Subscribe to Updates
Get the latest creative news from FooBar about art, design and business.
Author: roovari
ಬಾಗಲಕೋಟೆ : ಜಾನಪದ ಲೋಕದಲ್ಲಿ ಕೇಳಿ ಬರುವ ಹೆಸರು ವೆಂಕಪ್ಪ ಸುಗತೇಕರ್ ಇವರಿಗೆ ಕೇಂದ್ರ ಸರ್ಕಾರ ‘ಪದ್ಮಶ್ರೀ’ ಪ್ರಶಸ್ತಿ ಘೋಷಿಸಿದೆ. 81 ವರ್ಷದ ಸುಗತೇಕರ ಅನಕ್ಷರಸ್ಥರಾಗಿದ್ದು, ಬಾಲ್ಯದಿಂದ ಹಾಡುತ್ತಿದ್ದಾರೆ. ಕಳೆದ ಆರುವರೆಯಿಂದ ಏಳು ದಶಕಗಳ ಕಾಲ ಒಂದು ಸಾವಿರಕ್ಕೂ ಅಧಿಕ ಗೋಂಧಳಿ (ಜಾನಪದ) ಹಾಡುಗಳನ್ನು ಹಾಡಿದ್ದೂ ಅಲ್ಲದೇ 150ಕ್ಕೂ ಹೆಚ್ಚು ಗೋಂಧಳಿ ಕಥೆಗಳನ್ನು ಹೇಳುವ ಮೂಲಕ ಮಕ್ಕಳಲ್ಲಿ ಕಥೆಗಳ ಬಗ್ಗೆ ಆಸಕ್ತಿ ಮೂಡಿಸಿದ ಗಾರುಡಿಗ. ಮೂಲೆ ಗುಂಪಾಗುತ್ತಿರುವ ಗೋಂಧಳಿ ಹಾಡುಗಳ ಕುರಿತು ಉಚಿತವಾಗಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ಜಾನಪದ ಲೋಕಕ್ಕೆ ಸುಗತೇಕರ್ ನೀಡಿದ್ದ ಕೊಡುಗೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಕೊಂಡಾಡಿದ್ದರು. ಈಚೆಗೆ ಹಾವೇರಿಯ ಜಾನಪದ ವಿಶ್ವವಿದ್ಯಾಲಯವು ಇವರಿಗೆ ಗೌರವ ಡಾಕ್ಟರೇಟ್ ನೀಡಿದೆ. ‘ಪದ್ಮಶ್ರೀ ಪ್ರಶಸ್ತಿ’ಗೆ ಆಯ್ಕೆಯಾದ ಜಾನಪದ ಗಾಯಕ ವೆಂಕಪ್ಪ ಸುಗತೇಕರ್ “ದೇವಿ ಆಶೀರ್ವಾದದಿಂದ ಒಳ್ಳೆಯದು ಆಗಿದೆ. ಸೇವಾ ಮಾಡಿದ್ದಕ್ಕೂ ಮನ್ನಣೆ ದೊರೆತಿದೆ. ಗೋಂಧಳಿ ಪದಗಳನ್ನು ಉಳಿಸುವುದಕ್ಕಾಗಿ ಶ್ರಮಿಸುತ್ತಿದ್ದೇನೆ. ಮುಂದಿನ ಪೀಳಿಗೆಗೆ ಹಸ್ತಾಂತರಿಸುವ…
ಹಾಸನ : ಸಾಹಿತ್ಯ, ಶಿಕ್ಷಣ ಮತ್ತು ಪತ್ರಿಕೋದ್ಯಮದಲ್ಲಿ ಗಣನೀಯ ಸೇವೆ ಸಲ್ಲಿಸಿದ ಅಪರೂಪದ ವ್ಯಕ್ತಿ ಡಾ. ಅರಕಲಗೂಡು ಸೂರ್ಯಪ್ರಕಾಶ್, ಹಾಸನ ಜಿಲ್ಲೆಯ ಅರಕಲಗೂಡಿನವರಾದ ಸೂರ್ಯಪ್ರಕಾಶ್ ಹೆಸರಾಂತ ಪತ್ರಕರ್ತರು. ಪ್ರಸಾರ ಭಾರತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದವರು. ಮೈಸೂರು ವಿವಿಯಲ್ಲಿ ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ತುಮಕೂರು ವಿವಿಯಲ್ಲಿ ಡಿ.ಲಿಟ್ ಪಡೆದ ಸೂರ್ಯಪ್ರಕಾಶ್ ಝೀ ನ್ಯೂಸ್, ದಿ ಪಯೋನಿರ್, ಏಷ್ಯಾ ಟೈಮ್ಸ್, ಇಂಡಿಯನ್ ಎಕ್ಸ್ ಪ್ರೆಸ್ ಮುಂತಾದ ಪತ್ರಿಕೆಗಳಲ್ಲಿ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದವರು. ರಾಜಕೀಯ ವಿಶ್ಲೇಷಣೆ, ಪ್ರಚಲಿತ ವಿದ್ಯಮಾನಗಳ ಬಗ್ಗೆ ಅಪಾರ ಜ್ಞಾನವುಳ್ಳವರು. ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಅಂಕಣಕಾರರಾಗಿಯೂ ಬಲು ಜನಪ್ರಿಯರು.
