Subscribe to Updates
Get the latest creative news from FooBar about art, design and business.
Author: roovari
ಕೊಪ್ಪಳ : ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಇದರ ವತಿಯಿಂದ “ಗೌರವ ಪ್ರಶಸ್ತಿ 2022’, ‘ಸಾಹಿತ್ಯಶ್ರೀ ಪ್ರಶಸ್ತಿ 2022 ಮತ್ತು ‘ಪುಸ್ತಕ ಬಹುಮಾನ 2021’ ಪ್ರದಾನ ಸಮಾರಂಭವನ್ನು ದಿನಾಂಕ 20 ಜನವರಿ 2025ರಂದು ಸಂಜೆ 4-00 ಗಂಟೆಗೆ ಕೊಪ್ಪಳ ಹೊಸಪೇಟೆ ರಸ್ತೆ ಹೊಟೇಲ್ ಬಿ.ಎಸ್. ಪವಾರ್ ಗ್ರ್ಯಾಂಡ್ ಹತ್ತಿರವಿರುವ ಶ್ರೀ ಶಿವಶಾಂತ ಮಂಗಲ ಭವನದಲ್ಲಿ ಆಯೋಜಿಸಲಾಗಿದೆ. ಸುಗಮ ಸಂಗೀತ ಕಾರ್ಯಕ್ರಮದೊಂದಿಗೆ ಪ್ರಾರಂಭವಾಗುವ ಈ ಸಮಾರಂಭದಲ್ಲಿ ಮಾನ್ಯ ಸಚಿವರಾದ ಶ್ರೀ ಶಿವರಾಜ ಎಸ್. ತಂಗಡಗಿ ಇವರು ಗೌರವ ಪ್ರಶಸ್ತಿ, ಸಾಹಿತ್ಯಶ್ರೀ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರದಾನ ಮಾಡಲಿರುವರು. ಪ್ರೊ. ಆರ್.ಕೆ. ಹುಡಗಿ, ಅಗ್ರಹಾರ ಕೃಷ್ಣಮೂರ್ತಿ, ಡಾ. ಇಂದಿರಾ ಹೆಗ್ಗಡೆ, ರಂಜಾನ್ ದರ್ಗಾ ಮತ್ತು ತುಂಬಾಡಿ ರಾಮಯ್ಯ ಇವರುಗಳು 2022ನೆಯ ವರ್ಷದ ಗೌರವ ಪ್ರಶಸ್ತಿ ಪುರಸ್ಕೃತರು, ಡಾ. ಬಂಜಗೆರೆ ಜಯಪ್ರಕಾಶ, ಡಾ. ಎಂ.ಜಿ. ಮಂಜುನಾಥ, ಡಾ. ರಾಜಶೇಖರ ಹತಗುಂದಿ, ದಾಸನೂರು ಕೂಸಣ್ಣ, ಡಾ. ಅನಸೂಯ ಕಾಂಬಳೆ, ಬಿ. ಮಹೇಶ್ ಹರವೆ, ಎಚ್.ಎನ್. ಆರತಿ,…
