Author: roovari

ಶಿರ್ವ: ಸಂತ ಮೇರಿ ಕಾಲೇಜು ಶಿರ್ವ ಇಲ್ಲಿನ ಗ್ರಂಥಾಲಯ ವಿಭಾಗ ಮತ್ತು IQAC ಇವರ ಸಹಯೋಗದೊಂದಿಗೆ “ವಿಶ್ವ ಪುಸ್ತಕ ದಿನಾಚರಣೆ”ಯನ್ನು ದಿನಾಂಕ 23-04-2024ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಾರ್ವಜನಿಕ ಗ್ರಂಥಾಲಯ ಕಾಪು ಪುರಸಭೆ ಇದರ ಗ್ರಂಥಾಲಯ ಮೇಲ್ವಿಚಾರಕಿಯಾದ ಶ್ರೀಮತಿ ಪೂರ್ಣಿಮಾ ಮಾತನಾಡಿ “ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಬೇಕು. ಇಂದು ಯಾರು ಕದಿಯಲು ಸಾಧ್ಯವಿಲ್ಲದ ಸಂಪತ್ತು ಇದ್ದರೆ ಅದು ಜ್ಞಾನ ಮಾತ್ರ. ‘ಮೈಯಲ್ಲಿ ಹರಿದ ಬಟ್ಟೆ ಇದ್ದರೂ ಚಿಂತೆಯಿಲ್ಲ, ಆದರೆ ಕೈಯಲ್ಲಿ ಒಂದು ಪುಸ್ತಕವಿರಲಿ’ ಎಂಬ ಅಂಬೇಡ್ಕರ್ ಅವರ ಇದೊಂದೇ ಮಾತು ಪುಸ್ತಕದ ಮಹತ್ವವನ್ನು ತಿಳಿಸಿಕೊಡುತ್ತದೆ.” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅತ್ಯುತ್ತಮ ಗ್ರಂಥಾಲಯ ಬಳಕೆದಾರರಿಗೆ ಬಹುಮಾನವನ್ನು ನೀಡಲಾಯಿತು. ತೃತೀಯ ಬಿ.ಎ ವಿದ್ಯಾರ್ಥಿನಿಯಾದ ಕುಮಾರಿ ಕೌಶಲ್ಯ, ತೃತೀಯ ಬಿ. ಸಿ. ಎ. ವಿದ್ಯಾರ್ಥಿನಿಯಾದ ಕುಮಾರಿ ಹೇಮಶ್ರೀ ಮತ್ತು ತೃತೀಯ ಬಿ. ಕಾಂ. ವಿದ್ಯಾರ್ಥಿನಿಯಾದ ಕುಮಾರಿ ಅಫ್ಸಾನ ಬಹುಮಾನವನ್ನು ಪಡೆದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲ ಡಾ. ಹೆರಾಲ್ಡ್ ಐವನ್ ಮೊನಿಸ್‌…

