Author: roovari

ಸುಳ್ಯ : ರಂಗ ಮಯೂರಿ ಕಲಾಶಾಲೆ (ರಿ.) ಸುಳ್ಯ ಇದರ ವತಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿ ರಾಜ್ಯಮಟ್ಟದ ರಂಗ ಶೈಲಿಯ ‘ಬಣ್ಣ 2025’ ಬೇಸಿಗೆ ಶಿಬಿರವನ್ನು ದಿನಾಂಕ 12 ಏಪ್ರಿಲ್ 2025ರಿಂದ 20 ಏಪ್ರಿಲ್ 2025ರವರೆಗೆ ಸುಳ್ಯದ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಆಯೋಜಿಸಲಾಗಿದೆ. 7ರಿಂದ 17 ವರ್ಷ ವಯಸ್ಸಿನ ಮಕ್ಕಳಿಗೆ ಮಾತ್ರ ಅವಕಾಶ. ಈ ವರ್ಷ ಹೊಸದಾಗಿ, ಮಕ್ಕಳಿಗೆ ಅಭಿನಯ ಪ್ರಧಾನ ರಂಗ ಶಿಬಿರದೊಂದಿಗೆ, ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಭಾಷಾ ಪರಿಚಯದ ಸಲುವಾಗಿ ಕನ್ನಡ, ಅರೆಭಾಷೆ, ತುಳು, ಹಿಂದಿ, ಇಂಗ್ಲೀಷ್ ಭಾಷೆಗಳ ಮಕ್ಕಳ ನಾಟಕ ತಯಾರಿ ಮತ್ತು ಪ್ರದರ್ಶನ ಕಾರ್ಯಾಗಾರವನ್ನು ಏರ್ಪಡಿಸಿದ್ದೇವೆ. ಜೊತೆಗೆ ಹತ್ತು ಹಲವು ಕ್ರಿಯಾತ್ಮಕ ಚಟುವಟಿಕೆಯೊಂದಿಗೆ ಹೆಸರಾಂತ ರಂಗ ಸಂಸ್ಥೆಗಳಾದ ನೀನಾಸಂ, ರಂಗಾಯಣ, ರಂಗ ಅಧ್ಯಯನ ಕೇಂದ್ರ, ಶಿವ ಸಂಚಾರ ಸಾಣೆಹಳ್ಳಿಯ ನಾಟಕ ನಿರ್ದೇಶಕರು ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಈ ಶಿಬಿರದಲ್ಲಿ ಹಮ್ಮಿಕೊಳ್ಳಲಾಗಿದೆ. ನೋಂದಾವಣೆ ಮತ್ತು ಹೆಚ್ಚಿನ ಮಾಹಿತಿಗಾಗಿ ಲೋಕೇಶ್ ಊರುಬೈಲ್ 9611355496,…

Read More

ಕಾಸರಗೋಡು : ದ್ರಾವಿಡ ಭಾಷಾ ಅನುವಾದಕರ ಸಂಘ (ರಿ.), ವೈಟ್ ಫೀಲ್ಡ್ ಬೆಂಗಳೂರು ಮತ್ತು ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ (ರಿ.) ನುಳ್ಳಿಪ್ಪಾಡಿ ಕಾಸರಗೋಡು ಇವುಗಳ ಸಂಯುಕ್ತಾಶ್ರಯದಲ್ಲಿ ಒಂದು ದಿನದ ‘ಮಲಯಾಳಂ – ಕನ್ನಡ ಅನುವಾದ ಕಾರ್ಯಾಗಾರ’ವನ್ನು ದಿನಾಂಕ 09 ಮಾರ್ಚ್ 2025ರಂದು ಕಾಸರಗೋಡಿನ ಕನ್ನಡ ಭವನ ಗ್ರಂಥಾಲಯದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಾಗಾರದ ಉದ್ಘಾಟನೆಯನ್ನು ಹಿರಿಯ ಸಾಹಿತಿ ರಾಧಾಕೃಷ್ಣ ಕೆ. ಉಳಿಯತಡ್ಕ ಇವರ ಅಧ್ಯಕ್ಷತೆಯಲ್ಲಿ ದ್ರಾವಿಡ ಭಾಷಾ ಅನುವಾದಕರ ಸಂಘದ ಅಧ್ಯಕ್ಷರಾದ ಡಾ. ಸುಷ್ಮಾ ಶಂಕರ್ ಇವರು ನಿರ್ವಹಿಸಲಿದ್ದಾರೆ. ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಕೆ.ವಿ. ಕುಮಾರನ್ ಮತ್ತು ದ್ರಾವಿಡ ಭಾಷಾ ಅನುವಾದಕರ ಸಂಘದ ಉಪಾಧ್ಯಕ್ಷರಾದ ಡಾ. ಬಿ.ಎಸ್. ಶಿವಕುಮಾರ್ ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

