Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು: ಎಸ್.ಎಲ್. ಭೈರಪ್ಪ ಸಾಹಿತ್ಯ ಪ್ರತಿಷ್ಠಾನ ಹಮ್ಮಿಕೊಂಡಿದ್ದ ‘ಎಸ್. ಎಲ್. ಭೈರಪ್ಪ ಸಾಹಿತ್ಯ ಪ್ರತಿಷ್ಠಾನ ಪ್ರಶಸ್ತಿ’ ಪ್ರದಾನ ಸಮಾರಂಭವು ದಿನಾಂಕ 19 ಜನವರಿ 2025ರ ಭಾನುವಾರದಂದು ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದ ಮರಾಠಿ ಅನುವಾದಕಿ ಹಾಗೂ ಲೇಖಕಿಯಾದ ಉಮಾ ಕುಲಕರ್ಣಿ ಮಾತನಾಡಿ “ಕಾದಂಬರಿಕಾರ ಎಸ್. ಎಲ್. ಭೈರಪ್ಪ ಅವರ ಬರಹದ ಶೈಲಿ ಭಿನ್ನವಾಗಿದೆ. ಇದರಿಂದಾಗಿಯೇ ಅವರಿಗೆ ಮರಾಠಿಯಲ್ಲಿ ದೊಡ್ಡ ಓದುಗರ ವಲಯವಿದೆಯೇ ಹೊರತು, ಮಹಾರಾಷ್ಟ್ರದಲ್ಲಿ ಆರೆಸ್ಸೆಸ್ (ರಾಷ್ಟ್ರೀಯ ಸ್ವಯಂಸೇವಕ ಸಂಘ) ಪ್ರಬಲವಾಗಿರುವುದು ಕಾರಣವಲ್ಲ. ಮಹಾರಾಷ್ಟ್ರದಲ್ಲಿ ಆರೆಸ್ಸೆಸ್ ಪ್ರಬಲವಾಗಿರುವುದರಿಂದ ಅಲ್ಲಿ ಭೈರಪ್ಪ ಅವರ ಕೃತಿಗಳಿಗೆ ಹೆಚ್ಚು ಬೇಡಿಕೆಯಿದೆಯೆಂದು ಕನ್ನಡದ ಕೆಲ ಸಾಹಿತಿಗಳು ಅಭಿಪ್ರಾಯಪಟ್ಟಿದ್ದರು. ಆದರೆ ವಾಸ್ತವ ಬೇರೆಯಾಗಿದ್ದು, ಓದುಗ ಬಳಗ ಹೆಚ್ಚಲು ಅವರ ಶೈಲಿಯೇ ಮುಖ್ಯ ಕಾರಣ. ಪುಣೆಗೆ ಅವರು ಬರುತ್ತಾರೆಂದು ತಿಳಿದರೆ ದೊಡ್ಡ ಸಂಖ್ಯೆಯಲ್ಲಿ ಜನರು ಅವರನ್ನು ನೋಡಲು ಕಾದು ಕುಳಿತಿರುತ್ತಾರೆ” ಎಂದರು. ಲೇಖಕಿ ಸಹನಾ ವಿಜಯಕುಮಾರ್ ಮಾತನಾಡಿ “ಭೈರಪ್ಪ ಅವರನ್ನು ಮರಾಠಿ ಓದುಗರಿಗೆ…
ಇವರು ಕೃಪಾ ದೇವರಾಜ್, ಕೊಡಗಿನ ತಿತಿಮತಿಯ ಮೂಡಗದ್ದೆ ಶ್ರೀ ಈರಪ್ಪ ಹಾಗೂ ಶ್ರೀಮತಿ ಅನಸೂಯಾ ದಂಪತಿಗಳ ಪುತ್ರಿಯಾಗಿದ್ದಾರೆ. ಪ್ರಾಥಮಿಕ ಪ್ರೌಢ ವಿದ್ಯಾಭ್ಯಾಸವನ್ನು ತಿತಿಮತಿಯಲ್ಲಿ ಮುಗಿಸಿ ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಬಿ.ಕಾಂ. ಪದವಿಯನ್ನೂ, ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ಎಂ.