Read More

ಮಂಗಳೂರು : ಮಂಗಳೂರು ಪ್ರೆಸ್‌ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾದ ‘ಮಂಗಳೂರು ಪ್ರೆಸ್‌ಕ್ಲಬ್ ಗೌರವ ಅತಿಥಿ’ ಕಾರ್ಯಕ್ರಮವು ಪತ್ರಿಕಾ ಭವನದಲ್ಲಿ ದಿನಾಂಕ 30-04-2024ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿದ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟಿನ ಸ್ಥಾಪಕಾಧ್ಯಕ್ಷ, ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ “ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಕರಾವಳಿಯ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ, ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಯಕ್ಷ ಶಿಕ್ಷಣ ನೀಡಲು ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ಮುಂದಾಗಿದೆ. ಈಗಾಗಲೇ 4 ಸಾವಿರಕ್ಕೂ ಅಧಿಕ ಮಕ್ಕಳಿಗೆ ತರಬೇತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಅವರಿಗೆ ವೇದಿಕೆ ಒದಗಿಸುವ ಪ್ರಯತ್ನವೂ ನಡೆಯಲಿದೆ. ಈಗಾಗಲೇ ಆಳ್ವಾಸ್ ಶಿಕ್ಷಣ ಫೌಂಡೇಶನ್ ಸಹಯೋಗದಲ್ಲಿ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ ಯಶಸ್ವಿಯಾಗಿದೆ. ಸರ್ಕಾರಿ ಶಾಲೆಯ ಮಕ್ಕಳಿಗೆ ಹೆಚ್ಚಿನ ಸೌಲಭ್ಯಗಳು ಇರುವುದಿಲ್ಲ. ಅವರಿಗೆ ಬಾಲ್ಯದಲ್ಲೇ ಯಕ್ಷಗಾನದ ಬಗ್ಗೆ ಜ್ಞಾನ ಹಾಗೂ ಅಭಿರುಚಿ ಮೂಡಿಸುವುದು ಟ್ರಸ್ಟಿನ ಉದ್ದೇಶವಾಗಿದೆ. ಹಿರಿಯ ಕಲಾವಿದರ…

Read More

ಧಾರವಾಡ : ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡವು ನಾಡೋಜ ಚೆನ್ನವೀರ ಕಣವಿ ಮತ್ತು ಶ್ರೀಮತಿ ಶಾಂತಾದೇವಿ ಕಣವಿ ದತ್ತಿನಿಧಿಯ ಅಂಗವಾಗಿ ಕನ್ನಡದ ಯುವ ಲೇಖಕರಿಗಾಗಿ ನಾಡೋಜ ಚೆನ್ನವೀರ ಕಣವಿ ಕಾವ್ಯ ಸ್ಪರ್ಧೆ ಮತ್ತು ಶ್ರೀಮತಿ ಶಾಂತಾದೇವಿ ಕಣವಿ ಕಥಾ ಸ್ಪರ್ಧೆಯನ್ನು ಆಯೋಜಿಸುತ್ತಿದೆ. ಸೂಚನೆಗಳು : * ಸ್ಪರ್ಧೆಯಲ್ಲಿ ಭಾಗವಹಿಸುವವರ ವಯೋಮಿತಿ: 18 ರಿಂದ 35 ವರ್ಷ * ಬರಹಗಳನ್ನು ಕಳಿಸಲು ಕೊನೆಯ ದಿನಾಂಕ 20-05-2024 * ಕಡ್ಡಾಯವಾಗಿ ಆಧಾರ ಕಾರ್ಡ್ ಝರಾಕ್ಸ್ ಪ್ರತಿ ಕಳಿಸಬೇಕು. * ಕಥೆ ಮತ್ತು ಕವನಗಳು ಸ್ವತಂತ್ರವಾಗಿರಬೇಕು. * ವಿಷಯದ ಆಯ್ಕೆಯ ಸ್ವಾತಂತ್ರ್ಯವಿರುತ್ತದೆ. * ಈ ವರೆಗೆ ಎಲ್ಲಿಯೂ ಪ್ರಕಟವಾಗಿರಬಾರದು. * ನುಡಿ ತಂತ್ರಾಂಶದೊಂದಿಗೆ ವರ್ಡ್ ಫೈಲ್ ನಲ್ಲಿ ಟೈಪ್ ಮಾಡಿ ಮೇಲ್ ಮೂಲಕ ಕಳುಹಿಸಬೇಕು. * ನಿರ್ಣಾಯಕರ ನಿರ್ಣಯವೇ ಅಂತಿಮ.. * ಎರಡೂ ವಿಭಾಗಗಳಲ್ಲಿ ಆಯ್ಕೆಯಾದ ಮೊದಲ ಮೂರು ಕವನಗಳಿಗೆ/ಬರಹಗಳಿಗೆ ಜೂನ್ 28 ರಂದು ಡಾ. ಚನ್ನವೀರ ಕಣವಿಯವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಬಹುಮಾನ ನೀಡಲಾಗುವುದು. *…

