Subscribe to Updates
Get the latest creative news from FooBar about art, design and business.
Author: roovari
ಬಂಟ್ವಾಳ: ಪಾವಂಜೆ ಮೇಳದ ಸಂಚಾಲಕರು ಹಾಗೂ ಪ್ರಧಾನ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರು ಕಲಾಸೇವೆಯಲ್ಲಿ 25 ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಬಿ. ಸಿ. ರೋಡಿನ ಹೊಟೇಲ್ ರಂಗೋಲಿ ಸಹೋದರರು ವಿಶಿಷ್ಟ ರೀತಿಯ ಸಂಯೋಜನೆಯಿಂದ ಆಯೋಜಿಸಿದ ಯಕ್ಷಗಾನ ಬಯಲಾಟದ ರಂಗಸ್ಥಳದಲ್ಲಿ ಸನ್ಮಾನಿಸಲಾಯಿತು. ದಿನಾಂಕ 03 ಜನವರಿ 2025ರಂದು ಬಂಟ್ವಾಳ ತಾಲೂಕಿನ ಕೂರಿಯಾಳ ಪಡುವಿನ ಚಂದ್ರತೋಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಟ್ಲ ಸತೀಶ್ ಶೆಟ್ಟಿ ಇವರನ್ನು ಸನ್ಮಾನಿಸಿ ಮಾತನಾಡಿದ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ “ಯಕ್ಷಗಾನ ಕಲಾಭಿಮಾನಿಗಳ ಕಣ್ಮಣಿ, ಯಕ್ಷರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಖ್ಯಾತ ಭಾಗವತರಾದ ಇವರು ಯಕ್ಷಗಾನ ರಂಗದ ಸೆಲೆಬ್ರಿಟಿಯಾಗಿದ್ದಾರೆ. ಪ್ರಥಮ ಶ್ರೇಣಿಯ ಭಾಗವತಿಕೆಯ ಮೂಲಕ ಯಕ್ಷಗಾನದಲ್ಲಿ ಜೀವಂತಿಕೆಯನ್ನು ಉಳಿಸಿಕೊಂಡಿರುವ ಇವರು ದೇಶ ಮಾತ್ರವಲ್ಲ ವಿದೇಶದಲ್ಲೂ ಯಕ್ಷಗಾನದ ಕಂಪನ್ನು ಪಸರಿಸಿರುವ ಅದ್ಭುತ ಸಂಘಟಕರೂ ಆಗಿದ್ದಾರೆ. ಪಟ್ಲ ಫೌಂಡೇಶನ್ ಮೂಲಕ ಶಾಶ್ವತವಾದ ಯೋಜನೆಯನ್ನು ರೂಪಿಸಿ ಕಲಾವಿದರಿಗೆ ಮನೆ ಸಹಿತ ವಿವಿಧ ನೆರವು ನೀಡುತ್ತಿರುವ…
ತೆಕ್ಕಟ್ಟೆ: ಕರಾವಳಿಯ ಅಭಿಮಾನದ ಕಲಾಸಂಸ್ಥೆಯಾದ ಯಶಸ್ವೀ ಕಲಾವೃಂದದ ಆಶ್ರಯದಲ್ಲಿ ಇನ್ನು ಮುಂದೆ ಬಡಗಿನ ಹಿಮ್ಮೇಳದೊಂದಿಗೆ ತೆಂಕುತಿಟ್ಟು ಹಿಮ್ಮೇಳ ತರಗತಿಯೂ ನಡೆಯಲಿದೆ. ತಾಳ ಮದ್ದಳೆಯೊಂದಿಗೆ ಜಾಗಟೆಯ ಮಧುರ ಮೈತ್ರಿ ಬಯಸುವ ಕಲಾಸಕ್ತರಿಗೆ ಬೆಳ್ಳಿ ಹಬ್ಬದ ಸಂಸ್ಥೆ ನೀಡಿದ ಸುವರ್ಣ ಅವಕಾಶವಿದು. ಒಂದೇ ಕಲಿಕಾ ಕೇಂದ್ರದಲ್ಲಿ ಯಕ್ಷಗಾನ ಕಲಾಮಾತೆಯ ಯುಗ್ಮ ನಯನಗಳಂತಿರುವ ಎರಡು ತಿಟ್ಟುಗಳ ಸಶಕ್ತ ಶಿಕ್ಷಣ ಸಿಗುವುದೆಂದರೆ ನಿಜಕ್ಕೂ ಕಲಾಭ್ಯಾಸಿಗಳ ಭಾಗ್ಯವೆನ್ನಬೇಕು. ಯಶಸ್ವೀ ಕಲಾವೃಂದದ ಕಲಾತ್ಮಕ ಯೋಚನೆಯ ಮಹತ್ವಪೂರ್ಣ ನಡೆಯಿದು. ತೆಂಕು ತಿಟ್ಟಿನ ಅಗ್ರಮಾನ್ಯ ಗುರುಗಳಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರ ಗುರುತನದಲ್ಲಿ ತರಗತಿಗಳು ನಡೆಯುವ ಸಂಗತಿ ಅತ್ಯಂತ ಸಂತೋಷ ಕೊಡುತ್ತದೆ. ಸಿರಿಬಾಗಿಲು ರಾಮಕೃಷ್ಣ ಮಯ್ಯರು, ಪಟ್ಲ ಸತೀಶ ಶೆಟ್ಟಿಯವರಂತಹ ಘಟಾನುಘಟಿ ಕಲಾ ದಿಗ್ಗಜ ಶಿಷ್ಯರ ಗುರುಗಳಾದ ಮಾಂಬಾಡಿಯವರ ಗುರುತನ ಕರಾವಳಿಗೂ ಸುಲಲಿತವಾಗಿ ದಕ್ಕಲಿದೆ. 11 ಜನವರಿ 2025 ರಂದು ಬೆಳಿಗ್ಗೆ ಘಂಟೆ 10.00ಕ್ಕೆ ತೆಕ್ಕಟ್ಟೆ ಹಯಗ್ರೀವದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಉದ್ಘಾಟಕರಾಗಿ ಆಗಮಿಸುವ ಪ್ರಸಂಗಕರ್ತ ಪ್ರಸಾದ್ ಕುಮಾರ್ ಮೊಗೆಬೆಟ್ಟು ತಿಳಿಸಿದ್ದಾರೆ.
ಮಂಡ್ಯ : ಸ್ಪೋರ್ಟ್ಸ್ ಆಂಡ್ ಕಲ್ಚರ್ ಅಕಾಡಮಿ ಫಾರ್ ಡಿಫರೆಂಟ್ಲಿ ಏಬಲ್ಡ್ (ರಿ.) ಇವರು ಆಶಾಸದನ ಮಂಡ್ಯ ಇವರ ಸಹಯೋಗದಲ್ಲಿ ಹಮ್ಮಿಕೊಂಡ ರಾಜ್ಯಮಟ್ಟದ ಕಾರ್ಯಕ್ರಮ ‘ಸಕಾಡೋತ್ಸವ -2025’ ಭಿನ್ನ ಸಾಮರ್ಥ್ಯದ ಮಕ್ಕಳ ರಾಜ್ಯಮಟ್ಟದ ಜನಪದ ನೃತ್ಯೋತ್ಸವ ಸ್ಪರ್ಧೆಯನ್ನು ದಿನಾಂಕ 11 ಜನವರಿ 2025 ಮತ್ತು 12 ಜನವರಿ 2025ರಂದು ಬೆಳಿಗ್ಗೆ 10-30 ಗಂಟೆಗೆ ಮಂಡ್ಯ ಸುಭಾಷ್ ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ದಿನಾಂಕ 11 ಜನವರಿ 2025ರಂದು ಈ ಕಾರ್ಯಕ್ರಮವನ್ನು ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ. ಕುಮಾರ್ ಭಾ.ಆ.ಸೇ. ಇವರು ಉದ್ಘಾಟಿಸಲಿದ್ದು, ಮಂಡ್ಯದ ಸೈಂಟ್ ಥೋಮಸ್ ಮಿಷನ್ ಸೊಸೈಟಿ ವಲಯ ನಿರ್ದೇಶಕರಾದ ಗುರುಗಳು ಸೋಜನ್ ಎಂ.ಎಸ್.ಟಿ. ಇವರು ಆಶೀರ್ವಚನ ನೀಡಲಿದ್ದಾರೆ. ದಿನಾಂಕ 12 ಜನವರಿ 2025ರಂದು ಸಮಾರೋಪ ಸಮಾರಂಭ ನಡೆಯಲಿದೆ.
ಪುತ್ತೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ (ರಿ.) ಪುತ್ತೂರು ಅರ್ಪಿಸುವ ‘ನೃತ್ಯಾಂತರಂಗ 120’ ನೃತ್ಯ ಕಾರ್ಯಕ್ರಮವನ್ನು ದಿನಾಂಕ 11 ಜನವರಿ 2025ರಂದು ಸಂಜೆ 5-30 ಗಂಟೆಗೆ ಪುತ್ತೂರಿನ ದರ್ಬೆಯ ಶಶಿಶಂಕರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಗುರು ಅನ್ನಪೂರ್ಣ ರಿತೇಶ್ ಇವರ ಶಿಷ್ಯೆ ಕುಮಾರಿ ರಿದ್ಧಿ ಹೆಚ್. ಶೆಟ್ಟಿ ಇವರು ನೃತ್ಯ ಪ್ರದರ್ಶನ ನೀಡಲಿದ್ದು, ಪುತ್ತೂರು ಇನ್ನರ್ ವೀಲ್ ಕ್ಲಬ್ ಇದರ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ ಆಚಾರ್ ಇವರು ಅಭ್ಯಾಗತರಾಗಿ ಭಾಗವಹಿಸಲಿರುವರು.
ಮಂಗಳೂರು : ನವಭಾರತ ಎಜುಕೇಶನ್ ಸೊಸೈಟಿ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ನವಭಾರತ ಯಕ್ಷಗಾನ ಅಕಾಡೆಮಿಯ ‘ದಶಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮವನ್ನು ದಿನಾಂಕ 11 ಜನವರಿ 2025ರಂದು ಮಧ್ಯಾಹ್ನ 2-00 ಗಂಟೆಗೆ ಮಂಗಳೂರಿನ ಮಣ್ಣಗುಡ್ಡೆ ಸಂಘನಿಕೇತನದ ಸುಜ್ಞಾನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 2-00 ಗಂಟೆಗೆ ‘ಶ್ರೀದೇವಿ ಮಹಿಷಮರ್ದಿನಿ’ ಯಕ್ಷಗಾನ ನಡೆಯಲಿದ್ದು, ಸಂಜೆ 5-00 ಗಂಟೆಗೆ ಡಾ. ಪಿ. ವಾಮನ ಶೆಣೈಯವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ವೇಳೆ ಸಾಧಕರನ್ನು ಸನ್ಮಾನಿಸಲಾಗುವುದು. ಕ.ಸಾ.ಪ. ಮಾಜಿ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು, ನವಭಾರತ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಮಧುಸೂದನ ಅಯಾರ್, ಕೋಶಾಧಿಕಾರಿ ಗಣೇಶ್ ರಾವ್, ಪೊಲೀಸ್ಲೇನ್ ಶ್ರೀದೇವಿ ದೇವಸ್ಥಾನ ಅಧ್ಯಕ್ಷ ಮಯೂರ್ ಉಳ್ಳಾಲ್, ವಿದ್ವಾಂಸ ಡಾ. ಸತ್ಯಕೃಷ್ಣ ಭಟ್, ವಕೀಲರಾದ ಕುಶಾಲಪ್ಪ, ಸಂತೋಷ್ ಐತಾಳ್ ಭಾಗವಹಿಸುವರು. ಬಳಿಕ ನವಭಾರತ ಯಕ್ಷಗಾನ ಅಕಾಡೆಮಿಯ ಸದಸ್ಯರಿಂದ ‘ಶ್ರೀದೇವಿ ಕೌಶಿಕೆ’ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ. ನವಭಾರತ ರಾತ್ರಿ ಶಾಲೆಯಲ್ಲಿ ನಡೆಯುವ ನವಭಾರತ ಯಕ್ಷಗಾನ ಅಕಾಡೆಮಿ ಕಳೆದ 10 ವರ್ಷಗಳಲ್ಲಿ ಬಯಲಾಟ ಹಾಗೂ…
