Subscribe to Updates
Get the latest creative news from FooBar about art, design and business.
Author: roovari
ಮಂಗಳೂರು: ಮಂಗಳೂರಿನ ಜೆಪ್ಪು ಬಡಾವಣೆಯಲ್ಲಿರುವ ಸಾಹಿತಿ ವಿವೇಕ ರೈ ಅವರ ಮನೆಯಲ್ಲಿ ಅವರಿಗೆ ಡಾ. ಎಂ. ಚಿದಾನಂದ ಮೂರ್ತಿ ಹೆಸರಿನ ಪ್ರಶಸ್ತಿ ಪ್ರದಾನ ಸಮಾರಂಭ ದಿನಾಂಕ 06 ಆಗಸ್ಟ್ 2025ರಂದು ನಡೆಯಿತು. ಸಮಾರಂಭದಲ್ಲಿ ಭಾಗವಹಿಸಿದ ಎಂದು ನಿವೃತ್ತ ಕುಲಪತಿ ಪ್ರೊ. ಚಿನ್ನಪ್ಪ ಗೌಡ ಮಾತನಾಡಿ “ಕನ್ನಡ ಸಾಹಿತ್ಯ ಲೋಕದ ಸಂಶೋಧಕರಲ್ಲಿ ವಿನೂತನ ವಿಶಿಷ್ಟತೆ ಸಾಧಿಸಿರುವವರು, ಕಠಿಣ ಪರಿಶ್ರಮದ ಮೂಲಕ ಸಂಶೋಧನೆ, ಕಾವ್ಯ ಸಂಗ್ರಹಿಸಿದವರು ವಿವೇಕ ರೈ. ಅವರಿಗೆ ಅರ್ಹವಾಗಿ ಚಿದಾನಂದ ಪ್ರಶಸ್ತಿ ಸಂದಿದೆ” ಎಂದು ಹೇಳಿದರು. ಪ್ರಶಸ್ತಿ ಸ್ವೀಕರಿಸಿದ ವಿವೇಕ ರೈ ಮಾತನಾಡಿ “ಚಿದಾನಂದ ಮೂರ್ತಿ ಹೆಸರಿನ ಪ್ರಶಸ್ತಿ ದೊರೆತಿದ್ದು ಕನ್ನಡ ಸಾಹಿತ್ಯ ಲೋಕದ ಸಂಶೋಧಕರು, ವಿದ್ವತ್ ಕೆಲಸ ಮಾಡುವವರಿಗೆ ಹಾಗೂ ಕಠಿಣ ಪರಿಶ್ರಮಕ್ಕೆ ಸಂದ ಪ್ರಶಸ್ತಿಯಾಗಿದೆ. ಈ ಕಾಲದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಸ್ವಲ್ಪ ಬರೆದರೂ ಬಹುಬೇಗ ಜನಪ್ರಿಯತೆ ಗಳಿಸಿಕೊಳ್ಳಬಹುದು. ಆದರೆ, ಸಾಹಿತ್ಯದ ಗಂಭೀರ ಪ್ರಕಾರಗಳಾದ ಗ್ರಂಥ ಸಂಪಾದನೆ, ಸಂಶೋಧನೆಗಳಂತಹ ಕೆಲಸ ಮಾಡುವವರು ಜನಪ್ರಿಯರಾಗುವುದು ಅಪರೂಪ. ಚಿದಾನಂದ ಮೂರ್ತಿ, ಎಂ. ಎಂ.…
ಬೆಂಗಳೂರು: ಬುಕ್ ಬ್ರಹ್ಮ ಸಂಸ್ಥೆಯು ಪ್ರತೀ ವರ್ಷದಂತೆ ಈ ವರ್ಷವೂ ಕೂಡ ʻಸ್ವಾತಂತ್ರ್ಯೋತ್ಸವ ಕಾದಂಬರಿ ಪುರಸ್ಕಾರʼ ಸ್ಪರ್ಧೆಯನ್ನು ಹಮ್ಮಿಕೊಂಡಿತ್ತು. ಈ ಸ್ಪರ್ಧೆಯ ಪ್ರಶಸ್ತಿಯನ್ನು ಕೋರಮಂಗಲದ ಸೇಂಟ್ ಜಾನ್ಸ್ ಸಭಾಂಗಣದಲ್ಲಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಪ್ರಸ್ತುತಪಡಿಸಿದ ʻಬುಕ್ ಬ್ರಹ್ಮ ಸಾಹಿತ್ಯ ಉತ್ಸವ 2025ʼರ ಕಾರ್ಯಕ್ರಮದಲ್ಲಿ 8 ಆಗಸ್ಟ್ 2025ರ ಶುಕ್ರವಾರದಂದು ಪ್ರದಾನಿಸಲಾಯಿತು. ಈ ಬಾರಿಯ ಬುಕ್ ಬ್ರಹ್ಮ ಕಾದಂಬರಿಯ ಸ್ಪರ್ಧೆ ಪ್ರಶಸ್ತಿಯು ಬೆಂಗಳೂರಿನ ಅಂಕಿತ ಪ್ರಕಾಶನದಿಂದ ಪ್ರಕಟಗೊಂಡ ಕಾದಂಬರಿಗಾರ್ತಿ ಸುಶೀಲಾ ಡೋಣೂರ ಅವರ ʻಪೀಜಿʼ ಕಾದಂಬರಿಗೆ ಲಭಿಸಿತು. ಈ ಪ್ರಶಸ್ತಿಯು ರೂಪಾಯಿ 1 ಲಕ್ಷ ನಗದು ಸಹಿತ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಈ ಒಂದು ಲಕ್ಷದಲ್ಲಿ 75 ಸಾವಿರ ರೂಪಾಯಿ ಲೇಖಕರಿಗೆ ಹಾಗೂ 25 ಸಾವಿರ ಪ್ರಕಾಶಕರಿಗೆ ನೀಡಲಾಗಿದೆ. ಮೆಚ್ಚುಗೆ ಪಡೆದ ಕೃತಿಗಳಾಗಿ ಪುಸ್ತಕ ಮನೆ ಪ್ರಕಾಶನದಿಂದ ಪ್ರಕಟಗೊಂಡ ಕಾದಂಬರಿಕಾರ ರಾಜಶೇಖರ ಹಳೆಮನೆ ಅವರ ʻಒಡಲುಗೊಂಡವರುʼ, ಕಂಟಲಗೆರೆಯ ಆದಿಜಂಬೂ ಪ್ರಕಾಶನದ ಕಾದಂಬರಿಕಾರ ಗುರುಪ್ರಸಾದ್ ಕಂಟಲಗೆರೆಯವರ ʻಅಟ್ರಾಸಿಟಿʼ, ಅಂಕಿತ ಪುಸ್ತಕ ಪ್ರಕಟಿಸಿರುವ…
ಬೆಂಗಳೂರು : ರಾಜ್ಯ ಒಕ್ಕಲಿಗರ ಒಕ್ಕೂಟ ಟ್ರಸ್ಟ್ ಆಯೋಜಿಸಿದ್ದ ರಾಜ್ಯಮಟ್ಟದ ಜಾನಪದ ಸಂಭ್ರಮ, ಸಾಧಕರಿಗೆ ಸನ್ಮಾನ ಹಾಗೂ ಎಸ್ಸೆಸ್ಸೆಲ್ಸಿ, ಪಿ. ಯು. ಸಿ. ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ದಿನಾಂಕ 09 ಆಗಸ್ಟ್ 2025ರ ಶನಿವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಮಾತನಾಡಿ “2011ರ ಜನಗಣತಿ ಪ್ರಕಾರ ದೇಶದಲ್ಲಿರುವ ಮಾತೃಭಾಷೆಗಳ ಸಂಖ್ಯೆ 19,569. ಇವುಗಳ ಉಳಿವಿಗೆ ಎಲ್ಲರೂ ಕೆಲಸ ಮಾಡಬೇಕು.ಭಾಷೆಯ ಉಳಿವಿಗಾಗಿ ಕನ್ನಡ ಪ್ರಾಧಿಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಬಲಿಷ್ಠ ನಾಡು ಕಟ್ಟಬೇಕಾದರೆ ಕಲೆ, ಸಾಹಿತ್ಯ, ಸಂಸ್ಕೃತಿ, ಭಾಷೆ ಉಳಿಸಬೇಕು. ವಿವಿಧ ಸಂಸ್ಕೃತಿ, ಭಾಷೆ ಮತ್ತು ಆಚರಣೆ ಹೊಂದಿರುವ ಭಾರತವನ್ನು ಹಾಳು ಮಾಡಲು ಬಿಡಬಾರದು” ಎಂದರು. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯಾದ ಡಾ. ನಾಗಲಕ್ಷ್ಮೀ ಚೌಧರಿ ಮಾತನಾಡಿ “ಹೆಣ್ಣು ಮಕ್ಕಳು ಸವಾಲು, ಅಡಚಣೆ, ಅವಮಾನವನ್ನು ಧೈರ್ಯದಿಂದ ಎದುರಿಸಬೇಕು. ಸಾಧ್ಯವಾದಷ್ಟು ಮೊಬೈಲ್ ನಿಂದ ದೂರವಿರಿ. ಜಾಲತಾಣದಲ್ಲಿ ಅಪರಿಚಿತರಿಗೆ ಫೋಟೊ, ಕಳುಹಿಸಬಾರದು. ಒಂದು ವೇಳೆ ಯಾವುದಾದರೂ ತೊಂದರೆಗೆ ಸಿಲುಕಿದರೆ…
ಮೈಸೂರು : ಶ್ರೀ ದುರ್ಗಾ ನೃತ್ಯಾ ಅಕಾಡೆಮಿ ಚಾರಿಟೇಬಲ್ ಟ್ರಸ್ಟ್ (ರಿ.) ಮೈಸೂರು ಪ್ರಸ್ತುತ ಪಡಿಸುವ ‘ಅರ್ಪಣಂ’ ನೃತ್ಯ ಕಾರ್ಯಕ್ರಮವನ್ನು ದಿನಾಂಕ 16 ಮತ್ತು 17 ಆಗಸ್ಟ್ 2025ರಂದು ಮೈಸೂರಿನ ರಾಮಕೃಷ್ಣ ನಗರದ ರಾಮ ಗೋವಿಂದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 16 ಆಗಸ್ಟ್ 2025ರಂದು 5-00 ಗಂಟೆಗೆ ವಿದುಷಿ ಶ್ರೀವಿದ್ಯಾ ರಾವ್ ಇವರ ಶಿಷ್ಯರಾದ ಶ್ರೀ ದುರ್ಗಾ ನೃತ್ಯಾ ಅಕಾಡೆಮಿಯ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ನಡೆಯಲಿದೆ. 7-00 ಗಂಟೆಗೆ ಮಂಜು ವಿ. ನಾಯರ್ ಮತ್ತು ಜಗದೀಶ್ವರ ಸುಕುಮಾರ್ ಇವರಿಂದ ‘ನೇಯಂ’ ಪ್ರಸ್ತುತಗೊಳ್ಳಲಿದೆ. ದಿನಾಂಕ 17 ಆಗಸ್ಟ್ 2025ರಂದು ‘ನಾಟ್ಯ ದಾಸೋಹಂ’ ಭರತನಾಟ್ಯ ಮೂಲಕ ಹರಿದಾಸ ಸಾಹಿತ್ಯದ ಪರಿಶೋಧನೆಯಲ್ಲಿ ಕರ್ನಾಟಕ ಕಲಾಶ್ರೀ ಶಾರದಾಮಣಿ ಶೇಖರ್, ಕರ್ನಾಟಕ ಕಲಾಶ್ರೀ ರಾಜಶ್ರೀ ಶೆಣೈ, ವಿದ್ಯಾಶ್ರೀ ರಾಧಾಕೃಷ್ಣ, ಮಂಜುಳ ಸುಬ್ರಹ್ಮಣ್ಯ, ಉನ್ನತ್ ಜೈನ್, ಡಾ. ಸಾಗರ್ ಟಿ.ಎಸ್., ಮಂಜರಿಚಂದ್ರ ಪುಷ್ಪರಾಜ್ ಮತ್ತು ರಾಧಿಕಾ ಶೆಟ್ಟಿ ಇವರುಗಳು ನೃತ್ಯ ಪ್ರದರ್ಶನ ನೀಡಲಿದ್ದಾರೆ.
