Author: roovari

ಕಾಸರಗೋಡು : “ಸಂಗೀತಕ್ಕೆ ಜನರನ್ನು ಒಟ್ಟು ಮಾಡುವ ಶಕ್ತಿಯಿದೆ. ಒಳ್ಳೆಯ ಸಂಗೀತವನ್ನು ಕೇಳುವುದರ ಜೊತೆಗೆ ಅನುಭವಿಸಬೇಕು. ಆಗಲೇ ಹೃದಯದ ಕಪಾಟು ತೆರೆದುಕೊಳ್ಳುತ್ತದೆ.” ಎಂದು ಖ್ಯಾತ ಕೀರ್ತನಕಾರ ಛಾಯಾ ಚಿತ್ರಗ್ರಾಹಕ ಕಲಾವಿದ ಪ್ರಭಾಕರ ರಾವ್ ಹೇಳಿದರು. ಅವರು ‘ರಂಗಚಿನ್ನಾರಿ’ಯ ಸಂಗೀತ ಘಟಕ ‘ಸ್ವರಚಿನ್ನಾರಿ’ ನೇತೃತ್ವದಲ್ಲಿ ಪದ್ಮಗಿರಿ ಕಲಾಕುಟೀರದಲ್ಲಿ ದಿನಾಂಕ 21 ಡಿಸೆಂಬರ್ 2025ರ ಭಾನುವಾರ ಜರಗಿದ ‘ಅಂತರ್ಧ್ವನಿ -12’ ಕರೋಕೆ ಗಾಯಕರ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಮಾತನಾಡುತ್ತಿದ್ದರು. “ಈಗಿನ ಕಾಲದ ಕಲಾವಿದರಿಗೆ ಎಲ್ಲಾ ರೀತಿಯ ಸೌಕರ್ಯವಿದೆ. ಆದ್ದರಿಂದ ಹೆಚ್ಚೆಚ್ಚು ಕಲಾವಿದರು ಸಂಗೀತ ಕ್ಷೇತ್ರಕ್ಕೆ ಬರುತ್ತಾರೆ” ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಖ್ಯಾತ ಉದ್ಯಮಿ, ಸಮಾಜ ಸೇವಕ ಜೀವಾನಂದ ಪ್ರಭು ಮಾತನಾಡಿ “ಕಾಸರಗೋಡಿನ ಸಂಗೀತ ಕಲಾವಿದರಿಗೆ ಸೂಕ್ತ ವೇದಿಕೆ ನಿರ್ಮಾಣ ಮಾಡಿದ ‘ರಂಗಚಿನ್ನಾರಿ’ ಸಂಸ್ಥೆಯ ಸಂಗೀತ ಘಟಕ ‘ಸ್ವರಚಿನ್ನಾರಿ’ಯ ಪದಾಧಿಕಾರಿಗಳನ್ನು ಅಭಿನಂದಿಸಿದರಲ್ಲದೆ ಸತತ ಒಂದು ವರುಷಗಳಿಂದ ಹಾಡುತ್ತಿರುವ ಗಾಯಕ ಗಾಯಕಿಯರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾಸರಗೋಡಿನ ಖ್ಯಾತ ವೈದ್ಯರು, ಗಾಯಕರೂ ಆಗಿರುವ ಡಾ. ಸಂತೋಷ…

Read More

ಮಂಗಳೂರು : ಅಲೆವೂರಾಯ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ದಿನಾಂಕ 25 ಡಿಸೆಂಬರ್ 2025ರಂದು ಶ್ರೀಕ್ಷೇತ್ರ ಮಂಗಳಾದೇವಿಯಲ್ಲಿ ‘ಯಕ್ಷ ತ್ರಿವೇಣಿ’ ಮೂರು ದಿನಗಳ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ ಕಾರ್ಯಕ್ರಮವು ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳಾದೇವಿ ದೇವಸ್ಥಾನದಲ್ಲಿ ಶೀ ಕ್ಷೇತ್ರದ ಮೊಕ್ತೇಸರರಾದ ಶ್ರೀ ಆರುಣ್ ಕುಮಾರ್ ಐತಾಳರು ಮಾತನಾಡಿ “ಯಕ್ಷಗಾನದ ಬೇರೆ ಬೇರೆ ವಿಭಾಗದಲ್ಲಿ ಅನೇಕರು ದುಡಿಯುತ್ತಾ ಕಲಾಭಿವೃದ್ಧಿಗಾಗಿ ಶ್ರಮಿಸುತ್ತಾರೆ. ಆ ಸೇವೆಯಲ್ಲೇ ಸಾಧಕರಾಗಿ ಮಾಡಿಬರುತ್ತಾರೆ. ಅಂತಹವರನ್ನು ಹುಡುಕಿ ಗೌರವಿಸುವ ಸತ್ಕಾರ್ಯವನ್ನು ಸಮಾಜ ಮಾಡಬೇಕಿದೆ. ಇಂದು ಅಲೆವೂರಾಯ ಪ್ರತಿಷ್ಠಾನದಿಂದ ಕಲಾಸಾಧಕ ಶ್ರವಣ್ ಕಾರಂತರನ್ನು ಸನ್ಮಾನಿಸುತ್ತಿರುವುದು ಸತ್ಕಾರ್ಯ. ಹಿರಿಯರ ನೆನಪಲ್ಲಿ ನಡೆವ ಕಾರ್ಯಕ್ಕೆ ದೇವರ ಅನುಗ್ರಹವೂ ಇದೆ” ಎಂದು ಹೇಳಿದರು. ಅಲೆವೂರಾಯ ಪ್ರತಿಷ್ಠಾನದ ವಿಶ್ವಸ್ಥರಾದ ವರ್ಕಾಡಿ ರವಿ ಅಲೆವೂರಾಯರು ಒಂಭತ್ತು ವರ್ಷಗಳಿಂದ ನಡೆದು ಬಂದ ಪ್ರತಿಷ್ಠಾನದ ಬಗ್ಗೆ ಪ್ರಸ್ತಾಪಿಸಿ ಸ್ವಾಗತಿಸಿದರು. ಯಕ್ಷ ಸಾಧಕರು ಸರಣಿ ಖ್ಯಾತಿಯ ಶ್ರವಣ್ ಕಾರಂತ ಶಕ್ತಿ ನಗರ ಇವರನ್ನು ಪ್ರತಿಷ್ಠಾನದ ವತಿಯಿಂದ ಸನ್ಮಾನಿಸಲಾಯಿತು. ಅಧ್ಯಾಪಕ ನಾಗರಾಜ ಖಾರ್ವಿಯವರು…

