Author: roovari

ಉಡುಪಿ : ರಂಗಭೂಮಿ ಉಡುಪಿ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಸಹಯೋಗದಲ್ಲಿ ‘ವಿಶ್ವ ರಂಗಭೂಮಿ ದಿನಾಚರಣೆ’, ‘ವಿಶ್ವ ರಂಗಭೂಮಿ ಸನ್ಮಾನ’ ಹಾಗೂ ‘ಅಂಬಾತನಯ ಮುದ್ರಾಡಿ ಸಂಸ್ಮರಣಾ ಪುಸ್ತಕ ಪ್ರಶಸ್ತಿ ಪ್ರದಾನ’ ಸಮಾರಂಭವು ದಿನಾಂಕ 27 ಮಾರ್ಚ್ 2025ರಂದು ಸಂಜೆ ಘಂಟೆ 5.00ರಿಂದ ಉಡುಪಿಯ ಎಂ. ಜಿ. ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಈ ಕುರಿತು ಮಾಹಿತಿ ನೀಡಿದ ರಂಗಭೂಮಿಯ ಅಧ್ಯಕ್ಷರಾದ ತಲ್ಲೂರು ಶಿವರಾಮ ಶೆಟ್ಟಿ “ರಂಗಭೂಮಿಯ ಗೌರವಾಧ್ಯಕ್ಷರಾದ ಡಾ. ಎಚ್.ಎಸ್. ಬಲ್ಲಾಳ್ ಇವರ ಅಧ್ಯಕ್ಷತೆಯಲ್ಲಿ ಅಂದು ಸಂಜೆ ಘಂಟೆ 6.00ರಿಂದ ನಡೆಯುವ ಕಾರ್ಯಕ್ರಮದಲ್ಲಿ ಸಾಹಿತಿ ಎಚ್. ಗೋಪಾಲ ಭಟ್ಟ (ಕು.ಗೋ.) ಇವರಿಗೆ ‘ವಿಶ್ವ ರಂಗಭೂಮಿ ಪ್ರಶಸ್ತಿ’ ಮತ್ತು ಲೇಖಕ ಎನ್. ಸಿ. ಮಹೇಶ್ ಇವರಿಗೆ ‘ಅಂಬಾತನಯ ಮುದ್ರಾಡಿ ಸಂಸ್ಮರಣಾ ಪುಸ್ತಕ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ಡಾ.…

Read More

ಉಪ್ಪಿನಕುದ್ರು : “ಪ್ರತಿಭೆ ನಿಮ್ಮದು ವೇದಿಕೆ ನಮ್ಮದು” 2025 ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಸತತ 105ನೇ ತಿಂಗಳ ಕಾರ್ಯಕ್ರಮ ದಿನಾಂಕ 23 ಮಾರ್ಚ್ 2025ರಂದು ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ವಿಷ್ಣು ಸಹಸ್ರನಾಮದೊಂದಿಗೆ ಆರಂಭವಾಯಿತು. ಶ್ರೀಮತಿ ವಸಂತಿ ಆರ್. ಪಂಡಿತ್ ಪ್ರಾರ್ಥಿಸಿದರು. ವೇದಿಕೆಯಲ್ಲಿ ಡಾ. ರಮಾಕಾಂತ್ ಶೆಣೈ, ಪುಷ್ಪರಾಜ್, ವಸಂತಿ ಆರ್. ಪಂಡಿತ್, ಗಿರೀಶ್ ಪೈ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್‌ರವರು ಉಪಸ್ಥಿತರಿದ್ದರು. ಮೈಸೂರಿನ ಡಾ. ರಮಾಕಾಂತ್ ಶೆಣೈ ಹಾಗೂ ಕುಂದಾಪುರದ ದೀಕ್ಷಾ ಪೈ, ಪ್ರೇಕ್ಷಾ ಪೈ ಸಹೋದರಿಯರನ್ನು ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು. ನಂತರ ಡಾ. ರಮಾಕಾಂತ್ ಶೆಣೈಯವರು ‘ವಿಷ್ಣು ಸಹಸ್ರನಾಮ’ದ ಬಗ್ಗೆ ಪ್ರವಚನ ನೀಡಿ ಅದರ ಮಹತ್ವ ವಿವರಿಸಿದರು. ದೀಕ್ಷಾ ಪೈ ಹಾಗೂ ಪ್ರೇಕ್ಷಾ ಪೈ ಸಹೋದರಿಯರು ಭಕ್ತಿ ಸಂಗೀತ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ನೆರವೇರಿಸಿದರು. ಶ್ರೀಮತಿ ರಶ್ಮಿರಾಜ್, ಕುಂದಾಪುರ ಇವರು ಕಾರ್ಯಕ್ರಮ ನಿರೂಪಿಸಿದರು.

