Author: roovari

ಉಪ್ಪಿನಂಗಡಿ : ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಉಪ್ಪಿನಂಗಡಿ ಇದರ ಸುವರ್ಣ ಮಹೋತ್ಸವದ ಅಂಗವಾಗಿ ಉಪ್ಪಿನಂಗಡಿ ರಾಮನಗರದ ಶ್ರೀ ಶಾರದಾ ಕಲಾ ಮಂಟಪದಲ್ಲಿ ‘ಶ್ರೀ ಮಹಾಭಾರತ ಸರಣಿ ಸುವರ್ಣ ಶತಕ ತಾಳಮದ್ದಳೆ’ ಕಾರ್ಯಕ್ರಮದ ವೇದಿಕೆಯಲ್ಲಿ ದಿನಾಂಕ 07 ಸೆಪ್ಟೆಂಬರ್ 2025ರಂದು ಹರಿಹರ ಪಲ್ಲತಡ್ಕ ದಿ‌‌. ನೀಲಾವತಿ ಮತ್ತು ಪದ್ಮನಾಭ ಕೊಂಬೋಟು ದಂಪತಿಯ ಸಂಸ್ಮರಣಾ ಸಮಾರಂಭ ನಡೆಯಿತು. ಈ ಸಮಾರಂಭ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿಯವರು ಮಾತನಾಡಿ “ಸಮಾಜದ ಬೇರೆ ಬೇರೆ ರಂಗಗಳಲ್ಲಿ ತಮ್ಮಿಂದಾದ ಕೊಡುಗೆ ನೀಡಿ ಗತಿಸಿ ಹೋದ ಹಿರಿಯರನ್ನು ಎಂದಿಗೂ ಮರೆಯಲಾಗದು. ಕನಿಷ್ಠಪಕ್ಷ ಅವರ ಕುಟುಂಬದವರಿಗಾದರೂ ಅದು ನೆನಪಿರಬೇಕು. ಅದರಲ್ಲೂ ಯಕ್ಷಗಾನದಂತಹ ಶ್ರೇಷ್ಠ ಕಲೆಗಾಗಿ ಶ್ರಮಿಸಿದ ಸಾಧಕರಿಗೆ ಇಡೀ ಸಮಾಜವೇ ಒಂದು ಕುಟುಂಬ. ಅಂಥವರ ನೆನಪಿಂದ ಉಳಿದವರ ಬದುಕು ಸ್ಮರಣೀಯವಾಗುತ್ತದೆ; ಅದುವೇ ಮುಂದಿನವರಿಗೆ ಮಾದರಿಯಾಗಬಲ್ಲುದು” ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಹಿರಿಯ ಅರ್ಥಧಾರಿ ಗೋಪಾಲ…

Read More

ಬೆಂಗಳೂರು : ಶಾಂಡಿಲ್ಯಾ ಐ.ಎನ್.ಸಿ. ಪಸ್ತುತ ಪಡಿಸುವ ‘ಕನ್ನಡ ನಾಟಕೋತ್ಸವ’ ಸಮಾರಂಭವನ್ನು ದಿನಾಂಕ 13 ಸೆಪ್ಟೆಂಬರ್ 2025ರಂದು ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಆಯೋಜಿಸಲಾಗಿದೆ. ಸಂಜೆ 4-30 ಗಂಟೆಗೆ ಬೆಂಗಳೂರು ಥಿಯೇಟರ್ ಕಲೆಕ್ಟಿವ್ ಪ್ರಸ್ತುತ ಪಡಿಸುವ ಎ.ಆರ್. ಗರ್ನಿ ಅವರ ‘ಲವ್ ಲೆಟರ್ಸ್’ ನಿನ್ನ ಪ್ರೀತಿಯ ನಾನು! ನಾಟಕವು ಪ್ರದರ್ಶನಗೊಳ್ಳಲಿದೆ. ನಾಟಕದ ವಿನ್ಯಾಸ ಜಿ. ಜಯಂತ್ ಮತ್ತು ನಿಶಾಂತ್ ಗುರುಮೂರ್ತಿ ಅವರದ್ದು. ನಾಟಕದ ರೂಪಾಂತರ ಮತ್ತು ನಿರ್ದೇಶನ ವೆಂಕಟೇಶ್ ಪ್ರಸಾದ್ ಅವರದ್ದು. ಪ್ರಧಾನ ಭೂಮಿಕೆಯಲ್ಲಿ ರಂಗಭೂಮಿ, ಸಿನಿಮಾ ಕಲಾವಿದ ಕಿಶೋರ್ ಕುಮಾರ್ ಹಾಗೂ ನಿರೂಪಕಿ, ನಟಿ ಸಿರಿ ರವಿಕುಮಾ‌ರ್ ಅಭಿನಯಿಸಲಿದ್ದಾರೆ. ರಂಗಾಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊ. 72595 37777, 94804 68327 ಮತ್ತು 98455 95505 ಸಂಪರ್ಕಿಸಿರಿ.