Read More

ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಪಿ.ಎಂ.ಶ್ರೀ ಪ್ರಾಥಮಿಕ ಶಾಲೆ ಮೂರ್ನಾಡು ಇದರ ಸಂಯುಕ್ತ ಆಶ್ರಯದಲ್ಲಿ 2024-25ನೇ ಸಾಲಿನ 22ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಾಗೂ ಸಣ್ಣಕತೆಗಳ ಗೌರಮ್ಮ ದತ್ತಿ ನಿಧಿ ಕಥಾ ಸ್ಪರ್ಧೆಯ ಬಹುಮಾನ ವಿತರಣೆಯನ್ನು ದಿನಾಂಕ 07 ಮಾರ್ಚ್ 2025ರಂದು ಬೆಳಿಗ್ಗೆ 11-00 ಗಂಟೆಗೆ ಮೂರ್ನಾಡಿನ ಪಿ.ಎಂ.ಶ್ರೀ ಮಾದರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕಾಂತೂರು ಮುರುನಾಡು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಬಿ.ಎಸ್. ಕುಶನ್ ರೈ ಇವರು ನಿರ್ವಹಿಸಲಿರುವರು. ಈ ಬಾರಿಯ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ವಿಜೇತರಾದ ಶ್ರೀಮತಿ ಕೂಡಕಂಡಿ ಓಂ ಶ್ರೀ ದಯಾನಂದರವರಿಗೆ ಮೈಸೂರಿನ ಯುವರಾಜ ಕಾಲೇಜಿನ ಸಾಹಿತಿಗಳಾದ ಶ್ರೀಮತಿ ನಿವೇದಿತಾ ಎಚ್. ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಕನ್ನಡ…

