Author: roovari

ಮಂಗಳೂರು : ಕನ್ನಡ ಹಾಗೂ ತುಳು ಭಾಷೆಯಲ್ಲಿ ಕಳೆದ 54 ವರ್ಷಗಳಿಂದ ಅಧ್ಯಯನ, ಅಧ್ಯಾಪನ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದ ಹಿರಿಯ ಸಂಶೋಧಕ, ವಿಶ್ರಾಂತ ಕುಲಪತಿ ಡಾ. ಬಿ.ಎ. ವಿವೇಕ ರೈ ಇವರು ಕರ್ನಾಟಕ ರಾಜ್ಯ ಸರಕಾರ ಸಾಹಿತ್ಯಕ್ಕೆ ನೀಡುವ ಅತ್ಯುನ್ನತ ಗೌರವವಾದ ‘ಪಂಪ ಪ್ರಶಸ್ತಿ’ಗೆ ಆಯ್ಕೆಯಾಗಿದ್ದು, ಪ್ರಶಸ್ತಿಯು ಐದು ಲಕ್ಷ ರೂ. ನಗದು ಹೊಂದಿದೆ. ಡಾ. ಬಿ.ಎ. ವಿವೇಕ ರೈಯವರು ತಂದೆ ಅಗ್ರಾಳ ಪುರಂದರ ರೈಯವರ ಮೂಲಕ ಶಿವರಾಮ ಕಾರಂತರ ಸಂಪರ್ಕ ಬೆಳೆಸಿ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಅದ್ವಿತೀಯ ಕಾರ್ಯ ನಡೆಸಿ, ಸಂಶೋಧನೆಯ ಯೋಜನೆಗಳನ್ನು ನಿರ್ವಹಿಸಿ, ಗ್ರಂಥಗಳನ್ನು ಪ್ರಕಟಿಸಿದರು. ಪ್ರಾದೇಶಿಕ ಅಧ್ಯಯನ ಹಾಗೂ ಸಂಸ್ಕೃತಿಯ ಅಧ್ಯಯನ ಕ್ಷೇತ್ರದ ಇವರ ಕೆಲಸಗಳು ಅಂತಾರಾಷ್ಟ್ರೀಯ ವಿದ್ವಾಂಸರ ಗಮನ ಸೆಳೆದಿವೆ. ಅಗ್ರಾಳ ಪುರಂದರ ರೈ – ಯಮುನಾ ರೈ ದಂಪತಿಯ ಪುತ್ರರಾಗಿ ಬಿ.ಎ. ವಿವೇಕ ರೈ 1946ರಲ್ಲಿ ಪುಣಚದಲ್ಲಿ ಜನಿಸಿದರು. ಪರಿಯಾಲ್ತಡ್ಕ ಹೈಯರ್ ಎಲಿಮೆಂಟರಿ ಶಾಲೆಯಲ್ಲಿ ಪ್ರಾಥಮಿಕ, ಮಾಧ್ಯಮಿಕ ಶಿಕ್ಷಣ,…

Read More

ವಿಜಯಪುರ : ಕರ್ನಾಟಕ ಗಮಕ ಕಲಾ ಪರಿಷತ್ತು (ರಿ.) ಬೆಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ವಿಜಯಪುರ ಜಿಲ್ಲಾ ಗಮಕ ಕಲಾ ಪರಿಷತ್ತು ಹಾಗೂ ಡಾ. ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರ ವಿಜಯಪುರ ಇವರ ಸಹಯೋಗದಲ್ಲಿ ಕುಮಾರವ್ಯಾಸ ಜಯಂತಿ ಪ್ರಯುಕ್ತ ‘ಗಮಕ ವಾಚನ – ವ್ಯಾಖ್ಯಾನ ಕಾರ್ಯಕ್ರಮ ಹಾಗೂ ಸನ್ಮಾನ ಸಮಾರಂಭ’ವನ್ನು ದಿನಾಂಕ 17 ಫೆಬ್ರವರಿ 2025ರಂದು ಸಂಜೆ 4-00 ಗಂಟೆಗೆ ವಿಜಯಪುರದ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯಪುರದ ಖ್ಯಾತ ಇತಿಹಾಸ ಸಂಶೋಧಕರಾದ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ ಇವರು ವಹಿಸಲಿದ್ದು, ಡಾ. ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಕಾರ್ಯದರ್ಶಿ ಡಾ. ಎಂ.ಎಸ್. ಮದಭಾವಿ ಇವರು ಉದ್ಘಾಟನೆ ಮಾಡಲಿದ್ದಾರೆ. ವಾಚನವನ್ನು ಶ್ರೀಮತಿ ಪುಷ್ಪಾ ಕುಲಕರ್ಣಿ ಮತ್ತು ವ್ಯಾಖ್ಯಾನವನ್ನು ಶ್ರೀ ಕಲ್ಯಾಣರಾವ್ ದೇಶಪಾಂಡೆ ಇವರು ನಿರ್ವಹಿಸಲಿರುವರು.

