Author: roovari

ಮಂಗಳೂರು : ಉಳ್ಳಾಲದ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ನೀಡುವ 2024-25ನೇ ಸಾಲಿನ ‘ವೀರರಾಣಿ ಅಬ್ಬಕ್ಕ ಪ್ರಶಸ್ತಿ’ಗೆ ಸಾಹಿತ್ಯ ಕ್ಷೇತ್ರದಲ್ಲಿ ಹಿರಿಯ ಲೇಖಕಿ ಕ್ಯಾಥರಿನ್ ರೋಡ್ರಿಗಸ್, ಸಮಾಜ ಸೇವೆ ಕ್ಷೇತ್ರದಲ್ಲಿ ಹಿರಿಯ ಸಮಾಜ ಸೇವಕಿ ಸುವಾಸಿನಿ ದಾಮೋದರ್ ಆಯ್ಕೆಯಾಗಿದ್ದಾರೆ. ನಾ. ದಾಮೋದರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಬಿ.ಎಂ. ರೋಹಿಣಿ, ಗಣೇಶ ಅಮೀನ್ ಸಂಕಮಾರ್ ಇವರನ್ನೊಳಗೊಂಡ ಆಯ್ಕೆ ಸಮಿತಿಯು ಇಬ್ಬರು ಸಾಧಕಿಯರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿ ಅಬ್ಬಕ್ಕ ಉತ್ಸವ ನಡೆಸಲಾಗುತ್ತಿದ್ದು, ಅಬ್ಬಕ್ಕನ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿ ರೂ.25,000/- ನಗದು, ಸ್ಮರಣಿಕೆ ಒಳಗೊಂಡಿದೆ. ದಿನಾಂಕ 22 ಫೆಬ್ರವರಿ 2025ರಂದು ಉಳ್ಳಾಲ ನಗರಸಭೆ ಆವರಣದ ಮಹಾತ್ಮಾ ಗಾಂಧಿ ರಂಗಮಂದಿರದಲ್ಲಿ ನಡೆಯುವ ಅಬ್ಬಕ್ಕ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಉಡುಪಿ ಜಿಲ್ಲೆ ಕಾಪು ತಾಲೂಕಿನ ಕಟಪಾಡಿ ಗ್ರಾಮದ ಕ್ಯಾಥರಿನ್ ರೋಡ್ರಿಗಸ್ ಇವರು ಎಂ.ಎ. ಪದವೀಧರರಾಗಿದ್ದು, ಸಾಹಿತ್ಯ ಕ್ಷೇತ್ರದ ಬಹುಮುಖ ಮತ್ತು ಬಹುಭಾಷಾ ಪ್ರತಿಭೆ. ಕನ್ನಡ, ತುಳು, ಕೊಂಕಣಿಯಲ್ಲಿ ಕಥೆ, ಕವನ, ಕಾದಂಬರಿ,…