ಮಡಿಕೇರಿ : ಕೊಡವ ಮಕ್ಕಡ ಕೂಟದ 108ನೇ ಮತ್ತು ಲೇಖಕಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ರಚಿತ 10ನೇ ಪುಸ್ತಕ ‘ಜೇನು ಗೂಡು’ ಇದರ ಲೋಕರ್ಪಣಾ ಸಮಾರಂಭವು ದಿನಾಂಕ 12 ಜನವರಿ 2025ರಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳಿಸಿದ ‘ಬ್ಲೂ ಡಾರ್ಟ್’ ಸಲಹೆಗಾರ ಹಾಗೂ ಹಿರಿಯ ಕ್ರೀಡಾಪಟು ಬಾಳೆಯಡ ಕಾಳಪ್ಪ ಮಾತನಾಡಿ “ಬರವಣಿಗೆಗೆ ಮನುಷ್ಯನ ಜೀವನವನ್ನು ಬದಲಾಯಿಸುವ ಅದ್ಭುತವಾದ ಶಕ್ತಿ ಇದೆ. ಪುಸ್ತಕಗಳು ಮನುಷ್ಯನ ಜೀವನದಲ್ಲಿ ಬದಲಾವಣೆಯನ್ನು ತರಲು ಶಕ್ತವಾಗಿವೆ. ಬರಹಗಾರರು ತಮಗಾಗಿ ಅಥವಾ ಸಮಾಜದ ಕಲ್ಯಾಣಕ್ಕಾಗಿ ಪುಸ್ತಕಗಳನ್ನು ಬರೆಯಬಹುದು. ಆದರೆ ಬರವಣಿಗೆಯಲ್ಲಿರುವ ಶಕ್ತಿ ಸಾಮಾಜಿಕ ಪರಿವರ್ತನೆಗೆ ಸಹಕಾರಿಯಾಗಿದೆ. ಪುಸ್ತಕಗಳನ್ನು ಹೆಚ್ಚು ಓದುವ ಮೂಲಕ ಉತ್ತಮ ಸಂದೇಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಬರೆಯುವುದರಿಂದ ಅಥವಾ ಓದುವ ಹವ್ಯಾಸದಿಂದ ಜೀವನದ ಕುಂದು ಕೊರತೆ ಮತ್ತು ವ್ಯತ್ಯಾಸಗಳು ದೂರವಾಗುತ್ತವೆ. ಮಕ್ಕಳ ಜೀವನದಲ್ಲಿ ತಂದೆ ತಾಯಿಗಳ ಪಾತ್ರ ದೊಡ್ಡದಾಗಿರುತ್ತದೆ. ತಂದೆ ನಂಬಿಕೆಯಾದರೆ ತಾಯಿ ಸತ್ಯವಾಗುತ್ತಾಳೆ ಇವರಿಬ್ಬರು ದೇವರಿಗೆ ಸಮಾನರು. ಇಂದು ಬಿಡುಗಡೆಯಾದ ‘ಜೇನು…
ಬೆಂಗಳೂರು : ತರಬೇತಿ ಮತ್ತು ಪ್ರದರ್ಶನ ಸೇವಾ ಸಂಸ್ಥೆ ಯಕ್ಷತರಂಗ ಬೆಂಗಳೂರು (ರಿ.) ಇದರ ವತಿಯಿಂದ ಸುರೇಂದ್ರ ಪೂಜಾರಿ ಮತ್ತು ಸ್ನೇಹಿತರ ಸೇವೆಯಾಟ ಪ್ರಯುಕ್ತ ‘ಶ್ರೀ ದೇವಿ ಮಹಾತ್ಮೆ’ ಕನ್ನಡ ಯಕ್ಷಗಾನ ಪುಣ್ಯ ಕಥಾ ಪ್ರಸಂಗ ಪ್ರದರ್ಶನವನ್ನು ದಿನಾಂಕ 18 ಜನವರಿ 2025ರಂದು ಸಂಜೆ 5-00 ಗಂಟೆಗೆ ಬೆಂಗಳೂರಿನ ಗುಬ್ಬಲಾಳ ಕನಕಪುರ ರಸ್ತೆಯಲ್ಲಿರುವ ಹೊಟೇಲ್ ಸಿಂಧೂರ ಗಾರ್ಡೇನಿಯಾ ಪಾರ್ಕಿಂಗ್ ಸ್ಥಳದಲ್ಲಿ ಆಯೋಜಿಸಲಾಗಿದೆ.