Read More

ಬೆಂಗಳೂರು : ಹೊಸವರ್ಷದ ಹೊಸ್ತಿಲಲ್ಲಿ, ಮುದ ನೀಡುವ ಮಾಗಿಕಾಲದ ದಿನಗಳಲ್ಲಿ ನಾದ-ನೃತ್ಯಗಳ ವೈವಿಧ್ಯಪೂರ್ಣ ಸುಮನೋಹರ ಕಾರ್ಯಕ್ರಮಗಳಿಂದ ಮನರಂಜಿಸಲಿರುವ ‘ನಿರಂತರಂ’ ಸಂಗೀತ- ನೃತ್ಯ ಸಂಸ್ಥೆಯ `ಸಂಗೀತ ಸಂಭ್ರಮ’ದ ವರ್ಣರಂಜಿತ ಕಾರ್ಯಕ್ರಮಗಳು ಬೆಂಗಳೂರಿನ ಜನತೆಗೆ ಸುಪರಿಚಿತ. ಸದಾ, ಮನಕಾನಂದ ನೀಡುವ ನವನೂತನ ಕಾರ್ಯಕ್ರಮಗಳನ್ನು ಆಯೋಜಿಸುವ `ಸಂಗೀತ ಸಂಭ್ರಮ’ ಸಂಸ್ಥೆಯ ನೇತೃತ್ವ ವಹಿಸಿರುವವರು ಪ್ರಖ್ಯಾತ ಸಂಗೀತ ವಿದುಷಿ ಡಾ. ಪುಸ್ತಕಂ ರಮಾ. ಸಮಾಜಮುಖಿ ಕಾರ್ಯಗಳಿಗೆ ಹೆಸರಾಗಿರುವ ಸ್ನೇಹಮಯಿ ವ್ಯಕ್ತಿತ್ವದ ಕರ್ನಾಟಕ ಕಲಾಶ್ರೀ ಡಾ. ರಮಾ ಸ್ಥಾಪಿಸಿ, ಮ್ಯಾನೇಜಿಂಗ್ ಟ್ರಸ್ಟಿಯಾಗಿರುವ, `ಸಂಗೀತ ಸಂಭ್ರಮ’ ಸಂಸ್ಥೆಯು ಸಾರ್ಥಕ ಮೂರುದಶಕಗಳನ್ನು ಮೀರಿ ಕ್ರಮಿಸಿದ್ದು, ಕಳೆದ ಹದಿನೈದು ವರ್ಷಗಳಿಂದ, ಹಿರಿಯ ಹಾಗೂ ಉದಯೋನ್ಮುಖ ಕಲಾವಿದರಿಗೆ ನಿರಂತರವಾಗಿ ವೇದಿಕೆಯನ್ನು ಒದಗಿಸುತ್ತ ಬಂದಿರುವುದು ಸಂಗೀತ ಕಲಾವಿದೆ ರಮಾ ಅವರ ಅಸ್ಮಿತೆ. ಪ್ರತಿವರ್ಷ ತಪ್ಪದೆ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವ ಈ ‘ನಿರಂತರಂ’ ಸಂಗೀತ-ನೃತ್ಯೋತ್ಸವವು ದಿನೇ ದಿನೇ ಜನಪ್ರಿಯತೆಯನ್ನು ಪಡೆಯುತ್ತಿರುವುದು ಸಂತಸದ ಸಂಗತಿ. ಎಂದಿನಂತೆ ಈ ಬಾರಿಯೂ ಹೊಸವರ್ಷದ ಜನವರಿಯ ಮೊದಲ ದಿನದಿಂದಲೇ ದಿನಾಂಕ 01 ಜನವರಿ…

Read More

ಹುಬ್ಬಳ್ಳಿ : ಟಿಯೆಸ್ಸಾರ್ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಶ್ರೀ ಸುರೇಂದ್ರ ದಾನಿ ಇವರ ಜನ್ಮ ಶತಮನೋತ್ಸವ ಕಾರ್ಯಕ್ರಮವನ್ನು ದಿನಾಂಕ 27 ಡಿಸೆಂಬರ್ 2025ರಂದು ಮುಂಜಾನೆ 9-30 ಗಂಟೆಗೆ ಹುಬ್ಬಳ್ಳಿ ದೇಶಪಾಂಡೆ ನಗರ ಸವಾಯಿ ಗಂಧರ್ವ ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 9-30 ಗಂಟೆಗೆ ಧಾರವಾಡದ ಶ್ರೀಮತಿ ಗೀತಾ ಆಲೂರ ಮತ್ತು ಬೆಂಗಳೂರಿನ ಸುಜ್ಞಾನ ದಾನಿ ಹಾಗೂ ಸಂಗಡಿಗರಿಂದ ‘ಲಘು ಸಂಗೀತ’ ಪ್ರಸ್ತುತಿ. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪದ್ಮಶ್ರೀ ಡಾ. ಎಂ.ಎಂ. ಜೋಶಿ ಇವರ ವಹಿಸಲಿದ್ದು, ಸ್ಮರಣ ಸಂಚಿಕೆ ಬಿಡುಗಡೆಗೊಳ್ಳಲಿದೆ. 12-30 ಗಂಟೆಗೆ ಗೋಷ್ಠಿ 1ರಲ್ಲಿ ‘ದಾನಿಯವರ ಪ್ರವೃತ್ತಿ’, 2-30 ಗಂಟೆಗೆ ಗೋಷ್ಠಿ 2ರಲ್ಲಿ ‘ದಾನಿಯವರ ಗಮಕ ಪ್ರೀತಿ’ ವಿಷಯ ಮಂಡನೆ ಮತ್ತು 3-30 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.