Read More

ಬೆಂಗಳೂರು : ವಿಜಯನಗರ ಬಿಂಬ ರಂಗ ಶಿಕ್ಷಣ ಕೇಂದ್ರ ಮಕ್ಕಳ ವಿಭಾಗದಲ್ಲಿ 3ರಿಂದ 8 ಮತ್ತು 8ರಿಂದ 15 ವರ್ಷದ ಮಕ್ಕಳಿಗೆ ಎರಡು ವಿಭಾಗಗಳಲ್ಲಿ ರಂಗ ತರಬೇತಿಯ ಬೇಸಿಗೆ ಶಿಬಿರ ಆರಂಭವಾಗಲಿದ್ದು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬಹುದಾಗಿದೆ. 3ರಿಂದ 8 ವರ್ಷದ ಮಕ್ಕಳಿಗೆ ‘ಚಿಣ್ಣರ‌ ಚಿತ್ತಾರ’ ಬೇಸಿಗೆ ಶಿಬಿರವು ದಿನಾಂಕ 05 ಏಪ್ರಿಲ್ 2025ರಿಂದ 14 ಏಪ್ರಿಲ್ 2025ರವರೆಗೆ ಬೆಳಗ್ಗಿನ ಬ್ಯಾಚ್ 10-00 ಗಂಟೆಯಿಂದ 1-00 ಗಂಟೆ ತನಕ ಹಾಗೂ ಸಂಜೆ ಬ್ಯಾಚ್ 4-00 ಗಂಟೆಯಿಂದ 7-00 ಗಂಟೆ ತನಕ ನಡೆಯಲಿದೆ. ನಟನೆ, ರಂಗಾಟ, ಚಿತ್ರಕಲೆ, ಕ್ರಾಫ್ಟ್, ಹಾಡುಗಳು, ಚಿತ್ರಕಲಾ ಪ್ರದರ್ಶನ ಮತ್ತು ಮಕ್ಕಳಿಂದಲೇ ನಾಟಕ ಪ್ರದರ್ಶನ ನಡೆಯಲಿದೆ. 8ರಿಂದ 15 ವರ್ಷದ ಮಕ್ಕಳಿಗೆ ‘ಚಿಣ್ಣರ ಚಾವಡಿ’ ಬೇಸಿಗೆ ಶಿಬಿರವು ದಿನಾಂಕ 15 ಏಪ್ರಿಲ್ 2025ರಿಂದ 29 ಏಪ್ರಿಲ್ 2025ರವರೆಗೆ ಮೊದಲ ವಾರ ಬೆಳಗ್ಗೆ 9-30 ಗಂಟೆಯಿಂದ 4-00 ಗಂಟೆ ತನಕ ಹಾಗೂ ಎರಡನೇ ವಾರ ಬೆಳಗ್ಗೆ 9-30 ಗಂಟೆಯಿಂದ 7-30…

Read More

ಮಂಗಳೂರು : ಆಕೃತಿ ಆಶಯ ಪಬ್ಲಿಕೇಶನ್ಸ್ ಮಂಗಳೂರು ಇವರ ವತಿಯಿಂದ ಬೆಂಗಳೂರಿನ ರಾಜಾಜಿನಗರ ಪೇರೆಂಟ್ಸ್ ಅಸೋಶಿಯೇಶನ್ ಕಾಲೇಜು, ಪರಿಸರ ಸಂಗಮ ಮತ್ತು ಭೂಮಿ ಬುಕ್ಸ್ ಇವರ ಸಹಯೋಗದೊಂದಿಗೆ ಪ್ರೊ. ಮಾಧವ ಗಾಡ್ಗೀಳರ ಆತ್ಮಕಥೆ ‘A Walk up the Hill’ನ ಕನ್ನಡ ಆವೃತ್ತಿ ‘ಏರುಘಟ್ಟದ ನಡಿಗೆ’ ಅನುವಾದ ಕೃತಿ ಲೋಕಾರ್ಪಣೆ ಕಾರ್ಯಕ್ರಮವನ್ನು ದಿನಾಂಕ 13 ಫೆಬ್ರವರಿ 2025ರಂದು ಬೆಳ್ಳಿಗೆ 10-00 ಗಂಟೆಗೆ ಬೆಂಗಳೂರಿನ ಚಿತ್ರಕಲಾ ಪರಿಷತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಶಿಕ್ಷಣ ತಜ್ಞರು ಮತ್ತು ಚಿಂತಕರಾದ ಪ್ರೊ. ಕೆ.ಈ. ರಾಧಾಕೃಷ್ಣ ಇವರ ಅಧ್ಯಕ್ಷತೆ ನಡೆಯುವ ಈ ಕಾರ್ಯಕ್ರಮದಲ್ಲಿ ಸನ್ಮಾನ್ಯ ಈಶ್ವರ ಖಂಡ್ರೆ ಇವರು ಆತ್ಮಕಥೆ ಕೃತಿಯನ್ನು ಲೋಕಾರ್ಪಣೆ ಮಾಡಲಿರುವರು. ಕೃಷಿಕರಾದ ಡಾ. ನರೇಂದ್ರ ರೈ ದೇರ್ಲ ಇವರು ಕೃತಿ ಅವಲೋಕನಗೈಯಲಿದ್ದು, ಮಾಜಿ ಸೈನಿಕ ಕ್ಯಾಪ್ಟನ್ ಜಿ.ಆರ್. ಗೋಪಿನಾಥ್ ಇವರು ಗಾಡ್ಗೀಳರ ಪರಿಸರ ಕಾಣ್ಕೆಗಳ ಬಗ್ಗೆ ಮಾತನಾಡಲಿದ್ದಾರೆ.