ಮಂಗಳೂರು : ಅಕ್ಕಮಹಾದೇವಿ ವೀರಶೈವ ಮಹಿಳಾ ಸಂಘದ ನೇತೃತ್ವದಲ್ಲಿ ಬೆಂಗಳೂರಿನ ಬಸವ ಸಮಿತಿ ಅಧ್ಯಕ್ಷ ಡಾ. ಅರವಿಂದ ಜತ್ತಿ ಅವರ ಸಮ್ಮೇಳನಾಧ್ಯಕ್ಷತೆಯಲ್ಲಿ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಿನಾಂಕ 04 ಜನವರಿ 2025ರಂದು ‘ರಾಜ್ಯಮಟ್ಟದ ವಚನ ಸಾಹಿತ್ಯ ಸಮ್ಮೇಳನ’ ನಡೆಯಿತು. ಈ ಸಮ್ಮೇಳನದಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಮೈಸೂರಿನ ಸುತ್ತೂರು ಮಠದ ಮಠಾಧೀಶ ಡಾ. ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ “ವಚನ ಸಾಹಿತ್ಯ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದೆ. ಶಾಸ್ತ್ರಬದ್ಧ ಕೃತಿಗಳಿಗೆ ವಿರಾಮ ಹೇಳಿ ಸರಳವಾದ ಮಾತುಗಳು ಕೂಡ ಸಾಹಿತ್ಯವಾಗಬಹುದು ಎಂದು ವಚನ ಸಾಹಿತ್ಯ ತೋರಿಸಿಕೊಟ್ಟಿದೆ. ಎಲ್ಲಾ ಸುಲಭವಾದ, ಸರಳ ಭಾಷೆಯಲ್ಲಿ ಲೌಕಿಕ ಸಂಗತಿಯಲ್ಲದೆ, ಭಗವಂತ-ಮನುಷ್ಯನ ಕುರಿತ ಸಂಗತಿ ವಚನ ಸಾಹಿತ್ಯದಲ್ಲಿದೆ. ವಚನ ಸಾಹಿತ್ಯದ ಕುರಿತು ಅನೇಕ ಕೃತಿಗಳು ಬಂದಿದ್ದು, ಅದನ್ನು ಅರಿಯುವ ಕೆಲಸ ನಾವೆಲ್ಲರೂ ಮಾಡಬೇಕು. ರಾಜ್ಯ ಮಟ್ಟದ ವಚನ ಸಾಹಿತ್ಯ ಸಮ್ಮೇಳನ ಮಂಗಳೂರಿನಲ್ಲಿ ನಡೆದಿರುವುದು ವಿಶೇಷವಾಗಿದೆ” ಎಂದು ಹೇಳಿದರು. ಸಮ್ಮೇಳನಾಧ್ಯಕ್ಷ ಡಾ. ಅರವಿಂದ್ ಜತ್ತಿ ಮಾತನಾಡಿ “ವಚನ ಸಾಹಿತ್ಯ…
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ 21 ಮತ್ತು22 ಫೆಬ್ರವರಿ 2025ರಂದು ನಡೆಯುವ 27ನೇ ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಿರಿಯ ಸಾಹಿತಿ ಡಾ. ಪ್ರಭಾಕರ ಶಿಶಿಲ ಇವರನ್ನು ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ. ಪಿ. ಶ್ರೀನಾಥ್ ತಿಳಿಸಿದ್ದಾರೆ. ಡಾ. ಪ್ರಭಾಕರ ಶಿಶಿಲ : ಸುಳ್ಯ ತಾಲೂಕಿನ ಕೂತುಕುಂಜ ಕಜೆಯಲ್ಲಿ ಹುಟ್ಟಿ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಬೆಳೆದು, ಸುಳ್ಯದಲ್ಲಿ ನೆಲೆಸಿರುವ ಡಾ. ಪ್ರಭಾಕರ ಶಿಶಿಲರು