Author: roovari

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ (ರಿ.), ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಮತ್ತು ಪತ್ರಿಕಾ ಭವನ ಟ್ರಸ್ಟ್ (ರಿ.) ಇದರ ವತಿಯಿಂದ ‘ಪ್ರೆಸ್ ಕ್ಲಬ್ ದಿನಾಚರಣೆ’ ಕಾರ್ಯಕ್ರಮವನ್ನು ದಿನಾಂಕ 09 ಫೆಬ್ರವರಿ 2025ರಂದು ಬೆಳಗ್ಗೆ 10-00 ಗಂಟೆಗೆ ಪಾಲೆಮಾರ್ ಗಾರ್ಡನ್, ಮಂಗಳೂರು ಕ್ಲಬ್ ರೋಡ್, ಮೋರ್ಗನ್ಸ್ ಗೇಟ್ ಇಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ‘ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ’ ಮತ್ತು ಹಿರಿಯ ಪತ್ರಕರ್ತರಿಗೆ ‘ಪ್ರೆಸ್ ಕ್ಲಬ್ ಗೌರವ’ ಸನ್ಮಾನ ಮಾಡಲಾಗುವುದು. ಈ ಕಾರ್ಯಕ್ರಮವನ್ನು ಮಾಜಿ ಮೇಯರ್ ದಿವಾಕರ್ ಕದ್ರಿ ಇವರು ಉದ್ಘಾಟನೆ ಮಾಡಲಿದ್ದು, ಮಂಗಳೂರು ಪ್ರೆಸ್ ಕ್ಲಬ್ ಇದರ ಅಧ್ಯಕ್ಷರಾದ ಪಿ.ಬಿ. ಹರೀಶ್ ರೈ ಇವರು ಅಧ್ಯಕ್ಷತೆ ವಹಿಸಲಿರುವರು. ಸಮಾಜ ಸೇವಕರಾದ ಗಣೇಶ್ ಕುಲಾಲ್ ಇವರಿಗೆ ಮಾಜಿ ಸಚಿವರಾದ ಕೃಷ್ಣ ಜೆ. ಪಾಲೆಮಾರ್ ಇವರು ಪ್ರೆಸ್ ಕ್ಲಬ್ ಪ್ರಶಸ್ತಿ ನೀಡಿ ಸನ್ಮಾನಿಸಲಿದ್ದಾರೆ. ಪತ್ರಕರ್ತರಾದ ಮುಹಮ್ಮದ್ ಆರೀಫ್ ಪಡುಬಿದಿರೆ (ವಿಜಯ ಕರ್ನಾಟಕ), ಜಿತೇಂದ್ರ ಕುಂದೇಶ್ವರ (ವಿಶ್ವವಾಣಿ), ಭಾಸ್ಕರ ರೈ…

Read More

ಬೆಂಗಳೂರು : ಸುವರ್ಣ ಕರ್ನಾಟಕ ಕಾರ್ಮಿಕರ ವೇದಿಕೆ ಬೆಂಗಳೂರು ಇವರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ನೀಡುವ ‘ಆದರ್ಶ ಮಹಿಳಾ ರತ್ನ ರಾಜ್ಯ ಪ್ರಶಸ್ತಿ’ಗೆ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿಯಾದ ಸಾಹಿತಿ, ಸಮಾಜ ಸೇವಕಿ ಹಾಗೂ ಸಂಘಟಕಿಯಾದ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರಧಾನ ಸಮಾರಂಭವು ದಿನಾಂಕ 09 ಮಾರ್ಚ್ 2025ರಂದು ಬೆಂಗಳೂರಿನ ಭಾರತ್ ಸ್ಕೌಟ್ಸ್ ಹಾಗೂ ಗೈಡ್ಸ್ ಅಡಿಟೋರಿಯಂನಲ್ಲಿ ನಡೆಯಲಿದೆ. ಪ್ರಶಸ್ತಿ ಪ್ರಧಾನವನ್ನು ರಾಜ್ಯಸಭಾ ಸದಸ್ಯರು ಹಾಗೂ ಇನ್ಫೋಸಿಸ್ ಫೌಂಡೇಶನ್ ಇದರ ಸ್ಥಾಪಕ ಅಧ್ಯಕ್ಷರಾದ ಶ್ರೀಮತಿ ಸುಧಾ ಮೂರ್ತಿ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಂಗಳೂರು ಉತ್ತರ ಲೋಕಸಭಾ ಸಂಸದೆ ಶ್ರೀಮತಿ ಶೋಭಾ ಕರಂದ್ಲಾಜೆ, ರಂಗ ಕಲಾವಿದೆ ಹಾಗೂ ಮಾಜಿ ಸಚಿವೆ ಶ್ರೀಮತಿ ಉಮಾಶ್ರೀ, ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌದರಿ, ಸಮಾಜ ಸೇವಕಿಯಾದ ಕುಸುಮ ಹನುಮಂತ ರಾಯಪ್ಪ, ಮಾಜಿ ಉಪ ಮಹಾ ಮೇಯರ್ ಹೇಮಲತಾ ಗೋಪಾಲಯ್ಯ, ಸಮಾಜ ಸೇವಕಿ ಶೈಲಜಾ ಸೋಮಣ್ಣ, ಕನ್ನಡ…

