Author: roovari

ಮಂಗಳೂರು : ಸಪ್ತಕ ಬೆಂಗಳೂರಿನ ನೇತೃತ್ವದಲ್ಲಿ ಚಿರಂತನ ಚಾರಿಟೇಬಲ್ ಟ್ರಸ್ಟ್ ಸುರತ್ಕಲ್ ಹಾಗೂ ರಾಮಕೃಷ್ಣ ಮಠ ಮಂಗಳೂರು ಇವರ ಸಹಯೋಗ ಹಾಗೂ ಮಂಗಳೂರಿನ ಹತ್ತಾರು ಹಿಂದೂಸ್ಥಾನಿ ಸಂಗೀತ ಸಂಸ್ಥೆಗಳ ಸಹಕಾರದಲ್ಲಿ ದಿನಾಂಕ 13 ಏಪ್ರಿಲ್ 2025ರಂದು ಮಂಗಳೂರಿನ ರಾಮಕೃಷ್ಣ ಮಠದ ಸಭಾಭವನದಲ್ಲಿ ದೇಶ ವಿದೇಶಗಳಲ್ಲಿ ತಮ್ಮ ವಿಶಿಷ್ಟ, ವಿಶೇಷ ತಬಲಾ ವಾದನದಿಂದ ಪ್ರಖ್ಯಾತರಾದ ತಮ್ಮ ಉದಾತ್ತ ನಡೆನುಡಿಯಿಂದ ಅಜಾತ ಶತ್ರುವಾಗಿಯೂ ಅಪಾರ ಅಭಿಮಾನಿಗಳನ್ನು ಪಡೆದಿರುವ ಮಂಗಳೂರಿನವರೇ ಆದ ಪಂಡಿತ ಓಂಕಾರ ಗುಲ್ವಾಡಿ ಇವರನ್ನ ಪ್ರೀತಿ, ವಿಶ್ವಾಸ, ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು. ಪ್ರಾರಂಭದಲ್ಲಿ ಪ್ರತಿಭಾವಂತ ಯುವ ಕಲಾವಿದರಾದ ಅಂಕುಶ ನಾಯಕ ಇವರ ಸಿತಾರ್ ಹಾಗೂ ಕಾರ್ತಿಕ ಭಟ್ಟ ಇವರ ಕೊಳಲು ವಾದನ ಜುಗಲ್ಬಂದಿಗೆ ಹೇಮಂತ ಜೋಶಿಯವರ ತಬಲಾ ವಾದನ ಹಾಲು ಜೇನಿನಂತೆ ಸೇರಿ ಶೋತೃಗಳ ಮನ ಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು. ನಂತರ ಧಾರವಾಡದ ಪಂಡಿತ ವೆಂಕಟೇಶಕುಮಾರ ಇವರ ಅಧ್ಯಕ್ಷತೆಯಲ್ಲಿ ಓಂಕಾರ ಗುಲ್ವಾಡಿ ಇವರನ್ನು ಹುಟ್ಟೂರಿನ ಸಮಸ್ತ ಕಲಾಭಿಮಾನಿಗಳ ಪರವಾಗಿ ಒಂದು ಅಭೂತಪೂರ್ವವಾದ ಸನ್ಮಾನ ಕಾರ್ಯಕ್ರಮ…

Read More

ಬೆಂಗಳೂರು : ಸ್ಟೇಜ್ ಬೆಂಗಳೂರು ಇವರ ವತಿಯಿಂದ ಮಕ್ಕಳ ಕಾರ್ಯಕ್ರಮ ಹಾಡು, ನೃತ್ಯ ಮತ್ತು ನಾಟಕ ಪ್ರದರ್ಶನವನ್ನು ದಿನಾಂಕ 27 ಏಪ್ರಿಲ್ 2025ರಂದು ಸಂಜೆ 4-30 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ನಯನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಲೀಲಾ ಮಣ್ಣಾಲ ಇವರು ರಚಿರುವ ಮಹೇಶ ಕುಮಾರ್ ಇವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ‘ಪುಣ್ಯಕೋಟಿ ಎಂಬ ಗೋವು’ ಎಂಬ ನಾಟಕ ಮಕ್ಕಳಿಂದ ಪ್ರಸ್ತುತಗೊಳ್ಳಲಿದೆ.

