Author: roovari

ಬೆಂಗಳೂರು : ನಿರ್ಮಲ ನೃತ್ಯ ನಿಕೇತನ ಕಲ್ಚರಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ 50ನೇ ವರ್ಷದ ವಾರ್ಷಿಕೋತ್ಸವ ಸಲುವಾಗಿ ‘ಭರತನಾಟ್ಯ ಯುಗಳ ನೃತ್ಯ’ ಪ್ರದರ್ಶನವನ್ನು ದಿನಾಂಕ 02 ಫೆಬ್ರವರಿ 2025ರಂದು ಸಂಜೆ 5-00 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾ ಕ್ಷೇತ್ರ ಆವರಣದ ನಯನ ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ. ನೃತ್ಯ ವಿದ್ಯಾನಿಲಯದ ನೃತ್ಯ ಗುರುಗಳಾದ ವಿದ್ವಾನ್ ಯು.ಪಿ. ಶರಣ್ ಮತ್ತು ವಿದುಷಿ ನಿಶ್ಚಿತಾ ಶರಣ್ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ.

Read More

ಮಂಗಳೂರು: ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಮ್ ಇಲ್ಲಿ ನಡೆಯಲಿರುವ ‘25ನೇ ತುಳು ಸಾಹಿತ್ಯ ಸಮ್ಮೇಳನ’ದ ಅಧ್ಯಕ್ಷರಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ ಮಾಜಿ ಸದಸ್ಯ, ತುಳು – ಕನ್ನಡ ಸಾಹಿತಿ ಹಾಗೂ ಹಿರಿಯ ಯಕ್ಷಗಾನ ಅರ್ಥಧಾರಿಯಾದ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಆಯ್ಕೆಯಾಗಿದ್ದಾರೆ. ದಿನಾಂಕ 06 ಫೆಬ್ರವರಿ 2025ರಂದು ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಮಾರ್ಗದರ್ಶನದೊಂದಿಗೆ ‘ತುಳು ಬಾಸೆ ಸಂಸ್ಕೃತಿದ ಜಾಗೃತಿಗಾದ್’ಎಂಬ ಧ್ಯೇಯ ವಾಕ್ಯದೊಂದಿಗೆ ಒಡಿಯೂರು ಶ್ರೀ ದತ್ತಾಂಜನೇಯ ಕ್ಷೇತ್ರದಲ್ಲಿ ಸಮ್ಮೇಳನ ನಡೆಯಲಿದೆ. ಬಹುಮುಖೀ ಸಾಧಕ : ಶಿಕ್ಷಣ, ಸಾಹಿತ್ಯ, ಕಲೆ ಮತ್ತು ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಭಾಸ್ಕರ ರೈ ಕುಕ್ಕುವಳ್ಳಿ ಓರ್ವ ಬಹುಮುಖೀ ಸಾಧಕರು. ಪುತ್ತೂರು ತಾಲೂಕು ಇರ್ದೆ ಗ್ರಾಮದ ಪ್ರತಿಷ್ಠಿತ ಬಾಲ್ಯೊಟ್ಟು ಗುತ್ತು ಮನೆತನದಲ್ಲಿ ಜನಿಸಿದ ಇವರು ನವೋದಯ ಪ್ರೌಢಶಾಲೆ ಬೆಟ್ಟಂಪಾಡಿ ಮತ್ತು ಪುತ್ತೂರಿನ ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಪ್ರೌಢ ಶಿಕ್ಷಣವನ್ನು ಪೂರೈಸಿದರು. ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ…

