Author: roovari

ಕನ್ನಡ ಸಾರಸ್ವತ ಲೋಕ ಕಂಡಂತಹ ಅತ್ಯಂತ ಅಪರೂಪದ ಮತ್ತು ಅನರ್ಘ್ಯ ರತ್ನ ಬೀಚೀ ಅಂದರೆ ಅತಿಶಯೋಕ್ತಿಯಾಗದು. ಕನ್ನಡ ಸಾಹಿತ್ಯ ಲೋಕದಲ್ಲಿ ಕರ್ನಾಟಕದ ‘ಜಾರ್ಜ್ ಬರ್ನಾಡ್ಷಾಘ’ ಎಂಬ ಬಿರುದನ್ನು ಅವರು ಪಡೆದಿದ್ದರು. ಅತ್ಯಂತ ಮಾರ್ಮಿಕನಾಗಿ, ಸಂವೇದನಾಶೀಲರಾಗಿ ಮತ್ತು ಚುರುಕು ಮುಟ್ಟಿಸುವ ರೀತಿಯಲ್ಲಿ ಭಾಷೆಯನ್ನು ಬಳಸಿದ ಕೆಲವೇ ಕೆಲವು ಅಗ್ರಗಣ್ಯ ಹಾಸ್ಯ ಕವಿಗಳಲ್ಲಿ ಬೀಚೀಯವರೂ ಒಬ್ಬರು. ಅವರ ಪೂರ್ತಿ ಹೆಸರು ರಾಯಸಂ ಭೀಮಸೇನ ರಾವ್ ಎಂಬುದಾಗಿದೆ. ಆದರೆ ಅವರ ಕಾವ್ಯನಾಮ ಎಷ್ಟು ಚಿರಪರಿಚಿತವಾಗಿದೆ ಎಂದರೆ ಅವರ ಮೂಲ ಹೆಸರನ್ನು ಎಲ್ಲರೂ ಮರೆತು ಹೋಗುವಷ್ಟರ ಮಟ್ಟಿಗೆ ಅವರು ‘ಬೀಚೀ’ ಎಂಬ ಹೆಸರಿನಿಂದ ಪ್ರಸಿದ್ದರಾಗಿದ್ದರು. ಕನ್ನಡದ ಬಗ್ಗೆ ಅಪರಿಮಿತವಾದ ಗೌರವ ಮತ್ತು ಪ್ರೀತಿ ಇದ್ದ ಕಾರಣದಿಂದ ತಮ್ಮ ಕಾವ್ಯನಾಮ ‘ಬೀಚೀ’ ಬದಲಾಗಿ ‘ಬೀchi’ ಎಂದು ಬರೆದು ನಾನು ಇಂಗ್ಲೀಷಿಗಿಂತ ಕನ್ನಡಕ್ಕೇ ಆದ್ಯತೆ ನೀಡುತ್ತೇನೆ ಎಂದು ಪರೋಕ್ಷವಾಗಿ ಓದುಗರಿಗೆ ಮತ್ತು ನಾಡಿನ ಜನರಿಗೆ ಸಂದೇಶ ನೀಡಿದ್ದರು. 1913 ಏಪ್ರಿಲ್ 23ರಂದು ಹರಪನ ಹಳ್ಳಿಯಲ್ಲಿ (ಈಗಿನ ವಿಜಯನಗರ ಜಿಲ್ಲೆ) ಜನಿಸಿ,…