Read More

ಮಂಗಳೂರು : ರಂಗ ಸ್ವರೂಪ ಮಂಗಳೂರು ಸಂಘಟನೆ ಆಯೋಜಸಿದ ‘ರಂಗೋತ್ಸವ- 2024’ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭವು ದಿನಾಂಕ 01-05-2024 ರಂದು ಮರಕಡದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಮೂಡಂಬೈಲು ಶಾಲೆಯ ಮುಖ್ಯ ಶಿಕ್ಷಕರಾದ ಅರವಿಂದ ಕುಡ್ಲ ಜಾನಪದ ಹಾಡು ಹಾಡುವುದರೊಂದಿಗೆ ಶಿಬಿರವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾರ್ಪೊರೇಟರ್ ಶರತ್ ಕುಮಾರ್, ಶಾಲಾ ಮುಖ್ಯ ಶಿಕ್ಷಕಿ ನೇತ್ರಾವತಿ, ರಂಗ ಸ್ವರೂಪದ ಪ್ರಮುಖರಾದ ಸುಬ್ರಹ್ಮಣ್ಯ ಕಾಸರಗೋಡು, ನವೀನ್ ಸ್ವರೂಪ, ಹುಸೈನ್ ರಿಯಾಝ್ ಉಪಸ್ಥಿತರಿದ್ದರು. ಜ್ಯೋತಿ ಸುಬ್ರಹ್ಮಣ್ಯ ಸ್ವಾಗತಿಸಿ, ರೆಹಮಾನ್ ಖಾನ್ ಕುಂಜತ್ತಬೈಲ್ ಕಾರ್ಯಕ್ರಮ ನಿರೂಪಿಸಿ, ಕಲಾವಿದ ಝುಬೇರ್ ಕುಡ್ಲ ವಂದಿಸಿದರು.

Read More

ಮೂಡಬಿದಿರೆ : ‘ಕ್ರಿಯೇಟಿವ್ ಪುಸ್ತಕ ಮನೆ’ಯ ನೂತನ ಶಾಖೆಯು ಮೂಡಬಿದಿರೆಯ ಪಂಚರತ್ನ ಕಟ್ಟಡದಲ್ಲಿ ದಿನಾಂಕ 05-05-2024ರಂದು ಬೆಳಿಗ್ಗೆ ಘಂಟೆ 10.00ಕ್ಕೆ ಶುಭಾರಂಭಗೊಳ್ಳಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಹಾಗೂ ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಗಳು ಕಲ್ಲಬೆಟ್ಟು ಇದರ , ಅಧ್ಯಕ್ಷರಾದ ಯುವರಾಜ್ ಜೈನ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈಗಾಗಲೇ ಕಾರ್ಕಳದಲ್ಲಿ ‘ಪುಸ್ತಕ ಮನೆ’ಯು ಪುಸ್ತಕ ಪ್ರೇಮಿಗಳ, ಸಾಹಿತ್ಯಾಸಕ್ತರ ಮನಗೆದ್ದಿದ್ದು ಕರಾವಳಿಯಲ್ಲಿ ಸುಪ್ರಸಿದ್ಧ ಪುಸ್ತಕ ಮಳಿಗೆಯಾಗಿ ಗುರುತಿಸಿಕೊಂಡಿದೆ. ಪುಸ್ತಕ ಪ್ರಕಾಶನವು ಸೇರಿದಂತೆ ‘ಪುಸ್ತಕ ಸಂತೆ’, ಸರಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ಪುಸ್ತಕಗಳನ್ನು ಒದಗಿಸುವ ‘ಪುಸ್ತಕ ಪೋಷಕ ಯೋಜನೆ’, ‘ಮೊಬೈಲ್ ಬಿಡಿ ಪುಸ್ತಕ ಹಿಡಿ’ ಇಂತಹ ಹಲವಾರು ಯೋಜನೆಗಳನ್ನು ಕಾರ್ಯಗತ ಮಾಡಿ ಜನಮಾನಸದಲ್ಲಿ ಗುರುತಿಸಿಕೊಂಡಿದೆ. ಇದೀಗ ಪುಸ್ತಕ ಮನೆಯ ಎರಡನೇ ಶಾಖೆಯು ಮೂಡಬಿದಿರೆಯಲ್ಲಿ ಶುಭಾರಂಭಗೊಳ್ಳುತ್ತಿದ್ದು, ಪುಸ್ತಕಗಳು ಹಾಗೂ ಎಲ್ಲಾ ರೀತಿಯ ಉಡುಗೊರೆಗಳ ಮೇಲೆ ವಿಶೇಷ ರಿಯಾಯಿತಿ ಇದ್ದು, ಎಲ್ಲರೂ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು.

Read More

ಮಂಗಳೂರು : ವೇಷ ಕಳಚುತ್ತಿರುವಾಗಲೇ ಹೃದಯಾಘಾತವಾಗಿ ಧರ್ಮಸ್ಥಳ ಯಕ್ಷಗಾನ ಮೇಳದ ಖ್ಯಾತ ಕಲಾವಿದ ಗಂಗಾಧರ ಪುತ್ತೂರು (60) ಅವರು ಇಹಲೋಕ ತ್ಯಜಿಸಿದ್ದಾರೆ. ದಿನಾಂಕ 01-05-2024ರ ಬುಧವಾರ ರಾತ್ರಿ ಕೋಟದ ಗಾಂಧಿ ಮೈದಾನದ ಬಳಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಅವರು ಕುಕ್ಕಿಂತ್ತಾಯ ದೈವದ ವೇಷವನ್ನು ನಿರ್ವಹಿಸಿದ್ದರು. ಬಳಿಕ ಚೌಕಿಗೆ ಆಗಮಿಸಿ ಕಿರೀಟ, ಯಕ್ಷಗಾನದ ಆಭರಣ ತೆಗೆದಿಟ್ಟು ಇನ್ನೇನು ಮುಖದ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿದೆ. ಪುತ್ತೂರಿನ ಸೇಡಿಯಾಪು ನಿವಾಸಿಯಾಗಿರುವ ಶ್ರೀಯುತರು 18ನೇ ವಯಸ್ಸಿಗೆ ಯಕ್ಷಗಾನ ತಿರುಗಾಟ ಆರಂಭಿಸಿದ್ದರು. ಯಕ್ಷಗಾನ ರಂಗದ ಸವ್ಯಸಾಚಿ ಕಲಾವಿದರಾದ ಇವರು ಸ್ತ್ರೀವೇಷದಿಂದ ಹಿಡಿದು ಪುಂಡುವೇಷ, ರಾಜವೇಷಗಳನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದರು. 30ವರ್ಷಗಳಿಗಿಂತಲೂ ಅಧಿಕ ಕಾಲದಿಂದ ಗಂಗಾಧರ ಪುತ್ತೂರು ಧರ್ಮಸ್ಥಳ ಮೇಳದಲ್ಲಿಯೇ ಕಲಾವಿದರಾಗಿ ತಿರುಗಾಟ ಮಾಡಿದ್ದರು.