Read More

ಬೆಂಗಳೂರು : ಸಾಹಿತಿಗಳು, ಬರಹಗಾರರು ಹಾಗೂ ವಿದ್ವಾಂಸರನ್ನು ವಿಧಾನ ಸೌಧಕ್ಕೆ ಹತ್ತಿರವಾಗಿಸುವ ಉದ್ದೇಶದಿಂದ ದಿನಾಂಕ 27 ಫೆಬ್ರವರಿ 2025 ರಿಂದ 03 ಮಾರ್ಚ್ 2025ರ ವರೆಗೆ ಇದೇ ಮೊದಲ ಬಾರಿಗೆ ವಿಧಾನ ಸೌಧದ ಆವರಣದಲ್ಲಿ ಪುಸ್ತಕ ಮತ್ತು ಸಾಹಿತ್ಯ ಉತ್ಸವ ಆಯೋಜಿಸಲಾಗಿದೆ ಎಂದು ಸ್ಪೀಕರ್ ಯು. ಟಿ. ಖಾದ‌ರ್ ತಿಳಿಸಿದ್ದಾರೆ. ಪುಸ್ತಕ ಉತ್ಸವದಲ್ಲಿ ಶೇ. 80ರಷ್ಟು ಕನ್ನಡ ಹಾಗೂ ಶೇ.20ರಷ್ಟು ಇತರ ಭಾಷೆಗಳ ಪುಸ್ತಕಗಳ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗುವುದು. 150ರಷ್ಟು ಮಳಿಗೆಗಳ ವ್ಯವಸ್ಥೆ ಮಾಡಲಾಗುತ್ತಿದ್ದು, ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗುತ್ತದೆ. ಈ ಉತ್ಸವದ ಜತೆ ಆಹಾರ ಉತ್ಸವ ಮತ್ತು ಸಾಂಸ್ಕೃ ತಿಕ ಕಾರ್ಯಕ್ರಮಗಳೂ ನಡೆಯಲಿವೆ ತಿಳಿಸಿದರು. ಉತ್ಸವದಲ್ಲಿ ಸಾಹಿತಿಗಳು ಬರೆದ ಪುಸ್ತಕ ಬಿಡುಗಡೆಗೆ ವೇದಿಕೆ ಕಲ್ಪಿಸುವ ಜತೆಗೆ ಅತ್ಯುತ್ತಮ ಸಾಹಿತಿಯೊಬ್ಬರಿಗೆ ಪ್ರಶಸ್ತಿ ನೀಡುವ ಬಗ್ಗೆಯೂ ನಿರ್ಧರಿಸಲಾಗಿದೆ. ಉತ್ಸವದಲ್ಲಿ ಸಾಹಿತ್ಯಕ್ಕೆ ಸಂಬಂಧಿಸಿ ಚರ್ಚೆಗೆ ಅವಕಾಶ ಕಲ್ಪಿಸಲಾಗುತ್ತಿದೆ. ಶಾಸಕರು ತಮ್ಮ ಕ್ಷೇತ್ರದ ಸರಕಾರಿ ಶಾಲಾ, ಕಾಲೇಜುಗಳಿಗೆ ಪೂರಕವಾಗಿ ತಲಾ 2ರಿಂದ 3 ಲಕ್ಷ…

