Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಖ್ಯಾತ ಯಕ್ಷಗಾನ ಕಲಾವಿದ, ಪ್ರಸಂಗಕರ್ತ ಹಾಗೂ ಹವ್ಯಾಸಿ ಪತ್ರಕರ್ತರಾದ ತಾರಾನಾಥ ವರ್ಕಾಡಿ ಮಂಡಿಸಿದ ‘ಕರಾವಳಿ ಕರ್ನಾಟಕದ ಯಕ್ಷಗಾನ ವೃತ್ತಿ ರಂಗಭೂಮಿಯ ಬಹುಮುಖಿ ಅಧ್ಯಯನ’ ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಡಿ. ಲಿಟ್ ಪದವಿ ನೀಡಿದೆ. ಇದು ವೃತ್ತಿಪರ ಯಕ್ಷಗಾನ ಕಲಾವಿದರ ಸಾಧನೆ ಎಂಬುದು ಗಮನಾರ್ಹ. ಕಟೀಲು, ಧರ್ಮಸ್ಥಳ ಮೊದಲಾದ ಮೇಳಗಳಲ್ಲಿ ಸುಮಾರು 4ದಶಕಗಳ ಕಾಲ ತಿರುಗಾಟ ನಡೆಸಿದ ವರ್ಕಾಡಿಯವರು ಯಕ್ಷಗಾನ ವೇಷಧಾರಿ ಹಾಗೂ ತಾಳಮದ್ದಳೆ ಅರ್ಥದಾರಿಯಾಗಿ ಜನಮನ್ನಣೆ ಪಡೆದ ಕಲಾವಿದ. ಕನ್ನಡ ಹಾಗೂ ತುಳುವಿನಲ್ಲಿ ಅನೇಕ ‘ಯಕ್ಷಗಾನ ಪ್ರಸಂಗ ರಚಿಸಿರುವ ಇವರು ಆಯುರ್ವೇದ, ಜ್ಯೋತಿಷ್ಯ, ವಾಸ್ತುತಜ್ಞರಾಗಿಯೂ ಪರಿಚಿತರು. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿದ್ದ ಅವರ ಬಹುಮುಖ ಚಟುವಟಿಕೆಗಳಿಗಾಗಿ ಅನೇಕ ಸಂಘ- ಸಂಸ್ಥೆಗಳು ಅವರನ್ನು ಗೌರವಿಸಿವೆ.
ಮಂಗಳೂರು : 2025ನೇ ಸಾಲಿನ ಡಾ ಪಿ. ದಯಾನಂದ ಪೈ ವಿಶ್ವ ಕೊಂಕಣಿ ರಂಗ ಶ್ರೇಷ್ಠ ಪುರಸ್ಕಾರಕ್ಕೆ ಗುಲ್ವಾಡಿ ರಾಮದಾಸ ದತ್ತಾತ್ರೇಯ ಭಟ್ ಹಾಗೂ 2025ನೇ ಸಾಲಿನ ಡಾ ಪಿ. ದಯಾನಂದ ಪೈ ಭಾಷಾನುವಾದ ಪುರಸ್ಕಾರಕ್ಕೆ ಡಾ. ಗೀತಾ ಶೆಣೈ ಇವರು ಆಯ್ಕೆಯಾಗಿರುತ್ತಾರೆ. ಗುಲ್ವಾಡಿ ರಾಮದಾಸ ದತ್ತಾತ್ರೇಯ ಭಟ್ : ಎಳವೆಯಿಂದಲೆ ನಾಟಕಕ್ಷೇತ್ರಕ್ಕೆ ಆಕರ್ಷಿತರಾದ ಶ್ರೀ ಗುಲ್ವಾಡಿಯವರು ತಮ್ಮ ನಿರಂತರ ಎಂಟು ದಶಕಗಳ ಸುದೀರ್ಘ ಹವ್ಯಾಸಿ ರಂಗಕಲಾ ಬದುಕಿನಲ್ಲಿ ಸಾಂಪ್ರದಾಯಿಕ, ವಿಶೇಷವಾಗಿ ಪೌರಾಣಿಕ ನಾಟಕಗಳ (ಪ್ರಚಂಡ ಪರಶು, ಆತ್ಮಲಿಂಗ, ಸಂತ ಜ್ಞಾನೇಶ್ವರ, ತುಲಸಿ ಜಲಂದರ) ವರ್ಣಾಲಂಕಾರ, ಧ್ವನಿ ಬೆಳಕಿನಿಂದ ಹಿಡಿದು ಸ್ವಂತ ನಾಟಕ ರಚನೆ, ಅಭಿನಯ, ನಿರ್ದೇಶನ ಸಾಮರ್ಥ್ಯಗಳೊಂದಿಗೆ ಮಂಗಳೂರಿಂದ ಮುಂಬೈ ನಗರದವರೆಗೂ ಹೆಸರು ಗಳಿಸಿದ್ದಾರೆ. ಸದ್ಯ ಗೋವಾದಲ್ಲಿ ನೆಲೆಸಿರುವ ಇವರ ಎಲೆಮರೆಯ ಪ್ರತಿಭೆಯನ್ನು ವಿಶ್ವ ಕೊಂಕಣಿ ಕೇಂದ್ರವು ಗುರುತಿಸಿ ಗೌರವಿಸಿದೆ. ಡಾ ಗೀತಾ ಶೆಣೈ : ಡಾ. ಗೀತಾ ಶೆಣೈಯವರು ವಚನ ಸಾಹಿತ್ಯ, ಕನಕದಾಸರ ಸಮಗ್ರ ಸಾಹಿತ್ಯ, ಕುವೆಂಪು ಸಾಹಿತ್ಯ…
ಮಂಗಳೂರು : ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತು ರಿ. ಮಂಗಳೂರು, ಸಂಸ್ಕಾರ ಭಾರತಿ ಮಂಗಳೂರು ಹಾಗೂ ವಿಶ್ವಕರ್ಮ ಕಲಾ ಪರಿಷತ್ತು (ರಿ.) ಮಂಗಳೂರು ಸಂಯುಕ್ತವಾಗಿ ಆಯೋಜಿಸಿದ ಕೀರ್ತಿಶೇಷ ನೃತ್ಯಗುರು ಕರ್ನಾಟಕ ಕಲಾಶ್ರೀ ಕೆ. ಕಮಲಾಕ್ಷ ಆಚಾರ್ಯರ ‘ಶ್ರದ್ಧಾನಮನ’ ಸಭೆಯು ದಿನಾಂಕ 25 ಜನವರಿ 2025ರಂದು ಮಂಗಳೂರಿನ ಶರವು ಶ್ರೀ ಮಹಾಗಣಪತಿ ದೇವಳದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀಯುತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಮೈಸೂರಿನ ನೃತ್ಯ ವಿದ್ವಾಂಸರಾದ ಪ್ರೊ. ರಾಮಮೂರ್ತಿ ರಾವ್ ಮಾತನಾಡಿ “ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತು (ರಿ.) ಮಂಗಳೂರು ಇದರ ಸ್ಥಾಪಕಾಧ್ಯಕ್ಷರಾಗಿದ್ದು, ಭರತನಾಟ್ಯ ಶಿಕ್ಷಕರ ಸಂಘಟನೆಯನ್ನು ಬಲಪಡೆಸಿದವರು ಕೀರ್ತಿಶೇಷ ವಿದ್ವಾನ್ ಕಮಲಾಕ್ಷ ಆಚಾರ್ಯರು. ಮಂದಸ್ಮಿತವದನರಾಗಿದ್ದ ಇವರದು ನೇರವಾದ ಮೃದು ನುಡಿಯಿಂದ ಕೂಡಿದ ಶಿಸ್ತು ಬದ್ಧ ಬದುಕು. ಸದಾ ಭರತನಾಟ್ಯ ಕಲಾವಿದರು ಒಗ್ಗಟ್ಟಾಗಿದ್ದು ಅಧ್ಯಯನಶೀಲರಾಗಿ ಮುಂದುವರಿಯಬೇಕೆಂಬ ಮನಸ್ಸಿನಿಂದಲೇ ಕರ್ತವ್ಯ ನಿರ್ವಹಿಸಿದ ಪ್ರಾಮಾಣಿಕ” ಎಂದರು. ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತಿನ ಅಧ್ಯಕ್ಷರಾದ ಯು.ಕೆ. ಪ್ರವೀಣ್ ಮಾತನಾಡಿ “ಇತ್ತೀಚೆಗೆ ಅಗಲಿದ ಹೆಸರಾಂತ ಗುರು ಕಮಲಾಕ್ಷ…