Read More

ಮಂಗಳೂರು : ಮಂಗಳೂರಿನ ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸಿದ ಪುಸ್ತಕ ಪ್ರೇಮಿಗಳ ದಿನಾಚರಣೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ದಿನಾಂಕ 14 ಫೆಬ್ರವರಿ 2025ರಂದು ಮಂಗಳೂರಿನ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾತನಾಡಿ ಮಂಗಳೂರು ಹಲವಾರು ವಿಷಯಗಳಿಗೆ ನಾಂದಿಯಾಗಿದೆ. ಇಂದು ನಡೆಯುತ್ತಿರುವ ಈ ಪುಸ್ತಕ ಪ್ರೇಮಿಗಳ ದಿನಾಚರಣೆ ಬೇರೆ ಎಲ್ಲಿಯೂ ನಡೆದ ಬಗ್ಗೆ ಮಾಹಿತಿ ಇಲ್ಲ, ಇದು ಇಲ್ಲಿಂದ ಆರಂಭಗೊಂಡು ವಿಶ್ವದಾದ್ಯಂತ ಹರಡಲಿ. ನಾನೂ ಒಬ್ಬ ಪುಸ್ತಕ ಪ್ರೇಮಿ. ಅದಕ್ಕಾಗಿ ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ, ಆದರೆ ನಾನು ಪ್ರೇಮದಿಂದ ಪುಸ್ತಕ ಓದು ಆರಂಭಿಸಿದವನಲ್ಲ, ಬದಲಾಗಿ ಒತ್ತಾಯದಿಂದ ಆರಂಭಿಸಿದವ. ಸೇನಾ ತರಬೇತಿಯಲ್ಲಿ ಇದ್ದಾಗ ಪುಸ್ತಕ ಓದಿ ಅದರ ವಿಮರ್ಶೆ ಬರೆಯುವುದು ತರಬೇತಿಯ ಭಾಗವಾಗಿತ್ತು. ಮುಂದೆ ಅದು ಪ್ರೀತಿಯಾಗಿ ಬದಲಾಯಿತು” ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಮೋಹನ ಆಳ್ವ ಮಾತನಾಡಿ “ರಂಗ ಸಂಗಾತಿಯ ಕಾರ್ಯಕ್ರಮಗಳು…