Read More

ಮಂಗಳೂರು : ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಅರ್ಪಿಸುವ ಅಪೂರ್ವ ಸಾಹಿತ್ಯ ಸೇವೆ ‘ಪುಸ್ತಕ ಪ್ರೇಮಿಗಳ ದಿನಾಚರಣೆ’ ಕಾರ್ಯಕ್ರಮವನ್ನು ದಿನಾಂಕ 14 ಫೆಬ್ರವರಿ 2025ರಂದು ಬೆಳಿಗ್ಗೆ 10-00 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ. ಎಂ. ಮೋಹನ ಆಳ್ವ ಇವರ ಅಧ್ಯಕ್ಷತೆಯಲ್ಲಿ ಮಾನ್ಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರು ಉದ್ಘಾಟನೆ ಮಾಡಲಿರುವರು. ನಾಡಿನ ಪ್ರಸಿದ್ಧ ಸಾಹಿತಿಗಳ 10 ಪುಸ್ತಕ ಬಿಡುಗಡೆ, ಪುಸ್ತಕ ಪ್ರೇಮದ ಚಿತ್ರಕಲಾ ಸ್ಪರ್ಧೆ ಮತ್ತು ಪುಸ್ತಕ ಮೇಳ ಜರಗಳಿವೆ. ಡಾ. ವಿಶ್ವನಾಥ ಬದಿಕಾನ ಇವರ ‘ಕನ್ನಡ ಜಾನಪದ ಅಧ್ಯಯನದ ಮೊದಲ ಘಟ್ಟ’ ಸಂಶೋಧನಾ ಗ್ರಂಥ, ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿಯವರ ‘ಸೃಷ್ಟಿ ಸಿರಿಯಲಿ ಪುಷ್ಪವೃಷ್ಟಿ’ ಕನ್ನಡ ಕವನ ಸಂಕಲನ, ಶ್ರೀಮತಿ ಅಕ್ಷತಾರಾಜ್ ಪೆರ್ಲ ಇವರ ‘ನೆಲ ಉರುಳು’ ಕನ್ನಡ ನಾಟಕ, ಶ್ರೀ ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಇವರ ‘ನೆಪವು ಸಿಕ್ಕಿದೆ ಬದುಕಿಗೆ’ ಕನ್ನಡ ಕವನ ಸಂಕಲನ,…

