Author: roovari

ಶಿವಮೊಗ್ಗ : ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ (ರಿ.) ಶಿವಮೊಗ್ಗ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ವೃತ್ತಿಪರ ಕಾಲೇಜು ಬಾಲಕರ ವಿದ್ಯಾರ್ಥಿ ನಿಲಯ ಗಾಡಿಕೊಪ್ಪ ಶಿವಮೊಗ್ಗ ಇವರ ಸಹಯೋಗದಲ್ಲಿ 239ನೇ ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮವನ್ನು ದಿನಾಂಕ 10 ಜುಲೈ 2025ರಂದು ಸಂಜೆ 6-00 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ವೃತ್ತಿಪರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್. ಹೇಮಂತ್ ಐ.ಎ.ಎಸ್. ಇವರು ಉದ್ಘಾಟನೆ ಮಾಡಲಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷರಾದ ಡಿ. ಮಂಜುನಾಥ ಇವರು ಅಧ್ಯಕ್ಷತೆ ವಹಿಸಲಿರುವರು. ಹಿರಿಯ ಸಾಹಿತಿ ಡಾ. ಶಾಂತಾರಾಮ ಪ್ರಭುಗಳು ಮಾತು – ಮಂಥನ ಕಾರ್ಯಕ್ರಮ ನಡೆಸಲಿದ್ದು, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಲ್ಲೇಶಪ್ಪ ಡಿ. ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕೆ.ಎಸ್. ಮಂಜಪ್ಪ, ಶ್ರೀಮತಿ ನಳಿನಾಕ್ಷಿ, ಶ್ರೀಮತಿ ಸವಿತಾ, ಶ್ರೀಮತಿ ನಳಿನಿ ನಾರಾಯಣ ಇವರಿಂದ ಹಾಡು, ಕುಮಾರಿ ಗೌರಿಶ್ರೀ, ವಾಗೀಶ್ ಆರಾಧ್ಯ ಮಠ,…

Read More

ಮಡಿಕೇರಿ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ಕಥೆ ಮತ್ತು ಲಲಿತ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಕಥೆ ಮತ್ತು ಲಲಿತ ಪ್ರಬಂಧ ಸ್ವಂತ ರಚನೆಯಾಗಿರಬೇಕು. ಪ್ರಕಟಿತ ಮತ್ತು ಅನುವಾದಿತ ಬರಹಗಳಿಗೆ ಅವಕಾಶವಿಲ್ಲ. ಕಥೆ, ಲಲಿತ ಪ್ರಬಂಧ ಒಂದು ಸಾವಿರ ಪದಗಳನ್ನು ಮೀರಬಾರದು. ಹೊಸ ಆಲೋಚನೆ, ಹೊಸ ಹೊಳಹುಗಳ ಬರಹವಾಗಿರಬೇಕು. ಕಥಾ ವಿಭಾಗ ಹಾಗೂ ಲಲಿತ ಪ್ರಬಂಧ ವಿಭಾಗಗಳಲ್ಲಿ ಪ್ರಥಮ ಬಹುಮಾನ ರೂ.3 ಸಾವಿರ, ದ್ವಿತೀಯ ಬಹುಮಾನ ರೂ.2 ಸಾವಿರ, ತೃತೀಯ ಬಹುಮಾನ ರೂ.1 ಸಾವಿರ ಒಳಗೊಂಡಿದೆ. ಒಬ್ಬರೇ ಎರಡೂ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿದ್ದು, ಬರಹ ಕಳಿಸಲು ದಿನಾಂಕ 04 ಆಗಸ್ಟ್ 2025 ಅಂತಿಮ ದಿನವಾಗಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ತಿಳಿಸಿದ್ದಾರೆ.

Read More

ಮಂಗಳೂರು : ಕಲಾಭಿ ಥಿಯೇಟರ್ ಮತ್ತು ಚೌಕಿ ಮನೆ ಟ್ರಸ್ಟ್ ಪ್ರಸ್ತುತ ಪಡಿಸುವ ‘ನಿಮ್ಮೊಳಗಿನ ಜಗತ್ತು’ ಕಲ್ಪನೆಯ ಕುರಿತು ನಟನಾ ಕಾರ್ಯಾಗಾರವನ್ನು ದಿನಾಂಕ 21ರಿಂದ 26 ಜುಲೈ 2025ರವೆರೆಗೆ ಪ್ರತಿದಿನ ಸಂಜೆ 6-00ರಿಂದ 9-00 ಗಂಟೆ ತನಕ ಮಂಗಳೂರಿನ ಬೊಂದೇಲ್ ಪಡುಶೆಡ್ಡೆ ರೋಡಿನಲ್ಲಿರುವ ಕಲಾಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆ ಮತ್ತು ಹೆಗ್ಗೋಡು ನೀನಾಸಂ ಇದರ ಹಳೆಯ ವಿದ್ಯಾರ್ಥಿ ಮಂಜು ಕಾಸರಗೋಡು ಇವರು ಈ ಕಾರ್ಯಾಗಾರವನ್ನು ನಡೆಸಿಕೊಡಲಿದ್ದು, ಹೆಚ್ಚಿನ ಮಾಹಿತಿಗಾಗಿ ಹಾಗೂ ನೋಂದಾವಣೆಗೆ 84316 31998 ಸಂಖ್ಯೆಯನ್ನು ಸಂಪರ್ಕಿಸಿರಿ.

Read More

ಪುತ್ತೂರು : ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನ ಪುತ್ತೂರು ಇವರ ಆಶ್ರಯದಲ್ಲಿ ಉಜಿರೆಯ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಇವರ ವತಿಯಿಂದ ಹಾಸ್ಯಗಾರ ಪೆರುವಡಿ ನಾರಾಯಣ ಭಟ್ ಸಂಸ್ಮರಣೆ, ‘ಕುರಿಯ ವಿಠಲ ಶಾಸ್ತ್ರಿ’ ಪ್ರಶಸ್ತಿ ಪ್ರದಾನ ಮತ್ತು ತಾಳಮದ್ದಳೆ ಸಪ್ತಾಹದ ಸಮಾರೋಪ ಸಮಾರಂಭವು ದಿನಾಂಕ 06 ಜುಲೈ 2025ರಂದು ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಕಲಾ ಮಂದಿರದಲ್ಲಿ ಜರಗಿತು. ಈ ಸಮಾರಂಭದಲ್ಲಿ ಎಡನೀರು ಮಠಾಧೀಶ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಆಶೀರ್ವಚನ ನೀಡುತ್ತಾ “ಓರ್ವ ಕಲಾವಿದ ಸಮಾಜಮುಖಿಯಾಗಿ, ಕಲಾತ್ಮಕವಾಗಿ ಹೇಗೆ ಬದುಕಬೇಕೆನ್ನುವುದನ್ನು ಹಾಸ್ಯಗಾರ ದಿ. ಪೆರುವಡಿ ನಾರಾಯಣ ಭಟ್ಟರು ಬದುಕಿ ತೋರಿಸಿದ್ದರು. ಒಂದು ಪ್ರಶಸ್ತಿಯನ್ನು ಸ್ಥಾಪಿಸುವುದು. ಅದಕ್ಕೆ ಕಲಾವಿದನನ್ನು ಆಯ್ಕೆ ಮಾಡುವಲ್ಲಿ ಬದ್ಧತೆ ಮುಖ್ಯ. ಹಾಗೆ ಆಯ್ಕೆ ಮಾಡಿದ ಕಲಾವಿದದ ಬದುಕು ಕೂಡಾ ಆದರ್ಶವಾಗಿರಬೇಕು. ಈ ಎಲ್ಲಾ ವಿಚಾರಗಳನ್ನು ಗಣನೆಗೆ ತೆಗೆದುಕೊಂಡು ಉಜಿರೆಯ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಚಾಲಕ ಉಜಿರೆ ಅಶೋಕ ಭಟ್ಟರು…