ಕಾಂ. ಪದವಿಯನ್ನು ಪಡೆದಿರುತ್ತಾರೆ. ಮುಂದೆ ಪೋಸ್ಟ್ ಗ್ರಾಜ್ಯುಯೇಶನ್ ಡಿಪ್ಲೋಮಾ ಇನ್ ಹ್ಯೂಮನ್ ರಿಸೋರ್ಸ್ ಹಾಗೂ ಮ್ಯಾನೇಜ್ಮೆಂಟ್ ಡಿಪ್ಲೊಮಾ ಇನ್ ಅಗ್ರಿಕಲ್ಚರಲ್ ಎಕ್ಸ್ಟೆನ್ಷನ್ ಸರ್ವೀಸಸ್ ಫಾರ್ ಇನ್ಪುಟ್ ಡೀಲರ್ಸ್ನಲ್ಲಿ ಕೊಡಗಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಪ್ರಸ್ತುತ ಟಾಟಾ ಕಾಫಿ ಕಂಪನಿ ಮಡಿಕೇರಿಯ ತೋಟಗಾರಿಕಾ ವಿತರಣಾ ವಿಭಾಗದಲ್ಲಿ ಬ್ರಾಂಚ್ ಇನ್ ಚಾರ್ಜ್ ಆಗಿರುವ ಇವರು ನಿರೂಪಣೆ, ಚಾರಣ, ಫೋಟೋಗ್ರಫಿ, ಪ್ರಕೃತಿ ನಡಿಗೆಯನ್ನು ಹವ್ಯಾಸವಾಗಿಸಿಕೊಂಡಿದ್ದಾರೆ. ಇವರು ತಮ್ಮ 9ನೆಯ ತರಗತಿಯಲ್ಲಿ ಓದುತ್ತಿದ್ದಾಗ ಶಕ್ತಿ ದಿನಪತ್ರಿಕೆಯಲ್ಲಿ ಇವರ ಮಕ್ಕಳ ಕಥೆ ಪ್ರಕಟವಾಗಿತ್ತು. ಬಳಿಕ ಸುಧಾ, ಮಂಗಳ, ವಿಜಯ ಕರ್ನಾಟಕ ಇನ್ನಿತರ ಪತ್ರಿಕೆಗಳಲ್ಲಿ ಕಥೆ ಕವನ ಪ್ರಕಟವಾಗಿವೆ. ದ್ವಿತೀಯ ಬಿ.ಕಾಂ.ನಲ್ಲಿ ಓದುತ್ತಿದ್ದಾಗ, ಮೈಸೂರಿನ ಸಾಹಿತ್ಯ ಸಮ್ಮೇಳನದಲ್ಲಿ ಕವನ ವಾಚನ ಮಾಡಿದ್ದಾರೆ. ರಾಜ್ಯ…
ಉಡುಪಿ : ಭಾವನಾ ಫೌಂಡೇಶನ್ (ರಿ.) ಹಾವಂಜೆ ಹಾಗೂ ಭಾಸಗ್ಯಾಲರಿ ಮತ್ತು ಸ್ಟುಡಿಯೋ ಸಂಯೋಜಿಸುತ್ತಿರುವ ಜನಪದ ಕಲೆಗಳ ಸರಣಿಯ ಹದಿನಾರು ಮತ್ತು ಹದಿನೇಳನೆಯ ಕಾರ್ಯಕ್ರಮದಲ್ಲಿ ‘ಸಾಂಝಿ ಕಲೆ’ಯ ಕಾರ್ಯಾಗಾರವನ್ನು ದಿನಾಂಕ 25 ಮತ್ತು 26 ಜನವರಿ 2025ರಂದು ಉಡುಪಿಯ ಬಡಗುಪೇಟೆಯಲ್ಲಿ ಆಯೋಜಿಸಲಾಗುತ್ತಿದೆ. ದಿನಾಂಕ 25 ಜನವರಿ 2025ರಂದು ‘ಸಾಂಝಿ’ ಮತ್ತು ದಿನಾಂಕ 26 ಜನವರಿ 2025ರಂದು ‘ಜಲ್ ಸಾಂಝಿ’ ಕಲೆಯ ಬಗ್ಗೆ ಬೆಳಗ್ಗೆ 9-30 ಗಂಟೆಯಿಂದ ಸಂಜೆ 4-00 ಗಂಟೆ ತನಕ ನಡೆಯಲಿದ್ದು, ರಾಷ್ಟ್ರೀಯ ಪ್ರಶಸ್ತಿ ವಿಜೇತ ಶ್ರೀ ರಾಮ್ ಸೋನಿ ಇವರು ಈ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ.