Read More

ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ದಿನಾಂಕ 29-04-2024ರಂದು ಸಂಜೆ ಗಂಟೆ 6.25ಕ್ಕೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಬೆಂಗಳೂರಿನ ವಿದುಷಿ ಸ್ಮೃತಿ ಸುರೇಶ್ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ. ಸ್ಮೃತಿ ಸುರೇಶ್ ಇವರು ಶಾಸ್ತ್ರೀಯ ನೃತ್ಯ ಅಭ್ಯಾಸವನ್ನು ತಮ್ಮ ಎಂಟನೇ ವಯಸ್ಸಿನಲ್ಲಿ ಚೆನ್ನೈನ ‘ಕಲಾಕ್ಷೇತ್ರ’ದ ಹಿರಿಯ ವಿದ್ಯಾರ್ಥಿನಿಯಾದ, ಗುರು ಶ್ರೀಮತಿ ಶ್ರೀವಿದ್ಯಾ ಆನಂದರಲ್ಲಿ ಆರಂಭಿಸಿ, ಶಾಲಾ ಕಾಲೇಜುಗಳಲ್ಲಿ ಅನೇಕ ಕಾರ್ಯಕ್ರಮ ನೀಡುತ್ತಾ ಬಂದಿದ್ದಾರೆ. ‘ಕಲಾಕ್ಷಿತಿ ನೃತ್ಯಶಾಲೆ’ ಯ ಸಂಸ್ಥಾಪಕರಾದ ಡಾ. ಕೃಷ್ಣಮೂರ್ತಿಯವರ ಗರಡಿಯಲ್ಲಿ ನೃತ್ಯ ಅಭ್ಯಾಸ ಮಾಡುತ್ತಿದ್ದು, ಗುರುಗಳ ನೇತೃತ್ವದಲ್ಲಿ ಸ್ಮೃತಿ ಕಲಾಕ್ಷಿತಿ ಶಾಲೆಯ ಪ್ರಸ್ತುತಿಗಳಾದ, ‘ಗೋಕುಲ ನಿರ್ಗಮನ’, ‘ಅಕ್ಕ ಮಹಾದೇವಿ’, ‘ರುಕ್ಮಿಣಿ ದೇವಿ ಅರುಂಡೇಲ್ ರ ಹುಟ್ಟುಹಬ್ಬ’ ಹಾಗೂ ಇನ್ನೂ ಹಲವಾರು ಪ್ರತಿಷ್ಠಿತ ವೇದಿಕೆಗಳಲ್ಲಿಯೂ ಕಾರ್ಯಕ್ರಮ…

Read More

ಸಕಲೇಶಪುರ : ರಂಗಭೂಮಿಯಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ಇರುವವರಿಗೊಂದು ಸದವಕಾಶ. ರಾಜ್ಯ, ಅಂತರ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಹಾಗೂ ನೀನಾಸಂ ಪದವೀಧರರು, ಸಿನಿಮಾ ನಟರುಗಳಿಂದ ಶಿಬಿರದ ತರಗತಿಗಳು ನಡೆಯುತ್ತವೆ. ದಿನಾಂಕ 01-05-2024ರಿಂದ 15-05-2024ರವರೆಗೆ ಸಕಲೇಶಪುರದ ರಕ್ಷಿದಿಯಲ್ಲಿ ಬೆಳಿಗ್ಗೆ ಗಂಟೆ 6-00ರಿಂದ ರಾತ್ರಿ 9-00ರವರೆಗೆ ಈ ನಡೆಯಲಿರುವ ಈ ರಂಗ ಶಿಬಿರದಲ್ಲಿ ಛಾಯಾಗ್ರಹಣ, ಚಾರಣ, ಸಾಹಿತ್ಯ, ಅಭಿನಯ ಮತ್ತು ನಾಟಕ ಪ್ರದರ್ಶನಗಳ ಮಾಹಿತಿ ನೀಡಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಕೃಷ್ಣಮೂರ್ತಿ ಹನೂರು, ಡಾ.ಶ್ರೀಪಾದ ಭಟ್, ಮೌನೇಶ್ ಬಡಿಗೇರ, ಕೇಸರಿ ಹರವು, ಪ್ರಸಾದ್ ರಕ್ಷಿದಿ, ವಿನ್ಯಾಸ ಉಬರಡ್ಕ, ಲೋಕೇಶ್ ಮೊಸಳೆ, ಮನು, ರತ್ನ ಸಕಲೇಶಪುರ ಮತ್ತು ಸಂತೋಷ್ ದಿಂಡಿಗನೂರು ಭಾಗವಹಿಸಲಿದ್ದಾರೆ. ದಿನಾಂಕ 15-05-2024ರಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ನಟ, ನಿರ್ದೇಶಕರು ಮತ್ತು ಚಿಂತಕರು ಪ್ರಕಾಶ್ ರಾಜ್ ಇವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದು, ಇದೇ ಸಂದರ್ಭದಲ್ಲಿ ಶಿಬಿರಾರ್ಥಿಗಳಿಂದ ನಾಟಕ ಪ್ರದರ್ಶನ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ : ಪ್ರಸಾದ್ ರಕ್ಷಿದಿ 9448825701…

