Subscribe to Updates
Get the latest creative news from FooBar about art, design and business.
Author: roovari
ವ್ಯಕ್ತಿ, ಕುಟುಂಬ ಮತ್ತು ಸಮುದಾಯಗಳ ಕತೆಯನ್ನು ಏಕಕಾಲಕ್ಕೆ ಹೇಳುತ್ತಾ ತನ್ನೆಲ್ಲ ಸಂಕೀರ್ಣತೆಯೊಂದಿಗೆ ಬಿಚ್ಚಿಕೊಳ್ಳುವ ‘ದೇವ’ ಕಾದಂಬರಿಯು ಶ್ರೀಮತಿ ಎ.ಪಿ. ಮಾಲತಿಯವರ ಅನನ್ಯ ರಚನೆಗಳಲ್ಲೊಂದು. ಕಥಾನಾಯಕನಾದ ದೇವನ ಚಿಂತೆ, ಚಿಂತನೆ ಮತ್ತು ಚಟುವಟಿಕೆಗಳು ಕಾದಂಬರಿಯ ಹೆಚ್ಚಿನ ಭಾಗವನ್ನು ಆವರಿಸಿಕೊಂಡಿದ್ದು ಅವನ ಸುತ್ತ ಜರಗುವ ವಿದ್ಯಮಾನಗಳು ಕೃತಿಯ ವಿನ್ಯಾಸವನ್ನು ರೂಪಿಸಿವೆ. ದೇವನ ಆದರ್ಶ, ಕನಸು, ಶೋಧ ಮತ್ತು ಪ್ರಗತಿಪರ ಚಟುವಟಿಕೆಗಳನ್ನು ದಾಖಲಿಸುತ್ತಾ ಅವನ ವ್ಯಕ್ತಿತ್ವದೊಳಗಿನ ವ್ಯಂಗ್ಯ ವೈರುಧ್ಯ ಮತ್ತು ನೈತಿಕ ಸಂಘರ್ಷಗಳನ್ನು ವಿವರಿಸುವ ಲೇಖಕಿಯ ಕಥನ ಕೌಶಲ ಗಮನ ಸೆಳೆಯುತ್ತದೆ. ದೇವನ ಸಾಕು ತಂದೆ ಈಶ್ವರಯ್ಯನವರು ತಮ್ಮ ಬದುಕಿನ ಕೊನೆಯ ದಿನಗಳಂದು ಅವನ ಜನ್ಮರಹಸ್ಯವನ್ನು ತಿಳಿಸಿದ ಬಳಿಕ ಕಾದಂಬರಿಯು ಹೊಸ ತಿರುವನ್ನು ಪಡೆದುಕೊಳ್ಳುತ್ತದೆ. ತಾನು ಈಶ್ವರಯ್ಯ-ನಾಗಮ್ಮ ದಂಪತಿಗಳ ಮಗನಲ್ಲವೆಂದೂ, ದಲಿತ ಹೆಂಗಸಿನಿಂದ ಉಪೇಕ್ಷಿತನಾದ ತನ್ನನ್ನು ಅವರು ಸ್ವಂತ ಮಗನಂತೆ ಬೆಳೆಸುತ್ತಾ ಬಂದಿದ್ದರು ಎಂಬುದನ್ನು ತಿಳಿದು ಆಘಾತಗೊಂಡ ದೇವನು ತನ್ನ ಬದುಕಿನ ಸತ್ಯವನ್ನು ದಿಟ್ಟತನದಿಂದ ಸ್ವೀಕರಿಸಿದರೂ ಅದನ್ನು ಅರಗಿಸಿಕೊಳ್ಳಲು ವಿಫಲನಾಗುತ್ತಾನೆ. ಬೆಳೆಯುವ ಅಥವಾ ಬೆಳೆಸುವ ಕ್ರಮದಲ್ಲಿ…