Read More

ಬೆಂಗಳೂರು : ಎನ್.ಆರ್. ಕಾಲನಿಯಲ್ಲಿರುವ ಬಿ.ಎಂ.ಶ್ರೀ ಪ್ರತಿಷ್ಠಾನದ ಕಲಾಭವನದಲ್ಲಿ ಅಂಕಿತ ಪುಸ್ತಕವು ಏರ್ಪಡಿಸಿದ ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಲೇಖಕ ಎಚ್. ದುಂಡಿರಾಜ್ ಇವರ ‘ಹದಿನಾಲ್ಕು ಕಿರು ಹಾಸ್ಯ ನಾಟಕಗಳು’, ಶ್ರೀ ರಘುನಾಥ ಚ.ಹ. ಇವರ ‘ಇಳಿಸಲಾಗದ ಶಿಲುಬೆ’ ಮತ್ತು ‘ಇಲ್ಲಿಂದ ಮುಂದೆಲ್ಲ ಕಥೆ’ ಹಾಗೂ ಶ್ರೀಮತಿ ಪಾರ್ವತಿ ಜಿ. ಐತಾಳ್ ಇವರ ‘ಅಂತರಂಗದ ಸ್ವಗತ’ ಕೃತಿಗಳು ದಿನಾಂಕ 02 ಮಾರ್ಚ್ 2025ರಂದು ಲೋಕಾರ್ಪಣೆಗೊಂಡವು. ಈ ಸಮಾರಂಭದಲ್ಲಿ ಕೃತಿ ಅನಾವರಣಗೊಳಿಸಿದ ಪ್ರಸಿದ್ಧ ಸಾಹಿತಿ, ಕೇಂದ್ರ ಸಾಹಿತ್ಯ ಅಕಾಡೆಮಿಯ ಪೂರ್ವ ಕಾರ್ಯದರ್ಶಿ ಅಗ್ರಹಾರ ಕೃಷ್ಣಮೂರ್ತಿ ಇವರು ಮಾತನಾಡಿ “ಬದುಕಿನಲ್ಲಿ ಸಂಭವಿಸಿದ ಪ್ರಮುಖ ಘಟನೆಗಳನ್ನು ಸತ್ಯ ಹಾಗೂ ಪ್ರಾಮಾಣಿಕತೆಗಳಿಂದ ಸ್ಪೂರ್ತಿದಾಯಕವಾಗಿ ಓದುಗರೊಂದಿಗೆ ಹಂಚಿಕೊಳ್ಳುವುದು ಆತ್ಮಕಥೆಗಳ ಉದ್ದೇಶ. ‘ಅಂತರಂಗದ ಸ್ವಗತ’ ಎಂಬ ಪಾರ್ವತಿ ಜಿ. ಐತಾಳ್ ಇವರ ಈ ಆತ್ಮಕಥನದಲ್ಲಿ ನೇರ ಮತ್ತು ಸರಳ ನಿರೂಪಣೆಯ ಸೊಗಸಿದೆ. ಬಾಲ್ಯದಿಂದ ಆರಂಭಿಸಿ ಇದುವರೆಗಿನ ಎಲ್ಲ ಮುಖ್ಯ ಘಟನೆಗಳನ್ನು ಮನಮುಟ್ಟುವ ರೀತಿಯಲ್ಲಿ ಇವರು ಹಂಚಿಕೊಂಡಿದ್ದಾರೆ” ಎಂದು ಹೇಳಿದರು. ಪತ್ರಕರ್ತ ಲೇಖಕ…

Read More

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು‌ ಪುತ್ತೂರು ಇದರ ತಿಂಗಳ ಸರಣಿ ತಾಳಮದ್ದಳೆಯಲ್ಲಿ ‘ಶಲ್ಯ ಸಾರಥ್ಯ’ ಆಖ್ಯಾನವು ದಿನಾಂಕ 03 ಮಾರ್ಚ್ 2025ರಂದು ಶ್ರೀ ಮಹಾಲಿಂಗೇಶ್ವರ ದೇವಳದ ರಾಜಗೋಪುರದಲ್ಲಿ ನಡೆಯಿತು. ಹಿಮ್ಮೇಳದಲ್ಲಿ ಯಲ್.ಯನ್. ಭಟ್ ಬಟ್ಯಮೂಲೆ, ತೆಂಕಬೈಲು ಗೋಪಾಲಕೃಷ್ಣ ಭಟ್, ಅಚ್ಯುತ ಪಾಂಗಣ್ಣಾಯ ಕೋಡಿಬೈಲು, ಕುಮಾರಿ ಶರಣ್ಯ‌ ನೆತ್ತರಕೆರೆ ಸಹಕರಿಸಿದರು. ಮುಮ್ಮೇಳದಲ್ಲಿ ಕೌರವ (ಗುಂಡ್ಯಡ್ಕ ಈಶ್ವರ ಭಟ್), ಶಲ್ಯ (ಗುಡ್ಡಪ್ಪ ಬಲ್ಯ), ಕರ್ಣ (ವಿ.ಕೆ. ಶರ್ಮ ಅಳಿಕೆ) ಸಹಕರಿಸಿದರು. ಅಧ್ಯಕ್ಷ ಭಾಸ್ಕರ್ ಬಾರ್ಯ ಸ್ವಾಗತಿಸಿ, ಟಿ. ರಂಗನಾಥ ರಾವ್ ವಂದಿಸಿದರು.