ಬೆಂಗಳೂರು : ತೊ. ನಂಜುಂಡಸ್ವಾಮಿ ಗೆಳೆಯರ ಬಳಗ ಇದರ ವತಿಯಿಂದ ತೊ. ನಂಜುಂಡಸ್ವಾಮಿ ನೆನೆಪಿನ ಪ್ರಶಸ್ತಿ ಪ್ರದಾನ ಸಮಾರಂಭ 2025’ವನ್ನು ದಿನಾಂಕ 10 ಫೆಬ್ರವರಿ 2025ರಂದು ಸಂಜೆ 5-30 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ಹಮ್ಮಿಕೊಳ್ಳಲಾಗಿದೆ. ರಂಗ ಸಂಘಟಕರು, ರಂಗ ನಿರ್ದೇಶಕರು ಸಮಾಜ ಸೇವಕರಾದ ಶ್ರೀ ಪ್ರಭು ಗುರಪ್ಪನವರ ಇವರಿಗೆ ಮೂರನೇ ವರುಷದ ತೊ. ನಂಜುಂಡಸ್ವಾಮಿ ನೆನೆಪಿನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಕೆ.ವಿ. ನಾಗರಾಜ ಮೂರ್ತಿಯವರು ವಹಿಸಲಿರುವರು. ಆನಂದ್ ಮಾಲೂರು ಮತ್ತು ತಂಡದವರಿಂದ ಅಂಬೇಡ್ಕರ್ ಹಾಗೂ ಸಂವಿಧಾನ ಗಾಯನ ಕಾರ್ಯಕ್ರಮ ಮತ್ತು ಲಹರಿ ಭಾರೀಘಾಟ್ ಇವರ ಪರಿಕಲ್ಪನೆ ಮತ್ತು ವಿನ್ಯಾಸದಲ್ಲಿ ಸಹಚಾರಿ ತಂಡದವರಿಂದ ‘ಶಾಂತಿ ಮತ್ತು ಪ್ರೀತಿಗಾಗಿ’ ಭರತನಾಟ್ಯ ಪ್ರಸ್ತುತಗೊಳ್ಳಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಕೃಷ್ಣ ಭಟ್ ಮತ್ತು ಗಂಗಮ್ಮ ದಂಪತಿಗಳ ಸುಪುತ್ರಿಯಾಗಿರುವ ಕೆ. ಜಯಲಕ್ಷ್ಮೀ ಕುಮಾರ್ ಇವರು ಎಂ.ಎ. ಬಿ.ಇಡಿ. ಪದವೀಧರರಾಗಿದ್ದಾರೆ. ಪ್ರಸ್ತುತ ಮಡಿಕೇರಿಯ ಸಂತ ಜೋಸೆಫರ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಹಾಡುಗಾರಿಕೆ, ಲೇಖನ, ಕಥೆ, ಕವನ, ನಾಟಕ ಇತ್ಯಾದಿಗಳನ್ನು ಬರೆಯುವುದು ಇವರ ಹವ್ಯಾಸ. ಕಾರ್ಯಕ್ರಮ ನಿರೂಪಣೆ, ಭಾಷಣ ಕಲೆಗಾರಿಕೆಯನ್ನೂ ಮೈಗೂಡಿಸಿಕೊಂಡಿದ್ದಾರೆ. ಇವರು ಬರೆದ ‘ಯಾರು ಹಿತವರು ನಿನಗೆ’ ನಾಟಕ ಹಲವು ವೇದಿಕೆಗಳಲ್ಲಿ ಪ್ರದರ್ಶನಗೊಂಡಿದೆ. ‘ನೆನಪುಗಳ ಸುಳಿಯಲ್ಲಿ’ ನಾಟಕವನ್ನು ಪ್ರಾಥಮಿಕ ಶಾಲಾ ಶಿಕ್ಷಕರು ಹಲವಾರು ವೇದಿಕೆಗಳಲ್ಲಿ ಅಭಿನಯಿಸಿರುತ್ತಾರೆ. ಮಡಿಕೇರಿ ಆಕಾಶವಾಣಿಯಲ್ಲಿ ಕ್ಯಾಶುವಲ್ ಅನೌನ್ಸರ್ ಆಗಿ ಕೆಲಸ ಮಾಡಿದ್ದಾರೆ. ಭಾವಯಾನ ಸರಣಿ ಕಾರ್ಯಕ್ರಮದ ಜೊತೆಗೆ ಚಿಂತನೆಗಳು, ಸಂದರ್ಶನಗಳು, ಮಹಿಳಾ ಲೋಕದಲ್ಲಿ ಕಥೆ. ಕವನ, ವೈಚಾರಿಕ ಪ್ರಬಂಧಗಳು ಭಿತ್ತರಗೊಂಡಿವೆ. ಇವರು ಬರೆದು ರಾಗ ಸಂಯೋಜನೆ ಮಾಡಿರುವ ಮೂರು ಹಾಡುಗಳು ದ್ವನಿ ಸುರುಳಿಯಲ್ಲಿ ಮೂಡಿ ಬಂದಿದೆ. ತಮ್ಮ ‘ಪ್ರಜ್ಞಾ ಕಲಾ ಕೇಂದ್ರ’ ಎಂಬ ಸಾಂಸ್ಕೃತಿಕ ಸಂಸ್ಥೆಯ ಮೂಲಕ…
ಮಂಗಳೂರು : ಶ್ರೀ ಸುಧೀಂದ್ರತೀರ್ಥ ಸ್ವಾಮೀಜಿಯವರ ಜನ್ಮ ಶತಾಬ್ಧಿ ಆರಾಧನಾ ಮಹೋತ್ಸವದ ಅಂಗವಾಗಿ ಶತನಮನ ಶತಸ್ಮರಣ ಕಾರ್ಯಕ್ರಮವು ಕಾರ್ ಸ್ಟ್ರೀಟ್ ವೆಂಕಟರಮಣ ದೇವಸ್ಥಾನದಲ್ಲಿ ದಿನಾಂಕ 26 ಜನವರಿ 2025ರಿಂದ 30 ಜನವರಿ 2025ರವರೆಗೆ ಆಯೋಜಿಸಲಾಗಿದೆ. ಗುರುಸ್ಮರಣೆಯ ಹಿನ್ನೆಲೆಯಲ್ಲಿ ನಾನಾ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ದಿನಾಂಕ 26 ಜನವರಿ 2025ರಂದು ಸಂಜೆ 6-00 ಗಂಟೆಗೆ ಜಿ.ಎಸ್.ಬಿ. ಸಮಾಜದ 100 ಗಾಯಕರು ಏಕಕಾಲದಲ್ಲಿ ದೇವಸ್ಥಾನದ ಮುಂಭಾಗದಲ್ಲಿ ಹಾಕಿರುವ ಭವ್ಯ ವೇದಿಕೆಯಲ್ಲಿ ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿ ‘ಶತನಮನ –ಶತಸ್ಮರಣ’ ಎಂಬ ಗಾಯನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಈ ಗಾಯನ ಕಾರ್ಯಕ್ರಮದಲ್ಲಿ ಸುಮಾರು ಎರಡು ಗಂಟೆಗಳ ಕಾಲ ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಕುರಿತು ರಚಿಸಿರುವ ಗೀತೆಗಳನ್ನು 100 ಕಲಾವಿದರು ಭಕ್ತಿ ಭಾವ ಪೂರ್ವಕವಾಗಿ ಏಕಕಾಲದಲ್ಲಿ ಹಾಡಲಿದ್ದಾರೆ. ದಿನಾಂಕ 27 ಜನವರಿ 2025ರಂದು ಸಂಜೆ 6-00ರಿಂದ ಪ್ರತಿಭಾನ್ವಿತ ಯುವ ಗಾಯಕಿ ಸೂರ್ಯಗಾಯತ್ರಿ ಮತ್ತು ತಂಡದವರಿಂದ ಭಕ್ತಿ ಗೀತೆಗಳ ಕಾರ್ಯಕ್ರಮ ನಡೆಯಲಿದೆ. ದಿನಾಂಕ 28 ಜನವರಿ 2025ರಂದು…
