Subscribe to Updates
Get the latest creative news from FooBar about art, design and business.
Author: roovari
ದಾವಣಗೆರೆ : ಮಾನವ ಬಂಧುತ್ವ ವೇದಿಕೆ ಕರ್ನಾಟಕ ಹಾಗೂ ಕಲಾ ಬಂಧುತ್ವ ವೇದಿಕೆ ದಾವಣಗೆರೆಯ ಸಹಯೋಗದಲ್ಲಿ ಜಿಲ್ಲೆಯಾದ್ಯಂತ ನಡೆಯಲಿರುವ ಬೀದಿ ನಾಟಕ ಹಾಗೂ ಜನಪದ ಹಾಡುಗಳ ಪ್ರದರ್ಶನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ದಿನಾಂಕ 07 ಜುಲೈ 2025ರಂದು ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಬೆಳಿಗ್ಗೆ ಘಂಟೆ 10:00ಕ್ಕೆ ನಡೆಯಿತು. ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಹಮ್ಮಿಕೊಂಡಿದ್ದ ಬೀದಿ ನಾಟಕ ಹಾಗೂ ಜನಪದ ಗೀತೆಗಳ ಗೀತೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿದ ನಿವೃತ್ತ ಡಿ. ವೈ. ಎಸ್. ಪಿ. ರವಿ ನಾರಾಯಣ್ ಮಾತನಾಡಿ “ಕಲಾತಂಡಗಳು ಉತ್ತಮ ಪ್ರದರ್ಶನ ನೀಡಲಿ. ಇದರಿಂದ ಸಮಾಜದ ಸಕಾರಾತ್ಮಕ ಬೆಳವಣಿಗೆಗೆ ಉತ್ತಮ ಸಂದೇಶ ನೀಡಲು ಸಹಕಾರಿಯಾಗಲಿದೆ” ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕರಾದ ರಾಮಚಂದ್ರಪ್ಪ ಮಾತನಾಡಿ “ಮಾನವ ಬಂಧು ವೇದಿಕೆಯಿಂದ ಪ್ರತಿ ಜಿಲ್ಲೆಗೊಂದರಂತೆ ಜಿಲ್ಲೆಯ ಬೇರೆ ಭಾಗಗಳಲ್ಲಿ ಬೀದಿ ನಾಟಕ ಮತ್ತು ಜನಪದ ಗೀತೆಗಳ ಪ್ರದರ್ಶನ ನೀಡಲು ಕಲಾಬಂಧುತ್ವ ವೇದಿಕೆಯ ಆಶ್ರಯದಲ್ಲಿ ತರಬೇತಿ ಶಿಬಿರ ಆಯೋಜಿಸಲಾಗಿದ್ದು,…
ಬೆಂಗಳೂರು: ಬುದ್ಧ ಬಸವ ಗಾಂಧಿ ಸಾಂಸ್ಕೃ ತಿಕ ಟ್ರಸ್ಟ್ ಹಾಗೂ ಜೇನುಗೂಡು ಕಲಾ ಬಳಗವು ಜಂಟಿಯಾಗಿ ಆಯೋಜಿಸಿದ ಸಾಹಿತಿ ಚಿನ್ನು ಪ್ರಕಾಶ್ ಶ್ರೀರಾಮನಹಳ್ಳಿ ಬರೆದ ‘ದ ಕಂಪ್ಯಾರಿಟಿವ್ ಸ್ಟಡಿ ಆಫ್ ಡ್ರಮಾಟಿಕ್ ಥಿಯರೀಸ್ ಇನ್ ಟಿ. ಎಸ್ ಎಲಿಯಟ್ಸ್ ಪ್ಲೇಸ್’ ಕೃತಿಯ ಲೋಕರ್ಪಣಾ ಸಮಾರಂಭವು ದಿನಾಂಕ 06 ಜುಲೈ 2025ರ ಭಾನುವಾರದಂದು ಬೆಂಗಳೂರಿನ ಶೇಷಾದ್ರಿಪುರ ಶಿಕ್ಷಣ ದತ್ತಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳಿಸಿದ ಶೇಷಾದ್ರಿಪುರ ಶಿಕ್ಷಣ ದತ್ತಿ ಗೌರವ ಪ್ರಧಾನ ಕಾರ್ಯದರ್ಶಿ ಡಾ.ವೂಡೇ ಪಿ. ಕೃಷ್ಣ ಮಾತನಾಡಿ “ಕುವೆಂಪು ಸಾರಿದ ಸರ್ವ ಜನಾಂಗದ ಶಾಂತಿಯ ತೋಟದ ಚಿಂತನೆ ಮತ್ತು ಪುಸ್ತಕವನ್ನು ಓದುವ ಹವ್ಯಾಸವು ಯುವ ಪೀಳಿಗೆಯಲ್ಲಿ ಬರಬೇಕು. ಪ್ರಸ್ತುತ ಅಧ್ಯಾಪಕರು ಪಾಠ ಬಿಟ್ಟು ಇತರ ಪುಸ್ತಕವನ್ನು ಓದುವವರ ಸಂಖ್ಯೆ ಕಡಿಮೆಯಾಗಿದೆ. ಆದರಿಂದ ಮುಂದಿನ ದಿನಗಳಲ್ಲಿ ಅಧ್ಯಾಪಕರು ಬೋಧನೆಯೊಂದಿಗೆ ಪುಸ್ತಕ ಓದುವ ಬಗ್ಗೆ ಆಸಕ್ತಿ ತೋರಬೇಕು” ಎಂದು ಹೇಳಿದರು. ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಬಂಜಗೆರೆ ಜಯಪ್ರಕಾಶ್ ಮಾತನಾಡಿ “ನಾಟಕಕಾರ…
ಪುತ್ತೂರು : ಬಹುವಚನಂ ಇದರ ವತಿಯಿಂದ ಶಾಸ್ತ್ರೀಯ ಸಂಗೀತ ಕಛೇರಿ ಕಾರ್ಯಕ್ರಮವನ್ನು ದಿನಾಂಕ 13 ಜುಲೈ 2025ರಂದು ಸಂಜೆ 4-30 ಗಂಟೆಗೆ ಪುತ್ತೂರಿನ ದರ್ಬೆ ವಿದ್ಯಾನಗರದ ಪದ್ಮಿನೀ ಸಭಾಭವನದಲ್ಲಿ ಆಯೋಜಿಸಿಲಾಗಿದೆ. ಶ್ರೀಮತಿ ನಂದಿನಿ ವಿನಾಯಕ್ ಇವರ ಹಾಡುಗಾರಿಕೆಗೆ ತನ್ಮಯೀ ಉಪ್ಪಂಗಳ ಇವರು ವಯಲಿನ್ ಮತ್ತು ವಿದ್ವಾನ್ ಪನ್ನಗ ಶರ್ಮ ಮೃದಂಗಂನಲ್ಲಿ ಸಹಕರಿಸಲಿದ್ದಾರೆ.