Read More

ಧಾರವಾಡ : ಅಭಿನಯ ಭಾರತಿ (ರಿ.) ಧಾರವಾಡ ಹಾಗೂ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ, ಅಭಿನಯ ಭಾರತಿ ರಂಗಪ್ರಶಸ್ತಿ ಪ್ರದಾನ ಹಾಗೂ ದಿ. ಪಿ.ಆರ್. ಮಳಗಿ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ 27 ಮಾರ್ಚ್ 2025ರಂದು ಧಾರವಾಡದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಭಾಭವನದಲ್ಲಿ ಬೆಳಿಗ್ಗೆ 10-30 ಗಂಟೆಗೆ ಆಯೋಜಿಸಲಾಗಿದೆ. ಹಿರಿಯ ರಂಗ ಸಂಸ್ಥೆ ಅಭಿನಯ ಭಾರತಿಯು ಕಳೆದ ನಾಲ್ಕು ದಶಕಗಳಿಂದ ತನ್ನ ವಿವಿಧ ರಂಗ ಚಟುವಟಿಕೆಗಳ ಮೂಲಕ ಸಂಸ್ಕೃತಿ ಪ್ರಿಯರ ಮನಸ್ಸನ್ನು ಉಲ್ಲಸಿತಗೊಳಿಸಿದೆ. 1996ರಿಂದ ಈ ಮೂರು ದಶಕಗಳುದ್ದಕ್ಕೂ ಪ್ರತಿ ವರ್ಷ ಮಾರ್ಚ್ 27ರಂದು ‘ವಿಶ್ವ ರಂಗಭೂಮಿ’ ದಿನವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸುತ್ತ ಪ್ರತಿ ವರ್ಷವೂ ರಂಗ ಪ್ರಪಂಚದ ವಿಶಿಷ್ಟ ಸಾಧಕರಿಗೆ ‘ಅಭಿನಯ ಭಾರತಿ ರಂಗ ಪ್ರಶಸ್ತಿ’ಯನ್ನು ನಗದು ಪುರಸ್ಕಾರ ಹಾಗೂ ನಟರಾಜ ವಿಗ್ರಹ ನೀಡಿ ಫಲಪುಷ್ಪದೊಂದಿಗೆ ಗೌರವಿಸುವ ಮೂಲಕ ಜನ ಮೆಚ್ಚುಗೆ ಪಡೆದಿದೆ. ಈ ಸಲ ಅಭಿನಯ…

Read More

ಸುಳ್ಯ : ಸುಳ್ಯದ ಚಂದನ ಸಾಹಿತ್ಯ ವೇದಿಕೆಯ 20ನೇ ವಾರ್ಷಿಕೋತ್ಸವ ಸಮಾರಂಭವು ದಿನಾಂಕ 23 ಮಾರ್ಚ್ 2025ರಂದು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಯಂದಲ್ಲಿ ಸಾಹಿತಿ, ಅಂಕಣಕಾರ, ಪತ್ರಕರ್ತ ವಿರಾಜ್ ಅಡೂರು ಇವರನ್ನು ಸಾಹಿತಿ ಎಚ್. ಭೀಮ್. ರಾವ್ ವಾಸ್ಟರ್ ಕೋಡಿಹಾಳ ನೇತೃತ್ವದಲ್ಲಿ ಅವರ ಸಾಹಿತ್ಯ ಕ್ಷೇತ್ರದ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿ ಪ್ರದಾನಿಸಲಾಯಿತು. ವಿರಾಜ್ ಅಡೂರು ಇವರು ಸಾಹಿತ್ಯ, ಸಂಘಟನೆ, ಸಾಮಾಜಿಕ ಮುಖಂಡರಾಗಿದ್ದು, ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಹಾಗೂ ಬೆಂಗಳೂರಿನ ‘ಸ್ಪಂದನ ಸಿರಿ’ ವೇದಿಕೆಯ ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಚಂದನ ಸಾಹಿತ್ಯ’ವೇದಿಕೆಯ ಅಧ್ಯಕ್ಷ ಎಚ್. ಭೀಮ್. ರಾವ್ ವಾಸ್ಟರ್ ಕೋಡಿಹಾಳ, ಅಜ್ಜಾವರ ಚೈತನ್ಯ ಸೇವಾಶ್ರಮದ ಶ್ರೀ ಶ್ರೀ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿ, ಹಿರಿಯ ಸಾಹಿತಿ ನಾರಾಯಣ ರೈ ಕುಕ್ಕುವಳ್ಳಿ, ಮೋಹನ ನಂಗಾರು, ಚೆನ್ನಕೇಶವ ಜಾಲ್ಸೂರು, ಪಿ ವೆಂಕಟೇಶ್ ಬಾಗೇವಾಡ, ನವೀನ್ ಚಾತುಬಾಯಿ, ಸಲೀಂ ಅನಾರ್ಕಲಿ ಮೊದಲಾದವರು ಭಾಗವಹಿಸಿದ್ದರು.