ಕೊಡಗು : ಕೊಡಗಿನ ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಕೊಡವ ಸಮಾಜದಲ್ಲಿ ದಿನಾಂಕ 19 ಜನವರಿ 2025ರಂದು ಚೆಕ್ಕೇರ ಕುಟುಂಬದ ಆತಿಥ್ಯದ 23ನೇ ವರ್ಷದ ಕೊಡವ ಕೌಟುಂಬಿಕ ಕ್ರಿಕೆಟ್ ಪಂದ್ಯಾವಳಿಯ ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ ಪಂಚಭಾಷಾ ಸಾಹಿತಿ ಉಳುವಂಗಡ ಕಾವೇರಿ ಉದಯ ಇವರು ಕೊಡವ ಭಾಷೆಯಲ್ಲಿ ರಚಿಸಿರುವ ಹನ್ನೊಂದು ಪ್ರಕಾರದ ಕವನವನ್ನು ಒಳಗೊಂಡಿರುವ ‘ಪಾನೆಲ್ಚಿಲ್ ಪೊನ್ನೆಳ್ತ್’ ಎಂಬ ಕವನ ಸಂಕಲನವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣರು ಲೋಕಾರ್ಪಣೆ ಮಾಡಿದರು. ಚೆಕ್ಕೇರ ಕಪ್ಪ್ ಪಂದ್ಯಾವಳಿ ಅಧ್ಯಕ್ಷರಾದ ಚಂದ್ರಪ್ರಕಾಶ್ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯ ಸರಕಾರದ ಮುಖ್ಯ ವಿದ್ಯುತ್ ಪರಿವೀಕ್ಷಕರಾದ ತೀತಿರ ರೋಷನ್ ಅಪ್ಪಚ್ಚು, ಕೊಡವ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷರಾದ ಕೀರ್ತಿಯಂಡ ಕಾರ್ಸನ್ ಕಾರ್ಯಪ್ಪ, ಅಂಜಿಗೇರಿ ನಾಡ್ ತಕ್ಕರಾದ ಚೆಕ್ಕೇರ ರಾಜೇಶ್, ಚೆಕ್ಕೇರ ಕುಟುಂಬದ ಅಧ್ಯಕ್ಷರಾದ ಕಾಶಿ ಕಾಳಯ್ಯ ಮತ್ತು ಪುಸ್ತಕ ದಾನಿ ಉಳುವಂಗಡ ಕಮಲಾಕ್ಷಿ ತರುಂಬಯ್ಯ ಉಪಸ್ಥಿತರಿದ್ದರು. ಲೇಖಕಿ ಉಳುವಂಗಡ ಕಾವೇರಿ…
ಪೆರ್ಮುದೆ : ಶ್ರೀ ಮಹಾದೇವಿ ಯಕ್ಷ ನಾಟ್ಯಾಲಯ ಬಜ್ಪೆ ಪೆರ್ಮುದೆ ಇದರ ತೃತೀಯ ವರ್ಷದ ವಾರ್ಷಿಕೋತ್ಸವ ಮತ್ತು ಯಕ್ಷಗಾನ ಗೌರವಾರ್ಪಣೆ ಕಾರ್ಯಕ್ರಮವನ್ನು ದಿನಾಂಕ 25 ಜನವರಿ 2025ರಂದು ಸಂಜೆ 4-00 ಗಂಟೆಗೆ ಪೆರ್ಮುದೆ ಶ್ರೀ ಶಾರದಾ ಯಕ್ಷಗಾನ ಮಂಡಳಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀ ಶಾರದಾ ಯಕ್ಷಗಾನ ಮಂಡಳಿಯ ಅಧ್ಯಕ್ಷರಾದ ಶ್ರೀ ಉಲ್ಲಾಸ್ ಆರ್. ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾ ಪರ್ವದಲ್ಲಿ ಖ್ಯಾತ ಹಿರಿಯ ಮದ್ದಳೆ ಗಾರರಾದ ಶ್ರೀ ಮಣಿ ಮುಂಡ ಸುಬ್ರಹ್ಮಣ್ಯ ಶಾಸ್ತ್ರಿ ಮತ್ತು ಗುರುಗಳಾದ ಶ್ರೀ ರಾಜೇಶ್ ಕಟೀಲು ಇವರಿಗೆ ಗುರುವಂದನೆ ಮಾಡಿ ಗೌರವಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಶ್ರೀ ಮಹಾದೇವಿ ಯಕ್ಷ ನಾಟ್ಯಾಲಯದ ಸದಸ್ಯರಿಂದ ‘ಶ್ರೀ ದೇವಿ ಮಹಿಷ ಮರ್ದಿನಿ’ ಎಂಬ ಪ್ರಸಂಗದ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.
