Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಕಲ್ಲಚ್ಚು ಪ್ರಕಾಶನದ ಬೆಳ್ಳಿ ಹಬ್ಬ ರಜತ ರಂಗು ಪ್ರಯುಕ್ತ 16ನೇ ಆವೃತ್ತಿಯ 2025ರ ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 31 ಆಗಸ್ಟ್ 2025ರಂದು ಮಂಗಳೂರಿನ ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದ ಎದುರಿನ ಹ್ಯಾಟ್ ಹಿಲ್ ನಲ್ಲಿ ಇರುವ ಆಫೀಸರ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಾಹಿತಿ ಸಂತೋಷಕುಮಾರ ಮೆಹಂದಳೆ “ಕರ್ನಾಟಕದ ಒಟ್ಟು ವ್ಯಾಪ್ತಿಯಲ್ಲಿ ವರ್ಷಕ್ಕೆ ಸುಮಾರು ಆರು ಸಾವಿರ ಸಾಹಿತ್ಯ ಕೃತಿಗಳು ಪ್ರಕಟವಾಗುತ್ತಿದ್ದರೂ ಇವುಗಳಲ್ಲಿ ಓದುಗರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಇರುವಂತವುಗಳು ಕೇವಲ ಹತ್ತಾರು ಮಾತ್ರ. ಇಂತಹ ಸಂದರ್ಭದಲ್ಲಿ ಬರಹಗಾರರು ಗುಣಮಟ್ಟದ ಬರವಣಿಗೆ ಬಗ್ಗೆ ಹೆಚ್ಚು ಅದ್ಯತೆ ನೀಡಬೇಕು. ಸೂಕ್ತ ಅನುಭವ ಮತ್ತು ಓದಿನ ಹಿನ್ನೆಲೆಯಿಲ್ಲದೆ, ಕೇವಲ ಗ್ರಂಥಾಲಯ ಸರಬರಾಜಿನ ಉದ್ದೇಶದಿಂದ ಮಾತ್ರ ಕೃತಿ ರಚನೆ ಉತ್ತಮವಲ್ಲ. ಎಂದು ಅಭಿಪ್ರಾಯಪಟ್ಟರು. ವಿವಿಧ ಕ್ಷೇತ್ರಗಳ ಕರ್ನಾಟಕದ ಪಂಚ ಸಾಧಕರಾದ ಡಾ. ಎಸ್.ಎಮ್. ಶಿವಪ್ರಕಾಶ್, ಡಾ. ಪ್ರಕಾಶ ಕೇಶವ ನಾಡಿಗ್, ಜಬೀವುಲ್ಲಾ ಎಂ. ಅಸದ್,…
ಮುಂಬೈ : ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಹಾಗೂ ಅಭಿನವ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 05 ಸೆಪ್ಟೆಂಬರ್ 2025 ಶುಕ್ರವಾರದಂದು ಬೆಳಿಗ್ಗೆ 11-30 ಗಂಟೆಗೆ ಕನ್ನಡದ ಖ್ಯಾತ ವಿಮರ್ಶಕ, ಚಿಂತಕ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯರವರ ಕನ್ನಡ ಸಾಹಿತ್ಯ, ಪರಂಪರೆ ಮತ್ತು ವರ್ತಮಾನ ಕೃತಿ ಕುರಿತ ಸಹೃದಯ ಗೋಷ್ಠಿಯು ನಡೆಯಲಿದೆ. ಗೂಗಲ್ ವೇದಿಕೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಡಾ. ಅನುಷ ಎಚ್.