Read More

ತೆಂಕನಿಡಿಯೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಆಂತರಿಕ ಗುಣಮಟ್ಟ ಭರವಸಾ ಕೋಶ, ಡಾ. ಪಾದೂರು ಗುರುರಾಜ್ ಭಟ್ ಮೆಮೋರಿಯಲ್ ಟ್ರಸ್ಟ್ ಉಡುಪಿ ಹಾಗೂ ಇತಿಹಾಸ ವಿಭಾಗ ಸಂಯುಕ್ತವಾಗಿ ಆಯೋಜಿಸುತ್ತಿರುವ ಡಾ. ಪಾದೂರು ಗುರುರಾಜ್ ಭಟ್ ಜನ್ಮ ಶತಮಾನೋತ್ಸವ -2025 ಪ್ರಯುಕ್ತ ವಿಶ್ವ ವಿದ್ಯಾನಿಲಯ ಮಟ್ಟದ ಒಂದು ದಿನದ ವಿಚಾರ ಸಂಕಿರಣವನ್ನು ದಿನಾಂಕ 28 ಮಾರ್ಚ್ 2025ರಂದು ಪೂರ್ವಾಹ್ನ 10-00 ಗಂಟೆಗೆ ಕಾಲೇಜಿನ ಆಡಿಯೋ ವಿಶ್ಯುವಲ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ವಿಚಾರ ಸಂಕಿರಣವು 10-00 ಗಂಟೆಗೆ ಉದ್ಘಾಟನೆಗೊಳ್ಳಲಿದ್ದು, ‘ತುಳುನಾಡಿನ ದೇವಾಲಯಗಳ ವಾಸ್ತುಶಿಲ್ಪ’ ಎಂಬ ವಿಷಯದ ಬಗ್ಗೆ ಮೂಡಬಿದರೆ ಶ್ರೀ ಧವಳ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಡಾ. ಪುಂಡಿಕಾಯಿ ಗಣಪಯ್ಯ ಭಟ್ ಇವರಿಂದ ಉಪನ್ಯಾಸ ನಡೆಯಲಿದೆ. ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ನಿತ್ಯಾನಂದ ವಿ. ಗಾಂವಕರ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ‘ತುಳುನಾಡಿನ ಶಾಸನಗಳು’ ಎಂಬ ವಿಷಯದ ಬಗ್ಗೆ ಉಡುಪಿ…

Read More

ಉಡುಪಿ : ರಂಗಭೂಮಿ (ರಿ.) ಉಡುಪಿ ಇದರ ವತಿಯಿಂದ ‘ವಿಶ್ವ ರಂಗಭೂಮಿ ದಿನಾಚರಣೆ 2025’ ಪ್ರಯುಕ್ತ ಪ್ರಜ್ಞಾನಂ ಟ್ರಸ್ಟ್ ಉಡುಪಿ ಪ್ರಸ್ತುತ ಪಡಿಸುವ ವಿದುಷಿ ಸಂಸ್ಕೃತಿ ಪ್ರಭಾಕರ್ ನೃತ್ಯ ಸಂಯೋಜನೆ ಮತ್ತು ಅಭಿನಯದ ಏಕವ್ಯಕ್ತಿ ನಾಟಕ ‘ಹೆಜ್ಜೆಗೊಲಿದ ಬೆಳಕು’ ಎರಡನೇ ಪ್ರದರ್ಶನವನ್ನು ದಿನಾಂಕ 27 ಮಾರ್ಚ್ 2025ರಂದು ಸಂಜೆ 6-30 ಗಂಟೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ರವೀಂದ್ರ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಸುಧಾ ಆಡುಕಳ ರಂಗ ಪಠ್ಯ, ಗಣೇಶ್ ರಾವ್ ಎಲ್ಲೂರು ರಂಗ ವಿನ್ಯಾಸ, ಸಂಗೀತ ಮತ್ತು ನಿರ್ದೇಶನ ಹಾಗೂ ಜಿ.ಪಿ. ಪ್ರಭಾಕರ ತುಮರಿ ಇವರು ಈ ನೃತ್ಯ ಪ್ರಸ್ತುತಿಯ ನಿರ್ಮಾಣ ಮಾಡಿರುತ್ತಾರೆ.