Read More

ಬೆಂಗಳೂರು : ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನ (ರಿ.) ಕೊಡಮಾಡುವ 2024ರ ಸಾಲಿನ ‘ಅತ್ಯುತ್ತಮ ಕಾದಂಬರಿ ಪ್ರಶಸ್ತಿ’ಯನ್ನು ಪ್ರಕಟಿಸಿದ್ದು, ತುಂಬಾಡಿ ರಾಮಯ್ಯರವರ ‘ಜಾಲ್ಕಿರಿ’ ಮತ್ತು ಗುರುಪ್ರಸಾದ್ ಕಂಟಲಗೆರೆಯವರ ‘ಅಟ್ರಾಸಿಟ’ ಕಾದಂಬರಿಗಳು ಈ ಪ್ರಶಸ್ತಿಯನ್ನು ಸಮನಾಗಿ ಹಂಚಿಕೊಂಡಿವೆ. ಪ್ರಶಸ್ತಿಯು 25,000 ರೂಪಾಯಿ ನಗದು (ಇಬ್ಬರಿಗೂ ಸೇರಿ) ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿದೆ. ತೀರ್ಪುಗಾರರಾಗಿ ಹಿರಿಯ ವಿಮರ್ಶಕ ಎಸ್.ಆರ್. ವಿಜಯಶಂಕರ್ ಮತ್ತು ಹಿರಿಯ ಲೇಖಕಿ ಅನುಪಮಾ ಪ್ರಸಾದ್ ಕಾರ್ಯ ನಿರ್ವಹಿಸಿದ್ದರು. ಸ್ಪರ್ಧೆಗೆ 54 ಕಾದಂಬರಿಗಳು ಬಂದಿದ್ದು, ಅಂತಿಮ ಹಂತಕ್ಕೆ ತುಂಬಾಡಿರಾಮಯ್ಯ ಮತ್ತು ಗುರುಪ್ರಸಾದ್ ಕಂಟಲಗೆರೆಯವರ ಕೃತಿಗಲ್ಲದೆ, ಧರಣೇಂದ್ರ ಕುರಕುರಿ ಇವರ ‘ಜಾತ್ರಿ’, ಡಾ. ಶುಭದಾ ಎಚ್.ಎಸ್. ಇವರ ‘ದೇವಿ ಕುರುಬತಿ’ ಹಾಗೂ ಡಾ. ಹಳೆಮನೆ ರಾಜಶೇಖರ್ ಇವರ ‘ಒಡಲುಗೊಂಡವರು’ ಕಾದಂಬರಿಗಳು ತಲುಪಿದ್ದವು. ದ್ವಾರನಕುಂಟೆ ಪಾತಣ್ಣನವರ ಜನ್ಮದಿನವಾದ ದಿನಾಂಕ 14 ಮಾರ್ಚ್ 2025ರ ಸಂಜೆ 5-00ಕ್ಕೆ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಆಡಿಟೋರಿಯಂನಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಡಾ. ಧರಣೀದೇವಿ ಮಾಲಗತ್ತಿಯವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.…