ಕನ್ನಡದ ಶ್ರೇಷ್ಠ ಸಾಹಿತಿ. ಕನ್ನಡದಲ್ಲಿ 10 ಕಾದಂಬರಿ, 8 ಕಥಾ ಸಂಕಲನ, 5 ಪ್ರವಾಸ ಕಥನ ಸೇರಿ ಒಟ್ಟು 54 ಸೃಜನಶೀಲ ಕೃತಿಗಳು, 165 ಅರ್ಥಶಾಸ್ತ್ರ ವಿಚಾರ ಸಾಹಿತ್ಯ ಕೃತಿಗಳು ಹಾಗೂ ಆಂಗ್ಲ ಭಾಷೆಯಲ್ಲಿ 10 ಅರ್ಥಶಾಸ್ತ್ರ ಕೃತಿಗಳನ್ನು ರಚಸಿದ್ದಾರೆ. ವಿವಿಧ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ಇವರ ಸುಮಾರು 250ಕ್ಕೂ ಅಧಿಕ ಲೇಖನಗಳು ಪ್ರಕಟವಾಗಿವೆ. ಅನೇಕ ಲಾವಣಿ ಮತ್ತು ಗೀಗೀ ಪದ…
ಮಂಗಳೂರು : ಭಾರತ್ ಫೌಂಡೇಶನ್ ವತಿಯಿಂದ ಮಂಗಳೂರು ಸಾಹಿತ್ಯೋತ್ಸವದ 7ನೇ ಆವೃತ್ತಿ ನಗರದ ಡಾ. ಟಿ.ಎಂ.ಎ.ಪೈ ಇಂಟರ್ನ್ಯಾಷನಲ್ ಕನ್ವೆನ್ಶನ್ ಸೆಂಟರ್ನಲ್ಲಿ ದಿನಾಂಕ 11 ಜನವರಿ 2025 ಮತ್ತು 12 ಜನವರಿ 2025ರಂದು ಆಯೋಜನೆಗೊಂಡಿದೆ. ಮುಖ್ಯ ಅತಿಥಿ ಶತಾವಧಾನಿ ಡಾ. ಆರ್. ಗಣೇಶ್ ಮತ್ತು ನಾಡಿನ ಖ್ಯಾತ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಇವರಿಂದ ಮಂಗಳೂರು ಲಿಟ್ ಫೆಸ್ಟ್ ಉದ್ಘಾಟನೆಗೊಳ್ಳಲಿದೆ ಎಂದು ಭಾರತ್ ಫೌಂಡೇಶನ್ ಟ್ರಸ್ಟಿ ಸುನೀಲ್ ಕುಲಕರ್ಣಿ ತಿಳಿಸಿರುತ್ತಾರೆ. ಈ ಬಾರಿಯ ಸಾಹಿತ್ಯೋತ್ಸವದಲ್ಲಿ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ, ಗುಪ್ತಚರ ಇಲಾಖೆಯ ಮಾಜಿ ಮುಖ್ಯಸ್ಥ ವಿಕ್ರಮ್ ಸೂದ್, ಭಾರತದ ಮಾಜಿ ರಾಜತಾಂತ್ರಿಕ ಮತ್ತು ಲೇಖಕ ದಿಲೀಪ್ ಸಿನ್ಹಾ, ಮಾಜಿ ಪೊಲೀಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ, ಶತಾವಧಾನಿ ಡಾ. ಆರ್. ಗಣೇಶ್, ಇತಿಹಾಸಕಾರ ಮತ್ತು ಲೇಖಕ ಡಾ. ವಿಕ್ರಮ್ ಸಂಪತ್, ಜೆ.ಎನ್.ಯು. ಉಪ ಕುಲಪತಿ ಡಾ. ಶಾಂತಿಶ್ರೀ ದುಲಿಪುಡಿ ಪಂಡಿತ್, ಸ್ವಾಮಿ ಮಹಾಮೇಧಾನಂದ ಮಿಥಿಕ್…
ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸಾಪ್ತಾಹಿಕ ನೃತ್ಯಸರಣಿ ಕಾರ್ಯಕ್ರಮವು ದಿನಾಂಕ 13 ಜನವರಿ 2025ರಂದು ಸಂಜೆ ಗಂಟೆ 6-25ಕ್ಕೆ ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಕುಂದಾಪುರದ ಕುಮಾರಿ ಗಾರ್ಗಿದೇವಿ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ. ಕುಮಾರಿ ಗಾರ್ಗಿದೇವಿ ಶ್ರೀಮತಿ ಪ್ರವಿತಾ ಅಶೋಕ್ ಹಾಗೂ ಶ್ರೀ ಅಶೋಕ್ ಕುಮಾರ್ ಇವರ ಸುಪುತ್ರಿ. ತನ್ನ ಆರನೇ ವಯಸ್ಸಿಗೆ ತಾಯಿ ಹಾಗೂ ಗುರು ವಿದುಷಿ ಪ್ರವಿತಾ ಅಶೋಕ್ ಇವರ ಬಳಿ ತನ್ನ ನೃತ್ಯಭ್ಯಾಸವನ್ನು ಪ್ರಾರಂಭಿಸಿದ್ದು, ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸುವ ಭರತನಾಟ್ಯ ಜೂನಿಯರ್ ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು ಪ್ರಸ್ತುತ ಸೀನಿಯರ್ ಪರೀಕ್ಷೆಯ ತಯಾರಿಯಲ್ಲಿರುತ್ತಾಳೆ. ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಜೂನಿಯರ್ ಮುಗಿಸಿದ್ದು, ಪ್ರಸ್ತುತ ಶ್ರೀಮತಿ ಉಷಾ ರಾಮಕೃಷ್ಣ ಇವರ ಬಳಿ ಸೀನಿಯರ್ ಅಭ್ಯಾಸ ಮಾಡುತ್ತಿದ್ದಾಳೆ.…
ಮಡಿಕೇರಿ. ಕನ್ನಡ ಸಾಹಿತ್ಯ ಪರಿಷತ್ತು ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆಶ್ರಯದಲ್ಲಿ ಕಳೆದ 19 ವರ್ಷಗಳಿಂದ ರಾಜ್ಯ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುತ್ತಾ ಬಂದಿದೆ. ಈ ಬಾರಿ 20ನೇ ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನವು 16 ಜನವರಿ 2025ರಂದು ಮಂಡ್ಯ ಜಿಲ್ಲೆಯ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸಭಾಂಗಣದಲ್ಲಿ ನಡೆಯಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇಲ್ಲಿ ಭಾಗವಹಿಸಲು ಅವಕಾಶವಿದ್ದು, ಕಥೆ, ಕವನ ಹಾಗೂ ಕಾದಂಬರಿ ಪ್ರಕಟಗೊಳಿಸಿರುವ 17 ವಯಸ್ಸಿನ ಒಳಗಿನ ವಿದ್ಯಾರ್ಥಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಬಹುದಾಗಿದೆ. ಪುಸ್ತಕಗಳ ಪ್ರಕಟಣೆ ಅಥವಾ ಪತ್ರಿಕೆಗಳಲ್ಲಿ ಲೇಖನಗಳನ್ನು ಬರೆದಿರುವ ವಿದ್ಯಾರ್ಥಿಗಳು ಕೂಡ ಭಾಗವಹಿಸಬಹುದಾಗಿದೆ. ಭಾಗವಹಿಸುವವರಿಗೆ ಊಟ, ತಿಂಡಿ, ವಸತಿ ವ್ಯವಸ್ಥೆ ಮಾಡಲಾಗುವುದು. ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ. ಪಿ. ಕೇಶವ ಕಾಮತ್ ತಿಳಿಸಿದ್ದಾರೆ. ಆಸಕ್ತ ವಿದ್ಯಾರ್ಥಿಗಳು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಓದುವ…