Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಮಂಗಳೂರಿನ ಟಿ. ಎಂ. ಎ. ಪೈ ಇಂಟನ್ಯಾಷನಲ್ ಕನ್ವೆನ್ಶನ್ ಸೆಂಟರ್ ನಲ್ಲಿ ನಡೆದ ಮಂಗಳೂರು ಸಾಹಿತ್ಯ ಉತ್ಸವದ 7ನೇ ಆವೃತ್ತಿಯ ಅಂಗವಾಗಿ ‘ಪತ್ರಿಕೋದ್ಯಮ ಮತ್ತು ಸಾಹಿತ್ಯ – ಒಂದು ಹರಟೆ’ ವಿಷಯದಲ್ಲಿ ಚರ್ಚೆಯು ದಿನಾಂಕ 11 ಜನವರಿ 2025 ರಂದು ಸಭಾಂಗಣದ ಎರಡನೇ ಸಭಾಸದನದಲ್ಲಿ ನಡೆಯಿತು. ಮೇಲಿನ ವಿಷಯದಲ್ಲಿ ಜೋಗಿ ಗಿರೀಶ್ ರಾವ್ ಹತ್ವಾರ್ ಹಾಗೂ ರವಿ ಹೆಗಡೆ ಚರ್ಚೆ ಮಾಡಿದರು. ಜೋಗಿ ಗಿರೀಶ್ ರಾವ್ ಹತ್ವಾರ್ : ಕನ್ನಡ ಬರಹಗಾರರು ಮತ್ತು ಪತ್ರಕರ್ತರು ಕನ್ನಡ ನವ ಸಾಹಿತ್ಯ ಬರಹಗಾರರಲ್ಲಿ ಒಬ್ಬರಾದ ಇವರು ಅನೇಕ ಕನ್ನಡ ನಿಯತಕಾಲಿಗರು ಮತ್ತು ದಿನ ಪತ್ರಿಕೆಯಲ್ಲಿ ಸಣ್ಣ ಕಥೆ , ಕಾದಂಬರಿ ಹಾಗು ಅಂಕಣಗಳನ್ನು ಬರೆದಿದ್ದಾರೆ . ರವಿ ಹೆಗಡೆ ; ಅವರು ಕನ್ನಡ ಪ್ರಭಾ ಪತ್ರಿಕೆಯಲ್ಲಿ ಮುಖ್ಯ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಹಾಗೆ ಏಷಿಯಾನೆಟ್ ಸುವರ್ಣ ನ್ಯೂಸ್ ನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಕಾಲಚಕ್ರದೊಂದಿಗೆ ಸಾಕಷ್ಟು ಬದಲಾವಣೆಗಳು…
ಮಂಗಳೂರು : ಮಂಗಳೂರಿನ ಟಿ. ಎಂ. ಎ. ಪೈ ಇಂಟನ್ಯಾಷನಲ್ ಕನ್ವೆನ್ಶನ್ ಸೆಂಟರ್ ನಲ್ಲಿ ನಡೆದ ಮಂಗಳೂರು ಸಾಹಿತ್ಯ ಉತ್ಸವದ 7ನೇ ಆವೃತ್ತಿಯ ಅಂಗವಾಗಿ ‘ಗೊಂದಲಿಗರ ಪದಗಳು, ಹಾಡು ಮತ್ತು ಕಥೆಯನ್ನು’ ಧಾರವಾಡದ ಪ್ರಸಿದ್ಧ ಜಾನಪದ ಗಾಯಕರಾದ ವಿಠಲ್ ಗೊಂದಲೆ ಮತ್ತು ಭಲಾರಾಮ ಪ್ರಸ್ತುತಪಡಿಸಿದರು. ದಿನಾಂಕ 11 ಜನವರಿ 2025ರಂದು ಅವರು ತಮ್ಮ ಗಾಯನದ ಮೂಲಕ ಧಾರವಾಡದ ಸಾಂಸ್ಕೃತಿಕ ಪರಂಪರೆಯನ್ನು ಪ್ರೇಕ್ಷಕರಿಗೆ ಪರಿಚಯಿಸಿದರು. ಈ ಕಾರ್ಯಕ್ರಮವನ್ನು