Read More

ಬದಿಯಡ್ಕ : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ನೇತೃತ್ವದಲ್ಲಿ ಚುಟುಕು ಕವಿ ದಿವಂಗತ ಬದಿಯಡ್ಕ ಕೃಷ್ಣ ಪೈಯವರ ಬದುಕು – ಬರಹದ ಬಗ್ಗೆ ಮೆಲುಕು ಹಾಕುವ ‘ಸ್ಮರಣಾಂಜಲಿ’ ಕಾರ್ಯಕ್ರಮವು ದಿನಾಂಕ 09 ಫೆಬ್ರವರಿ 2025ರಂದು ಅಪರಾಹ್ನ 2-30 ಗಂಟೆಗೆ ಬದಿಯಡ್ಕದ ಗಣೇಶ್ ಪೈಯವರ ಮನೆಯಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ದಿವಂಗತ ಬಿ. ಕೃಷ್ಣ ಪೈಯವರ ಭಾವಚಿತ್ರಕ್ಕೆ ಕುಟುಂಬದವರಿಂದ ಹಾಗೂ ಅಭಿಮಾನಿಗಳಿಂದ ಪುಷ್ಪಾರ್ಚನೆ ನಡೆಯಲಿದ್ದು, ನಿವೃತ್ತ ಪ್ರಾಂಶುಪಾಲ ಡಾ. ಬೇ.ಸೀ ಗೋಪಾಲಕೃಷ್ಣ ಭಟ್ ಸಂಸ್ಮರಣಾ ಭಾಷಣ ಮಾಡುವರು. ಕ.ಸಾ.ಪ. ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ್ ತೊಟ್ಟೆತ್ತೋಡಿ, ನಿವೃತ್ತ ಉಪ ಜಿಲ್ಲಾಧಿಕಾರಿ ಶಶಿಧರ ಶೆಟ್ಟಿ, ಖ್ಯಾತ ವೈದ್ಯ ಡಾ. ಶ್ರೀನಿಧಿ ಸರಳಾಯ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಪರಿಷತ್ತಿನ ಕೇಂದ್ರ ಸಮಿತಿಯ ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ಪ್ರಾಸ್ತಾವಿಕವಾಗಿ ಮಾತನಾಡುವರು. ನಿವೃತ್ತ ಪ್ರಾಧ್ಯಾಪಕ ಪ್ರೊ. ಎ. ಶ್ರೀನಾಥ್ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮದಲ್ಲಿ…

Read More

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ (ರಿ.), ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಮತ್ತು ಪತ್ರಿಕಾ ಭವನ ಟ್ರಸ್ಟ್ (ರಿ.) ಇದರ ವತಿಯಿಂದ ‘ಪ್ರೆಸ್ ಕ್ಲಬ್ ದಿನಾಚರಣೆ’ ಕಾರ್ಯಕ್ರಮವನ್ನು ದಿನಾಂಕ 09 ಫೆಬ್ರವರಿ 2025ರಂದು ಬೆಳಗ್ಗೆ 10-00 ಗಂಟೆಗೆ ಪಾಲೆಮಾರ್ ಗಾರ್ಡನ್, ಮಂಗಳೂರು ಕ್ಲಬ್ ರೋಡ್, ಮೋರ್ಗನ್ಸ್ ಗೇಟ್ ಇಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ‘ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ’ ಮತ್ತು ಹಿರಿಯ ಪತ್ರಕರ್ತರಿಗೆ ‘ಪ್ರೆಸ್ ಕ್ಲಬ್ ಗೌರವ’ ಸನ್ಮಾನ ಮಾಡಲಾಗುವುದು. ಈ ಕಾರ್ಯಕ್ರಮವನ್ನು ಮಾಜಿ ಮೇಯರ್ ದಿವಾಕರ್ ಕದ್ರಿ ಇವರು ಉದ್ಘಾಟನೆ ಮಾಡಲಿದ್ದು, ಮಂಗಳೂರು ಪ್ರೆಸ್ ಕ್ಲಬ್ ಇದರ ಅಧ್ಯಕ್ಷರಾದ ಪಿ.ಬಿ. ಹರೀಶ್ ರೈ ಇವರು ಅಧ್ಯಕ್ಷತೆ ವಹಿಸಲಿರುವರು. ಸಮಾಜ ಸೇವಕರಾದ ಗಣೇಶ್ ಕುಲಾಲ್ ಇವರಿಗೆ ಮಾಜಿ ಸಚಿವರಾದ ಕೃಷ್ಣ ಜೆ. ಪಾಲೆಮಾರ್ ಇವರು ಪ್ರೆಸ್ ಕ್ಲಬ್ ಪ್ರಶಸ್ತಿ ನೀಡಿ ಸನ್ಮಾನಿಸಲಿದ್ದಾರೆ. ಪತ್ರಕರ್ತರಾದ ಮುಹಮ್ಮದ್ ಆರೀಫ್ ಪಡುಬಿದಿರೆ (ವಿಜಯ ಕರ್ನಾಟಕ), ಜಿತೇಂದ್ರ ಕುಂದೇಶ್ವರ (ವಿಶ್ವವಾಣಿ), ಭಾಸ್ಕರ ರೈ…

Read More

ಬೆಂಗಳೂರು : ಸುವರ್ಣ ಕರ್ನಾಟಕ ಕಾರ್ಮಿಕರ ವೇದಿಕೆ ಬೆಂಗಳೂರು ಇವರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ನೀಡುವ ‘ಆದರ್ಶ ಮಹಿಳಾ ರತ್ನ ರಾಜ್ಯ ಪ್ರಶಸ್ತಿ’ಗೆ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿಯಾದ ಸಾಹಿತಿ, ಸಮಾಜ ಸೇವಕಿ ಹಾಗೂ ಸಂಘಟಕಿಯಾದ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರಧಾನ ಸಮಾರಂಭವು ದಿನಾಂಕ 09 ಮಾರ್ಚ್ 2025ರಂದು ಬೆಂಗಳೂರಿನ ಭಾರತ್ ಸ್ಕೌಟ್ಸ್ ಹಾಗೂ ಗೈಡ್ಸ್ ಅಡಿಟೋರಿಯಂನಲ್ಲಿ ನಡೆಯಲಿದೆ. ಪ್ರಶಸ್ತಿ ಪ್ರಧಾನವನ್ನು ರಾಜ್ಯಸಭಾ ಸದಸ್ಯರು ಹಾಗೂ ಇನ್ಫೋಸಿಸ್ ಫೌಂಡೇಶನ್ ಇದರ ಸ್ಥಾಪಕ ಅಧ್ಯಕ್ಷರಾದ ಶ್ರೀಮತಿ ಸುಧಾ ಮೂರ್ತಿ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಂಗಳೂರು ಉತ್ತರ ಲೋಕಸಭಾ ಸಂಸದೆ ಶ್ರೀಮತಿ ಶೋಭಾ ಕರಂದ್ಲಾಜೆ, ರಂಗ ಕಲಾವಿದೆ ಹಾಗೂ ಮಾಜಿ ಸಚಿವೆ ಶ್ರೀಮತಿ ಉಮಾಶ್ರೀ, ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌದರಿ, ಸಮಾಜ ಸೇವಕಿಯಾದ ಕುಸುಮ ಹನುಮಂತ ರಾಯಪ್ಪ, ಮಾಜಿ ಉಪ ಮಹಾ ಮೇಯರ್ ಹೇಮಲತಾ ಗೋಪಾಲಯ್ಯ, ಸಮಾಜ ಸೇವಕಿ ಶೈಲಜಾ ಸೋಮಣ್ಣ, ಕನ್ನಡ…