ಉಪ್ಪಿನಕುದ್ರು : ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಇದರ ವತಿಯಿಂದ 2025ರ ವಿನೂತನ ಕಾರ್ಯಕ್ರಮ ಸರಣಿಯ ಆಗಸ್ಟ್ ತಿಂಗಳ ಕಾರ್ಯಕ್ರಮದಲ್ಲಿ ಉಪ್ಪಿನಕುದ್ರು ನೇತಾಜಿ ಕಮಿಟಿ ಫ್ರೆಂಡ್ಸ್ ಇದರ ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ಪ್ರಯೋಜಕತ್ವದಲ್ಲಿ ‘ವೈವಿಧ್ಯಮಯ ಕಾರ್ಯಕ್ರಮ’ವನ್ನು ದಿನಾಂಕ 15 ಆಗಸ್ಟ್ 2025ರಂದು ಮಧ್ಯಾಹ್ನ 2-00 ಗಂಟೆಗೆ ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಸುಳ್ಯ : ‘ಚಂದನ ಸಾಹಿತ್ಯ ವೇದಿಕೆ’ಯ ಅಧ್ಯಕ್ಷರಾದ ಎಚ್. ಭೀಮರಾವ್ ವಾಷ್ಠರ್ ಇವರಿಗೆ ಸುಳ್ಯದ ‘ಭೀಮರಾವ್ ವಾಷ್ಠರ್ ಅಭಿಮಾನಿ ಬಳಗ’ದ ವತಿಯಿಂದ ‘ಅಭಿನಂದನಾ ಕಾರ್ಯಕ್ರಮ’ ಮಾಡುವ ಬಗ್ಗೆ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ದಿನಾಂಕ 10 ಆಗಸ್ಟ್ 2025ರಂದು ಪೂರ್ವಭಾವಿ ಸಭೆ ಜರುಗಿತು. ದಿನಾಂಕ 24 ಆಗಸ್ಟ್ 2025ರಂದು ನಡೆಸಲಾಗುವ ಸಮಾರಂಭದಲ್ಲಿ ‘ಅಭಿನಂದನಾ ಕಾರ್ಯಕ್ರಮ’ ಜೊತೆ ಚುಟುಕು ಕವಿಗೋಷ್ಠಿ ಮತ್ತು ಸಂಗೀತ ರಸಮಂಜರಿ ಕಾರ್ಯಕ್ರಮಗಳು ಕ.ಸಾ.ಪ. ಕನ್ನಡ ಭವನದಲ್ಲಿ ದಿನಪೂರ್ತಿ ನಡೆಯಲಿವೆ ಎಂದು ವಾಷ್ಠರ್ ಅಭಿನಂದನಾ ಬಳಗದ ನೇತೃತ್ವ ವಹಿಸಿದ್ದ ಪೆರುಮಾಳ್ ಲಕ್ಷ್ಮಣ್ ಇವರು ಸಭೆಯಲ್ಲಿ ತಿಳಿಸಿದರು. ಇದೇ ಸಂದರ್ಭದಲ್ಲಿ ಸುಳ್ಯದ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ರಾಜಯೋಗಿನಿ ಉಮಾದೇವಿ ಇವರು ರಕ್ಷಾ ಬಂಧನದ ನಿಮಿತ್ತ ರಕ್ಷಾಕವಚವನ್ನ ಕಟ್ಟಿ ಆಶೀರ್ವದಿಸಿ, ಧ್ಯಾನದ ಉಪಯೋಗವನ್ನು ವಿವರಿಸಿ, ಎಚ್. ಭೀಮರಾವ್ ವಾಷ್ಠರ್ ರವರು ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳುತ್ತಿದ್ದ ಮತ್ತು ವೇದಿಕೆಯಲ್ಲಿ ತಮಗೆ ನೀಡುತ್ತಿದ್ದ ಅವಕಾಶವನ್ನು ನೆನಪಿಸಿಕೊಂಡರು. ಹಿರಿಯ ಸಾಹಿತಿಗಳಾದ ವೈಲೇಶ್ ಪಿ.ಎಸ್. ಕೊಡಗು ಇವರು ಸಭೆಯನ್ನು ಉದ್ದೇಶಿಸಿ “ಚಂದನ…
ವಿರಾಜಪೇಟೆ : ಮನೆ ಮನೆ ಕಾವ್ಯ ಗೋಷ್ಠಿ ಪರಿಷತ್ತು ಮತ್ತು ಕಾವೇರಿ ಗಣೇಶೋತ್ಸವ ಸಮಿತಿ ಮೂರ್ನಾಡು ರಸ್ತೆ ವಿರಾಜಪೇಟೆ ಇವರ ಸಹಯೋಗದೊಂದಿಗೆ ದಿನಾಂಕ 31 ಆಗಸ್ಟ್ 2025ರ ಭಾನುವಾರದಂದು ವಿರಾಜಪೇಟೆಯ ಮೂರ್ನಾಡು ರಸ್ತೆಯ ಕಾವೇರಿ ಗಣೇಶೋತ್ಸವ ಸಮಿತಿಯ ವೇದಿಕೆಯಲ್ಲಿ ಕವಿಗೋಷ್ಠಿ ಏರ್ಪಡಿಸಲಾಗಿದೆ. ಕವಿಗೋಷ್ಠಿಯಲ್ಲಿ ಭಾಗವಹಿಸಲು ಇಚ್ಛೆಯುಳ್ಳವರು 8861405738 : ವೈಲೇಶ ಪಿ.ಎಸ್. ಕೊಡಗು, 91413 95426 : ಗಿರೀಶ್ ಕಿಗ್ಗಾಲು : 98454 75153 : ಭಾಗ್ಯವತಿ ಅಣ್ಣಪ್ಪ, 97410 00410 : ಕೋಮಲ ಕಮರವಾಡಿ, 90086 13729 : ವಿಮಲ ದಶರಥ, 96322 02820 : ಸುಪ್ರೀತ ದಿಲೀಪ್ ಮತ್ತು +91 81050 96936 : ಲವಿನ್ ಲೋಪೇಸ್ ಇವರ ದೂರವಾಣಿ ಸಂಖ್ಯೆಗೆ ಸಂದೇಶಗಳನ್ನು ಕಳುಹಿಸಿ ನೊಂದಣಿ ಮಾಡಿಕೊಳ್ಳಲು ಕೋರಿಕೆ.