ಉಡುಪಿ : ರಾಷ್ಟ್ರೀಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ಉಡುಪಿ ಮತ್ತು ಉಡುಪಿ ಜಿಲ್ಲಾ ಶ್ರೀ ವಿಶ್ವಕರ್ಮ ಎಜ್ಯೂಕೇಶನಲ್ ಟ್ರಸ್ಟ್ (ರಿ) ಉಡುಪಿ ಇವುಗಳ ಸಹಯೋಗದಲ್ಲಿ ಶ್ರೀ ವಿಶ್ವಮಯ ಸಾಹಿತ್ಯ ಪ್ರಚಾರ ಸಮಿತಿ ಹುಬ್ಬಳ್ಳಿ ಇದರ ರಜತಮಹೋತ್ಸವ ಸಂಭ್ರಮಾಚರಣೆಯ ಅಂಗವಾಗಿ ‘ಗ್ರಂಥ ಲೋಕಾರ್ಪಣ ಸಮಾರಂಭ’ವು ದಿನಾಂಕ 12-05-2024ರಂದು ಉಡುಪಿಯ ಕುಂಜಿಬೆಟ್ಟು ಇಲ್ಲಿರುವ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಈ ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿಯ ಆರ್.ವಿ.ಎಸ್. ಸಂಘದ ಅಧ್ಯಕ್ಷರಾದ ಶ್ರೀ ವೇಕಟೇಶ ಆಚಾರ್ಯ ಇವರು ವಹಿಸಲಿದ್ದು, ಉಡುಪಿಯ ಅಲೆವೂರು ಪ್ರಭಾಕರ ಆಚಾರ್ಯ ಸ್ಮಾರಕ ಶಿಕ್ಷಣ ಪ್ರತಿಷ್ಠಾನ ಇದರ ಉಪಾಧ್ಯಕ್ಷರಾದ ಶ್ರೀ ವಿಶ್ವನಾಥ ರಾವ್ ಇವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಸಹಚಿಂತನದ ಪ್ರಕಾಶಕರಾದ ಶ್ರೀ ಎಸ್. ವಿ. ಆಚಾರ್ಯ ಇವರು ಕೃತಿ ಲೋಕಾರ್ಪಣ ಮಾಡಲಿದ್ದು, ಅಧ್ಯಾಪಕರಾದ ಶ್ರೀ ರಮೇಶ್ ವಿ. ಆಚಾರ್ಯ ಮತ್ತು ವಿಶ್ವಕರ್ಮ ಎಜ್ಯೂಕೇಶನಲ್ ಟ್ರಸ್ಟಿನ ಅಧ್ಯಕ್ಷರಾದ ಇಂ.ಬಿ.ಎ. ಆಚಾರ್ಯ ಇವರುಗಳು ಕೃತಿ ಪರಿಚಯ ಮಾಡಲಿದ್ದಾರೆ.
ಉಡುಪಿ : ಚಲನಚಿತ್ರ ನಟ, ರಾಜ್ಯ ಪ್ರಶಸ್ತಿ ವಿಜೇತ ನಿರ್ದೇಶಕ ಹಾಗೂ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕಾಸರಗೋಡು ಚಿನ್ನಾ ಅವರ ಸಾರಥ್ಯದಲ್ಲಿ ‘ಘರ್ ಘರ್ ಕೊಂಕಣಿ’ ಕಾರ್ಯಕ್ರಮವು ಈಗಾಗಲೇ ಗಡಿನಾಡು ಕೇರಳ ಹಾಗೂ ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಯಶಸ್ವಿಗೊಂಡಿದ್ದು, ದಿನಾಂಕ 12-05-2024ರಂದು ಉಡುಪಿಯ ಆಸುಪಾಸಿನಲ್ಲಿ ನಡೆಯಲಿದೆ. ಬೆಳಗ್ಗೆ 10-00 ಗಂಟೆಗೆ 152ನೇ ಕಾರ್ಯಕ್ರಮವು ಉಡುಪಿಯ ಅಂಬಲ್ಪಾಡಿ, ಕಿದಿಯೂರ್ ರಸ್ತೆ, 4ನೇ ಅಡ್ಡ ರಸ್ತೆ, ‘ದರ್ಶನ್’ ಇಲ್ಲಿ ಶ್ರೀಮತಿ ದೀಪಾ ಮತ್ತು ಎಂ. ದಿನೇಶ್ ಭಂಡಾರಿ ಇವರ ಆತಿಥ್ಯದಲ್ಲಿ, 11-30 ಗಂಟೆಗೆ 153ನೇ ಕಾರ್ಯಕ್ರಮವು ಉಡುಪಿಯ ಬನ್ನಂಜೆ, ಬಿ.