Subscribe to Updates
Get the latest creative news from FooBar about art, design and business.
Author: roovari
ಉಪ್ಪಿನಕುದ್ರು : ‘ಪ್ರತಿಭೆ ನಿಮ್ಮದು ವೇದಿಕೆ ನಮ್ಮದು’ ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ನಿರಂತರ 111ನೇ ತಿಂಗಳ ಕಾರ್ಯಕ್ರಮವು ದಿನಾಂಕ 21 ಸೆಪ್ಟೆಂಬರ್ 2025ರಂದು ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ಅದ್ದೂರಿಯಾಗಿ ನಡೆಯಿತು. ವಸಂತಿ ಆರ್. ಪಂಡಿತ್ ಪ್ರಾರ್ಥಿಸಿದರು. ಸಭಾ ಕಾರ್ಯಕ್ರಮದಲ್ಲಿ ಸತೀಶ್ ನಾಯಕ್ ಗುಡ್ಡೆಯಂಗಡಿ, ರಾಧಾಕೃಷ್ಣ ಪ್ರಭು, ಡಾ. ಕಾಶೀನಾಥ್ ಪೈ ಗಂಗೊಳ್ಳಿ, ಗಿರೀಶ್ ನಾಗೇಶ್ ಪ್ರಭು, ಗಣೇಶ್ ಭಟ್, ಕೀರ್ತನಾ ಭಟ್, ಜಯಂತಿ ಗಣಪತಿ ಸೇರುಗಾರ್ ಮತ್ತು ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ರವರು ಉಪಸ್ಥಿತರಿದ್ದರು. ಮಂಗಳೂರಿನ ಕುಮಾರಿ ಪಂಚಮಿ ಭಟ್ ಇವರನ್ನು ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು. ನಂತರ ಗಿರೀಶ್ ನಾಗೇಶ್ ಪ್ರಭು ನೇತೃತ್ವದಲ್ಲಿ ಪಂಚಮಿ ಭಟ್ ಇವರು ಭಜನ್ ಸಂಧ್ಯಾ ಕಾರ್ಯಕ್ರಮವನ್ನು ಅದ್ಭುತವಾಗಿ ನಡೆಸಿಕೊಟ್ಟರು. ನಿವೃತ್ತ ಶಿಕ್ಷಕ ನಾಗೇಶ್ ಶ್ಯಾನುಭಾಗ್ ರವರು ಕಾರ್ಯಕ್ರಮ ನಿರ್ವಹಿಸಿದರು. ಉದಯ ಭಂಡಾರ್ಕಾರ್ ಹಟ್ಟಿಯಂಗಡಿ ಇವರು ವಂದಿಸಿದರು.
ಆನೆಗುಡ್ಡೆ : ಕೊಮೆ ತೆಕ್ಕಟ್ಟೆ ಯಶಸ್ವೀ ಕಲಾವೃಂದದ ಚಿಣ್ಣರಿಂದೊಡಗೂಡಿದ ಎರಡು ತಂಡ ದಿನಾಂಕ 22 ಸೆಪ್ಟೆಂಬರ್ 2025ರಂದು ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಶರನ್ನವರಾತ್ರಿ ಕಾರ್ಯಕ್ರಮದಲ್ಲಿ ‘ಕೃಷ್ಣಾರ್ಜುನ ಕಾಳಗ’ ಪ್ರಸಂಗದ ತುಣುಕೊಂದನ್ನು ಪ್ರಸ್ತುತ ಪಡಿಸುವ ಮೂಲಕ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮ ಉದ್ಘಾಟಿಸಿ, ಚಾಲನೆ ನೀಡಿದ ಆನೆಗುಡ್ಡೆ ದೇವಸ್ಥಾನದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಉಪಾಧ್ಯ “ಹೂವಿನಕೋಲು ಯಕ್ಷಗಾನ ಕಲಾ ಪ್ರಕಾರ ಮಕ್ಕಳ ಕಲಿಕೆಗೆ ದಾರಿಯಾಗುತ್ತದೆ. ಗತಕಾಲದಲ್ಲಿ ಪ್ರಸಿದ್ಧ ಕಲಾವಿದರು, ಗುರುಗಳು ಬಾಲಕರ ತಂಡದೊಂದಿಗೆ ಮನೆ ಮನೆಗೆ ತೆರಳಿ ಹೂವಿನಕೋಲು ಕಾರ್ಯಕ್ರಮವನ್ನು ನವರಾತ್ರಿಯ ಸಂದರ್ಭಗಳಲ್ಲಿ ಮಾಡುತ್ತಿದ್ದುದು ಈಗ ನೆನಪು ಮಾತ್ರ. ಅಂತಹ ಕಲಾ ಪ್ರಕಾರವನ್ನು ಉಳಿಸಬೇಕೆನ್ನುವ ನಿಟ್ಟಿನಲ್ಲಿ ಆಯ್ದ ಹಲವಾರು ಮನೆಗಳಿಗೆ ಬೇಟಿ ನೀಡಿ ಪೌರಾಣಿಕ ಪ್ರಸಂಗವನ್ನು ಪ್ರಸ್ತುತ ಪಡಿಸುವುದು ಒಳ್ಳೆಯ ಸಂಸ್ಕಾರ” ಎಂದು ಶುಭ ಹಾರೈಸಿದರು. ದಿನಾಂಕ 02 ಅಕ್ಟೋಬರ್ 2025ರ ತನಕ ನಿರಂತರ ಎರಡು ತಂಡಗಳು ಕುಂದಾಪುರ, ಉಡುಪಿ, ಬ್ರಹ್ಮಾವರ, ಮಂಗಳೂರು ವಿಭಾಗದಲ್ಲಿ ಅಲ್ಲಲ್ಲಿ ಹಲವಾರು ಮನೆಗಳಿಗೆ ಸಂಪರ್ಕ ಮಾಡಿ ನವರಾತ್ರಿಯನ್ನು…
ಮೈಸೂರು : ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಸುರಭಿ (ರಿ.) ಬೈಂದೂರು ಇದರ ವತಿಯಿಂದ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ ಪ್ರಪ್ರಥಮ ಬಾರಿಗೆ ಬೈಂದೂರಿನ ಸುರಭಿಯ ಹಿರಿಯ ಹಾಗೂ ಕಿರಿಯ ಕಲಾವಿದರ ಕೂಡುವಿಕೆಯಿಂದ ‘ಯಕ್ಷಗಾನ ವೈಭವ’ ಕಾರ್ಯಕ್ರಮವನ್ನು ದಿನಾಂಕ 24 ಸೆಪ್ಟೆಂಬರ್ 2025ರಂದು ಸಂಜೆ 7-30 ಗಂಟೆಗೆ ಮೈಸೂರಿನ ಶ್ರೀ ರಮಾ ಗೋವಿಂದ ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ. ಶ್ರೀ ಪ್ರಶಾಂತ ಮಯ್ಯ ದಾರಿಮಕ್ಕಿ ಇವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ‘ಸುಧನ್ವಾರ್ಜುನ’ ಪ್ರಸಂಗದ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.
ಸಾಗರ : ಅಭಿವ್ಯಕ್ತಿ ಬಳಗ (ರಿ.) ತುಮರಿ ಸಾಗರ ಇವರ ವತಿಯಿಂದ ‘ಹಾ. ಮ. ಭಟ್ಟ ನೆನಪಿನ ಹಬ್ಬ’ ಮೂರು ದಿನಗಳ ಕಾಲ ಆತ್ಮೀಯ ಒಡನಾಟ ಮತ್ತು ಸಂವಾದ ಕಾರ್ಯಕ್ರಮವನ್ನು ದಿನಾಂಕ 27, 28 ಮತ್ತು 29 ಸೆಪ್ಟೆಂಬರ್ 2025ರಂದು ಹಮ್ಮಿಕೊಳ್ಳಲಾಗಿದೆ. ಕೂಟದಲ್ಲಿ ಮನುಷ್ಯ ಪ್ರಜ್ಞೆಯ ನೆಲದ ದನಿಗಳಾದ ಡಾ. ಯು.ಆರ್. ಅನಂತಮೂರ್ತಿ, ಪಿ. ಲಂಕೇಶ್, ಪೂರ್ಣಚಂದ್ರ ತೇಜಸ್ವಿ, ತ್ರಿವೇಣಿ, ಎಂ.ಕೆ. ಇಂದಿರಾ ಇವರ ನೆನಪಿನ ಹೆಗ್ಗುರುತುಗಳ ಸುತ್ತಮುತ್ತ ಒಂದು ಆತ್ಮೀಯ ಪಯಣ. ಹಾಡು, ಕವಿತೆ, ಹರಟೆ, ಸಂಗೀತ, ನಾಟಕ, ಸಾಂಸ್ಕೃತಿಕ ರಂಜನೆಯೂ ಇರಲಿದೆ.