Read More

ಉಡುಪಿ : ವಾತ್ಸಲ್ಯ ಕ್ಲಿನಿಕ್ ವಿಂಶತಿ ಸಂಭ್ರಮದ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಆಯೋಜನೆಯಲ್ಲಿ ಪ್ರಸಿದ್ಧ ಸ್ತ್ರೀ ಆರೋಗ್ಯ ತಜ್ಞೆ ಡಾ. ರಾಜಲಕ್ಷ್ಮಿ ಇವರ ‘ವಾತ್ಸಲ್ಯದ ಒಸಗೆ’ ಪುಸ್ತಕ ಲೋಕಾರ್ಪಣೆ ಸಮಾರಂಭವನ್ನು ದಿನಾಂಕ 26 ಡಿಸೆಂಬರ್ 2025ರಂದು ಸಂಜೆ 5-00 ಗಂಟೆಗೆ ಯಕ್ಷಗಾನ ಕಲಾರಂಗದ ಐ.ವೈ.ಸಿ. ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷರಾದ ರವಿರಾಜ್ ಎಚ್.ಪಿ. ಇವರು ಸಭಾಧ್ಯಕ್ಷತೆ ವಹಿಸಲಿದ್ದು, ಡಾ. ಎ.ವಿ. ಬಾಳಿಗ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ವಿ.ಪಿ. ಭಂಡಾರಿ ಇವರು ಕೃತಿ ಬಿಡುಗಡೆ ಮಾಡಲಿದ್ದಾರೆ. ಸ್ತ್ರೀ ಆರೋಗ್ಯ ತಜ್ಞೆ ಡಾ. ವೀಣಾ ಭಟ್ ಇವರು ಪುಸ್ತಕ ಪರಿಚಯ ಮಾಡಲಿದ್ದು, ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಬಿ. ಮಹಾಲಕ್ಷ್ಮಿ ಆಶಯ ನುಡಿಗಳನ್ನಾಡಲಿದ್ದಾರೆ. ಡಾ. ಸ್ನೇಹಾ ಆಚಾರ್ಯ ಇವರಿಂದ ‘ನೃತ್ಯ ಸಿಂಚನ’ ಭರತನಾಟ್ಯ ಪ್ರಸ್ತುತಗೊಳ್ಳಲಿದೆ.