Read More

ಬೆಂಗಳೂರು : ಸಾಹಿತಿಗಳು, ಬರಹಗಾರರು ಹಾಗೂ ವಿದ್ವಾಂಸರನ್ನು ವಿಧಾನ ಸೌಧಕ್ಕೆ ಹತ್ತಿರವಾಗಿಸುವ ಉದ್ದೇಶದಿಂದ ದಿನಾಂಕ 27 ಫೆಬ್ರವರಿ 2025 ರಿಂದ 03 ಮಾರ್ಚ್ 2025ರ ವರೆಗೆ ಇದೇ ಮೊದಲ ಬಾರಿಗೆ ವಿಧಾನ ಸೌಧದ ಆವರಣದಲ್ಲಿ ಪುಸ್ತಕ ಮತ್ತು ಸಾಹಿತ್ಯ ಉತ್ಸವ ಆಯೋಜಿಸಲಾಗಿದೆ ಎಂದು ಸ್ಪೀಕರ್ ಯು. ಟಿ. ಖಾದ‌ರ್ ತಿಳಿಸಿದ್ದಾರೆ. ಪುಸ್ತಕ ಉತ್ಸವದಲ್ಲಿ ಶೇ. 80ರಷ್ಟು ಕನ್ನಡ ಹಾಗೂ ಶೇ.20ರಷ್ಟು ಇತರ ಭಾಷೆಗಳ ಪುಸ್ತಕಗಳ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗುವುದು. 150ರಷ್ಟು ಮಳಿಗೆಗಳ ವ್ಯವಸ್ಥೆ ಮಾಡಲಾಗುತ್ತಿದ್ದು, ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗುತ್ತದೆ. ಈ ಉತ್ಸವದ ಜತೆ ಆಹಾರ ಉತ್ಸವ ಮತ್ತು ಸಾಂಸ್ಕೃ ತಿಕ ಕಾರ್ಯಕ್ರಮಗಳೂ ನಡೆಯಲಿವೆ ತಿಳಿಸಿದರು. ಉತ್ಸವದಲ್ಲಿ ಸಾಹಿತಿಗಳು ಬರೆದ ಪುಸ್ತಕ ಬಿಡುಗಡೆಗೆ ವೇದಿಕೆ ಕಲ್ಪಿಸುವ ಜತೆಗೆ ಅತ್ಯುತ್ತಮ ಸಾಹಿತಿಯೊಬ್ಬರಿಗೆ ಪ್ರಶಸ್ತಿ ನೀಡುವ ಬಗ್ಗೆಯೂ ನಿರ್ಧರಿಸಲಾಗಿದೆ. ಉತ್ಸವದಲ್ಲಿ ಸಾಹಿತ್ಯಕ್ಕೆ ಸಂಬಂಧಿಸಿ ಚರ್ಚೆಗೆ ಅವಕಾಶ ಕಲ್ಪಿಸಲಾಗುತ್ತಿದೆ. ಶಾಸಕರು ತಮ್ಮ ಕ್ಷೇತ್ರದ ಸರಕಾರಿ ಶಾಲಾ, ಕಾಲೇಜುಗಳಿಗೆ ಪೂರಕವಾಗಿ ತಲಾ 2ರಿಂದ 3 ಲಕ್ಷ…