Read More

ಮಂಗಳೂರು : ಶ್ರೀ ವಿಶ್ವಮಯ ಸಾಹಿತ್ಯ ಪ್ರಚಾರ ಸಮಿತಿ ಹುಬ್ಬಳ್ಳಿ ತನ್ನ ರಜತ ಮಹೋತ್ಸವ ಸಂಭ್ರಮದ ಅಂಗವಾಗಿ ಮಂಗಳೂರಿನ ಶ್ರೀ ಬಿ. ಹರಿಶ್ಚಂದ್ರ ಆಚಾರ್ಯ ಮೆಮೋರಿಯಲ್ ಟ್ರಸ್ಟ್ (ರಿ.), ಉರ್ವಾ ಇದರ ಸಹಯೋಗದಲ್ಲಿ ಮಂಗಳೂರು ಉರ್ವಾದ ಕಾ. ವಾ. ಆಚಾರ್ಯ ಸಂಸ್ಕೃತಿ ಕೇಂದ್ರದಲ್ಲಿ ಆಯೋಜಿಸಿದ್ದ ಗ್ರಂಥ ಲೋಕಾರ್ಪಣಾ ಸಮಾರಂಭವು ದಿನಾಂಕ 01 ಮಾರ್ಚ್ 2025ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ “ಸಾಹಿತ್ಯಿಕ ಹಾಗೂ ಕಲಾ ಚಟುವಟಿಕೆಗಳು ಸಮಾಜದಲ್ಲಿ ಸುಸಂಸ್ಕೃತಿಯು ಆಳವಾಗಿ ಬೇರೂರಲು ಸಹಾಯಕವಾಗಿವೆ‌. ಈ ಚಟುವಟಿಕೆಗಳ ಪರಿಣಾಮವು ಮೇಲ್ನೋಟಕ್ಕೆ ಕಾಣದೇ ಇದ್ದರೂ ಈ ಚಟುವಟಿಕೆಗಳು ದೂರಗಾಮಿ ಫಲನೀಡುವುದು ದಿಟ. ಆ ನಿಟ್ಟಿನಲ್ಲಿ ವಿಶ್ವಮಯ ಸಾಹಿತ್ಯ ಪ್ರಚಾರ ಸಮಿತಿಯು ಅದ್ಭುತವಾದ ಕಾರ್ಯ ಮಾಡುತ್ತಿದೆ” ಎಂದು ನುಡಿದರು. ‘ಬೆಳ್ಳಿ ಬೆಳಕು’ ಹಾಗೂ ‘ವಿ.ಜಿ. ದೀಕ್ಷಿತ್ ಸಮಗ್ರ ಕೃತಿ ಸಂಪುಟ’ ಭಾಗ 1 ಎಂಬ ಗ್ರಂಥಗಳನ್ನು ಲೋಕಾರ್ಪಣೆ ಗೈದು ಮಾತನಾಡಿದ ಮಂಗಳೂರು ವಿವಿಯ…

Read More

ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪುರುಷ ಸಾಹಿತಿಗಳಿಗೆ ಮೀಸಲಾಗಿ ಇಟ್ಟಿರುವ ಪ್ರಪ್ರಥಮ ಹಾಗೂ ಪ್ರತಿಷ್ಠಿತ ದತ್ತಿ ‘ದಿ. ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ’ಗೆ ಜಿಲ್ಲೆಯ ಹಿರಿಯ ಸಾಹಿತಿಗಳಾದ ನಾಗೇಶ್ ಕಾಲೂರು ಇವರು ರಚಿಸಿದ ‘ಶ್ರೀ ಕಾವೇರಿ ದರ್ಶನಂ – ಸಮಗ್ರ ಕಾವೇರಿ ಚರಿತೆ’ ಕೃತಿಯು ಪುರಸ್ಕೃತಗೊಂಡಿದೆ. ಜಿಲ್ಲೆಯ ದೈನಿಕ ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕರಾದ ಬಿ.ಎಸ್ ಗೋಪಾಲಕೃಷ್ಣರವರ ಹೆಸರಿನಲ್ಲಿ ಅವರ ಪುತ್ರರು ಸ್ಥಾಪಿಸಿರುವ ಈ ದತ್ತಿಯ ಮೊದಲ ಪ್ರಶಸ್ತಿ ಇದಾಗಿದ್ದು, ಈ ದತ್ತಿ ಪ್ರಶಸ್ತಿಯ ಆಯ್ಕೆಗಾಗಿ ಜಿಲ್ಲೆಯ ಬರಹಗಾರರ ಕೃತಿಗಳನ್ನು ಆಹ್ವಾನಿಸಿದಾಗ ಹತ್ತು ಸಾಹಿತಿಗಳು ತಮ್ಮ ಕೃತಿಗಳನ್ನು ಪ್ರಸ್ತುತಪಡಿಸಿದ್ದರು. ಜಿಲ್ಲೆಯ ಹಿರಿಯ ಮೂರು ಸಾಹಿತಿಗಳು ಪ್ರತ್ಯೇಕವಾಗಿ ಈ ಪುಸ್ತಕಗಳನ್ನು ಪರಿಶೀಲಿಸಿ ನೀಡಿದ ಅಂಕಗಳನ್ನು ಜಿಲ್ಲಾ ಸಮಿತಿ ಒಟ್ಟುಗೂಡಿಸಿ ಹತ್ತು ಜನ ಲೇಖಕರಲ್ಲಿ ಅತಿ ಹೆಚ್ಚು ಅಂಕ ಪಡೆದ ‘ಶ್ರೀ ಕಾವೇರಿ ದರ್ಶನಂ – ಸಮಗ್ರ ಕಾವೇರಿ ಚರಿತೆ’ ಕೃತಿ ಈ ಪ್ರಶಸ್ತಿ ಪಡೆದುಕೊಂಡಿದೆ. ಮುಂದೆ ನಡೆಯುವ ಪ್ರಶಸ್ತಿ…