ಮಂಗಳೂರು : ನೃತ್ಯಗಾರರು ತಮ್ಮ ಪ್ರದರ್ಶನ ಆರಂಭಿಸುವ ಮುನ್ನ ದೇವತೆ, ಕಲೆ ಮತ್ತು ಗುರುಗಳಿಗೆ ಗೌರವವನ್ನು ಸಲ್ಲಿಸುವ ‘ಹೆಜ್ಜೆ ಪೂಜೆ’ ಒಂದು ಪವಿತ್ರ ಆಚರಣೆ. ಸಂಸ್ಕೃತಿಯ ಬಲವಾದ ಆಧಾರವನ್ನು ಅಕಾಡೆಮಿಕ್ ಶ್ರೇಷ್ಠತೆಯ ಜೊತೆಗೆ ಬೆಳೆಸುವ ನಿಟ್ಟಿನಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಚಾನ್ಸೆಲರ್ ಡಾ. ಎ. ರಾಘವೇಂದ್ರ ರಾವ್ ಇವರ ತೇಜಸ್ವಿ ದೃಷ್ಟಿಕೋನದಿಂದ ಪ್ರೇರಿತವಾದ ಈ ಕಾರ್ಯಕ್ರಮವು ದಿನಾಂಕ 24 ಜನವರಿ 2025ರಂದು ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯದ ಪ್ರೊ. ಚಾನ್ಸೆಲರ್ ಡಾ. ಎ. ಶ್ರೀನಿವಾಸ ರಾವ್ ಸಭೆಯನ್ನುದ್ದೇಶಿಸಿ “ಭರತನಾಟ್ಯವು ವಿಶ್ವದಾದ್ಯಂತ ಮೆಚ್ಚುಗೆ ಪಡೆದ ಕಲೆಯಾಗಿ, ಅದರ ಕಥನ ಕೌಶಲ್ಯ ಮತ್ತು ಆಳವಾದ ಭಾವನಾತ್ಮಕತೆಯಿಂದ ಪ್ರೇಕ್ಷಕರ ಹೃದಯವನ್ನು ಗೆಲ್ಲುತ್ತದೆ” ಎಂದು ಹೇಳಿದರು. ಮುಖ್ಯ ಅತಿಥಿ ಮತ್ತು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿ ಡಾ. ಮಿಶ್ರಾ ಅವರು “ಕಲೆ ಮತ್ತು ಸಾಹಿತ್ಯವು ಮಾನವ ಜೀವನವನ್ನು ರೂಪಿಸುವಲ್ಲಿ ಇರಬೇಕಾದ ಅವಿಭಾಜ್ಯ ಪಾತ್ರವನ್ನು ಮೆರೆಯಿಸಿದರು. ಕಲೆ ಮತ್ತು ಸಾಹಿತ್ಯವು ವ್ಯಕ್ತಿಗತ ಅಭಿವೃದ್ಧಿ, ಸಾಂಸ್ಕೃತಿಕ ಬೌದ್ಧಿಕತೆ ಮತ್ತು…