Read More

ಮೈಸೂರು : ಮಂಡ್ಯ ರಮೇಶ್ ಇವರ ನಟನ ರಂಗಶಾಲೆಯು ಕಳೆದ ಅನೇಕ ವರ್ಷಗಳಿಂದ ಕಲಾಮಾಧ್ಯಮದಲ್ಲಿ ಕ್ರಿಯಾಶೀಲವಾಗಿದ್ದು, ರಂಗಭೂಮಿಯಲ್ಲಿ ತನ್ನದೇ ಆದ ವಿಶಿಷ್ಟ ಛಾಪನ್ನು ಮೂಡಿಸಿದೆ. ರಂಗಭೂಮಿಯ ಅಧ್ಯಯನ, ಪ್ರಾತ್ಯಕ್ಷಿಕೆ, ಪ್ರಯೋಗ ಹಾಗೂ ಪ್ರದರ್ಶನಗಳ ಮೂಲಕ ಶ್ರೇಷ್ಠತೆಯನ್ನು ಸಾಧಿಸುವುದರತ್ತ ನಟನ ಸತತವಾಗಿ ಪ್ರಯತ್ನ ನಡೆಸುತ್ತಾ ಬಂದಿದ್ದು, ಮೈಸೂರಿನಲ್ಲಿ ನೆಲೆಗೊಂಡಿದ್ದರೂ ಭಾರತದಾದ್ಯಂತ ರಂಗಯಾತ್ರೆಗಳನ್ನು, ರಂಗ ತರಬೇತಿ ಶಿಬಿರಗಳನ್ನು ನಡೆಸುವುದರ ಮೂಲಕ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಮೈಸೂರಿನ ಮತ್ತು ಸುತ್ತಮುತ್ತಲಿನ ಸದಭಿರುಚಿಯ, ಸಹೃದಯ ರಂಗಾಸಕ್ತರಿಗಾಗಿ ನಟನವು ವಾರಾಂತ್ಯ ರಂಗ ಪ್ರದರ್ಶನಗಳನ್ನು ನಡೆಸುತ್ತಿದ್ದು, ದಿನಾಂಕ 09 ಮತ್ತು 16 ಫೆಬ್ರವರಿ 2025ರಂದು ಸಂಜೆ ಗಂಟೆ 06-30ಕ್ಕೆ ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ‘ನಟನ ರಂಗಶಾಲೆ’ಯಲ್ಲಿ 2024-25ನೇ ಸಾಲಿನ ರಂಗಭೂಮಿ ಡಿಪ್ಲೋಮಾ ವಿದ್ಯಾರ್ಥಿಗಳ ಎರಡನೆ ಅಭ್ಯಾಸಿ ಪ್ರಯೋಗ ‘ಮಿಸ್ ಸದಾರಮೆ’ ಪ್ರದರ್ಶನಗೊಳ್ಳಲಿದೆ. ವೃತ್ತಿ ರಂಗಭೂಮಿಯ ಮಹತ್ವದ ನಾಟಕಗಳಲ್ಲಿ ಒಂದಾದ ಬೆಳ್ಳಾವೆ ನರಹರಿ ಶಾಸ್ತ್ರಿ ವಿರಚಿತ ‘ಸದಾರಮಾ ನಾಟಕಂ’ ಅನ್ನು ಆಧರಿಸಿ ಆಧುನಿಕ ವಿಚಾರ ದೃಷ್ಟಿಕೋನಗಳ ಮೂಲಕ ನಾಟಕಕಾರ, ಚಿಂತಕ, ನೀನಾಸಂನ…

Read More

ಸುಳ್ಯ : ಹಿರಿಯ ಯಕ್ಷಗಾನ ಕಲಾವಿದ, ಅರ್ಥಧಾರಿ, ನಿವೃತ್ತ ಶಿಕ್ಷಕ ಕೆ. ವಿ. ಗಣಪಯ್ಯ ಇವರು ಅಲ್ಪಕಾಲದ ಅಸೌಖ್ಯದಿಂದ ದಿನಾಂಕ 04 ಫೆಬ್ರವರಿ 2025 ರ ಮಂಗಳವಾರದಂಡು ನಿಧನರಾದರು. ಇವರಿಗೆ 92 ವರ್ಷ ವಯಸ್ಸಾಗಿತ್ತು. ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲ್ಲೂಕುಗಳ ವಿವಿಧ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದ ಇವರು ಬಳಿಕ ಕಾಣಿಯೂರು ನಿಂತಿಕಲ್ಲು ಬಳಿಯ ಆಲಾಜೆ ಎಂಬಲ್ಲಿ ಕೃಷಿಕರಾಗಿ ನಿವೃತ್ತ ಜೀವನ ನಡೆಸುತ್ತಿದ್ದರು. ಗಣಪಯ್ಯ ಕೆ.ವಿ. ಹರಿತವಾದ ಮಾತಿನ ಅರ್ಥಗಾರಿಕೆಗೆ ಹೆಸರುವಾಸಿಯಾಗಿದ್ದರು. ಭೀಷ್ಮ, ಕೌರವ, ವಾಲಿ, ತಾಮ್ರಧ್ವಜ ಮೊದಲಾದ ಪಾತ್ರಗಳನ್ನು ವಿಶಿಷ್ಟವಾಗಿ ಕಟ್ಟಿಕೊಡುತ್ತಿದ್ದರು. ಅನೇಕ ಯಕ್ಷಗಾನ ಸಂಘ ಸಂಸ್ಥೆಗಳಿಗೆ, ಅರ್ಥಧಾರಿಗಳಿಗೆ ಮಾರ್ಗದರ್ಶನ ಮಾಡಿದ್ದರು.

Read More