Read More

ಹಂದಟ್ಟು : ಮಯ್ಯ ಯಕ್ಷ ಬಳಗ ಹಾಲಾಡಿ, ವಿವಾಹ ಸಂಪರ್ಕ ವೇದಿಕೆ, ಗೆಳೆಯರ ಬಳಗ ಯುವಕ ಸಂಘ (ರಿ.), ದಾನಗುಂದು ಹಂದಟ್ಟು, ಬಾರಿಕೆರೆ ಯುವಕ ಮಂಡಲ (ರಿ.) ಮತ್ತು ಅಭಿಮಾನ್ ಫ್ರೆಂಡ್ಸ್ ನಾಗಬನ ಹಂದಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ಸಮಾಜಮುಖಿ ಬದುಕಿನ ಸಂತೃಪ್ತ ಸಾಧಕ ಯಕ್ಷಾರಾಧಕ ಹಂದಟ್ಟು ಸೂರ್ಯನಾರಾಯಣ ಉರಾಳ ಇವರಿಗೆ ಸನ್ಮಾನ ಕಾರ್ಯಕ್ರಮವು ದಿನಾಂಕ 01-05-2024ರಂದು ಸಂಜೆ 7.00ರಿಂದ ಉರಾಳರಕೇರಿ ಹಂದಟ್ಟು ಇಲ್ಲಿ ನಡೆಯಲಿದೆ. ಈ ಕಾರ್ಯಕ್ರಮವು ಉಪನ್ಯಾಸಕರಾದ ಶ್ರೀ ಬಾಲಕೃಷ್ಣ ನಕ್ಷತ್ರಿ ಮತ್ತು ನಿವೃತ್ತ ಅಧ್ಯಾಪಕರಾದ ಶ್ರೀ ಶ್ರೀಪತಿ ಹೇರ್ಳೆ ಇವರ ಗೌರವ ಉಪಸ್ಥಿತಿಯಲ್ಲಿ ನಡೆಯಲಿದ್ದು, ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದ ಅಧ್ಯಕ್ಷರಾದ ಶ್ರೀ ಕೆ.ಎಸ್. ಕಾರಂತರು ಅಧ್ಯಕ್ಷತೆಯನ್ನು ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಕಲ್ಲೂರ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಪ್ರದೀಪ್ ಕಲ್ಲೂರ, ಅಮೃತೇಶ್ವರೀ ದೇವಸ್ಥಾನ ಮತ್ತು ಮೇಳದ ವ್ಯವಸ್ಥಾಪಕರಾದ ಶ್ರೀ ಆನಂದ್ ಸಿ. ಕುಂದರ್, ಹಿರಿಯ ಕಲಾ ಸಾಹಿತಿಯಾದ ಶ್ರೀ ಜನಾರ್ಧನ ಹಂದೆ ಹಂದಟ್ಟು, ಗೋಳಿಗರಡಿ ಮೇಳದ ಮಾಜಿ ಯಜಮಾನರಾದ…