ಬೆಂಗಳೂರು : ಕನ್ನಡ ಸಂಶೋಧನ ಅಕಾಡೆಮಿ (ನೋಂ.) ಇದರ ವತಿಯಿಂದ ‘ಆವಿಷ್ಕಾರ’ ಕನ್ನಡ ಸಂಶೋಧನೆಯ ವಿಧಿ-ವಿಧಾನಗಳು ಮತ್ತು ಹೊಸ ಸಾಧ್ಯತೆಗಳು ಬೃಹತ್ ಮುಕ್ತ ಆನ್ ಲೈನ್ ಕೋರ್ಸ್ ಪ್ರಯುಕ್ತ ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮವನ್ನು ದಿನಾಂಕ 26 ಜನವರಿ 2025ರಂದು ಸಂಜೆ ಗಂಟೆ 5-45ಕ್ಕೆ ಆನ್ ಲೈನ್ ವೇದಿಕೆಯಲ್ಲಿ ಆಯೋಜಿಸಲಾಗಿದೆ. ‘ನಾಟಕ ಸಾಹಿತ್ಯದ ಸವಾಲುಗಳು ಮತ್ತು ಸಾಧ್ಯತೆಗಳು’ ಎಂಬ ವಿಷಯದ ಬಗ್ಗೆ ನಾಟಕಕಾರರು ಮತ್ತು ಸಹ ಪ್ರಾಧ್ಯಾಪಕರಾದ ಡಾ. ನಟರಾಜ ತಲಘಟ್ಟಪುರ ಮತ್ತು ‘ರಂಗಭೂಮಿ ಕ್ಷೇತ್ರದ ಸವಾಲುಗಳು ಮತ್ತು ಸಾಧ್ಯತೆಗಳು’ ಎಂಬ ವಿಷಯದ ಬಗ್ಗೆ ನಾಟಕಕಾರರು ಮತ್ತು ನಿವೃತ್ತ ಪ್ರಾಧ್ಯಾಪಕರಾದ ಡಾ. ನಾ. ದಾಮೋದರ ಶೆಟ್ಟಿ ಇವರುಗಳು ಉಪನ್ಯಾಸ ನೀಡಲಿದ್ದಾರೆ.
ಮಡಿಕೇರಿ : ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತ ನಿರ್ದೇಶಕಿ, ನಿರ್ಮಾಪಕಿ, ಲೇಖಕಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ಇವರು ಬರೆದಿರುವ ‘ಕೊಡವ ಮಕ್ಕಡ ಕೂಟ’ ಪ್ರಕಟಿಸಿರುವ ‘ಮುಖಾಮುಖಿ’ ಕನ್ನಡ ಪುಸ್ತಕವು ದಿನಾಂಕ 21 ಜನವರಿ 2025ರಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ಲೋಕಾರ್ಪಣೆಗೊಂಡಿತು. ಈ ಕಾರ್ಯಕ್ರಮದಲ್ಲಿ ಕೃತಿ ಬಿಡುಗಡೆಗೊಳಿಸಿದ ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ಮಾತನಾಡಿ “ಪ್ರಸ್ತುತ ದಿನಗಳಲ್ಲಿ ಮಹಿಳಾ ಲೇಖಕಿಯರು ತಮ್ಮ ಬರಹದ ಮೂಲಕ ಸಮಾಜದ ಕಣ್ಣನ್ನು ತೆರೆಸುವ ಪ್ರಯತ್ನ ಮಾಡುತ್ತಿದ್ದು, ಇದಕ್ಕೆ ಎಲ್ಲರ ಸಹಕಾರ ಅಗತ್ಯ. ಪುಸ್ತಕಗಳನ್ನು ಓದಿ ಹೆಚ್ಚು ಜ್ಞಾನಾರ್ಜನೆಯನ್ನು ಪಡೆದುಕೊಂಡರೆ ಉನ್ನತ ಸ್ಥಾನಕ್ಕೇರಲು ಸಾಧ್ಯವಿದೆ. ಆದ್ದರಿಂದ ಪ್ರತಿಯೊಬ್ಬರೂ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಪುಸ್ತಕಗಳು ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುತ್ತವೆ. ಸಾಹಿತ್ಯದಲ್ಲಿ ಅಡಗಿರುವ ಸಾರಾಂಶ ಮತ್ತು ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮುಖಾಮುಖಿ ಪುಸ್ತಕವು ಉತ್ತಮ ಸಂದೇಶವನ್ನು ಹೊಂದಿದ್ದು, ಲೇಖಕಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ಅವರು ಚಲನಚಿತ್ರಗಳ ಮೂಲಕ ರಾಷ್ಟ್ರಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದ್ದಾರೆ. ಇದೀಗ ಸಾಹಿತ್ಯ…
ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್, ಎಂ.ಜಿ.ಎಂ. ಕಾಲೇಜು ಹಾಗೂ ನಂದಳಿಕೆಯ ಮುದ್ದಣ ಪ್ರಕಾಶನದ ಸಹಯೋಗದಲ್ಲಿ ಮುದ್ದಣ 155ನೆಯ ಜನ್ಮದಿನಾಚರಣೆಯ ಪ್ರಯುಕ್ತ ತೆಕ್ಕುಂಜ ಗೋಪಾಲಕೃಷ್ಣ ಭಟ್ಟರ ಮುದ್ದಣ ಕವಿ ರಚಿತಂ ‘ಶ್ರೀರಾಮಾಶ್ವಮೇಧಂ’ ಹಾಗೂ ‘ನಂದಳಿಕೆ ಐಸಿರಿ ದರ್ಶನ’ ಕೃತಿಗಳ ಅನಾವರಣ ಕಾರ್ಯಕ್ರಮವು ದಿನಾಂಕ 24 ಜನವರಿ 2025ರಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ಆವರಣದಲ್ಲಿರುವ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಕೃತಿಗಳನ್ನು ಅನಾವರಣಗೊಳಿಸಿ ಮಾತನಾಡಿದ ಡಾ. ಬಿ.ಎ. ವಿವೇಕ ರೈ “ನಂದಳಿಕೆಯ ಕವಿ ಮುದ್ದಣ ಕನ್ನಡ ಸಾಹಿತ್ಯ ಸಂದರ್ಭದಲ್ಲಿ ಎಂದೂ ಮರೆಯಲಾಗದ ಕವಿ. ಬದುಕಿದ ಕಾಲ ಕಡಿಮೆಯಾದರೂ ಕನ್ನಡ ಸಾರಸ್ವತ ಲೋಕಕ್ಕೆ ಅವರ ಕೊಡುಗೆ ಅಪಾರ. ಕನ್ನಡ ಸಾಹಿತ್ಯಕ್ಕೆ ಹೊಸ ಮನ್ವಂತರವನ್ನೇ ಸೃಷ್ಟಿಸಿದ ಕವಿ ಮುದ್ದಣ. ಭಾಷೆ, ಸಾಹಿತ್ಯ ರಚನೆ, ಹೊಸ ಶೈಲಿ ಮುಂತಾದವುಗಳಲ್ಲಿ ಅವರ ಕೊಡುಗೆ ಅಪಾರ. ಭಾಷೆಯ ಸಂವಹನ ಶಕ್ತಿಗೆ, ಸಾಹಿತ್ಯದ ಹೊಸರೂಪಕ್ಕೆ ನಾಂದಿ ಹಾಡಿದವರಾಗಿರುವುದರಿಂದ ಅವರ…