯನ್ನು ದಿನಾಂಕ 11, 12, 13 ಮತ್ತು 14 ಸೆಪ್ಟೆಂಬರ್ 2025ರಂದು ಮಂಗಳೂರಿನ ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ದಿನಾಂಕ 11, 12 ಮತ್ತು 13 ಸೆಪ್ಟೆಂಬರ್ 2025ರಂದು ಪ್ರತಿದಿನ ಬೆಳಗ್ಗೆ 9-00 ಗಂಟೆಗೆ ಶ್ರಾದ್ಧ, ಮೇಧಾ ಮತ್ತು ಪ್ರಜ್ಞಾ ವಿಚಾರ ಸಂಕಿರಣಗಳನ್ನು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದೆ. ದಿನಾಂಕ 14 ಸೆಪ್ಟೆಂಬರ್ 2025ರಂದು 10-00 ಗಂಟೆಗೆ ಅಮೃತ ಭವನ ಹಾಲ್ ನ ಉದ್ಘಾಟನಾ ಸಮಾರಂಭ ನಡೆಯಲಿದೆ. ಮಧ್ಯಾಹ್ನ 2-00 ಗಂಟೆಗೆ ‘ಸಂತವಾಣಿ’ ಪಂಡಿತ್ ಆನಂದ ಭಾಟೆ ಇವರಿಂದ ಪ್ರಸ್ತುತಗೊಳ್ಳಲಿದ್ದು, ನರೇಂದ್ರ ನಾಯಕ್ ಹಾರ್ಮೋನಿಯಂನಲ್ಲಿ, ಗುರುಮೂರ್ತಿ ವೈದ್ಯ ಪಖವಾಜ್ ನಲ್ಲಿ, ರೂಪಕ್ ವೈದ್ಯ ತಬಲಾದಲ್ಲಿ ಮತ್ತು ವಿಘ್ನೇಶ್ ನಾಯಕ್ ಮಂಜೂರದಲ್ಲಿ ಸಾಥ್ ನೀಡಲಿದ್ದಾರೆ.
ಉತ್ತರ ಕನ್ನಡ: ಸಂಸ್ಕಾರ ಭಾರತಿ ಉತ್ತರ ಕನ್ನಡ ಆಯೋಜಿಸುವ ಚಿತ್ರಕಲೆ ಹಾಗೂ ರಂಗೋಲಿ ಶಿಬಿರ, ರಾಜ್ಯ ಮಟ್ಟದ ವಿಶೇಷ ಕಲಾವಿದರದ ಪ್ರಾತ್ಯಕ್ಷಿಕೆ ಕಾರ್ಯಕ್ರಮವು ದಿನಾಂಕ 10 ಸೆಪ್ಟೆಂಬರ್ 2025ರ ಬುಧವಾರದಂದು ಗೋಕರ್ಣದ ಓಂ ಬೀಟ್ ರಸ್ತೆಯಲ್ಲಿರುವ ವೀರಶೈವ ಸಮುದಾಯ ಭವನ ಯಾತ್ರಿ ನಿವಾಸದಲ್ಲಿ ನಡೆಯಲಿದೆ. ಪ್ರಸಿದ್ಧ ಯಕಗಾನ ಕಲಾವಿದರು ಹಾಗೂ ಸಂಸ್ಕಾರ ಭಾರತಿ ಉತ್ತರ ಪ್ರಾಂತದ ಉಪಾಧ್ಯಕ್ಷರಾದ ಶ್ರೀ ಶಿವಾನಂದ ಹೆಗಡೆ ಕೆರೆಮನೆ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಪ್ರಸಿದ್ಧ ತಬಲಾ ವಾದಕರಾದ ಶ್ರೀ ಸಂಜೀವ ಪೋತದಾರ ಹಾಗೂ ಡಾ. ಮಲ್ಲಿಕಾರ್ಜುನ ಮನ್ಸೂರ ರಾಷ್ಟ್ರೀಯ ಯುವ ಪುರಸ್ಕಾರ ಪುರಸ್ಕೃತ ಪ್ರಸಿದ್ಧ ಹಿಂದೂಸ್ತಾನಿ ಗಾಯಕರಾದ ಶ್ರೀ ವಿನಾಯಕ ಮುತ್ಮುರ್ಡು ಇವರನು ಸನ್ಮಾನಿಸಲಾಗುವುದು. ಶಿಬಿರದಲ್ಲಿ ಭಾಗವಹಿಸಲು ಇಚ್ಛಿಸುವವರು +91 72041 50918 / 9945152815 ಈ ಸಂಖ್ಯೆಗೆ ಕರೆ ಮಾಡಿ ಹೆಸರು ನೋಂದಾಯಿಸಬಹುದು. ಮೊದಲು ಹೆಸರು ನೋಂದಾಯಿಸಿದವರಿಗೆ ಮೊದಲ ಆದ್ಯತೆ. ಮಧ್ಯಾಹ್ನದ ಭೋಜನ ವ್ಯವಸ್ಥೆ ಹಾಗೂ ಕಾರ್ಯಕ್ರಮ ಮುಗಿದ ಸಂತರ ಪಾನೀಯ ವ್ಯವಸ್ಥೆ…