ನಿರ್ವಹಿಸಿದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಇದರ ಸಂವಹನ ಶಾಸ್ತ್ರದ ಸಹಾಯಕ ಪ್ರಾಧ್ಯಾಪಕರಾದ ಶ್ರೀರಾಜ್ ಗುಡಿ ಮಾತನಾಡಿ “ಗೀತೆಗಳ ಸಾಂಸ್ಕೃತಿಕ ಪರಿಪೂರ್ಣತೆ ಹಾಗೂ ಈಗಿನ ಕಾಲದಲ್ಲಿ ನುಡಿಸಂಪ್ರದಾಯಗಳ ಸಂರಕ್ಷಣೆ ಅತ್ಯಗತ್ಯ. ಕುಟುಂಬದ ಆರಾಧ್ಯ ದೇವತೆ ದೇವಿಯಾಗಿರುವ ಸಂದರ್ಭದಲ್ಲಿ ವಿಶೇಷ ಸಂದರ್ಭಗಳಲ್ಲಿ , ಈ ಹಾಡುಗಳನ್ನು ಹಾಡುವ ಸಂಪ್ರದಾಯವಿದೆ. ಇವು ನಂಬಿಕೆಯನ್ನು ಮಾತ್ರವಲ್ಲ, ಸಮಾಜದ ಜೊತೆಗಿನ ನಿಕಟ ಸಂಬಂಧವನ್ನು ಪ್ರತಿಬಿಂಬಿಸುತ್ತವೆ. ಇವರು ಕೇವಲ ವೇದಿಕೆ ಪ್ರದರ್ಶನಕ್ಕಾಗಿ ಅಲ್ಲ, ಅವರ ಶ್ರೀಮಂತ ಜಾನಪದ ಪರಂಪರೆಯ ಉಳಿವಿಗಾಗಿ…
‘ಸಂಸ’ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ಕನ್ನಡದ ಖ್ಯಾತ ಸಾಹಿತಿಗಳಲ್ಲಿ ಒಬ್ಬರು ಎ. ಎನ್. ಸಾಮಿ ವೆಂಕಟಾದ್ರಿ ಅಯ್ಯರ್. ಎಲ್ಲರೂ ಪ್ರೀತಿಯಿಂದ ಕರೆಯುತ್ತಿದ್ದದ್ದು ‘ಸಾಮಿ’ ಎಂದು. ಇವರು ತಮ್ಮ ಹೆಸರನ್ನು ‘ಸಾಮಿ’ , ‘ಸಾಮಿ ವೆಂಕಟಾದ್ರಿ’ ‘ಎ.ಎನ್. ಸಾಮಿ ವೆಂಕಟಾದ್ರಿ ಅಯ್ಯರ್’ ಹೀಗೆ ಬೇರೆ ಬೇರೆ ರೀತಿಯಲ್ಲಿ ಬರೆಯುತ್ತಿದ್ದರು. 1898 ಜನವರಿ 13ರಂದು ಮೈಸೂರು ಸಂಸ್ಥಾನದ ಯಳಂದೂರು ತಾಲೂಕಿನ ಅಗರ ಎಂಬ ಗ್ರಾಮದ ನರಸಿಂಹ ಪಂಡಿತ ಮತ್ತು ಗೌರಮ್ಮ ದಂಪತಿಯ ಮೂರು ಮಂದಿ ಮಕ್ಕಳಲ್ಲಿ ಕೊನೆಯವರು. ಇವರ ಕಾವ್ಯನಾಮ ಸಂಸ ಆಗಿದ್ದು ಒಂದು ವಿಶೇಷ ಸನ್ನಿವೇಶ. ಸಾಹಿತ್ಯ ಕ್ಷೇತ್ರದಲ್ಲಿ ಸಂಸರು ಗುರುತಿಸಿಕೊಂಡದ್ದು 1925ರಲ್ಲಿ ಪ್ರಕಟವಾದ ಇವರ ವಿಗಡ ವಿಕ್ರಮರಾಯ ನಾಟಕದಿಂದ. ‘ಕಂಸ’ ಎಂಬ ಕಾವ್ಯನಾಮದಿಂದ ಈ ನಾಟಕಕ್ಕೆ ಪ್ರಕಟಣೆ ನೀಡಿದರೂ ಮುದ್ರಣ ಮಾಡುವಾಗ ಅದು “ಸಂಸ” ಎಂದು ತಪ್ಪಾಗಿ ಮುದ್ರಣಗೊಂಡರೂ ಮುಂದೆ ಅವರ ಕಾವ್ಯನಾಮವಾಗಿಯೇ ಉಳಿದುಕೊಂಡಿತು. ಪ್ರೌಢಶಾಲೆಯ ವಿದ್ಯಾಭ್ಯಾಸವನ್ನು ಪೂರ್ತಿಗೊಳಿಸದೆ ನಿಲ್ಲಿಸಿದ ಸಂಸರು ಮಹಾರಾಜ ಕಾಲೇಜಿನಲ್ಲಿ ಕನ್ನಡ ಪಂಡಿತರಾಗಿದ್ದ ಕರಿಬಸಪ್ಪ ಶಾಸ್ತ್ರಿಗಳ ಗರಡಿಯಲ್ಲಿ…