ಸಿ. ಹಾಗೂ ಡಾ. ರಾಜಶೇಖರ ಹಳೆಮನೆ ಉಜಿರೆ ಇವರು ಪಾಲ್ಗೊಳ್ಳಲಿರುವರು. ಕನ್ನಡ ವಿಭಾಗದ ಸಂಶೋಧನ ವಿದ್ಯಾರ್ಥಿಗಳಾದ ಕಲಾ ಭಾಗ್ವತ್ ಮತ್ತು ನಳಿನಾ ಪ್ರಸಾದ್ ಕೃತಿಯ ಆಯ್ದ ಭಾಗಗಳ ವಾಚನ ಮಾಡಲಿರುವರು. ಸಹಾಯಕ ಪ್ರಾಧ್ಯಾಪಕರಾದ ಡಾ. ಪೂರ್ಣಿಮಾ ಸುಧಾಕರ್ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಲಿರುವರು. ವಿದ್ಯಾ ರಾಮಕೃಷ್ಣ ತಾಂತ್ರಿಕವಾಗಿ ಸಹಕರಿಸುವರು. http://meet. google.com/sjq-bpxm-zbt ಲಿಂಕ್ ಮೂಲಕ ಈ ಕಾರ್ಯಕ್ರಮಕ್ಕೆ ಸೇರಿಕೊಳ್ಳಬಹುದಾಗಿದೆ ಎಂದು ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಜಿ.ಎನ್. ಉಪಾಧ್ಯ ಹಾಗೂ ನ. ರವಿಕುಮಾರ ಅಭಿನವ ಬೆಂಗಳೂರು ಇವರು ತಿಳಿಸಿದ್ದಾರೆ. ಡಾ.…
ಧಾರವಾಡ : ಅಭಿನಯ ಭಾರತಿ (ರಿ.) ಧಾರವಾಡ ಇದರ 45ನೇ ವಾರ್ಷಿಕೋತ್ಸವವನ್ನು ದಿನಾಂಕ 05 ಸೆಪ್ಟೆಂಬರ್ 2025ರಂದು ಸಂಜೆ 6-00 ಗಂಟೆಗೆ ಧಾರವಾಡದ ಕರ್ಣಾಟಕ ಕಾಲೇಜಿನ ಆವರಣ ಸೃಜನಾ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಅದ್ವೈತ ಪ್ರಭೋಧಕ ಸಂಘದ ಅಧ್ಯಕ್ಷರಾದ ರವಿ ದೇಶಪಾಂಡೆ ಇವರು ಈ ಸಮಾರಂಭವನ್ನು ಉದ್ಘಾಟನೆ ಮಾಡಲಿದ್ದು, ವಿದುಷಿ ರೋಹಿಣಿ ಇಮಾರತಿ ಮತ್ತು ರೋಟರಿ ಕ್ಲಬ್ ಧಾರವಾಡ ಸೆಂಟ್ರಲ್ ಇದರ ಅಧ್ಯಕ್ಷರಾದ ನಾಗರಾಜ ತಾಯಣ್ಣವರ ಇವರುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿದ್ವಾನ್ ಸುಜಯ್ ಶಾನಭೋಗ್ ನೃತ್ಯ ಸಂಯೋಜನೆ ಮತ್ತು ಅದ್ವೈತ ಪ್ರಬೋಧಕ ಸಂಘದ ಪ್ರಾಯೋಜಕತ್ವದಲ್ಲಿ ‘ಸನಾತನಿ’ ಎಂಬ ನೃತ್ಯ ರೂಪಕ ಹುಬ್ಬಳ್ಳಿಯ ಕಲಾ ಸುಜಯ ತಂಡದಿಂದ ಪ್ರದರ್ಶನಗೊಳ್ಳಲಿದೆ.