Read More

ಉಡುಪಿ : ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಮತ್ತು ಯಕ್ಷಗಾನ ಕಲಾರಂಗ (ರಿ.) ಉಡುಪಿ ಇದರ ವತಿಯಿಂದ ಹಾಗೂ ಭೀಮ ಗೋಲ್ಡ್ ಪ್ರೈ. ಲಿ. ಬೆಂಗಳೂರು ಇದರ ಪ್ರಾಯೋಜಕತ್ವದಲ್ಲಿ ನಡೆಯಲಿರುವ ಒಂದು ವಾರದ ‘ಯಕ್ಷ ಶಿಕ್ಷಣ ಸನಿವಾಸ ಶಿಬಿರ – 2025’ವು ದಿನಾಂಕ 22 ಮಾರ್ಚ್ 2025ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು. ಈ ಶಿಬಿರವನು ಅಂಬಲಪಾಡಿ ದೇವಳದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳರು ಉದ್ಘಾಟಿಸಿ “ಯಕ್ಷಗಾನ ಶಿಕ್ಷಣ, ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕೆಗೆ ಪೂರಕವಾಗಿ ಧನಾತ್ಮಕ ಪರಿಣಾಮ ಬೀರುತ್ತದೆ” ಎಂದರು. ಅಧ್ಯಕ್ಷತೆ ವಹಿಸಿದ್ದ ಯಕ್ಷಗಾನ ಅಕಾಡಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು “ಯಕ್ಷಗಾನ ಪರಿಪೂರ್ಣ ಕಲಾಪ್ರಕಾರವಾಗಿದ್ದು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗುತ್ತದೆ” ಎಂದರು. ಭೀಮ ಗೋಲ್ಡ್ ಪ್ರೈ.ಲಿ. ನ ರಾಘವೇಂದ್ರ ಭಟ್ ಹಾಗೂ ಗುರುಪ್ರಸಾದ್ ಅಭ್ಯಾಗತರಾಗಿ ಭಾಗವಹಿಸಿದ್ದರು. ಡಾ. ಕಾವ್ಯಾ ನರೇಂದ್ರ ಬಲ್ಲಾಳ, ಶಿಬಿರದ ನಿರ್ದೇಶಕ ಗುರು ಬನ್ನಂಜೆ ಸಂಜೀವ ಸುವರ್ಣ, ನರಸಿಂಹ…

Read More

ಮಡಿಕೇರಿ : ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಕೊಡಗು ಜಿಲ್ಲಾ ಘಟಕ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭವು ದಿನಾಂಕ 23 ಮಾರ್ಚ್ 2025ರ ಭಾನುವಾರದಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆಯಿತು. ಘಟಕವನ್ನು ಕಾಸರಗೋಡಿನ ಕನ್ನಡ ಭವನದ ಸ್ಥಾಪಕಾಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಕನ್ನಡ ಭವನದ ಕೊಡಗು ಜಿಲ್ಲಾಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ವಹಿಸಿದ್ದರು. ಕರ್ನಾಟಕ ಜಾನಪದ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಬಿ. ಬಿ. ಅನಂತಶಯನ, ಹಿರಿಯ ಸಾಹಿತಿ ಭಾರದ್ವಾಜ ಕೆ. ಆನಂದತೀರ್ಥ, ಪ್ರಾಂಶುಪಾಲ ರಾಜೇಶ್ಚಂದ್ರ ಕೆ. ಪಿ. ಮುಖ್ಯ ಅತಿಥಿಗಳಾಗಿದ್ಧರು. ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷರಾದ ಸಾಹಿತಿ ವಿರಾಜ್ ಅಡೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಅಜ್ಜಿಕುಟ್ಟೀರ ಭವ್ಯ ಬೋಪಣ್ಣ ಅವರ ‘ದೇವ ನೇರ ಬೀರ್ಯ’ ಹಾಗೂ ತೆನ್ನೀರಾ ಟೀನಾ ಚಂಗಪ್ಪ ಅವರ…