Read More

ಬೆಂಗಳೂರು : ರಂಗ ಶಂಕರ ಮತ್ತು ಸಮುದಾಯ ಬೆಂಗಳೂರು ಅರ್ಪಿಸುವ ಗೇಬ್ರಿಯಲ್ ಗಾರ್ಸಿಯಾ ಮಾಕ್ವೇಜ್ ಕಾದಂಬರಿ ಆಧರಿತ ‘ಕರ್ನಲ್ ಗೆ ಯಾರೂ ಬರೆಯೋದಿಲ್ಲ’ ನಾಟಕ ಪ್ರದರ್ಶನವನ್ನು ದಿನಾಂಕ 16 ಫೆಬ್ರವರಿ 2025ರಂದು ಮಧ್ಯಾಹ್ನ ಗಂಟೆ 3-30 ಮತ್ತು ಸಂಜೆ ಗಂಟೆ 7-30ಕ್ಕೆ ಬೆಂಗಳೂರಿನ ರಂಗ ಶಂಕರದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀನಿವಾಸ ವೈದ್ಯ ಈ ನಾಟಕದ ಅನುವಾದ ಮಾಡಿದ್ದು, ಕೆ.ಪಿ. ಲಕ್ಷ್ಮಣ ಇವರು ಪಠ್ಯ ಮತ್ತು ನಿರ್ದೇಶನ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 8884929549 ಮತ್ತು 9901299228 ಸಂಖ್ಯೆಯನ್ನು ಸಂಪರ್ಕಿಸಿರಿ. ನೊಬೆಲ್ ಪ್ರಶಸ್ತಿ ವಿಜೇತ ಗೇಬ್ರಿಯೆಲ್ ಗಾರ್ಸಿಯ ಮಾರ್ಕ್ವೆಝ್ ರ ನೀಳ್ಗತೆ ‘No one writes to the colonel’ ನ ಕನ್ನಡ ರಂಗರೂಪ ಇಂದಿನ ನಾಟಕ ‘ಕರ್ನಲ್ ಗೆ ಯಾರೂ ಬರೆಯುವುದಿಲ್ಲ’. ರಂಗಶಂಕರದ ಸಹಯೋಗದೊಂದಿಗೆ ಸಮುದಾಯ, ಬೆಂಗಳೂರು ಪ್ರಸ್ತುತಿ ಪಡಿಸುವ ಈ ನಾಟಕದ ನಿರ್ದೇಶಕರು ಕೆ.ಪಿ. ಲಕ್ಷ್ಮಣ್. ಮಾರ್ಕ್ವೆಝ್ ರ ಈ ಕಥೆ ವಿಶ್ವಾದ್ಯಂತ ಅತ್ಯಂತ ಪ್ರಸಿದ್ಧಿ ಪಡೆದ ಕಥೆ‌. ಬಡತನದ ಬೇಗೆಯಲ್ಲಿ ಹೆಂಡತಿಯ…

Read More

ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ದಿನಾಂಕ 09 ಫೆಬ್ರವರಿ 2025 ಭಾನುವಾರದಂದು ಬದಿಯಡ್ಕದ ಗಣೇಶ ಪೈಗಳ ಮನೆಯಲ್ಲಿ ದಿವಂಗತ ಬಿ. ಕೃಷ್ಣ ಪೈ ಬದಿಯಡ್ಕ ಇವರ ಬದುಕು-ಬರಹದ ಮೆಲುಕು ‘ಸ್ಮರಣಾಂಜಲಿ’ ಕಾರ್ಯಕ್ರಮದಲ್ಲಿ ನಡೆದ ‘ಚುಟುಕು ಕವಿಗೋಷ್ಠಿ’ಯಲ್ಲಿ ಸುಮಾರು ಹದಿಮೂರು ಮಂದಿ ಚುಟುಕು ಸಾಹಿತಿಗಳು ಭಾಗವಹಿಸಿದ್ದರು. ಹಿರಿಯ ಮತ್ತು ಕಿರಿಯರು ಸೇರಿದ ಕವಿಗೋಷ್ಠಿಯು ಕಾವ್ಯಾಸಕ್ತರಿಗೆ ಮುದ ನೀಡಿತ್ತು. ಶಾರದಾ ಮೊಳೆಯಾರ್ ಎಡನೀರು ಇವರು ಫ್ಯಾಷನ್ ತುಂಡುಡುಗೆ ಹಾಗೂ ಕೃಷಿಕರ ಹರಕು ಬಟ್ಟೆಯ ಭಿನ್ನತೆಯಲ್ಲಿನ ವ್ಯತ್ಯಸ್ಥ ಮನೋಭಾವವನ್ನು ಚುಟುಕದ ಮೂಲಕ ತಿಳಿಸಿದರು. ದು:ಖದಲ್ಲೂ ಆತ್ಮಾಭಿಮಾನ ಬಿಡಬಾರದು ಎಂಬ ಸಂದೇಶ ನೀಡುವ ಚುಟುಕು, ಸಂಕಲನ ವ್ಯವಕಲನದ ಆಟದ ರಸದೌತಣ ನೀಡುವ ‘ಗಣಿತ’ ಎಂಬ ಚುಟುಕು ಆಕರ್ಷಕವಾಗಿತ್ತು. ಕೆ. ನರಸಿಂಹ ಭಟ್ ಎತಡ್ಕ ಇವರ ಹಕ್ಕುಗಳಿವೆಯೆಂದು ಸೊಕ್ಕು ತೋರಬಾರದು, ಎಲ್ಲರೊಡನೆ ಸವಿನಯದಿಂದ ಬದುಕಬೇಕು ಎಂಬ ಚುಟುಕ, ಕಾಡಾನೆಗಳ ಹಾವಳಿಯಿಂದ ಕೃಷಿ ಕ್ಷೇತ್ರದ ಸಂಕಷ್ಟವನ್ನು ಬಣ್ಣಿಸುವ ಚುಟುಕ, ವ್ಯಕ್ತಿಗತ ಕರ್ತವ್ಯವನ್ನು…

