Author: roovari

ನಗುವಿನ ಬೀಜಗಳ ನಾಟಿದ ವಸಂತದ ಹೂತೋಟವೊಂದು ಬೇಕು ನನಗೆ. ಚಿಕ್ಕ ಮಗುವಿನ ಹೆಜ್ಜೆ ಇಟ್ಟಂತೆ ಆ ನೆಲ ಪವಿತ್ರವಾಗಬೇಕು. ಅಮ್ಮನ ನೋಟದಂತೆ ಬೆಣ್ಣೆಯಂತಹ ಬೆಳದಿಂಗಳು ತೋಟದಲ್ಲಿ ಅರಳಬೇಕು. ತೀರದ ಬಾಯಾರಿಕೆಯಿಂದ ಬಿರುಕುಬಿಟ್ಟ ಕಪ್ಪು ಎರೆಭೂಮಿಯ ಮೇಲೆ, ಕರುಣೆಯ ಕಣ್ಣೀರ ಹನಿಗಳ ಸುರಿಸಿ, ಅದು ಭರವಸೆಯ ಚಿಗುರು ಮೂಡಿಸಬೇಕು. ತಾಯಿಯ ಕಣ್ಣುಗಳಲ್ಲಿ ಕಾಣುವ ಮುನಿಸು ಇಲ್ಲದ ಅಮಾಯಕ ಬೆಳಕಿನಂತೆ, ಹೃದಯದಲ್ಲಿ ಭದ್ರವಾಗಿರುವ ಸ್ವಚ್ಚ ಆನಂದ ತುಂಬಿ ಹರಿಯಬೇಕು. ನಗುವಿನ ಹೂವಾಗಿ ಅರಳುವ ಆ ಕ್ಷಣದವರೆಗೂ ಸಹನೆಯಿಂದ ಕಾಯಬೇಕು. ಜಗತ್ತಿನ ಗ್ರಂಥಗಳ ಸಾರವನ್ನು ಸೇರಿಸಿ ಎಲ್ಲ ಧರ್ಮಗಳ ಏಕತೆಯನ್ನು ಸಾರಿ, ಜಾತಿ, ಧರ್ಮಗಳ ಭೇದಗಳಿಲ್ಲದ ಮಾನವೀಯತೆಯ ನಗುವಿನ ಹೂಗಳು ಪರಿಮಳಿಸಬೇಕು. ಸ್ವಚ್ಚ ನಗುವಿನ ನೀರ ಕುಡಿದು, ಅಜ್ಞಾನದ ಕಳೆಗಿಡ ಕಿತ್ತು ಹಾಕಿ, ಜ್ಞಾನದ ಪರಿಮಳವನ್ನು ಹರಡಬೇಕು. ನನಗೊಂದು ನಗುವಿನ ಹೂತೋಟ ಬೇಕು. ಅದು ಕೇವಲ ಹೂತೋಟವಲ್ಲ. ಮಾನವತೆಯನ್ನು ಮರೆಯದ, ಬಂಧಗಳಿಗೆ ಸಂಕೇತವಾದ ತೋಟ ಬೇಕು. ಮಾನವ ಸಂಬಂಧಗಳ ಮೌಲ್ಯಗಳನ್ನು ಮರೆಯದ, ಮಧುರ ಪರಿಮಳದೊಂದಿಗೆ ನಿತ್ಯ…