ಮಡಿಕೇರಿ : ಶ್ರೀ ಕಾವೇರಿ ದಸರಾ ಸಮಿತಿ ಮತ್ತು ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇವರ ಸಂಯುಕ್ತ ಆಶ್ರಯದಲ್ಲಿ ಗೋಣಿಕೊಪ್ಪಲು ದಸರಾ ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಯು ದಿನಾಂಕ 26 ಸೆಪ್ಟೆಂಬರ್ 2025ರಂದು ಬೆಳಿಗ್ಗೆ 10-00 ಗಂಟೆಗೆ ಗೋಣಿಕೊಪ್ಪಲಿನ ದಸರಾ ವೇದಿಕೆಯಲ್ಲಿ ನಡೆಯಲಿದೆ. ಈ ಬಾರಿಯ ಕವಿಗೋಷ್ಠಿಯಲ್ಲಿ ಪ್ರತಿವರ್ಷದಂತೆ ಕನ್ನಡ, ಕೊಡವ, ಅರೆಭಾಷೆ, ತುಳು, ಕೊಂಕಣಿ, ಹವ್ಯಕ, ಯರವ, ಕುಂಬಾರ, ಹಿಂದಿ, ತಮಿಳು, ಮಲೆಯಾಳಂ, ಮರಾಠಿ, ಕುಂದಾಪ್ರ ಕನ್ನಡ ಹೀಗೆ 13 ಭಾಷೆಯ ಕವನಗಳನ್ನು ಕನ್ನಡ, ಹಿಂದಿ, ಇಂಗ್ಲೀಷ್, ತಮಿಳು, ಮಲೆಯಾಳಂ, ಮರಾಠಿ 103 ಕವಿಗಳು ಕವನಗಳನ್ನು ವಾಚಿಸಲಿದ್ದಾರೆ. ಕನ್ನಡ ಭಾಷೆಯ ಚುಟುಕು ಕವನ 4 ಕವಿಗಳು ವಾಚಿಸಲಿದ್ದಾರೆ. ಬೆಳೆಯ ಸಿರಿ ಮೊಳಕೆಯಲ್ಲಿ ಎನ್ನುವಂತೆ ಮಕ್ಕಳ ಪ್ರತಿಭೆಯನ್ನು ಗುರುತಿಸುವ ಸಲುವಾಗಿ ಮತ್ತು ಮಕ್ಕಳಲ್ಲಿ ಸಾಹಿತ್ಯ ಆಸಕ್ತಿ ಮೂಡಿಸುವ ಸಲುವಾಗಿ ಈ ಬಾರಿ ವಿಶೇಷವಾಗಿ ಮಕ್ಕಳ ಕವನಗೋಷ್ಠಿ (6ರಿಂದ 13 ) ಏರ್ಪಡಿಸಲಾಗಿದೆ. 14 ಬಾಲ ಪ್ರತಿಭೆಗಳು ದಸರಾ ಕವಿಗೋಷ್ಠಿಯಲ್ಲಿ ಕವನ ವಾಚನ…
ಮೂಡುಬಿದಿರೆ : ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇವರ ವತಿಯಿಂದ ಪರಮಪೂಜ್ಯ ಭಾರತ ಭೂಷಣ ಜಗದ್ಗುರು ಡಾ. ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚರ್ಯ ಪಟ್ಟಾಚರ್ಯವರ್ಯ ಸ್ವಾಮೀಜಿಯವರ ಶುಭಾಶೀರ್ವಾದಗಳೊಂದಿಗೆ ದಿನಾಂಕ 21 ಸೆಪ್ಟೆಂಬರ್ 2025ರಂದು ತಾಳಮದ್ದಳೆ ಕಾರ್ಯಕ್ರಮವು ಮೂಡುಬಿದಿರೆ ಶ್ರೀ ಜೈನ ಮಠದ ಭಟ್ಟಾರಕ ಸಭಾ ಭವನದಲ್ಲಿ ‘ಐರಾವತ’ ಎಂಬ ಆಖ್ಯಾನದೊಂದಿಗೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಗಿರೀಶ್ ಮುಳಿಯಾಲ, ಚೆಂಡೆ ಮದ್ದಳೆಗಳಲ್ಲಿ ಪಿ.ಟಿ. ಜಯರಾಮ ಭಟ್ ಹಾಗೂ ಮುರಳೀಧರ ಕಲ್ಲೂರಾಯ ಸಹಕರಿಸಿದರು. ಮುಮ್ಮೇಳದಲ್ಲಿ ಶುಭಾ ಅಡಿಗ (ಅರ್ಜುನ), ಕಿಶೋರಿ ದುಗ್ಗಪ್ಪ ನಡುಗಲ್ಲು (ಕುಂತಿ), ಹರಿಣಾಕ್ಷಿ ಜೆ. ಶೆಟ್ಟಿ (ಧರ್ಮರಾಯ), ಶಾರದಾ ಅರಸ್ (ದೇವೇಂದ್ರ), ಮನೋರಮಾ ಜಿ. ಭಟ್ (ನಾರದ) ಸಹಕರಿಸಿದರು. ಸ್ವಾಮೀಜಿಯವರು ಕಲಾವಿದರಿಗೆ ಫಲಪುಷ್ಪ ನೀಡಿ ಗೌರವಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು.