ಬಿ. ಗರಡಿ ರೋಡ್, ‘ಗಣೇಶ್ ಪ್ರಸಾದ್’ ಇಲ್ಲಿ ಶ್ರೀಮತಿ ಕಲ್ಪನಾ ಎಸ್. ಶೇಟ್ ಮತ್ತು ಶ್ರೀ ಸುಬ್ರಹ್ಮಣ್ಯ ಶೇಟ್ ಇವರ ಆತಿಥ್ಯದಲ್ಲಿ, 02-30 ಗಂಟೆಗೆ 154ನೇ ಕಾರ್ಯಕ್ರಮವು ಉಡುಪಿಯ ಸಿಟಿ ಹಾಸ್ಪಿಟಲ್ ಲಾಗ್ಗಿ, ಕಾಡಬೆಟ್ಟು, ‘ವೈಕುಂಠ ಭವನ್’ ಇಲ್ಲಿ ಶ್ರೀಮತಿ ಪ್ರಿಯಾ ಎಸ್. ಕಾಮತ್ ಇವರ ಆತಿಥ್ಯದಲ್ಲಿ ಹಾಗೂ 04-15…
ಮಂಗಳೂರು : ಗಾನ ನೃತ್ಯ ಅಕಾಡೆಮಿ (ರಿ.) ಮಂಗಳೂರು ಇವರು ಪ್ರಸ್ತುತ ಪಡಿಸುವ ಗುರು ವಿದ್ಯಾಶ್ರೀ ರಾಧಾಕೃಷ್ಣ ಇವರ ಶಿಷ್ಯೆ ಕುಮಾರಿ ಮಹತಿ ಪಾವನಸ್ಕರ ಇವರ ‘ಭರತನಾಟ್ಯ ರಂಗಪ್ರವೇಶ’ವು ದಿನಾಂಕ 12-05-2024ರಂದು ಸಂಜೆ 5-30ಕ್ಕೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಶಾಂತಲಾ ಪ್ರಶಸ್ತಿ ಪುರಸ್ಕೃತ ಕರ್ನಾಟಕ ಕಲಾಶ್ರೀ ಗುರು ಉಳ್ಳಾಲ ಮೋಹನ್ ಕುಮಾರ್ ಇವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಲಿದ್ದು, ಕಟೀಲು ದೇವಸ್ಥಾನದ ಅನುವಂಶಿಕ ಅರ್ಚಕ ಶ್ರೀ ಹರಿನಾರಾಯಣ ಆಸ್ರಣ್ಣ ಮತ್ತು ಬಂಟ್ವಾಳದ ಕಶೆಕೋಡಿ ಸೂರ್ಯ ನಾರಾಯಣ ಭಟ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಭರತನಾಟ್ಯ ಕಾರ್ಯಕ್ರಮಕ್ಕೆ ನಟುವಾಂಗಂನಲ್ಲಿ ಗುರು ವಿದ್ಯಾಶ್ರೀ ರಾಧಾಕೃಷ್ಣ, ಹಾಡುಗಾರಿಕೆಯಲ್ಲಿ ಚೆನ್ನೈಯ ವಿದ್ವಾನ್ ಶ್ರೀಕಾಂತ್ ಗೋಪಾಲ ಕೃಷ್ಣನ್, ಮೃದಂಗದಲ್ಲಿ ಚೆನ್ನೈಯ ವಿದ್ವಾನ್ ಕಾರ್ತಿಕೇಯನ್ ರಮಾನಾಥನ್, ಕೊಳಲು ಬೆಂಗಳೂರಿನ ವಿದ್ವಾನ್ ರಘು ನಂದನ್ ರಾಮಕೃಷ್ಣ ಮತ್ತು ವೀಣೆಯಲ್ಲಿ ಚೆನ್ನೈಯ ವಿದ್ವಾನ್ ಅನಂತ ನಾರಾಯಣ ಇವರುಗಳು ಸಹಕರಿಸಲಿದ್ದಾರೆ.