Read More

ಕುಂದಾಪುರ: 2025ನೇ ಸಾಲಿನ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಗೆ ತುಂಬಾಡಿ ರಾಮಯ್ಯ ಅವರ “ಜಾಲ್ಗಿರಿ” ಕಾದಂಬರಿಗೆ ಆಯ್ಕೆಯಾಗಿದೆ. ತಮ್ಮ ಆತ್ಮಕಥನ ‘ಮಣೆಗಾರ’ದ ಮೂಲಕ ಕನ್ನಡ ಓದುಗರಲ್ಲಿ ಹೊಸ ಸಂಚಲನವನ್ನೇ ಉಂಟು ಮಾಡಿದ ತುಂಬಾಡಿಯವರ ಅನುಭವ ಪ್ರಪಂಚ ಬಹು ದೊಡ್ಡದು. ‘ಮಣೆಗಾರ’ ಇಂಗ್ಲಿಷ್ ಹಾಗೂ ಮಲಯಾಳಂ ಭಾಷೆಗೆ ಅನುವಾದಗೊಂಡಿದ್ದು, ನಾಟಕವಾಗಿಯೂ ಜನಪ್ರಿಯವಾಗಿದೆ. ‘ಮುತ್ತಿನ ಜೋಳ ‘ ಮಣೆಗಾರ ಕೃತಿಯ ಮುಂದುವರಿದ ಭಾಗ. ‘ಸ್ಪರ್ಶ’ ಮತ್ತು ‘ದಲಿತಕಾರಣ’ ಅವರ ಲೇಖನಗಳ ಸಂಗ್ರಹವಾದರೆ, ‘ಓದೋ ರಂಗ ‘ ಮೊದಲ ಕಾದಂಬರಿ. ಪ್ರಶಸ್ತಿಯು ಹದಿನೈದು ಸಾವಿರ ರೂಪಾಯಿ ನಗದು ಮತ್ತು ಬೆಳ್ಳಿಯ ಪ್ರಶಸ್ತಿ ಫಲಕವನ್ನೊಳಗೊಂಡಿದೆ. ಈ ಪ್ರಶಸ್ತಿ ಪ್ರದಾನವು 13 ಆಗಸ್ಟ್ 2025ರಂದು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯಲಿರುವ ಸಾಹಿತ್ಯ ಸಮಾರಂಭದಲ್ಲಿ ನಡೆಯಲಿದೆ.

Read More

ಮಡಿಕೇರಿ : ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿಯಿಂದ ದಿನಾಂಕ 23 ಸೆಪ್ಟೆಂಬರ್ 2025ರಿಂದ 02 ಅಕ್ಟೋಬರ್ 2025ರವರೆಗೆ ಆಯೋಜಿತ ಮಡಿಕೇರಿ ದಸರಾ ಜನೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರು, ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಕುಡೆಕಲ್ ಸಂತೋಷ್ ತಿಳಿಸಿದ್ದಾರೆ. ಮಡಿಕೇರಿಯ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ದಸರಾ ಸಾಂಸ್ಕೃತಿಕ ಸಮಿತಿಯಿಂದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಈ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಕಲಾವಿದರು, ಕಲಾತಂಡಗಳು ತಾವು ಪ್ರದರ್ಶಿಸುವ ಕಲಾ ಪ್ರಕಾರ, ಪಾಲ್ಗೊಳ್ಳುವ ಕಲಾವಿದರ ಸಂಖ್ಯೆ, ಅಪೇಕ್ಷಿತ ದಿನಾಂಕ, ಮೊಬೈಲ್ ಸಂಖ್ಯೆಯೊಂದಿಗಿನ ವಿಳಾಸವನ್ನು ದಿನಾಂಕ 25 ಆಗಸ್ಟ್ 2025ರೊಳಗಾಗಿ ಅಧ್ಯಕ್ಷರು, ಮಡಿಕೇರಿ ನಗರ ದಸರಾ ಸಾಂಸ್ಕೃತಿಕ ಸಮಿತಿ, ಮಡಿಕೇರಿ ನಗರ ದಸರಾ ಸಮಿತಿ ಕಛೇರಿ, ನಗರಸಭಾ ಸಂಕೀರ್ಣ, ಮುಖ್ಯರಸ್ತೆ, ಮಡಿಕೇರಿ – 571201 ಈ ವಿಳಾಸಕ್ಕೆ ತಲುಪಿಸಬೇಕು. ಅಥವಾ [email protected] ಇಮೇಲ್ ಮೂಲಕ ಕಳುಹಿಸಬಹುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಬಳಿಕ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಕಲಾಪ್ರದರ್ಶನದ ಆಯ್ಕೆಯಲ್ಲಿ ದಸರಾ ಸಾಂಸ್ಕೃತಿಕ ಸಮಿತಿಯ…