Read More

ಧಾರವಾಡ : ಧಾರವಾಡದ ಸಾಹಿತ್ಯ ಗಂಗಾ ಸಂಸ್ಥೆಯ ವತಿಯಿಂದ ರಾಜ್ಯಮಟ್ಟದ ವಿದ್ಯಾರ್ಥಿ ಕಥಾ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ಸ್ಪರ್ಧೆಯಲ್ಲಿ ಆಯ್ಕೆಯಾದ ಮೂರು ಅತ್ಯುತ್ತಮ ಕಥೆಗಳಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ಮತ್ತು ವಿಜೇತರಿಗೆ ಪ್ರಶಸ್ತಿ ಪತ್ರ (ಹಾರ್ಡ್ ಕಾಪಿ) ಜೊತೆಗೆ ಪುಸ್ತಕಗಳನ್ನು ನೀಡಲಾಗುವುದು. ಭಾಗವಹಿಸಿದ ಎಲ್ಲರಿಗೂ ಡಿಜಿಟಲ್ ಪ್ರಮಾಣ ಪತ್ರ ನೀಡಲಾಗುವುದು. ಸ್ಪರ್ಧೆಯ ನಿಯಮಗಳು * ಹೈಸ್ಕೂಲ್, ಪಿ.ಯು.ಸಿ., ಪದವಿ, ಸ್ನಾತಕೋತ್ತರ ಪದವಿ ಓದುತ್ತಿರುವ ಅಥವಾ ಓದು ಮುಗಿಸಿರುವ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. * ಪಿ. ಎಚ್. ಡಿ. ಮಾಡುತ್ತಿರುವ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದೆ. * ಸ್ಪರ್ಧಿಗಳ ವಯಸ್ಸು 28 ಮೀರುವಂತಿಲ್ಲ. * ಒಬ್ಬ ಸ್ಪರ್ಧಿ ಒಂದು ಕಥೆಯನ್ನು ಮಾತ್ರ ಕಳುಹಿಸಬಹುದು. * ಸ್ವತಂತ್ರ ಕಥೆಗಳನ್ನು ಮಾತ್ರ ಸ್ಪರ್ಧೆಗೆ ಪರಿಗಣಿಸಲಾಗುತಿದ್ದು ಅನುವಾದ, ಅನುಸೃಷ್ಟಿ ಮತ್ತು ರೂಪಾಂತರ ಮಾಡಿದ ಕಥೆಗಳಿಗೆ ಅವಕಾಶವಿಲ್ಲ. * ಕಥೆಯು 3000 ಪದಗಳ ಮಿತಿಯನ್ನು ಮೀರುವಂತಿಲ್ಲ. * ಕಥೆಯನ್ನು ಡಾಕ್ಸ್…

Read More

ಸುರತ್ಕಲ್ : ಗೋವಿಂದದಾಸ ಕಾಲೇಜಿನ ಗ್ರಂಥಾಲಯ ವಿಭಾಗವು, ಆಂತರಿಕ ಗುಣಮಟ್ಟ ಖಾತರಿಕೋಶದ ಸಹಭಾಗಿತ್ವದಲ್ಲಿ ನಡೆಸುತ್ತಿರುವ ‘ಪುಸ್ತಕ ಪ್ರೀತಿ ಪರಿಚಯ ಸರಣಿ’ ಕಾರ್ಯಕ್ರಮವು ದಿನಾಂಕ 24-04-2024ರಂದು ನಡೆಯಿತು. ಈ ಸರಣಿಯಲ್ಲಿ ಪ್ರಥಮ ಬಿ.ಎಸ್ಸಿ. ವಿದ್ಯಾರ್ಥಿನಿ ರಕ್ಷಿತಾ ಎಂ. ಗೋಲನ್ನವರ್ ಅವರು ಚ.ನ.ಶಂಕರ ರಾವ್‌ ಬರೆದ ‘ಮಹಾತ್ಮರ ಮಹಾತ್ಮ ಸ್ವಾಮಿ ವಿವೇಕಾನಂದರು’ ಎಂಬ ಪುಸ್ತಕವನ್ನು ಪರಿಚಯಿಸಿ “ಈ ಕೃತಿಯಲ್ಲಿ ಸ್ವಾಮಿ ವಿವೇಕಾನಂದರ ಆದರ್ಶದಾಯಕ ಜೀವನ, ಅವರ ಜೀವನಕ್ಕೆ ಸಂಬಂಧಿಸಿದ ಅವಿಸ್ಮರಣೀಯ ಘಟನೆಗಳು. ಅವರು ನೀಡಿದ ಅಮರ ಸಂದೇಶಗಳು ಹಾಗೂ ಅವರ ಬಗ್ಗೆ ರಾಷ್ಟ್ರನಾಯಕರು ವ್ಯಕ್ತಪಡಿಸಿದ ಅಭಿಪ್ರಾಯಗಳು ಇವೆಲ್ಲವುಗಳ ಪಕ್ಷಿನೋಟ ಸುಂದರವಾಗಿ ಮೂಡಿಬಂದಿವೆ” ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ಕೃಷ್ಣಮೂರ್ತಿ ಅವರು ಸ್ಮರಣಿಕೆ ನೀಡಿದರು. ಉಪಪ್ರಾಂಶುಪಾಲ ಪ್ರೊ. ನೀಲಪ್ಪ ವಿ., ಗ್ರಂಥಪಾಲಕಿ ಡಾ. ಸುಜಾತಾ ಬಿ. ಹಾಗೂ ಗ್ರಂಥಾಲಯದ ಸಿಬಂದಿ ಉಪಸ್ಥಿತರಿದ್ದರು. ದ್ವಿತೀಯ ಬಿ.ಎ. ವಿದ್ಯಾರ್ಥಿನಿ ತನುಶ್ರೀ ಸ್ವಾಗತಿಸಿ, ವಂದಿಸಿದರು.