ತೆಕ್ಕಟ್ಟೆ: ತೆಕ್ಕಟ್ಟೆ ಹಯಗ್ರೀವದಲ್ಲಿ ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆಯ ‘ಸಿನ್ಸ್ 1999 ಶ್ವೇತಯಾನ-97’ ಕಾರ್ಯಕ್ರಮದಡಿಯಲ್ಲಿ ತೆಂಕು ತಿಟ್ಟು ಭಾಗವತಿಕೆ ತರಗತಿ ಉದ್ಘಾಟನಾ ಸಮಾರಂಭವು ದಿನಾಂಕ 11 ಜನವರಿ 2025ರಂದು ನಡೆಯಿತು. ಸಮಾರಂಭದಲ್ಲಿ ಭಾಗವತಿಕೆ ತರಗತಿಯನ್ನು ಉದ್ಘಾಟಿಸಿದ ಪ್ರಸಂಗಕರ್ತ ಪ್ರಸಾದ್ ಕುಮಾರ್ ಮೊಗೆಬೆಟ್ಟು ಮಾತನಾಡಿ “ಕರಾವಳಿಯ ಅಭಿಮಾನದ ಕಲಾಸಂಸ್ಥೆಯಾದ ಯಶಸ್ವೀ ಕಲಾವೃಂದದ ಆಶ್ರಯದಲ್ಲಿ ಇನ್ನು ಮುಂದೆ ಬಡಗಿನ ಹಿಮ್ಮೇಳದೊಂದಿಗೆ ತೆಂಕುತಿಟ್ಟು ಹಿಮ್ಮೇಳ ತರಗತಿಯೂ ನಡೆಯುತ್ತಿರುವುದು ಅತ್ಯಂತ ಸಂತಸ ತಂದಿದೆ. ತಾಳ ಮದ್ದಳೆಯೊಂದಿಗೆ ಜಾಗಟೆಯ ಮಧುರ ಮೈತ್ರಿ ಬಯಸುವ ಕಲಾಸಕ್ತರಿಗೆ ಬೆಳ್ಳಿ ಹಬ್ಬದ ಸಂಸ್ಥೆ ನೀಡಿದ ಚಿನ್ನದ ಅವಕಾಶವಿದು. ಒಂದೇ ಕಲಿಕಾ ಕೇಂದ್ರದಲ್ಲಿ ಯಕ್ಷಗಾನ ಕಲಾಮಾತೆಯ ಯುಗ್ಮ ನಯನಗಳಂತಿರುವ ಎರಡು ತಿಟ್ಟುಗಳ ಸಶಕ್ತ ಶಿಕ್ಷಣ ಸಿಗುವುದೆಂದರೆ ನಿಜಕ್ಕೂ ಕಲಾಭ್ಯಾಸಿಗಳ ಭಾಗ್ಯವೆನ್ನಬೇಕು. ಯಶಸ್ವೀ ಕಲಾವೃಂದದ ಕಲಾತ್ಮಕ ಯೋಚನೆಯ ಮಹತ್ವಪೂರ್ಣ ನಡೆಯಿದು. ತೆಂಕು ತಿಟ್ಟಿನ ಅಗ್ರಮಾನ್ಯ ಗುರುಗಳಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರ ಗುರುತನದಲ್ಲಿ ತರಗತಿಗಳು ನಡೆಯುವ ಸಂಗತಿ ಪ್ರಶಂಸನೀಯ.” ಎಂದರು. ಮಾಂಬಾಡಿಯವರನ್ನು ಅಭಿನಂದಿಸಿದ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ…