ಮೂಡುಬಿದಿರೆ : ಆಳ್ವಾಸ್ ಕಾಲೇಜಿನ (ಸ್ವಾಯತ್ತ) ತುಳು ಸಂಸ್ಕೃತಿ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಂಯುಕ್ತ ಆಶ್ರಯದಲ್ಲಿ ದಿನಾಂಕ 30 ಆಗಸ್ಟ್ 2025 ಶನಿವಾರ ಆಳ್ವಾಸ್ ಕಾಲೇಜಿನಲ್ಲಿ ‘ಡಿಜಿಟಲ್ ಲೋಕೊಡು ತುಳು’ ಒಂದು ದಿನದ ಬರವಣಿಗೆ ಕಮ್ಮಟ ನಡೆಯಿತು. ಈ ಕಮ್ಮಟವನ್ನು ಉದ್ಘಾಟಿಸಿದ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಫಿಕಾಡ್ ಮಾತನಾಡಿ “ವಿದ್ಯಾರ್ಥಿಗಳಲ್ಲಿ ತುಳು ಭಾಷೆ ಮತ್ತು ಸಂಸ್ಕೃತಿಯ ಕುರಿತು ಆಸಕ್ತಿ ಮೂಡುವಂತೆ ಮಾಡಲು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಕಾಲೇಜಿನ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯಲ್ಲಿ ನಡೆದ ವಿದ್ಯಾರ್ಥಿ ಸಮ್ಮೇಳನ, ತುಳು ಐಸಿರ, ಒಂಜಿ ದಿನ ಬಲೆ ಓದುಗ ಕೂಟ, ಮಕ್ಕಳ ರಂಗತರಬೇತಿ ಶಿಬಿರ, ತುಳುನಾಡ ಸಿರಿ ಮದಿಪು, ತುಳುಭಾಷೆ ಬದ್ಕ್ ಗೇನದ ಪೊಲಬು ಮುಂತಾದ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ತುಳುವಿನ ಕುರಿತು ಆಸಕ್ತಿ ಮೂಡಿಸಲು ಸಹಕಾರಿಯಾಗಿವೆ. ತುಳು ಭಾಷೆಯ ಸಮೃದ್ಧತೆಯನ್ನು ಯುವ ಸಮುದಾಯಕ್ಕೆ ಪರಿಚಯಿಸುವ ಇನ್ನೂ ಅನೇಕ ಕಾರ್ಯಕ್ರಮಗಳು ನಡೆಯಬೇಕು. ತುಳು ಸಾಹಿತ್ಯ…
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಧ್ಯೇಯೋದ್ದೇಶ ಮತ್ತು ಎಲ್ಲರನ್ನೂ ಒಳಗೊಳ್ಳುವ ಸಮುಷ್ಟಿ ಪ್ರಜ್ಞೆಯ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಾರ್ಯಕಾರಿ ಸಮಿತಿಯ ಹಿಂದುಳಿದ ವರ್ಗಗಳ ಪ್ರತಿನಿಧಿಯಾಗಿ ಹಲವು ಪ್ರಮುಖ ಸಂಘ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ ಒಡನಾಟ ಹೊಂದಿದ, ಸಾಮಾಜಿಕ ಹೋರಾಟಗಳಲ್ಲಿ ನಿರತರಾದ ಕನ್ನಡ ಸಾಹಿತ್ಯ, ಸಂಸ್ಕೃತಿಯ ಕುರಿತು ಅಪಾರ ಆಸಕ್ತಿಯನ್ನು ಹೊಂದಿದ ಯಾದಗಿರಿಯವರಾದ ಡಾ. ಶಿವಶರಣ ಗೋಡ್ರಾಳ ಇವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆ 9 (3)ರಲ್ಲಿ ಮಾನ್ಯ ಅಧ್ಯಕ್ಷರಿಗೆ ದತ್ತವಾಗಿರುವ ಅಧಿಕಾರದನ್ವಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ನಾಮ ನಿರ್ದೇಶನ ಮಾಡಿದ್ದಾರೆ. ಡಾ. ಶಿವಶರಣ ಗೋಡ್ರಾಳ ಇವರು ಬಿ.