Subscribe to Updates
Get the latest creative news from FooBar about art, design and business.
Author: roovari
ನಾಪೋಕ್ಲು : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ನಾಪೋಕ್ಲು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ಸಂಯುಕ್ತಾಶ್ರಯದಲ್ಲಿ ಮಂಡೇಪಂಡ ಅಕ್ಕಮ್ಮ ಗಣವತಿ ಸ್ಮಾರಕದತ್ತಿ ಮತ್ತು ಎಸ್. ಎಸ್. ರಾಮಮೂರ್ತಿ ದತ್ತಿ ಉಪನ್ಯಾಸ ಕಾರ್ಯಕ್ರಮ ದಿನಾಂಕ 27 ಜನವರಿ 2025ರಂದು ನಡೆಯಿತು. ನಾಪೋಕ್ಲುವಿನ ಎಕ್ಸೆಲ್ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಕಿ ಕೆ. ಡಿ. ಶೋಭಿತಾ ಮಾತನಾಡಿ “ಕನ್ನಡ ಸಾಹಿತ್ಯದ ಪ್ರಾಚೀನತೆ ಕ್ರಿಸ್ತಶಕ 8 ರಿಂದ 9ನೇಯ ಶತಮಾನಕ್ಕೆ ಮೊದಲಿನ ಸಾಹಿತ್ಯಿಕ ಸಾಕ್ಷಿಗಳು ಇಲ್ಲದಿರುವುದರಿಂದ ಕನ್ನಡ ನಾಹಿತ್ಯದ ಪ್ರಾರಂಭ ಅಸ್ಪಷ್ಟತೆಯಲ್ಲಿ ಮುಚ್ಚಿಹೋಗಿದೆ. ಏಕೆಂದರೆ ಕೆಲವೇ ಶಾಸನ ಪುರಾವೆಗಳು ಲಭ್ಯವಿದ್ದು, ಇತಿಹಾಸದ ಪ್ರಾರಂಭಿಕ ಹಂತಗಳಿಗೆ ಸೇರಿದ ಬಹುತೇಕ ಶಾಸನಗಳನ್ನು ಬ್ರಾಹ್ಮಲಿಪಿ ಹಾಗೂ ಪ್ರಾಕೃತ ಭಾಷೆಯಲ್ಲಿ ಬರೆಯಲಾಗಿದೆ. ಅವುಗಳಲ್ಲಿ ಬಹು ಪಾಲು ವೀರರಿಗೆ ಗೌರವ ಸಲ್ಲಿಸುವ ಕಿರು ಸ್ಮಾರಕ ದಾಖಲೆಗಳಾಗಿವೆ” ಎಂದರು. ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ವರಿಷತ್ತಿನ ಅಧ್ಯಕ್ಷರಾದ ಕಡ್ಲೇರ ತುಳಸಿ…