ಸಾಲಿಗ್ರಾಮ : ಸಾಲಿಗ್ರಾಮದ ಗುರುನರಸಿಂಹ ದೇವರ ವಾರ್ಷಿಕ ಅವಭೃತೋತ್ಸವದ ನಿಮಿತ್ತ ನಡುತಿಟ್ಟಿನ ಪ್ರಸಿದ್ಧ ಕಲಾವಿದ ಹೆಚ್. ಸುಜಯೀಂದ್ರ ಹಂದೆ ವಿರಚಿತ “ರಾಜ ದ್ರುಪದ” ಯಕ್ಷಗಾನ ಪ್ರದರ್ಶನವು ದಿನಾಂಕ 17 ಜನವರಿ 2025ರಂದು ಸಂಜೆ ಘಂಟೆ 5.00ಕ್ಕೆ ಕೋಟದ ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ನಾಗಪ್ಪಯ್ಯ ಹಂದೆ ರಂಗಮಂಟಪದಲ್ಲಿ ನಡೆಯಲಿದೆ. ಬೆಂಗಳೂರಿನ ಪ್ರಸಿದ್ಧ ತಂಡವಾದ ಯಕ್ಷಾಂಗಣ ಟ್ರಸ್ಟ್ ಇವರ ಸಹಕಾರದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಕಲಾಪೋಷಕರ ಹಾಗೂ ಸಾಹಿತಿಗಳಾದ ಹೆಚ್. ಜನಾರ್ದನ ಹಂದೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ತಾರಾನಾಥ ಹೊಳ್ಳ, ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ಅಧ್ಯಕ್ಷರಾದ ಅಮರ ಹಂದೆ, ಕಟ್ಟೆ ಗೆಳೆಯರು ಹಂದಟ್ಟು, ಕ್ರೀಯಾಶೀಲ ವ್ಯಕ್ತಿ ಸುರೇಶ ಪೂಜಾರಿ ಭಾಗವಹಿಸಲಿದ್ದಾರೆ. ಕೋಟ ಸುದರ್ಶನ ಉರಾಳರ ಸಂಯೋಜನೆಯಲ್ಲಿ ನಡೆಯುವ ಈ ಪ್ರದರ್ಶನದಲ್ಲಿ ಕಲಾವಿದರಾಗಿ ಲಂಬೋದರ ಹೆಗಡೆ, ರಾಘವೇಂದ್ರ ಹೆಗಡೆ, ಸುದೀಪ ಉರಾಳ, ಎಚ್. ಸುಜಯೀಂದ್ರ ಹಂದೆ, ಸಂಜೀವ ಹೆನ್ನಾಬೈಲು,…
ಕುಂದಾಪುರ : ಪ್ರೇರಣಾ ಯುವ ವೇದಿಕೆ ಇದರ ವತಿಯಿಂದ ‘ಪ್ರೇರಣೋತ್ಸವ 2025’ ಶ್ರೀ ಮೆಕ್ಕೆಕಟ್ಟು ಮೇಳ ಮತ್ತು ಅತಿಥಿ ಕಲಾವಿದರಿಂದ ಮಾರಣಕಟ್ಟೆ ಹಬ್ಬದ್ ಆಟವನ್ನು ದಿನಾಂಕ 14 ಜನವರಿ 2025ರಂದು ಸಂಜೆ 7-00 ಗಂಟೆಗೆ ಮಾರಣಕಟ್ಟೆ ಗೆದ್ದಿಬೈಲಗೆ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಯಕ್ಷಗಾನ ಕಾರ್ಯಕ್ರಮದಲ್ಲಿ ‘ಪಾರಿಜಾತ’, ‘ಗದಾಯುದ್ಧ’ ಮತ್ತು ‘ರಕ್ತರಾತ್ರಿ’ ಎಂಬ ಪ್ರಸಂಗಗಳ ಪ್ರದರ್ಶನ ನಡೆಯಲಿದ್ದು, ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ.
