Author: roovari

ಸುರತ್ಕಲ್: ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ) ಸುರತ್ಕಲ್ ಸಹಭಾಗಿತ್ವದಲ್ಲಿ ಸುರತ್ಕಲ್ ರೋಟರಿ ಕ್ಲಬ್ ಪ್ರಾಯೋಜಕತ್ವದ ಸುರತ್ಕಲ್ ಫೈ ಓವರ್ ಕೆಳಗಡೆ ಉದಯರಾಗ – 53 ಶಾಸ್ತ್ರೀಯ ಸಂಗೀತದ ಸರಣಿ ಕಾರ್ಯಕ್ರಮವು ದಿನಾಂಕ 05-05-2024ರ ಭಾನುವಾರದಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಸುರತ್ಕಲ್ ರೋಟರಿ ಕ್ಲಬ್‌ನ ನಿಯೋಜಿತ ಅಧ್ಯಕ್ಷ ಸಂದೀಪ್ ರಾವ್ ಇಡ್ಯಾ “ಶಾಸ್ತ್ರೀಯ ಸಂಗೀತದಿಂದ ಪರಿಪೂರ್ಣ ಅನುಭವದ ಆನಂದ ಲಭ್ಯವಾಗುತ್ತದೆ. ಸಾಮಾಜಿಕ ಸೇವಾ ಸಂಸ್ಥೆಗಳು ಆದ್ಯತೆಯ ನೆಲೆಯಲ್ಲಿ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು.’ ಎಂದು ನುಡಿದರು. ಸುರತ್ಕಲ್ ರೋಟರಿ ಕ್ಲಬ್ ಅಧ್ಯಕ್ಷ ಯೋಗೀಶ್ ಕುಳಾಯಿ ಶುಭ ಹಾರೈಸಿದರು. ಉಡುಪಿಯ ರಾಗಧನ ಸಂಸ್ಥೆಯ ಕಾರ್ಯದರ್ಶಿ ಉಮಾಶಂಕರಿ, ಆರಾಧನ ಕಲಾಭವನ ಸಾರಡ್ಕದ ಶಂಕರ್ ಸಾರಡ್ಕ, ನಾಗರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಕೆ. ರಾಜಮೋಹನ ರಾವ್ ಉಪಸ್ಥಿತರಿದ್ದರು. ಗೀತಾ ಸಾರಡ್ಕ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ಇವರಿಗೆ ಅನನ್ಯ ಪಿ. ಎಸ್. ಪುತ್ತೂರು ವಯಲಿನ್‌ನಲ್ಲಿ ಹಾಗೂ ಹರಿಕೃಷ್ಣ ಪಾವಂಜೆ ಮೃದಂಗದಲ್ಲಿ…