Read More

ಶನಿವಾರಸಂತೆ : ಕೊಡಗು ಜಿಲ್ಲಾ ಸಾಹಿತ್ಯ ಪರಿಷತ್ತು, ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶನಿವಾರಸಂತೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸುಪ್ರಜ ಗುರುಕುಲದ ಸಂಯುಕ್ತಾಶ್ರಯದಲ್ಲಿ ದಾವಣಗೆರೆಯ ಸುನಂದಾದೇವಿ-ಸಂಗಮೇಶ್ವರ ಗೌಡ ದಂಪತಿಯ ಪ್ರಾಯೋಜಕತ್ವದಲ್ಲಿ ಆರೋಡ ದಾಸೋಹಿ ಧರ್ಮ ಚಿಂತಾಮಣಿ ಮಹಾಶರಣ ಲಿಂಗೈಕ ಮಾಗನೂರು ಬಸಪ್ಪ ದತ್ತಿ ಶರಣ ಸಂಸ್ಕೃತಿ ದತ್ತಿ ಕಾರ್ಯಕ್ರಮವು ದಿನಾಂಕ 02 ಮಾರ್ಚ್ 2025ರಂದು ಸುಪ್ರಜ ಗುರುಕುಲ ವಿದ್ಯಾ ಸಂಸ್ಥೆಯಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಇವರು ಮಾತನಾಡಿ “ಜಗತ್ತಿನ ಮೊದಲ ಸಮಾಜವಾದಿ ಬಸವಣ್ಣನವರು ಸಮಾಜಕ್ಕೆ ಕೊಟ್ಟ ಕೊಡುಗೆ ಅಪಾರವಾಗಿದ್ದು, ಶರಣ ಸಾಹಿತ್ಯದ ತಿರುಳನ್ನು ಪ್ರಸ್ತುತ ಸಮಾಜಕ್ಕೆ ಅಳವಡಿಸಬೇಕು. ಕನ್ನಡ ಸಾಹಿತ್ಯದ ಅಭಿವೃದ್ಧಿಗೆ ಶರಣರ ಕೊಡುಗೆ ಅಪಾರ. ಶರಣ ಎಂದರೆ ಸಜ್ಜನ, ಸದ್ಭಕ್ತಿ, ಅನುಭಾವಿ ಎಂಬ ವ್ಯಕ್ತಿತ್ವ. ದತ್ತಿನಿದಿಯ ಶರಣ ಮಾಗನೂರು ಬಸಪ್ಪನವರು ಹುಟ್ಟಿನಿಂದ ದೊಡ್ಡವರಾಗಿ ಹುಟ್ಟಿದವರಲ್ಲ; ಹುಟ್ಟಿ ದೊಡ್ಡವರಾಗಿ ಬದುಕಿ, ಬಾಳಿ ಶಿಸ್ತನ್ನು ರೂಢಿಸಿಕೊಂಡವರು.…