ಬಂಟ್ವಾಳ : ಯಕ್ಷಕಲಾ ಪೊಳಲಿ ಇದರ 30ನೇ ವರ್ಧಂತ್ಯುತ್ಸವ ತ್ರಿಂಶತಿ ಸಂಭ್ರಮದ ಪ್ರಯುಕ್ತ ‘ಪೊಳಲಿ ಯಕ್ಷೋತ್ಸವ- 2025’ ಪ್ರಶಸ್ತಿ ಪ್ರಧಾನ, ಗೌರವಾರ್ಪಣೆ, ಸನ್ಮಾನ, ಸಂಸ್ಮರಣೆ, ಬಯಲಾಟ ಮತ್ತು ಸಭಾ ಪರ್ವ ಕಾರ್ಯಕ್ರಮವನ್ನು ದಿನಾಂಕ 27 ಸೆಪ್ಟೆಂಬರ್ 2025ರಂದು ಸಂಜೆ 5-00 ಗಂಟೆಗೆ ಶ್ರೀ ಕ್ಷೇತ್ರ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ರಾಜಾಂಗಣದಲ್ಲಿ ಆಯೋಜಿಲಾಗಿದೆ. ಕಳೆದ 30 ವರ್ಷಗಳಿಂದ ನಮ್ಮ ಸಂಸ್ಥೆಯಲ್ಲಿ ನಿರಂತರ ಕಲಾ ಸೇವೆ ಮಾಡುತ್ತಿರುವ ಐದು ಮಂದಿ ಕಲಾವಿದರಿಗೆ ಗೌರವಾರ್ಪಣೆ, ಖ್ಯಾತ ಹೃದ್ರೋಗ ತಜ್ಞರಾದ ಡಾ. ಪದ್ಮನಾಭ ಕಾಮತ್ ಇವರಿಗೆ ‘ಪೊಳಲಿ ಯಕ್ಷೋತ್ಸವ ಪ್ರಶಸ್ತಿ’ ಪ್ರದಾನ, ಸ್ಥಳೀಯ ಕಲಾ ಪೋಷಕರಾದ ಇಬ್ಬರು ಸಂಘಟಕರಿಗೆ ಯಕ್ಷ ಪೋಷಕ ಗೌರವ ಮತ್ತು ಕೀರ್ತಿಶೇಷರಾದ ಎಂಟು ಮಂದಿ ಹಿರಿಯ ಕಲಾವಿದರ ಸಂಸ್ಮರಣೆ, ಜರಗಲಿರುವುದು. ಸಮಾರಂಭದಲ್ಲಿ ರಾಮಕೃಷ್ಣ ತಪೋವನ ಪೊಳಲಿಯ ವಿವೇಕಾ ಚೈತನ್ಯಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಲಿರುವರು. ಬಂಟ್ವಾಳ ಕ್ಷೇತ್ರದ ಜನಪ್ರಿಯ ಶಾಸಕರಾದ ರಾಜೇಶ್ ನಾಯ್ಕ ಉಳಿಪ್ಪಾಡಿಗುತ್ತು ಇವರು ಅಧ್ಯಕ್ಷತೆ ವಹಿಸಲಿರುವರು. ಸಂಜೆ 5-00 ಗಂಟೆಗೆ…
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ‘ಟಿ. ಗಿರಿಜಾ ದತ್ತಿ ಪುರಸ್ಕಾರ’ಕ್ಕೆ ಖ್ಯಾತ ವಿಜ್ಞಾನ ಬರಹಗಾರರು ಮತ್ತು ಜವಹರಲಾಲ್ ನೆಹರು ತಾರಾಲಯದ ನಿವೃತ್ತ ನಿರ್ದೇಶಕರೂ ಆದ ಡಾ. ಬಿ.ಎಸ್. ಶೈಲಜ ಇವರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಶ್ರೀಮತಿ ಟಿ.