ಮಂಗಳೂರು : ‘ಸಾಹಿತ್ಯ ಬದುಕಿನ ಅವಿಭಾಜ್ಯ ಅಂಗ. ಒಳ್ಳೆಯ ಬದುಕನ್ನು ರೂಪಿಸುವುದರಲ್ಲಿ ಸಾಹಿತ್ಯದ ಪಾತ್ರ ಅತ್ಯಂತ ಮಹತ್ವಪೂರ್ಣವಾದುದು. ಪ್ರತಿಯೊಬ್ಬರೂ ಓದಲೇಬೇಕಾದ ಪುಸ್ತಕಗಳೆರಡನ್ನು ಇಂದು ಅವಲೋಕಿಸಿ, ಅದರೊಳಗಿನ ಹೂರಣಗಳನ್ನು ಸಹೃದಯರಿಗೆ ತಲಪಿಸುವ ಕೆಲಸವನ್ನು ಈ ಕೃತಿ ಅವಲೋಕನ ಕಾರ್ಯಕ್ರಮದಲ್ಲಿ ಅವಲೋಕನಕಾರರು ಮಾಡುತ್ತಿದ್ದಾರೆ. ಇದು ಅತ್ಯಂತ ಅಗತ್ಯವಾದ ಮತ್ತು ಅಭಿನಂದನೀಯ ಕಾರ್ಯಕ್ರಮ’ ಎಂದು ಶಾರದಾ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಡಾ. ಎಂ. ಬಿ. ಪುರಾಣಿಕರು ಹೇಳಿದರು. ಅವರು ಕನ್ನಡ ಸಾಹಿತ್ಯ ಪರಿಷತ್ತು, ಮಂಗಳೂರು ತಾಲೂಕು ಘಟಕ ಹಾಗೂ ನೆಲ್ಲಿಕಾರು ಜಿನದತ್ತ ಶೆಟ್ಟಿ ವಸಂತಮ್ಮ ಪ್ರತಿಷ್ಠಾನದ ಸಹಯೋಗದಲ್ಲಿ ದಿನಾಂಕ 05 ಜುಲೈ 2025ರಂದು ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿ ನಡೆದ ‘ಕೃತಿ ಅವಲೋಕನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶ್ರೀ ಗಣೇಶ ಪ್ರಸಾದ ಜೀ ಯವರ ‘ಕಾಂತೆ ಕವಿತೆ’ ಕವನಗಳ ಗುಚ್ಛದ ಬಗ್ಗೆ ಖ್ಯಾತ ಹಾಸ್ಯ ಲೇಖಕಿ ಪ್ರೊ. ಭುವನೇಶ್ವರಿ ಹೆಗಡೆಯವರು ಅವಲೋಕನ ಗೈಯುತ್ತಾ, ಕಾಂತೆಯನ್ನು ವಸ್ತುವನ್ನಾಗಿಸಿ ಬದುಕಿನ ಆಂತರಿಕ ದರ್ಶನಗಳನ್ನು ಗಣೇಶ ಪ್ರಸಾದ ಜೀಯವರು ಮಾಡಿಸಿದ್ದಾರೆ.…
ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಉಡುಪಿ ಮತ್ತು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಇವರ ಜಂಟಿ ಆಶ್ರಯದಲ್ಲಿ ‘ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್. ಹೆಗ್ದೆ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ದಿನಾಂಕ 12 ಜುಲೈ 2025ರಂದು ಬೆಳಿಗ್ಗೆ 10-30 ಗಂಟೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭದ ಅಧ್ಯಕ್ಷತೆಯನ್ನು ಎಂ.ಜಿ.ಎಂ. ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವನಿತಾ ಮಯ್ಯ ಇವರು ವಹಿಸಲಿದ್ದು, ಟಿ. ಮೋಹನದಾಸ ಪೈ ಕೌಶಲ್ಯ ಅಭಿವೃದ್ಧಿ ಕೇಂದ್ರದ ನಿರ್ದೇಶಕರಾದ ಟಿ. ರಂಗ ಪೈ ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಇತಿಹಾಸ ತಜ್ಞರಾದ ಡಾ. ಮಾಲತಿ ಕೃಷ್ಣಮೂರ್ತಿ ಇವರಿಗೆ ‘ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್. ಹೆಗ್ದೆ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಪುರಾತತ್ವ ತಜ್ಞರಾದ ಡಾ. ಪುಂಡಿಕಾಯಿ ಗಣಪಯ್ಯ ಭಟ್ ಇವರು ‘ಮೌಖಿಕ ಪರಂಪರೆ ಮತ್ತು ತುಳುವ ಇತಿಹಾಸ’ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಮಧೂರು : ಉಳಿಯ ದನ್ವ0ತರೀ ಯಕ್ಷಗಾನ ಕಲಾಸಂಘ ಮಧೂರು ಇದರ ವಾರದ ಕೂಟ ಉಳಿಯ ಮನೆಯ ಸುಧಾ ಮಂದಿರದಲ್ಲಿ ದಿನಾಂಕ 06 ಜುಲೈ 2025ರಂದು ‘ಭೀಷ್ಮ ಪ್ರತಿಜ್ಞೆ’ ಎಂಬ ಆಖ್ಯಾನದೊಂದಿಗೆ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀ ವಾಸುದೇವ ಕಲ್ಲೂರಾಯ ಮಧೂರು ಹಾಗೂ ಮದ್ದಲೆಗಳಲ್ಲಿ ಮುರಳಿ ಮಾಧವ ಮಧೂರು ಸಹಕರಿಸಿದರು. ಮುಮ್ಮೇಳದಲ್ಲಿ ದೇವವೃತ : ಭ್ರಹ್ಮಶ್ರೀ ಉಳಿಯತಾಯ ವಿಷ್ಣು ಆಸ್ರ, ಶಾಂತನು : ನರಸಿಂಹ ಬಲ್ಲಾಳ್, ಸತ್ಯವತಿ : ಶ್ರೀ ಮಯೂರ ಆಸ್ರ ಉಳಿಯ, ಕಂದರ ರಾಜ 1 : ಗೋಪಾಲ ಅಡಿಗ ಕೂಡಲು, ಕಂದರ ರಾಜ 2 : ಶ್ರೀಮತಿ ರಕ್ಷಾ ರಾಮ ಕಿಶೋರ ಆಸ್ರ ಸಹಕರಿಸಿದರು.
ಮಡಿಕೇರಿ : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕ ಮತ್ತು ಕನ್ನಡ ಭವನದ ಕೊಡಗು ಜಿಲ್ಲಾ ಘಟಕದ ಸಂಯುಕ್ತಾಶ್ರಯದಲ್ಲಿ ಕೊಡಗು ಜಿಲ್ಲಾ ಚುಟುಕು ಕಾವ್ಯಶ್ರೀ ಪ್ರಶಸ್ತಿ, ಕನ್ನಡ ಭವನ ಕಾಸರಗೋಡಿನ ಪ್ರತಿಷ್ಠಿತ ಅಂತರ ರಾಜ್ಯ ಪ್ರಶಸ್ತಿಯಾದ ಕನ್ನಡ ವಯಸ್ಸಿನಿ ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ ಮತ್ತು ಕೊಡಗು ಮಳೆಗಾಲ ಕವಿಗೋಷ್ಠಿ ಕಾರ್ಯಕ್ರಮ ದಿನಾಂಕ 06 ಜುಲೈ 2025ರಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆಯಿತು. ಕೊಡಗು ಕನ್ನಡ ಭವನದ ಅಧ್ಯಕ್ಷರಾದ ಬೊಳ್ಳಜಿರ ಬಿ. ಅಯ್ಯಪ್ಪ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಸ್ಥಾಪಕ ಸಂಚಾಲಕರಾದ ಡಾ.ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಉದ್ಘಾಟಿಸಿದರು. ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ತಿಗ್ಗಾಲು ಎನ್.ಗಿರೀಶ ಮೂರ್ನಾಡು, ಮೂಕಳೇರ ಜೈನಿ ಪೂಣಚ್ಚ ಪೊನ್ನಂಪೇಟೆ, ವಂದ್ಯಂಡ ರೇಣುಕ ಸೋಮಯ್ಯ ಹೊನೂರು ಅಮ್ಮತ್ತಿ, ಅವರ್ಣಾ ಹುಲಿತಾಳ, ಅಯ್ಯನೆರವಂಡ ಪ್ರಿತುನ್ ಪೂವಣ್ಣ ಅವರಿಗೆ ಕೊಡಗು…