Read More

ಮುಳಿಯ ತಿಮ್ಮಪ್ಪಯ್ಯನವರು ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಸಾವಿರದ 1888 ಮಾರ್ಚ್ 3 ರಂದು ಜನಿಸಿದರು. ಇವರ ತಂದೆ ಮುಳಿಯ ಕೇಶವ ಭಟ್ಟ ಹಾಗೂ ತಾಯಿ ಮೂಕಾಂಬಿಕ ಅಮ್ಮ. ವಿಟ್ಲ ಸೀಮೆಯಲ್ಲಿ ವಿಟ್ಲದರಸರಿಗೆ ಸರಿಸಾಟಿಯಾಗಿ ಮುಳಿಯರ ಕುಟುಂಬದ ಶ್ರೀಮಂತಿಕೆ, ಪ್ರಭಾವಾಗಳಿದ್ದು, ‘ಮುಳಿಯದರಸು’ಗಳು ಎಂದೇ ಹೆಸರಾಗಿದ್ದ ಶ್ರೀಮಂತ ಕುಟುಂಬ ಇವರದ್ದಾಗಿತ್ತು. ಕಾಲ ಕ್ರಮೇಣ ಆಸ್ತಿ ಪಾಸ್ತಿಗಳೆಲ್ಲ ಕರಗಿಹೋಗಿ ಇವರು ಹುಟ್ಟುವಾಗ ಕುಟುಂಬ ಕಡು ಬಡತನಕ್ಕೆ ತುತ್ತಾಗಿತ್ತು. ಆದ್ದರಿಂದ ಇವರ ವಿದ್ಯಾಭ್ಯಾಸ ನಾಲ್ಕನೇ ತರಗತಿಗೆ ನಿಂತು ಹೋಯಿತು. ಕನ್ನಡವನ್ನು ಸ್ವತಂತ್ರವಾಗಿ ಓದುತಿದ್ದ ತಿಮ್ಮಪ್ಪಯ್ಯನವರು ಆಗ ವಿಟ್ಲಸೀಮೆಯಲ್ಲಿ ಪ್ರಸಿದ್ಧ ವಿದ್ವಾಂಸರಾಗಿದ್ದ ಕಲ್ಲಜೆ ಕೃಷ್ಣ ಶಾಸ್ತ್ರಿಗಳಲ್ಲಿ ಸಂಸ್ಕೃತದ ಅಧ್ಯಯನ ಮಾಡಿದರು. 1906ರಲ್ಲಿ ತಮ್ಮ 18ನೇ ವಯಸ್ಸಿನಲ್ಲಿ ಯಾರಿಗೂ ಹೇಳದೆ ಮನೆಯನ್ನು ತೊರೆದು ಕೇರಳದ ತಿರುವನಂತಪುರಕ್ಕೆ ಹೋಗಿ ಸಂಸ್ಕೃತದಲ್ಲಿ ಹೆಚ್ಚಿನ ಅಧ್ಯಯನ ಮಾಡಿದರು. ಅಲ್ಲಿಂದ ಮತ್ತೆ ಮೈಸೂರಿಗೆ ಹೋಗಿ ವಾರಾನ್ನದ ಮೂಲಕವೇ ಜೀವನ ನಡೆಸಿದರು. ಆ ಮೊದಲೇ ಅಲ್ಪಸ್ವಲ್ಪ ಸಂಗೀತ ಅಭ್ಯಾಸ ಮಾಡಿದ್ದ ಮುಳಿಯರು ಮೈಸೂರು ವಾಸುದೇವ ಆಚಾರ್ಯರ ಶಿಷ್ಯರಾಗಿ…

Read More