ಮೂಲ್ಕಿ : ಮೂಲ್ಕಿ ತಾಲೂಕು ಎರಡನೆಯ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ 08 ಫೆಬ್ರವರಿ 2025 ಶನಿವಾರ ಐಕಳ ಪೊಂಪೈ ಕಾಲೇಜಿನಲ್ಲಿ ನಡೆಯಲಿದೆ. ಖ್ಯಾತ ಸಾಹಿತಿ ಶ್ರೀಧರ ಡಿ.ಎಸ್. ಇವರ ಅಧ್ಯಕ್ಷತೆಯಲ್ಲಿ ವಿವಿಧ ಸಾಹಿತಿಗಳ ಉಪಸ್ಥಿತಿಯಲ್ಲಿ ವಿಚಾರಗೋಷ್ಠಿ ಚಿಂತನ-ಮಂಥನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಸಮ್ಮೇಳನದ ಸಲುವಾಗಿ ಮೂಲ್ಕಿ ತಾಲೂಕಿನ ಸಾಹಿತ್ಯಾಸಕ್ತರಿಗೆ ಸಣ್ಣ ಕಥೆ ರಚನೆ (ಎ 4 ಹಾಳೆಯಲ್ಲಿ ಒಂದು ಪುಟ), ಕವನ ರಚನೆ ಸ್ಪರ್ಧೆ (12 ಸಾಲುಗಳು), ನಾನು ಓದಿದ ಉತ್ತಮ ಪುಸ್ತಕ – ಪ್ರಬಂಧ ಸ್ಪರ್ಧೆ (ಎ 4 ಹಾಳೆಯಲ್ಲಿ ಎರಡು ಪುಟ)ಗಳನ್ನು ಆಯೋಜಿಸಲಾಗಿದೆ. ಮೂಲ್ಕಿ ತಾಲೂಕಿನಲ್ಲಿ ವಾಸವಾಗಿರುವ, ಉದ್ಯೋಗದಲ್ಲಿರುವ ಮತ್ತು ಮೂಲತಃ ಮೂಲ್ಕಿ ತಾಲೂಕಿನವರಾಗಿ ಬೇರೆ ಕಡೆಗಳಲ್ಲಿ ಇರುವ ಸಾಹಿತ್ಯಾಸಕ್ತರು ಈ ಸ್ಪರ್ಧೆಗಳಲ್ಲಿ ಭಾಗವಹಿಸಬಹುದಾಗಿದೆ. ಪ್ರತಿ ವಿಭಾಗದಲ್ಲಿ ಉತ್ತಮವಾದ 2 ಬರಹಗಳಿಗೆ ಬಹುಮಾನ ನೀಡಲಾಗುವುದು. ಸ್ಪರ್ಧಿಗಳು ರಘುನಾಥ್ ಕಾಮತ್, ಅಂಚೆ ಕಚೇರಿ ಕಿನ್ನಿಗೋಳಿ, ಮೂಲ್ಕಿ ತಾಲೂಕು – 574150 ದೂರವಾಣಿ 9448887697 ವಿಳಾಸಕ್ಕೆ ದಿನಾಂಕ…
ಮಡಿಕೇರಿ : ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ವತಿಯಿಂದ ನೀಡಲಾಗುವ 2024-25ನೇ ಸಾಲಿನ ರಾಜ್ಯಮಟ್ಟದ ಯುವ ಪ್ರಶಸ್ತಿಗೆ ವಿರಾಜಪೇಟೆ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ಭರತನಾಟ್ಯ ಹಾಗೂ ಪಾಶ್ಚಾತ್ಯ ನೃತ್ಯ ತರಬೇತುದಾರರಾದ ವಿದುಷಿ ಕಾವ್ಯಶ್ರೀ ಆಯ್ಕೆಯಾಗಿದ್ದಾರೆ. 15ರಿಂದ 30 ವರ್ಷದೊಳಗಿನ ವಿವಿಧ ಕ್ಷೇತ್ರದ ಸಾಧನೆಗೆ ಈ ಪ್ರಶಸ್ತಿ ನೀಡಲಾಗಿದೆ. ಕಾವ್ಯಶ್ರೀ ವಿರಾಜಪೇಟೆ ತಾಲೂಕಿನ ಬಿಳುಗುಂದ ಗ್ರಾಮದ ಎಂ.ಪಿ. ಕಾಂತರಾಜ್ ಹಾಗೂ ಎಂ.ಎನ್. ಹೇಮಾವತಿ ದಂಪತಿಯ ಸುಪುತ್ರಿ. ಅಮ್ಮತ್ತಿಯ ಗುಡ್ ಶೇಫರ್ಡ್ ಕಾನ್ವೆಂಟ್ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಪಡೆದ ಕಾವ್ಯಶ್ರೀ ವಿರಾಜಪೇಟೆ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ, ಗೋಣಿಕೊಪ್ಪಲು ಕಾವೇರಿ ಪದವಿ ಕಾಲೇಜಿನಲ್ಲಿ ಪದವಿ ಮುಗಿಸಿ ಪ್ರಸ್ತುತ ಮೈಸೂರಿನ ಮುಕ್ತ ಗಂಗೋತ್ರಿ ವಿಶ್ವವಿದ್ಯಾನಿಲಯದಲ್ಲಿ ಗಣಿತ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದು, ಅರಮೇರಿಯ ಎಸ್.