Read More

ಸಿದ್ಧಾಪುರ : ಗೌತಮ ಹೆಗಡೆ ಮುಗದೂರು ಇವರ ಸಂಯೋಜನೆಯಲ್ಲಿ ದಿಗ್ಗಜ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ಶನೀಶ್ವರ ಮಹಾತ್ಮೆ’ ಅದ್ದೂರಿ ಪೌರಾಣಿಕ ಯಕ್ಷಗಾನ ಪ್ರದರ್ಶನವನ್ನು ದಿನಾಂಕ 28 ಏಪ್ರಿಲ್ 2025ರಂದು ಸಂಜೆ 6-00 ಗಂಟೆಗೆ ಸಿದ್ಧಾಪುರದ ಸಿದ್ಧಿ ವಿನಾಯಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ. ಹಿಮ್ಮೇಳದಲ್ಲಿ ಭಾಗವತರು – ಶ್ರೀ ರಾಮಕೃಷ್ಣ ಹೆಗಡೆ ಹಿಲ್ಲೂರು, ಮದ್ದಳೆ – ಶ್ರೀ ಪರಮೇಶ್ವರ ಭಂಡಾರಿ ಕರ್ಕಿ, ಚಂಡೆ – ಶ್ರೀ ಗಣೇಶ್ ಗಾಂವ್ಕರ್‌ ಹಳುವಳ್ಳಿ ಮತ್ತು ಕುಮಾರ ಶ್ರೀವತ್ಸ ಗುಡ್ಡೆದಿಂಬ ಹಾಗೂ ಮುಮ್ಮೇಳದಲ್ಲಿ ಶ್ರೀ ಕೃಷ್ಣಯಾಜಿ ಬಳ್ಕೂರು, ಶ್ರೀ ಅಶೋಕ ಭಟ್ ಸಿದ್ದಾಪುರ, ಶ್ರೀ ಸಂಜಯ ಬೆಳೆಯೂರು, ಶ್ರೀ ಚಂದ್ರಹಾಸ ಗೌಡ ಹೊಸಪಟ್ಟಣ, ಶ್ರೀ ಮಹಾಭಲೇಶ್ವರ ಗೌಡ, ಶ್ರೀ ನಾಗೇಶ ಕುಳಿಮನೆ, ಶ್ರೀ ನಾಗೇಂದ್ರ ಮೂರೂರು, ಶ್ರೀ ಶ್ರೀಧರ ಅಣಲಗಾರ ಮತ್ತು ಸ್ತ್ರೀ ಪಾತ್ರದಲ್ಲಿ ಶ್ರೀ ಶಂಕರ ಹೆಗಡೆ ನಿಲ್ಕೋಡು, ಶ್ರೀ ಶಿವಕುಮಾರ ಶಿರಳಗಿ, ಶ್ರೀ ದೀಪಕ ಭಟ ಕುಂಕೀ ಸಹಕರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಶ್ರೀ ಮಹಾಭಲೇಶ್ವರ…