Read More

ಬೆಂಗಳೂರು : ಬೆಂಗಳೂರಿನ ವಿಜಯನಗರ ಬಡಾವಣೆಯಲ್ಲಿರುವ ವಿಜಯನಗರ ಬಿಂಬ, ರಂಗ ಶಿಕ್ಷಣ ಕೇಂದ್ರದವರು ಕಳೆದ ಇಪ್ಪತ್ತೆಂಟು ವರ್ಷಗಳಿಂದ ಮಕ್ಕಳಿಗಾಗಿ ಮಕ್ಕಳ ಬೇಸಿಗೆ ಶಿಬಿರಗಳನ್ನು ನಡೆಸುತ್ತಾ ಬರುತ್ತಿದ್ದಾರೆ. ಈ ವರ್ಷದ ಮಕ್ಕಳ ಬೇಸಿಗೆ ಶಿಬಿರವು ದಿನಾಂಕ 29-03-2024ರಂದು ಪ್ರಾರಂಭವಾಗಿ ದಿನಾಂಕ 01-05-2024ರಂದು ಮುಕ್ತಾಯವಾಯಿತು. 3 ವರ್ಷದಿಂದ 8 ವರ್ಷದ ಮಕ್ಕಳಿಗಾಗಿ ‘ಚಿಣ್ಣರ‌ ಚಿತ್ತಾರ’ ಮತ್ತು 8ರಿಂದ 15 ವರ್ಷದ ಮಕ್ಕಳಿಗಾಗಿ ‘ಚಿಣ್ಣರ ಚಾವಡಿ’ ಈ ಶೀರ್ಷಿಕೆಗಳ ಅಡಿಯಲ್ಲಿ ಬೇಸಿಗೆ ಶಿಬಿರಗಳು ನಡೆಯತ್ತವೆ. ಈ ಎರಡೂ ಶಿಬಿರಗಳಲ್ಲೂ ಮಕ್ಕಳ ವಯೋಮಾನಕ್ಕೆ ತಕ್ಕಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಮಕ್ಕಳ ಮನೋವಿಕಾಸಕ್ಕೆ, ಬೌದ್ಧಿಕ ಬೆಳವಣಿಗೆಗೆ ಅನಕೂಲಕರವಾಗುವಂತಹ ತರಗತಿಗಳು ನಡೆಯಿತು. ಚಿತ್ರಕಲೆ, ಕುಶಲ ಕಲೆ, ರಂಗ ಸಂಗೀತ, ಸುಗಮ ಸಂಗೀತ, ರಿದಂ, ಸಂವಾದ, ಪ್ರಶ್ನಾರ್ಥ ಪತ್ರಿಕಾಗೋಷ್ಠಿ, ಸಮೂಹ ಮಾಧ್ಯಮಗಳಾದ ದೂರದರ್ಶನ, ರೇಡಿಯೋ ಸೃಜನಶೀಲ ಮಾಧ್ಯಮಗಳಾದ ಅನಿಮೇಷನ್‌, ರೋಬೋಟಿಕ್ಸ್, ಪಬ್ಲಿಕ್ ಫೋರಂನಲ್ಲಿ ಮಕ್ಕಳಿಂದಲೇ ನಡೆದ ಹೊರಾಂಗಣ ಚಿತ್ರೀಕರಣ, ಮಕ್ಕಳೇ ಬರೆದ ಸ್ವರಚಿತ ಕವನಗಳ ವಾಚನ ಹೀಗೇ ಅನೇಕ ವೈವಿಧ್ಯಮಯವಾದ ಕಾರ್ಯಕ್ರಮಗಳು ಜರುಗಿದವು.…