Read More

ಉಡುಪಿ : ತಿಂಗಳೆ ಪ್ರತಿಷ್ಠಾನ ಮತ್ತು ಸಂಜೀವ ಶಿಷ್ಯ ವೃಂದ ಇದರ ವತಿಯಿಂದ ‘ಸಂಜೀವ ಯಕ್ಷ ಜೀವ-ಭಾವ’ ಸಮಾರಂಭವನ್ನು ದಿನಾಂಕ 12 ಸೆಪ್ಟೆಂಬರ್ 2025ರಂದು ಸಂಜೆ 3-00 ಗಂಟೆಗೆ ಉಡುಪಿ ಕುಂಜಿಬೆಟ್ಟುವಿನಲ್ಲಿರುವ ಯಕ್ಷಗಾನ ಕಲಾರಂಗ ಇನ್ಫೋಸಿಸ್ ಪ್ರತಿಷ್ಠಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭದ ಉದ್ಘಾಟನೆಯನ್ನು ಯಕ್ಷ ಸಂಘಟಕ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ ಇವರು ಮಾಡಲಿದ್ದು, ಡಾ. ಗಿರಿಜಾ ಇವರು ಅಧ್ಯಕ್ಷತೆ ವಹಿಸಲಿದ್ದು, ಉಡುಪಿ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ ರಾವ್ ಇವರು ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. 3-30 ಗಂಟೆಗೆ ಗುರು ಬನ್ನಂಜೆ ಸಂಜೀವ ಸುವರ್ಣ ಇವರಿಂದ ಪಾರಂಪರಿಕ ಯಕ್ಷಗಾನ ನೃತ್ಯ ಪ್ರದರ್ಶನ ನಡೆಯಲಿದೆ. ಕರ್ಣಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ತಲ್ಲೂರು ಶಿವರಾಮ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ‘ನಮ್ಮ ಸಂಜೀವ’ ಗೋಷ್ಠಿಗಳು ಪ್ರಸ್ತುತಗೊಳ್ಳಲಿವೆ. ಸಂಜೆ 5-00 ಗಂಟೆಗೆ ಮಾಜಿ ಲೋಕ ಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಇವರು ಅಭಿನಂದನಾ ಭಾಷಣ…

Read More

ಬೆಂಗಳೂರು : ಸಂಚಲನ ಮೈಸೂರು (ರಿ.) ಮೈಸೂರು ಮತ್ತು ಗಂಧರ್ವ ಸಾಂಸ್ಕೃತಿಕ ಕಲಾವೇದಿಕೆ (ರಿ.) ಇದರ ವತಿಯಿಂದ ಒಡನಾಡಿ ಬಂಧು ಸಿಜಿಕೆ – 75 ‘ಮಾಸದ ನೆನೆಪು ಸರಣಿ ಕಾರ್ಯಕ್ರಮ 03’ವನ್ನು ದಿನಾಂಕ 11 ಸೆಪ್ಟೆಂಬರ್ 2025ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಆಯೋಜಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಲವಂತ ರಾವ್ ಪಾಟೀಲ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಚಲನ ಮೈಸೂರು ರಂಗ ತಂಡ ಅಭಿನಯಿಸುವ ಡಾ. ಚಂದ್ರಶೇಖರ ಕಂಬಾರರ ‘ಹರಕೆಯ ಕುರಿ’ ನಾಟಕ ದೀಪಕ್ ಮೈಸೂರು ಇವರ ನಿರ್ದೇಶನದಲ್ಲಿ ಪ್ರದರ್ಶನಗೊಳ್ಳಲಿದೆ.