ಮಂಗಳೂರು : ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ ಇದರ ಆಶ್ರಯದಲ್ಲಿ ವಿಶ್ವಕರ್ಮ ಕಲಾ ಪರಿಷತ್ ಇದರ ವತಿಯಿಂದ ಗೋಲ್ಡನ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ವಿಶ್ವದಾಖಲೆ ಮೂಡಿಸಿರುವ ಹೆಮ್ಮೆಯ ಯುವ ಗಾಯಕರಾದ ವಿದ್ವಾನ್ ಶ್ರೀ ಯಶವಂತ್ ಎಂ.ಜಿ. ಇವರಿಗೆ ‘ಯಶೋಭಿನಂದನೆ’ ಕಾರ್ಯಕ್ರಮವನ್ನು ದಿನಾಂಕ 13 ಜುಲೈ 2025ರಂದು ಅಪರಾಹ್ನ 4-30 ಗಂಟೆಗೆ ಮಂಗಳೂರಿನ ರಥಬೀದಿಯಲ್ಲಿರುವ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ. ಪ್ರಸಿದ್ಧ ಕೊಂಡೆವೂರು ಸಹೋದರಿಯರಾದ ಕುಮಾರಿ ಗಾಯತ್ರೀ, ಕುಮಾರಿ ಶ್ರಾವಣ್ಯ ಮತ್ತು ಕುಮಾರಿ ಮೋಕ್ಷಪ್ರಭಾ ಇವರಿಂದ ವಯೊಲಿನ್ ಟ್ರಯೋ ಸಂಗೀತ ಕಛೇರಿಗೆ ಮೃದಂಗದಲ್ಲಿ ವಿದ್ವಾನ್ ಮನೋಹರ ರಾವ್ ಮತ್ತು ಮೋರ್ಸಿಂಗ್ ನಲ್ಲಿ ಸುಧಾಮ ಆಚಾರ್ಯ ಇವರುಗಳು ಸಹಕರಿಸಲಿದ್ದಾರೆ. ‘ಯಶೋಭಿನಂದನೆ’ ಸಮಾರಂಭವನ್ನು ಮಾಜಿ ಮೊಕ್ತೇಸರರಾದ ಮುನಿಯಾಲ್ ದಾಮೋದರ ಆಚಾರ್ಯ ಇವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟನೆ ಮಾಡಲಿದ್ದು, ಆಡಳಿತಾಧಿಕಾರಿ ಕೆ. ಉಮೇಶ ಆಚಾರ್ಯ ಪಾಂಡೇಶ್ವರ ಇವರು ಶುಭಾಶಂಸನೆ ಗೈಯ್ಯಲಿದ್ದಾರೆ. ನಿರಂತರ 24 ಗಂಟೆಗಳ ಕಾಲ ಡಾ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಹಾಡಿದ…
ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ತಿಂಗಳ ಸರಣಿ ಕಾರ್ಯಕ್ರಮದ ಅಂಗವಾಗಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನವಗ್ರಹ ಗುಡಿಯಲ್ಲಿ ದಿನಾಂಕ 06 ಜುಲೈ 2025ರಂದು ತಾಳಮದ್ದಳೆ ‘ವಾಲಿ ಮೋಕ್ಷ’ ಎಂಬ ಆಖ್ಯಾನದೊಂದಿಗೆ ಜರಗಿತು. ಹಿಮ್ಮೇಳದಲ್ಲಿ ಭಾಗವತರಾಗಿ ಎಲ್.ಎನ್. ಭಟ್ ಬಟ್ಯಮೂಲೆ, ಸತೀಶ್ ಇರ್ದೆ ಹಾಗೂ ಚೆಂಡೆ, ಮದ್ದಲೆಗಳಲ್ಲಿ ಪದ್ಯಾಣ ಶಂಕರನಾರಾಯಣ ಭಟ್, ಮುರಳೀಧರ ಕಲ್ಲೂರಾಯ, ಮಾಸ್ಟರ್ ಸಮರ್ಥ ವಿಷ್ಣು ಮತ್ತು ಮಾಸ್ಟರ್ ಸನತ್ ಕೃಷ್ಣ ಪುಣಚ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ ಬಾರ್ಯ ಮತ್ತು ಗುಡ್ಡಪ್ಪ ಬಲ್ಯ (ಶ್ರೀರಾಮ), ಗುಂಡ್ಯಡ್ಕ ಈಶ್ವರ ಭಟ್ (ವಾಲಿ), ಮಾಂಬಾಡಿ ವೇಣುಗೋಪಾಲ ಭಟ್ (ಸುಗ್ರೀವ) ಮತ್ತು ಸುಬ್ಬಯ್ಯ ರೈ ಸುಳ್ಯಪದವು (ತಾರೆ )ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ಸಂಘದ ಗೌರವ ಕಾರ್ಯದರ್ಶಿ ರಂಗನಾಥ ರಾವ್ ಸಹಕರಿಸಿದರು.