Read More

ಮೈಸೂರು : ಮಂಡ್ಯ ರಮೇಶ್ ಇವರ ನಟನ ರಂಗಶಾಲೆಯು ಕಳೆದ ಅನೇಕ ವರ್ಷಗಳಿಂದ ಕಲಾಮಾಧ್ಯಮದಲ್ಲಿ ಕ್ರಿಯಾಶೀಲವಾಗಿದ್ದು, ರಂಗಭೂಮಿಯಲ್ಲಿ ತನ್ನದೇ ಆದ ವಿಶಿಷ್ಟ ಛಾಪನ್ನು ಮೂಡಿಸಿದೆ. ರಂಗಭೂಮಿಯ ಅಧ್ಯಯನ, ಪ್ರಾತ್ಯಕ್ಷಿಕೆ, ಪ್ರಯೋಗ ಹಾಗೂ ಪ್ರದರ್ಶನಗಳ ಮೂಲಕ ಶ್ರೇಷ್ಠತೆಯನ್ನು ಸಾಧಿಸುವುದರತ್ತ ನಟನ ಸತತವಾಗಿ ಪ್ರಯತ್ನ ನಡೆಸುತ್ತಾ ಬಂದಿದ್ದು, ಮೈಸೂರಿನಲ್ಲಿ ನೆಲೆಗೊಂಡಿದ್ದರೂ ಭಾರತದಾದ್ಯಂತ ರಂಗಯಾತ್ರೆಗಳನ್ನು, ರಂಗ ತರಬೇತಿ ಶಿಬಿರಗಳನ್ನು ನಡೆಸುವುದರ ಮೂಲಕ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಮೈಸೂರಿನ ಮತ್ತು ಸುತ್ತಮುತ್ತಲಿನ ಸದಭಿರುಚಿಯ, ಸಹೃದಯ ರಂಗಾಸಕ್ತರಿಗಾಗಿ ನಟನವು ವಾರಾಂತ್ಯ ರಂಗ ಪ್ರದರ್ಶನಗಳನ್ನು ನಡೆಸುತ್ತಿದ್ದು, ದಿನಾಂಕ 09 ಮತ್ತು 16 ಫೆಬ್ರವರಿ 2025ರಂದು ಸಂಜೆ ಗಂಟೆ 06-30ಕ್ಕೆ ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ‘ನಟನ ರಂಗಶಾಲೆ’ಯಲ್ಲಿ 2024-25ನೇ ಸಾಲಿನ ರಂಗಭೂಮಿ ಡಿಪ್ಲೋಮಾ ವಿದ್ಯಾರ್ಥಿಗಳ ಎರಡನೆ ಅಭ್ಯಾಸಿ ಪ್ರಯೋಗ ‘ಮಿಸ್ ಸದಾರಮೆ’ ಪ್ರದರ್ಶನಗೊಳ್ಳಲಿದೆ. ವೃತ್ತಿ ರಂಗಭೂಮಿಯ ಮಹತ್ವದ ನಾಟಕಗಳಲ್ಲಿ ಒಂದಾದ ಬೆಳ್ಳಾವೆ ನರಹರಿ ಶಾಸ್ತ್ರಿ ವಿರಚಿತ ‘ಸದಾರಮಾ ನಾಟಕಂ’ ಅನ್ನು ಆಧರಿಸಿ ಆಧುನಿಕ ವಿಚಾರ ದೃಷ್ಟಿಕೋನಗಳ ಮೂಲಕ ನಾಟಕಕಾರ, ಚಿಂತಕ, ನೀನಾಸಂನ…

Read More

ಸುಳ್ಯ : ಹಿರಿಯ ಯಕ್ಷಗಾನ ಕಲಾವಿದ, ಅರ್ಥಧಾರಿ, ನಿವೃತ್ತ ಶಿಕ್ಷಕ ಕೆ. ವಿ. ಗಣಪಯ್ಯ ಇವರು ಅಲ್ಪಕಾಲದ ಅಸೌಖ್ಯದಿಂದ ದಿನಾಂಕ 04 ಫೆಬ್ರವರಿ 2025 ರ ಮಂಗಳವಾರದಂಡು ನಿಧನರಾದರು. ಇವರಿಗೆ 92 ವರ್ಷ ವಯಸ್ಸಾಗಿತ್ತು. ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲ್ಲೂಕುಗಳ ವಿವಿಧ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದ ಇವರು ಬಳಿಕ ಕಾಣಿಯೂರು ನಿಂತಿಕಲ್ಲು ಬಳಿಯ ಆಲಾಜೆ ಎಂಬಲ್ಲಿ ಕೃಷಿಕರಾಗಿ ನಿವೃತ್ತ ಜೀವನ ನಡೆಸುತ್ತಿದ್ದರು. ಗಣಪಯ್ಯ ಕೆ.ವಿ. ಹರಿತವಾದ ಮಾತಿನ ಅರ್ಥಗಾರಿಕೆಗೆ ಹೆಸರುವಾಸಿಯಾಗಿದ್ದರು. ಭೀಷ್ಮ, ಕೌರವ, ವಾಲಿ, ತಾಮ್ರಧ್ವಜ ಮೊದಲಾದ ಪಾತ್ರಗಳನ್ನು ವಿಶಿಷ್ಟವಾಗಿ ಕಟ್ಟಿಕೊಡುತ್ತಿದ್ದರು. ಅನೇಕ ಯಕ್ಷಗಾನ ಸಂಘ ಸಂಸ್ಥೆಗಳಿಗೆ, ಅರ್ಥಧಾರಿಗಳಿಗೆ ಮಾರ್ಗದರ್ಶನ ಮಾಡಿದ್ದರು.