Read More

ಕಾಸರಗೋಡು : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕ ಮತ್ತು ಕಾಸರಗೋಡು ಕನ್ನಡ ಭವನದ ಕೊಡಗು ಜಿಲ್ಲಾ ಘಟಕ ಸಂಯುಕ್ತಾಶ್ರಯದಲ್ಲಿ ‘ಕೊಡಗು ಮಳೆಗಾಲ ಚುಟುಕು ಕವಿಗೋಷ್ಠಿ’, ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮವು ದಿನಾಂಕ 06 ಜುಲೈ 2025ರಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಕೇರಳ ರಾಜ್ಯ-ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕ ಅಧ್ಯಕ್ಷರಾದ ಕವಿ, ಸಾಹಿತಿ, ವ್ಯಂಗ್ಯ ಚಿತ್ರಕಾರ, ಪತ್ರಕರ್ತ ಶ್ರೀ ವಿರಾಜ್ ಅಡೂರ್ ಹಾಗೂ ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಇದರ ಪ್ರದಾನ ಕಾರ್ಯದರ್ಶಿಯಾದ ಸಂಘಟಕ, ಕಲಾವಿದ, ಫೋಟೋಗ್ರಾಫರ್ಸ್ ಅಸೋಶಿಯಷನ್ ಪದಾಧಿಕಾರಿಯಾದ ಶ್ರೀ ವಸಂತ್ ಕೆರೆಮನೆ ಇವರನ್ನು ಮಡಿಕೇರಿಯ ಪತ್ರಿಕಾ ಭವನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಕೊಡಗು ಕನ್ನಡ ಭವನ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಇವರ ಅದ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕೇರಳ ರಾಜ್ಯ – ಕನ್ನಡ ಚುಟುಕು…

Read More

ಮಂಗಳೂರು : ಸಂಕೇತ ಮಂಗಳೂರು ಮತ್ತು ಸಿಂಗಾರ ಸುರತ್ಕಲ್ ಸಹಯೋಗದಲ್ಲಿ ಮಾಧವ ತಿಂಗಳಾಯ ಜನ್ಮ ದಿನದ ನೆನಪು ಕಾರ್ಯಕ್ರಮ ದಿನಾಂಕ 03 ಜುಲೈ 2025ರಂದು ಮಂಗಳೂರಿನ ಹೊಯಿಗೆಬಜಾರಿನಲ್ಲಿರುವ ಇಂದಿರಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿಯ ಅಧ್ಯಕ್ಷರಾದ ತಾರನಾಥ ಗಟ್ಟಿ ಮಾತನಾಡಿ “ಜನಸಾಮಾನ್ಯರಿಗೆ ಸಾಮಾಜಿಕ ಅರಿವು ಮೂಡಿಸುವ ನಿಟ್ಟಿನಲ್ಲಿ ನಾಟಕ ಕಲೆಯನ್ನು ಪರಿಣಾಮಕಾರಿಯಾಗಿ ಬಳಸಿದ ಮಾಧವ ತಿಂಗಳಾಯರು ತುಳುನಾಡಿನ ಮೊದಲ ನಾಟಕಗಾರರಾಗಿದ್ದಾರೆ. ಅವರ ‘ಜನಮರ್ಲ್’ ನಾಟಕವು ತುಳು ಭಾಷೆಯ ಮೊದಲ ಪ್ರಕಟಿತ ನಾಟಕವಾಗಿದ್ದು ಐತಿಹಾಸಿಕ ಮಹತ್ವವನ್ನು ಹೊಂದಿದೆ. ಯುವ ಜನತೆ ಯಲ್ಲಿ ತುಳು ಸಾಹಿತ್ಯದ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತುಳುನಾಡಿನ ಹಿರಿಯ ಸಾಧಕರನ್ನು ನೆನಪಿಸುವ ಕಾರ್ಯಕ್ರಮ ನಿರಂತರವಾಗಿ ಮಾಡಬೇಕು” ಎಂದರು. ಸಾಹಿತಿ ಪ್ರೇಮಚಂದ್ರ ಕೆ. ತಿಂಗಳಾಯ ಮಾತನಾಡಿ “ಹಿರಿಯ ಸಮಾಜ ಸುಧಾರಕ ಮೋಹನಪ್ಪ ತಿಂಗಳಾಯ, ಕೃಷ್ಣಪ್ಪ ತಿಂಗಳಾಯ ಮತ್ತು ಮಾಧವ ತಿಂಗಳಾಯರು ಶ್ರೀ ಜ್ಞಾನೋದಯ ಸಮಾಜದ ಮೂಲಕ ಸಾಮಾಜಿಕ ಪರಿವರ್ತನೆಗಾಗಿ ಮಾಡಿದ ಕಾರ್ಯಗಳು ಅನನ್ಯವಾದವುಗಳು”…