ಇ.ಎಂ.ಎಸ್. ಪದವೀಧರರಾಗಿದ್ದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಆಳವಾದ ಪ್ರೀತಿಯನ್ನು ಹೊಂದಿದ್ದು, ಸಂಘ ಸಂಸ್ಥೆಗಳ ಜೊತೆಗೆ ಒಡನಾಟ ಹೊಂದಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಸಾಮಾಜಿಕ ಜಾಗೃತಿಯನ್ನು ಉಂಟು ಮಾಡುವಲ್ಲಿ ನಿರಂತರವಾಗಿ ಶ್ರಮಿಸುತ್ತಾ ಬಂದಿದ್ದು, ಅವರ ಕನ್ನಡ ಪ್ರೇಮ ಮತ್ತು ನಾಡಿನ ಕುರಿತು…
ಉಡುಪಿ : ಉಡುಪಿಯ ಮುಕುಂದ ಕೃಪ ಸಂಗೀತ ಶಾಲೆಯ ವಿದ್ವಾನ್ ಮಹಾಬಲೇಶ್ವರ ಭಾಗವತ್ ಇವರ ಶಿಷ್ಯ ಜೀ ಸರಿಗಮಪ ಕನ್ನಡ ಸೀಸನ್ 9ರ ಮತ್ತು ರಾಷ್ಟ್ರೀಯ ಹಿಂದಿ ಸರಿಗಮಪ ಸೀಸನ್ 5 ವಿಜೇತ ಗಗನ್ ಜಿ. ಗಾಂವ್ಕರ್ ಶಾಸ್ತ್ರೀಯ ಸಂಗೀತದಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ. ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಕಳೆದ ಸಾಲಿನಲ್ಲಿ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ನಡೆಸಿದ ರಾಜ್ಯಮಟ್ಟದ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿ ಗಳಿಸುವ ಮೂಲಕ ವಿದ್ವತ್ ಪದವಿಯನ್ನು ಪಡೆದಿರುತ್ತಾರೆ. ಪ್ರಸ್ತುತ ಬೆಂಗಳೂರಿನಲ್ಲಿ ಪ್ರಸಿದ್ಧ ಎಂ.ಎನ್.ಸಿ.ಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಕೆಲ ಚಲನಚಿತ್ರ ಹಾಗೂ ತಾವೇ ಸಂಯೋಜಿಸಿದ ಭಾವ, ಭಕ್ತಿ, ಗೀತೆಗಳಿಗೆ ಧ್ವನಿಯಾಗಿದ್ದು, ಭವಿಷ್ಯದಲ್ಲಿ ಉತ್ತಮ ಗಾಯಕ ಹಾಗೂ ಸಂಗೀತ ಸಂಯೋಜಕನಾಗಬೇಕು ಎಂದು ಕನಸು ಕಂಡಿರುವ ಗಗನ್ ಜಿ. ಗಾಂವ್ಕರ್ ಇವರಿಗೆ ದಿನಾಂಕ 30 ಆಗಸ್ಟ್ 2025ರಂದು ಮೈಸೂರಿನಲ್ಲಿ ಪ್ರೊ. ನಾಗೇಶ್ ವಿ. ಬೆಟ್ಟಕೋಟೆ ಮಾನ್ಯ ಕುಲಪತಿಗಳು,…