Read More

ಹುಬ್ಬಳ್ಳಿ : ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು (ರಿ.) ಕೇಂದ್ರ ಸಮಿತಿ ಹುಬ್ಬಳ್ಳಿ ಇದರ ವತಿಯಿಂದ ಶ್ರೀ ಕೃಷ್ಣ ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಇವರ ಸಹಕಾರದೊಂದಿಗೆ ಕರಾವಳಿ ಕರ್ನಾಟಕ ಐದನೇ ಕಚುಸಾಪ ಸಮ್ಮೇಳನವು ದಿನಾಂಕ 05-05-2024ರಂದು ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. ಈ ಸಮ್ಮೇಳನವನ್ನು ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀ ಪಾದರು ಇವರ ದಿವ್ಯ ಸಾನಿಧ್ಯದಲ್ಲಿ ಉದ್ಘಾಟನೆ ಮಾಡಲಾಗುವುದು. ಬೆಳಿಗ್ಗೆ ಗಂಟೆ 11-00ರಿಂದ ಕಾಸರಗೋಡಿನ ಡಾ. ವಾಣಿಶ್ರೀ ಹಾಗೂ ಗುರುರಾಜ ಇವರ ಕಲಾ ತಂಡದಿಂದ ಶ್ರೀಕೃಷ್ಣ ನೃತ್ಯ ವೈಭವ ಜರುಗಲಿದೆ. ಮಧ್ಯಾಹ್ನ ಗಂಟೆ 12-00ರಿಂದ ಮೈಸೂರಿನ ಶ್ರೀ ಎನ್.ವಿ. ರಮೇಶ್ ಇವರ ಅಧ್ಯಕ್ಷತೆಯಲ್ಲಿ ಪರ್ಯಾಯ ಪುತ್ತಿಗೆ ಮಠದ ಸಹಕಾರದಿಂದ ‘ಶ್ರೀ ಭಗವದ್ಗೀತೆ ಒಂದು ವಿಶ್ಲೇಷಣೆ’ ವಿಚಾರಗೋಷ್ಠಿ ಜರುಗಲಿದೆ. ಶತಾವಧಾನಿ ಉಡುಪಿ ರಾಮಾನಾಥ ಆಚಾರ್ಯ ದಿಕ್ಕೂಚಿ ಭಾಷಣ, ವಿದ್ವಾನ್ ರಘುಪತಿ ಭಟ್, ಡಾ. ಜಿ.ವಿ. ಹೆಗಡೆ ಹಾಗೂ ಗಣಪತಿ ಭಟ್ಟ ವರ್ಗಾಸರ ಉಪನ್ಯಾಸ ನೀಡುವರು. ಗಂಟೆ 2-30ಕ್ಕೆ…