ಮಂಗಳೂರು : ನಾಟ್ಯಾಲಯ ಉರ್ವ (ರಿ.) ಮಂಗಳೂರು ಇವರು ಪ್ರಸ್ತುತ ಪಡಿಸುವ ಕೀರ್ತಿಶೇಷ ಕರ್ನಾಟಕ ಕಲಾಶ್ರೀ ವಿದುಷಿ ಕಮಲ ಭಟ್ ಸಂಸ್ಮರಣೆಯೊಂದಿಗೆ ‘ಕಮಲಾಂಜಲಿ’ ನೃತ್ಯ ಕಾರ್ಯಕ್ರಮವನ್ನು ದಿನಾಂಕ 13 ಆಗಸ್ಟ್ 2025ರಂದು ಸಂಜೆ 5-00 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಲಾಗಿದೆ. ಶ್ರೀ ಕ್ಷೇತ್ರ ಕಟೀಲು ವೇದಮೂರ್ತಿ ಶ್ರೀಹರಿನಾರಾಯಣ ದಾಸ ಅಸ್ರಣ್ಣ ಇವರು ಈ ಕಾರ್ಯಕ್ರಮದ ಉದ್ಘಾಟನೆ ಮಾಡಿ ಆಶೀರ್ವಚನ ನೀಡಲಿದ್ದಾರೆ. ಗುರು ಶ್ರೀ ಉಳ್ಳಾಲ್ ಮೋಹನ್ ಕುಮಾರ್ ಇವರಿಗೆ ಗೌರವಾಭಿನಂದನೆ ನಡೆಯಲಿದ್ದು, ಸಂಸ್ಕಾರ ಭಾರತಿ ಅಧ್ಯಕ್ಷರಾದ ಪುರುಷೋತ್ತಮ ಭಂಡಾರಿ ಮತ್ತು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರದೀಪ ಕುಮಾರ್ ಕಲ್ಕೂರ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಿಂದ ‘ನೃತ್ಯಾರ್ಚನೆ’ ಭರತನಾಟ್ಯ ಪ್ರಸ್ತುತಗೊಳ್ಳಲಿದೆ.
ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷದ್, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮತ್ತು ಮಂಗಳೂರು ತಾಲೂಕು ಸಮಿತಿಯ ಸಹಯೋಗದೊಂದಿಗೆ ವೀರ ರಾಣಿ ಅಬ್ಬಕ್ಕ 500ನೇ ಜನ್ಮವರ್ಷಾಚರಣೆಯ ಪ್ರಯುಕ್ತ ಲೇಖನ ಬರಹ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಮೂರು ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು. ನಿಯಮಗಳು : • ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಬಹುದು. • ರಾಣಿ ಅಬ್ಬಕ್ಕಳ ಕುರಿತಾಗಿ ಲೇಖನವನ್ನು ಬರೆಯಬೇಕು. • ಲೇಖನವು ಕನಿಷ್ಠ 800 ಗರಿಷ್ಟ 1500 ಪದಗಳನ್ನು ಹೊಂದಿರಬೇಕು. • 30 ಸೆಪ್ಟೆಂಬರ್ 2025 ಲೇಖನ ಕಳಿಸಿಕೊಡಲು ಕೊನೆಯ ದಿನಾಂಕವಾಗಿರುತ್ತದೆ. • ಲೇಖನವನ್ನು ನುಡಿ ಅಥವಾ ಯುನಿಕೋಡ್ ನಲ್ಲಿ ಟೈಪ್ ಮಾಡಿ ವರ್ಡ್ ಮತ್ತು ಪಿ.ಡಿ.ಎಫ್. ಎರಡೂ ರೂಪದಲ್ಲಿ ಕಳುಹಿಸಿಕೊಡಬೇಕು. • ಲೇಖನವು ಇಲ್ಲಿಯವರೆಗೆ ಯಾವುದೇ ರೂಪದಲ್ಲಿ ಪ್ರಕಟವಾಗಿರಬಾರದು. • ಲೇಖನದ ಕೊನೆಯಲ್ಲಿ ಕಡ್ಡಾಯವಾಗಿ ಆಕರಗಳನ್ನು ತಿಳಿಸಬೇಕು. • ಪ್ರತ್ಯೇಕ ಪುಟದಲ್ಲಿ ಹೆಸರು, ಕಾಲೇಜು, ಫೋನ್ ನಂಬರ್ ಮತ್ತು ಕಾಲೇಜು ಐಡಿ…
ಬೆಂಗಳೂರು : ರಂಗರಥ – ಭಾರತೀಯ ಪ್ರದರ್ಶನ ಕಲಾ ಸಂಸ್ಥೆ (ರಿ.) ಪ್ರಸ್ತುತ ಪಡಿಸುವ ‘ಅಭಿನಯ ಕಾರ್ಯಾಗಾರ’ವು ದಿನಾಂಕ 01 ಸೆಪ್ಟೆಂಬರ್ 2025ರಿಂದ 19 ಸೆಪ್ಟೆಂಬರ್ 2025ರವರೆಗೆ ಪ್ರತಿದಿನ ಬೆಳಿಗ್ಗೆ 6-30ರಿಂದ 9-30 ಗಂಟೆ ತನಕ ಬೆಂಗಳೂರಿನ ಜೆ.ಪಿ. ನಗರದಲ್ಲಿ ನಡೆಯಲಿದೆ. ಕುಮಾರಿ ಶ್ವೇತಾ ಶ್ರೀನಿವಾಸ್ ಮತ್ತು ಆಸಿಫ್ ಕ್ಷತ್ರಿಯ ಇವರುಗಳು ಈ ಕಾರ್ಯಾಗಾರವನ್ನು ನಡೆಸಿಕೊಡಲಿದ್ದು, ಹೆಚ್ಚಿನ ಮಾಹಿತಿ ಹಾಗೂ ನೋಂದಾವಣೆಗಾಗಿ 8050157443 ಮತ್ತು 9448276776 ಸಂಖ್ಯೆಯನ್ನು ಸಂಪರ್ಕಿಸಿರಿ. ಶ್ವೇತಾ ಶ್ರೀನಿವಾಸ್ (ನಿರ್ದೇಶಕರು) : ಶ್ವೇತಾ ಶ್ರೀನಿವಾಸ್ ಅವರು ಕನ್ನಡ ರಂಗಭೂಮಿಯ ಒಬ್ಬ ಚಿರಪರಿಚಿತ ಪ್ರತಿಭಾನ್ವಿತ ನಟಿ. ಬಾಲ್ಯದಿಂದಲೂ ರಂಗಭೂಮಿಯ ಒಡನಾಟ ಹೊಂದಿರುವ ಇವರು, ನಟನೆಯ ಜೊತೆಗೆ ಸೃಜನಶೀಲ ವಸ್ತ್ರ ವಿನ್ಯಾಸ ಮತ್ತು ನೃತ್ಯ ಸಂಯೋಜನೆಗೆ ದೇಶಾದ್ಯಂತ ಹೆಸರಾದವರು. ಇದಕ್ಕಾಗಿ ಇವರು ಹಲವು ರಾಜ್ಯ ಮತ್ತು ರಾಷ್ಟ್ರಪ್ರಶಸ್ತಿಗಳನ್ನು ಪಡೆದಿದ್ದಾರೆ. ನೀನಾಸಂ ಪದವೀಧರರಾದ ಇವರು, 60ಕ್ಕೂ ಹೆಚ್ಚು ಪ್ರಮುಖ ನಾಟಕಗಳಲ್ಲಿ ಪ್ರಮುಖ ಪಾತ್ರಗಳನ್ನು ವಹಿಸಿದ್ದಲ್ಲದೇ ಅನೇಕ ಚಲನಚಿತ್ರಗಳಲ್ಲಿ ಮತ್ತು ಧಾರಾವಾಹಿಗಳಲ್ಲಿ ನಟಿಸಿ…