ಉಡುಪಿ : ತುಳುಕೂಟ ಉಡುಪಿ (ರಿ.) ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಭಾಗಿತ್ವದಲ್ಲಿ ದಿನಾಂಕ 05 ಜನವರಿ 2025ರಿಂದ 10 ಜನವರಿ 2025ರವೆರೆಗೆ ನಡೆದ 23ನೇ ವರ್ಷದ ಕೆಮ್ತೂರು ತುಳು ನಾಟಕ ಸ್ಪರ್ಧೆ -2025ರ ಪ್ರಶಸ್ತಿ ವಿಜೇತರು. ಎಲ್ಲಾ ವಿಜೇತರಿಗೂ ದೃಢಪತ್ರಿಕೆ ಮತ್ತು ಶಾಶ್ವತ ಫಲಕ ನೀಡಲಾಗುವುದು. ಶ್ರೇಷ್ಠ ನಾಟಕ – ಪ್ರಥಮ : ನಗದು ರೂ.20,000/-, ನಾಟಕ : ‘ಈದಿ’, ತಂಡ: ಸುಮನಸಾ ಕೊಡವೂರು (ರಿ.) ಉಡುಪಿ. ದ್ವಿತೀಯ : ನಗದು ರೂ.15,000/-, ನಾಟಕ : ‘ದಿ ಫೈಯರ್’, ತಂಡ : ಭೂಮಿಗೀತ ಸಾಂಸ್ಕೃತಿಕ ವೇದಿಕೆ, ಪಟ್ಲ ತೃತೀಯ : ನಗದು ರೂ.10,000/-, ನಾಟಕ : ‘ಸೋಕ್ರಟಿಸ್’, ತಂಡ: ರಂಗ ಮಿಲನ, ಮುಂಬಯಿ. ಶ್ರೇಷ್ಠ ನಿರ್ದೇಶನ – ಪ್ರಥಮ : ನಗದು ರೂ.1000/-, ವಿದ್ದು ಉಚ್ಚಿಲ್, ನಾಟಕ : ‘ಈದಿ’, ತಂಡ : ಸುಮನಸಾ ಕೊಡವೂರು (ರಿ). ಉಡುಪಿ. ದ್ವಿತೀಯ : ಸಂತೋಷ್ ನಾಯಕ್ ಪಟ್ಲ, ನಾಟಕ :…
ಉಪ್ಪಿನಕುದ್ರು : ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ (ರಿ.) ಮತ್ತು ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿ ಉಪ್ಪಿನಕುದ್ರು ಇವರ ಜಂಟಿ ಆಶ್ರಯದಲ್ಲಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ 10ನೇ ವಾರ್ಷಿಕೋತ್ಸವ ಸಮಾರಂಭವನ್ನು ದಿನಾಂಕ 19 ಜನವರಿ 2025ರಂದು ಅಪರಾಹ್ನ 2-00 ಗಂಟೆಗೆ ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭವನ್ನು ಕನ್ನಡ ಸಾಹಿತ್ಯ ಪರಿಷತ್ತು ಇದರ ಮಾಜಿ ಅಧ್ಯಕ್ಷರಾದ ಡಾ. ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪ್ರೊ. ಎಂ.ಎಲ್. ಸಾಮಗ ಇವರು ಉದ್ಘಾಟನೆ ಮಾಡಲಿರುವರು. ಇದೇ ಸಂದರ್ಭದಲ್ಲಿ ಬಹುಮುಖ ಪ್ರತಿಭೆ ಶ್ರೀ ಓಂ ಗಣೇಶ್ ಉಪ್ಪುಂದ ಇವರಿಗೆ ‘ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ -2025’ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಗುವುದು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ಮಹಿಳೆಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ವಿದ್ಯಾರ್ಥಿಗಳಿಂದ…