Read More

ತೆಕ್ಕಟ್ಟೆ: ‘ಶ್ವೇತಸಂಜೆ-25’ ಯಶಸ್ವೀ ಕಲಾವೃಂದ ರಿ. ಕೊಮೆ-ತೆಕ್ಕಟ್ಟೆ, ಧಮನಿ ಟ್ರಸ್ಟ್ ತೆಕ್ಕಟ್ಟೆ ಹಾಗೂ ದಿಮ್ಸಾಲ್ ಕ್ರಿಯೇಷನ್ಸ್ ಜೋತೆಯಾಗಿ ಆಯೋಜಿಸಿಕೊಂಡಿರುವ ‘ರಜಾರಂಗು-24’ ಶಿಬಿರದಲ್ಲಿ “ತ್ರಿವಳಿ ನಾಟಕೋತ್ಸವ”ವು ದಿನಾಂಕ 06-05-2024 ರಂದು ನಡೆಯಿತು. ತ್ರಿವಳಿ ನಾಟಕೋತ್ಸವನ್ನು ಡೋಲು ಬಾರಿಸುವುದರ ಮೂಲಕ ಉದ್ಘಾಟಿಸಿದ ಉಪನ್ಯಾಸಕ ಸುಜಯೀಂದ್ರ ಹಂದೆ ಮಾತನಾಡಿ “ಸಮಾಜವನ್ನು ಬೆಸೆಯುವ ಶಕ್ತಿ ರಂಗಭೂಮಿಗಿದೆ. ಬದುಕು ಕೃತವಾಗಿರಬಾರದು, ಸಹಜವಾಗಿರಬೇಕು. ಮರದಿಂದ ಮಾವಿನ ಹಣ್ಣನ್ನು ನಾವು ತಿನ್ನುವುದಿಲ್ಲ. ಮಾವು ಬೆಳೆಯುವ ಮುಂಚೆಯೇ ಬೆಳೆಯುವಂತೆ ಮಾಡಿ ತಿನ್ನುತ್ತೇವೆ. ಇದು ಕೃತಕತೆ. ಹರಿಯುವ ನೀರನ್ನು ಕಟ್ಟಿ ಬಳಸುವುದು ಕೃತಕತೆ. ಹಾಗೆಯೇ ರಂಗಭೂಮಿಯಲ್ಲೂ ಕೃತಕತೆ ಸುಳಿಯದಿರಲಿ. ವೇಷಭೂಷಣದಿಂದ ಹಿಡಿದು, ಭಾಷೆಯ ತನಕ ಸಹಜತೆಯನ್ನು ಕಂಡುಕೊಳ್ಳಲಿ. ಒಳ್ಳೆಯ ಬದುಕನ್ನು ಕಟ್ಟಿಕೊಳ್ಳುವಲ್ಲಿ ಶಿಬಿರ ಸಹಕಾರಿಯಾಗಲಿ.” ಎಂದರು. ‘ಲಂಬಕರ್ಣಣ ಉಷ್ಣೀಷ’ ನಾಟಕ ನಿರ್ದೇಶಕರಾದ ರಂಜಿತ್ ಶೆಟ್ಟಿ ಕುಕ್ಕುಡೆಯವರನ್ನು ಅಭಿನಂದಿಸಿ ಮಾತನ್ನಾಡಿದ ರಂಗ ನಿರ್ದೇಶಕ ಸದಾನಂದ ಬೈಂದೂರು “ರಂಗಭೂಮಿ ಇತ್ತೀಚೆಗೆ ಕರಾವಳಿ ಭಾಗದಲ್ಲಿ ಬಹಳ ದೊಡ್ಡ ಕ್ರಾಂತಿಯನ್ನು ಮೂಡಿಸಿದೆ. ಹಲವಾರು ಸಂಘ ಸಂಸ್ಥೆಗಳು ರಂಗಭೂಮಿಯ ಕಡೆಗೆ ಒಲವು…

Read More

ಮೂಡುಬಿದಿರೆ: ಪುಸ್ತಕ ಓದುವ ಅಭಿರುಚಿ ಜತೆಗೆ ಶಿಕ್ಷಣ, ಜ್ಞಾನಾರ್ಜನೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಶುರುವಾದ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ‘ಕ್ರಿಯೇಟಿವ್ ಪುಸ್ತಕ ಮನೆ’ ಮೂಡುಬಿದಿರೆಯಲ್ಲಿ ತನ್ನ ಎರಡನೇ ಪುಸ್ತಕ ಮಳಿಗೆಯನ್ನು ದಿನಾಂಕ 05-05-2024ರಂದು ಲೋಕಾರ್ಪಣೆ ಮಾಡಿದೆ. ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಡಾ. ಎಂ. ಮೋಹನ್ ಆಳ್ವ, ಎಕ್ಸಲೆಂಟ್ ಸಂಸ್ಥೆಯ ಮುಖ್ಯಸ್ಥರಾದ ಯುವರಾಜ್ ಜೈನ್ , ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಯುವರಾಜ್ ಜೈನ್ ಇವರು ಲೋಕಾರ್ಪಣೆ ಮಾಡಿ ಶುಭ ಹಾರೈಸಿದರು. ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್, ಡಾ. ಗಣನಾಥ ಶೆಟ್ಟಿ ಬಿ. , ಅಮೃತ್ ರೈ, ಅಶ್ವಥ್ ಎಸ್. ಎಲ್, ಆದರ್ಶ ಎಂ. ಕೆ. , ವಿಮಲ್ ರಾಜ್ ಜಿ. , ಗಣಪತಿ ಕೆ. ಎಸ್. ಇವರ ಉಪಸ್ಥಿತಿಯಲ್ಲಿ, ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಕರ್ನಾಟಕದ ಪುಸ್ತಕ ಲೋಕದಲ್ಲಿ ‘ಕ್ರಿಯೇಟಿವ್ ಪುಸ್ತಕ ಮನೆ’ ಹೊಸ ಮೈಲುಗಲ್ಲು ಸಾಧಿಸಿದ್ದು, ಕರಾವಳಿಯಲ್ಲಿ ತನ್ನ ಎರಡನೇ ಮಳಿಗೆ ಶುರುಮಾಡಿದೆ. ನೂರಾರು…

Read More

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋಜಿಸಿದ್ದ ಕಸಾಪ 109ನೇ ಸಂಸ್ಥಾಪನಾ ದಿನಾಚರಣೆ ಮತ್ತು ‘ಮತ ಹಾಕೋಣ ಬನ್ನಿ’ ಜಾಗೃತ ಕಾರ್ಯಕ್ರಮ ದಿನಾಂಕ 05-05-2024ರ ಭಾನುವಾರದಂದು ಶಿವಮೊಗ್ಗದ ಚಾಲುಕ್ಯ ನಗರ ಬಡಾವಣೆಯ ಸಾಹಿತ್ಯ ಗ್ರಾಮದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎನ್.ರಾಜೇಶ್ವರಿ “ಕನ್ನಡ ಸಾಹಿತ್ಯ ಪರಿಷತ್ 109 ವರ್ಷ ಪೂರೈಸಿ ಸಶಕ್ತವಾಗಿ ಮುನ್ನಡೆಯುತ್ತಿರುವುದು ಕನ್ನಡಿಗರು ಹೆಮ್ಮೆಪಡುವ ವಿಷಯ. ಜಿಲ್ಲೆಯಲ್ಲಿ ಕನ್ನಡ ಪರ ಕಾರ್ಯಕ್ರಮಗಳು ನಿರಂತರವಾಗಿ, ವೈವಿಧ್ಯಮಯವಾಗಿ ಹಾಗೂ ಗುಣಮಟ್ಟದ ಚಟುವಟಿಕೆಗಳನ್ನು ನಡೆಸಲು ಪರಿಷತ್‌ನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮುಂದೆ ಸಾಗುವುದು ಅಭಿನಂದನೀಯ. ಈ ಚಟುವಟಿಕೆಗಳಲ್ಲಿ ತಮ್ಮ ಸಹಭಾಗಿತ್ವವೂ ಮುಖ್ಯವಾಗುತ್ತದೆ. ಆಳಿವಿನಂಚಿನಲ್ಲಿರುವ ಜನಪದ ಕಲೆ ಉಳಿಸಬೇಕು. ಕಾಡಿಲ್ಲದೆ ಪರಿಸರ ನಾಶವಾಗುತ್ತಿದೆ. ಮನುಷ್ಯನ ಬದುಕು ಸಂಕಷ್ಟಕ್ಕೆ ಒಳಗಾಗಿದೆ.” ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ಡಿ. ಮಂಜುನಾಥ ಮಾತನಾಡಿ “ಪರಿಷತ್ತು ತನ್ನದೇ ಭವನ ಹೊಂದಿದೆ. ವಿಶಾಲ ನಿವೇಶನದಲ್ಲಿ ಕನಸಿನ ಸಾಹಿತ್ಯ ಗ್ರಾಮ ಯೋಜನೆ…