ಉಡುಪಿ : ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷೆ ಎಂ. ಜಾನಕಿ ಬ್ರಹ್ಮಾವರ ರಚಿತ ತುಳು ಕಾದಂಬರಿ ‘ಕಪ್ಪು ಗಿಡಿ’ ಇದರ ಆಂಗ್ಲ ಅವತರಣಿಕೆ ‘ದಿ ಬ್ಲ್ಯಾಕ್ ಈಗಲ್’ ಕೃತಿಯ ಲೋಕರ್ಪಣಾ ಸಮಾರಂಭವು ಮಂಗಳೂರಿನ ಕಲ್ಲಚ್ಚು ಪ್ರಕಾಶನದ ವತಿಯಿಂದ ದಿನಾಂಕ 24 ಜನವರಿ 2025ರ ಶುಕ್ರವಾರದಂದು ಉಡುಪಿಯ ಹೋಟೆಲ್ ಕಿದಿಯೂರಿನ ಸಭಾಂಗಣದಲ್ಲಿ ನಡೆಯಿತು. ಕೃತಿ ಲೋಕಾರ್ಪಣೆಗೊಳಿಸಿದ ಕೇಂದ್ರ ಸಾಹಿತ್ಯ ಅಕಾಡಮಿ ಮಾಜಿ ಸದಸ್ಯರಾದ ಪ್ರೊ.ಮುರಳೀಧರ ಉಪಾಧ್ಯ ಹಿರಿಯಡ್ಕ ಮಾತನಾಡಿ “ತುಳು ನಾಟಕ, ಸಿನೆಮಾ ಆಗಲು ಕೃತಿ ಯೋಗ್ಯವಾಗಿದ್ದು ಭಾಷಾಂತರವು ಯಾವುದೇ ಭಾಷೆಗೆ ಕೊಡುಗೆ ಕೊಡುವ ಮಹತ್ವದ ಕೆಲಸ. ತುಳುವಿಗೆ ರಾಜ್ಯದಲ್ಲಿ ದ್ವಿತೀಯ ಭಾಷೆಯ ಮನ್ನಣೆ ಜತೆಗೆ ಕೇಂದ್ರ ಸರಕಾರ ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಮನ್ನಣೆ ಸಿಗಬೇಕೆಂಬ ಕನಸು ನನಸಾಗಲು ತುಳು ಸಾಹಿತ್ಯ ಹೆಚ್ಚೆಚ್ಚು ಅನ್ಯ ಭಾಷೆಗಳಿಗೆ ಅನುವಾದ ವಾಗಬೇಕು” ಎಂದರು. ಅನುವಾದಕರಾದ ಗೋವಾದ ಎಸ್. ಎನ್. ಡಿ. ಪೂಜಾರಿ ಶುಭ ಹಾರೈಸಿದರು. ಕ. ಸಾ. ಪ. ಉಡುಪಿ ಜಿಲ್ಲಾಧ್ಯಕ್ಷ ನೀಲಾವರ…
ಮಂಗಳೂರು : ಕಟೀಲು ಮೇಳದ ಕಲಾವಿದರಾದ ಆನಂದ ಕಟೀಲು ದಿನಾಂಕ 25 ಜನವರಿ 2025 ರಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧಾನರಾದರು. ಅವರಿಗೆ 47 ವರ್ಷ ವಯಸ್ಸಾಗಿತ್ತು. ಹಲವು ದಿನಗಳ ಹಿಂದೆ ಕಿನ್ನಿಗೋಳಿಯಲ್ಲಿ ಅಟೋ ಚಲಾಯಿಸುತ್ತಿರುವಾಗ ಅಪಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದರು. ಕಟೀಲು ಮೇಳದಲ್ಲಿ 15 ವರ್ಷಗಳ ತಿರುಗಾಟವೂ ಸೇರಿದಂತೆ, ಭಗವತೀ ಮೊದಲಾದ ಮೇಳಗಳಲ್ಲಿ ಸ್ತ್ರೀವೇಷ ಹಾಗೂ ಪುಂಡುವೇಷಧಾರಿಯಾಗಿ ಎರಡೂವರೆ ದಶಕಗಳ ಕಾಲ ಕಲಾಸೇವೆ ಗೈದಿರುತ್ತಾರೆ. ಕಟೀಲು ಮೇಳದ ಯಕ್ಷನಿಧಿಯ ಪ್ರತಿನಿಧಿಯಾಗಿಯೂ ಶ್ರದ್ಧೆಯಿಂದ ಕಾರ್ಯನಿರ್ವಹಿಸುತ್ತಿದ್ದ ಇವರು ಪತ್ನಿ, ಬಂಧುಗಳು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ಬಂಟ್ವಾಳ : ಯಕ್ಷಗಾನ ತಾಳಮದ್ದಳೆಯ ಹಿರಿಯ ಅರ್ಥಧಾರಿ ಬರೆ ಕೇಶವ ಭಟ್ಟ ದಿನಾಂಕ 25 ಜನವರಿ 2025ರಂದು ನಿಧನ ಹೊಂದಿದರು. ಇವರಿಗೆ 84ವರ್ಷ ವಯಸ್ಸಾಗಿತ್ತು. ವೃತ್ತಿಯಲ್ಲಿ ಅಧ್ಯಾಪಕರಗಿದ್ದ ಕೇಶವ ಭಟ್ಟರು ಅರ್ಥಧಾರಿಯಾಗಿ,ಹವ್ಯಾಸಿ ವೇಷಧಾರಿಯಾಗಿ, ಕಲಾ ಸಂಯೋಜಕರಾಗಿ, ಕಲಾವಿಮರ್ಶಕರಾಗಿ, ಲೇಖಕರಾಗಿ ಸಾಹಿತ್ಯ ಮತ್ತು ಕಲಾ ಕ್ಷೇತ್ರಕ್ಕೆ ಅಪೂರ್ವ ಕೊಡುಗೆ ನೀಡಿದ್ದರು. ನಿವೃತ್ತಿಯ ಅನಂತರ ವಾಸುದೇವ ಸಾಮಗರ ‘ಸಂಯಮಂ’ ತಂಡದಲ್ಲಿ ಕೆಲವು ವರ್ಷ ತಿರುಗಾಟ ಮಾಡಿದ್ದ ಇವರು ಅಪಾರ ಪುರಾಣ ಜ್ಞಾನ, ಭಾವಪೂರ್ಣ ಅರ್ಥಗಾರಿಕೆಯಿಂದ ಕಲಾಭಿಮಾನಿಗಳ ಗೌರವಕ್ಕೆ ಪಾತ್ರರಾಗಿದ್ದರು. ಕೈರಂಗಳ ಯಕ್ಷಗಾನ ಸಂಘದ ಆಟದಲ್ಲಿ ಮೊತ್ತಮೊದಲು ನಾರದನಾಗಿ ರಂಗವೇರಿದ ಇವರು ಹೆಜ್ಜೆಗಾರಿಕೆ ಅಭ್ಯಸಿಸದಿದ್ದರೂ ‘ಹಿರಣ್ಯಕಶ್ಯಪ’, ‘ಮಯೂರ ಧ್ವಜ’ ಮುಂತಾದ ಪಾತ್ರಗಳನ್ನು ನಿರ್ವಹಿಸಿದರು. 1999ನೇ ಇಸವಿ ತನ್ನ 58ನೇ ವಯಸ್ಸಿನಲ್ಲಿ ವೃತ್ತಿ ಜೀವನದಿಂದ (ಅಧ್ಯಾಪಕ) ನಿವೃತ್ತರಾಗಿದ್ದರೂ ತಾಳಮದ್ದಳೆ ಕೂಟಗಳಲ್ಲಿ ಭಾಗವಹಿಸುತ್ತಿದ್ದರು. ‘ಶೇಣಿ ಪ್ರಶಸ್ತಿ’, ‘ದೇರಾಜೆ ಪ್ರಶಸ್ತಿ’, ‘ಪುತ್ತೂರು ಯಕ್ಷಾಂಜನೇಯ ಪ್ರಶಸ್ತಿ’, ‘ಪೆರ್ಲ ಕೃಷ್ಣಭಟ್ ಪ್ರಶಸ್ತಿ’ ಅಲ್ಲದೆ ಅನೇಕ ಸಂಘ-ಸಂಸ್ಥೆಗಳು ಬರೆ ಕೇಶವ ಭಟ್ಟರನ್ನು ಗುರುತಿಸಿ ಗೌರವಿಸಿವೆ.…