ಬೆಂಗಳೂರು : ಪಿಟೀಲು ವಾದಕ, ಸಂಗೀತಗಾರ, ಸಂಗೀತ ನಿರ್ದೇಶಕ ಲಕ್ಷ್ಮೀನಾರಾಯಣ ಸುಬ್ರಮಣಿಯಂ ವಾದ್ಯಗೋಷ್ಠಿಗಳಲ್ಲಿ ನುಡಿಸುವ ಕಲಾಭಿಜ್ಞ, ಕಲಾ ಕೌಶಲದ ವಿಧಾನಗಳಿಗೆ ಪ್ರಸಿದ್ಧರು. ಕರ್ನಾಟಕ ಸಂಗೀತ ಮತ್ತು ಪಾಶ್ಚಿಮಾತ್ಯ ಸಂಗೀತಗಳೆರಡರಲ್ಲೂ ತಮ್ಮದೇ ಆದ ಛಾಪು ಮುಡಿಸಿರುವ ಇವರು ಜಾಗತಿಕ ಸಂಗೀತ ವಲಯದಲ್ಲಿ ವೈಶಿಷ್ಯ ಪೂರ್ಣ ಸಂಯೋಜನೆಗಳನ್ನು ಮಾಡಿದ ಕೀರ್ತಿಗೂ ಪಾತ್ರರಾಗಿದ್ದಾರೆ. ಸ.ಪ. ಶಾಲೆಯ ಮೂಲಕ ಹಲವಾರು ವಿದ್ಯಾರ್ಥಿಗಳನ್ನು ತಯಾರು ಮಾಡಿರುವ ಇವರು ಅಕಾಡೆಮಿ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ನ ಸ್ಥಾಪಕರು. ವಿ. ಲಕ್ಷ್ಮೀನಾರಾಯಣ – ಸೀತಾಲಕ್ಷ್ಮಿ ದಂಪತಿಯ ಮಗನಾಗಿ 1947ರ ಜುಲೈ 23ರಂದು ಜನಿಸಿದರು. ತಂದೆಯಿಂದಲೇ ಪಿಟೀಲು ಕಲಿತು ಆರನೇ ವಯಸ್ಸಿಗೇ ಕಛೇರಿ ನೀಡಿದ್ದರು. ಓದಿ ಎಂ.ಬಿ.ಬಿ.ಎಸ್. ಮಾಡಿದರೂ ಸಂಗೀತವನ್ನೇ ವೃತ್ತಿಯನ್ನಾಗಿ ಮಾಡಿಕೊಂಡು, ಪಾಶ್ಚಾತ್ಯ ಶಾಸ್ತ್ರೀಯ ಸಂಗೀತದಲ್ಲಿ ಕ್ಯಾಲಿಫೋರ್ನಿಯಾ ಕಲಾ ಸಂಸ್ಥೆಯಿಂದ ಪದವಿ ಪಡೆದುಕೊಂಡರು. 200 ಧ್ವನಿಮುದ್ರಿಕೆಗಳನ್ನು ಹೊರತಂದಿದ್ದಾರೆ. ಐತಿಹಾಸಿಕ ಅಲ್ಬಂಗಳನ್ನು ಕೂಡ ಬಿಡುಗಡೆ ಮಾಡಿದ್ದಾರೆ. ಮೀರಾ ನಾಯರ್ ನಿರ್ದೇಶನದ ‘ಸಲಾಮ್ ಬಾಂಬೆ’ ಮತ್ತು ‘ಮಿಸಿಸಿಪ್ಪಿ ಮಸಾಲಾ’ ಚಿತ್ರಗಳಿಗೆ ಹಿನ್ನೆಲೆ ಸಂಗೀತ ನೀಡಿದ್ದರು.…
ಲಾಸ್ ಏಂಜಲೀಸ್ : ಭಾರತೀಯ ಅಮೆರಿಕನ್ ಗಾಯಕಿ ಮತ್ತು ಉದ್ಯಮಿ ಚಂದ್ರಿಕಾ ಟಂಡನ್ ಇವರಿಗೆ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ ಒಲಿದು ಬಂದಿದೆ. ಆಂಬಿಯೆಂಟ್ ಅಥವಾ ಚಾಂಟ್ ಆಲ್ಬಂ ವಿಭಾಗದಲ್ಲಿ ‘ತ್ರಿವೇಣಿ’ ಆಲ್ಬಂಗಾಗಿ ಅವರಿಗೆ ಗ್ರ್ಯಾಮಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಲಾಸ್ ಏಂಜಲೀಸ್ನ ಕ್ರಿಪ್ಟೋ ಡಾಟ್ ಕಾಮ್ ಅರೆನಾದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಸತ್ಕರಿಸಲಾಗಿದೆ. ರೆಕಾರ್ಡಿಂಗ್ ಅಕಾಡೆಮಿ ಆಯೋಜಿಸಿದ ಅತಿದೊಡ್ಡ ಸಂಗೀತ ಪ್ರಶಸ್ತಿಯ 67 ನೇ ಆವೃತ್ತಿ ಇದಾಗಿದೆ. ಇದರಲ್ಲಿ 7 ಹಾಡುಗಳಿದ್ದು ಭಾರತದ ಪವಿತ್ರ ನದಿಗಳಾದ ಯಮುನಾ, ಗಂಗಾ, ಸರಸ್ವತಿಯ ಸಂಸ್ಕೃತಿ ಪರಿಚಯಿಸುತ್ತದೆ . ಮೊಲತಃ ಚೆನ್ನೈ ನವರಾದ ಟಂಡನ್ ಪೆಪ್ಸಿಕೋದ ಮಾಜಿ ಸಿ. ಇ. ಒ. ಇಂದ್ರಾ ನೂಯಿ ಅವರ ಹಿರಿಯ ಸಹೋದರಿಯಾಗಿದ್ದಾರೆ. ದಕ್ಷಿಣ ಆಫ್ರಿಕಾದ ಫ್ಲೌಟಿಸ್ಟ್ ವೂಟರ್ ಕೆಲ್ಲರ್ಮ್ಯಾನ್ ಮತ್ತು ಜಪಾನಿನ ಸೆಲಿಸ್ಟ್ ಎರು ಮಾಟ್ಸುಮೊಟೊ ಅವರೊಂದಿಗೆ ಚಂದ್ರಿಕಾ ಈ ಪ್ರಶಸ್ತಿ ಗೆದ್ದಿದ್ದಾರೆ.ಪ್ರಶಸ್ತಿ ಸಮಾರಂಭದಲ್ಲಿ ಮಾತನಾಡಿದ ಅವರು ಇದೊಂದು ಅದ್ಭುತ ಕ್ಷಣವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಈ…
ಬೆಂಗಳೂರು : ಶ್ರೀ ನಿಡಸಾಲೆ ಪುಟ್ಟಸ್ವಾಮಯ್ಯ 75ರ ಸಂಭ್ರಮ ಸಮಿತಿ ಇದರ ವತಿಯಿಂದ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಇದರ ಸಹಯೋಗದೊಂದಿಗೆ ‘ಶ್ರೀ ನಿಡಸಾಲೆ ಪುಟ್ಟಸ್ವಾಮಯ್ಯ 75′ ಅಭಿನಂದನೆ ಸಮಾರಂಭವನ್ನು ದಿನಾಂಕ 08 ಫೆಬ್ರವರಿ 2025ರಂದು ಬೆಳಿಗ್ಗೆ 10-00 ಗಂಟೆಗೆ ಬೆಂಗಳೂರು ಕುಮಾರಪಾರ್ಕ್ ಪೂರ್ವ, ಗಾಂಧಿಭವನ, 2ನೆಯ ಮಹಡಿ, ಮಹದೇವ ದೇಸಾಯಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಹಿರಿಯ ಕವಿಗಳಾದ ಪದ್ಮಶ್ರೀ ಡಾ. ದೊಡ್ಡರಂಗೇಗೌಡ ಇವರ ಅಧ್ಯಕ್ಷತೆಯಲ್ಲಿ ಸಂಶೋಧಕ ಹಾಗೂ ಸಂಸ್ಕೃತಿ ಚಿಂತಕರಾದ ನಾಡೋಜ ಪ್ರೊ. ಹಂಪ ನಾಗರಾಜಯ್ಯ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ‘ಅಮೃತ ಕಥಾನಕ’ ಅಭಿನಂದನಾ ಗ್ರಂಥವನ್ನು ಪ್ರಸಿದ್ಧ ಸಾಹಿತಿ ಮತ್ತು ಸಂಸ್ಕೃತಿ ಚಿಂತಕರಾದ ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪ ಇವರು, ‘ಸ್ನೇಹಮೇರು’ ಸ್ಮರಣ ಸಂಚಿಕೆಯನ್ನು ಕರ್ನಾಟಕ ಗಾಂಧಿ ಸ್ಮಾರಕನಿಧಿ ಇದರ ಅಧ್ಯಕ್ಷರಾದ ನಾಡೋಜ ಡಾ. ವೊಡೇ ಪಿ. ಕೃಷ್ಣ ಇವರು ಹಾಗೂ ‘ತೋರಿದ ದಾರಿ’ ಸಾಕ್ಷ್ಯಚಿತ್ರವನ್ನು ವಿದ್ವಾಂಸರು ಹಾಗೂ ಸಂಸ್ಕೃತ ವಿ.ವಿ.ಯ ವಿಶ್ರಾಂತ ಕುಲಪತಿಗಳಾದ…
ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ಪಾಕ್ಷಿಕ ತಾಳಮದ್ದಳೆ ದಿನಾಂಕ 01 ಫೆಬ್ರವರಿ 2025ರಂದು ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪಾರ್ತಿಸುಬ್ಬ ವಿರಚಿತ ‘ಸುಗ್ರೀವ ಸಖ್ಯ’ ಆಖ್ಯಾನ ನಡೆಯಿತು. ಹಿಮ್ಮೇಳದಲ್ಲಿ ಯಲ್.ಯನ್. ಭಟ್, ಮುರಳೀಧರ ಕಲ್ಲೂರಾಯ, ಅಚ್ಯುತ ಪಾಂಗಣ್ಣಾಯ, ಕುಮಾರಿ ಶರಣ್ಯ ನೆತ್ರಕೆರೆ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ರಾಮ (ಗುಡ್ಡಪ್ಪ ಬಲ್ಯ), ಸುಗ್ರೀವ (ಮಾಂಬಾಡಿ ವೇಣುಗೋಪಾಲ ಭಟ್). ಹನೂಮಂತ (ಹರಿಣಾಕ್ಷಿ ಜೆ. ಶೆಟ್ಟಿ ಮತ್ತು ಭಾರತಿ ರೈ ಅರಿಯಡ್ಕ) ಸಹಕರಿಸಿದರು. ಅಧ್ಯಕ್ಷ ಭಾಸ್ಕರ್ ಬಾರ್ಯ ಸ್ವಾಗತಿಸಿ, ಗೌರವ ಕಾರ್ಯದರ್ಶಿ ಟಿ. ರಂಗನಾಥ ರಾವ್ ವಂದಿಸಿದರು. ಉಪಾಧ್ಯಕ್ಷ ಗುಡ್ಡಪ್ಪ ಬಲ್ಯ ಪ್ರಾಯೋಜಿಸಿದ್ದರು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ 21 ಮತ್ತು 22 ಫೆಬ್ರವರಿ 2025ರಂದು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿರುವ ಮಂಗಳ ಸಭಾಂಗಣದಲ್ಲಿ ನಡೆಯಲಿದೆ . ಡಾ.ಪ್ರಭಾಕರ ಶಿಶಿಲ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಮ್ಮೇಳನದಲ್ಲಿ ಪುಸ್ತಕ ಪ್ರದರ್ಶನ, ಮಾರಾಟ ಮತ್ತು ಇತರ ಮಳಿಗೆಗಳಿಗೆ ಅವಕಾಶವಿದೆ. ಮಳಿಗೆಗಳ ವ್ಯವಸ್ಥೆಗೆ ದಿನಾಂಕ 05 ಫೆಬ್ರವರಿ 2025ರ ಒಳಗಾಗಿ ಪುಸ್ತಕ ಮಳಿಗೆ ಮತ್ತು ಇತರೆ ಮಾರಾಟ ಮಳಿಗೆ ಸಮಿತಿ ಸಂಚಾಲಕ ತ್ಯಾಗಂ ಹರೇಕಳ 8904842624, ಪ್ರಸಾದ ಎಸ್. 8317444793 ಸಂಪರ್ಕಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ. ಪಿ.ಶ್ರೀ ನಾಥ ತಿಳಿಸಿದ್ದಾರೆ.