ಬೆಂಗಳೂರು : ಕನ್ನಡ ಮತ್ತು ಮಲೆಯಾಳಂ ನಡುವೆ ಸೇತುವೆಯಾಗಿದ್ದ ಕೇಂದ್ರ ಸಾಹಿತ್ಯ ಅಕಾಡಮಿ ಪುರಸ್ಕೃತ ಕೆ.ಕೆ. ಗಂಗಾಧರನ್ ಇವರು ದಿನಾಂಕ 19 ಜನವರಿ 2025ರಂದು ಈ ಲೋಕವನ್ನಗಲಿದರು. ಇವರ ನಿಧನದಿಂದ ಅನುವಾದ ಕ್ಷೇತ್ರಕ್ಕೆ ದೊಡ್ಡ ನಷ್ಟವಾಗಿದೆ. 1949ರ ಮಾರ್ಚ್ 10ರಂದು ಕೇರಳದ ಕಾಸರಗೋಡು ಜಿಲ್ಲೆಯ ಪಾತನಡ್ಕ ಎಂಬ ಹಳ್ಳಿಯಲ್ಲಿ ಜನಿಸಿದ್ದ ಗಂಗಾಧರನ್ ಬಾಲ್ಯವನ್ನು ಕೊಡಗಿನ ಸೋಮವಾರಪೇಟೆಯ ಸಮೀಪದ ಕಬ್ಬಿಣಸೇತುವೆ ಎಂಬಲ್ಲಿ ಕಳೆದರು. ಕಾಜೂರು, ಸೋಮವಾರಪೇಟೆಗಳಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ನಡೆಸಿ, ಪುತ್ತೂರಿನ ವಿವೇಕಾನಂದ ಕಾಲೇಜಿನಿಂದ ಬಿ.ಎಸ್.ಸಿ. ಪದವಿ ಪಡೆದರು. 1970ರಲ್ಲಿ ಹಾಸನದ ಕೊಥಾರಿ ಕಾಫಿ ಕ್ಯೂರಿಂಗ್ ವರ್ಕ್ಸ್ ನಲ್ಲಿ ವೃತ್ತಿಯನ್ನು ಆರಂಭಿಸಿದ ಗಂಗಾಧರನ್ 1974ರಲ್ಲಿ ಅಂಚೆ ಇಲಾಖೆಯ ರೈಲ್ವೆ ಮೇಲ್ ಸರ್ವಿಸ್ ವಿಭಾಗದಲ್ಲಿ ಉದ್ಯೋಗ ಪಡೆದರು. ಅರಸೀಕೆರೆ, ತುಮಕೂರು, ಮೈಸೂರು, ಮಡಿಕೇರಿ ಹಾಗೂ ಬೆಂಗಳೂರುಗಳಲ್ಲಿ ಕೆಲಸ ಮಾಡಿ, 2009ರಲ್ಲಿ ನಿವೃತ್ತಿ ಹೊಂದಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಕನ್ನಡ ಮಾಧ್ಯಮದಲ್ಲಿ ಕಲಿತ ಗಂಗಾಧರನ್ ರ, ಮನೆ ಮಾತು ಮಲಯಾಳಂ. ಅಂಚೆ ವಿಭಾಗದ ಬಿಡುವಿಲ್ಲದ ಕೆಲಸಗಳ ನಡುವೆ…
ಮಂಗಳೂರು : ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಗಳು ಬಂಟ್ಸ್ ಹಾಸ್ಟಲ್ ಮಂಗಳೂರು ಇದರ ಸಹಯೋಗದೊಂದಿಗೆ ಜರ್ನಿ ಥೇಟರ್ ಗ್ರೂಪ್ (ರಿ.) ಮಂಗಳೂರು ಇವರು ಪ್ರಸ್ತುತ ಪಡಿಸುವ ಪದವಿ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ‘ರಂಗ ಸಂಗೀತ ಕಾರ್ಯಾಗಾರ’ವನ್ನು ದಿನಾಂಕ 15 ಮತ್ತು 16 ಫೆಬ್ರವರಿ 2025ರಂದು ಶ್ರೀ ರಾಮಕೃಷ್ಣ ಪದವಿ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9380412518 ಸಂಖ್ಯೆಯನ್ನು ಸಂಪರ್ಕಿಸಿರಿ.