Read More

ಮಂಗಳೂರು : ಮಂಗಳೂರಿನ ಕಲಾ ಸಾಧನ ಸಂಸ್ಥೆಯು ಮಂಗಳೂರಿನ ಸ್ವಸ್ತಿಕ ನ್ಯಾಶನಲ್ ಬಿಸಿನೆಸ್ ಸ್ಕೂಲ್ ಸಹಭಾಗಿತ್ವದಲ್ಲಿ ಆಯೋಜಿಸುವ ‘ಸ್ವರ ಸಾನ್ನಿಧ್ಯ’ ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ ಹಾಗೂ ದೇಶದ ಖ್ಯಾತ ಸಂಗೀತ ಕಲಾವಿದರ ಸಂಗೀತ ಕಾರ್ಯಕ್ರಮವು ದಿನಾಂಕ 08 ಫೆಬ್ರವರಿ 2025ರಂದು ಮಂಗಳೂರಿನ ಟಿ. ಎಂ. ಎ. ಪೈ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್‌ ಇಲ್ಲಿ ನಡೆಯಲಿದೆ. ಅಂದು ಬೆಳಗ್ಗೆ ಘಂಟೆ 8.00ಕ್ಕೆ ದೀಪ ಪ್ರಜ್ವಲನದೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಬೆಳಗ್ಗೆ 8.40ರಿಂದ 9.30ರ ವರೆಗೆ ವಿಭಾ ಎಸ್. ನಾಯಕ್ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ನಡೆಯಲಿದೆ ಇವರಿಗೆ ತಬಲಾದಲ್ಲಿ ವಿಘ್ನೇಶ್ ಪ್ರಭು, ಹಾರ್ಮೋನಿಯಂನಲ್ಲಿ ಹೇಮಂತ್ ಭಾಗವತ್ ಸಾಥ್ ನೀಡಲಿದ್ದಾರೆ. ಬಳಿಕ 9.40ರಿಂದ 10.30ರ ವರೆಗೆ ಮೂಡುಬಿದಿರೆಯ ಸ್ವಯಂ ಪ್ರಕಾಶ್ ಪ್ರಭು ಇವರಿಂದ ಕೊಳಲು ವಾದನ, 10.40ರಿಂದ 11.30ರ ವರೆಗೆ ಆತ್ರೇಯಾ ಗಂಗಾಧರ್ ಇವರಿಂದ ಗಾಯನ ನಡೆಯಲಿದೆ. 11.40ರಿಂದ ಕಲಾಸಾಧನ ವಿದ್ಯಾರ್ಥಿಗಳಿಂದ ಕಾರ್ಯಕ್ರಮ, ಸಂಜೆ ಘಂಟೆ 5.00ಕ್ಕೆ ಹಿಂದೂಸ್ತಾನಿ ಸಂಗೀತ ಕಛೇರಿ ಉದ್ಘಾಟನ ನಡೆಯಲಿದ್ದು,…