Read More

 ಉಡುಪಿ :  ಯಕ್ಷಗಾನ ಲೋಕದ ಶ್ರೇಷ್ಠ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ ದಿನಾಂಕ 25-04-2024 ರಂದು ತಮ್ಮ ಬೆಂಗಳೂರಿನ ಪುತ್ರನ  ಮನೆಯಲ್ಲಿ ನಿಧನರಾದರು. ಅವರಿಗೆ 67ವರ್ಷ ವಯಸ್ಸಾಗಿತ್ತು. ಕಾಳಿಂಗ ನಾವುಡರ ಬಳಿಕ ಮಧುರ ಕಂಠದಿಂದ ಹೆಚ್ಚು ಜನಪ್ರಿಯತೆಗಳಿಸಿದ್ದ  ಇವರು ಬಡಗುತಿಟ್ಟು ಯಕ್ಷಗಾನ ಅಭಿಮಾನಿಗಳಲ್ಲಿ  ‘ಗಾನಕೋಗಿಲೆ’ ಎಂದೇ ಜನಪ್ರಿಯರಾಗಿದ್ದರು. ಸುಮಾರು 46 ವರ್ಷಗಳ ಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಇವರು ಪತ್ನಿ, ಪುತ್ರ ಹವ್ಯಾಸಿ ಯಕ್ಷಗಾನ ಕಲಾವಿದ ಕಾರ್ತಿಕ್, ಪುತ್ರಿ ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ. 05-09-1957 ರಂದು ಗೋಕರ್ಣದಲ್ಲಿ ಜನಿಸಿದ್ದ ಇವರು ಯಕ್ಷಗಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿದ್ದರು. ನಾರಾಯಣಪ್ಪ ಉಪ್ಪೂರ ಶಿಷ್ಯರಾಗಿದ್ದ ಇವರು ಹೊಸ ಹಾಗೂ ಹಳೆಯ ಪ್ರಸಂಗಗಳಲ್ಲಿ ಪರಿಣಿತರಾಗಿದ್ದರು.  ಶ್ರೀಯುತರು ಕೋಟ ಅಮೃತೇಶ್ವರಿ ಮೇಳ, ಪೆರ್ಡೂರು ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಸುಮಾರು 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಇವರು ಪುರಂದರದಾಸ, ಕನಕದಾಸ, ಬಸವಣ್ಣ, ಚೆನ್ನಮಲ್ಲಿಕಾರ್ಜುನರ ಕೀರ್ತನೆಗಳನ್ನೂ ಹಾಡಿದ್ದಾರೆ. ಇವರ ಅಮೃತ ವರ್ಷಿಣಿ,…

Read More

ಸಾಲಿಗ್ರಾಮ : ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ಘಟಕ, ಉಡುಪಿ ಜಿಲ್ಲೆ ಕರ್ನಾಟಕ ಯಕ್ಷಧಾಮ ಹಾಗೂ ಭೂಮಿಕಾ ಕಲಾ ಪ್ರತಿಷ್ಠಾನ ಮಂಗಳೂರು ಮತ್ತು ಗೆಳೆಯರ ಬಳಗ (ರಿ.) ಕಾರ್ಕಡ ಸಾಲಿಗ್ರಾಮ ಇವರ ಸಂಯುಕ್ತ ಆಶ್ರಯದಲ್ಲಿ ‘ಮನೆಯಂಗಳದಲ್ಲಿ ಸಾಹಿತ್ಯ’ ಮತ್ತು ಸನ್ಮಾನ ಹಾಗೂ ಪೌರಾಣಿಕ ಯಕ್ಷಗಾನ ಪ್ರದರ್ಶನ ದಿನಾಂಕ 22-04-2024ರ ಸೋಮವಾರ ಸಂಜೆ 3.30ರಿಂದ ಕಾರ್ಕಡದ ಭೂಮಿಕಾ ಮನೆಯಂಗಳದಲ್ಲಿ ಜರುಗಿತು. ಉಡುಪಿ ಜಿಲ್ಲೆಯ ಕ. ಸಾ. ಪ. ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ಜಿ. ರಾಮಚಂದ್ರ ಐತಾಳರ ಅಧ್ಯಕ್ಷತೆಯಲ್ಲಿ ನಡೆದ ಈ ಸಮಾರಂಭವನ್ನು ಮಂಗಳೂರು ಕಲಾ ಸಾಹಿತಿ ಜನಾರ್ದನ ಹಂದೆ ದೀಪ ಪ್ರಜ್ವಲನೆಗೈದು ಉದ್ಘಾಟಿಸಿ ಮಾತನಾಡಿದ ಅವರು “ಘರ್ಷಣೆಯಿಂದಲೇ ದೀಪದ ಹುಟ್ಟು ಸಾಧ್ಯವಾಗುವುದು. ಅಂತಯೇ ಮನಸ್ಸು ಮತ್ತು ಹೃದಯದ ಭಾವದೀಪದ ತಾಕಲಾಟದಿಂದ ಸಾಹಿತ್ಯದ ಹುಟ್ಟು. ದೀಪದಿಂದ ದೀಪ ಬೆಳಗುವ ಹಾಗೆ ಮನೆ ಅಂಗಳ ಸಾಹಿತ್ಯದ ದೀಪ ಕನ್ನಡ ಸಾಹಿತ್ಯ ಜ್ಯೋತಿಯನ್ನು ಬೆಳಗಬಲ್ಲದು. ಗೆಳೆಯರ ಬಳಗದ ಅಧ್ಯಕ್ಷರಾದ ತಾರಾನಾಥ ಹೊಳ್ಳರ ಮನೆಯಂಗಳದಲ್ಲಿ ನಡೆಯುತ್ತಿರುವ…