ಶಿವಮೊಗ್ಗ : ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಫ್ರೆಂಡ್ಸ್ ಸೆಂಟರ್ ಸಹಯೋಗದಲ್ಲಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ 233ನೇ ತಿಂಗಳ ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮವನ್ನು ದಿನಾಂಕ 19 ಜನವರಿ 2025ರಂದು ಗೋಪಾಲ ಫ್ರೆಂಡ್ಸ್ ಸೆಂಟರ್ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸೂಡಾ ಅಧ್ಯಕ್ಷರಾದ ಎಚ್.ಎಸ್. ಸುಂದರೇಶ್ “ಸಮಾಜದಲ್ಲಿನ ವಾಸ್ತವತೆಯನ್ನು ಕವಿತೆ, ಹನಿಗವನ, ಕಥೆಗಳ ಮೂಲಕ ವಿಶ್ಲೇಷಿಸಿ ಪರಸ್ಪರ ಚರ್ಚಿಸುವಂತಹ ಕಾರ್ಯಕ್ಕೆ ಸಾಹಿತ್ಯ ಹುಣ್ಣಿಮೆ ಪ್ರೇರಣೆಯಾಗಿದೆ. ನಗರದ ವಿವಿಧ ಬಡಾವಣೆಗಳಲ್ಲಿ ಹಾಗೂ ಹಳ್ಳಿಗಳಲ್ಲಿ ಸಾಹಿತ್ಯ ಹುಣ್ಣಿಮೆ ಮೂಲಕ ಸಾಹಿತ್ಯವನ್ನು ಪಸರಿಸುವ ಕಾರ್ಯ ನಡೆಯುತ್ತಿರುವುದು ಶ್ಲಾಘನೀಯ. ಸಾಹಿತ್ಯ ಸಮ್ಮೇಳನದಲ್ಲಿ ಚರ್ಚಿಸುತ್ತಿರುವ ವಿಚಾರಗಳು ಸರ್ಕಾರದ ಆಡಳಿತವನ್ನು ಸದಾ ಎಚ್ಚರಿಸುತ್ತಿದ್ದು, ಸಮಾಜಕ್ಕೆ ಪೂರಕ ಶಕ್ತಿಯಾಗಿ ನಿಲ್ಲಲಿದೆ. ಮಲೆನಾಡಿನ ಸಾಹಿತಿಗಳು ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ್ದಾರೆ. ವಿದೇಶದಲ್ಲಿರುವ ಕನ್ನಡಿಗರು ರಾಜ್ಯೋತ್ಸವ ಕಾರ್ಯಕ್ರಮಗಳನ್ನು ತಮ್ಮ ದೇಶಗಳಲ್ಲಿ ಆಯೋಜಿಸುವ ಮೂಲಕ ನಾಡಿನ ಸಾಂಸ್ಕೃತಿಕ ವೈವಿಧ್ಯತೆಗಳನ್ನು ಮತ್ತಷ್ಟು ಜನಪ್ರಿಯಗೊಳಿಸಿದ್ದಾರೆ” ಎಂದು ಹೇಳಿದರು. ಜಿಲ್ಲಾ ಕನ್ನಡ ಸಾಹಿತ್ಯ…
ಉಪ್ಪಿನಕುದ್ರು : ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ (ರಿ.) ಮತ್ತು ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿ ಉಪ್ಪಿನಕುದ್ರು ಇವರ ಜಂಟಿ ಆಶ್ರಯದಲ್ಲಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ 10ನೇ ವಾರ್ಷಿಕೋತ್ಸವ ಹಾಗೂ ‘ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ -2025’ ಪ್ರದಾನ ಸಮಾರಂಭವು ದಿನಾಂಕ 19 ಜನವರಿ 2025ರಂದು ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ನಡೆಯಿತು. ಈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಡಾ. ಹರಿಕೃಷ್ಣ ಪುನರೂರುರವರು ಮಾತನಾಡಿ “ಜಾನಪದ ಕ್ಷೇತ್ರಕ್ಕೆ ಉಪ್ಪಿನಕುದ್ರು ಗೊಂಬೆಯಾಟ ತಂಡದ ಕೊಡುಗೆ ಅಪಾರ. ಇಂದು 6ನೇ ತಲಾಂತರದಲ್ಲಿ ನಡೆಯುತ್ತಿರುವ ಈ ಕಲೆಯನ್ನು ನಾವೆಲ್ಲರೂ ಸೇರಿ ಉಳಿಸಬೇಕು” ಎಂದು ನುಡಿದರು. ಹಾಲ್ಮಕ್ಕಿ ಶ್ರೀ ಜಟ್ಟಿಗೇಶ್ವರ ಭಜನಾ ಮಂಡಳಿ ಗಂಗೊಳ್ಳಿ ಇವರ ವಿಷ್ಣು ಸಹಸ್ರನಾಮದೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಗಂಗೊಳ್ಳಿಯ ಡಾ. ಕಾಶೀನಾಥ್ ಪೈಯವರು ಪ್ರಾರ್ಥಿಸಿದರು. ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ರವರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಸಮಾರಂಭವನ್ನು ಉದ್ಘಾಟಿಸಿದ ಕರ್ನಾಟಕ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ…
ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ಪಾಕ್ಷಿಕ ತಾಳಮದ್ದಳೆ ಹಾಗೂ ಇತ್ತೀಚೆಗೆ ನಿಧನರಾದ ಹಿರಿಯ ಯಕ್ಷಗಾನ ಕಲಾವಿದ ಪಕಳಕುಂಜ ಶ್ಯಾಮ್ ಭಟ್ ಇವರಿಗೆ ನುಡಿನಮನ ಕಾರ್ಯಕ್ರಮವು ದಿನಾಂಕ 18 ಜನವರಿ 2025ರಂದು ಶ್ರೀ ಆಂಜನೇಯ ಮಂತ್ರಾಲಯದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಭಾಸ್ಕರ್ ಬಾರ್ಯ ಮತ್ತು ಕಲಾವಿದ ಜಯರಾಮ ದೇವಸ್ಯ ನುಡಿನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ದಿವಂಗತರ ಸಹೋದರಿಯರು, ಬಂಧುಗಳು ಉಪಸ್ಥಿತರಿದ್ದರು. ಬಳಿಕ ‘ಭೀಮ ದ್ರೌಪದೀ ಸ೦ವಾದ – ವಿದುರ ಭಕ್ತಿ’ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಆನಂದ ಸವಣೂರು, ಶ್ರೀಪತಿ ಭಟ್ ಉಪ್ಪಿನಂಗಡಿ, ಕುಮಾರಿ ಶರಣ್ಯ ನೆತ್ತೆರ್ಕೆರೆ ಸಹಕರಿಸಿದರು. ಮುಮ್ಮೇಳದಲ್ಲಿ ಜಯರಾಮ ದೇವಸ್ಯ (ಭೀಮ), ಭಾಸ್ಕರ್ ಬಾರ್ಯ (ದ್ರೌಪದೀ ಮತ್ತು ಶ್ರೀ ಕೃಷ್ಣ), ತಾರಾನಾಥ ಸವಣೂರು (ವಿಧುರ) ಸಹಕರಿಸಿದರು. ಟಿ. ರಂಗನಾಥ ರಾವ್ ಸ್ವಾಗತಿಸಿ, ವಂದಿಸಿದರು.