Read More

ಮಂಗಳೂರು : ರಾಗತರಂಗ ಮಂಗಳೂರು ಇದರ ವತಿಯಿಂದ ‘ವಸಂತಗಾನ ಝೇಂಕಾರ-2025’ ಮಕ್ಕಳ ಸಂಗೀತ, ನೃತ್ಯ ಮತ್ತು ಕಿರು ನಾಟಕ ಕಾರ್ಯಕ್ರಮವು ಮಂಗಳೂರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ದಿನಾಂಕ 20 ಏಪ್ರಿಲ್ 2025ರಂದು ನಡೆಯಿತು. ಜೀವವಿಮಾ ನಿಗಮದ ನಿವೃತ್ತ ಹಿರಿಯ ವಿಭಾಗಾಧಿಕಾರಿ ಕೆ. ರಮೇಶ್ ರಾವ್ ಇವರು ಮಾಸ್ಟರ್ ಸಾಯಿ ಅನೂಪ್ ಜತೆಗೂಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರಾಗತರಂಗದ ಪೂರ್ವಾಧ್ಯಕ್ಷ ಅನಂತಕೃಷ್ಣ ಉಡುಪ, ವಾಮನ್ ಬಿ. ಮೈಂದನ್, ಅಧ್ಯಕ್ಷ ಕೆ.ಎನ್. ಶಶಿಧರ್, ಉಪಾಧ್ಯಕ್ಷರಾದ ಚಂದ್ರಶೇಖರ ದೈತೋಟ, ಕೃಷ್ಣ ಶೆಟ್ಟಿ ತಾರೆಮಾ‌ರ್, ಕಾರ್ಯದರ್ಶಿ ಪಿ.ಸಿ. ರಾವ್, ಜತೆ ಕಾರ್ಯದರ್ಶಿ ಜಯಪ್ರಕಾಶ ಶೆಟ್ಟಿ, ಕೋಶಾಧಿಕಾರಿ ಸೌಮ್ಯಾ ಪಿ. ರಾವ್ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಮಕ್ಕಳಿಂದ ಕರ್ನಾಟಕ ಶಾಸ್ತ್ರೀಯ ಹಾಡುಗಾರಿಕೆ, ಜಾನಪದ ನೃತ್ಯ, ಭಾವ ಗಾಯನ, ಹಿಂದೂಸ್ಥಾನಿ ಶಾಸ್ತ್ರೀಯ ಗಾಯನ, ವೃಂದಗಾನ, ನೃತ್ಯ ರೂಪಕ ಪುಣ್ಯಕೋಟಿ, ಹಿಂದೂಸ್ಥಾನಿ ವಾದ್ಯ ಸಂಗೀತ, ಭರತನಾಟ್ಯ, ಪ್ಯೂಶನ್ ಮ್ಯೂಸಿಕ್, ಕಿರು ನಾಟಕ ಪ್ರದರ್ಶನಗೊಂಡಿತು. ಯಾವುದೇ ಸಭಾ ಕಾರ್ಯಕ್ರಮ ಇಲ್ಲದೆ, ಕೇವಲ…

Read More

ಮೂಡುಬಿದಿರೆ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ತುಳು ಸಂಘದ ಸಹಯೋಗದಲ್ಲಿ ತುಳು ಭಾಷೆ ಬದ್ಕ್ ಗೇನದ ಪೊಲಬು ತುಲಿಪು’ ಕಾರ್ಯಕ್ರಮವು ದಿನಾಂಕ 26 ಏಪ್ರಿಲ್ 2025ರ ಶುಕ್ರವಾರ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರನಾಥ ಗಟ್ಟಿ ಕಾಪಿಕಾಡ್ ಮಾತನಾಡಿ “ತುಳುನಾಡು ಸರ್ವಧರ್ಮೀಯರ ನಾಡು. ಇಲ್ಲಿ ಜಾತಿ ಮತ ಪಂಥವೆಂಬ ಭೇದವಿಲ್ಲ. ಶೈಕ್ಷಣಿಕ ಕ್ಷೇತ್ರಕ್ಕೆ ಯಾವ ಭಾಷೆ ಪ್ರವೇಶಿಸುತ್ತದೆಯೋ ಆ ಭಾಷೆಯ ಮೌಲ್ಯ ವಿಸ್ತಾರಗೊಳ್ಳುತ್ತದೆ. ಇಂತಹ ಕಾರ್ಯಕ್ರಮಗಳು ತುಳು ಭಾಷೆಯನ್ನು ಇನ್ನಷ್ಟು ಶ್ರೀಮಂತಗೊಳಿಸಬಲ್ಲದು. ತುಳುನಾಡಿನಲ್ಲಿ 160ಕ್ಕೂ ಹೆಚ್ಚಿನ ಕ್ರೀಡೆಗಳಿವೆ. ತುಳುನಾಡಿನ ಔಷದೋಪಚಾರ ವಿಶಿಷ್ಟವಾಗಿದೆ. ಪ್ರತಿಯೊಂದು ಊರಿನ ಹೆಸರಿಗೂ ಪ್ರಾಚೀನ ಇತಿಹಾಸವಿದೆ. ಇದರ ಬಗ್ಗೆ ಅಧ್ಯಯನ ಮಾಡಿ ತುಳುವನ್ನು ಸಮಗ್ರ ನೆಲೆಯಲ್ಲಿ ಕಟ್ಟುವ ಕೆಲಸವಾಗಬೇಕಿದೆ. ಸುಮಾರು 5,000ಕ್ಕೂ ಹೆಚ್ಚಿನ ತುಳು ಪುಸ್ತಕಗಳು ತುಳು ಸಾಹಿತ್ಯ ಅಕಾಡೆಮಿಯಲ್ಲಿ ಲಭ್ಯವಿದೆ. ಇದರ ಮೂಲಕ ತುಳುನಾಡಿನ ಪರಂಪರೆಯನ್ನು ತಿಳಿದುಕೊಳ್ಳಬಹುದಾಗಿದೆ.…