Read More

ಬಡಗುತಿಟ್ಟು ಯಕ್ಷಗಾನ ರಂಗದಲ್ಲಿ ನಮಗೆ ಅನೇಕ ಯುವ ಮಹಿಳಾ ಕಲಾವಿದೆಯರು ಕಾಣಲು ಸಿಗುತ್ತಾರೆ. ಇಂತಹ ಅನೇಕ ಮಹಿಳಾ ಕಲಾವಿದರ ಸಾಲಿನಲ್ಲಿ ಮಿಂಚುತ್ತಿರುವ ಯುವ ಹವ್ಯಾಸಿ ಮಹಿಳಾ ಕಲಾವಿದೆ ಕುಮಾರಿ ಸುಷ್ಮಿತಾ ಸಾಲಿಗ್ರಾಮ. ಉಡುಪಿ ಜಿಲ್ಲೆಯ ಸಾಲಿಗ್ರಾಮದ ಪಾರಂಪಳ್ಳಿಯ ಶ್ರೀಮತಿ ಲಕ್ಷ್ಮೀ ಹಾಗೂ ಕೃಷ್ಣಮೂರ್ತಿ ಮರಕಾಲ ಇವರ ಮಗಳಾಗಿ ೩೧.೦೧.೧೯೯೮ ರಂದು ಇವರ ಜನನ. ತಮ್ಮ 9ನೇ ವಯಸ್ಸಿಗೆ ಯಕ್ಷಗಾನದತ್ತ ಒಲವು ಮೊದಲ ವೇಷ ಇವರು ಯಕ್ಷಬಾಲಭಾರತದಲ್ಲಿ ಕೌರವನ ವೇಷ ಮಾಡಿ ಎಲ್ಲರ ಮೆಚ್ಚುಗೆ ಪಾತ್ರರಾದರು. ಇದು ಇವರ ಯಕ್ಷಗಾನದತ್ತ ಒಲವು ತುಂಬಾನೇ ಹೆಚ್ಚಿಸಿತ್ತು. ಮೊದಲಿನಿಂದಲೂ ಯಕ್ಷಗಾನದ ಮೇಲೆ ಒಲವು ಇತ್ತು. ಅಪ್ಪ ಅವರ ಸಂಸ್ಥೆಗಳಲ್ಲಿ ಯಕ್ಷಗಾನ ಪ್ರಸಂಗಗಳನ್ನು ಮಾಡಿಸ್ತಾ ಬಂದಿದ್ದಾರೆ ಹಾಗೂ ನಾನು ನಾಲ್ಕನೇ ತರಗತಿ ಅಲ್ಲಿ ಇದ್ದಾಗ ನಮಗೆ ಯಕ್ಷಗಾನ ಹೇಳಿ ಕೊಡಲಿಕ್ಕೆ ಶಾಲೆಗೆ ಬರ್ತಾ ಇದ್ರು. ಅವರು ಮತ್ತೆ ಬರಲಿಕ್ಕೆ ನಿಲ್ಲಿಸಿದಾಗ ಶಿವರಾಮ ಕಾರಂತರ ಯಕ್ಷ ಕೇಂದ್ರದಲ್ಲಿ ಸೇರಿ ಮತ್ತೆ ಯಕ್ಷಗಾನ ಕಲಿಲಿಕ್ಕೆ ಶುರು ಮಾಡಿದೆ ಎಂದು ಸುಷ್ಮಿತಾ…