ಮಧೂರು : ಉಳಿಯ ದನ್ವಂತರಿ ಯಕ್ಷಗಾನ ಕಲಾಸಂಘ ಮಧೂರು ಇದರ ವಾರದ ಕೂಟ ಉಳಿಯ ಮನೆಯ ಸುಧಾ ಮಂದಿರದಲ್ಲಿ ದಿನಾಂಕ 31 ಆಗಸ್ಟ್ 2025 ಭಾನುವಾರದಂದು ‘ಕರ್ಣ ಭೇಧ’ ಎಂಬ ಪ್ರಸಂಗದ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರು ಶ್ರೀ ವಾಸುದೇವ ಕಲ್ಲೂರಾಯ ಮಧೂರು ಹಾಗೂ ಮದ್ದಳೆಯಲ್ಲಿ ಶ್ರೀ ಗೋಪಾಲ ಕೃಷ್ಣ ನಾವಡ ಮಧೂರು ಇವರುಗಳು ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀಕೃಷ್ಣ : ಶ್ರೀ ನರಸಿಂಹ ಬಲ್ಲಾಳ್, ಕರ್ಣ : ಬ್ರಹ್ಮಶ್ರೀ ಉಳಿಯತಾಯ ವಿಷ್ಣು ಆಸ್ರ, ಕುಂತಿ : ಶ್ರೀ ಮಯೂರ ಆಸ್ರ ಉಳಿಯ ಇವರುಗಳು ಭಾಗವಹಿಸಿದ್ದರು.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ವತಿಯಿಂದ ಹಿರಿಯ ಸಾಹಿತಿ ಮನೆಗೆ ಭೇಟಿ ಕಾರ್ಯಕ್ರಮದಲ್ಲಿ ಕ.ಸಾ.ಪ.ದ ಸದಸ್ಯರು ದಿನಾಂಕ 30 ಆಗಸ್ಟ್ 2025ರಂದು ಸಾಹಿತಿ ಮುಳಿಯ ಗೋಪಾಲಕೃಷ್ಣ ಭಟ್ ಇವರ ಮನೆಗೆ ಭೇಟಿ ನೀಡಿದರು. ಸಂಮಾನ ಸ್ವೀಕರಿಸಿದ ಸಾಹಿತಿ ಮುಳಿಯ ಗೋಪಾಲಕೃಷ್ಣ ಭಟ್ “ಉದ್ಯೋಗದಿಂದ ಸ್ವಯಂ ನಿವೃತ್ತಿ ಪಡೆದು, ವಕೀಲ ವೃತ್ತಿಯನ್ನು ಕೈಗೊಂಡು, ಎಂಬತ್ತೈದನೆಯ ವಯಸ್ಸಿನಲ್ಲಿ ವಕೀಲ ವೃತ್ತಿಯನ್ನು ನಿಲ್ಲಿಸಿದ ಬಳಿಕ ಸಾಹಿತ್ಯದ ನಂಟಿನಿಂದ ಇದೀಗ ಆರು ವರ್ಷಗಳಲ್ಲಿ ಐದು ಕೃತಿಗಳನ್ನು (ಸ್ವಂತ, ಅನುವಾದಿತ) ಬರೆಯಲು ಸಾಧ್ಯವಾಗಿದೆ. ಇದರಲ್ಲಿ ತಮ್ಮ ರಾಘವಯ್ಯನ ಮತ್ತು ಮಡದಿ ಕಾವೇರಿಯ ಪಾತ್ರ ಬಹಳ ದೊಡ್ಡದು. ನನ್ನ ಬರವಣಿಗೆಯನ್ನು ಓದಿ, ತಪ್ಪಿದ್ದರೆ ತಿಳಿಸುವುದನ್ನು ಮತ್ತು ಮುದ್ರಣದ ಅಂತಿಮ ಹಂತದವರೆಗೂ ಸಹಾಯ ಮಾಡುವುದನ್ನು ನಾನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಲೇಬೇಕು” ಎನ್ನುತ್ತಾ ಅಭಿಪ್ರಾಯ ವ್ಯಕ್ತಪಡಿಸಿದರು. ಘಟಕದ ಅಧ್ಯಕ್ಷರಾದ ಡಾ. ಮಂಜುನಾಥ ರೇವಣ್ಕರ್ ಲೇಖಕರನ್ನು ಸಂಮಾನಿಸಿ, ಇಂದು ಇಂತಹ ಸಜ್ಜನ ಬಂಧು, ಸಾಹಿತಿ, ಪಂಡಿತ…