Read More

ಬಂಟ್ವಾಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಧರ್ಮಸ್ಥಳ ಇವರು ದಿನಾಂಕ 08 ಫೆಬ್ರವರಿ 2025ರಂದು ಸಂಜೆ 7-00 ಗಂಟೆಗೆ ಪರಾರಿಗುತ್ತು ದಿ. ಬಾಲಕೃಷ್ಣ ಶೆಟ್ಟಿ ಯವರ ತೃತೀಯ ವರ್ಷದ ಸವಿನೆನಪಿಗಾಗಿ ಬಂಟ್ವಾಳ ಪರಾರಿಗುತ್ತು ಮನೆಯಲ್ಲಿ ‘ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ’ ಯಕ್ಷಗಾನ ಬಯಲಾಟವನ್ನು ಆಡಿ ತೋರಿಸಲಿರುವರು. ಇದೇ ಸಂದರ್ಭದಲ್ಲಿ ಸಂಪಾಜೆ ದಿ. ಶೀನಪ್ಪ ರೈ, ಕುಂಬಳೆ ದಿ. ಶ್ರೀಧರ ರಾವ್ ಮತ್ತು ಬಂಟವಾಳ ದಿ. ಜಯರಾಮ ಆಚಾರ್ಯ ಇವರ ಸಂಸ್ಮರಣಾ ಕಾರ್ಯಕ್ರಮ ಹಾಗೂ ಸಂಪಾಜೆ ಶ್ರೀಮತಿ ಗಿರಿಜಾವತಿ ಶೀನಪ್ಪ ರೈ, ಕುಂಬಳೆ ಶ್ರೀಮತಿ ಸುಲೋಚನಾ ಶ್ರೀಧರ ರಾವ್ ಮತ್ತು ಬಂಟವಾಳ ಶ್ರೀಮತಿ ಶ್ಯಾಮಲಾ ಜಯರಾಮ ಆಚಾರ್ಯ ಇವರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

Read More

ಕಾಸರಗೋಡು : “ಸಂಗೀತವಾಗಲಿ ಜ್ಞಾನವಾಗಲಿ ಹಠತ್ತಾಗಿ ಬರುವುದಿಲ್ಲ. ಅದನ್ನು ಕಷ್ಟಪಟ್ಟು ಕರಗತ ಮಾಡಿಕೊಳ್ಳಬೇಕು. ಸಂಗೀತ ಕಲಿಯುವುದರಿಂದ ಅಥವಾ ಕೇಳುವುದರಿಂದ ಮನಸ್ಸು ಉಲ್ಲಸಿತವಾಗುವುದರ ಜೊತೆಗೆ ಆರೋಗ್ಯವು ವೃದ್ಧಿಯಾಗುತ್ತದೆ” ಎಂದು ಖ್ಯಾತ ವೈದ್ಯರು ಮತ್ತು ಮೃದಂಗವಾದಕರಾಗಿರುವ ಡಾ. ಶಂಕರರಾಜ್ ಆಲಂಪಾಡಿಯವರು ಹೇಳಿದರು. ಅವರು ಕಾಸರಗೋಡಿನ ಖ್ಯಾತ ಸಾಂಸ್ಕೃತಿಕ ಸಾಹಿತ್ಯಿಕ ಸಂಸ್ಥೆಯಾದ ರಂಗ ಚಿನ್ನಾರಿ ಹಾಗೂ ಅದರ ಸಂಗೀತ ಘಟಕ ಸ್ವರ ಚಿನ್ನಾರಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದೊಂದಿಗೆ ಏರ್ಪಡಿಸಿದ ಭಕ್ತಿಗೀತೆಗಳ ಗಾಯನ ‘ಭಕ್ತಿ ತೀರ್ಥ’ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡುತ್ತಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಖ್ಯಾತ ಹರಿದಾಸರು ನ್ಯಾಯವಾದಿಗಳು ಆಗಿರುವ ಶಂ ನಾಡಿಗ ರವರು ಮಾತನಾಡಿ “ರಂಗ ಚಿನ್ನಾರಿಯು ನಡೆದುಕೊಂಡು ಬರುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಉಳಿದವರಿಗೆ ಮಾದರಿ ಎಂದರಲ್ಲದೆ ಗುರಿ ಸಾಧಿಸಲು ಗುರು ಬೇಕು ಗುರುವಿಲ್ಲದ ವಿದ್ಯೆಗೆ ಸಂಪೂರ್ಣ ಫಲ ಸಿಕ್ಕದು ಗುರು ಮುಖೇನ ಕಲಿತ ವಿದ್ಯೆ ಸಾರ್ಥಕ” ಎಂದು ಹೇಳಿದರು. ಮಂಗಳೂರಿನ ಖ್ಯಾತ ತುಳು ಸಿನಿಮಾ…