ಮೂಡುಬಿದಿರೆ : ಕಳೆದ ನಲುವತ್ತನಾಲ್ಕು ವರುಷಗಳಿಂದ ಪ್ರತಿಷ್ಠಿತ ವರ್ಧಮಾನ ಸಾಹಿತ್ಯ ಪ್ರಶಸ್ತಿಗಳನ್ನು ನೀಡುತ್ತಾ ಬಂದಿರುವ ಮೂಡುಬಿದಿರೆಯ ವರ್ಧಮಾನ ಪ್ರಶಸ್ತಿ ಪೀಠವು 2024ರ ಸಾಲಿನ ಪ್ರಶಸ್ತಿಗಳನ್ನು ನಿರ್ಣಯಿಸಿದ್ದು, ಹಿರಿಯ ಸಾಹಿತಿ ಉಡುಪಿಯ ಶ್ರೀ ಪ್ರೇಮಶೇಖರ್ ಅವರಿಗೆ ವರ್ಧಮಾನ ಸಾಹಿತ್ಯ ಪ್ರಶಸ್ತಿ ಮತ್ತು ಹೊಸ ಪೀಳಿಗೆಯ ಮಹತ್ವದ ವಿಮರ್ಶಕ ಹಾವೇರಿಯ ಶ್ರೀ ವಿಕಾಸ ಹೊಸಮನಿ ಅವರಿಗೆ ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿಯನ್ನು ಘೋಷಿಸಿದೆ. ವರ್ಧಮಾನ ಸಾಹಿತ್ಯ ಪ್ರಶಸ್ತಿಯು ರೂಪಾಯಿ ಇಪ್ಪತೈದು ಸಾವಿರದ ಗೌರವ ಸಂಭಾವನೆ, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದ್ದರೆ, ವರ್ಧಮಾನ ಉದಯೋನ್ಮುಖ ಪ್ರಶಸ್ತಿಯು ರೂಪಾಯಿ ಹದಿನೈದು ಸಾವಿರ ಗೌರವ ಸಂಭಾವನೆ, ತಾಮ್ರಪತ್ರದ ಜೊತೆ ಸನ್ಮಾನವನ್ನು ಒಳಗೊಂಡಿವೆ. ಮೂಡುಬಿದಿರೆಯಲ್ಲಿ 05 ಜೂನ್ 2025ರ ಶನಿವಾರ ವರ್ಧಮಾನ ಪ್ರಶಸ್ತಿ ಪೀಠದ ಮಹಾಸಭೆಯು ಪೀಠದ ಉಪಾಧ್ಯಕ್ಷರಾದ ಕೆ. ಶ್ರೀಪತಿ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದು ಈ ಸಾಲಿನ ತೀರ್ಪುಗಾರರಾದ ವಿಮರ್ಶಕ ಡಾ. ಬಿ. ಜನಾರ್ದನ ಭಟ್, ಪ್ರಾಧ್ಯಾಪಕ ಪ್ರೊ. ಬಿ. ಪಿ. ಸಂಪತ್ ಕುಮಾರ್ ಮತ್ತು ವಿಮರ್ಶಕ…