Read More

ಬೆಂಗಳೂರು : ಬುಕ್‌ ಬ್ರಹ್ಮ ಸಂಸ್ಥೆಯ ವತಿಯಿಂದ ದಿನಾಂಕ 08 ಆಗಸ್ಟ್ 2025ರಿಂದ 10 ಆಗಸ್ಟ್ 2025ರವರೆಗೆ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ʻಬುಕ್‌ ಬ್ರಹ್ಮ ಸಾಹಿತ್ಯ ಉತ್ಸವ-2025ʼಕ್ಕೆ ದಿನ್ನಕ 08 ಆಗಸ್ಟ್ 2025ರಂದು ಕೋರಮಂಗಲದ ಸೇಂಟ್‌ ಜಾನ್ಸ್‌ ಆಡಿಟೋರಿಯಂನಲ್ಲಿ ಅದ್ದೂರಿಯಾಗಿ ಚಾಲನೆ ದೊರೆಯಿತು. ಕಾರ್ಯಕ್ರಮದ ಕುರಿತು ಬುಕ್‌ ಬ್ರಹ್ಮ ಸಾಹಿತ್ಯ ಉತ್ಸವದ ನಿರ್ದೇಶಕ, ಬುಕ್‌ ಬ್ರಹ್ಮ ಸಂಸ್ಥಾಪಕ ಸತೀಶ್‌ ಚಪ್ಪರಿಕೆ ಅವರು ಉತ್ಸವದ ಕುರಿತು ಪರಿಚಯದ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಕರ್ನಾಟಕದ ಪ್ರಸಿದ್ದ ರಂಗಕರ್ಮಿ ಬಿ. ಜಯಶ್ರೀ ಸೇರಿದಂತೆ ಪ್ರಮುಖ ಕಾದಂಬರಿಕಾರರು, ಕವಿಗಳು, ವಿಮರ್ಶಕರು ಹಾಗೂ ಕರ್ನಾಟಕದ ಹಲವು ವಿಶ್ವವಿದ್ಯಾಲಯಗಳ ಕುಲಪತಿಗಳು ಉಪಸ್ಥಿತರಿದ್ದರು. ಬುಕ್‌ ಬ್ರಹ್ಮ ಸಾಹಿತ್ಯ ಉತ್ಸವವು ದಕ್ಷಿಣ ಭಾರತದ ಹಲವು ಭಾಷೆಗಳನ್ನು, ಹಲವು ಸಾಹಿತಿಗಳನ್ನು ಮತ್ತು ಸಾಹಿತ್ಯಾಭಿಮಾನಿಗಳನ್ನು ಒಂದೇ ಸೂರಿನಡಿ ಸೇರಿಸುವ ಮಹಾಸಂಗಮವಾಗಿದೆ. ಸಾಹಿತ್ಯ, ರಂಗಭೂಮಿ ಮತ್ತು ಕಲೆಯ ಸಮ್ಮಿಲನವಾದ ಈ ಉತ್ಸವದ ಮೊದಲನೇ ದಿನವು 53 ಗೋಷ್ಠಿಗಳು, 5 ಮಕ್ಕಳ ಸಾಹಿತ್ಯಿಕ ಚಟುವಟಿಕೆಗಳು ಹಾಗೂ 12…

Read More

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಧ್ಯೇಯೋದ್ದೇಶ ಮತ್ತು ಎಲ್ಲರನ್ನೂ ಒಳಗೊಳ್ಳುವ ಸಮುಷ್ಟಿ ಪ್ರಜ್ಞೆಯ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಾರ್ಯಕಾರಿ ಸಮಿತಿಯ ಸಂಘ ಸಂಸ್ಥೆಗಳ ಪ್ರತಿನಿಧಿಯಾಗಿ ಹಲವು ಪ್ರಮುಖ ಸಂಘ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ, ಸಾಮಾಜಿಕ ಸೇವೆಯಲ್ಲಿಯೂ ನಿರತರಾಗಿ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುತ್ತಾ ಬಂದಿರುವ, ಪ್ರತಿ ವರ್ಷವೂ ನಿಯತವಾಗಿ ಕನ್ನಡ ದಿನಚರಿಯನ್ನು ಹೊರತರುತ್ತಾ ಕನ್ನಡ ಸೇವೆಯಲ್ಲಿ ನಿರತರಾಗಿರುವ ಕಲಬುರಗಿಯ ಸೈಯ್ಯದ ನಜೀರೊದ್ದಿನ ಮುತವಲ್ಲಿ ಇವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆ 9 (3)ರಲ್ಲಿ ಮಾನ್ಯ ಅಧ್ಯಕ್ಷರಿಗೆ ದತ್ತವಾಗಿರುವ ಅಧಿಕಾರದನ್ವಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಸಂಘ ಸಂಸ್ಥೆಗಳ ಪ್ರತಿನಿಧಿಯಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಗೆ ನಾಮ ನಿರ್ದೇಶನ ಮಾಡಿದ್ದಾರೆ. ಸೈಯ್ಯದ ನಜೀರೊದ್ದಿನ ಮುತವಲ್ಲಿ ಅವರು ಅಲ್ಪ ಸಂಖ್ಯಾತ ಸಮುದಾಯಕ್ಕೆ ಸೇರಿದ್ದರೂ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಆಳವಾದ ಪ್ರೀತಿಯನ್ನು ಹೊಂದಿದ್ದಾರೆ, ಸಂಘ ಸಂಸ್ಥೆಗಳ ಜೊತೆಗೆ ನಿಕಟವಾದ ಒಡನಾಟ ಹೊಂದಿದ್ದಾರೆ. ಅವರ ಕನ್ನಡ…

Read More

ಕಾಸರಗೋಡು : ಶ್ರೀ ಗುರು ರಾಘವೇಂದ್ರ ಸ್ವಾಮಿ ಆರಾಧನ ಪ್ರಯುಕ್ತ ಕಾಸರಗೋಡು ಪೇಟೆ ವೆಂಕಟ್ರಮಣ ರಾಘವೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಉಳಿಯ ದನ್ವ0ತರಿ ಯಕ್ಷಗಾನ ಕಲಾಸಂಘದ ವತಿಯಿಂದ “ಗುರುದಕ್ಷಿಣೆ” ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು ದಿನಾಂಕ 11 ಆಗಸ್ಟ್ 2025ರ ಸೋಮವಾರದಂದು ನಡೆಯಿತು. ಕಾರ್ಯಕ್ರಮದ ಹಿಮ್ಮೆಳದಲ್ಲಿ ಭಾಗವತರಾಗಿ ಶ್ರೀ ರವಿಶಂಕರ ಮಧೂರು, ಚೆಂಡೆ ಹಾಗೂ ಮದ್ದಳೆಯಲ್ಲಿ ಶ್ರೀ ಮುರಳಿಮಾಧವ ಮಧೂರು, ಗೋಪಾಲ ಕೃಷ್ಣ ನಾವಡ ಮಧೂರು ಸಹಕರಿಸಿದರು. ಮುಮ್ಮೆಳದಲ್ಲಿ ದ್ರೋಣನಾಗಿ ಶ್ರೀ. ವಿಷ್ಣು ಭಟ್ ಕಕ್ಕೆಪ್ಪಾಡಿ, ಮಧೂರು, ಭ್ರಹ್ಮಶ್ರೀ ಉಳಿಯತಾಯ ವಿಷ್ಣು ಆಸ್ರ, ಏಕಲವ್ಯನಾಗಿ ಶ್ರೀ. ಗೋಪಾಲ ಅಡಿಗ ಕೂಡ್ಲು, ಧ್ರುಪದ ರಾಜನಾಗಿ ಶ್ರೀ ನರಸಿಂಹ ಬಲ್ಲಾಳ್ ಹಾಗೂ ಶ್ರೀ ಸುಂದರ ಕೃಷ್ಣ ಗಟ್ಟಿ, ಕಾಸರಗೋಡು, ಅರ್ಜುನನಾಗಿ ಶ್ರೀ. ಮುರಳಿ ಮಾಧವ ಮಧೂರು, ಕೌಸವಿಯಾಗಿ ಶ್ರೀಮತಿ ಸರಸ್ವತಿ ಟೀಚರ್ ಕೂಡ್ಲು ಪತ್ರ ನಿರ್ವಹಿಸಿದರು.