ಉಡುಪಿ : ಖ್ಯಾತ ವಿಮರ್ಶಕ ಪ್ರೊ. ವಿ.ಎಂ. ಇನಾಂದಾರ್ ಇವರ ನೆನಪಿನಲ್ಲಿ ನೀಡುವ ‘ಇನಾಂದಾರ್ ಪ್ರಶಸ್ತಿ’ಗೆ ಖ್ಯಾತ ವಿಮರ್ಶಕ ಡಾ. ಎ. ಮೋಹನ್ ಕುಂಟಾರ್ ಅವರ ‘ಸ್ವಗತ ಮತ್ತು ಸಂವಾದ ವಿಮರ್ಶಾಕೃತಿಯು 2023ರ ಸಾಲಿಗೆ ಆಯ್ಕೆಯಾಗಿದೆಯೆಂದು ರಾಷ್ಟ್ರಕವಿ ಗೋವಿಂದಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ. ಪ್ರಶಸ್ತಿಯನ್ನು ದಿನಾಂಕ 27-05-2024ರಂದು ಎಂ.ಜಿ.ಎಂ ಕಾಲೇಜಿನಲ್ಲಿ ನಡೆಯಲಿರುವ ವಾರ್ಷಿಕ ಮುದ್ದಣ ಸಾಹಿತ್ಯೋತ್ಸವದ ಸಂದರ್ಭದಲ್ಲಿ ನೀಡಿ ಗೌರವಿಸಲಾಗುವುದು. ಕನ್ನಡದಲ್ಲಿ ಎಂ. ಎ., ಎಂ. ಫಿಲ್, ಪಿ. ಎಚ್. ಡಿ. ಪದವಿಯನ್ನು ಹೊಂದಿರುವ ಡಾ. ಎ. ಮೋಹನ್ ಕುಂಟಾರ್ ಮಲೆಯಾಳಂ ಮತ್ತು ತಮಿಳು ಭಾಷೆಯಲ್ಲಿ ಸರ್ಟಿಫಿಕೇಟ್ ಹಾಗೂ ತೆಲುಗಿನಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದಾರೆ. ಕನ್ನಡ ವಿಶ್ವವಿದ್ಯಾನಿಲಯ ಹಂಪಿ ಇಲ್ಲಿನ ಭಾಷಾಂತರ ವಿಭಾಗದಲ್ಲಿ ಸಂಶೋಧನಾ ಸಹಾಯಕರಾಗಿ ಉದ್ಯೋಗಕ್ಕೆ ಸೇರಿ ಉಪನ್ಯಾಸಕರಾಗಿ, ಪ್ರವಾಚಕರಾಗಿ ಪ್ರಸ್ತುತ ಭಾಷಾಂತರ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಶ್ರೀಯುತರು ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಹಲವಾರು ಜವಾಬ್ದಾರಿಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ. 15…
ಕೋಟ : ಕೇಂದ್ರ ಲಲಿತ ಕಲಾ ಅಕಾಡೆಮಿಯಿಂದ ‘ರಾಷ್ಟ್ರ ಪ್ರಶಸ್ತಿ’ ಪುರಸ್ಕೃತರಾದ ಕೋಟ ಹಂದಟ್ಟಿನ ಎಚ್. ಜಿ. ಗಣೇಶ್ ಉರಾಳರು ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ‘ಆಧುನಿಕ ಭಾರತೀಯ ಶಿಲ್ಪ ಕಲೆಯಲ್ಲಿ ಅಭಿವ್ಯಕ್ತಿತ ಗ್ರಾಮ್ಯ ರೂಪಾಕಾರಗಳ ಪುನರಭಿವ್ಯಕ್ತಿ’ ಎಂಬ ವಿಷಯಕ್ಕೆ ಸಂಬಂಧಿಸಿ ಮಂಡಿಸಿದ ಪಿ. ಎಚ್. ಡಿ. ಪ್ರೌಢ ಪ್ರಬಂಧಕ್ಕೆ ಶಿಲ್ಪಕಲಾ ಡಾಕ್ಟರೇಟ್ ಪದವಿ ಪಡೆದಿರುತ್ತಾರೆ. ಕೋಟದ ಯಕ್ಷಗಾನ ಮತ್ತು ನಾಟಕ ಪ್ರಸಾಧನ ತಜ್ಞ ಎಚ್. ಗೋವಿಂದ ಉರಾಳ ಮತ್ತು ನಾಗರತ್ನ ದಂಪತಿಗಳ ಪುತ್ರರಾದ ಇವರು ಮೈಸೂರಿನ ಚಾಮರಾಜೇಂದ್ರ ದೃಶ್ಯ ಕಲಾ ಅಕಾಡಮಿಯಲ್ಲಿ ‘ಸ್ವರ್ಣ ಪದಕ’ದೊಂದಿಗೆ ಶಿಲ್ಪ ಕಲಾ ಸ್ನಾತಕ ಪದವಿಯನ್ನು ಪಡೆದು, ಮುಂದೆ ಗುಜರಾತಿನ ವಡೋದರದ ‘ದಿ ಮಹಾರಾಜ ಸಯಾಜಿ ರಾವ್ ವಿಶ್ವ ವಿದ್ಯಾನಿಲಯ’ದಲ್ಲಿ ಶಿಲ್ಪ ಕಲಾ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ಇದೀಗ ಮಣಿಪಾಲದ ಮಾಹೆಯಲ್ಲಿ ‘ಮಣಿಪಾಲ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಅಂಡ್ ಪ್ಲಾನಿಂಗ್’ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಶಾಂಭವಿ ಗಿಳಿಯಾರು ಶಾಲೆ,…
ಪುತ್ತೂರು : ಡಾ. ಶಿವರಾಮ ಕಾರಂತ ಅಧ್ಯಯನ ಕೇಂದ್ರ ವಿವೇಕಾನಂದ ಕಾಲೇಜು ಪುತ್ತೂರು ಇವರು ಕೊಡಮಾಡುವ ಶ್ರೀ ನಿರಂಜನ ಪ್ರಶಸ್ತಿ 2023 ಹಾಗೂ ಶ್ರೀ ಸಿದ್ಧಮೂಲೆ ಶಂಕರನಾರಾಯಣ ಭಟ್ಟರು ಸ್ಥಾಪಿಸಿ ವಿದ್ವಾಂಸರಿಗೆ ನೀಡುವ ಶ್ರೀ ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 09-05-2024ರಂದು ಪುತ್ತೂರು ವಿವೇಕಾನಂದ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಶ್ರೀ ನಿರಂಜನ ಪ್ರಶಸ್ತಿ 2023ರನ್ನು ಹಿರಿಯ ಸಾಹಿತಿಗಳಾದ ಪ್ರೊ. ಶ್ರೀ ವಿ. ಬಿ. ಅರ್ತಿಕಜೆಯವರಿಗೆ ಹಾಗೂ ಶ್ರೀ ಶಂಕರ ಸಾಹಿತ್ಯ ಪ್ರಶಸ್ತಿಯನ್ನು ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ಟ ಸಂಪ್ರತಿಷ್ಠಾನಕ್ಕೆ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಕುಲಪತಿ ಶ್ರೀ ನಿರಂಜನ ವಾನಳ್ಳಿ ಮತ್ತು ಬೆಟ್ಪಂಪಾಡಿ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ವರದರಾಜ ಚಂದ್ರಗಿರಿಯವರು ಅಭಿನಂದನಾ ಮಾತುಗಳನ್ನಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಡಾ. ಕೃಷ್ಣ ಭಟ್, ವಿವೇಕಾನಂದ ಪದವಿ ಮಹಾವಿದ್ಯಾಲಯದ ಅಧ್ಯಕ್ಷರಾದ ಡಾ. ಶ್ರೀಪತಿ ಕಲ್ಲೂರಾಯ, ಕಾರ್ಯದರ್ಶಿಗಳಾದ ಮುರಳಿ ಕೃಷ್ಣ…