Read More

ಹೆಬ್ರಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ಘಟಕ ಮತ್ತು ಪ್ರಥಮ ದರ್ಜೆ ಕಾಲೇಜು ಹೆಬ್ರಿಯ ಕನ್ನಡ ವಿಭಾಗದ ಸಹಯೋಗದೊಂದಿಗೆ ಕನ್ನಡ ಸಾಹಿತ್ಯ ಪರಿಷತ್ತಿನ 110ನೇ ಸಂಸ್ಥಾಪನಾ ದಿನಾಚರಣೆ ಮತ್ತು ಉಪನ್ಯಾಸ ಕಾರ್ಯಕ್ರಮವು ದಿನಾಂಕ 06-05-2024 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎ.ವಿ. ಹಾಲ್ ನಲ್ಲಿ ನಡೆಯಿತು. ಕ.ಸಾ.ಪ ಹೆಬ್ರಿ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀನಿವಾಸ ಭಂಡಾರಿ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಸುರೇಶ ಮರಕಾಲ ಉದ್ಘಾಟಿಸಿ ವ್ಯಕ್ತಿತ್ವ ವಿಕಸನದಲ್ಲಿ ಸಾಹಿತ್ಯದ ಪಾತ್ರ ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು. ಬಳಿಕ ಮಾತನಾಡಿದ ಅವರು “ಸಾಹಿತ್ಯ ಕೃತಿಗಳ ಓದು ವ್ಯಕ್ತಿತ್ವ ವಿಕಸನಕ್ಕೆ ಕಾರಣವಾಗುತ್ತದೆ. ಒಬ್ಬ ಉತ್ತಮ ಕೇಳುಗ ಉತ್ತಮ ಭಾಷಣಕಾರನಾಗಬಲ್ಲ, ಒಬ್ಬ ಉತ್ತಮ ಓದುಗ ಉತ್ತಮ ಬರಹಗಾರನಾಗಬಲ್ಲ. ಉತ್ತಮ ಪುಸ್ತಕಗಳು ಬದುಕಿಗೆ ಪ್ರೇರಣೆಯನ್ನು ನೀಡುತ್ತವೆ. ಮಾರ್ಗದರ್ಶನ ಮಾಡುತ್ತವೆ. ನಿರಂತರ ಓದು ಬದುಕನ್ನು ರೂಪಿಸುತ್ತವೆ.” ಎಂಬುವುದನ್ನು ತಮ್ಮದೇ ಬದುಕಿನ ಉದಾಹರಣೆಗಳ ಮೂಲಕ ವಿವರಿಸಿದರು.…

Read More

ಕಲಬುರಗಿ : ವಿಶ್ವರಂಗ (ರಿ.) ಕಲಬುರಗಿ ಇದರ ವತಿಯಿಂದ ಅನುಭವಿ ರಂಗ ನಿರ್ದೇಶಕ ಡಾ. ವಿಶ್ವರಾಜ್ ಪಾಟೀಲರವರ ಸಾರಥ್ಯದಲ್ಲಿ ‘ಚಿಣ್ಣರ ಮೇಳ 2024’ ಮಕ್ಕಳ ಬೇಸಿಗೆ ಶಿಬಿರವನ್ನು ದಿನಾಂಕ 10-05-2024ರಿಂದ 30-05-2024ರವರೆಗೆ ಕಲಬುರಗಿಯ ಎಂ.ಎಂ.ಕೆ. ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಶಿಬಿರಕ್ಕೆ 5ರಿಂದ 15 ವರ್ಷ ವಯೋಮಿತಿ ಮಕ್ಕಳು ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ನೊಂದಣೆಗಾಗಿ ಸಂಪರ್ಕಿಸಿ 9901495905, 8660926667 ಮತ್ತು 7022220144.

Read More

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇವರ ವತಿಯಿಂದ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ರಾಜ ಗೋಪುರದಲ್ಲಿ ತಿಂಗಳ ಸರಣಿ ಕಾರ್ಯಕ್ರಮ ಪ್ರಯುಕ್ತ ಬಲಿಪ ನಾರಾಯಣ ಭಾಗವತ ಸಂಪಾದಿತ ‘ಇಂದ್ರಜಿತು ಕಾಳಗ’ ಎಂಬ ತಾಳಮದ್ದಳೆಯು ದಿನಾಂಕ 06-05-2023ನೇ ಸೋಮವಾರದಂದು ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಲಕ್ಷ್ಮೀನಾರಾಯಣ ಭಟ್ ಬಟ್ಯಮೂಲೆ, ಆನಂದ ಸವಣೂರು ಹಾಗೂ ಚೆಂಡೆ ಮದ್ದಳೆಗಳಲ್ಲಿ ಪದ್ಯಾಣ ಶಂಕರನಾರಾಯಣ ಭಟ್, ಮಾಸ್ಟರ್ ಪರೀಕ್ಷಿತ್ ಮತ್ತು ಮಾಸ್ಟರ್ ಹರ್ಷ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀಧರ್ ರಾವ್ ಕುಂಬ್ಳೆ, ಭಾಸ್ಕರ ಬಾರ್ಯ ಹಾಗೂ ದುಗ್ಗಪ್ಪ ನಡುಗಲ್ಲು (ಶ್ರೀ ರಾಮ), ಗುಂಡ್ಯಡ್ಕ ಈಶ್ವರ ಭಟ್ (ಹನೂಮಂತ), ಪಕಳಕುಂಜ ಶ್ಯಾಂ ಭಟ್ (ಇಂದ್ರಜಿತು), ಗುಡ್ಡಪ್ಪ ಬಲ್ಯ (ಲಕ್ಷ್ಮಣ), ಮಾಂಬಾಡಿ ವೇಣುಗೋಪಾಲ್ ಭಟ್ (ಮಾಯಾ ಸೀತೆ), ಶಾರದಾ ಅರಸ್ (ಜಾಂಬವ), ಕಿಶೋರಿ ದುಗ್ಗಪ್ಪ ನಡುಗಲ್ಲು (ವಿಭೀಷಣ) ಸಹಕರಿಸಿದರು. ಸಂಘದ ಅಧ್ಯಕ್ಷ ಶ್ರೀ ಭಾಸ್ಕರ ಬಾರ್ಯ ಸ್ವಾಗತಿಸಿ, ಗೌರವ ಕಾರ್ಯದರ್ಶಿ ರಂಗನಾಥ್ ರಾವ್ ವಂದಿಸಿದರು.