Read More

ಉಡುಪಿ : ರಾಗ ಧನ ಉಡುಪಿ (ರಿ.) ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿದ್ದ ಕಲಾವಿಹಾರಿ, ಕಲಾಭಿಜ್ಞ, ಕಲಾತಿಲಕ ಶ್ರೀ ಎ. ಈಶ್ವರಯ್ಯ ಸಂಸ್ಮರಣಾ ಕಾರ್ಯಕ್ರಮ, ‘ಕಲಾ ಪ್ರವೀಣ ಪ್ರಶಸ್ತಿ ಪ್ರದಾನ’, ರಾಗರತ್ನಮಾಲಿಕೆ -36 ಗೃಹಸಂಗೀತ ಮತ್ತು ಭರತನಾಟ್ಯ ಕಾರ್ಯಕ್ರಮವು ಪರ್ಕಳದ ‘ಸರಿಗಮ ಭಾರತಿ’ ಸಭಾಂಗಣದಲ್ಲಿ ದಿನಾಂಕ 19 ಏಪ್ರಿಲ್ 2025ರಂದು ನಡೆಯಿತು. ಕಲಾವಿಹಾರಿ ಎ. ಈಶ್ವರಯ್ಯನವರು 2018ರಲ್ಲಿ ಪ್ರಾಯೋಜಿಸಿ ಸ್ಥಾಪಿಸಿದ ‘ಕಲಾಪ್ರವೀಣ ಪ್ರಶಸ್ತಿ’ಯನ್ನು ಈ ಬಾರಿ ಬೆಂಗಳೂರಿನ ಹೆಸರಾಂತ ಲೇಖಕಿ ಹಾಗೂ ವಿಮರ್ಶಕಿ ಶ್ರೀಮತಿ ವೈ.ಕೆ. ಸಂಧ್ಯಾ ಇವರಿಗೆ ಅವರ ಅನುಪಸ್ಥಿತಿಯಲ್ಲಿ ನೀಡಲಾಯಿತು. ಹಿರಿಯ ಪತ್ರಕರ್ತ ಶ್ರೀ ನಿತ್ಯಾನಂದ ಪಡ್ರೆ ಅಭಿನಂದನಾ ಭಾಷಣ ನೆರವೇರಿಸಿದರು. ಶ್ರೀಕೃಷ್ಣಯ್ಯ ಅನಂತಪುರ ಪ್ರಶಸ್ತಿಯ ಬಗ್ಗೆ ಪ್ರಸ್ತಾವಿಸಿದರು. ಡಾ. ಶ್ರೀಕಿರಣ್ ಹೆಬ್ಬಾರ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಘವೇಂದ್ರ ಆಚಾರ್ಯ ಸ್ವಾಗತಿಸಿ, ಉಮಾಶಂಕರಿ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಪೂರ್ವಭಾವಿಯಾಗಿ ರಾಗರತ್ನಮಾಲಿಕೆ -36ನ್ನು ವಿದುಷಿ ಶ್ರೀಮತಿ ಬಾಂಬೆ ಲಕ್ಷ್ಮೀ ರಾಜಗೋಪಾಲನ್ ಇವರು ನಡೆಸಿಕೊಟ್ಟರು.…

Read More

ಮೈಸೂರು : ಧ್ವನಿ ಫೌಂಡೇಷನ್ ಆಯೋಜಿಸುವ ಡಾ. ಶ್ವೇತಾ ಮಡಪ್ಪಾಡಿ ನೇತೃತ್ವದಲ್ಲಿ ‘ಹಕ್ಕಿಹಾಡು’ ಮಕ್ಕಳ ಬೇಸಿಗೆ ಕಲರವ 2025 ಇದರ ಸಮಾರೋಪ ಸಮಾರಂಭವನ್ನು ದಿನಾಂಕ 27 ಏಪ್ರಿಲ್ 2025ರಂದು ಸಂಜೆ 5-30 ಗಂಟೆಗೆ ಮೈಸೂರಿನ ದಟ್ಟಗಳ್ಳಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಮೈಸೂರಿನ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದಿಗ್ವಿಜಯ ಹೆಗ್ಗೋಡು ಇವರ ನಿರ್ದೇಶನದಲ್ಲಿ ‘ಹಕ್ಕಿ ಹಾಡು’ ಮಕ್ಕಳ ನಾಟಕ ಪ್ರದರ್ಶನಗೊಳ್ಳಲಿದೆ. ಮಾನ್ಯ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ, ನಟಿ ಶ್ರೀಮತಿ ಭವ್ಯ ಮತ್ತು ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರಾದ ವೆಂಕಟೇಶ್ ಇವರುಗಳು ಭಾಗವಹಿಸಲಿರುವರು.