Read More

ನವ ದೆಹಲಿ : ಖ್ಯಾತ ಸಾಹಿತಿ ವಿನೋದ್ ಕುಮಾರ್ ಶುಕ್ಲಾ ಇವರು ಪ್ರಸಕ್ತ ಸಾಲಿನ ಭಾರತದ ಅತ್ಯುನ್ನತ ಸಾಹಿತ್ಯ ಗೌರವವಾದ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. 88 ವರ್ಷದ ವಿನೋದ್ ಕುಮಾ‌ರ್ ಶುಕ್ಲಾ ಅವರು ಭಾರತರತ್ನ ಪಡೆದ ಛತ್ತೀಸ್‌ಗಢದ ಮೊದಲ ಲೇಖಕರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಸಿದ್ಧ ಕವಿ, ಸಣ್ಣ ಕಥೆಗಾರ ಮತ್ತು ಪ್ರಬಂಧಕಾರರಾದ ವಿನೋದ್ ಶುಕ್ಲಾ ಈ ಪ್ರಶಸ್ತಿಯನ್ನು ಪಡೆದ 12ನೇ ಹಿಂದಿ ಸಾಹಿತಿಯೂ ಹೌದು. ವಿನೋದ್ ಶುಕ್ಲಾ ಅವರು 11 ಲಕ್ಷ ರೂ. ನಗದು ಬಹುಮಾನ, ಕಂಚಿನ ಸರಸ್ವತಿ ಪ್ರತಿಮೆ ಮತ್ತು ಪಶಸ್ತಿ ಪತ್ರವನ್ನು ಪಡೆಯಲಿದ್ದಾರೆ.

Read More

ಕಾಂತಾವರ: ಕಾಂತಾವರ ಕನ್ನಡ ಸಂಘದ ‘ಮುದ್ದಣ ಸಾಹಿತ್ಯೋತ್ಸವ’ ಕಾರ್ಯಕ್ರಮವು ದಿನಾಂಕ 23 ಮಾರ್ಚ್ 2025ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿಯ ಶಿವರಾಮ ಕಾರಂತ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಜಾನಪದ ವಿದ್ವಾಂಸರಾದ ಡಾ. ಗಣನಾಥ ಎಕ್ಕಾರು ಮಾತನಾಡಿ “ಜಾಗತೀಕರಣದ ಪ್ರಭಾವದಿಂದಾಗಿ ಯುವಜನರ ಓದಿನ ಆಯ್ಕೆ ರೀತಿ ಬದಲಾಗಿದೆ. ಏನು ಕೂಡಾ ಬರೆಯಬಹುದೆನ್ನುವ ಸ್ಥಿತಿಗೆ ತಲುಪಿರುವ ಈ ಸಂಕೀರ್ಣ ಸಂದರ್ಭದಲ್ಲಿ ಕನ್ನಡವನ್ನು ಕಟ್ಟಿ ಬೆಳೆಸುವ ಹೊಣೆಗಾರಿಕೆಯನ್ನು ಮುಂದಿನ ತಲೆಮಾರಿಗೆ ವರ್ಗಾಯಿಸುವ ಸವಾಲು ನಮ್ಮ ಮುಂದಿದೆ” ಎಂದು ಹೇಳಿದರು. ಕನ್ನಡ ಸಂಘದ ಅಧ್ಯಕ್ಷರಾದ ಡಾ. ನಾ. ಮೊಗಸಾಲೆಯವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸುತ್ತಾ ಕನ್ನಡ ಕೆಲಸವನ್ನು ಮಾಡುವ ಸಂಘವನ್ನು ಸರಕಾರ ಕಡೆಗಣಿಸುತ್ತಿರುವುದಕ್ಕೆ ಖೇದ ವ್ಯಕ್ತಪಡಿಸಿದರು.ಕಲಬುರ್ಗಿಯ ಶ್ರೀಮತಿ ಕಾವ್ಯಶ್ರೀ ಮಹಾಗಾಂವಕರ್ ಹಾಗೂ ಉಡುಪಿಯ ಶ್ರೀಮತಿ ಪೂರ್ಣಿಮಾ ಸುರೇಶ್ ಇವರಿಗೆ ‘ಮುದ್ದಣ ಕಾವ್ಯ ಪ್ರಶಸ್ತಿ’ಯನ್ನು ಹಾಗೂ ಮಂಗಳೂರಿನ ಶ್ರೀ ಸರ್ಪಂಗಳ ಈಶ್ವರ ಭಟ್ ಇವರಿಗೆ ‘ಗಮಕ ಕಲಾ ಪ್ರವಚನ ಪ್ರಶಸ್ತಿ’, ಶ್ರೀ ಯಜ್ಞೇಶ ಆಚಾರ್ಯ ಸುರತ್ಕಲ್ ಅವರಿಗೆ ‘ಗಮಕ ಕಲಾ…

Read More