Read More

ದಲಿತೋತ್ತರ ಕಾವ್ಯದ ದಿನಗಳ ಭರವಸೆಯ ಕವಿಯಾಗಿರುವ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಅವರು ತೀವ್ರಗೊಳ್ಳುತ್ತಿರುವ ಸಾಮಾಜಿಕ ಕೋಲಾಹಲಗಳ ನಡುವೆ ಹೆಚ್ಚು ಅಬ್ಬರಿಸದೆ, ತಮ್ಮೊಳಗಿನ ಪ್ರತಿಭಟನೆಯ ಕಾವನ್ನು ಆರಲೂ ಬಿಡದೆ ಮೆಲುನುಡಿಗಳ ಅಲಗಿನ ಮೇಲೆ ಕವಿತೆಗಳನ್ನು ರಚಿಸುತ್ತಿರುವ ಕವಿ. ಕನಸುಗಾರ ಕವಿಗಳು ಎಚ್ಚರ ತಪ್ಪಿದರೆ ಕವಿತೆಗಳು ಬೀದಿ ಬದಿಯ ಭಾಷಣಗಳಾಗಿಯೋ ಬಣಗು ಕವಿಗಳ ಆತ್ಮಪ್ರತ್ಯಯದ ಕವಿತೆಗಳಾಗುವ ಅಪಾಯವಿರುತ್ತದೆ. ಸಾಮಾಜಿಕ ಮತ್ತು ಧಾರ್ಮಿಕ ಅಸಹನೆಗಳು ಯಾವ ಸಭ್ಯತೆಯೂ ಇಲ್ಲದೆ ಬಹಿರಂಗವಾಗಿ ವ್ಯಕ್ತಗೊಳ್ಳುವ ನಂಜು ಮುಸುಕಿದ ಈ ವಾತಾವರಣದಲ್ಲಿ ಉಗ್ರವಾದಿಗಳಂತೆ ಅಥವಾ ಧರ್ಮಭೀರುಗಳಂತೆ ಎಲ್ಲವನ್ನೂ ಸರಳಗೊಳಿಸಿ ಪರಿಹಾರವನ್ನು ಸೂಚಿಸುವ ಕವಿತೆಗಳನ್ನು ಬರೆಯುವುದು ಸುಲಭ. ಇಂಥ ಕವಿತೆಗಳಲ್ಲಿ ಕನ್ನಡವೂ ಬಳಲುತ್ತಿರುವುದನ್ನು ಕಾಣಬಹುದು. ಅಂತೆಯೇ ಜನಪ್ರಿಯ ಮಾರ್ಗಗಳ ರೂಪನಿಷ್ಠೆಯನ್ನು ಮುರಿದು ಹೊಸ ದಾರಿಯ ಹುಡುಕಾಟದೆಡೆಗೆ ಹೊರಳುವ ಕಾವ್ಯವು ಆಳದಲ್ಲಿ ಕಲಾತ್ಮಕ ಸಿದ್ಧಿಯನ್ನು ಪಡೆದುಕೊಳ್ಳದೆ ಹಾಗೆಯೇ ಮುಂದುವರಿದರೆ ತನ್ನ ರೆಕ್ಕೆಗಳನ್ನು ತಾನೇ ಕಡಿದುಕೊಂಡಂತೆ ಎಂಬುದನ್ನು ಎಂಬತ್ತರ ದಶಕದಲ್ಲಿ ಹೊರಬಂದ ಕಾವ್ಯಗಳ ಅಧ್ಯಯನದ ಮೂಲಕ ಅರ್ಥ ಮಾಡಿಕೊಳ್ಳಬಹುದು. ಈ ಎಲ್ಲಾ ತೊಡಕುಗಳ ಬಗ್ಗೆ…