Read More

ಉಡುಪಿ : ಕೊಡವೂರು ಶ್ರೀ ದೇವಳದಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಆರಾಧನೆ- ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನಾ ಸಮಾರಂಭ ದಿನಾಂಕ 10 ಆಗಸ್ಟ್ 2025ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾದ ಜ್ಯೋತಿ ಕೆ. ಹೆಬ್ಬಾರ್ ಮಾತನಾಡಿ “ಸಾಂಸ್ಕೃತಿಕವಾಗಿ ಶ್ರೀಮಂತಿಕೆ ಮಾರ್ದನಿಸುತ್ತಿರುವ ಊರು ಕೊಡವೂರು. ಕಲೆ, ಸಾಹಿತ್ಯ, ಸಂಸ್ಕೃತಿ, ಆಧ್ಯಾತ್ಮದ ಅಸ್ಮಿತೆ ಯಿಂದ ಬೆಳಗುತ್ತಿರುವ ಶ್ರೀ ಶಂಕರ ನಾರಾಯಣನ ಈ ದಿವ್ಯ ಸನ್ನಿಧಿಯಲ್ಲಿ ಗುರು ರಾಘವೇಂದ್ರ ಸ್ವಾಮಿಗಳ ಆರಾಧನೆಯ ಈ ಪರ್ವ ಕಾಲದಲ್ಲಿ ಕಲಾವಿದರಿಗೆ ಹಾಗೂ ಭಕ್ತಾದಿಗಳಿಗೆ ಶುಭವಾಗಲಿ” ಎಂದು ಹಾರೈಸಿದರು. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ಶ್ರೀ ದೇವಳದಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಕ್ರಮಗಳ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕ ಸೀತಾರಾಮ ಆಚಾರ್ಯ, ಭಕ್ತವೃಂದದ ಅಧ್ಯಕ್ಷರಾದ ತೋಟದಮನೆ ದಿವಾಕರ ಶೆಟ್ಟಿ, ನಗರಸಭಾ ಸದಸ್ಯ ವಿಜಯ ಕೊಡವೂರು, ಉದ್ಯಮಿ ಸಾಧು ಸಾಲ್ಯಾನ್, ವ್ಯವಸ್ಥಾಪನ ಸಮಿತಿ ಸದಸ್ಯ ಭಾಸ್ಕರ್ ಪಾಲನ್, ಎ. ರಾಜ…