Read More

ಕಡಬ : ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 27-03-2024 ರಿಂದ 02-04-2024 ರವರೆಗೆ ಬೇಸಿಗೆ ಶಿಬಿರ ‘ಸಂಸ್ಕಾರ-ಸಂಭ್ರಮ’ ನಡೆದು, ಇದರ ಸಮಾರೋಪ ಸಮಾರಂಭವು ದಿನಾಂಕ 02-04-2024ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಕಾರ್ಯದರ್ಶಿ ಶ್ರೀಯುತ ಕೆ. ಸೇಸಪ್ಪ ರೈ ಮಾತನಾಡಿ “ವಿದ್ಯಾರ್ಥಿಗಳೆಲ್ಲರೂ ಶಿಬಿರದ ಸದುಪಯೋಗವನ್ನು ಪಡೆದು, ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸಿಕೊಂಡು ಉತ್ತಮ ಪ್ರಜೆಯಾಗಬೇಕು.” ಎಂದರು. ಮುಖ್ಯಅತಿಥಿಗಳಾದ ಸಂಸ್ಥೆಯ ಶಿಕ್ಷಕ-ರಕ್ಷಕ ಸಂಘದ ಜೊತೆ ಕಾರ್ಯದರ್ಶಿಯಾದ ಶ್ರೀ ಗಿರೀಶ್ ಎ. ಪಿ. ಹಾಗೂ ಶ್ರೀ ಶರವೂರು ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಶ್ರೀ ದಾಮೋದರ ಗೌಡ ಕಕ್ವೆ ಇವರು ಸಂದರ್ಭೋಚಿತವಾಗಿ ಮಾತನಾಡಿದರು. ಶಿಬಿರದ ಸಂಪನ್ಮೂಲ ವ್ಯಕ್ತಿ ಶ್ರೀ ಸುಬ್ರಹ್ಮಣ್ಯ ಕೆ.ಎಂ. ಶಿಬಿರದ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಮಹಿಳಾ ಸಂಘಟಕಿ ಶ್ರೀಮತಿ ಸೌಮ್ಯ ಮಾಧವ, ಸಂಸ್ಥೆಯ ಆಡಳಿತಾಧಿಕಾರಿ ಶ್ರೀ ಆನಂದ ಎಸ್. ಟಿ. ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಆದಿತ್ಯ ಎ. ಆರ್.…