ಕೊಪ್ಪಳ : ಹಿರಿಯ ಜನಪದ ಕಲಾವಿದೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ಇವರಿಗೆ 2025ರ ‘ಪದ್ಮಶ್ರೀ ಪ್ರಶಸ್ತಿ’ಯನ್ನು ಘೋಷಣೆ ಮಾಡಲಾಗಿದೆ. ಕೊಪ್ಪಳ ತಾಲೂಕಿನ ಮೋರನಾಳ ಗ್ರಾಮದಲ್ಲಿ 1929ರಲ್ಲಿ ಜನಿಸಿದ ಭೀಮವ್ವ ಶಿಳ್ಳೆಕ್ಯಾತರ, ತೊಗಲುಗೊಂಬೆಯಾಟದಲ್ಲಿ ಅಂತರಾಷ್ಟ್ರೀಯ ಖ್ಯಾತಿಯನ್ನು ಪಡೆದಿದ್ದಾರೆ. ತಮ್ಮ 14ನೇ ವಯಸ್ಸಿನಿಂದ ಇಲ್ಲಿಯವರೆಗೂ ತೊಗಲುಗೊಂಬೆಯಾಟವನ್ನು ಕುಲಕಸುಬಾಗಿ ಮಾಡುತ್ತಾ ಕಲೆಯಲ್ಲಿ ಮಹತ್ತರ ಸಾಧನೆ ಮಾಡಿದ್ದಾರೆ. ಅಮೇರಿಕ, ಜಪಾನ್, ಜರ್ಮನಿ, ದುಬೈ, ಪ್ಯಾರಿಸ್, ಇಟಲಿ, ಫ್ರಾನ್ಸ್, ಸೌದಿ ಅರೇಬಿಯಾ, ಇರಾನ್, ಇರಾಕ್, ಐರ್ಲೆಂಡ್, ಸ್ವಿಟ್ಜರ್ಲೆಂಡ್, ಹಾಲೆಂಡ್ ಮುಂತಾದ ದೇಶಗಳಲ್ಲಿ ರಾಮಾಯಣ ಮಹಾಭಾರತದಂತಹ ಮಹಾಕಾವ್ಯಗಳನ್ನು ಹಾಗೂ ಪ್ರಸ್ತುತ ವಿದ್ಯಮಾನಗಳನ್ನು ತೊಗಲುಗೊಂಬೆಯಾಟದ ಮೂಲಕ ಪ್ರದರ್ಶನ ನೀಡಿ ಮೆಚ್ಚುಗೆ ಪಡೆದಿದ್ದಾರೆ. ಭೀಮವ್ವ ಶಿಳ್ಳೆಕ್ಯಾತರ ಅನಕ್ಷರಸ್ಥೆಯಾದರೂ ವಂಶಪಾರಂಪರ್ಯವಾಗಿ ಬಂದ ತೊಗಲುಗೊಂಬೆಯಾಟ ಕಲೆಯನ್ನು ಉಳಿಸಿಕೊಂಡು ಬಂದಿದ್ದಾರೆ. ಇಡೀ ಜಿಲ್ಲೆಯಲ್ಲಿ ಇದೊಂದೇ ಕುಟುಂಬ ನೂರಾರು ವರ್ಷಗಳಿಂದ ತೊಗಲುಗೊಂಬೆಯಾಟವನ್ನು ಪ್ರದರ್ಶಿಸುತ್ತಾ ಬಂದಿದೆ. ಇವರ ಮನೆಯಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ಅಜ್ಜಿ ಭೀಮವ್ವ ಸಹ ಗೊಂಬೆಯಾಟ ಪ್ರದರ್ಶನಕ್ಕೆ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಭೀಮವ್ವ ಶಿಳ್ಳೆಕ್ಯಾತರ ಹೆಚ್ಚು ಪೌರಾಣಿಕ ಕಥೆ…