Read More

ಭಾರತೀಯ ಕಲೆಗಳಲ್ಲಿ ಭಾರತೀಯ ಚಿತ್ರಕಲೆ ಸುಧೀರ್ಘವಾದ ಇತಿಹಾಸವನ್ನು ಹೊಂದಿದೆ. 64 ಕಲೆಗಳಲ್ಲಿ ಚಿತ್ರಕಲೆಯು ಒಂದು. ಚಿತ್ರಕಲೆ ವಿಶ್ವ ಭಾಷೆಯಾಗಿದೆ ಎನ್ನುತ್ತಾರೆ. ಯಾವುದೇ ಕಲೆ ದೇವರು ಒಲಿದು ಕೊಡುವ ವರ. ಅದನ್ನು ಸತತ ಅಭ್ಯಾಸ, ಸಾಧನೆ ಹಾಗೂ ಪ್ರಯತ್ನದಿಂದ ಕರಗತ ಮಾಡಿಕೊಳ್ಳುವುದು ಪ್ರತಿಯೊಬ್ಬ ಕಲಾಸಕ್ತನ ಕರ್ತವ್ಯ. ಹೀಗೆ ಸಾಧನೆ ಮಾಡಿದವರಲ್ಲಿ ಮಡಿವಾಳಪ್ಪ ವೀರಪ್ಪ ಮಿಣಜಿಗಿ ಒಬ್ಬರು. ಮಿಣಜಿಗಿಯವರು ತೈಲವರ್ಣ ಹಾಗೂ ಜಲವರ್ಣ ಚಿತ್ರ ರಚನೆಯಲ್ಲಿ ಪ್ರಖ್ಯಾತರು. 1901 ಜನವರಿ 30ರಂದು ಬಿಜಾಪುರದಲ್ಲಿ ಜನಿಸಿದ ಇವರ ತಂದೆ ವೀರಪ್ಪ ತಾಯಿ ಶರಣವ್ವ. ವೀರಪ್ಪ ಒಬ್ಬ ಶ್ರೀಮಂತ ವ್ಯಾಪಾರಿಯಾಗಿದ್ದರು. ಪ್ರಾರಂಭಿಕ ಶಿಕ್ಷಣವನ್ನು ಬಿಜಾಪುರದಲ್ಲಿ ಪಡೆದ ಬಳಿಕ ಮುಂದೆ ಓದಲಿಚ್ಚಿಸದೆ ಮುಂಬೈಯ ಜೆ. ಜೆ. ಕಲಾ ಮಂದಿರವನ್ನು ಸೇರಿದರು. ನಿರಂತರ ಅಭ್ಯಾಸದಿಂದ ‘ಆರ್ಟ್ ಮಾಸ್ಟರ್’ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿ ಗಳಿಸಿದರು. ‘ಡಿಪ್ಲೋಮಾ ಇನ್ ಪೆಯಿಟಿಂಗ್ಸ್’ ಪದವಿಯಲ್ಲೂ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪ್ರಥಮ ವಿದ್ಯಾರ್ಥಿ ಎಂಬ ವಿಶೇಷ ಗೌರವಕ್ಕೆ ಪಾತ್ರರಾದರು. ಚಿತ್ರಕಲೆಯಲ್ಲಿ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಲಂಡನ್ನಿನ ‘ಕಾಲೇಜ್ ಆಫ್…

Read More

ಪುತ್ತೂರು  : ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಪಿ. ದಯಾನಂದ ಪೈ ಮತ್ತು ಪಿ. ಸತೀಶ್‌ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು, ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ, ಯಕ್ಷರಂಜಿನಿ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ‘ಯಕ್ಷಗಾನ ಪ್ರಸಂಗ: ಸ್ವರೂಪ, ವಿಕಾಸ ಮತ್ತು ಅನನ್ಯತೆ’ ಎಂಬ ವಿಷಯದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣವು ದಿನಾಂಕ 31 ಜನವರಿ 2025ರಂದು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ನಡೆಯಲಿದೆ. ವಿವೇಕಾನಂದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರೊ. ಶ್ರೀಪತಿ ಕಲ್ಲೂರಾಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಂಗಳೂರು ವಿ. ವಿ. ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ.ಧನಂಜಯ ಕುಂಬ್ಳೆ ಪ್ರಾಸ್ತಾವಿಕ ಭಾಷಣ ಮಾಡುವರು. ವಿವೇಕಾನಂದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಷ್ಣುಗಣಪತಿ ಭಟ್ ಉಪಸ್ಥಿತರಿರುವರು. ಬಳಿಕ ನಡೆಯುವ ಉಪನ್ಯಾಸ ಕಾರ್ಯಕ್ರಮದಲ್ಲಿ ಯಕ್ಷಗಾನ ಅಕಾಡಮಿಯ ಮಾಜಿ ಅಧ್ಯಕ್ಷರಾದ ಪ್ರೊ. ಎಂ. ಎಲ್. ಸಾಮಗ ‘ಯಕ್ಷಗಾನ ಪ್ರಸಂಗಗಳ ಸ್ವರೂಪ ಮತ್ತು ಕಾವ್ಯಾಂಶ’ ಎಂಬ ವಿಷಯದಲ್ಲಿ…