Read More

ಬೆಂಗಳೂರು : ರಾಮಕೃಷ್ಣ ಮಠ, ಬುಲ್ ಟೆಂಪುಲ್ ರಸ್ತೆ, ಬಸವನಗುಡಿ ಬೆಂಗಳೂರು ಇವರು ಪ್ರಸ್ತುತ ಪಡಿಸುವ ‘ರಾಮಕೃಷ್ಣ ಸಂಗೀತ ಸೌರಭ’ ಕಾರ್ಯಕ್ರಮವನ್ನು ದಿನಾಂಕ 11, 12 ಮತ್ತು 13 ಜುಲೈ 2025ರಂದು ಪ್ರತಿ ದಿನ ಸಂಜೆ 6-00 ಗಂಟೆಗೆ ಬೆಂಗಳೂರಿನ ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ದಿನಾಂಕ 11 ಜುಲೈ 2025ರಂದು ಪಂಡಿತ್ ವೆಂಕಟೇಶ್ ಕುಮಾರ ಇವರ ಹಿಂದೂಸ್ತಾನಿ ಶಾಸ್ತ್ರೀಯ ಗಾಯನಕ್ಕೆ ಪಂಡಿತ್ ರಘುನಾಥ ನಾಕೋಡ್ ಇವರು ತಬಲಾ ಮತ್ತು ಪಂಡಿತ್ ವ್ಯಾಸಮೂರ್ತಿ ಕಟ್ಟಿ ಇವರು ಹಾರ್ಮೋನಿಯಂ ಸಾಥ್ ನೀಡಲಿದ್ದಾರೆ. ದಿನಾಂಕ 12 ಜುಲೈ 2025ರಂದು ವಿದ್ವಾನ್ ಡಿ. ಬಾಲಕೃಷ್ಣ ಇವರ ಕರ್ಣಾಟಕ ಸಂಗೀತ ವೀಣಾ ವಾದನಕ್ಕೆ ವಿದ್ವಾನ್ ವಿ. ವಂಶಿಧರ ಕೊಳಲು, ವಿದ್ವಾನ್ ಬಿ.ಎಸ್. ಪ್ರಶಾಂತ ಮೃದಂಗಂ ಹಾಗೂ ವಿದ್ವಾನ್ ಶಮಿತ್ ಗೌಡ ಘಟಂನಲ್ಲಿ ಸಹಕರಿಸಲಿದ್ದಾರೆ. ದಿನಾಂಕ 13 ಜುಲೈ 2025ರಂದು ಕುಮಾರ್ ಮೋದಕ ಮತ್ತು ವೃಂದದವರಿಂದ ಗಾಯನ, ಕುಮಾರ್ ಪ್ರದ್ಯುಮ್ನ ಕರ್ಪೂರ್ ತಬಲಾ ಸೋಲೋ ಮತ್ತು…