ಪುತ್ತೂರು : ಹಿರಿಯ ಸಾಹಿತಿಗಳಾದ ದಿವಂಗತ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರಿಗೆ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಿದ ಶ್ರದ್ಧಾಂಜಲಿ ಸಭೆಯು ದಿನಾಂಕ 09-05-2024 ರಂದು ಪುತ್ತೂರಿನ ಅನುರಾಗ ವಠಾರದಲ್ಲಿ ನಡೆಯಿತು. ನಿವೃತ್ತ ಶಿಕ್ಷಕರಾದ ಶ್ರೀಧರ್ ರೈ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿಗಳಾದ ಬಿ. ಪುರಂದರ ಭಟ್, ಡಾ. ವರದರಾಜ ಚಂದ್ರಗಿರಿ, ನಾರಾಯಣ ರೈ ಕುಕ್ಕುವಳ್ಳಿ, ವಿಜಯಕುಮಾರ್, ಬಿ. ವಿ. ಸೂರ್ಯನಾರಾಯಣ, ಬಿ. ಐತಪ್ಪ ನಾಯ್ಕ ಮುಂತಾದವರು ದಿ.ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರೊಂದಿಗಿನ ಒಡನಾಟದ ಅನುಭವವನ್ನು ಹಂಚಿ ನುಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರೊ. ದತ್ತಾತ್ರೇಯ ರಾವ್ ಇವರು ರಾಮಕೃಷ್ಣ ಆಚಾರ್ ಅವರು ರಚಿಸಿದ ತುಳು ಕವಿತೆಯೊಂದನ್ನು ಹಾಡಿ ವಿಶೇಷವಾಗಿ ನುಡಿ ನಮನ ಸಲ್ಲಿಸಿದರು. ಶ್ರೀಮತಿ ಶಾಂತ ಪುತ್ತೂರು, ರಂಗನಾಥ್ ರಾವ್, ಸಂತೋಷ್ ಕುಮಾರ್, ಸೂರ್ಯ ನಾರಾಯಣ ಶರ್ಮಾ, ಲೋಕೇಶ್ ಮುಂತಾದವರು ಉಪಸ್ಥಿತರಿದ್ದರು. ಕ.ಸಾ.ಪ ತಾಲೂಕು ಘಟಕದ ಅಧ್ಯಕ್ಷರಾದ ಪುತ್ತೂರು ಉಮೇಶ್…
ಗೋವಿಂದ ದಾಸ ಕಾಲೇಜಿನ ಗ್ರಂಥಾಲಯ ವಿಭಾಗವು, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಭಾಗಿತ್ವದಲ್ಲಿ ನಡೆಸುತ್ತಿರುವ ಪುಸ್ತಕ ಪ್ರೀತಿ ಪರಿಚಯ ಸರಣಿ ಕಾರ್ಯಕ್ರಮದಲ್ಲಿ ತೃತೀಯ ಬಿ. ಸಿ. ಎ. ವಿದ್ಯಾರ್ಥಿನಿ ದಿವ್ಯಶ್ರೀ ಕೆ. ಎನ್. ಭಟ್ ಇವರು ಸಪ್ನ ಬುಕ್ ಹೌಸ್ ಬೆಂಗಳೂರು 2002ರಲ್ಲಿ ಮುದ್ರಿಸಿದ ಟಿ. ಆರ್. ಅನಂತರಾಮು ಇವರ ‘ಶಕ್ತಿ ಸಾರಥಿ ರಾಷ್ಟ್ರಪತಿ ಅಬ್ದುಲ್ ಕಲಾಂ’ ಎಂಬ ಪುಸ್ತಕವನ್ನು ಪರಿಚಯಿಸಿದರು. 