Read More

ಕನ್ನಡ ಕಾವ್ಯದ ಸದ್ಯದ ಪರಿಸ್ಥಿತಿಯನ್ನು ನೋಡಿದಾಗ ಆತಂಕ ಮತ್ತು ಸಂತೋಷಗಳು ಒಟ್ಟಿಗೇ ಉಂಟಾಗುತ್ತವೆ. ಕನ್ನಡದಲ್ಲಿ ಈಗ ಬಹಳಷ್ಟು ಜನ ಕವಿತೆಗಳನ್ನು ಬರೆಯುತ್ತಿದ್ದಾರೆ. ಕವಿತೆ ಓದುವವರಿಗಿಂತ ಬರೆಯುವವರೇ ಹೆಚ್ಚಾಗಿದ್ದಾರೆ ಎಂಬ ಮಾತಿನಲ್ಲಿ ಉತ್ಪೇಕ್ಷೆಯಿಲ್ಲ. ಈ ರೀತಿಯಲ್ಲಿ ಬರೆಯುತ್ತಿರುವ ಕನ್ನಡದ ಕವಿ, ಕವಿಯತ್ರಿಯರ ನಡುವೆ ಶ್ರೀಮತಿ ಸೌಮ್ಯ ಪ್ರವೀಣ್ ಅವರು ತಮ್ಮ ಮೊದಲ ಕವನ ಸಂಕಲನ ‘ಹೀಗೊಂದು ಭಾವ’ದ ಮೂಲಕ ಗಮನವನ್ನು ಸೆಳೆಯುತ್ತಾರೆ. ಗೃಹಿಣಿಯಾಗಿ, ತಾಯಿಯಾಗಿ ಮನೆಯ ಜವಾಬ್ದಾರಿಗಳನ್ನು ನಿಭಾಯಿಸುವುದರೊಂದಿಗೆ, ದಿನನಿತ್ಯದ ಕೆಲಸಗಳ ನಡುವೆಯೂ ಬರವಣಿಗೆಗೆ ಸಮಯವನ್ನು ಹೊಂದಿಸಿಕೊಂಡದ್ದು ಸಣ್ಣ ಸಂಗತಿಯಲ್ಲ. ಆ ಪೈಕಿ ಆಯ್ದ ನಲುವತ್ತೆಂಟು ಕವಿತೆಗಳ ಗುಚ್ಛವನ್ನು ‘ಹೀಗೊಂದು ಭಾವ’ ಎಂಬ ಹೆಸರಿನಲ್ಲಿ ಓದುಗರಿಗೆ ನೀಡಿದ್ದಾರೆ. ಬದುಕಿನ ಮುಖ್ಯ ಆಸರೆಯಾದ ಪ್ರೀತಿಗೆ ಆದ್ಯತೆಯನ್ನು ನೀಡುವ ಸೌಮ್ಯ ಅವರ ಕವಿತೆಗಳಲ್ಲಿ ಪ್ರೀತಿಯ ವೈವಿಧ್ಯಮಯ ಮುಖಗಳಿವೆ. ತಮ್ಮ ಜೀವನಾನುಭವದ ಹಿನ್ನೆಲೆಯಲ್ಲಿ ಪ್ರೀತಿಯ ಹಲವು ಮುಖಗಳನ್ನು ಪ್ರಾಮಾಣಿಕವಾಗಿ ಅಭಿವ್ಯಕ್ತಿಸುವಲ್ಲಿ ಅವರು ಯಶಸ್ವಿಯಾಗಿದ್ದಾರೆ. ಅನೇಕ ಕವಿತೆಗಳಲ್ಲಿ ಒಲವಿನ ಮುಖಗಳನ್ನು ಕಂಡರಿಸುವ ಹಂಬಲವು ಕಂಡು ಬರುತ್ತದೆ. ಆಳವಾದ ಪ್ರೀತಿ…

Read More