ಎಂ.ಎಸ್. ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭರತನಾಟ್ಯದಲ್ಲಿ ಅಂತರಾಷ್ಟ್ರೀಯ ಬುಕ್ ಆಫ್ ರೆಕಾರ್ಡ್ಸ್ ಸಾಧನೆ ಮಾಡಿರುವ ಕಾವ್ಯಶ್ರೀ, ಕರ್ನಾಟಕ ಸರ್ಕಾರ, ಜಿಲ್ಲಾ…
ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಥೆಗಾರ್ತಿ ಕೊಡಗಿನ ಗೌರಮ್ಮ ದತ್ತಿ ಕಾರ್ಯಕ್ರಮದ ಅಂಗವಾಗಿ ಕೊಡಗು ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಣ್ಣ ಕಥೆ ಬರೆಯುವ ಸ್ಪರ್ಧೆಯನ್ನು ಏರ್ಪಡಿಸಿದೆ. ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಬೆಳೆಸಲು ಮತ್ತು ಕನ್ನಡ ನಾಡು, ನುಡಿ, ಸಂಸ್ಕೃತಿಯ ಪರಿಚಯ ಮಾಡಿಕೊಡುವ ಉದ್ದೇಶದಿಂದ ಜಿಲ್ಲೆಯ ಶಾಲೆ ಕಾಲೇಜುಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎ4 ಅಳತೆಯ ಹಾಳೆಯಲ್ಲಿ 2 ಪುಟ ಮೀರದಂತೆ ಕತೆ ರಚಿಸತಕ್ಕದ್ದು, ಕತೆ ಬರೆಯಲು ಹಾಳೆಯನ್ನು ಸ್ಥಳದಲ್ಲಿ ನೀಡಲಾಗುವುದು. ಕತೆಯ ವಿಷಯದ ಆಯ್ಕೆಗೆ ನಾಲ್ಕು ವಿಷಯ ನೀಡಲಾಗುವುದು. ಒಂದು ಶಾಲೆಯಿಂದ ಎರಡು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸ್ಪರ್ಧಿಸುವ ವಿದ್ಯಾರ್ಥಿಯು ಶಾಲಾ ಮುಖ್ಯೋಪಾದ್ಯಾಯರಿಂದ ಸ್ಪರ್ಧಿಸುವ ಕುರಿತು ಪತ್ರ ತರತಕ್ಕದ್ದು. ಸ್ಪರ್ಧೆಯು ದಿನಾಂಕ 25 ಜನವರಿ 2025 ರಂದು ಮಡಿಕೇರಿಯ ಸರಕಾರಿ ಪ್ರಾಥಮಿಕ ಶಾಲೆಯ ಜೂನಿಯರ್ ಕಾಲೇಜು ಆವರಣದಲ್ಲಿ ನಡೆಯಲಿರುವುದು. ನಡೆಯಲಿದೆ. ಈ ಕುರಿತು ಅರ್ಜಿ ಸಲ್ಲಿಸಲು ದಿನಾಂಕ 22 ಜನವರಿ 2025 ಕೊನೆಯ…
ಮಂಗಳೂರು : ಹರಿಕಥಾ ಪರಿಷತ್ (ರಿ.) ಮಂಗಳೂರು, ರಾಮಕೃಷ್ಣ ಮಠ ಮಂಗಳೂರು ಮತ್ತು ಬೆಂಗಳೂರಿನ ಷಡ್ಜ ಕಲಾ ಕೇಂದ್ರ ಟ್ರಸ್ಟ್ (ರಿ.) ಇವುಗಳ ಸಂಯುಕ್ತ ಸಹಯೋಗದಲ್ಲಿ ಹರಿಕಥಾ ಸಮ್ಮೇಳನ ಸಮಿತಿ ಮಂಗಳೂರು ಆಯೋಜಿಸುವ ‘ಹರಿಕಥಾ ಸಮ್ಮೇಳನ-2025’ ದಿನಾಂಕ 19 ಜನವರಿ 2025ರಂದು ಮಂಗಳಾದೇವಿ ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ನಡೆಯಲಿದೆ. ‘ಹರಿಕಥಾ ಪರಂಪರೆಯ ಪುನರುತ್ಥಾನ’ ಧ್ಯೇಯದೊಂದಿಗೆ ಈ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಳಗ್ಗೆ 8-00 ಗಂಟೆಗೆ ಸಂಕೀರ್ತನಾ ಮೆರವಣಿಗೆ, ದಾಸ ಸಂಕೀರ್ತನೆ, ಮತ್ತು ಉದ್ಘಾಟನಾ ಸಮಾರಂಭ ನಡೆಯಲಿದೆ. ಮಂಗಳೂರಿನ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜೀ ಮಹಾರಾಜ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಮಂಗಳೂರು ಹರಿಕಥಾ ಪರಿಷತ್ ಅಧ್ಯಕ್ಷ ಕೆ. ಮಹಾಬಲ ಶೆಟ್ಟಿ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದು, ಉದ್ಘಾಟನಾ ಸಮಾರಂಭದಲ್ಲಿ ಡಾ. ಎಂ. ಪ್ರಭಾಕರ ಜೋಷಿ ದಿಕ್ಕೂಚಿ ಭಾಷಣ ಮಾಡಲಿದ್ದಾರೆ. ಸಂಸದರು, ಶಾಸಕರು ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ಶ್ರೀದೇವಕೀತನಯ ಕೂಡ್ಲು ಇವರ ಕುರಿತಾದ ‘ಮಹಾಪರ್ವ’ ಎಂಬ ಕೃತಿ ಲೋಕಾರ್ಪಣೆಗೊಳ್ಳಲಿದೆ. ಪೂರ್ವಾಹ್ನ 10-40…
ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಇವುಗಳ ಸಂಯುಕ್ತ ಆಶ್ರಯದಲ್ಲಿ 2024-25 ಸಾಲಿನ ದಿ. ಡಾ. ಇರುವೈಲು ರಘುರಾಮ ಅಸ್ರಣ್ಣ ಮತ್ತು ಶ್ರೀಮತಿ ಲೀಲಾ ಅಸ್ರಣ್ಣ ನೆನಪಿನ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ ಮತ್ತು ಕೊಡಗು ಜಿಲ್ಲೆಯ 10ನೇ ತರಗತಿಯ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಸನ್ಮಾನ ಕಾರ್ಯಕ್ರಮವು ದಿನಾಂಕ 20 ಜನವರಿ 2025 ಸೋಮವಾರ ಬೆಳಗ್ಗೆ 10-00 ಗಂಟೆಗೆ ಭಾಗಮಂಡಲ ಹೋಬಳಿಯ ಕೋರಂಗಾಲದ ಜ್ಞಾನೋದಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುನೀಲ್ ಪತ್ರಾವೋ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕೊರಂಗಾಲದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ ವ್ಯವಸ್ಥಾಪಕರಾದ ಚೀಯಕ ಪೂವಂಡ ಚಂಗಪ್ಪ ನೆರವೇರಿಸಲಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ಇವರು ಪ್ರಾಸ್ತಾವಿಕ ಮಾತುಗಳನ್ನಾಡಲಿದ್ದಾರೆ.…
ಬೆಂಗಳೂರು: ಬೆಂಗಳೂರು ನಗರ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಸಹಯೋಗದೊಂದಿಗೆ ‘ಕನ್ನಡ ಜೈನ ಸಾಹಿತ್ಯ ಚರಿತ್ರೆ’ಯ ಆರು ಸಂಪುಟಗಳ ಲೋಕಾರ್ಪಣಾ ಸಮಾರಂಭವು ದಿನಾಂಕ 11 ಜನವರಿ 2025ರಂದು ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ಸಾಹಿತಿ ಪ್ರೊ. ಹಂಪನಾ ಮಾತನಾಡಿ “ಯಾವುದೇ ಭಾಷೆಯಲ್ಲಿ ಕಾಲ ಕಾಲಕ್ಕೆ ಸಾಹಿತ್ಯ ಚರಿತ್ರೆಗಳು ರಚನೆಯಾಗಬೇಕು. ಆಗ ಮಾತ್ರ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಮಹತ್ವ ಮನದಟ್ಟಾಗುತ್ತದೆ. ತುಂಬಾ ಪ್ರಾಚೀನವಾದ ಹಾಗೂ ವಿಸ್ತಾರವಾದ ಕನ್ನಡ ಸಾಹಿತ್ಯದ ಅಧ್ಯಯನಕ್ಕೆ ಈ ದಿನ ಬಿಡುಗಡೆ ಆಗಿರುವ ‘ಕನ್ನಡ ಜೈನ ಸಾಹಿತ್ಯ ಚರಿತ್ರೆ’ಯ ಸಂಪುಟಗಳು ತುಂಬಾ ಉಪಯುಕ್ತ” ಎಂದು ಹೇಳಿದರು. ಕೃತಿಯ ಕುರಿತು ಮಾತನಾಡಿದ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯಂ “ಈ ಕೃತಿಯ ರಚನೆಯ ಹಿಂದೆ 50 ರಿಂದ 60ವರ್ಷಗಳ ಗಂಭೀರವಾದ ಅಧ್ಯಯನವಿದೆ ಎಂಬುದು ಎದ್ದು ಕಾಣುತ್ತದೆ. ಈ ರೀತಿಯ ಆಕರಕೃತಿಗಳು ಹೆಚ್ಚು ಹೆಚ್ಚು ಚರ್ಚೆಯಾಗಲಿ. ಈ ಕೃತಿಯಲ್ಲಿ ಶ್ರೀವಿಜಯನಿಂದ ಇಲ್ಲಿಯವರೆಗಿನ ಸಾಹಿತ್ಯ ಮತ್ತು ಸಂಸ್ಕೃತಿಯ ತಿರುಳನ್ನು…
ಪ್ರೊ. ರಾಜಶೇಖರ ಭೂಸನೂರಮಠ ‘ರಾಭೂ’ ಎಂದೆ ಸಾಹಿತ್ಯ ಲೋಕಕ್ಕೆ ಚಿರಪರಿಚಿತರು. ಹುಬ್ಬಳ್ಳಿಯಲ್ಲಿ 16 ಜನವರಿ 1938ರಲ್ಲಿ ಜನಿಸಿದ ಇವರು ಮೂಲತಃ ಗದಗ ಜಿಲ್ಲೆಯ ರೋಣ ತಾಲೂಕಿನ ನಿಡಗುಂದಿಯವರು. ಇವರ ತಂದೆ ಸಂ. ಶಿ. ಭೂಸನೂರಮಠ ಎಂದೇ ಪ್ರಖ್ಯಾತರಾದ, ದಾರ್ಶನಿಕ ಕವಿ ಎಂಬ ಗೌರವಕ್ಕೆ ಪಾತ್ರರಾದ, ಸಂಗಯ್ಯ ಶಿವಮೂರ್ತಯ್ಯ ಭೂಸನೂರಮಠ. ಕನ್ನಡದ ವಿಜ್ಞಾನ ಸಾಹಿತಿ, ಕಥೆ ಹಾಗೂ ಕಾದಂಬರಿಕಾರ, ನಾಟಕಕಾರ, ಪ್ರಬಂಧಕಾರ, ವಿಮರ್ಶಕ, ಭಾಷಾಂತರಕಾರರಾಗಿ ಸಾಹಿತ್ಯ ಕೃಷಿ ಮಾಡಿದ ‘ರಾಭೂ’ ಕನ್ನಡ ಹಾಗೂ ಇಂಗ್ಲಿಷ್ ಎರಡು ಭಾಷೆಗಳಲ್ಲಿ ಪ್ರಭುತ್ವವನ್ನು ಪಡೆದ ಸಾಹಿತಿಯಾಗಿದ್ದರು. ಕನ್ನಡ ಭಾಷೆಯಲ್ಲಿ 80 ಇಂಗ್ಲಿಷ್ ಭಾಷೆಯಲ್ಲಿ 20 ಕೃತಿಗಳನ್ನು ರಚನೆ ಮಾಡಿದ್ದು ಇವು ಲೋಕಾರ್ಪಣೆಗೊಂಡಿವೆ. ಮಕ್ಕಳಿಗಾಗಿ 15ಕ್ಕಿಂತಲೂ ಹೆಚ್ಚು ಕಥೆ, ಕಾದಂಬರಿ ಮತ್ತು ಕಾಮಿಕ್ಸ್ ಪುಸ್ತಕಗಳು ಇವರ ಲೇಖನಿಯಿಂದ ಹೊರಬಂದಿವೆ. “ಭವ್ಯ ಮಾನವ” ಎಂಬ ಅಪರೂಪದ ಕೃತಿಯನ್ನು ಹೊರತುಪಡಿಸಿ, ಹಲವು ಸಂಪುಟಗಳಲ್ಲಿ ವಚನ ಸಾಹಿತ್ಯಗಳನ್ನು ಮತ್ತು ಸಿದ್ಧರ ಜೀವನ ಚರಿತ್ರೆಗಳನ್ನು ಸಂಪಾದಿಸಿ ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತ ಗೊಳಿಸಿದವರು. ಇವರೊಬ್ಬ…