Read More

ಮಂಗಳೂರು : ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 278ನೇ ಕಾರ್ಯಕ್ರಮವು ದಿನಾಂಕ 02 ಫೆಬ್ರವರಿ2025 ರಂದು ಸಂಜೆ ಘಂಟೆ 6.30ರಿಂದ ಶಕ್ತಿನಗರದ ಕಲಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಸೂಪರ್ ಸಿಂಗರ್ ಸೀಜನ್ -5 ಇದರ ವಿಜೇತೆ ಯುವ ಗಾಯಕಿ ರಿಶಲ್ ಮೆಲ್ಬಾ ಕ್ರಾಸ್ತಾ ಚಾಲನೆ ನೀಡಲಿದ್ದು, ಅಂದು ‘ಸುರ್ ಸೊಭಾಣ್’ ಗಾಯನ ತರಬೇತಿ ಶಾಲೆಯ 70 ವಿದ್ಯಾರ್ಥಿಗಳು ಕಾರ್ಯಕ್ರಮ ನೀಡಲಿದ್ದಾರೆ. ಮಾಂಡ್ ಸೊಭಾಣ್ ಗಾಯನ ಮಂಡಳಿ ‘ಸುಮೇಳ್’ ನೇತೃತ್ವದಲ್ಲಿ ‘ಸುರ್ ಸೊಭಾಣ್’ ತರಗತಿಗಳು ಕಳೆದ ಆಗಸ್ಟ್ ನಿಂದ ಆರಂಭವಾಗಿದ್ದವು. ಹಿಂದೂಸ್ತಾನಿ ಗಾಯನದಲ್ಲಿ ಪದವಿ ಪಡೆದು ಕೊಂಕಣಿ ಗಾಯನ ಕ್ಷೇತ್ರದಲ್ಲಿ ತನ್ನ ಛಾಪು ಮೂಡಿಸಿರುವ ಶಿಲ್ಪಾ ತೇಜಸ್ವಿನಿ ಕುಟಿನ್ಹಾ ಇವರು ಪ್ರಧಾನ ತರಬೇತುದಾರರಾಗಿ ಕೊಂಕಣಿ ಗಾಯನದಲ್ಲಿ ಶಾಸ್ತ್ರೀಯ ಶಿಸ್ತು ಹಾಗೂ ಸ್ವರ, ಧ್ವನಿ ನಿಯಂತ್ರಣ, ಹಾಡುಗಾರಿಕೆಯ ತಂತ್ರಗಳನ್ನು ವಿದ್ಯುಕ್ತವಾಗಿ ವಿದ್ಯಾರ್ಥಿಗಳಿಗೆ ಕಲಿಸಿದ್ದಾರೆ. ಹಿಂದೂಸ್ತಾನಿ ಗಾಯನ ಪ್ರಕಾರದ ಮೂಲಭೂತ ಅಂಶಗಳಾದ ಅಲಂಕಾರ, ಆರೋಹ, ಅವರೋಹ, ತಾಟ್, ತಾಲ್ ಮತ್ತು ರಾಗಗಳಾದ ಭೂಪ್, ಬೃಂದಾವನಿ, ಸಾರಂಗ್,…

Read More

ಮಂಗಳೂರು : ರಂಗ ಸಂಗಾತಿ ಮಂಗಳೂರು ಇವರ ಆಶ್ರಯದಲ್ಲಿ ಪುಸ್ತಕ ಪ್ರೇಮಿಗಳ ದಿನದಂದು ‘ಚಿತ್ರರಚನಾ ಸ್ಪರ್ಧೆ’ಯನ್ನು ದಿನಾಂಕ 14 ಫೆಬ್ರವರಿ 2025ರಂದು ಬೆಳಿಗ್ಗೆ 10-00 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. 08 ಫೆಬ್ರವರಿ 2025 ನೋಂದಾವಣೆಗೆ ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ 91 9686917406 ಸಂಖ್ಯೆಯನ್ನು ಸಂಪರ್ಕಿಸಿರಿ.

Read More

ಮಡಿಕೇರಿ : ಮಡಿಕೇರಿ ಸೈಂಟ್ ಜೋಸೆಫ್ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಕೆ.ಜಯಲಕ್ಷ್ಮೀ ಇವರ ‘ಮತ್ತೆ ವಸಂತ’ ಕಥಾ ಸಂಕಲನದ ಲೋಕಾರ್ಪಣಾ ಸಮಾರಂಭವು ದಿನಾಂಕ 26 ಜನವರಿ 2025 ರಂದು ಮಡಿಕೇರಿಯ ರೆಡ್ ಬ್ರಿಕ್ಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳಿಸಿದ ಮಡಿಕೇರಿ ಆಕಾಶವಾಣಿ ಕೇಂದ್ರದ ಹಿರಿಯ ಉದ್ಘೋಷಕ ಹಾಗೂ ಸಾಹಿತಿಗಳಾದ ಸುಬ್ರಾಯ ಸಂವಾಜೆ ಮಾತನಾಡಿ “ಇವತ್ತು ಬರೆದು ನಾಳೆ ಅಳಿದು ಹೋಗುವ ಕೃತಿಗಳನ್ನು ಬರೆಯದಿರಿ. ಅಧ್ಯಯನ ಉಸಿರಾಗಿ ಆಳವಾದ ಮತ್ತು ವಿಸ್ತ್ರತವಾದ ಓದನ್ನು ಮೈಗೂಡಿಸಿಕೊಂಡು ಹೆಚ್ಚಿನ ಕಾಲ ಮನದಲ್ಲಿ ಉಳಿಯುವ ಕೃತಿ ರಚನೆಯತ್ತ ಲೇಖಕರು ಗಮನ ಹರಿಸಬೇಕು. ಸದ್ಯದ ಪರಿಸ್ಥಿತಿಯಲ್ಲಿ ಕನ್ನಡದಲ್ಲಿ, ಕೃತಿರಚನೆಯ ಕೆಲನ ವ್ಯಾಪಕವಾಗಿ ನಡೆಯುತ್ತಿರುವ ಉತ್ತಮ ಬೆಳವಣಿಗೆ. ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿ ಲಭಿಸಿದರೂ ಅವರಲ್ಲಿ ಕೊಡಗಿನವರು ಯಾರೂ ಇಲ್ಲ” ಎಂದು ವಿಷಾದ ವ್ಯಕ್ತಪಡಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮ ಉದ್ಘಾಟಿಸಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ. ಪಿ. ರಮೇಶ್…