Read More

ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಎಂ. ರಾಮರೆಡ್ಡಿ ಮತ್ತು ಮಂಗಳಮ್ಮ ಇವರ ಸುಪುತ್ರಿಯೇ ಸುಪ್ರಸಿದ್ಧ ಕಾದಂಬರಿಗಾಗಿ ಅನಸೂಯ ರಾಮರೆಡ್ಡಿ. ಇವರ ಹುಟ್ಟೂರು ಚಿತ್ರದುರ್ಗದ ಬಳಿಯ ತುರುವನೂರು. ಇವರ ಕುಟುಂಬ ಸ್ವಾತಂತ್ರ್ಯ ಹೋರಾಟಗಾರರ ಮನೆತನಕ್ಕೆ ಸಂಬಂಧಪಟ್ಟ ಕಾರಣ ಮನೆಯಲ್ಲಿ ಕಾಂಗ್ರೆಸ್ ನೇತಾರೊಂದಿಗೆ ನಡೆಯುತ್ತಿದ್ದ ಚರ್ಚೆ, ಅನಸೂಯ ಅವರ ಮೇಲೆ ಪ್ರಭಾವ ಬೀರಿ, ಗಾಂಧೀಜಿಯವರ ಆದರ್ಶಗಳಿಗೆ ಮಾರುಹೋಗಿ ಜೀವನದಲ್ಲಿ ಅದನ್ನು ರೂಢಿಸಿಕೊಂಡರು. ಪುಟ್ಟ ಊರಾದ ತುರುವ ನೂರಿನ ಶಾಂತ ವಾತಾವರಣ, ಅಲ್ಲಿಯ ಜನರ ಸರಳ ಜೀವನ, ಸರಳ ವಿವಾಹ, ಚರಕದಲ್ಲಿ ನೂಲು ತೆಗೆಯುವುದು, ರಾಷ್ಟಾಭಿಮಾನ ಇವುಗಳ ಮಧ್ಯೆ ಬೆಳೆದ ಅನಸೂಯರಿಗೆ ಸಮರ್ಪಣಾ ಭಾವ ಮೈಗೂಡಿಕೊಂಡಿತ್ತು. ಒಂದು ಕಡೆ ಸ್ವಾತಂತ್ರ್ಯ ಹೋರಾಟದ ಚರ್ಚೆ, ಮನೆಯಲ್ಲಿದ್ದ ಹಿರಿಯ ಹೆಣ್ಣು ಜೀವಿಗಳಾದ ತಾಯಿ ಅಜ್ಜಿ ಮುತ್ತಜ್ಜಿಯರು ಆಧ್ಯಾತ್ಮವನ್ನೇ ಗುರಿಯಾಗಿಸಿಕೊಂಡು ನಡೆಸುತ್ತಿದ್ದ ಜೀವನ, ಕವಿ ಬೆಳಗೆರೆ ಚಂದ್ರಶೇಖರ ಶಾಸ್ತ್ರಿಗಳು ಗುರುಗಳಾಗಿ ದೊರೆತದ್ದು, ಬೆಳಗೆರೆ ಜಾನಕಮ್ಮನ ಸ್ನೇಹ ಇಂಥ ಪರಿಸರದಲ್ಲಿ ಓದುವ ಹವ್ಯಾಸ ಅನಸೂಯರಿಗೆ ತನ್ನಿಂದ ತಾನೇ ಒಗ್ಗಿಹೋಯಿತು. ವ್ಯಾಯಾಮ, ಯೋಗ, ಈಜು, ಸೈಕಲ್…

Read More

ಧಾರವಾಡ : ಚಿತ್ರಕಲಾ ಶಿಲ್ಪಿ ಶ್ರೀ ಡಿ. ವ್ಹಿ. ಹಾಲಭಾವಿ ರಾಷ್ಟ್ರೀಯ ಸ್ಮಾರಕ (ರಿ.) ಟ್ರಸ್ಟ್ ಧಾರವಾಡ ಇವರ ವತಿಯಿಂದ ಶ್ರೀ ಡಿ. ವ್ಹಿ. ಹಾಲಭಾವಿ ಪುಣ್ಯ ಸ್ಮರಣೆ ಪ್ರಯುಕ್ತ ರಾಜ್ಯ ಮಟ್ಟದ ಚಿತ್ರಕಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ 2025 ಕಾರ್ಯಕ್ರಮವನ್ನು ದಿನಾಂಕ 26 ಡಿಸೆಂಬರ್ 2025ರಂದು ಬೆಳಗ್ಗೆ 11-30 ಗಂಟೆಗೆ ಧಾರವಾಡ ಸರ್ಕಾರಿ ಆರ್ಟ್ ಗ್ಯಾಲರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿತ್ರಕಲಾ ಶಿಲ್ಪಿ ಶ್ರೀ ಡಿ. ವ್ಹಿ. ಹಾಲಭಾವಿ ರಾಷ್ಟ್ರೀಯ ಸ್ಮಾರಕ (ರಿ.) ಟ್ರಸ್ಟ್ ಇದರ ಅಧ್ಯಕ್ಷರಾದ ಬಿ. ಮಾರುತಿ ಇವರು ವಹಿಸಲಿದ್ದು, ಚಿತ್ರಕಲಾ ಶಿಲ್ಪಿ ಶ್ರೀ ಡಿ. ವ್ಹಿ. ಹಾಲಭಾವಿ ರಾಷ್ಟ್ರೀಯ ಸ್ಮಾರಕ (ರಿ.) ಟ್ರಸ್ಟ್ ಸದಸ್ಯರಾದ ಸುರೇಶ ಹಾಲಭಾವಿ ಇವರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಚಿತ್ರಕಲಾ ಸ್ನಾತಕ ಪದವಿಯ ವಿದ್ಯಾರ್ಥಿಗಳಿಗೆ 2025ನೇ ಸಾಲಿನ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ಇವರ ಕಲಾಕೃತಿಗಳ ಪ್ರದರ್ಶನ ಬೆಳಗ್ಗೆ 11-00 ಗಂಟೆಯಿಂದ ಸಂಜೆ 4-00 ಗಂಟೆಯವರೆಗೆ ಏರ್ಪಡಿಸಲಾಗಿದೆ.

Read More

ಕೋಣಾಜೆ : ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ದೇರಳಕಟ್ಟೆ ಗ್ರೀನ್ ಗೌಂಡ್ ನ ಡಾ. ವಾಮನ ನಂದಾವರ ಸಭಾಂಗಣದ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ವೇದಿಕೆಯಲ್ಲಿ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ಕರಾವಳಿ ಕರ್ನಾಟಕದ ಸಾಹಿತ್ಯ-ಸಾಂಸ್ಕೃತಿಕ ಸಮ್ಮೇಳನ ನಾಡು ನುಡಿ ವೈಭವದ ‘ರತ್ನೋತ್ಸವ 2025’ ದಿನಾಂಕ 20 ಡಿಸೆಂಬರ್ 2025ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜನಪದ ವಿದ್ವಾಂಸ, ಜನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡ “ಸಾಂಸ್ಕೃತಿಕ ನೀತಿ ಶಾಲೆಗಳಿಗೆ ಬೇಕು. ಶಾಲೆಗಳು ವಿದ್ಯಾರ್ಥಿಗಳಲ್ಲಿ ಸಂವೇದನೆಯನ್ನುಂಟು ಮಾಡಬೇಕು. ಮಕ್ಕಳು ಮಾತನಾಡುವ ಪ್ರತಿಯೊಂದು ಮಾತೂ ಕೇವಲ ಪದಗಳಲ್ಲ, ಆ ಮಾತಿನ ಹಿಂದೆ ಅವರ ಆಂತರಿಕ ಸಂವೇದನೆ, ಅನುಭವ ಮತ್ತು ಮನಸ್ಥಿತಿ ಅಡಗಿರುತ್ತದೆ. ಮಕ್ಕಳಲ್ಲಿ ಸೂಕ್ಷ್ಮ ಪ್ರವೃತ್ತಿಯನ್ನು ಬೆಳೆಸುವ ಮಹತ್ವದ ಕಾರ್ಯಕ್ರಮವೇ ಸಾಹಿತ್ಯೋತ್ಸವ” ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ರಾಜ್ಯಾಧ್ಯಕ್ಷರು ಧರ್ಮದರ್ಶಿ ಹರಿಕೃಷ್ಣ ಪುನರೂರು ಮಾತನಾಡಿ “ರತ್ನೋತ್ಸವದಂತಹ ನಿರಂತರವಾಗಿ ಸಾಹಿತ್ಯಕ ಕೊಡುಗೆಯನ್ನು…