Read More

ಪುತ್ತೂರು : ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಶಿವರಾಮ ಕಾರಂತ ಅಧ್ಯಯನ ಕೇಂದ್ರದಿಂದ ನೀಡುವ ‘ನಿರಂಜನ ಪ್ರಶಸ್ತಿ’ಯನ್ನು ಈ ವರ್ಷ ನಿವೃತ್ತ ಪ್ರಾಧ್ಯಾಪಕರು ಮತ್ತು ಸಾಹಿತಿಗಳಾದ ಪ್ರೊ. ವಿ.ಬಿ. ಅರ್ತಿಕಜೆ ಅವರಿಗೆ ಹಾಗೂ ‘ಶಂಕರ ಸಾಹಿತ್ಯ ಪ್ರಶಸ್ತಿ’ಯನ್ನು ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ಟ ಸಂಪ್ರತಿಷ್ಠಾನ (ರಿ.) ಇವರಿಗೆ ನೀಡುವುದೆಂದು ನಿರ್ಧರಿಸಲಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿಯು ತಿಳಿಸಿದೆ. ಪ್ರೊ. ವಿ.ಬಿ. ಅರ್ತಿಕಜೆ ಇವರು ಪುತ್ತೂರು ಬಳಿಯ ಈಶ್ವರಮಂಗಲದ ಅರ್ತಿಕಜೆ ಶ್ಯಾಮ ಭಟ್ಟ ಹಾಗೂ ಸಾವಿತ್ರಿ ದಂಪತಿಯ ಸುಪುತ್ರರು. ಇವರ ಆಸಕ್ತಿಯ ಕ್ಷೇತ್ರ ಅಧ್ಯಾಪನ, ಪತ್ರಿಕೋದ್ಯಮ, ಸಾಹಿತ್ಯ ಹಾಗೂ ಸಂಘಟನೆ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ 33 ವರ್ಷಗಳ ಕಾಲ ಇತಿಹಾಸ ವಿಭಾಗದ ಮುಖ್ಯಸ್ಥರಾಗಿ ನಿವೃತ್ತಿ ಹೊಂದಿದ ಇವರು ಪ್ರೌಢಶಾಲಾ ದಿನಗಳಲ್ಲಿ ನವೋದಯ, ಸುಪ್ರಭಾತ ಮತ್ತು ನವರಸ ಹಸ್ತಪತ್ರಿಕೆಗಳನ್ನು ಆರಂಭಿಸಿದವರು. ತನ್ನ ಆಡುಭಾಷೆ ಹವ್ಯಕವನ್ನು ಅಂಕಣದಲ್ಲಿ ಉಪಯೋಗಿಸಿದ, ಆ ಭಾಷೆಯಲ್ಲೇ ಸಾಹಿತ್ಯ ಸೃಷ್ಟಿಸಿದ ಹಿರಿಮೆ ಇವರದು. ತಮ್ಮ ಅಪಾರವಾದ…

Read More

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಾಂಸ್ಕೃತಿಕ ವೇದಿಕೆಯಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ಪುತ್ತೂರು ಘಟಕದ 7ನೇ ವಾರ್ಷಿಕ ಸಮಾರಂಭವು ದಿನಾಂಕ 19-04-2024ರಂದು ನಡೆಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಅಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿರವರು “ಯಕ್ಷಧ್ರುವ ಟ್ರಸ್ಟ್ ಯಕ್ಷಾಭಿಮಾನಿಗಳ ಆಶೀರ್ವಾದದಿಂದ ಬೆಳೆಯುತಿದ್ದು, ಸಹೃದಯಿ ದಾನಿಗಳ ನೆರವಿನಿಂದ ಈಗಾಗಲೇ ಪಟ್ಲ ಫೌಂಡೇಷನ್ ನಿಂದ ಸುಮಾರು ರೂ.12 ಕೋಟಿ ಹಣವನ್ನು ಅಶಕ್ತ ಕಲಾವಿದರಿಗೆ ಸಹಾಯಹಸ್ತ ನೀಡಿದೆ. ಇತ್ತೀಚೆಗೆ ಅಮೇರಿಕಾದಲ್ಲಿನ ಸಹೃದಯಿಯೋರ್ವರು ಉಡುಪಿ ಸಮೀಪ ನೀಡಿರುವ ಒಂದು ಕೋಟಿ ವೆಚ್ಚದ ಜಾಗದಲ್ಲಿ 20 ಮನೆಗಳನ್ನು ನಿರ್ಮಾಣ ಮಾಡಲಿದ್ದೇವೆ. ದೈವಾರಾಧನೆ, ನಾಟಕ, ಯಕ್ಷಗಾನದ ಕಲಾವಿದರಿಗೆ ಟ್ರಸ್ಟಿನಿಂದ ವಿಮಾ ಯೋಜನೆ, ನಾಲ್ಕು ಸಾವಿರ ಮಂದಿಗೆ ಯಕ್ಷ ಶಿಕ್ಷಣದ ಮೂಲಕ ಶಿಕ್ಷಣವನ್ನು ಟ್ರಸ್ಟ್ ನೀಡುತ್ತಿದ್ದು ಕಲಾವಿದರಿಗೆ ಸೇವೆ ಮಾಡುತ್ತಿರುವವರಿಗೆ ಜನರ ಆಶೀರ್ವಾದವಿರಲಿ.” ಎಂದು ಹೇಳಿದರು. ಸವಣೂರು ವಿದ್ಯಾರಶ್ಮಿ ವಿದ್ಯಾ ಸಂಸ್ಥೆಗಳ ಸಂಚಾಲಕ…