Read More

ಸುರತ್ಕಲ್ : ಸುರತ್ಕಲ್ ಇಲ್ಲಿನ ಗೋವಿಂದದಾಸ ಕಾಲೇಜಿನ ಪಿ. ಯು. ಸಿ. ವಿಭಾಗದ ವತಿಯಿಂದ ಸಾಹಿತ್ಯ ಸಂಘದ ಉದ್ಘಾಟನಾ ಸಮಾರಂಭವು ದಿನಾಂಕ 05 ಜುಲೈ 2025ನೇ ಶನಿವಾರದಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ “ಮರಕ್ಕೆ ಬೇರಿನಲ್ಲಿ ಆ ಜೀವ ಶಕ್ತಿ ಹೇಗೋ ಹಾಗೆಯೇ ಮನುಷ್ಯರ ಧನಾತ್ಮಕ ಆಲೋಚನಾ ಶಕ್ತಿಯಲ್ಲಿ ಜೀವಶಕ್ತಿ ಇದೆ. ಸಮುದ್ರದ ಆಳದಲ್ಲಿ ಮುತ್ತುರತ್ನಗಳಿರುವಂತೆ ಸುಪ್ತ ಮನಸ್ಸಿನಲ್ಲಿ ಅದಮ್ಯ ಶಕ್ತಿ ಇದೆ. ಅದನ್ನರಿತು ಉತ್ಸಾಹ ತುಂಬಿದ ಜೀವನದೊಂದಿಗೆ ಸಾಹಿತ್ಯಾಭಿರುಚಿಯನ್ನು ಬೆಳೆಸಿರಿ. ಓದುವ ಹವ್ಯಾಸದೊಂದಿಗೆ ಸಾಹಿತ್ಯ ಚಟುವಟಿಕೆಗಳಲ್ಲಿ ಭಾಗವಹಿಸಿ, ಶ್ರೇಯಸ್ಸಾಗಲಿ” ಎಂದು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಲಕ್ಷ್ಮೀ ಪಿ. ಮಾತನಾಡಿ “ಸಾಹಿತ್ಯ-ಬದುಕಿನ ಉಸಿರು, ಅದ್ದರಿಂದ ಕವಿ ಹೃದಯವುಳ್ಳ ವಿದ್ಯಾರ್ಥಿಗಳೇ, ತಮ್ಮ ಬರವಣಿಗೆಯನ್ನು ಸಾಹಿತ್ಯ ಸಂಘದ ಮೂಲಕ ಪ್ರಾರಂಭಿಸಿ ಯಶಸ್ಸನ್ನು ಗಳಿಸಿ” ಎಂದು ನುಡಿದರು. ಉಪಪ್ರಾಂಶುಪಾಲೆ ಸುನೀತಾ ಕೆ., ವಿದ್ಯಾರ್ಥಿ ಕ್ಷೇಮಪಾಲ ವೆಂಕಟರಮಣ, ಸಾಹಿತ್ಯ ಸಂಘಸ ಸಂಯೋಜಕಿ ಜಯಂತಿ ಅಮೀನ್, ವಿದ್ಯಾರ್ಥಿನಿ ಕಾರ್ಯದರ್ಶಿ ಶರಣ್ಯ…

Read More

ನಗರಗಳ ಧಾವಂತದಿಂದ ದೂರವಿರುವ ಪುಟ್ಟ ಮಲೆನಾಡಿನ ಆ ಹಳ್ಳಿಯಲ್ಲಿ ಇರುವುದು ಕೇವಲ ಕೆಲವು ಮನೆಗಳು. ಜನಸಂಖ್ಯೆ ವಿರಳವಾದರೂ, ಇಲ್ಲಿನ ಜನರ ಸಾಂಸ್ಕೃತಿಕ ಚಟುವಟಿಕೆಗಳತ್ತ ಮನಸ್ಸು ಯಾವಾಗಲೂ ಹರಿಯುತ್ತಿರುವುದು ವಿಶಿಷ್ಟವಾಗಿದೆ. ಕೃಷಿಯೇ ಜೀವಾವಲಂಬನೆಯಾದ ಈ ಹಳ್ಳಿಯ ಜನರಿಗೆ ಯಕ್ಷಗಾನವೆಂದರೆ ಅತೀವಾಸಕ್ತಿ. ಅದಿಲ್ಲದ ಬದುಕನ್ನು ಊಹಿಸಲು ಸಾಧ್ಯವಿಲ್ಲವೆಂದರೆ ಅತಿಶಯವಲ್ಲ. ಇಂತಹ ಮನಸ್ಥಿತಿಯಲ್ಲಿ ಮಲೆನಾಡಿಗೆ ಅನ್ವಯವಾಗಿ ವರ್ಷದಲ್ಲಿ ನಾಲ್ಕು ತಿಂಗಳುಗಳ ಕಾಲ ಸುರಿಯುವ ನಿರಂತರ ಮಳೆ, ಇವರನ್ನು ಪ್ರೀತಿಯ ಕಲಾ ಚಟುವಟಿಗಳಿಂದ ದೂರ ಇಡುತ್ತದೆ. ಆ ಸಮಯದಲ್ಲಿ ಪರ್ಯಾಯವಾಗಿ ಮನೆಯಲ್ಲಿ ನಡೆಸಬಹುದಾದ ಕಲಾ ಚಟುವಟಿಕೆಗಳತ್ತ ಇವರ ಮುಖವಾಗುವುದು ಸಹಜ. ಈ ಹಿನ್ನಲೆಯಲ್ಲಿ ಯಕ್ಷಗಾನದ ಇನ್ನೊಂದು ಶಾಖೆಯಾದ ತಾಳಮದ್ದಲೆ ಮನೆಯೊಳಗಡೆ ಕಥಾಶ್ರವಣ ರೂಪದಲ್ಲಿ ಆರಂಭವಾಗಿರಬಹುದು ಎಂದು ಊಹಿಸಬಹುದು. ಅದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅರಳಗೋಡು ಗ್ರಾಮದಲ್ಲಿ ಇರುವ ಐತುಮನೆ ಪುಟ್ಟ ಕುಟುಂಬ. ಇಲ್ಲಿ ನಡೆಯುವ ಮನೆಯ ತಾಳಮದ್ದಲೆಗೆ ಭವ್ಯ ಇತಿಹಾಸವಿದೆ. ಹಲವು ದಶಕಗಳನ್ನು ದಾಟಿ ಈ ತಾಳಮದ್ದಲೆಯು ಸುಮಾರು ಎರಡು ಶತಮಾನಗಳಿಂದ ಪ್ರತಿ ವರ್ಷ ಆಷಾಢ…