ಧಾರವಾಡ : ಅಭಿನಯ ಭಾರತಿ ಧಾರವಾಡ ಆಯೋಜಿಸಿದ ‘ಬೇಂದ್ರೆಯವರ ಕನ್ನಡ ನಾಟಕಗಳು’ ವಿಷಯದ ದತ್ತಿ ಉಪನ್ಯಾಸ ಕಾರ್ಯಕ್ರಮವು ದಿನಾಂಕ 30 ಜನವರಿ 2025ರಂದು ನಡೆಯಿತು. ಹಿರಿಯ ಪ್ರಾಧ್ಯಾಪಕ ಸಂಶೋಧಕ ಹಾಗೂ ಕನ್ನಡ ಸಾಹಿತ್ಯ ಪರಿಚಾರಕ ದಿ. ಡಾ. ವೃಷಭೇಂದ್ರ ಸ್ವಾಮಿ ಇವರ ಸ್ಮರಣಾರ್ಥ ಅವರ ಪುತ್ರ ಡಾ ಎಸ್. ಎಂ. ಶಿವಪ್ರಸಾದ್ ಅವರು ನೀಡಿದ ಕೊಡುಗೆಯ ಅಂಗವಾಗಿ ಈ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ಡಾ. ವಿನಾಯಕ ನಾಯಕ ಮಾತನಾಡಿ “ವರಕವಿ ಬೇಂದ್ರೆಯವರು ತಮ್ಮ ಅಪ್ರತಿಮ ಕಾವ್ಯ ಪ್ರತಿಭೆಯಿಂದ ಜನ ಮಾನಸದಲ್ಲಿ ಜಗದ ಕವಿ, ಯುಗದ ಕವಿ, ಎಂದು ಕರೆಸಿಕೊಂಡಿದ್ದರೂ. ಸಾಹಿತ್ಯದ ಇತರ ಪ್ರಕಾರಗಳಾದ ಕಥೆ, ಹರಟೆ, ಲಲಿತ ಪ್ರಬಂಧ ಹಾಗೂ ನಾಟಕಗಳಲ್ಲೂ ಅವರು ತಮ್ಮ ಅಗಾಧ ಜೀವನ ಪ್ರಜ್ಞೆ ಹಾಗೂ ವ್ಯಂಗ್ಯ ನಡೆನುಡಿಗಳಿಂದ ಅಸಾಮಾನ್ಯ ಕೃತಿಗಳನ್ನು ರಚಿಸಿ ಇಂದಿಗೂ ಪ್ರಸ್ತುತವೆನಿಸುವ ಸಾಮಾಜಿಕ ಚಿಂತನೆಗಳನ್ನು ಅಭಿವ್ಯಕ್ತಪಡಿಸಿದ್ದಾರೆ. ರಂಗಭೂಮಿ ಜೀವನದ ಪ್ರತಿಬಿಂಬವಾಗಿ, ಜೀವನ ದಾರಿ ತಪ್ಪಿದಾಗ ತಿದ್ದುವ ಕೆಲಸ ಮಾಡುತ್ತದೆ ಎಂದು…
ಉಡುಪಿ : ಕನ್ನಡ ಸಾರಸ್ವತ ಲೋಕದ ಹಿರಿಯ ವಿದ್ವಾಂಸ ದಿವಂಗತ ಮುಳಿಯ ತಿಮ್ಮಪ್ಪಯ್ಯನವರ ನೆನಪಿನಲ್ಲಿ ನೀಡಲಾಗುವ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿಗೆ ಖ್ಯಾತ ಯಕ್ಷಗಾನ ಕಲಾವಿದ ಜಬ್ಬಾರ್ ಸಮೊ ಆಯ್ಕೆಯಾಗಿದ್ದಾರೆ. ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ರೂಪಾಯಿ 25000/- ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ, ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 22 ಫೆಬ್ರವರಿ 2025ರಂದು ನಡೆಯಲಿರುವುದು ಎಂದು ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ತಿಳಿಸಿರುತ್ತಾರೆ. 