ಕಾಸರಗೋಡು : ಗಡಿನಾಡು ಕಾಸರಗೋಡಿನ ದಶಮಾನೋತ್ತರ ಸಂಸ್ಥೆ ರಂಗಸಿರಿ ಸಾಂಸ್ಕೃತಿಕ ವೇದಿಕೆಯು ನಮ್ಮ ಮಣ್ಣಿನ ಕಲೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೈಂಕರ್ಯವನ್ನು ನಿರ್ವಹಿಸುತ್ತಾ ಬಂದಿದೆ. ಹಲವಾರು ಬಗೆಯ ಸಮಾಜಮುಖೀ ಚಟುವಟಿಕೆಗಳು ಸಂಸ್ಥೆಯನ್ನು ಜನಾನುರಾಗಿಯಾಗಿಸಿವೆ. ರಂಗಸಿರಿಯು ಈ ಹಿಂದೆ ದೀಪದ ಬೆಳಕಿನ ತಾಳಮದ್ದಳೆಯನ್ನು ನಡೆಸಿ ಯಶಸ್ವಿಯಾಗಿತ್ತು. ಅಂತಹ ವಿನೂತನ ಕಾರ್ಯಗಳ ಸಾಲಲ್ಲಿ ಹೊಸ ಸೇರ್ಪಡೆ ‘ದೀಪದ ಬೆಳಕಿನಲ್ಲಿ ಯಕ್ಷಗಾನ’. ಯಕ್ಷಗಾನದ ಪಿತಾಮಹ ಪಾರ್ತಿಸುಬ್ಬನ ಜನ್ಮಭೂಮಿ ಕುಂಬಳೆಯ ಶ್ರೀ ಗೋಪಾಲಕೃಷ್ಣ ಸನ್ನಿಧಿಯಲ್ಲಿ ವಿಶೇಷವಾಗಿ ದೀಪದ ಬೆಳಕಿನಲ್ಲಿ ಯಕ್ಷಗಾನವು ದಿನಾಂಕ 23 ಜನವರಿ 2025ರಂದು ನಡೆಯಿತು. ವಿದ್ಯಾರ್ಥಿಗಳಿಂದ ‘ಕಾಲನೇಮಿ ಕಾಳಗ’ ಹಾಗೂ ‘ಜಾಂಬವತಿ ಕಲ್ಯಾಣ’ ಎಂಬ ಪೌರಾಣಿಕ ಕಥಾನಕಗಳ ಪ್ರದರ್ಶನಗಳು ನಡೆದವು. ಯಕ್ಷಗಾನ ಗುರುಗಳಾದ ಶ್ರೀ ಸೂರ್ಯನಾರಾಯಣ ಪದಕಣ್ಣಾಯ ಬಾಯಾರು ಇವರ ಪರಿಕಲ್ಪನೆಯಂತೆ ಕಾರ್ಯಕ್ರಮವು ಮೂಡಿಬಂತು. ವೇದಿಕೆಗೆ ಗೂಟ ದೀಪದ ಬೆಳಕನ್ನು ಸಜ್ಜುಗೊಳಿಸಲಾಗಿತ್ತು. ವೇದಿಕೆಯ ಹೊರಭಾಗದ ಬೆಳಕು ಬಾರದಂತೆಯೂ ಎಚ್ಚರ ವಹಿಸಿ ವೇದಿಕೆ ವ್ಯವಸ್ಥೆ ಮಾಡಲಾಗಿತ್ತು. ವಿದ್ಯಾರ್ಥಿ ಕಲಾವಿದರು ಚೌಕಿಯಲ್ಲಿ ಬಣ್ಣಗಾರಿಕೆ ನಡೆಸಿದ್ದು, ಕೂಡಾ ದೀಪದ…
ಉಡುಪಿ : ಭಾವನಾ ಪೌಂಡೇಶನ್ (ರಿ.) ಹಾವಂಜೆ ಹಾಗೂ ಭಾಸಗ್ಯಾಲರಿ ಮತ್ತು ಸ್ಟುಡಿಯೋ ವತಿಯಿಂದ ಉಡುಪಿಯ ಮಧುರಂ ವೈಟ್ ಲೋಟಸ್ ಹೋಟೇಲ್ನ ಸಹಯೋಗದಲ್ಲಿ ಆಯೋಜಿಸುತ್ತಿರುವ ಜನಪದ ದೇಶೀಯ ಕಲೆಗಳ ಸರಣಿ ಕಾರ್ಯಕ್ರಮದಲ್ಲಿ ‘ಸಾಂಝಿ ಕಲೆ’ಯ ಕಾರ್ಯಾಗಾರವು ದಿನಾಂಕ 25 ಜನವರಿ 2025ರಂದು ಉಡುಪಿಯ ಬಡಗುಪೇಟೆಯಲ್ಲಿ ಉದ್ಘಾಟನೆಗೊಂಡಿತು. ಈ ಕಾರ್ಯಾಗಾರವನ್ನು ಕಲಾಶಿಕ್ಷಕರಾದ ರಾಘವೇಂದ್ರ ಅಮೀನ್ ಉದ್ಘಾಟಿಸಿ “ದೇಶೀಯ ಕಲೆಗಳು ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ನೋಡಿ ಅನುಭವಿಸುವುದಕ್ಕಲ್ಲದೇ ಅದರ ತಾಂತ್ರಿಕತೆ, ಇತಿಹಾಸ ಇನ್ನಿತರ ವಿಷಯಗಳನ್ನು ಅದಕ್ಕೆ ಸಂಬಂಧಪಟ್ಟ ತಜ್ಞರಿಂದಲೇ ತಿಳಿದುಕೊಳ್ಳುವುದು ಬಹು ಮಹತ್ವದ್ದು. ಇದೊಂದು ಉಡುಪಿಯಂತಹ ಪುಟ್ಟ ಪಟ್ಟಣಕ್ಕೆ ರಾಷ್ಟ್ರಮಟ್ಟದಲ್ಲಿ ಮಾದರಿಯಾಗಬಹುದಾದ ಕಾರ್ಯಕ್ರಮ” ಎಂಬುದಾಗಿ ಅಭಿಪ್ರಾಯವಿತ್ತರು. ಇನ್ನೋರ್ವ ಅತಿಥಿ ವಿದುಷಿ ಅಕ್ಷತಾ ವಿಶು ರಾವ್ “ಭಾವನಾ ಕಲಾ ಶಾಲೆಯ ವಿಂಶತಿಯ ಸಂಭ್ರಮದಲ್ಲಿ ರೂಪಿಸಲಾದ ಈ ಕಾರ್ಯಕ್ರಮದಲ್ಲಿ ಇಂದಿಗೆ ನಾಲ್ಕುನೂರಕ್ಕೂ ಮಿಕ್ಕಿ ಕಲಿಕಾಸಕ್ತರು ಭಾಗವಹಿಸಿ ಪರಿಣತರಿಂದ ದೇಶೀಯ ಕಲೆಗಳ ಬಗೆಗೆ ಉಡುಪಿಯಲ್ಲಿಯೇ ಕಲಿತಿರುವುದು ಸಂತಸದ ಸಂಗತಿ, ಇದು ಹೀಗೆಯೇ ಮುಂದುವರೆದು ದೇಶೀಯ ಕಲೆಗಳೆಲ್ಲ ಉಡುಪಿಯಲ್ಲಿ ಪಸರಿಸುವಂತಾಗಲಿ”…
ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೊಡಗು ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಣ್ಣ ಕಥೆಗಳ ಗೌರಮ್ಮ ದತ್ತಿನಿಧಿ ಕಥಾಸ್ಪರ್ಧೆಯನ್ನು ಮಡಿಕೇರಿಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 25 ಜನವರಿ 2025ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಕುಶಾಲನಗರದ ಚಿತ್ರಕಲಾವಿದ ಉ.ರಾ. ನಾಗೇಶ್ ಇವರು ಕಥಾ ಸ್ಪರ್ಧಿಗಳಿಗೆ ಕತೆ ರಚನೆ ಮಾಡುವ ಕುರಿತು ಮಾತನಾಡುತ್ತಾ “ಕಥೆ ರಚಿಸುವ ಸಂದರ್ಭದಲ್ಲಿ ಕಥೆಗಾರ ಆ ಪಾತ್ರದ ಒಳಹೊಕ್ಕು ಕಥೆಯನ್ನು ನಿರೂಪಿಸಬೇಕು. ಪ್ರತಿಯೊಂದು ಸಣ್ಣ ಘಟನೆಯನ್ನು ವಿಶ್ಲೇಷಣೆ ಮಾಡುವ ಮೂಲಕ ಕಥೆ ರಚನೆ ಮಾಡಬಹುದು. ನಿಮ್ಮ ವಯಸ್ಸಿಗೆ ಅನುಗುಣವಾಗಿ ನೀವು ಓದಿರುವ ಮತ್ತು ಕೇಳಿರುವ ವಿಚಾರಗಳನ್ನು ಸಂಕ್ಷಿಪ್ತವಾಗಿ ಬರೆಯುವ ಮೂಲಕ ಕಥೆ ರಚನೆ ಮಾಡಬಹುದು. ಕಥೆ ರಚನೆ ಮಾಡುವ ಸಂದರ್ಭದಲ್ಲಿ ಪಾತ್ರಗಳ ವಿಚಾರವಾಗಿ ಸರಿಯಾದ ವಿವರಗಳನ್ನು ನೀಡಬೇಕು” ಎಂದು ವಿವರಿಸಿದರು. ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಕೊಡಗು ಜಿಲ್ಲಾ ಶಿಕ್ಷಣ ಇಲಾಖೆಯ ಅಧಿಕಾರಿ ಎಂ. ಕೃಷ್ಣಪ್ಪನವರು ಮಾತನಾಡುತ್ತಾ “ನಾಳಿನ ನೂತನ ಸಾಹಿತಿಗಳನ್ನು ತಯಾರು ಮಾಡುವಲ್ಲಿ…
ಮಂಗಳೂರು: ಹಿರಿಯ ಪತ್ರಕರ್ತ, ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ ಅಲ್ಪಕಾಲದ ಅಸೌಖ್ಯದಿಂದ ದಿನಾಂಕ 26 ಜನವರಿ 2025 ರವಿವಾರ ಅಪರಾಹ್ನ ಬಾಳೆಪುಣಿಯ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 62ವರ್ಷ ವಯಸ್ಸಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರೆಸ್ ಕ್ಲಬ್ ಇದರ ಪ್ರಧಾನ ಕಾರ್ಯದರ್ಶಿಯಾಗಿದ್ದ ಇವರು 39ವರ್ಷಗಳ ಕಾಲ ಪತ್ರಿಕೋದ್ಯಮದಲ್ಲಿದ್ದರು. ‘ಅಮೃತ’, ‘ಚೇತನಾ’, ‘ದಿ ಗೋಲ್ಡ್’, ‘ಸಪ್ತಸಾರ’ ವಾರಪತ್ರಿಕೆಗಳು ಮತ್ತು ದೈನಿಕಗಳಾದ ‘ಕರಾವಳಿ ಅಲೆ’, ‘ಕನ್ನಡ ಜನ ಅಂತರಂಗ’, ‘ಕೆನರಾ ಟೈಮ್ಸ್’, ‘ಮಂಗಳೂರು ಮಿತ್ರ’ ‘ಸಂಯುಕ್ತ ಕರ್ನಾಟಕ’ಗಳಲ್ಲಿ ಕೆಲಸ ಮಾಡಿದ್ದರು. ‘ಕಿತ್ತಳೆ ಬುಟ್ಟಿಯಲ್ಲಿ ಅರಳಿದ ಅಕ್ಷರ ಕನಸು’ ಎಂಬ ಶೀರ್ಷಿಕೆಯ ವರದಿ ಮೂಲಕ ಹರೇಕಳ ಹಾಜಬ್ಬ ಅವರನ್ನು ಬಾಳೇಪುಣಿ ಪರಿಚಯಿಸಿದ್ದರು. ಇವರಿಗೆ ಪದ್ಯಾಣ ಗೋಪಾಲಕೃಷ್ಣ ಸಂಸ್ಮರಣಾ ಗ್ರಾಮೀಣ ವರದಿಗಾರಿಕೆ ಪ್ರಶಸ್ತಿ, ರಾಜ್ಯ ಸರ್ಕಾರದ ‘ಡಾ. ಬಿ. ಆರ್.ಅಂಬೇಡ್ಕರ್ ಪ್ರಶಸ್ತಿ’ , ‘ಬೆ. ಸು. ನಾ ಮಲ್ಯ ಪತ್ರಿಕೋದ್ಯಮ ಪ್ರಶಸ್ತಿ’, ‘ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ’, ‘ಪದ್ಯಾಣ…