Read More

ಬೆಂಗಳೂರು : ಯಶಸ್ವೀ ಕಲಾವೃಂದ (ರಿ.) ಕೊಮೆ, ತೆಕ್ಕಟ್ಟೆ ಇವರ ವತಿಯಿಂದ ಸಿನ್ಸ್ 1999 ಶ್ವೇತಯಾನ -108 ಕಾರ್ಯಕ್ರಮದಡಿಯಲ್ಲಿ ‘ಯಶಸ್ವಿ ಕಲೋತ್ಸವ’ ವಾಗ್ವಿಲಾಸದ ಯಕ್ಷವಿಶೇಷವನ್ನು ದಿನಾಂಕ 08 ಫೆಬ್ರವರಿ 2025ರಂದು ರಾತ್ರಿ 9-30 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಹೂವಿನಕೋಲು, ಯಕ್ಷ ಗಾಯನ, ಪರಂಪರೆಯ ಒಡ್ಡೋಲಗ, ವಾಗ್ವಿಲಾಸದ ಯಕ್ಷವಿಶೇಷ ಪ್ರಸ್ತುತಗೊಳ್ಳಲಿದೆ.

Read More

ಕರಾವಳಿಯ ಪ್ರಸಿದ್ಧ ಸ್ಥಾನವನ್ನು ಪಡೆದ ಕಲೆ “ಯಕ್ಷಗಾನ”. ಕರ್ನಾಟಕದ ಗಂಡು ಕಲೆಯಾಗಿರುವ ಯಕ್ಷಗಾನ ಪಾರ್ತಿ ಸುಬ್ಬರಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಜೃಂಭಿಸುತ್ತಿದೆ. ಇಂತಹ ಕಲೆಯಲ್ಲಿ ರಾರಾಜಿಸುತ್ತಿರುವ ಕಲಾವಿದ ಸತ್ಯಜಿತ್ ಹೆಚ್ ರಾವ್. 27.03.2001ರಂದು ಹರಿಪ್ರಸಾದ್ ರಾವ್ ವಿ ಹಾಗೂ ಹೇಮಾ ಹೆಚ್ ರಾವ್ ಇವರ ಮಗನಾಗಿ ಜನನ. ಪ್ರಾಥಮಿಕ ಶಿಕ್ಷಣವನ್ನು ಮೈಸೂರಿನಲ್ಲಿ ಪೂರ್ಣಗೊಳಿಸಿ, ಶ್ರೀ ಸತ್ಯಸಾಯಿ ಸೇವಾ ಲೋಕ ಅಳಿಕೆ (ಹೈಸೂಲ್ ಮತ್ತು ಪಿ.ಯು.ಸಿ) ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಹಾಗೂ ಉನ್ನತ ಶಿಕ್ಷಣ ಎಮ್.ಬಿ.ಎ ಪದವಿಯನ್ನು ಪಡೆದಿರುತ್ತಾರೆ. ಯಕ್ಷಗಾನವು ಇವರ ಮನೆಯಲ್ಲಿ ಹಿರಿಯರಿಂದ ರಕ್ತಗತವಾಗಿ ಬಂದ ಕಲೆ. ಅಜ್ಜ, ಮುತ್ತಜ್ಜ, ತಂದೆ ಮತ್ತು ಅಣ್ಣನವರೆಲ್ಲರೂ ಯಕ್ಷಗಾನದ ಒಂದೊಂದು ಕ್ಷೇತ್ರದಲ್ಲಿ ತೊಡಗಿಸಿಕೊಂಡವರು. ಬಾಲ್ಯದಲ್ಲಿ ಮೈಸೂರಿನ ರಮೇಶ್ ಧಾನೂರ್ ಇವರಿಂದ ತಬಲಾ ವಾದನದ ಶಿಕ್ಷಣವನ್ನು ಪಡೆದು ಬಳಿಕ ಶ್ರೀ ಸತ್ಯಸಾಯಿ ಲೋಕ ಸೇವಾ ಕೇಂದ್ರದಲ್ಲಿ ನಿತ್ಯ ಭಜನೆಗೆ ತಬಲಾ ವಾದನದ ಅವಕಾಶ ನಿತ್ಯವೂ ಲಭಿಸಿತು. ಅಲ್ಲಿಯೇ ಇದ್ದ ಯಕ್ಷಗಾನದ ಮಕ್ಕಳ ತಂಡದಲ್ಲಿ ಅಭ್ಯಾಸಕ್ಕಾಗಿ…

Read More