Read More

ವಿದ್ಯಾಗಿರಿ : ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಕನ್ನಡ ವಿಭಾಗ ಹಾಗೂ ಗ್ರಂಥಾಲಯದ ಸಹಯೋಗದಲ್ಲಿ ‘ಪ್ರೊ. ನಾಗರಾಜ ಜವಳಿ ಅವರ ಗ್ರಂಥಗಳ ಸ್ವೀಕಾರ ಸಮಾರಂಭ’ವು ದಿನಾಂಕ 24-04-2024ರಂದು ನಡೆಯಿತು. ಈ ಸಮಾರಂಭದಲ್ಲಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ “ನಮಗೆ ಸಮಯವಿಲ್ಲ ಎಂಬ ನೆಪ ಹೇಳದೆ ಓದಬೇಕು. ಓದುವ ಜೊತೆ ಇತರರು ಓದುವಂತೆ ಮಾಡಬೇಕು. ಪುಸ್ತಕಗಳು ಕೇವಲ ಅಲಂಕಾರಕ್ಕೆ ಇಡಲು ಅಲ್ಲ, ಅದು ಅಧ್ಯಯನಕ್ಕೆ. ಇತ್ತೀಚಿನ ದಿನಗಳಲ್ಲಿ ಪುಸ್ತಕ ಓದುಗರ ಸಂಖ್ಯೆ ಇಳಿಮುಖವಾಗಿದ್ದು, ವಿದ್ಯಾರ್ಥಿಗಳಿಗೆ ಓದಿಸುವ ನಿಟ್ಟಿನಲ್ಲಿ ಗಮನ ಸೆಳೆಯುವ ಚಟುವಟಿಕೆಯನ್ನು ಮಾಡಬೇಕು. ನಾಗರಾಜ ಜವಳಿ ಅವರು ಸಂಗ್ರಹ ಮಾಡಿದ ಪುಸ್ತಕಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಯಾವುದೇ ವಿಚಾರದ ಪುಸ್ತಕವಾದರೂ, ಕಾಪಾಡುವುದು ಮುಖ್ಯ. ತುಳುನಾಡಿನಲ್ಲಿ 11 ವರ್ಷಗಳ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರವನ್ನು ಅರ್ಥಪೂರ್ಣಗೊಳಿಸಿದ್ದರಲ್ಲಿ ಜವಳಿ ಹಾಗೂ ಅವರ ಸ್ನೇಹಿತರ ‘ದಾಸಜನ’ ಕೂಟ ಮುಖ್ಯ ಪಾತ್ರ ವಹಿಸಿದೆ” ಎಂದರು. ಪ್ರೊ. ನಾಗರಾಜ ಜವಳಿ ಅವರ ಪುತ್ರ…

Read More