Read More

ಹೈದರಾಬಾದ್ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ವತಿಯಿಂದ ಹೈದರಾಬಾದ್ ಘಟಕದ ಉದ್ಘಾಟನಾ ಸಮಾರಂಭವನ್ನು ದಿನಾಂಕ 10 ಸೆಪ್ಟೆಂಬರ್ 2025ರಂದು ಸಂಜೆ 6-00 ಗಂಟೆಗೆ ಹೈದರಾಬಾದ್ ಬಾಗಲಿಂಗಂಪಳ್ಳಿಯ ಸುಂದರಯ್ಯ ಕಲಾನಿಲಯದಲ್ಲಿ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ಭಾಗವತ ಪಟ್ಲ ಸತೀಶ ಶೆಟ್ಟಿಯವರಿಗೆ ‘ಯಕ್ಷ ಕಾಮಧೇನು’ ಬಿರುದು ಪ್ರದಾನ ಮಾಡಲಾಗುವುದು.

Read More

ಕ್ಷೇತ್ರವೋ ಜೀವವೋ ಇಳೆಯ ಪಾವಿತ್ರ್ಯತೆಯ ಪ್ರಶ್ನೆ ಮ್ಲಾನವದನ ತಾಯಿಯ ಕಣ್ಣಹನಿ ತೆರೆದ ಕನ್ನಡಿಯಂತಿತ್ತು ಏಕೆ ತಾಯೇ ಖಿನ್ನಳಾದೆ ? ಮತ್ತೊಮ್ಮೆ ಪ್ರಶ್ನೆ ಮಾಡಿದೆ ! ಏನ ಹೇಳಲಿ ಮಗೂ,,,,, ಗದ್ಗದಿತ ಧ್ವನಿಗೆ ಹಕ್ಕಿಗಳೂ ಮೌನ ಎನ್ನೊಡಲ ಬಗೆದಿರುವೆಯಾ ಕಂದ ? ಮರು ಪ್ರಶ್ನೆಗೆ ಅವಾಕ್ಕಾದೆ ಹೇಗೆ ? ಪೊರೆವ ಒಡಲನು ಬಗೆವುದೇ ? ಪಾಪಿಷ್ಟನಾಗಲೊಲ್ಲೆ ! ಅಯ್ಯೋ ಮರುಳೇ ನೀ ಯಾವ ಲೋಕದವನು ? ಭವಿತವ್ಯದ ಕವಳ ಬರಿದಾಗಿದೆ ಯಾರದೋ ಪಾಲಾಗಿದೆ ಹಸಿರು ಕೆಂಪಾಗಿ ಕೆಸರು ಕಪ್ಪಾಗಿ ಬಸಿರೆಲ್ಲವೂ ಕಸದ ಕುಪ್ಪೆಗಳಾಗಿವೆ ಕಾಣದಾದೆಯಾ ? ಬಾನ ಚುಂಬಿಸುವ ಇಮಾರತು ಪಾತಾಳ ಕೂಪದ ಭಂಡಾರ ಕಾಣು ಬಂಡೆಗಳ ಧೂಳು ಹಸಿರೆಲೆಗಳ ಭಸ್ಮ ಮೇರು ಮಲೆಯ ಬಯಲಿನಲಿ ನರ್ತಿಸುವುದು ಜಲಜೆಯರಲ್ಲವೋ ದಾಯಾದಿ ಹಣದ ದಿಬ್ಬಣಗಳು ಕಾಣದಾದೆಯಾ ಮರುಳೇ ? ಹೊಸಿಲು ದಾಟಿ ಬಾ ಕಂದ ಉದರದಲಿ ಏನೆಲ್ಲಾ ಅಡಗಿದೆ ಛಿದ್ರ ದೇಹ ಸೀಳಿದ ಗರ್ಭ ಹೊಸಕಿದ, ಹೆಣ್ಣು ಭ್ರೂಣಗಳು ಅಕಾಲ ಮರ್ತ್ಯದ ರುದ್ರ ಲೋಕ…

Read More

ಪುತ್ತೂರು : ಗೆಜ್ಜೆಗಿರಿಯ ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಇದರ ವತಿಯಿಂದ ‘ಶ್ರೀ ದೇವಿ ಮಹಾತ್ಮೆ’ ಹಾಗೂ ‘ಕೋಟಿ ಚೆನ್ನಯ’ ಪ್ರಸಂಗವನ್ನು ಸಮರ್ಥವಾಗಿ ಪ್ರದರ್ಶಿಸಬಲ್ಲ ಸಮರ್ಥ್ಯದ ಮಾನದಂಡದಲ್ಲಿ ಕಟ್ಟಲ್ಪಟ್ಟ ನಮ್ಮ ಅಭಿಮಾನದ ಶ್ರೀ ಗೆಜ್ಜೆಗಿರಿ ಮೇಳವು ಮುಂದಿನ 2025-26ನೇ ಸಾಲಿನ ತಿರುಗಾಟದಲ್ಲಿ ಸೇವಾರ್ಥಿಗಳ ಇಚ್ಛಾನುಸಾರ, ಆಯ್ಕೆಯ ಯಾವುದೇ ಪೌರಾಣಿಕ ಹಾಗೂ ಐತಿಹಾಸಿಕ ಪ್ರಸಂಗಗಳನ್ನು ಕನ್ನಡ ಅಥವಾ ತುಳು ಭಾಷೆಗಳಲ್ಲಿ ಸಮರ್ಥವಾಗಿ ಪ್ರದರ್ಶನ ನೀಡಲಿದೆ. ನಮ್ಮ ಮೇಳದಲ್ಲಿ ಪ್ರದರ್ಶನಗೊಳ್ಳಲಿರುವ ನೂತನ ಪ್ರಸಂಗಗಳ ವಿವರ ಅತೀ ಶೀಘ್ರದಲ್ಲಿ ಪ್ರಕಟಿಸುವವರಿದ್ದು, ಯಕ್ಷಗಾನಭಿಮಾನಿಗಳಾದ ತಮ್ಮೆಲ್ಲರ ಸಂಪೂರ್ಣ ಸಹಕಾರವನ್ನು ಬಯಸುತ್ತೇವೆ.