Read More

ಬೆಂಗಳೂರು : ಎನ್.ಎಸ್. ಕುಂಬಾರ್ ಅಕಾಡೆಮಿ ವತಿಯಿಂದ ಆಯೋಜಿಸಲಾಗಿರುವ ‘ಚಿತ್ರಕಾರ್’ ಚಿತ್ರಕಲಾ ಸ್ಪರ್ಧೆ ಹಾಗೂ ಪ್ರದರ್ಶನಕ್ಕೆ ಪ್ರವೇಶಗಳನ್ನು ಆಹ್ವಾನಿಸಲಾಗಿದೆ. ಮಕ್ಕಳಿಂದ ಹಿಡಿದು ವಯಸ್ಕರ ತನಕ ಎಲ್ಲಾ ವಯೋಮಾನದವರಿಗೆ, ಹವ್ಯಾಸಿ ಹಾಗೂ ವೃತ್ತಿಪರರಿಗೆ ಪ್ರತ್ಯೇಕ ವಿಭಾಗಗಳಿವೆ. ಪ್ರತಿ ವಿಭಾಗಕ್ಕೂ ಪ್ರಶಸ್ತಿ ಹಾಗೂ ಪ್ರದರ್ಶನಗಳ ಅವಕಾಶವಿದ್ದು, ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರ ನೀಡಲಾಗುತ್ತದೆ. ಅತ್ಯುತ್ತಮ ನೂರು ಚಿತ್ರಗಳನ್ನು ಪ್ರದರ್ಶನಕ್ಕೆ ಆಯ್ಕೆ ಮಾಡಲಾಗುತ್ತದೆ. ಅವುಗಳಲ್ಲಿ 30 ಉತ್ತಮ ಚಿತ್ರಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ. ನೋಂದಣಿಗೆ https://nskumbar.art/category-chitrakar ಅಥವಾ 9663571101 ಸಂಪರ್ಕಿಸಬಹುದು. ನೋಂದಣಿಗೆ ಕಡೆಯ ದಿನಾಂಕ 31 ಡಿಸೆಂಬರ್ 2025.

Read More

ಮಂಗಳೂರು : ಹರಿಕಥಾ ಪರಿಷತ್ (ರಿ.) ಮಂಗಳೂರು ಹಾಗೂ ರಾಮಕೃಷ್ಣ ಮಿಷನ್ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಕರಾವಳಿಯಲ್ಲಿ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಹಾಗೂ ಕಾಸರಗೋಡು ಜಿಲ್ಲೆಗಳ ವಿದ್ಯಾರ್ಥಿಗಳಿಗೆ ದಿನಾಂಕ 27 ಡಿಸೆಂಬರ್ 2025ರಂದು ‘ಹರಿಕಥಾ ಸ್ಪರ್ಧೆ-2025’ ಮಂಗಳೂರಿನ ರಾಮಕೃಷ್ಣ ಮಠದ ಅಮೃತ ಭವನ ಸಭಾಂಗಣದಲ್ಲಿ ಬೆಳಗ್ಗೆ 8-30ರಿಂದ ಸಂಜೆ 7-00ರವರೆಗೆ ನಡೆಯಲಿದೆ. ದಕ್ಷಿಣ ಕನ್ನಡ, ಕಾಸರಗೋಡು, ಬೆಂಗಳೂರು, ಶಿವಮೊಗ್ಗ, ಬಾಗಲಕೋಟೆ ಸೇರಿದಂತೆ ನಾನಾ ಜಿಲ್ಲೆಗಳಿಂದ ಆಯ್ದ 23 ಯುವ ಕಥಾಕೀರ್ತನ ಪ್ರತಿಭೆಗಳಿಗೆ ಅವಕಾಶ ನೀಡಲಾಗಿದೆ. ಎರಡು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, 5ರಿಂದ 10ನೇ ತರಗತಿ ವರೆಗಿನವರನ್ನು ಕಿರಿಯ ವಿಭಾಗವಾಗಿ ಹಾಗೂ 10ನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿಗಳನ್ನು ಹಿರಿಯ ವಿಭಾಗ ಎಂದು ಗುರುತಿಸಲಾಗಿದೆ. ಕಿರಿಯ ವಿಭಾಗದಲ್ಲಿ ಮೊದಲನೇ ಬಹುಮಾನ ರೂ.5,000/-, ದ್ವಿತೀಯ ಬಹುಮಾನ ರೂ.3,000/- ಹಾಗೂ ತೃತೀಯ ಬಹುಮಾನ ರೂ.2,000/- ನೀಡಲಾಗುವುದು. ಹಿರಿಯರ ವಿಭಾಗದಲ್ಲಿ ಪ್ರಥಮ ಬಹುಮಾನ ರೂ.7,000/-, ದ್ವಿತೀಯ ಬಹುಮಾನ ರೂ.5,000/- ಹಾಗೂ ತೃತೀಯ ಬಹುಮಾನ ರೂ.3,000/- ಮತ್ತು…

Read More