Read More

ಉಡುಪಿ : ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 16 ಫೆಬ್ರವರಿ 2025ರಂದು ಸಂಜೆ 4-00 ಗಂಟೆಗೆ ಉಡುಪಿಯ ಯಕ್ಷಗಾನ ಕಲಾರಂಗ ಐ.ವೈ.ಸಿ. ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. 2024ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ ಹಾಗೂ ದತ್ತಿನಿಧಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮಾನ್ಯ ಶಾಸಕರಾದ ಶ್ರೀ ಯಶ್ ಪಾಲ್ ಎ. ಸುವರ್ಣ ಇವರ ಅಧ್ಯಕ್ಷತೆಯಲ್ಲಿ ಸಚಿವರಾದ ಶ್ರೀಮತಿ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿರುವರು. ಸಚಿವರಾದ ಶಿವರಾಜ ಎಸ್. ತಂಗಡಗಿ ಇವರು ಪ್ರಶಸ್ತಿ ಪ್ರದಾನ ಹಾಗೂ ಕಿರು ಪರಿಚಯ ಪುಸ್ತಕ ಬಿಡುಗಡೆ ಮಾಡಲಿದ್ದು, ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಾಲ್ಲೂರು ಶಿವರಾಮ ಶೆಟ್ಟಿ ಇವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಸಭಾ ಕಾರ್ಯಕ್ರಮದ ಮೊದಲು ಬಡಗುತಿಟ್ಟು ಯಕ್ಷಗಾನ ಪ್ರದರ್ಶನದಲ್ಲಿ ಶ್ರೀ ವಿದ್ಯಾಧರ ವೆಂಕಟೇಶ ಮಡಿವಾಳ ಜಲವಳ್ಳಿ ಮತ್ತು ಬಳಗದವರಿಂದ ‘ಮಾಗದ ವಧೆ’ ಎಂಬ ಪ್ರಸಂಗ, ಬಳಿಕ…

Read More

ಕಾರ್ಕಳ : ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ಸಮಿತಿ ಜಂಟಿಯಾಗಿ ಅರ್ಪಿಸುವ 38ನೇ ಕಾರ್ಯಕ್ರಮದಲ್ಲಿ 2025ನೇ ವರ್ಷ ಪೂರ್ತಿ ‘ರಾಮಸಾಗರಗಾಮಿನೀ’ ಶ್ರೀಮದ್ ವಾಲ್ಮೀಕಿ ರಾಮಾಯಣ ದರ್ಶನ ಉಪನ್ಯಾಸ ಮಾಲೆಯನ್ನು ದಿನಾಂಕ 15 ಫೆಬ್ರವರಿ 2025ರಂದು ಸಂಜೆ 5-00 ಗಂಟೆಗೆ ಕಾರ್ಕಳ ಹೊಟೇಲ್ ಪ್ರಕಾಶ್ ಸಂಭ್ರಮ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಡಾ. ರಾಘವೇಂದ್ರ ರಾವ್ ಪಡುಬಿದ್ರಿ ಇವರು ‘ದ್ವಿತೀಯ ಸೋಪಾನ : ಯಜ್ಞ ಸಂರಕ್ಷಣೆಯ ಪಥದಲ್ಲಿ’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲಿರುವರು. ಡಾ. ರಾಘವೇಂದ್ರ ರಾವ್ : ಉತ್ತರ ಕನ್ನಡ ಜಿಲ್ಲೆಯ ಶಿರಸಿಮೂಲದವರಾದ ರಾಘವೇಂದ್ರ ರಾವ್ ಇವರು ತಂದೆ ವಾಸುದೇವ ರಾವ್ ಮತ್ತು ತಾಯಿ ಅರುಂಧತಿ ರಾವ್ ರವರ ಪೌರಾಣಿಕ ಆಧ್ಯಾತ್ಮಿಕ ಜ್ಞಾನಗಳಿಂದ ಪ್ರೇರಿತರಾಗಿ ಬಾಲ್ಯದಲ್ಲೇ ತನ್ನ ಆಸಕ್ತಿಯನ್ನು ಆ ಕಡೆಗೆ ಹರಿಸಿದರು. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದ ಬಳಿಕದ ವಿದ್ಯಾಭ್ಯಾಸವನ್ನು ಇವರು ಉಡುಪಿ ಮತ್ತು ತಿರುಪತಿಯಲ್ಲಿ ನಡೆಸಿದರು. ಬಿ.ಕಾಂ, ಕನ್ನಡ ರತ್ನ,…