120 ಪುಟಗಳ ಈ ಪುಸ್ತಕವು ಹದಿನಾಲ್ಕು ಲೇಖನಗಳನ್ನು ಒಳಗೊಂಡಿದೆ. ಈ ಕೃತಿಯಲ್ಲಿ ಬಾನಾಡಿಗಳಂತೆ ಬಾನಿನಲ್ಲಿ ಹಾರಬೇಕೆಂದು ಬಯಸಿದ ಹುಡುಗ ಮುಂದೆ ತಂತ್ರಜ್ಞಾನದಿಂದ ನಮ್ಮ ಆಕಾಶವನ್ನು ಆಳಿದ ಕಥೆ, ನಮ್ಮ ಪ್ರಜಾಪ್ರಭುತ್ವದ ರಥಕ್ಕೇ ಸಾರಥಿಯಾದ ಕಥೆ, ಸೋಲನ್ನು ಅರಗಿಸಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಂಡ ಮಹಾನ್ ವ್ಯಕ್ತಿಯ ಜೀವನ ಚಿತ್ರಣ ಸುಂದರವಾಗಿ ಮೂಡಿಬಂದಿವೆ ಎಂದರು. ಅಬ್ದುಲ್ ಕಲಾಂರವರು ತಮಿಳುನಾಡಿನ ರಾಮೇಶ್ವರಂನಲ್ಲಿ, 15-10-1937ರಂದು ಜನಿಸಿದರು. ತಂದೆ ಜೈನುಲಾಬ್ದಿನ್ ಮರಕಯಾರ್, ತಾಯಿ ಆಶಿಯಮ್ಮ. ಕಲಾಂ ಏಳು ಮಕ್ಕಳಲ್ಲಿ ಕೊನೆಯವರು. ತಂದೆ ದೋಣಿಗಳ ಮಾಲೀಕರಷ್ಟೇ ಅಲ್ಲ,…
ನಿಡ್ಲೆ : ಸ್ಪೂರ್ತಿದಾಯಕ ಮತ್ತು ಕಲಿಕೆಗೆ ಅವಕಾಶ ಮಾಡಿಕೊಡುವ ಕರುಂಬಿತ್ತಿಲ್ ಶಿಬಿರವು ದಿನಾಂಕ 15-05-2024ರಿಂದ 19-05-2024ರವರೆಗೆ ಬೆಳ್ತಂಗಡಿ ತಾಲೂಕಿನ ನಿಡ್ಲೆಯಲ್ಲಿರುವ ಕರುಂಬಿತ್ತಿಲ್ ಮನೆಯಲ್ಲಿ ನಡೆಯಲಿದೆ. ದಿನಾಂಕ 15-05-2024ರಂದು ಬೆಳಗ್ಗೆ 9-30ಕ್ಕೆ ಶ್ರೀ ಡಿ.ಬಿ. ಪ್ರಕಾಶ್ ದೇವಾಡಿಗ, ಶ್ರೀ ಧರ್ಮಸ್ಥಳ ಗೋಪಾಲ ದೇವಾಡಿಗ ಮತ್ತು ಶ್ರೀ ನಿತ್ಯಾನಂದ ದೇವಾಡಿಗ ಇವರಿಂದ ಮಂಗಳ ವಾದ್ಯ ಪ್ರಸ್ತುತಿಗೊಳ್ಳಲಿದೆ. 10-30 ಗಂಟೆಗೆ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀ ಪದಾಂಗಳವರು ಇವರಿಂದ ಉದ್ಘಾಟನೆ ನಡೆಯಲಿದೆ. ವಿದ್ವಾನ್ ಉದಯಕುಮಾರ್ ಸರಳತಾಯ ಇವರಿಂದ ಪ್ರವಚನ ಮತ್ತು ಅಮೇರಿಕಾದ ಮೃದಂಗ ವಾದಕರಾದ ಡಾ. ರಮೇಶ್ ಶ್ರೀನಿವಾಸನ್ ಇವರಿಂದ ವಿಶೇಷ ಸಂಗೀತ ಮೇಳ ಜರುಗಲಿದೆ. ಸಂಜೆ ಗಂಟೆ 4-00ರಿಂದ ಶ್ರೀಮತಿ ಇಂದಿರಾ ಕಡಂಬಿಯವರಿಂದ ಪ್ರಸ್ತುತಗೊಳ್ಳಲಿರುವ ಭರತನಾಟ್ಯ ಪ್ರದರ್ಶನಕ್ಕೆ ಹಾಡುಗಾರಿಕೆಯಲ್ಲಿ ಶ್ರೀ ಟಿ.ವಿ. ರಾಮ್ ಪ್ರಸಾದ್, ಶ್ರೀ ವಿಠಲ್ ರಂಗನ್ ಮತ್ತು ಶ್ರೀ ಎಂ.ಎಸ್. ವರದನ್ ಮತ್ತು ಶ್ರೀ ಪಯ್ಯನೂರ್ ಗೋವಿಂದಪ್ರಸಾದ್ ಸಹಕರಿಸಲಿದ್ದಾರೆ. 7-00 ಗಂಟೆಗೆ ಶ್ರೀ ವಿಷ್ಣು ಆರ್. ಮತ್ತು ತಂಡದವರಿಂದ ನವತಾರ್…