ದಿನಾಂಕ 01 ಸೆಪ್ಟೆಂಬರ್ 1948ರಂದು ಪುತ್ತೂರಿನಲ್ಲಿ ಜನಿಸಿದ ಗಂಗಾ ಪಾದೇಕಲ್ ಇವರ ಮೂಲ ಹೆಸರು ಗಂಗಾರತ್ನ. ತಂದೆ ಮುಳಿಯ ಕೇಶವ ಭಟ್ ಚಿನ್ನ, ಬೆಳ್ಳಿ ವ್ಯಾಪಾರಸ್ಥರು, ತಾಯಿ ಸರಸ್ವತಿ. ಇವರ ಅಜ್ಜಿ ಮೂಕಾಂಬಿಕಾ ಹಾಡುಗಳನ್ನು ರಚಿಸುತ್ತಿದ್ದರು. ಅವುಗಳನ್ನು ಬರಹ ರೂಪಕ್ಕೆ ತಂದವರು ತಂದೆ ಕೇಶವ ಭಟ್, ಆ ರಚನೆಗಳನ್ನು ತಾಯಿ ರಾಗಬದ್ಧವಾಗಿ ಹಾಡುತ್ತಿದ್ದರು. ಹೀಗೆ ಒಂದು ಸಾಂಸ್ಕೃತಿಕ ವಾತಾವರಣದಲ್ಲಿ ಬೆಳೆದ ಗಂಗಾ ಪಾದೇಕಲ್ ಬಾಲ್ಯದಿಂದಲೇ ಹಲವು ಪತ್ರಿಕೆಗಳನ್ನೂ ಓದುತ್ತಿದ್ದರು. ಬಾಳ ಹಾದಿಯಲ್ಲಿ ಕಂಡ ನೋವುಗಳಿಗೆ ಅಕ್ಷರ ರೂಪವನ್ನು ಕೊಟ್ಟು, ಜನರ ಮನಕ್ಕೆ, ಹೃದಯಕ್ಕೆ ತಟ್ಟುವಂತಹ ಕಥೆ-ಕಾದಂಬರಿಗಳನ್ನು ಬರೆಯುವಲ್ಲಿ ಬಾಲ್ಯದ ಅವರ ಆಸಕ್ತಿಗಳು ಸಹಾಯಕವಾಗಿದ್ದವು. ಕುಟುಂಬದ ಪರಮಾಪ್ತರನ್ನು ಕಳೆದುಕೊಂಡಾಗ ಗಂಗಾ ಪಾದೇಕಲ್ ಅವರಿಗೆ ಸಂಗಾತಿಯಾದದ್ದು ಸಾಹಿತ್ಯ, ಓದು, ಬರಹ. ಗಂಗಾ ಪಾದೇಕಲ್ ಅವರ ಸ್ನೇಹ ಸಖಿಯರೊಂದಿಗೆ ಮಂಗಳೂರಿನಲ್ಲಿ ‘ಕರಾವಳಿ ಲೇಖಕಿಯರ ವಾಚಕಿಯರ ಸಂಘ’ವನ್ನು ಕಟ್ಟಿದರು. ಅವರ ‘ಹೊಸ ಹೆಜ್ಜೆ’ ಕಥಾಸಂಕಲನವು ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ತರಗತಿಗೆ ಪಠ್ಯಪುಸ್ತಕವಾಗಿದೆ. ‘ಪುಲಪೇಡಿ’ ಕಥೆಯು ಇಂಗ್ಲೀಷ್ ಹಾಗೂ…
ಉಡುಪಿ : ಶ್ರೀ ಭ್ರಾಮರೀ ನಾಟ್ಯಾಲಯ (ರಿ.) ಅಮ್ಮುಂಜೆ ಉಡುಪಿ ಇದರ ರಜತ ಮಹೋತ್ಸವ ಹಾಗೂ ನೃತ್ಯ ಮಂಥನ- 10 ಇದರ ಅಂಗವಾಗಿ ಸ್ಪಂದನ ವಿಶೇಷ ಮಕ್ಕಳ ವಸತಿ ಶಾಲೆ ಸಾಲ್ಮರ ಇಲ್ಲಿನ ವಿದ್ಯಾರ್ಥಿಗಳಿಗೆ ಭರತನಾಟ್ಯ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮ ದಿನಾಂಕ 31 ಆಗಸ್ಟ್ 2025ರಂದು ನಡೆಯಿತು. ಶ್ರೀಮತಿ ಭಾರತಿ ಸಿ. ಸುವರ್ಣ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಾನಸ ವಿಶೇಷ ಮಕ್ಕಳ ವಸತಿ ಶಾಲೆಯ ಶಿಕ್ಷಕಿ ಹೇಮಲತಾ ಹಾಗೂ ಸ್ಪಂದನ ವಿಶೇಷ ಮಕ್ಕಳ ವಸತಿ ಶಾಲೆಯ ಜನಾರ್ದನ್ ಉಪಸ್ಥಿತರಿದ್ದರು. ವಿದುಷಿ ಕಾತ್ಯಾಯನಿ ಕಾರ್ಯಕ್ರಮವನ್ನು ನಿರೂಪಿಸಿ, ಶ್ರೀ ಭ್ರಾಮರೀ ನಾಟ್ಯಾಲಯದ ಗುರು ವಿದ್ವಾನ್ ಕೆ. ಭವಾನಿ ಶಂಕರ್ ಧನ್ಯವಾದಗೈದರು. ನಂತರ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಭರತನಾಟ್ಯ, ಕೂಚಿಪುಡಿ ಹಾಗೂ ಜಾನಪದ ನೃತ್ಯ ಕಾರ್ಯಕ್ರಮ ಜರಗಿತು.