Read More

ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರ ಕೊಡ ಮಾಡುವ 2023ನೇ ಸಾಲಿನ ‘ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’ಗೆ ಹಿರಿಯ ಸಾಹಿತಿ ಹಾಗೂ ಸಂಶೋಧಕಿ ಇಂದಿರಾ ಹೆಗ್ಗಡೆಯವರು ಆಯ್ಕೆಯಾಗಿದ್ದಾರೆ. ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇಂದಿರಾ ಹೆಗ್ಗಡೆಯವರನ್ನು ದಿನಾಂಕ 24 ಏಪ್ರಿಲ್ 2025ರಂದು ಸನ್ಮಾನಿಸಿ ಗೌರವಿಸಲಾಯಿತು. “ಹಿರಿಯ ಸಂಶೋಧಕ ಎಂ.ಎಂ. ಕಲ್ಬುರ್ಗಿ ಹೆಸರಿನ ಪ್ರಶಸ್ತಿ ತಮಗೆ ಬಂದಿರುವುದು ತುಳುನಾಡಿನ ಸಂಸ್ಕೃತಿ ಅಧ್ಯಯನಕ್ಕೆ ಸಂದ ಗೌರವವಾಗಿದೆ. ತುಳುನಾಡಿನ ಸಂಸ್ಕೃತಿ ಮತ್ತು ಪರಂಪರೆಗಳ ಕುರಿತು ಸಂಶೋಧನೆಗೆ ಸಾಕಷ್ಟು ಅವಕಾಶಗಳಿದ್ದು ಯುವಜನತೆ ಆಸಕ್ತಿ ತೋರಿಸಬೇಕು” ಎಂದು ಹೇಳಿದರು. ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟಿನ ಕಾರ್ಯದರ್ಶಿ ಕೃಷ್ಣಮೂರ್ತಿ ಚಿತ್ರಾಪುರ ಮಾತನಾಡಿ ಇಂದಿರಾ ಹೆಗ್ಗಡೆಯವರನ್ನು ಅಭಿನಂದಿಸಿದರು. ಕೋಶಾಧಿಕಾರಿ ಜ್ಯೋತಿ ಚೇಲೈರು ವಂದಿಸಿದರು. ಸದ್ರಿ ಪ್ರಶಸ್ತಿಯು ರೂ.75,000 ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು ಮೇ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯಲಿದೆ.