Read More

ಶಿವಮೊಗ್ಗ : ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಶಾಖೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಶಿವಮೊಗ್ಗ ಇವರ ಸಹಯೋಗದಲ್ಲಿ ‘ವೈದ್ಯ ಕವಿಗೋಷ್ಠಿ’ಯನ್ನು ದಿನಾಂಕ 16 ಫೆಬ್ರವರಿ 2025ರಂದು ಬೆಳಿಗ್ಗೆ 10-00 ಗಂಟೆಗೆ ಶಿವಮೊಗ್ಗದ ಐ.ಎಂ.ಎ. ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಶಿವಮೊಗ್ಗ ಇದರ ಅಧ್ಯಕ್ಷರಾದ ಶ್ರೀ ಮಂಜುನಾಥ್ ಡಿ. ಇವರ ಅಧ್ಯಕ್ಷತೆ ನಡೆಯುವ ಈ ಕವಿಗೋಷ್ಠಿಯಲ್ಲಿ ವೈದ್ಯ ಕವಿಗಳಾದ ಡಾ. ಕೃಷ್ಣ ಎಸ್. ಭಟ್, ಡಾ. ಡೋ.ನಾ. ವೆಂಕಟೇಶ್ ರಾವ್, ಡಾ. ರಾಘವೇಂದ್ರ ವೈಲಾಯ, ಡಾ. ಗೀತಾಲಕ್ಷ್ಮೀ ಯು., ಡಾ. ಗುರುದತ್ತ್ ಕೆ.ಎನ್., ಡಾ. ವಿನಯ ಶ್ರೀನಿವಾಸ್, ಡಾ. ರಶ್ಮಿ ವೈದ್ಯ, ಡಾ. ಭಾರತಿ ಹೆಚ್.ಜಿ., ಡಾ. ನಿರಂಜನ್ ಪಿ.ಬಿ., ಡಾ. ಉಷಾ ರಮೇಶ್, ಮಾಸ್ಟರ್ ಶ್ರೇಯಸ್ ಎನ್., ಕುಮಾರಿ ಕೃತಜ್ಞಾ ಬೆಸೂರು ಇವರುಗಳು ಭಾಗವಹಿಸಲಿದ್ದಾರೆ.

Read More

ಮೂಡುಬಿದಿರೆ : ಮುಸ್ಲಿಂ ಭಾಂದವ್ಯ ವೇದಿಕೆ ಕರ್ನಾಟಕ ಇದರ ವತಿಯಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರಿಗೆ ‘ಸೌಹಾರ್ದ ಸಿರಿ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ದಿನಾಂಕ 13 ಫೆಬ್ರವರಿ 2025ರಂದು ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಯಕ್ಷಗಾನ ಅರ್ಥದಾರಿ ಜಬ್ಬಾರ್ ಸಮೊ ಸಂಪಾಜೆ ಮಾತನಾಡಿ “ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮೂಲಕ ಆಧುನಿಕ ಕಾಲಕ್ಕೆ ಅಗತ್ಯವಿರುವ ಶಿಕ್ಷಣ ವ್ಯವಸ್ಥೆ, ನೂತನ ಪ್ರಯೋಗಗಳನ್ನು ಹಳ್ಳಿಗಳಿಗೂ ತಲುಪಿಸುವ ಕಾರ್ಯವಾಗುತ್ತಿದೆ. ಅಲ್ಲದೇ ಮೂಡುಬಿದಿರೆಯ ಸಂಸ್ಕೃತಿಯ ಪರಂಪರೆಯನ್ನು ಮುಂದುವರಿಸಲು ಮೋಹನ್ ಆಳ್ವರು ಸೌಹಾರ್ದಯುತವಾಗಿ ಶ್ರಮಿಸುತ್ತಿದ್ದಾರೆ. ಇವರು ನಾಡಿನ ಅಸ್ಮಿತೆಯನ್ನು ಮೈಗೂಡಿಸಿಕೊಂಡು ವಿಶ್ವವ್ಯಾಪಕವಾಗಿ ಅಂಗೀಕೃತ ಹೊಂದಿರುವ ಓರ್ವ ಮಹಾನ್ ಸಾಧಕ” ಎಂದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಎಂ. ಮೋಹನ್ ಆಳ್ವ “ಮನಸ್ಸು ಹಾಗೂ ಜೀವನ ಪದ್ಧತಿಯನ್ನು ಉತ್ತಮಗೊಳಿಸುವ ಮೂಲಕ ಸೌಹಾರ್ದ ಜೀವನ ನಡೆಸಲು ಸಾಧ್ಯ. ಬದುಕಿನ ಪ್ರತಿ ಹಂತದಲ್ಲೂ ಮೌಲ್ಯಯುತವಾಗಿರುವುದು ಬಹಳ ಅಗತ್ಯ. ನನ್ನ 73…