ಪುತ್ತೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಸರಣಿ ಕಾರ್ಯಕ್ರಮ ‘ನೃತ್ಯಾಂತರಂಗದ 118’ನೇ ಸರಣಿಯಲ್ಲಿ ಸಂಸ್ಥೆಯ ಗ್ರಾಮೀಣ ಶಾಖೆಯಾದ ಕೊಕ್ಕಡದ ಐವರು ವಿದ್ಯಾರ್ಥಿಗಳಾದ ಚಿರಂತನ, ಹೃದ್ಯ, ಅರ್ಚನಾ, ವರ್ಷಾ ಮತ್ತು ಶ್ರೀಹಿತ ಇವರು ದಿನಾಂಕ 22 ಡಿಸೆಂಬರ್ 2024ರಂದು ದರ್ಬೆಯ ಶಶಿಶಂಕರ ಸಭಾಂಗಣದಲ್ಲಿ ಭರತನಾಟ್ಯ ಕಾರ್ಯಕ್ರಮವನ್ನು ನೀಡಿ ಜನರ ಮೆಚ್ಚುಗೆ ಪಡೆದರು. ಈ ಕಾರ್ಯಕ್ರಮದ ಅಭ್ಯಾಗತರಾದ ಸಂಗೀತ ಗುರು ಶ್ರೀಮತಿ ಪದ್ಮಾವತಿ ಬಾಳ್ತಿಲ್ಲಾಯರು ಮಕ್ಕಳಿಗೆಲ್ಲ ಶುಭ ಹಾರೈಸಿದರು. ಕಾರ್ಯಕ್ರಮದ ಹಿಮ್ಮೇಳದಲ್ಲಿ ನಟುವಾಂಗದಲ್ಲಿ ಗುರು ದೀಪಕ್ ಕುಮಾರ್, ಹಾಡುಗಾರಿಕೆಯಲ್ಲಿ ವಿದುಷಿ ಪ್ರೀತಿಕಲಾ, ಮೃದಂಗದಲ್ಲಿ ವಿದ್ವಾನ್ ಶ್ಯಾಮ್ ಭಟ್ ಸುಳ್ಯ ಮತ್ತು ಕೊಳಲಿನಲ್ಲಿ ವಿದ್ವಾನ್ ಕೃಷ್ಣಗೋಪಾಲ್ ಪುಂಜಾಲಕಟ್ಟೆ ಕಾರ್ಯಕ್ರಮಕ್ಕೆ ಮೆರಗು ನೀಡಿದರು. ಶ್ರೀಮತಿ ಶಶಿಪ್ರಭಾ ಮತ್ತು ವಿದ್ವಾನ್ ಗಿರೀಶ್ ಕುಮಾರ್ ಸಹಕರಿಸಿದ್ದರು.
ಉಡುಪಿ : ರಾಗ ಧನ ಉಡುಪಿ (ರಿ.) ಮತ್ತು ಸರಿಗಮ ಭಾರತಿ ಸಂಗೀತ ವಿದ್ಯಾಲಯ (ರಿ.) ಪರ್ಕಳ ಇವುಗಳ ಜಂಟಿ ಆಶ್ರಯದಲ್ಲಿ ರಾಗರತ್ನಮಾಲಿಕೆ – 33ನೇ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯು ದಿನಾಂಕ 19 ಜನವರಿ 2025ರಂದು ಅಪರಾಹ್ನ ಗಂಟೆ 2-15ಕ್ಕೆ ಪರ್ಕಳ ಕುಕ್ಕುದಕಟ್ಟೆ ಸರಿಗಮ ಭಾರತಿ ಸಂಗೀತ ವಿದ್ಯಾಲಯದ ಸಭಾಂಗಣ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಉದ್ಯಾವರ ಜಯಂತಿ ಮಾಧವ ಆಚಾರ್ಯ ಉಡುಪಿ ಇವರ ಸಹಕಾರದೊಂದಿಗೆ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಮೊದಲಿಗೆ ಅಥರ್ವ ದೀಪರಾಜ ಹೆಗ್ಡೆಯವರಿಂದ ಹಾಡುಗಾರಿಕೆ, ಅನುಶ್ರೀ ಮಳಿ ಇವರಿಂದ ವಯೊಲಿನ್, ಅದ್ವೈತ ಕೃಷ್ಣ ಬಿ. ಇವರಿಂದ ಮೃದಂಗ ವಾದನ ನಡೆಯಲಿದೆ. ಅಪರಾಹ್ನ 3-30 ಗಂಟೆಗೆ ಶ್ರೀಮತಿ ಶುಭಾ ಶಿವಕುಮಾರ್ ಅಳಿಕೆ ಇವರ ಹಾಡುಗಾರಿಕೆಗೆ ವಯೊಲಿನ್ನಲ್ಲಿ ವಿಶ್ವಾಸ್ ಕೃಷ್ಣ ಮಂಗಳೂರು, ಮೃದಂಗದಲ್ಲಿ ಶ್ರೀ ಪನ್ನಗ ಶರ್ಮನ್ ಶೃಂಗೇರಿ ಸಹಕರಿಸಲಿದ್ದಾರೆ ಎಂದು ರಾಗ ಧನ ಸಂಸ್ಥೆಯ ಕಾರ್ಯದರ್ಶಿ ಉಮಾಶಂಕರಿ ತಿಳಿಸಿದ್ದಾರೆ.