Read More

ಪ್ರಸಿದ್ಧರಾದ ಭಾರತೀಯ ವೀಣಾ ವಾದಕರಾದ ಕರ್ನಾಟಕ ಸಂಗೀತ ಪರಂಪರೆಯಲ್ಲಿ ಪ್ರಾತಃಸ್ಮರಣೀಯ ಮಹತ್ವಪೂರ್ಣ ಹೆಸರು ವೀಣಾ ವೆಂಕಟಗಿರಿಯಪ್ಪನವರದು. 26 ಏಪ್ರಿಲ್ 1887ರಲ್ಲಿ ಹೆಗ್ಗಡದೇವನ ಕೋಟೆ ಎಂಬಲ್ಲಿ ವೈದಿಕ ಮನೆತನದಲ್ಲಿ ಇವರ ಜನನವಾಯಿತು. ವೆಂಕಟರಾಮಯ್ಯ ಮತ್ತು ನರಸಮ್ಮ ದಂಪತಿಯ ಸುಪುತ್ರ. ಮಗುವಿಗೆ 11 ತಿಂಗಳಾಗುತ್ತಲೇ ಪತಿಯನ್ನು ಕಳೆದುಕೊಂಡ ನರಸಮ್ಮ ಮಗುವಿನೊಂದಿಗೆ ಮೈಸೂರಿಗೆ ಬಂದು ತಂದೆ ದೊಡ್ಡ ಸುಬ್ಬರಾಯರೊಂದಿಗೆ ಇರಲಾರಂಭಿಸಿದರು. ಹೀಗೆ ಮೈಸೂರಿಗೆ ಬಂದು ಆಶ್ರಯ ಪಡೆದಿದ್ದು ಒಂದು ರೀತಿಯಲ್ಲಿ ಗೆಲುವಿಗೆ ದಾರಿಯಾಯಿತು. ಸಂಗೀತ ಕ್ಷೇತ್ರದಲ್ಲಿ ಹೆಸರು ಮಾಡಿದ ಪ್ರಸಿದ್ಧ ಸಂಗೀತ ಸಾಧಕರ ಮಾತ್ರವಲ್ಲದೆ ಅವರ ವೀಣಾ ವಾದನದ ವೈಖರಿಯನ್ನು ವೀಕ್ಷಿಸುವ ಅವಕಾಶ ಇವರಿಗೆ ದೊರೆಯಿತು. ಅಜ್ಜ ದೊಡ್ಡ ಸುಬ್ಬರಾಯರು ಪ್ರಸಿದ್ಧ ವೀಣಾವಾದಕರು. ವೀಣೆ ನುಡಿಸುವವರು ವೀಣೆಯನ್ನು ಅಡ್ಡಲಾಗಿ ಹಿಡಿದು ನುಡಿಸಿದರೆ, ದೊಡ್ಡ ಸುಬ್ಬರಾಯರು ಅದನ್ನು ಲಂಬವಾಗಿ ಹಿಡಿದು ನುಡಿಸುತ್ತಿದ್ದರು. ವೀಣಾ ವಾದನದಲ್ಲಿ ಅದ್ಭುತ ಸಾಧನೆ ಮಾಡಿದವರಿಗೆ ಮಾತ್ರ ಇದು ಸಾಧ್ಯವಾಗುವಂತದ್ದು. ತಾಯಿ ನರಸಮ್ಮನವರ ಏಕೈಕ ಸಹೋದರ ಚಿಕ್ಕ ಸುಬ್ಬರಾಯರಿಗೆ ಸಂತಾನವಿಲ್ಲದ ಕಾರಣ ವೆಂಕಟಗಿರಿಯಪ್ಪನನ್ನೇ ತನ್ನ…

Read More

ಪೆರ್ಲ: ಕನ್ನಡ ಸಾಹಿತ್ಯ ಪರಿಷತ್‌ ಇದರ ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘ, ಸವಿ ಹೃದಯದ ಕವಿ ಮಿತ್ರರು ಇವರ ಸಹಕಾರದೊಂದಿಗೆ ಆಯೋಜಿಸುವ ಕವಿತಾ ಕೌತುಕ ಸರಣಿ – 3 ‘ಕವಿ ಕಾವ್ಯ ಸಂವಾದ’ ಕಾರ್ಯಕ್ರಮವು ದಿನಾಂಕ 26 ಏಪ್ರಿಲ್ 2025ರ ಅಪರಾಹ್ನ ಘಂಟೆ 2.20ರಿಂದ ಪೆರ್ಲದ ವ್ಯಾಪಾರಿ ಭವನದಲ್ಲಿ ನಡೆಯಲಿದೆ. ನಿವೃತ್ತ ಶಿಕ್ಷಕರಾದ ಉಮೇಶ ಕೆ. ಪೆರ್ಲ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಹಿರಿಯ ಸಾಹಿತಿಗಳು ಹಾಗೂ ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಅಧ್ಯಕ್ಷರಾದ ಡಾ. ರಮಾನಂದ ಬನಾರಿ ಉದ್ಘಾಟಿಸಲಿರುವರು. ಹಿರಿಯ ಸಾಹಿತಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಲೇಖಕ ಬಿ. ಎಸ್. ಕಾಟುಕುಕ್ಕೆ, ಪೆರ್ಲ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿಯ ಅಧ್ಯಕ್ಷರಾದ ರಾಜಾರಾಮ ಶೆಟ್ಟಿ ಕಾಟುಕುಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಕ. ಸಾ. ಪ. ಕೇರಳ ಗಡಿನಾಡ ಘಟಕದ ಅಧ್ಯಕ್ಷರಾದ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಸವಿ ಹೃದಯದ ಕವಿ ಮಿತ್ರರು…

Read More