Read More

ಮಂಗಳೂರು : ದ.ಕ. ಜಿಲ್ಲಾ ಕ.ಸಾ.ಪ. ಮಂಗಳೂರು ತಾಲೂಕು ಘಟಕದ ವತಿಯಿಂದ ಪರಿಷತ್ತಿನ ಸಂಸ್ಥಾಪನ ದಿನಾಚರಣಾ ಕಾರ್ಯಕ್ರಮವು ದಿನಾಂಕ 05-05-2024ರ ರವಿವಾರದಂದು ಮಂಗಳೂರಿನ ನಂತೂರಿನಲ್ಲಿರುವ ಶ್ರೀ ಭಾರತೀ ಕಾಲೇಜು ಆವರಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕೆನರಾ ಕಾಲೇಜು ಮಂಗಳೂರು ಇಲ್ಲಿನ ಕನ್ನಡ ಉಪನ್ಯಾಸಕಿಯಾದ ಶೈಲಜಾ ಪುದುಕೋಳಿ “ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯನ್ನು ಶಾಲೆ ಕಾಲೇಜುಗಳಲ್ಲಿ ಆಚರಿಸುವಂತಾಗಬೇಕು. ಈ ಮೂಲಕ ಇಂದಿನ ಯುವ ಜನತೆಯಲ್ಲಿ ಕನ್ನಡದ ಅಭಿಮಾನ ಮತ್ತು ಮಮತೆ ತುಂಬಬೇಕು. ಅದ್ಭುತವಾದ ಸಮಾಜಮುಖಿ ಕಾರ್ಯಗಳನ್ನು ಮಾಡಿದ ನಾಲ್ವಡಿ ಕೃಷ್ಣರಾಜ ಒಡೆಯ‌ರ್ ದೇವ ದೂತರಂತೆ ಕಂಡುಬರುತ್ತಾರೆ. ಅವರ ಆಶಯದಂತೆ ಇಂದಿಗೂ ಪರಿಷತ್ತು ಕನ್ನಡದ ಧ್ವನಿಯಾಗಿ ಹತ್ತು ಹಲವು ಮಹತ್ತರ ಕಾರ್ಯಗಳನ್ನೆಸಗುತ್ತಾ ಮುಂದುವರಿಯುತ್ತಿರುವುದು ಹೆಮ್ಮೆಯ ವಿಚಾರ. ಶಾಲೆ ಹಾಗೂ ಕಾಲೇಜುಗಳಲ್ಲಿ ಕಾರ್ಯಕ್ರಮ ಮಾಡುವಲ್ಲಿ ಉತ್ಸಾಹ ತೋರುತ್ತಿರುವ ಮಂಗಳೂರು ತಾಲೂಕು ಘಟಕ ಅಭಿನಂದನಾರ್ಹ. ಕ.ಸಾ.ಪ. ಕನ್ನಡಿಗರ ಏಕತೆಯ ಸಂಕೇತ.” ಎಂದು ತಿಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಾಡೋಜ ಕಯ್ಯಾರರ ಪುತ್ರ, ನಿವೃತ್ತ ಪ್ರಾಧ್ಯಾಪಕ ಡಾ.…

Read More