1963ರಲ್ಲಿ ಎಸ್. ಮೊಯ್ದಿನ್ ಕುಂಞ ಹಾಗೂ ಬೀಫಾತಿಮ ಅವರ ಮಗನಾಗಿ ಸಂಪಾಜೆಯಲ್ಲಿ ಎಸ್. ಎಂ. ಜಬ್ಬಾರ್ ಅವರು ಜನಿಸಿದರು. ಬಾಲ್ಯದಲ್ಲಿಯೇ ಕತೆ ಓದುವುದು, ಕೇಳುವುದರ ಜೊತೆಗೆ ಯಕ್ಷಗಾನ ಕಲೆಯೂ ಕರಗತವಾಯಿತು. ಪ್ರಾಥಮಿಕ ವಿದ್ಯಾಭ್ಯಾಸ ಮಾಡುತ್ತಿರುವಾಗಲೇ ‘ಭಕ್ತ ಪ್ರಹ್ಲಾದ’ ಪ್ರಸಂಗದಲ್ಲಿ ದನುಜ ಗುರುವಿನ ವೇಷ ಹಾಕುವುದರೊಂದಿಗೆ ಆರಂಭವಾದ ಇವರ ಕಲಾಜೀವನ ಮುಂದೆ ದೇಶ, ವಿದೇಶಗಳಲ್ಲಿ ಪ್ರದರ್ಶನ ನೀಡುವ ಮಟ್ಟಿಗೆ ಬೆಳೆಯಿತು. ಇದರೊಂದಿಗೆ ಹಲವಾರು ಸಂಘ…
ಕಾಸರಗೋಡು : ಕಾಸರಗೋಡಿನ ನುಳ್ಳಿಪ್ಪಾಡಿಯಲ್ಲಿರುವ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದಲ್ಲಿ ಡಾ. ವಾಮನ್ ರಾವ್ ಬೇಕಲ್ ಅವರ ಸ್ಥಾಪಕ ಸಂಚಾಲಕತ್ವದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಇದರ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭವು ದಿನಾಂಕ 02 ಫೆಬ್ರವರಿ 2025ರ ಭಾನುವಾರದಂದು ನಡೆಯಿತು. ಕನ್ನಡ ಪುಸ್ತಕ ಪ್ರಾಧಿಕಾರ ಕರ್ನಾಟಕ ಸರಕಾರ ಇದರ ಅಧ್ಯಕ್ಷರಾದ ಡಾ.ಮಾನಸ ಮೈಸೂರು ಇವರು ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಹಾರಾರ್ಪಣೆ ಮಾಡಿ, ಕನ್ನಡ ಧ್ವಜವನ್ನು, ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷರಾದ ಪತ್ರಕರ್ತ, ಸಾಹಿತಿ ವಿರಾಜ್ ಅಡೂರು ಅವರಿಗೆ ಹಸ್ತಾಂತರಿಸುವ ಮೂಲಕ ಪರಿಷತ್ತಿಗೆ ಚಾಲನೆ ನೀಡಿದರು. ಶಿಕ್ಷಣ ತಜ್ಞ ವಿ. ಬಿ. ಕುಳಮರ್ವ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಸಮಾರಂಭದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕರ್ನಾಟಕ ರಾಜ್ಯ ಸಂಚಾಲಕರಾಗಿ ಪತ್ರಕರ್ತ ಹಾಗೂ ಸಾಹಿತಿಗಳಾದ ಜಯಾನಂದ ಪೆರಾಜೆ ಹಾಗೂ ಶಿಕ್ಷಕಿ ಡಾ. ಶಾಂತ ಪುತ್ತೂರು ಇವರಿಗೆ ಅಧಿಕಾರ ಹಸ್ತಾಂತರ…