ಉಡುಪಿ : ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಗುಲ್ವಾಡಿ ಟಾಕೀಸ್, ಡಾ. ಜಿ. ಶಂಕರ್ ಮಹಿಳಾ ಪ್ರಥಮದರ್ಜೆ ಕಾಲೇಜು ಉಡುಪಿ, ಉಸಿರು ಅಧ್ಯಯನ ತರಬೇತಿ ಕೇಂದ್ರ ಕೋಟ ಇದರ ಸಂಯುಕ್ತ ಆಶ್ರಯದಲ್ಲಿ ಗುಲ್ವಾಡಿ ವೆಂಕಟರಾವ್ರವರ ಕನ್ನಡದ ಮೊದಲ ಸಾಮಾಜಿಕ ಕಾದಂಬರಿ ಇಂದಿರಾಬಾಯಿ ಕೃತಿಯಲ್ಲಿನ ಮಹಿಳಾ ಸಾಮಾಜಿಕ ಸ್ಥಿತ್ಯಂತರಗಳು ವಿಚಾರಗೋಷ್ಠಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ದಿನಾಂಕ 13 ಸೆಪ್ಟೆಂಬರ್ 2025ರಂದು ಉಡುಪಿಯ ಪುರಭವನದಲ್ಲಿ ಬೆಳಿಗ್ಗೆ ಘಂಟೆ 9.30ರಿಂದ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ಶ್ರೀ ನೀಲಾವರ ಸುರೇಂದ್ರ ಅಡಿಗ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಇದರ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಹಿರಿಯ ಪೋಲೀಸ್ ಅಧಿಕಾರಿಗಳು, ಕವಿ, ಲೇಖಕಿ, ಅಂಕಣಕಾರರಾದ ಮತಿ ಧರಣಿದೇವಿ ಮಾಲಗತ್ತಿ ಇವರಿಗೆ ಗುಲ್ವಾಡಿ ವೆಂಕಟರಾವ್ ಪ್ರಶಸ್ತಿ ಹಾಗೂ ಕರ್ನಾಟಕ ಸರಕಾರದ ವಾಣಿಜ್ಯ ತೆರಿಗೆಗಳ ಉಪ ಆಯುಕ್ತರು…
ತೆಕ್ಕಟ್ಟೆ: ಶ್ರೀ ಕೈಲಾಸ ಕಲಾಕ್ಷೇತ್ರ ಟ್ರಸ್ಟ್ ತೆಕ್ಕಟ್ಟೆ ಆಶ್ರಯದಲ್ಲಿ ಮಹಮದ್ ಗೌಸ್ ಸಾರಥ್ಯದ ಯಕ್ಷ ಸೌರಭ ಪ್ರವಾಸಿ ಯಕ್ಷಗಾನ ಮೇಳ ಕುಂದಾಪುರ ತಂಡದ ಯಕ್ಷಗಾನ ಪ್ರದರ್ಶನ ದಿನಾಂಕ 02 ಸೆಪ್ಟೆಂಬರ್ 2025ರಂದು ತೆಕ್ಕಟ್ಟೆಯ ಹಯಗ್ರೀವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಶ್ರೀ ಕೈಲಾಸ ಕಲಾಕ್ಷೇತ್ರದ ಅಧ್ಯಕ್ಷರಾದ ಹೆರಿಯ ಮಾಸ್ಟರ್ ಮಾತನಾಡಿ “ನಿರಂತರ ಹಲವು ವರ್ಷಗಳಿಂದ ಜಾತಿ, ಧರ್ಮ, ಬೇಧ ತೊರೆದು ಕೇವಲ ಕಲೆಯನ್ನೇ ಆರಾಧಿಸುತ್ತಾ, ಮಳೆಗಾಲದಲ್ಲಿ ಕಲಾವಿದರಿಗೆ ನೂರಾರು ಅವಕಾಶಗಳನ್ನು ಕಲ್ಪಿಸಿಕೊಡುತ್ತಾ ಶ್ರೇಷ್ಠರಾದವರು ಮಹಮದ್ ಗೌಸ್. ಅನೇಕ ನಿಂದನೆಗಳನ್ನು ಸಹಿಸಿಕೊಳ್ಳುತ್ತಾ ಮತ್ತೆ ಮತ್ತೆ ಎಚ್ಚೆತ್ತು ಕಲಾವಿದರಿಗಾಗಿ ವಂತಿಗೆ ಎತ್ತುತ್ತಾ ತನ್ನಲ್ಲಿರುವ ಕಲೆಯ ತುಡಿತವನ್ನು ಎತ್ತಿಹಿಡಿದವರು. ಇವರು ತನಗಾಗಿ ಏನೂ ಮಾಡಿಕೊಂಡಿರದ ಕಲಾ ತಪಸ್ವಿ” ಎಂದು ಪ್ರಶಂಸನೀಯ ಮಾತುಗಳನ್ನಾಡಿದರು. ಪ್ರಸಿದ್ಧ ಯಕ್ಷಗಾನದ ಅರ್ಥಧಾರಿ ಸತೀಶ್ ಶೆಟ್ಟಿ ಮೂಡಬಗೆ ಮಾತನಾಡಿ “ಪ್ರಸಂಗದಲ್ಲಿ ಹೆಚ್ಚು ಪಾತ್ರವನ್ನು ರಂಗದಲ್ಲಿ ತಂದು ಕಥೆಯ ಔಚಿತ್ಯವನ್ನು ಜನರಿಗೆ ಮನಮುಟ್ಟುವಂತೆ ಮಾಡುವ ಮೂಲಕ ಸಂಸ್ಥೆಯನ್ನು ಬೆಳೆಸಿದವರು ಗೌಸ್. ವ್ಯವಹಾರದ ದೃಷ್ಠಿಯಿಂದಲೇ ಈ…