Read More

ಬೆಂಗಳೂರು : ಯಕ್ಷಸಿಂಚನ ಟ್ರಸ್ಟ್‌ (ರಿ.) ಬೆಂಗಳೂರು ಇದರ ವತಿಯಿಂದ ಪ್ರತಿವರ್ಷ ಯಕ್ಷಗಾನ ಕ್ಷೇತ್ರದಲ್ಲಿ ಅಪರೂಪದ ಸೇವೆ ಸಲ್ಲಿಸಿದ ಮಹನೀಯರಿಗೆ ನೀಡುವ ‘ಸಾರ್ಥಕ ಸಾಧಕ’ ಪ್ರಶಸ್ತಿಯನ್ನು ಈ ಬಾರಿ ಯಕ್ಷಗಾನದಲ್ಲಿ ನಾಲ್ಕು ದಶಕಗಳ ವಿಶಿಷ್ಟ ಸೇವೆಗಾಗಿ ಚೇರ್ಕಾಡಿ ಮಂಜುನಾಥ ಪ್ರಭು ಇವರಿಗೆ ನೀಡಲು ನಿರ್ಧರಿಸಿದೆ. ದಿನಾಂಕ 21 ಸೆಪ್ಟೆಂಬರ್ 2025ರಂದು ಬೆಂಗಳೂರಿನ ಬಿ.ಪಿ. ವಾಡಿಯಾ ಸಭಾಂಗಣದಲ್ಲಿ ನಡೆಯುವ ಯಕ್ಷಸಿಂಚನದ 16ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಮಂಜುನಾಥ ಪ್ರಭು ಇವರು ತಮ್ಮ ಕಲಾಪಯಣವನ್ನು ಮಂದಾರ್ತಿ ಮೇಳದಲ್ಲಿ ಆರಂಭಿಸಿ, ಆರಂಭದ ದಿನಗಳಲ್ಲಿ ನಿತ್ಯವೇಷಗಳನ್ನು ಮಾಡುತ್ತಾ, ಸಹಾಯಕ ಮದ್ದಲೆಗಾರರಾಗಿಯೂ ಅನುಭವ ಪಡೆದರು. ಬಳಿಕ ಪೆರ್ಡೂರು, ಅಮೃತೇಶ್ವರಿ, ಸಾಲಿಗ್ರಾಮ, ಸುರತ್ಕಲ್ ಮೊದಲಾದ ಮೇಳಗಳಲ್ಲಿ ಮದ್ದಲೆವಾದಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದರು. ಇವರು ಅಗರಿ ಭಾಗವತರು, ಶೇಣಿ ಗೋಪಾಲಕೃಷ್ಣ ಭಟ್, ಕುಂಬಳೆ ಸುಂದರರಾಯರು, ತೆಕ್ಕಟ್ಟೆ ಆನಂದ ಮಾಸ್ತರ್, ಕೆರೆಮನೆ ಮಹಾಬಲ ಹೆಗಡೆ, ಕೆರೆಮನೆ ಶಂಭು ಹೆಗಡೆ, ಕೆರೆಮನೆ ಗಜಾನನ ಹೆಗಡೆ,…

Read More

ಮಡಿಕೇರಿ : ಮನೆ ಮನೆ ಕಾವ್ಯಗೋಷ್ಠಿ ಪರಿಷತ್ತು ವತಿಯಿಂದ ಮಡಿಕೇರಿಯ ಮೊಣ್ಣಂಡ ಶೋಭಾ ಸುಬ್ಬಯ್ಯ ಇವರ ಪ್ರಾಯೋಜಕತ್ವದಲ್ಲಿ ದಿನಾಂಕ 28 ಸೆಪ್ಟೆಂಬರ್ 2025ರ ಭಾನುವಾರದಂದು ಬೆಳಿಗ್ಗೆ 10-00 ಗಂಟೆಗೆ ಮಡಿಕೇರಿಯ ಶೋಭಾ ಸುಬ್ಬಯ್ಯನವರ ಮನೆಯಲ್ಲಿ ಕಾವ್ಯ ಕಮ್ಮಟ ಏರ್ಪಡಿಸಲಾಗಿದ್ದು, ಖ್ಯಾತ ಕವಿಗಳಾದ ಡಾ. ಜಯಪ್ಪ ಹೊನ್ನಾಳಿ ಇವರು ನಡೆಸಿಕೊಡಲಿದ್ದಾರೆ.‌ ಭಾಗವಹಿಸಲು ಇಚ್ಚೆ ಉಳ್ಳವರು 88614 05738 ವೈಲೇಶ ಪಿ.ಎಸ್. ಕೊಡಗು ಹಾಗೂ 94483 66715 ಮೊಣ್ಣಂಡ ಶೋಭಾ ಸುಬ್ಬಯ್ಯ ಇವರ ಬಳಿ ಹೆಸರು ನೋಂದಾಯಿಸಿಕೊಳ್ಳಲು ತಿಳಿಯಪಡಿಸುತ್ತೇವೆ. ಪ್ರವೇಶ ಶುಲ್ಕ ನೂರು ರೂಪಾಯಿಗಳನ್ನು ಶೋಭಾ ಸುಬ್ಬಯ್ಯನವರಿಗೆ ತಲುಪಿಸಬೇಕಾಗಿ ಕೋರಲಾಗಿದೆ. ಇಪ್ಪತ್ತು ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಹಿರಿಯ ಕವಿಗಳಾದ ಗಿರೀಶ್ ಎಸ್. ಕಿಗ್ಗಾಲು ಮತ್ತು ಕ.ಸಾ.ಪ.ದ ನಿಕಟಪೂರ್ವ ಅಧ್ಯಕ್ಷರಾದ ಬಿ.ಎಸ್. ಲೋಕೇಶ್ ಸಾಗರ್ ಭಾಗವಹಿಸಲಿದ್ದಾರೆ.