Read More

ಬಂಟ್ವಾಳ : ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ತುಳುನಾಡಿನ ಯುವ ನಾಟಕಕಾರ ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದ ಕುಡ್ಮಣಿ ನಿವಾಸಿಯಾಗಿರುವ ನಾರಾಯಣ ಕೊಯಿಲ ಚಿಕಿತ್ಸೆ ಫಲಕಾರಿಯಾಗದೆ ದಿನಾಂಕ 08 ಆಗಸ್ಟ್ 2025ರ ಶುಕ್ರವಾರ ನಿಧನರಾದರು. ಇವರಿಗೆ 35 ವರ್ಷ ವಯಸ್ಸಾಗಿತ್ತು. ವೃತ್ತಿಯಲ್ಲಿ ಮೇಸ್ತ್ರಿ ಕೆಲಸಗಾರರಾಗಿದ್ದ ನಾರಾಯಣರು ಕುಟುಂಬದ ಏಕೈಕ ಜೀವನಾಧಾರವಾಗಿದ್ದರು. ಪ್ರತಿಭಾನ್ವಿತ ಬರಹಗಾರರಾಗಿದ್ದ ನಾರಾಯಣರು 12 ಕ್ಕೂ ಹೆಚ್ಚು ತುಳು ನಾಟಕಗಳನ್ನು ಬರೆದಿದ್ದಾರೆ. ಇವರ ‘ಪಂಡ ಕೆನುಜೆರ್’ ನಾಟಕ ಪ್ರಶಸ್ತಿ ಗಳಿಸಿದ್ದು, ನೂರಕ್ಕೂ ಹೆಚ್ಚು ಬಾರಿ ಪ್ರದರ್ಶನ ಕಂಡಿದೆ. ವಿವಿಧ ದೈವ, ದೇವಸ್ಥಾನಗಳ ತುಳು ಕನ್ನಡ ಭಕ್ತಿಗೀತೆ, ಜಾನಪದ ಗೀತೆ ರಚಿಸಿದ್ದು ಅವು ಧ್ವನಿ ಮುದ್ರಣಗೊಂಡಿದೆ. ಇವರು ವಿವಿಧ ಧಾರ್ಮಿಕ ಸಾಮಾಜಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದರು.

Read More

ಕಾಸರಗೋಡು: ತುಳುವ ಮಹಾಸಭೆ ಕಾಸರಗೋಡು ನೇತೃತ್ವದಲ್ಲಿ, ತುಳು ವರ್ಲ್ಡ್ ಕಟೀಲು ಸಂಯೋಜಿಸಿದ ತುಳು ವಾಲ್ಮೀಕಿ ಮಂದಾರ ಕೇಶವ ಭಟ್ಟರ ‘ಮಂದಾರ ರಾಮಾಯಣ’ ಸುಗಿವು- ದುನಿವು ಕಾರ್ಯಕ್ರಮವು ಕಾಸರಗೋಡು ಉಳ್ಳೂಡಿಯ ಕಾರ್ಮಾರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ 01 ಆಗಸ್ಟ್ 2025ರ ಶನಿವಾರ ನಡೆಯಿತು. ಯಕ್ಷಗಾನ ಅರ್ಥಧಾರಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸಂಪೂರ್ಣ ಮಂದಾರ ರಾಮಾಯಣದ ವ್ಯಾಖ್ಯಾನವವನ್ನು ನಡೆಸಿಕೊಟ್ಟರು. ಭಾಗವತ ಪ್ರಶಾಂತ್ ರೈ ಪುತ್ತೂರು ಮತ್ತು ರಚನಾ ಚಿತ್ಕಲ್ ಆಯ್ದ ಪದ್ಯಗಳನ್ನು ವಾಚಿಸಿದರು. ಹಿಮ್ಮೇಳದಲ್ಲಿ ಲವ ಕುಮಾರ್ ಐಲ ಮದ್ದಳ ನುಡಿಸಿದರು. ದೊಡ್ಡ ಸಂಖ್ಯೆಯಲ್ಲಿ ನೆರೆದ ಪ್ರೇಕ್ಷಕರು ಭಕ್ತಿ ಭಾವದೊಂದಿಗೆ ಕಥಾ ಶ್ರವಣ ಮಾಡಿ ಸಂತುಷ್ಪರಾದರು. ಪ್ರವಚನಕಾರ ಭಾಸ್ಕರ ರೈ ಕುಕ್ಕುವಳ್ಳಿ ಮಾತನಾಡಿ “ತುಳುವರಿಗೆ ಸಂಕಷ್ಟ ಕಾಲವಾದ ಆಟಿ ತಿಂಗಳಲ್ಲಿ ರಾಮಾಯಣ ಪಾರಾಯಣ, ವಾಚನ-ಪ್ರವಚನಗಳ ಮೂಲಕ ಪರಿಹಾರ ಕಂಡುಕೊಳ್ಳ ಬಹುದೆಂಬ ನಂಬಿಕೆಯಿದೆ. ಮಂದಾರ ಕೇಶವ ಭಟ್ಟರ ತುಳು ರಾಮಾಯಣದಲ್ಲಿ ಪುರಾಣದ ಪುಣ್ಯ ಕಥೆಯೊಂದಿಗೆ ತುಳು ಬದುಕಿನ ನೈಜ ಚಿತ್ರಣವೂ ಇರುವುದರಿಂದ ಅದು ಜನರಿಗೆ…