ಎಸ್. ಶೈಲಜ ಇವರು ಸೂಕ್ಷ್ಮ ಸಂವೇದನಾಶೀಲ ಬರಹಗಾರ್ತಿ ಟಿ. ಗಿರಿಜಾ ಇವರ ಹೆಸರಿನಲ್ಲಿ ದತ್ತಿ ಸ್ಥಾಪಿಸಿದ್ದು ಕನ್ನಡ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ ಲೇಖಕಿಯವರಿಗೆ ಈ ಗೌರವ ಸಲ್ಲುತ್ತದೆ. ನಾಡೋಜ ಡಾ. ಮಹೇಶ ಜೋಶಿಯವರ ನೇತೃತ್ವದಲ್ಲಿ ಇತ್ತೀಚೆಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ದತ್ತಿದಾನಿಗಳ ಪರವಾಗಿ ಅರುಂಧತಿ ರಮೇಶ್, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಬಿ.ಎಂ. ಪಟೇಲ್ ಪಾಂಡು, ಎಚ್.ಬಿ. ಮದನ ಗೌಡ, ಗೌರವ ಕೋಶಾಧ್ಯಕ್ಷರಾದ ಡಿ.ಆರ್. ವಿಜಯ ಕುಮಾರ್ ಭಾಗವಹಿಸಿದ್ದರು. 2025ನೆಯ ಸಾಲಿನ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಡಾ. ಬಿ.ಎಸ್. ಶೈಲಜ ಇವರು ಕನ್ನಡದ ಮಹತ್ವದ ಬರಹಗಾರ ಬ.ನ. ಸುಂದರರಾಯರ ಮಗಳು. ಭಾರತೀಯ ಭೌತ…
ಮಂಗಳೂರು : ಸುರತ್ಕಲ್ ನ ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಆಯೋಜಿಸಿದ್ದ ಪ್ರಸಿದ್ಧ ಸಂಶೋಧಕ, ಸಾಹಿತಿ ಡಾ. ಕೆ.ಜಿ. ವಸಂತ ಮಾಧವ ಇವರಿಗೆ ನುಡಿ ನಮನ ಕಾರ್ಯಕ್ರಮವು ದಿನಾಂಕ 22 ಸೆಪ್ಟೆಂಬರ್ 2025ರಂದು ಸಾಹಿತಿ ಇಂದಿರಾ ಹೆಗ್ಗಡೆಯವರ ನಿವಾಸದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಸಂಸ್ಥಾಪಕ ಇತಿಹಾಸ ತಜ್ಞ ಡಾ. ತುಕಾರಾಮ್ ಪೂಜಾರಿ ಇವರು ಮಾತನಾಡಿ “ನಮ್ಮ ನಾಡಿನ ಶ್ರೇಷ್ಠ ಇತಿಹಾಸಗಾರರಾಗಿರುವ ಡಾ. ವಸಂತ ಮಾಧವ ಕೆ.ಜಿ.ಯವರು ಇತಿಹಾಸ ಸಂಶೋಧನೆಗೆ ತಮ್ಮ ಬದುಕನ್ನು ಅರ್ಪಿಸಿಕೊಂಡವರು. ಕರಾವಳಿ ಕರ್ನಾಟಕದ ಇತಿಹಾಸದ ಅಧ್ಯಯನಕ್ಕೆ ಬೇಕಾದ ಆಕರಗಳು ವೈಜ್ಞಾನಿಕವಾಗಿ ಕ್ರೋಡೀಕೃತವಾಗಲು ಶ್ರಮಿಸಿದವರು. ಇತಿಹಾಸಗಾರರ ಅವಜ್ಞೆ ಪ್ರಸ್ತುತ ಸಂದರ್ಭದಲ್ಲಿ ನಡೆಯುತ್ತಿದ್ದು, ಅವರ ಕಾರ್ಯಗಳನ್ನು ಗುರುತಿಸುವ ಕಾರ್ಯ ನಡೆಯಬೇಕು” ಎಂದು ನುಡಿದರು. ಸಂಶೋಧಕ ಬೆನೆಟ್ ಅಮನ್ನ ಮಾತನಾಡಿ “ವಸಂತ ಮಾಧವರ ಸಂಶೋಧನಾ ಆಸಕ್ತಿ ಅವರ ಕೃತಿ ಸಂಗ್ರಹ ಅನನ್ಯವಾಗಿದ್ದು, ಅದನ್ನು ಉಳಿಸಿಕೊಂಡು ಮುಂದಿನ ತಲೆಮಾರಿಗೆ ವರ್ಗಾವಣೆ ಮಾಡುವ ಹೊಣೆಗಾರಿಕೆ ಸಮಾಜದ್ದಾಗಿದೆ”…
ದಾವಣಗೆರೆ : ದಾವಣಗೆರೆ ಕುವೆಂಪು ರಂಗ ಮಂದಿರದಲ್ಲಿ ಜಿಲ್ಲಾ ಸಾಹಿತ್ಯ ಪರಿಷತ್ತು, ಯಕ್ಷರಂಗ ಯಕ್ಷಗಾನ ಸಂಘ, ಜಿಲ್ಲಾ ಬ್ಯಾಂಕ್ ನೌಕರರ ಸಂಘಗಳ ಜಂಟಿ ಆಶ್ರಯದಲ್ಲಿ ಮಕ್ಕಳ ಮೇಳದ ಪ್ರಾಕ್ತನ ಕಲಾವಿದ ರಾಘವೇಂದ್ರ ನಾಯರಿಯವರು ಆಯೋಜಿಸಿದ ಸಾಲಿಗ್ರಾಮ ಮಕ್ಕಳ ಮೇಳದ ಐವತ್ತರ ಸಂಭ್ರಮದ ‘ಸುವರ್ಣ ಪರ್ವ 13’ರ ಕಾರ್ಯಕ್ರಮವು ದಿನಾಂಕ 21 ಸೆಪ್ಟೆಂಬರ್ 2025ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ದಾವಣಗೆರೆ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕ ಡಾ. ಬಿ.ಆರ್. ರವಿಕಾಂತೇಗೌಡ ಇವರು ಮಾತನಾಡಿ “ನಾಡಿನ ಹೆಮ್ಮೆಯ ಕಲೆಯಾದ ಯಕ್ಷಗಾನ ಕಲೆಗೆ 800 ವರ್ಷಗಳ ಭವ್ಯವಾದ ಪರಂಪರೆಯಿದೆ. ಸಾಹಿತ್ಯ, ಸಂಗೀತ, ನೃತ್ಯ, ಮಾತುಗಾರಿಕೆ, ಅಭಿನಯ ಇವೆಲ್ಲವನ್ನೂ ಒಳಗೊಂಡ ಯಕ್ಷಗಾನ ಕಲೆಗೆ ಮಾನವೀಯ ಸಂಬಂಧಗಳನ್ನು ಗಟ್ಟಿಯಾಗಿ ಬೆಸೆಯುವ ಶಕ್ತಿಯಿದೆ. ಒಬ್ಬ ವ್ಯಕ್ತಿಯೇ 50 ವರ್ಷಗಳನ್ನು ಪೂರ್ಣಗೊಳಿಸುವುದ ಕಷ್ಟಸಾಧ್ಯವಾದ ದುಷ್ಕಾಲದಲ್ಲಿ ನಾವಿದ್ದೇವೆ. ಅಂತದ್ದರಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕದ್ವಯರಾದ ಕಾರ್ಕಡ ಶ್ರೀನಿವಾಸ ಉಡುಪ ಹಾಗೂ ಹೆಚ್. ಶ್ರೀಧರ ಹಂದೆಯವರು 1975ರಲ್ಲಿ ಸ್ಥಾಪಿಸಿದ ಸಾಲಿಗ್ರಾಮ ಮಕ್ಕಳ ಮೇಳವು ಯಕ್ಷಗಾನದ…