Read More

ಪರಿಸರ ಪ್ರೇಮಿ, ಮಧ್ಯಪಾನ ವಿರೋಧಿ ಹೋರಾಟಗಾರ್ತಿ, ಗಾಯಕಿ ಮತ್ತು ‘ಜನಪದ ಕೋಗಿಲೆ’ ಎಂದೇ ಪ್ರಸಿದ್ಧರಾದ ಸುಕ್ರಿ ಬೊಮ್ಮಗೌಡ ಹಾಲಕ್ಕಿ ಜನಾಂಗದವರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಬಡಗೇರಿ ಗ್ರಾಮದವರಾದ ಸುಕ್ರಿಯವರು ಸುಕ್ರಜ್ಜಿ ಎಂದೇ ಪ್ರಸಿದ್ಧರು. ಹಾಲಕ್ಕಿ ಜನಪದ ಹಾಡುಗಳನ್ನು ಹಾಡುವುದಕ್ಕೆ ಪ್ರಸಿದ್ಧರಾದ ಇವರು, ಸುಮಾರು 5000 ಪದ್ಯಗಳನ್ನು ನೆನಪಿನಲ್ಲಿಟ್ಟುಕೊಂಡು ಯಾವುದೇ ಬರವಣಿಗೆಯ ಪರಿಕರಗಳ ಸಹಾಯವಿಲ್ಲದೆ ಹಾಡುತ್ತಾರೆ. ಇವುಗಳಲ್ಲಿ 100 ವರ್ಷಗಳಿಗಿಂತ ಹಿಂದಿನ ಹಾಡುಗಳೂ ಇವೆ. ‘ಹಾಲಕ್ಕಿ ಪದಗಳ ಕೋಗಿಲೆ’ ಎಂದೇ ಎಲ್ಲರಿಂದ ಕರೆಸಿಕೊಳ್ಳುವ ಇವರು, ಆ ಕ್ಷಣದಲ್ಲಿಯೇ ತಮ್ಮದೇ ಆದ ಶೈಲಿಯಲ್ಲಿ ಜನಪದ ಹಾಡುಗಳನ್ನು ಹಾಡುವ ಪ್ರತಿಭಾವಂತೆ. ಕರ್ನಾಟಕ ಜಾನಪದ ಅಕಾಡೆಮಿ ಸುಕ್ರಜ್ಜಿಯ ಹಾಡುಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಿದೆ. ಅಲ್ಲದೆ ಕಾರವಾರದ ‘ಅಖಿಲ ಭಾರತ ರೇಡಿಯೋ’ ಸುಕ್ರಜ್ಜಿಯ ಹಾಡುಗಳನ್ನು ಧ್ವನಿ ಮುದ್ರಣ ಮಾಡಿ ಸಂಗ್ರಹಿಸಿದೆ. 1937 ಜನಿಸಿದ ಸುಕ್ರಿಯವರ ವಿವಾಹ ತನ್ನ ಹದಿನಾರನೇ ವಯಸ್ಸಿನಲ್ಲಿ ಹಿರಿಯ ವಯಸ್ಸಿನ ವರನೊಂದಿಗೆ ನಡೆಯಿತು. ಇವರು ತಮ್ಮ ಇಬ್ಬರು ಮಕ್ಕಳನ್ನು ಕಳೆದುಕೊಂಡ ನಂತರ ಮತ್ತೊಂದು ಮಗುವನ್ನು…

Read More