Read More

ಮೂಡುಬಿದಿರೆ: ಜೈನ ಪುರಾಣಗಳನ್ನು ಆಧರಿಸಿ ಕಾದಂಬರಿ ಸ್ವರೂಪದಲ್ಲಿ ರಚಿಸಿದವರಲ್ಲಿ ಪ್ರಥಮರೆನಿಸಿದ ಧಾರಿಣಿ ದೇವಿ’ ಕಾವ್ಯನಾಮಾಂಕಿತ ಸಾಹಿತಿ, ವಿಮರ್ಶಕಿ, ದಿವಂಗತ ಎಸ್. ಜೆ.ಪ್ರಭಾಚಂದ್ರ ಅವರ ಪತ್ನಿ ಎಸ್. ಪಿ. ಶಾಂತಮ್ಮ ಇವರು ದಿನಾಂಕ 7 ಆಗಸ್ಟ್ 2025ರಂದು ಬೆಂಗಳೂರಿನಲ್ಲಿರುವ ತಮ್ಮ ಪುತ್ರಿಯ ಮನೆಯಲ್ಲಿ ನಿಧನ ಹೊಂದಿದರು. ಇವರಿಗೆ 95 ವರ್ಷ ವಯಸ್ಸಾಗಿತ್ತು. ಮೂಲತಃ ಶಿವಮೊಗ್ಗ ಜಿಲೆಯ ಹೊಸನಗರದವರಾದ ಶಾಂತಮ್ಮ ಅವರು ಅಂಜನಾ, ಚಂದನಾ, ಭವದತ್ತಾ, ಭಗವಾನ್ ಮಹಾವೀರ ಮುಂತಾದ ಕಾದಂಬರಿಗಳು, ‘ಬೆಳ್ಳಿ ಬೆಟ್ಟದಂಗಳಿದಲ್ಲಿ ಮುಂತಾದ ಪ್ರವಾಸ ಕೃತಿಗಳು, ‘ಅಣ್ಣನ ಹಾಡುಗಳು’ ಸಹಿತ 4 ಕೃತಿಗಳನ್ನು ಇವರು ರಚಿಸಿದ್ದಾರೆ. ಶ್ರೀಗೊಮ್ಮಟೇಶ್ವರ ಪ್ರಶಸ್ತಿ ಸ್ವೀಕರಿಸಿದ ಮೊದಲಿಗರಾದ ಶಾಂತಮ್ಮ ಅವರು ಇತರ ಹತಾರು ಪ್ರಶಸಿಗಳನ್ನು ಪಡೆದಿದ್ದಾರೆ. ನಾಡಿನಾದ್ಯಂತ ಉಪನ್ಯಾಸ ನೀಡಿರುವ ಇವರು 4 ಬಾರಿ ಅಮೆರಿಕ ಪ್ರವಾಸ ನಾಡಿದ್ದಾರೆ. ಮೂಡುಬಿದಿರೆ ಶ್ರೀಧವಲಾ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರಾಗಿದ್ದ ವಿಶ್ರಾಂತ ಪ್ರಾಧ್ಯಾಪಕ ಎಸ್. ಪಿ. ಅಜಿತ್ ಪ್ರಸಾದ್ ಸಹಿತ ನಾಲ್ವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಆಗಲಿದ್ದಾರೆ.

Read More