ಮಂಗಳೂರು : ಕರ್ನಾಟಕ ಪ್ರಾಂತೀಯ ಕಥೋಲಿಕ ಧರ್ಮಾಧ್ಯಕ್ಷರ ಮಂಡಳಿಯ ಆಶ್ರಯದಲ್ಲಿರುವ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನ (ರಿ.) ಇದರ ವತಿಯಿಂದ ‘ಸಂದೇಶ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ದಿನಾಂಕ 10 ಫೆಬ್ರವರಿ 2025ರಂದು ಸಂಜೆ 5-30 ಗಂಟೆಗೆ ಮಂಗಳೂರಿನ ನಂತೂರಿನಲ್ಲಿರುವ ಸಂದೇಶ ಪ್ರತಿಷ್ಠಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭದ ಅಧ್ಯಕ್ಷತೆಯನ್ನು ಬಳ್ಳಾರಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ವಂದನೀಯ ಹೆನ್ರಿ ಡಿ’ಸೋಜರವರು ವಹಿಸಲಿದ್ದು, ಮಾನ್ಯ ಸಚಿವರಾದ ದಿನೇಶ್ ಗುಂಡೂರಾವ್, ಧರ್ಮಸ್ಥಳ ಕ್ಷೇತ್ರದ ಧರ್ಮಾಧ್ಯಕ್ಷರಾದ ವಂದನೀಯ ಫ್ರಾನ್ಸಿಸ್ ಸೆರಾವೋ ಎಸ್.ಜೆ., ಬೆಳ್ತಂಗಡಿ ಕ್ಷೇತ್ರದ ಧರ್ಮಾಧ್ಯಕ್ಷರಾದ ವಂದನೀಯ ಲಾರೆನ್ಸ್ ಮುಕ್ಕುಯಿ, ಸಂದೇಶ ಪ್ರತಿಷ್ಠಾನದ ನಿರ್ದೇಶಕರಾದ ಡಾ. ಸುದೀಪ್ ಪೌಲ್, ಸಂದೇಶ ಪ್ರತಿಷ್ಠಾನದ ವಿಶ್ವಸ್ಥರಾದ ರಾಯ್ ಕ್ಯಾಸ್ತಲಿನೊ ಮತ್ತು ಐವನ್ ಪಿಂಟೊ ಹಾಗೂ ಪ್ರಶಸ್ತಿ ಆಯ್ಕೆ ಸಮಿತಿಯ ಡಾ. ನಾ. ದಾಮೋದರ ಶೆಟ್ಟಿ ಇವರುಗಳು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ‘ಸಂದೇಶ ಸಾಹಿತ್ಯ ಪ್ರಶಸ್ತಿ – ಕನ್ನಡ’ ಶ್ರೀ ಬಿ.ಆರ್. ಲಕ್ಷ್ಮಣ್ ರಾವ್, ‘ಸಂದೇಶ ಸಾಹಿತ್ಯ ಪ್ರಶಸ್ತಿ – ಕೊಂಕಣಿ’…