Read More

ಕುಶಾಲನಗರ : ಕುಶಾಲನಗರದ ಸಾಹಿತ್ಯಾಸಕ್ತರ ವೇದಿಕೆ ವತಿಯಿಂದ ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ‘ಪ್ರೇಮ ಕವಿ ಕೆ.ಎಸ್. ನರಸಿಂಹಸ್ವಾಮಿ ಸ್ಮರಣೆ’ ಕಾರ್ಯಕ್ರಮವನ್ನು ದಿನಾಂಕ 28 ಜನವರಿ 2025ರಂದು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಾಹಿತಿ ಕಣಿವೆ ಭಾರಧ್ವಜ್ “ಮೈಸೂರು ಮಲ್ಲಿಗೆ ಹೂವಿನ ಪರಿಮಳದಷ್ಟೇ ಸೊಗಸಾಗಿದ್ದವು ಕೆ.ಎಸ್. ನರಸಿಂಹಸ್ವಾಮಿ ಬರೆದ ದಾಂಪತ್ಯ ಗೀತೆಗಳು. ಕೆ.ಎಸ್. ನರಸಿಂಹಸ್ವಾಮಿ ಬರೆದಂತಹ ಗೀತೆಗಳು ಇಂದಿಗೂ ಹಾಗೂ ಎಂದೆಂದಿಗೂ ಕೇಳುಗರ ಮನವನ್ನು ತಣಿಸುತ್ತವೆ. ತಮ್ಮ ಪತ್ನಿಯ ಕುರಿತ ಬರೆದಂತಹ ಕವನಗಳಲ್ಲಿ ಸಾರ್ಥಕ ದಾಂಪತ್ಯ ಜೀವನದ ಸೊಗಸು ಅಡಗಿದೆ. ಬದುಕಿನಲ್ಲಿ ಬಡತನವಿದ್ದರೂ ಕೂಡ ಯಾವುದನ್ನೂ ಲೆಕ್ಕಿಸದೇ ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿದ ಮೇರುಕವಿಯಾಗಿ ನಮ್ಮೊಡನೆ ಇದ್ದಾರೆ” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪ್ರಧಾನ ನುಡಿಗಳನ್ನಾಡಿದ ಕುಶಾಲನಗರದ ನಿವೃತ್ತ ಶಿಕ್ಷಕ ಉ.ರಾ. ನಾಗೇಶ್, “ಕೆ.ಎಸ್. ನರಸಿಂಹಸ್ವಾಮಿ ಕನ್ನಡ ಸಾಹಿತ್ಯದ ಕ್ಷೇತ್ರದಲ್ಲಿ ವಿಶಿಷ್ಟ ಛಾಪು ಮೂಡಿಸಿದ ಕವಿ. ಬದುಕಿನಲ್ಲಿ ಬಡತನವಿದ್ದರೂ ಕೂಡ ತಮ್ಮತನ ಬಿಡಲಾಗದ ಕೆ.ಎಸ್.ನ. ತಮ್ಮ ಕಲ್ಪನಾ ಲೋಕದಲ್ಲಿ…

Read More

ಕಾಸರಗೋಡು : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಇದರ ಉದ್ಘಾಟನಾ ಸಮಾರಂಭವನ್ನು ದಿನಾಂಕ 02 ಫೆಬ್ರವರಿ 2025ರಂದು ಅಪರಾಹ್ನ 2-30 ಗಂಟೆಗೆ ನುಳ್ಳಿಪ್ಪಾಡಿ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಸಭಾಂಗಣದ ‘ದಿ. ಬಿ. ಕೃಷ್ಣ ಪೈ ಬದಿಯಡ್ಕ ವೇದಿಕೆ’ಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾ ಘಟಕದ ಪದಗ್ರಹಣ ಮತ್ತು ಕಾಸರಗೋಡು ಜಿಲ್ಲಾ ಘಟಕದ ಪ್ರಥಮ ಕವಿಗೋಷ್ಠಿ ನಡೆಯಲಿದೆ. ಹಿರಿಯ ಕವಿ ಸಾಹಿತಿಗಳಾದ ಶ್ರೀ ವಿ. ಬಿ. ಕುಳಮರ್ವ ಇವರ ಅಧ್ಯಕ್ಷತೆಯಲ್ಲಿ ಹಿರಿಯ ಕವಿ ಸಾಹಿತಿ ಡಾ. ರಮಾನಂದ ಬನಾರಿ ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಕಾಸರಗೋಡು ಜಿಲ್ಲಾ ಘಟಕದ ಪ್ರಥಮ ಕವಿಗೋಷ್ಠಿಯು ಕವಿ, ಸಾಹಿತಿಗಳಾದ ಶ್ರೀ ವಿರಾಜ್ ಅಡೂರು ಇವರ ಅಧ್ಯಕ್ಷತೆ ನಡೆಯಲಿದ್ದು, ಕೆ. ನರಸಿಂಹ ಭಟ್ ಏತಡ್ಕ, ಪ್ರಭಾವತಿ ಕೆದಿಲಾಯ ಪುಂಡೂರು, ಶಾರದಾ ಮೊಳೆಯಾರ್ ಎಡನೀರು, ಸುಶೀಲಾ ಪದ್ಯಾಣ, ಪ್ರಮೀಳಾ ಚುಳ್ಳಿಕ್ಕಾನ, ನಿರ್ಮಲಾ ಶೇಷಪ್ಪ ಖಂಡಿಗೆ, ಶಶಿಕಲಾ ಟೀಚರ್…

Read More