Read More

ಮಡಿಕೇರಿ : ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪ್ರಶಸ್ತಿಗೆ ಭಾಜನರಾದ ಮೂಕೊಂಡ ನಿತಿನ್ ಕುಶಾಲಪ್ಪ ಇವರನ್ನು ಕೊಡಗು ಕನ್ನಡ ಭವನ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು. ಸಾಲು ಮರದ ತಿಮ್ಮಕ್ಕ ಪಾರ್ಕ್ ಸಮೀಪದ ಖಾಸಗಿ ಕೆಫೆ ಸಭಾಂಗಣದಲ್ಲಿ ದಿನಾಂಕ 04 ಜುಲೈ 2025ರಂದು ನಡೆದ ಕಾರ್ಯಕ್ರಮದಲ್ಲಿ ಕನ್ನಡ ಭವನದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಅಧ್ಯಕ್ಷೆ ಎಂ.ಎ. ರುಬೀನಾ ಹಾಗೂ ಪದಾಧಿಕಾರಿಗಳು ಸನ್ಮಾನಿಸಿ, ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಮೂಕೊಂಡ ನಿತಿನ್ ಕುಶಾಲಪ್ಪ ಅವರು, “ಮಕ್ಕಳಿಗಾಗಿ ದಕ್ಷಿಣ ಜನಪದ ಕತೆಗಳ ಕುರಿತು ಬರೆದ ಪಫಿನ್ ಬುಕ್ಸ್ ಪ್ರಕಟಿತ “ನೌತ್ ಇಂಡಿಯನ್ ಮಿಥ್ಸ್ ಅಂಡ್ ಫೇಬಲ್ಸ್ ರಿಟೋಲ್ಡ್’ ಇಂಗ್ಲೀಷ್ ಕೃತಿಗೆ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಬಾಲ ಸಾಹಿತ್ಯ ಪುರಸ್ಕಾರ ಲಭಿಸಿದೆ. ಕರ್ನಾಟಕದಿಂದ ಮೂರು ಹೆಸರು ಬಂದಿದ್ದು, ಕನ್ನಡ ಸಾಹಿತ್ಯದಲ್ಲಿ ಇಬ್ಬರು ಹಾಗೂ ಇಂಗ್ಲೀಷ್ ಸಾಹಿತ್ಯದಲ್ಲಿ ತನಗೆ ಲಭಿಸಿರುವುದಾಗಿ ತಿಳಿಸಿದರು.…

Read More