Read More

ತೆಕ್ಕಟ್ಟೆ : ತೆಕ್ಕಟ್ಟೆ ಮಹಾಲಿಂಗೇಶ್ವರ ದೇಗುಲದಲ್ಲಿ ದಿನಾಂಕ 06 ಸೆಪ್ಟೆಂಬರ್ 2025ರಂದು ಯಶಸ್ವೀ ಕಲಾವೃಂದದ ಸಹಕಾರದಲ್ಲಿ ದೇಗುಲದ ಸೋಣೆ ಆರತಿ ಕಾರ್ಯಕ್ರಮದಲ್ಲಿ ರಸರಂಗ (ರಿ.) ಕೋಟ ಪ್ರಸ್ತುತಿಯ ‘ಗಾಂಧಾರಿ’ ಯಕ್ಷಗಾನ ಪ್ರದರ್ಶನಕ್ಕೂ ಪೂರ್ವದಲ್ಲಿ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಉಡುಪಿಯವರ ಸಾಕ್ಷರತಾ ಸಪ್ತಾಹದಲ್ಲಿ ‘ಸಾಕ್ಷರ ಕಿರಣ’ ಯಕ್ಷಗಾನ ಪ್ರದರ್ಶನಗೊಂಡಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಇಲಾಖೆಯ ಉಮೇಶ್ “ಜಿಲ್ಲೆಯಲ್ಲಿ ಅನಕ್ಷರಸ್ಥರ ಸಂಖ್ಯೆ ವಿರಳವಾಗಿದ್ದು, ಎಲ್ಲರೂ ಸಾಕ್ಷರರಾಗಬೇಕೆಂಬ ಗುರಿಯೊಂದಿಗೆ ಇಲಾಖೆಯು ಕಾರ್ಯಕ್ರಮ ಅನುಷ್ಠಾನ ಮಾಡುತ್ತಿದ್ದು ಉಡುಪಿ ಜಿಲ್ಲೆಯನ್ನು ಸಂಪೂರ್ಣ ಸಾಕ್ಷರತಾ ಜಿಲ್ಲೆಯನ್ನಾಗಿಸುವ ಪ್ರಯತ್ನದಲ್ಲಿ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯತ್ ಉಡುಪಿ ಸದಾ ಕ್ರಿಯಾಶೀಲವಾಗಿದ್ದು ಈ ನಿಟ್ಟಿನಲ್ಲಿ ರಸರಂಗ (ರಿ.) ಕೋಟ, ಯಶಸ್ವೀ ಕಲಾವೃಂದ ಪ್ರತೀ ವರ್ಷವೂ ಸಹಕಾರಿಯಾಗಿ ಬೆಂಬಲಿಸುತ್ತಿರುವುದು ಶ್ಲಾಘ್ಯಾಯೋಗ್ಯ ವಿಚಾರ” ಎಂದು ಹೇಳಿದರು. “ಯಕ್ಷಗಾನದಲ್ಲಿ ಅನೇಕ ನೂರಾರು ಪ್ರಸಂಗಗಳು ರಂಗದಲ್ಲಿ ಪ್ರದರ್ಶನಕ್ಕಾಗಿ ವಿರಳವಾಗಿದೆ. ಅದರಲ್ಲಿನ ‘ಗಾಂಧಾರಿ’ ಆಖ್ಯಾನವೂ ಒಂದು. ಇಂತಹ ಪ್ರಸಂಗಗಳನ್ನು ಆಗಾಗ ರಂಗದಲ್ಲಿ ಪ್ರದರ್ಶಿಸಿ ಪರಿಚಯಿಸುವ ಕಾರ್ಯ ರಸರಂಗ…

Read More